Connect with us

ಚುನಾವಣೆ

ಅಭಿವೃದ್ದಿಯೇ ಬಿಜೆಪಿಗೆ ಶ್ರೀರಕ್ಷೆ- ಶೋಭಕ್ಕನ ಗೆಲುವು ನೂರಕ್ಕೆ ನೂರು ಖಚಿತ : ರಮೇಶ್

Published

on

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಗೆಲ್ಲುವುದು ಖಚಿತ ಎಂದು ಬೆಂಗಳೂರು ಉತ್ತರ ಜಿಲ್ಲಾ ಒಬಿಸಿ ಉಪಾಧ್ಯಕ್ಷ ಜಂಗಮ್ ರಮೇಶ್ ಹೇಳಿದರು.  ಹೊಸ ಸುದ್ಧಿಯ ವಿಶೇಷ ಸಂದರ್ಶನದಲ್ಲಿ  ಮಾತನಾಡಿದ ಅವರು,  ದೇಶದಲ್ಲಿ ಮೋದಿ ಅವರ ಭ್ರಷ್ಟಾಚಾರ ರಹಿತ ಆಡಳಿತ, ಶ್ರೀ ರಾಮ ಮಂದಿರ ನಿರ್ಮಾಣ ಹಾಗೂ ಅವರು ಬಿಜೆಪಿಯ ಅಭಿವೃದ್ಧಿ ಕಾರ್ಯಗಳು ಮುಂಬರುವ ಚುನಾವಣೆಯಲ್ಲಿ ನಮಗೆ ಶ್ರೀರಕ್ಷೆಯಾಗಲಿವೆ ಎಂದು ಹೇಳಿದರು. 

ಪ್ರಧಾನಿ ನರೇಂದ್ರ ಮೋದಿ ಅವರ ಅಡಳಿತದಲ್ಲಿ ಭಾರತ ದೇಶ ಆರ್ಥಿಕವಾಗಿ ಬೆಳದಿರುವುದು ಪ್ರತಿಯೊಬ್ಬ ಭಾರತೀಯ ಹೆಮ್ಮೆ ಪಡುವ ವಿಷಯ. ಅವರ ಅಭಿವೃದ್ಧಿ ಕೆಲಸಗಳನ್ನು ನೋಡಿ ಇಂದು ಭಾರತ ದೇಶದ ಪ್ರಜೆಗಳು ಚುನಾವಣೆಯಲ್ಲಿ ಪುನಃ ಮೋದಿಯನ್ನು ಆಯ್ಕೆ ಮಾಡಲು ತುದಿಗಾಲಿನಲ್ಲಿ ನಿಂತಿರುವುದು ಬಿಜೆಪಿ ಕಾರ್ಯಕರ್ತರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಜಂಗಮಾ ರಮೇಶ್‌ ಹೇಳಿದರು.  ಬೆಂಗಳೂರು ಉತ್ತರ ಲೋಕಾಸಭಾ ಕ್ಷೇತ್ರಕ್ಕೆ ನಮ್ಮ ನೆಚ್ಚಿನ ನಾಯಕಿ ಹಾಗೂ ಅಭ್ಯರ್ಥಿಯಾಗಿರುವ ಶೋಭಾ ಕರಂದ್ಲಾಜೆ ಅವರು ಆಯ್ಕೆಯಾಗಿರುವುದು ನಮಗೆ ಅತ್ಯಂತ ಸಂತಸದ ವಿಷಯ ಎಂದರು. 

 2008ರಲ್ಲಿ ಶೋಭಾ ಕರಂದ್ಲಾಜೆಯವರು ಯಶವಂತಪುರ ಕ್ಷೇತ್ರದ ಶಾಸಕರಾಗಿದ್ದ ಅವಧಿಯಲ್ಲಿ ಅನೇಕ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಿದ್ದಾರೆ.  ಅವರು ಅಂದು ಮಾಡಿರುವ ಕೆಲಸ ಇಂದಿಗೂ ಕ್ಷೇತ್ರದ ಸಾರ್ವಜನಿಕರ ಮನದಲ್ಲಿದೆ.   ಬಿಜೆಪಿ ಪಕ್ಷದಲ್ಲಿ ಕಾರ್ಯಕರ್ತರು ಯಾವುದೇ ಆಸೆ ಆಕಾಂಕ್ಷೆಯಿಲ್ಲದೇ ಕೆಲಸ ಮಾಡುವ ಮನೋಭಾವದವರಾಗಿದ್ದು, ನಮ್ಮ ಕಾರ್ಯಕರ್ತರೆ ನಮ್ಮ  ಬಿಜೆಪಿ ಪಕ್ಷದ ಶಕ್ತಿಯಾಗಿದ್ದಾರೆ ಎಂದು ಜಂಗಮ್‌ ರಮೇಶ್‌ ಹೇಳಿದರು. ಕಾರ್ಯಕರ್ತರಿಂದಲೇ ಬಿಜೆಪಿ ಇಂದು ಪ್ರಪಂಚದಲ್ಲೇ ಅತೀ ದೊಡ್ಡ ರಾಜಕೀಯ ಪಕ್ಷವೆಂಬ ಹೆಗ್ಗಳಿಗೆ ಪಡೆದಿದೆ. ಪಕ್ಷದಲ್ಲಿ ದೇಶ ಮೊದಲು , ಧರ್ಮಕ್ಕೆ ಮೊದಲ ಆದ್ಯತೆ ಎಂಬ ಸಿದ್ದಾಂತ ಇರುವುದರಿಂದ ನಮ್ಮ ಕಾರ್ಯಕರ್ತರು ಯಾವ ವ್ಯಕ್ತಿಯ ಹಿಂದೆ ನಿಲ್ಲುವುದಿಲ್ಲ.    ಪಕ್ಷದ ನಿರ್ಧಾರ ,  ಪಕ್ಷದ ಸೂಚನೆ ಜೊತೆಗೆ ನಿಲ್ಲುವುದು ಬಿಜೆಪಿ ಪಕ್ಷದ ಸಂಸ್ಕೃತಿಯಾಗಿದೆ ಎಂದರು. 

 ಲೋಕಸಭಾ ಚುನಾವಣೆಯಲ್ಲಿ ನಾವು 400 ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆದ್ದು ಮೋದಿ ಅವರ ಕೈ ಬಲ ಪಡಿಸಬೇಕೆಂಬುದು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತನ ಏಕೈಕ ಆಕಾಂಕ್ಷೆಯಾಗಿದೆ ಎಂದು ನುಡಿದ ಜಂಗಮ್‌ ರಮೇಶ್,   ಬಿಜೆಪಿ ಕಾರ್ಯಕರ್ತರು ಯಾರಿಗೂ ಹೆದರುವುದಿಲ್ಲ ಹಾಗೂ ಯಾರಿಗೂ ತೊಂದರೆ ಕೊಡುವುದಿಲ್ಲ.   ಬೆಂಗಳೂರು ಉತ್ತರ ಕ್ಷೇತ್ರದ ಕಾರ್ಯಕರ್ತರ ಮನೋಭಾವವನ್ನು ಬಹಳ ಸೂಕ್ಷವಾಗಿ ಪರಿಗಣಿಸಿ ಕೇಂದ್ರದ ನಾಯಕರು ಶೋಭಾ ಅವರನ್ನು ಅಭ್ಯಾರ್ಥಿಯಾಗಿ ಆಯ್ಕೆ ಮಾಡಿರುವುದು ಸಂತಸದ ಸಂಗತಿಯಾಗಿದೆ ಎಂದರು. 

 ನಮ್ಮ ಪಕ್ಷದ ಮುಖಂಡರು  ಭಾಷೆ ಮತ್ತು ಪ್ರಾಂತ್ಯಕ್ಕಾಗಿ ಮಾತ್ರವಲ್ಲ  ದೇಶದ ಹಿತಕ್ಕಾಗಿ ಕೆಲಸ ಮಾಡುತ್ತಾರೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಯನ್ನು ಚುನಾವಣೆಯಲ್ಲಿ ಸೋಲಿಸುವ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್‌  ಸಾಧ್ಯವಾಗುತ್ತಿಲ್ಲ.  ಇದ್ದು ಕಾಂಗ್ರೆಸ್ ಪಕ್ಷದ ಪರಿಸ್ಧಿತಿ ಎಂದು ಲೇವಡಿ ಮಾಡಿದ ಜಂಗಮ್‌ ರಮೇಶ್‌, ಮೋದಿಯವರ ಜನಪ್ರಿಯತೆಯಿಂದಾಗಿ  ಕಾಂಗ್ರೆಸ್‌ ಪಕ್ಷ ಈ ಹೀನಾಯ ಸ್ಥಿತಿ ತಲುಪಿದೆ ಎಂದರು. 

ಯಶವಂತಪುರ ಕ್ಷೇತ್ರದ ಶಾಸಕರಾದ ಎಸ್ ಟಿ ಸೋಮಶೇಖರ್   ಅವರು ಕ್ಷೇತ್ರದಲ್ಲಿ ಮಾಡಿರುವ ಕೆಲಸಗಳಿಗೆ ನಮ್ಮ ಗೌರವ ಇದ್ದೇ ಇದೆ.  ಅವರಿಗೆ ನಮ್ಮ ಪಕ್ಷ ಸಚಿವ ಸ್ಥಾನ ಸೇರಿದಂತೆ ಎಲ್ಲವನ್ನೂ ನೀಡಿತ್ತು.ಮೋದಿ ಮತ್ತು ಅಮಿತ್‌ ಶಾ ಅವರ ಜೊತೆ ವೇದಿಕೆ ಹಂಚಿಕೊಳ್ಳುವ ಭಾಗ್ಯವೂ ಕೂಡ ಸಿಕ್ಕಿತ್ತು. ಎಸ್‌ಟಿಎಸ್‌  ಅವರ ಕಾರ್ಯ ವೈಖರಿಯ ಬಗ್ಗೆ ನಮಗೆ ಯಾವುದೇ ಅನುಮಾನವಿಲ್ಲ. ಆದರೆ ಅವರ ಪಕ್ಷ ವಿರೋಧಿ ಧೋರಣೆ ಸರಿಯಲ್ಲ ಎಂದರು.

ಅವರ ಕಾರ್ಯ ವೈಖರಿಯ ಬಗ್ಗೆ ನಮಗೆ ಯಾವುದೇ ರೀತಿಯ ಅಸಮಾಧಾನ ಇಲ್ಲ.  ಆದರೆ ಅವರ ಪಕ್ಷ ವಿರೋಧಿ ಧೋರಣೆ ಸರಿಯಿಲ್ಲ ಎಂದರು. ಅವರು ನಮ್ಮ ಪಕ್ಷವನ್ನು ಸೇರಿದಾಗ ನಾವು  ಅವರು ರಾಜಕೀಯದಲ್ಲಿ ತುಂಬ ಅನಭವಸ್ಥರು ಎಲ್ಲರ ನಾಡಿಮಿಡಿತಗಳನ್ನು ಬಲ್ಲವರು ಎಂದು ಭಾವಿಸಿದ್ದೆವು.  ಆದರೆ ಅವರ ಜೊತೆ ಇರುವ ಕೆಲವರ ಮಾತುಗಳನ್ನು ಪರಿಗಣಿಸಿ ನಿರ್ಧಾರಗಳನ್ನು ತೆಗೆದುಕೊಳ್ಳವುದು ಅಸಮಾಧಾನಕ್ಕೆ ಕಾರಣವಿರಬಹುದು ಎಂದು ನನ್ನ ಅಭಿಪ್ರಾಯ,.ಯಾರೋ ಹೇಳುವ ಮಾತನ್ನು ಕೇಳಿ ಅವರು ತಪ್ಪು ನಿರ್ಣಯಗಳನ್ನು ತೆಗೆದುಕೊಂಡಿದ್ದಾರೆ ಎಂದು ನಾನು ಭಾವಿಸಿದ್ದೇನೆ.

 ಅಸಮಾಧಾನದ ಮಾತುಗಳು ಬಂದಾಗ ನಮ್ಮ ಕ್ಷೇತ್ರದ ಶಾಸಕರು ನಮ್ಮ ಪಕ್ಷದ ಮುಖಂಡರಗಳ ಜೊತೆ ಮಾತನಾಡಬೇಕಿತ್ತು ಎಂದರು. ನಮ್ಮ ಶಾಸಕರು ಕೆಲವೇ ದಿನಗಳಲ್ಲಿ ಬಿಜೆಪಿಯಲ್ಲಿ ಉಸಿರು ಕಟ್ಟಿದ ವಾತಾವರಣ ಎಂದಿರುವುದು   ಸರಿಯೇ ಎಂದು ಪ್ರಶ್ನಿಸಿದರು.  ಜನರು ದಡ್ಡರು ಎಂದು ಯಾವ  ನಾಯಕರುಗಳು ಭಾವಿಸಬಾರದು. ಶೋಭಾ ಅವರಿಗೆ ಚಿಕ್ಕಮಂಗಳೂರಿನಲ್ಲಿ ಗೋ ಬ್ಯಾಕ್ ಘೋಷಣೆ ಬರಲು ಮುಖ್ಯ ಕಾರಣ ನಮ್ಮ ಪಕ್ಷದ ಆಂತರಿಕ ಸಮಸ್ಯೆಯೇ ಹೊರತು ಬೇರೆ ಕಾರಣ ಆ ಕ್ಷೇತ್ರದಲ್ಲಿ ಅಲ್ಲ.  ನಮ್ಮ ಮುಖಂಡರಗಳೇ ಮಾಡಿಸಿದ್ದಾರೆ ಎಂದು ಎಲ್ಲರಿಗೂ ತಿಳಿದಿರುವ ವಿಷಯ. ಶೋಭಾ ಕರಂದ್ಲಾಜೆ ಅವರ  ಕಾರ್ಯ ವೈಖರಿ ಸರಿಯಿಲ್ಲ ಎಂದಿದ್ದರೆ ಯಾವುದೇ ಕಾರಣಕ್ಕೂ ಹೈಕಮಾಂಡ್ ಅವರಿಗೆ ಟಿಕೆಟ್ ಘೋಷಣೆ ಮಾಡುತ್ತಿರಲಿಲ್ಲ.    ಈ ಬಾರಿ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ 10 ರಿಂದ 15 ಲಕ್ಷ ಮತಗಳನ್ನು ಶೋಭಾ ಪಡೆಯುತ್ತಾರೆ. 

ಯಶವಂತಪುರ ಕ್ಷೇತ್ರದಲ್ಲಿ ಶಾಸಕರಾದ ಎಸ್ ಟಿ ಸೋಮಶೇಖರ್ ಅವರು ಕ್ಷೇತ್ರದಲ್ಲಿ ನಮ್ಮ ಪಕ್ಷದ ವಿರೋಧವಾಗಿ ಮಾತನಾಡಿದರೂ ಸ್ಧಳೀಯ ಮುಖಂಡರುಗಳು ಹಾಗೂ ಜವಾಬ್ದಾರಿ ಇರುವ ನಾಯಕರುಗಳು ಮಾತನಾಡುವುದಿಲ್ಲ ಇದಕ್ಕೆ ಮುಖ್ಯ ಕಾರಣ ಸ್ಧಳೀಯ ನಾಯಕರುಗಳು ವೈಫಲ್ಯ ಎಂದೇ ಹೇಳಬೇಕು. ಬಿಜೆಪಿ ಕಾರ್ಯಕರ್ತರನ್ನು ಕಾಪಾಡಿಕೊಳ್ಳುವುದು ಕ್ಷೇತ್ರದ ಜವಾಬ್ದಾರಿ ಹೊತ್ತಿರುವ ನಾಯಕರ ಮುಖ್ಯ ಕೆಲಸ ಎಂದರು

ದೇಶ

ಪಂಜಾಬ್ ಚುನಾವಣೆಗೆ Waris Punjab De ಮೊದಲ ಅಭ್ಯರ್ಥಿ; ಸತ್ವಂತ್ ಸಿಂಗ್ ಕಣಕ್ಕೆ

Published

on

ಚಂಡೀಗಢ: 2027ರ ಪಂಜಾಬ್ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿರುವ ಬೆನ್ನಲ್ಲೇ, ಅಕಾಲಿ ದಳ್ Waris Punjab De ತನ್ನ ಮೊದಲ ಅಭ್ಯರ್ಥಿಯನ್ನು ಘೋಷಿಸಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಪ್ರಕರಣದಲ್ಲಿ ಅಪರಾಧಿಯಾಗಿ ಶಿಕ್ಷೆಗೆ ಗುರಿಯಾಗಿದ್ದ ಕೆಹರ್ ಸಿಂಗ್ ಅವರ ಪುತ್ರ ಸತ್ವಂತ್ ಸಿಂಗ್ ಅವರನ್ನು ಬಸ್ಸಿ ಪಠಾನಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ.

ಈ ಘೋಷಣೆ ಪಂಜಾಬ್‌ನ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಇಂದಿರಾ ಗಾಂಧಿ ಹತ್ಯೆಗೆ ಸಂಚು ರೂಪಿಸಿದ ಆರೋಪದಲ್ಲಿ ಕೆಹರ್ ಸಿಂಗ್ ದೋಷಿಯಾಗಿದ್ದರು. ಪ್ರಕರಣದಲ್ಲಿ ಅವರಿಗೆ ಮರಣದಂಡನೆ ವಿಧಿಸಲಾಗಿತ್ತು. ಇದೀಗ ಅವರ ಪುತ್ರನಿಗೆ 2027 Punjab Assembly Election ಟಿಕೆಟ್ ನೀಡಿರುವುದು ಪಂಥಿಕ್ ರಾಜಕೀಯದಲ್ಲಿ ಗಮನ ಸೆಳೆದಿದೆ.

ತ್ಯಾಗ ಮಾಡಿದ ಕುಟುಂಬಗಳಿಗೆ ಗೌರವ: ತರ್ಸೆಮ್ ಸಿಂಗ್

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತರ್ಸೆಮ್ ಸಿಂಗ್, ಪಕ್ಷದ ರಾಜಕೀಯ ಕೇವಲ ಅಧಿಕಾರ ಹಿಡಿಯುವುದಕ್ಕೆ ಸೀಮಿತವಾಗಿಲ್ಲ ಎಂದು ಹೇಳಿದ್ದಾರೆ. ಪಂಥಿಕ್ ತತ್ವಗಳು, ಪಂಜಾಬ್‌ನ ಹಕ್ಕುಗಳು ಹಾಗೂ ಸಮುದಾಯಕ್ಕಾಗಿ ತ್ಯಾಗ ಮಾಡಿದ ಕುಟುಂಬಗಳ ಗೌರವವನ್ನು ಎತ್ತಿಹಿಡಿಯುವುದು ಪಕ್ಷದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

ಪಂಥ್ ಮತ್ತು ಸಮುದಾಯಕ್ಕಾಗಿ ತ್ಯಾಗ ಮಾಡಿದ ಕುಟುಂಬಗಳನ್ನು ಪಕ್ಷ ಕಡೆಗಣಿಸುತ್ತಿದೆ ಎಂಬ ಆರೋಪಗಳು ಇತ್ತೀಚೆಗೆ ಕೇಳಿಬಂದಿದ್ದವು. ಆದರೆ, ಮೊದಲ ಅಭ್ಯರ್ಥಿಯಾಗಿಯೇ ಅಂತಹ ಕುಟುಂಬದ ಸದಸ್ಯರನ್ನು ಕಣಕ್ಕಿಳಿಸುವ ಮೂಲಕ ಪಕ್ಷ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ ಎಂದು ತರ್ಸೆಮ್ ಸಿಂಗ್ ಹೇಳಿದ್ದಾರೆ.

ಬಸ್ಸಿ ಪಠಾನಾದಲ್ಲಿ ಪಂಥಿಕ್ ಮತಗಳ ಲೆಕ್ಕಾಚಾರ

ಸತ್ವಂತ್ ಸಿಂಗ್ ಅವರ ಅಭ್ಯರ್ಥಿತನವು ಬಸ್ಸಿ ಪಠಾನಾ ಕ್ಷೇತ್ರದಲ್ಲಿ Panthic Politics in Punjab ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಅವರ ಕುಟುಂಬದ ಹಿನ್ನೆಲೆ ಮತದಾರರ ಮೇಲೆ ಯಾವ ರೀತಿಯ ಪ್ರಭಾವ ಬೀರುತ್ತದೆ ಎಂಬುದು ಮುಂದಿನ ದಿನಗಳಲ್ಲಿ ಕುತೂಹಲ ಮೂಡಿಸಿದೆ.

2022ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ 117 ಸ್ಥಾನಗಳ ಪೈಕಿ 92 ಸ್ಥಾನಗಳನ್ನು ಗೆದ್ದು ಭರ್ಜರಿ ಬಹುಮತ ಪಡೆದಿತ್ತು. ಕಾಂಗ್ರೆಸ್ 18 ಸ್ಥಾನಗಳಿಗೆ ಸೀಮಿತವಾಗಿತ್ತು. ಇದೀಗ 2027ರ ಚುನಾವಣೆಯಲ್ಲಿ ಪಂಥಿಕ್ ರಾಜಕೀಯದ ಪ್ರಭಾವ ಎಷ್ಟಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.

Continue Reading

ಬೆಂಗಳೂರು

SIR ಸಮೀಕ್ಷೆ ವೇಳೆ ಸರ್ಕಾರಿ ಅಧಿಕಾರಿಗೆ ಹಲ್ಲೆ: ಡಿ.ಜೆ.ಹಳ್ಳಿಯಲ್ಲಿ ಇಬ್ಬರು ಆರೋಪಿಗಳ ಬಂಧನ

Published

on

ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಕಾರ್ಯಾಚರಣೆ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಜೀವನಹಳ್ಳಿ (D J Halli) ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಯಾರಬ್ ಮತ್ತು ದಸ್ತಗೀರ್ ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ ಸುಮಾರು 1.30 ಗಂಟೆ ವೇಳೆಗೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಸ್ಲಂ ಡೆವಲಪ್‌ಮೆಂಟ್ ಬೋರ್ಡ್ ಅಧಿಕಾರಿಗಳ ತಂಡವು ಡಿ.ಜೆ.ಹಳ್ಳಿಯ ರೋಶನ್ ನಗರದಲ್ಲಿರುವ ಕೌಸರ್ ಮಸೀದಿ ಸಮೀಪ SIR ಸಮೀಕ್ಷೆ ನಡೆಸುತ್ತಿತ್ತು.

ಈ ವೇಳೆ ಸ್ಥಳಕ್ಕೆ ಬಂದ ದಸ್ತಗೀರ್, ತನಗೂ SIR ಫಾರ್ಮ್ ನೀಡುವಂತೆ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾನೆ. ಆದರೆ ಆತ ಈಗಾಗಲೇ ಜಯನಗರಕ್ಕೆ ವಾಸ್ತವ್ಯ ಬದಲಾಯಿಸಿರುವುದರಿಂದ ಆ ಪ್ರದೇಶದಲ್ಲಿ ಫಾರ್ಮ್ ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರು.

ಈ ಉತ್ತರದಿಂದ ಆಕ್ರೋಶಗೊಂಡ ದಸ್ತಗೀರ್ ಹಾಗೂ ಆತನಿಗೆ ಬೆಂಬಲ ನೀಡಿದ ಯಾರಬ್, ಕರ್ತವ್ಯದಲ್ಲಿದ್ದ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಅಧಿಕಾರಿಗೆ ಗಾಯ

ಹಲ್ಲೆಯಲ್ಲಿ ಸ್ಲಂ ಡೆವಲಪ್‌ಮೆಂಟ್ ಬೋರ್ಡ್‌ನ ಸೂಪರಿಂಟೆಂಡೆಂಟ್ ಫಕೀರಪ್ಪ ಗಾಯಗೊಂಡಿದ್ದಾರೆ. ಆರೋಪಿಗಳು ಮುಖ ಹಾಗೂ ಕಟಿ ಭಾಗಕ್ಕೆ ಹೊಡೆದಿದ್ದು, ಬೆನ್ನಿನ ಮೇಲೂ ಹಲ್ಲೆ ನಡೆಸಿದ ಪರಿಣಾಮ ಅವರ ತುಟಿಗೆ ಗಾಯವಾಗಿ ರಕ್ತಸ್ರಾವವಾಗಿದೆ ಎಂದು ತಿಳಿದುಬಂದಿದೆ.

ಸ್ಥಳದಲ್ಲಿದ್ದ ಸಾರ್ವಜನಿಕರು ಮಧ್ಯಪ್ರವೇಶಿಸಿ ಗಲಾಟೆ ನಿಲ್ಲಿಸಿದ್ದು, ಗಾಯಗೊಂಡ ಅಧಿಕಾರಿಯನ್ನು ತಕ್ಷಣ ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಪ್ರಕರಣ ದಾಖಲು, ಇಬ್ಬರ ಬಂಧನ

ಚಿಕಿತ್ಸೆಯ ಬಳಿಕ ಫಕೀರಪ್ಪ ಅವರು ಡಿ.ಜೆ.ಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಪೊಲೀಸರು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಹಾಗೂ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪಗಳಡಿ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Continue Reading

ಬೆಂಗಳೂರು

GBA ಸೇರಿ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆ ಡಿಸೆಂಬರ್ ಒಳಗೆ; ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

Published

on

ನವದೆಹಲಿ: ಬೆಂಗಳೂರು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಚುನಾವಣೆ ಸೇರಿದಂತೆ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು (Local Body Elections) ನಿಗದಿತ ಅವಧಿಯೊಳಗೆ ನಡೆಸಲು ರಾಜ್ಯ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳು ಹಾಗೂ ಚುನಾವಣಾ ಸಿದ್ಧತೆಗಳ ಕುರಿತು ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಚುನಾವಣೆಗಳನ್ನು ಅನಗತ್ಯವಾಗಿ ಮುಂದೂಡುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು.

ಸಿಎಂ ಡಿ.ಕೆ. ಶಿವಕುಮಾರ್ ಅವರ ಪ್ರಕಾರ, ಬೆಂಗಳೂರು ಬೃಹತ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಮೊದಲಿಗೆ ಆಗಸ್ಟ್ 31ರೊಳಗೆ ನಡೆಸುವ ಉದ್ದೇಶ ಹೊಂದಲಾಗಿತ್ತು. ಆದರೆ ಎಸ್‌ಐಆರ್ (SIR) ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಹಾಗೂ ಕೆಲವು ತಾಂತ್ರಿಕ ಕಾರಣಗಳಿಂದಾಗಿ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ನಲ್ಲಿ ಹೆಚ್ಚಿನ ಕಾಲಾವಕಾಶ ಕೋರಿತ್ತು.

ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದಂತೆ ಮುಂದಿನ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ ಸಿಎಂ, ಚುನಾವಣೆ ಪ್ರಕ್ರಿಯೆಯನ್ನು ವಿಳಂಬ ಮಾಡುವುದು ಸರ್ಕಾರದ ಉದ್ದೇಶವಲ್ಲ ಎಂದು ಪುನರುಚ್ಚರಿಸಿದರು.

ಬೆಂಗಳೂರು ಮಾತ್ರವಲ್ಲದೆ, ರಾಜ್ಯದಲ್ಲಿ ಬಾಕಿ ಉಳಿದಿರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳ ಚುನಾವಣೆಗಳನ್ನು ಈ ವರ್ಷದ ಡಿಸೆಂಬರ್ ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಸಂವಿಧಾನದ 73ನೇ ಮತ್ತು 74ನೇ ತಿದ್ದುಪಡಿ ಆಶಯಕ್ಕೆ ಅನುಗುಣವಾಗಿ ಗ್ರಾಮ ಪಂಚಾಯತ್‌ನಿಂದ ಮಹಾನಗರ ಪಾಲಿಕೆವರೆಗೆ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಯುವ ನಾಯಕತ್ವ ಹಾಗೂ ಹೊಸ ಮುಖಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಗಡುವಿನ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಅಗತ್ಯ ಸಿದ್ಧತೆಗಳನ್ನು ವೇಗಗೊಳಿಸುವ ಸಾಧ್ಯತೆ ಇದ್ದು, ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಂಡ ಬಳಿಕ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ನಿರೀಕ್ಷೆಯಿದೆ. ಇದರಿಂದ GBA ಚುನಾವಣೆ ಸೇರಿದಂತೆ ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆ ಇದೆ.

Continue Reading

Trending