Connect with us

ಬೆಂಗಳೂರು

ಅತಿ ಶೀಘ್ರದಲ್ಲೇ ‘ಮೆಟ್ರೋ ಮಿತ್ರ’ ಆ್ಯಪ್ ಆರಂಭ,ನಮ್ಮ ಮೆಟ್ರೋ ಸಮೀಪ ಆ್ಯಪ್‌ ಆಧಾರಿತ ಆಟೋ ಸೌಲಭ್ಯ:

Published

on

ಬೆಂಗಳೂರು:ಆಟೋ ಚಾಲಕರ ಮೇಲೆ ಮೆಟ್ರೋ ಪ್ರಯಾಣಿಕರ ದೂರುಗಳಿಗೆ ಸ್ವತಃ ಆಟೋ ಚಾಲಕರೇ ಪರಿಹಾರವನ್ನ ಒದಗಿಸುತ್ತಿದ್ದಾರೆ. ಆಟೋ ಚಾಲಕರ ಮೇಲಿನ ನಕಾರಾತ್ಮಕ ಚಿತ್ರಣವನ್ನು ಬದಲಾಯಿಸಲು ಆಟೋರಿಕ್ಷಾ ಚಾಲಕರ ಒಕ್ಕೂಟ (ಎಆರ್’ಡಿಯು) ‘ಮೆಟ್ರೊ ಮಿತ್ರ’ ಅಪ್ಲಿಕೇಶನ್ ನ್ನು ಆರಂಭಿಸುತ್ತಿದೆ.

‘ಮೆಟ್ರೋ ಮಿತ್ರ’ ಆ್ಯಪ್ ಅನ್ನು ವಿವಿಧ ಪ್ರದೇಶಗಳಿಗೆ ಮತ್ತು ಮೆಟ್ರೋ ನಿಲ್ದಾಣಗಳಿಗೆ ಕಾರ್ಯ ನಿರ್ವಹಿಸಲೆಂದು ರಚನೆ ಮಾಡಲಾಗಿದೆ. ಬೆಂಗಳೂರಿನ ಆಟೋ ರಿಕ್ಷಾ ಡ್ರೈವರ್ಸ್‌ಯೂನಿಯನ್, ಬಿಎಂಆರ್‌ಸಿಎಲ್ ಸಹಕಾರದಲ್ಲಿ ಮೆಟ್ರೋ ಮಿತ್ರನನ್ನು ಪರಿಚಯಿಸಲಾಗುತ್ತಿದೆ. ಈ ಆ್ಯಪ್ ಬೆಂಗಳೂರಿನ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಬಳಕೆಗೆ ಲಭ್ಯವಿರುತ್ತದೆ.

ಆಟೋರಿಕ್ಷಾ ಚಾಲಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಅವರು ಮಾತನಾಡಿ, ಮಧ್ಯವರ್ತಿಗಳನ್ನು ದೂರ ಉಳಿಸುವುದು, ಗ್ರಾಹಕರಿಗೆ ಸಹಾಯ ಮಾಡುವ ಸಲುವಾಗಿ ಆ್ಯಪ್ ಪರಿಚಯಿಸಲಾಗುತ್ತಿದೆ. ಆ್ಯಪ್ ನಲ್ಲಿ ಗ್ರಾಹಕರು ತಮ್ಮ ಅನುಭವವನ್ನು ಹಂಚಿಕೊಳ್ಳಬಹುದು. ಜಯನಗರ ಮತ್ತು ಆರ್’ವಿ ಮೆಟ್ರೋ ನಿಲ್ದಾಣಗಳಲ್ಲಿ ಸೇವೆಯನ್ನು ಪ್ರಾಯೋಗಿಕವಾಗಿ ಆರಂಭಿಸಲಾಗಿತ್ತು. ಆಟೋ ಚಾಲಕರನ್ನು ಮತ್ತಷ್ಟು ವೃತ್ತಿಪರರಾಗಿ ರೂಪಿಸಲು ಸಂಸ್ಥೆಯಿಂದ ತರಬೇತಿ ನೀಡಲಾಗುತ್ತಿದೆ. ಪ್ರಯಾಣಿಕರು ಮೆಟ್ರೋ ಮಿತ್ರದಿಂದ ಅಳವಡಿಸಿರುವ ಕ್ಯುಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದರೆ ಅದರಲ್ಲಿ ನಿಲ್ದಾಣದ 5 ಕಿಮೀ ವ್ಯಾಪ್ತಿಯಲ್ಲಿರು ಪ್ರಮುಖ ಪ್ರದೇಶಗಳನ್ನು ಪಟ್ಟಿ ನೀಡುತ್ತದೆ. ಪ್ರಯಾಣಿಕರು ನಿರ್ದಿಷ್ಟ ಸ್ಥಳವನ್ನು ಆಯ್ಕೆ ಮಾಡಿ ಆಟೋವನ್ನು ಬುಕ್‌ ಮಾಡಬಹುದು. ಬುಕ್‌ ಮಾಡಿದ ಕೂಡಲೇ ಮೆಟ್ರೋ ಮಿತ್ರ ಅಪ್ಲಿಕೇಶನ್ ಅನ್ನು ಅಳವಡಿಸಿಕೊಂಡಿರುವ ಆಟೋ ಚಾಲಕರಿಗೆ ಸಂದೇಶ ರವಾನೆಯಾಗಿ ಅವರು ನೀವು ಇರುವ ಸ್ಥಳಕ್ಕೆ ಬರುತ್ತಾರೆ. ಪ್ರಯಾಣಿಕರು ತಮ್ಮ ಚಾಲಕರನ್ನು ಆಯ್ಕೆ ಮಾಡುವ ಆಯ್ಕೆಯನ್ನೂ ಕೂಡ ಹೊಂದಿರುತ್ತಾರೆಂದು ತಿಳಿಸಿದರು.

Continue Reading

ರಾಜ್ಯ

B.Nagendra ರಾಜೀನಾಮೆ ಫಿಕ್ಸ್ ಆಯ್ತಾ? ವಾಲ್ಮೀಕಿ ಹಗರಣದಲ್ಲಿ ಕಾಂಗ್ರೆಸ್‌ನ ‘ಡ್ಯಾಮೇಜ್ ಕಂಟ್ರೋಲ್’

Published

on

By

ಬೆಂಗಳೂರು: ಕರ್ನಾಟಕದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಇದೀಗ ಮತ್ತೊಮ್ಮೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಚಿವ B.Nagendra ಅವರ ರಾಜೀನಾಮೆಗೆ ಬಿಜೆಪಿ ಸೇರಿದಂತೆ ಪ್ರತಿಪಕ್ಷಗಳು ನಿರಂತರವಾಗಿ ಒತ್ತಾಯಿಸುತ್ತಿರುವ ನಡುವೆಯೇ, ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಈ ವಿಚಾರವಾಗಿ ಚರ್ಚೆ ನಡೆದಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಇತ್ತೀಚಿನ ಬೆಳವಣಿಗೆಯಲ್ಲಿ ನಾಗೇಂದ್ರ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸಂಪರ್ಕಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧತೆ ವ್ಯಕ್ತಪಡಿಸಿದ್ದಾರೆ ಎಂದು ಕೆಲವು ವರದಿಗಳು ತಿಳಿಸಿವೆ. ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ಸ್ಥಾನದಿಂದ ಕೆಳಗಿಳಿಯಲು ಸಿದ್ಧ ಎಂದು ಅವರು ಹೇಳಿರುವುದಾಗಿ ವರದಿಯಾಗಿದೆ. ಆದರೆ, ನಾಗೇಂದ್ರ ಅವರ ಕಚೇರಿ ಈ ವರದಿಗಳನ್ನು ತಳ್ಳಿಹಾಕಿದ್ದು, ರಾಜೀನಾಮೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿತ್ತು.

ಈ ನಡುವೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಾಗೇಂದ್ರ ವಿರುದ್ಧ ತನಿಖೆ ಮುಂದುವರಿಸಲು ಸಿಬಿಐ ಕರ್ನಾಟಕ ರಾಜ್ಯಪಾಲರಿಂದ ಅನುಮತಿ ಕೋರಿದೆ ಎಂದು ವರದಿಯಾಗಿದೆ. ಪ್ರಕರಣದಲ್ಲಿ ಸುಮಾರು 89 ಕೋಟಿ ರೂ. ಅಕ್ರಮಗಳ ಆರೋಪ ಕೇಳಿಬಂದಿದ್ದು, ನಾಗೇಂದ್ರ ವಿರುದ್ಧ ಪ್ರತಿಪಕ್ಷಗಳು ರಾಜಕೀಯವಾಗಿ ಒತ್ತಡ ಹೆಚ್ಚಿಸಿವೆ.

ಆಗಸ್ಟ್ 24ರಂದು ಬಿಜೆಪಿ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿದ್ದರು. ಈ ವಿಚಾರವಾಗಿ ನಡೆದ ಪ್ರತಿಭಟನೆ ಮತ್ತು ವಿಧಾನಮಂಡಲದ ಗದ್ದಲದಿಂದ ರಾಜ್ಯ ಸರ್ಕಾರದ ಮೇಲಿನ ರಾಜಕೀಯ ಒತ್ತಡ ಮತ್ತಷ್ಟು ಹೆಚ್ಚಾಗಿದೆ.

ನಾಗೇಂದ್ರ ಅವರು ಈ ಹಿಂದೆ ಕೂಡ ವಾಲ್ಮೀಕಿ ನಿಗಮದ ಪ್ರಕರಣದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ 2026ರ ಆಗಸ್ಟ್‌ನಲ್ಲಿ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಮತ್ತು ಪ್ರತಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಅವರ ಸಚಿವ ಸ್ಥಾನ ಮತ್ತೊಮ್ಮೆ ರಾಜಕೀಯ ಚರ್ಚೆಯ ಕೇಂದ್ರವಾಗಿದೆ.

ಹೀಗಾಗಿ ನಾಗೇಂದ್ರ ಅವರ ರಾಜೀನಾಮೆ ಕುರಿತು ಅಂತಿಮ ನಿರ್ಧಾರ ಯಾವಾಗ ಹೊರಬೀಳಲಿದೆ ಎಂಬುದೇ ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಹೈಕಮಾಂಡ್‌ನ ಮುಂದಿನ ನಿರ್ಧಾರ ಮತ್ತು ನಾಗೇಂದ್ರ ಅವರ ಅಧಿಕೃತ ನಿಲುವಿನ ಬಳಿಕವಷ್ಟೇ ಈ ಬೆಳವಣಿಗೆಗೆ ಸ್ಪಷ್ಟತೆ ಸಿಗಲಿದೆ.

Continue Reading

ಬೆಂಗಳೂರು

Liver ಚಿಕಿತ್ಸೆಗೆ ಗುಡ್ ನ್ಯೂಸ್: ಹಲವು ತಜ್ಞರು ಒಂದೇ ಕಡೆ, ರೋಗಿಗಳಿಗೆ ಸುಲಭ ಚಿಕಿತ್ಸೆ

Published

on

By

ಬೆಂಗಳೂರು: ಯಕೃತ್ತಿನಲ್ಲಿ ಕಂಡುಬರುವ ಗಂಟು, ಗೆಡ್ಡೆ ಹಾಗೂ ಅಸಹಜ ಬೆಳವಣಿಗೆಗಳಿಗೆ ಸಮನ್ವಯದ ತಪಾಸಣೆ, ನಿಖರ ರೋಗನಿರ್ಣಯ ಮತ್ತು ಸಮಗ್ರ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಬೆಂಗಳೂರಿನ ಕೆಂಗೇರಿಯಲ್ಲಿರುವ ಫೋರ್ಟಿಸ್ ಹೆಲ್ತ್‌ಕೇರ್ ಜಾಲದ ಭಾಗವಾಗಿರುವ ಗ್ಲೆನೆಗಲ್ಸ್ ಬಿಜಿಎಸ್ ಆಸ್ಪತ್ರೆಯಲ್ಲಿ ಕರ್ನಾಟಕದ ಮೊದಲ ಪ್ರತ್ಯೇಕ ಲಿವರ್ ನೊಡ್ಯೂಲ್ ಕ್ಲಿನಿಕ್ ಆರಂಭಿಸಲಾಗಿದೆ.

ರೋಗಿಗಳು ವಿವಿಧ ವೈದ್ಯರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಒಂದೇ ರೀತಿಯ ಪರೀಕ್ಷೆಗಳನ್ನು ಪುನರಾವರ್ತಿಸುವ ಅಗತ್ಯವನ್ನು ಕಡಿಮೆ ಮಾಡುವುದು ಕ್ಲಿನಿಕ್‌ನ ಪ್ರಮುಖ ಉದ್ದೇಶವಾಗಿದೆ. ಯಕೃತ್ತಿನ ತಜ್ಞರು, ಲಿವರ್ ಟ್ರಾನ್ಸ್‌ಪ್ಲಾಂಟ್ ಮತ್ತು ಎಚ್‌ಪಿಬಿ ಸರ್ಜರಿ ತಜ್ಞರು, ಜಠರ-ಕರುಳಿನ ತಜ್ಞರು, ರೇಡಿಯಾಲಜಿಸ್ಟ್‌ಗಳು, ಕ್ಯಾನ್ಸರ್ ತಜ್ಞರು, ರೋಗಶಾಸ್ತ್ರ ತಜ್ಞರು ಹಾಗೂ ಪೌಷ್ಟಿಕ ಆಹಾರ ತಜ್ಞರು ಒಂದೇ ತಂಡವಾಗಿ ರೋಗಿಯ ಸ್ಥಿತಿಯನ್ನು ಪರಿಶೀಲಿಸಲಿದ್ದಾರೆ.

ವೈದ್ಯಕೀಯ ಜಠರರೋಗ ಶಾಸ್ತ್ರ, ಹೆಪಟಾಲಜಿ ಮತ್ತು ಸುಧಾರಿತ ಎಂಡೋಸ್ಕೋಪಿ ವಿಭಾಗದ ಮುಖ್ಯಸ್ಥ ಹಾಗೂ ಹಿರಿಯ ಸಲಹೆಗಾರ ಡಾ. ಆದರ್ಶ್ ಸಿ.ಕೆ. ಮಾತನಾಡಿ, ನಿಯಮಿತ ತಪಾಸಣೆ ವೇಳೆ ಯಕೃತ್ತಿನ ಗೆಡ್ಡೆಗಳು ಮತ್ತು ದ್ರವ ತುಂಬಿದ ಚೀಲಗಳು ಆಕಸ್ಮಿಕವಾಗಿ ಪತ್ತೆಯಾಗುತ್ತಿರುವುದು ಹೆಚ್ಚಾಗಿದೆ. ಇವುಗಳಲ್ಲಿ ಅನೇಕವು ಅಪಾಯಕಾರಿಯಲ್ಲದಿದ್ದರೂ, ಕೆಲವು ಯಕೃತ್ತಿನ ಕಾಯಿಲೆ ಅಥವಾ ಆರಂಭಿಕ ಹಂತದ ಕ್ಯಾನ್ಸರ್‌ನ ಸೂಚನೆಯಾಗಿರಬಹುದು. ಹೀಗಾಗಿ ಯಾವ ಗೆಡ್ಡೆಗೆ ಚಿಕಿತ್ಸೆ ಬೇಕು ಮತ್ತು ಯಾವುದನ್ನು ಮೇಲ್ವಿಚಾರಣೆ ಮಾಡಿದರೆ ಸಾಕು ಎಂಬುದನ್ನು ಗುರುತಿಸುವುದು ಪ್ರಮುಖ ಸವಾಲಾಗಿದೆ ಎಂದು ಹೇಳಿದ್ದಾರೆ.

ಲಿವರ್ ಟ್ರಾನ್ಸ್‌ಪ್ಲಾಂಟ್ ಮತ್ತು ಎಚ್‌ಪಿಬಿ ಸರ್ಜರಿ ವಿಭಾಗದ ಮುಖ್ಯಸ್ಥ ಡಾ. ಮಹೇಶ್ ಗೋಪಸೆಟ್ಟಿ, ಚಿಕಿತ್ಸೆಯ ನಿರ್ಧಾರವು ಗೆಡ್ಡೆಯ ಗಾತ್ರ ಮತ್ತು ಸ್ಥಳಕ್ಕೆ ಮಾತ್ರ ಸೀಮಿತವಾಗಿರದೆ ಯಕೃತ್ತಿನ ಕಾರ್ಯಕ್ಷಮತೆ ಹಾಗೂ ರೋಗಿಯ ಒಟ್ಟಾರೆ ಆರೋಗ್ಯವನ್ನೂ ಆಧರಿಸಿರಬೇಕು ಎಂದು ತಿಳಿಸಿದ್ದಾರೆ. ಸಮಗ್ರ ಮೌಲ್ಯಮಾಪನದಿಂದ ಸೂಕ್ತ ಚಿಕಿತ್ಸೆಯನ್ನು ಆಯ್ಕೆ ಮಾಡುವುದರ ಜೊತೆಗೆ, ಅಗತ್ಯವಿಲ್ಲದ ಶಸ್ತ್ರಚಿಕಿತ್ಸೆಯನ್ನು ತಪ್ಪಿಸಬಹುದು ಎಂದಿದ್ದಾರೆ.

ಗ್ಲೆನೆಗಲ್ಸ್ ಬಿಜಿಎಸ್ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿ ಬಗಲಿ ಮಾತನಾಡಿ, ಕರ್ನಾಟಕದ ಮೊದಲ ಪ್ರತ್ಯೇಕ ಲಿವರ್ ನೊಡ್ಯೂಲ್ ಕ್ಲಿನಿಕ್ ಆರಂಭಿಸಿರುವುದು ರೋಗಿ ಕೇಂದ್ರಿತ ಹಾಗೂ ವಿವಿಧ ವೈದ್ಯಕೀಯ ವಿಭಾಗಗಳ ಸಮನ್ವಯದ ಆರೋಗ್ಯ ಸೇವೆ ಒದಗಿಸುವ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ. ಅತ್ಯಾಧುನಿಕ ವೈದ್ಯಕೀಯ ಪರಿಣತಿಯನ್ನು ಒಂದೇ ವ್ಯವಸ್ಥೆಯಲ್ಲಿ ಒದಗಿಸುವ ಮೂಲಕ ಚಿಕಿತ್ಸಾ ಫಲಿತಾಂಶ ಮತ್ತು ರೋಗಿಗಳ ಅನುಭವ ಸುಧಾರಿಸುವುದು ಕ್ಲಿನಿಕ್‌ನ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

ಯಕೃತ್ತಿನ ಚೀಲಗಳು, ರಕ್ತನಾಳದ ಗೆಡ್ಡೆಗಳು, ಫೋಕಲ್ ನೊಡ್ಯುಲರ್ ಹೈಪರ್‌ಪ್ಲಾಸಿಯಾ, ಯಕೃತ್ತಿನ ಕ್ಯಾನ್ಸರ್, ದೇಹದ ಇತರ ಭಾಗಗಳಿಂದ ಯಕೃತ್ತಿಗೆ ಹರಡಿದ ಕ್ಯಾನ್ಸರ್ ಹಾಗೂ ಸಂಕೀರ್ಣ ಯಕೃತ್ತಿನ ಗೆಡ್ಡೆಗಳಿಗೆ ಇಲ್ಲಿ ಸಮಗ್ರ ಮೌಲ್ಯಮಾಪನ ಮತ್ತು ಚಿಕಿತ್ಸಾ ಸಲಹೆ ದೊರೆಯಲಿದೆ. ರೋಗನಿರ್ಣಯದ ನಿಖರತೆ ಹೆಚ್ಚಿಸುವುದು ಮತ್ತು ಚಿಕಿತ್ಸೆಯಲ್ಲಿನ ವಿಳಂಬ ಕಡಿಮೆ ಮಾಡುವುದು ಕ್ಲಿನಿಕ್‌ನ ಪ್ರಮುಖ ಗುರಿಯಾಗಿದೆ.

Continue Reading

ಬೆಂಗಳೂರು

Bengaluru ನಲ್ಲಿ ಖಾಲಿ ಸೈಟ್ ಮಾಲೀಕರಿಗೆ ಬಿಗ್ ಶಾಕ್: ಕಸ ತೆರವು ಮಾಡದಿದ್ದರೆ ₹38,400 ದಂಡ, ದೊಡ್ಡ ಸೈಟ್‌ಗೆ ಲಕ್ಷಕ್ಕೂ ಹೆಚ್ಚು!

Published

on

By

ಬೆಂಗಳೂರು: Bengaluru ನಲ್ಲಿ ಖಾಲಿ ನಿವೇಶನಗಳನ್ನು ಸ್ವಚ್ಛವಾಗಿಟ್ಟುಕೊಳ್ಳದೆ ಕಸ ಹಾಗೂ ಕಟ್ಟಡ ನಿರ್ಮಾಣದ ತ್ಯಾಜ್ಯವನ್ನು ಹಾಗೆಯೇ ಬಿಟ್ಟಿರುವ ಆಸ್ತಿ ಮಾಲೀಕರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಬಿಗ್ ಶಾಕ್ ನೀಡಿದೆ. ಆಗಸ್ಟ್ 27ರಿಂದ ನಗರದಾದ್ಯಂತ ಖಾಲಿ ನಿವೇಶನಗಳ ಸ್ವಚ್ಛತಾ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ನಿಯಮ ಉಲ್ಲಂಘಿಸುವ ಮಾಲೀಕರಿಗೆ ಭಾರಿ ದಂಡ ವಿಧಿಸಲು ನಿರ್ಧರಿಸಲಾಗಿದೆ.

ಶಾಂತಿನಗರದಲ್ಲಿ ವಿಶೇಷ ಅಭಿಯಾನಕ್ಕೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಿಡಿಎ ಅಧ್ಯಕ್ಷ ಹಾಗೂ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಉಪಸ್ಥಿತರಿದ್ದರು.

ಖಾಲಿ ಸೈಟ್‌ ಸ್ವಚ್ಛವಾಗಿಡುವುದು ಕಡ್ಡಾಯ

2020ರ ಘನತ್ಯಾಜ್ಯ ನಿರ್ವಹಣೆ ಉಪನಿಯಮಗಳ ಬೈಲಾ 18(1)(b) ಪ್ರಕಾರ, ಪ್ರತಿಯೊಬ್ಬ ಆಸ್ತಿ ಮಾಲೀಕರು ತಮ್ಮ ಖಾಲಿ ನಿವೇಶನಗಳನ್ನು ನೈರ್ಮಲ್ಯಯುತವಾಗಿ ಇಟ್ಟುಕೊಳ್ಳುವುದು ಕಡ್ಡಾಯವಾಗಿದೆ.

ಈಗಾಗಲೇ ಆಗಸ್ಟ್ 15ರೊಳಗೆ ಖಾಲಿ ಸೈಟ್‌ಗಳಲ್ಲಿರುವ ಕಸ ಮತ್ತು ತ್ಯಾಜ್ಯವನ್ನು ಸ್ವತಃ ತೆರವುಗೊಳಿಸುವಂತೆ ಮಾಲೀಕರಿಗೆ ಕಾಲಾವಕಾಶ ನೀಡಲಾಗಿತ್ತು. ಆದರೆ ಗಡುವು ಮುಗಿದರೂ ಸ್ವಚ್ಛಗೊಳಿಸದ ನಿವೇಶನಗಳ ವಿರುದ್ಧ ಇದೀಗ ಜಿಬಿಎ ನೇರವಾಗಿ ಕ್ರಮ ಕೈಗೊಳ್ಳಲಿದೆ.

ಕಸ ತೆರವು ಮಾಡದಿದ್ದರೆ ಭಾರಿ ದಂಡ!

ಮಾಲೀಕರು ತಮ್ಮ ಜಾಗವನ್ನು ಸ್ವಚ್ಛಗೊಳಿಸದಿದ್ದರೆ, ಪ್ರಾಧಿಕಾರವೇ ನಿವೇಶನದಲ್ಲಿರುವ ತ್ಯಾಜ್ಯವನ್ನು ತೆರವುಗೊಳಿಸಲಿದೆ. ಇದಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ದಂಡದ ರೂಪದಲ್ಲಿ ಆಸ್ತಿ ತೆರಿಗೆಯೊಂದಿಗೆ ಸೇರಿಸಿ ವಸೂಲಿ ಮಾಡಲಾಗುತ್ತದೆ.

ನಿವೇಶನದ ಗಾತ್ರಕ್ಕೆ ಅನುಗುಣವಾಗಿ ದಂಡದ ಮೊತ್ತವೂ ಬದಲಾಗಲಿದೆ.

  • 20×30 ಸೈಟ್‌: ₹19,200ರಿಂದ ದಂಡ
  • 30×40 ಸೈಟ್‌: ₹38,400ರವರೆಗೆ ದಂಡ
  • ದೊಡ್ಡ ನಿವೇಶನಗಳು: ₹1 ಲಕ್ಷಕ್ಕೂ ಅಧಿಕ ದಂಡ ಬೀಳುವ ಸಾಧ್ಯತೆ

ಹೀಗಾಗಿ ಖಾಲಿ ಸೈಟ್‌ ಹೊಂದಿರುವವರು ತಕ್ಷಣವೇ ತಮ್ಮ ನಿವೇಶನದಲ್ಲಿರುವ ಕಸ, ಕಟ್ಟಡ ತ್ಯಾಜ್ಯ ಸೇರಿದಂತೆ ಎಲ್ಲ ರೀತಿಯ ತ್ಯಾಜ್ಯವನ್ನು ತೆರವುಗೊಳಿಸುವುದು ಸೂಕ್ತವಾಗಿದೆ.

ಮಾಲೀಕರೇ ಕಸ ಒಟ್ಟುಗೂಡಿಸಿದರೆ ಹೆಚ್ಚುವರಿ ಶುಲ್ಕವಿಲ್ಲ

ಆಸ್ತಿ ಮಾಲೀಕರು ಸ್ವತಃ ಮುಂದೆ ನಿಂತು ನಿವೇಶನದಲ್ಲಿರುವ ಕಸ ಮತ್ತು ತ್ಯಾಜ್ಯವನ್ನು ಒಂದೆಡೆ ಒಟ್ಟುಗೂಡಿಸಿದರೆ, ಅದನ್ನು ಪಾಲಿಕೆಯೇ ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ವಿಲೇವಾರಿ ಮಾಡಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಬೆಂಗಳೂರಿನ ಖಾಲಿ ನಿವೇಶನಗಳು ಕಸ ಹಾಕುವ ಸ್ಥಳಗಳಾಗುವುದನ್ನು ತಡೆಯುವುದು ಹಾಗೂ ನಗರವನ್ನು ಸ್ವಚ್ಛವಾಗಿಡುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

Continue Reading

Trending