Connect with us

ಬೆಂಗಳೂರು

ಅಮಿತ್ ಶಾ ಭಾಷಣ ತಿರುಚಿ ಕಾಂಗ್ರೆಸ್ ಅಪಪ್ರಚಾರ: BL ಸಂತೋಷ್ ಎಂದಿಗೂ ಅಧಿಕಾರಕ್ಕೆ ಆಸೆಪಟ್ಟವರಲ್ಲ; ಎಚ್.ಡಿ ದೇವೇಗೌಡ

Published

on

ಬೆಂಗಳೂರು: ಸಂಸತ್ ಅಧಿವೇಶನದಲ್ಲಿ ನಾನು ಅಮಿತ್ ಶಾ ಅವರ ಭಾಷಣ ಕೇಳಿದ್ದೇನೆ. ಕೇಂದ್ರ ಗೃಹ ಸಚಿವರ ಭಾಷಣ ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆಂದು ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.

ನಾಡಪ್ರಭು ಕೆಂಪೇಗೌಡ ಜನಪರ ವೇದಿಕೆ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಮಾನೋತ್ಸವ ಹಿನ್ನೆಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹೆಚ್‌ಡಿಡಿ ಪಾಲ್ಗೋಂಡು ಮಾತನಾಡಿದ ಅವರು, ಪ್ರಜಾಪ್ರಭುತ್ವದ ಹೆಸರಲ್ಲಿ ಕಾಂಗ್ರೆಸ್ ಹೇಗೆ ನಡೆದುಕೊಳ್ಳುತ್ತಿದೆ ಎಂದರೆ ದೇಶದ ಜನರು ತಲೆ ತಗ್ಗಿಸಬೇಕು ಹಾಗೆ ಮಾಡ್ತಾರೆ. ಅಧಿವೇಶನದಲ್ಲಿ ನಾನು ಅಮಿತ್ ಶಾ ಭಾಷಣ ಕೇಳಿದ್ದೇನೆ. ಗೃಹ ಸಚಿವ ಅಮಿತ್ ಶಾ ಭಾಷಣ ತಿರುಚಿ ಅಪಪ್ರಚಾರ ಮಾಡ್ತಿದ್ದಾರೆ ಎಂದು ಗರಂ ಆದರು.

ಅಟಲ್ ಜೀ ವಿರೋಧ ಪಕ್ಷದಲ್ಲಿ ಇದ್ದಾಗ ನಾನು ಅವರ ಭಾಷಣ ಕಾರಿನಲ್ಲಿ ಹೋಗುವಾಗ ಕೇಳ್ತಿದ್ದೆ. ಅಟಲ್ ಜೀ ಭಾಷಣ ಕೇಳಿ, ನಾನು ವಿರೋಧ ಪಕ್ಷ ನಾಯಕನಾದಾಗ ಹೇಗೆ ಮಾತನಾಡಬೇಕು ಎಂದು ತಿಳಿದುಕೊಳ್ಳುತ್ತಿದ್ದೆ.

ಎಲ್ಲ ರಾಜ್ಯಗಳಲ್ಲಿ ಸುಶಾಸನ ದಿನಾಚರಣೆ ನಡೀತಾ ಇದೆ. ಅನಾರೋಗ್ಯ ಕಾರಣ ಕಾರ್ಯಕ್ರಮಕ್ಕೆ ಬರಲು ಆಗಲ್ಲ ಎಂದಿದ್ದೆ. ಆದ್ರೆ ತುಂಬ ಒತ್ತಾಯ ಮಾಡಿದ ಕಾರಣ ಬಂದೆ. ಅಟಲ್ ಅವರ ಹೆಸರಲ್ಲಿ ನಡೆಯುವ ಕಾರ್ಯಕ್ರಮ ತಪ್ಪಿಸಿಕೊಳ್ಳಬಾರದು ಎಂದು ಬಂದೆ. ಒಂದು ಗಂಟೆಗೂ ಹೆಚ್ಚುಕಾಲ ಸಂತೋಷ್ ಅವರು ಮಾತಾಡಿದ್ದಾರೆ. ಪ್ರಜಾಪ್ರಭುತ್ವ, ಅಂಬೇಡ್ಕರ್ ಹಾಗೂ ಕಾಂಗ್ರೆಸ್ ಬಗ್ಗೆ ಮಾತಾಡಿದ್ದಾರೆ. ಅನಾವಶ್ಯಕ ಬಿಜೆಪಿ ಬಗ್ಗೆ ಟೀಕೆ ಮಾಡ್ತಾರೆ, ಆ ಎಲ್ಲ ವಿಷಯದ ಬಗ್ಗೆ ಮಾತಾಡಿದ್ದಾರೆ. ವಾಜಪೇಯಿ ಅವರ ಕೊಡುಗೆ ಬಗ್ಗೆ ಎಳೆಎಳೆಯಾಗಿ ಹೇಳಿದ್ದಾರೆ. ನಾನು ಆಳುವ ಪಕ್ಷದಲ್ಲಿದ್ದೆ, ವಾಜಪೇಯಿ ವಿಪಕ್ಷ ನಾಯಕ ಎಂದು ಮೆಲುಕು ಹಾಕಿದರು.

ಕರ್ನಾಟಕ ವಿಧಾನ ಸಭೆಯಲ್ಲಿ ವಿಪಕ್ಷ ನಾಯಕನಾಗಿ ನಾನು ಹೇಗೆ ನಡೆದುಕೊಳ್ಳಬೇಕು ಎಂದು ತಿಳಿದುಕೊಳ್ಳಲು ವಾಜಪೇಯಿ ಅವರ ಭಾಷಣ ಕೇಳ್ತಿದ್ದೆ. ವಾಜಪೇಯಿ ವಿಪಕ್ಷ ನಾಯಕನಾಗಿ ಹೇಗೆ ನಡೆದುಕೊಂಡ್ರು ಅನ್ನೋದನ್ನ ಎಲ್ಲರು ಓದಬೇಕು. ನಿಮ್ಮ ಹಿಂದಿ ಈ ದೇಶದ ಸಮಸ್ಯೆ ಬಗೆಹರಿಸಲ್ಲ ಎಂದು ನಾನು ಅವರಲ್ಲಿ ತಮಾಷೆ ಮಾಡ್ತಿದ್ದೆ, ಗ್ರೇಟ್ ಮ್ಯಾನ್. ಒಂದು ವೋಟ್‌ನಲ್ಲಿ 13 ತಿಂಗಳ ಸರ್ಕಾರ ಬಿತ್ತು. ಕಾಂಗ್ರೆಸ್‌ನವರು ಮಂತ್ರಿಯಾಗಿದ್ದವರನ್ನ ತಂದು ವೋಟ್ ಮಾಡಿಸಿದ್ದರು ಎಂದು ನೆನಪಿಸಿಕೊಂಡರು.

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮಾತುಗಳನ್ನು ಮೆಚ್ಚಿಕೊಂಡ ದೇವೇಗೌಡ, ಸಂತೋಷ್ ಅವರು ಯಾವುದೇ ಅಧಿಕಾರಕ್ಕೆ ಆಸೆಪಟ್ಟವರಲ್ಲ. ಕೇಂದ್ರ, ರಾಜ್ಯದಲ್ಲಿ ಮಂತ್ರಿ ಆಗಬೇಕು ಎಂದು ಆಸೆಪಟ್ಟವರಲ್ಲ. ನಿಸ್ವಾರ್ಥದಿಂದ ಪಕ್ಷ ಕಟ್ಟುತ್ತಿದ್ದಾರೆ ಎಂದರು.

ಮೊದಲ ಬಾರಿಗೆ ನಿಮ್ಮ ಭಾಷಣ ಕೇಳಿದ್ದೇನೆ. ಪ್ರಜಾಪ್ರಭುತ್ವದ ಬಗ್ಗೆ, ಮೋದಿ, ಶಾ ಅವರ ಬಗ್ಗೆ ಎದುರಾಳಿಗಳು ಮಾತನಾಡುತ್ತಾರೆ. ಅವರ ಮಾತು ಪೊಳ್ಳು. ಅದಕ್ಕೆ ಬೆಲೆ ಇಲ್ಲ ಎನ್ನುವುದನ್ನು ಜನರ ಮನ ಮುಟ್ಟುವಂತೆ ಮಾತಾಡಿದ್ದೀರಿ. ಮೊದಲ ಬಾರಿಗೆ ನಿಮ್ಮ ಜೊತೆ ನಾನು ವೇದಿಕೆ ಹಂಚಿಕೊಂಡಿದ್ದೇನೆ. ನಿಮ್ಮಲ್ಲಿ ಏನು ಶಕ್ತಿ ಇದೆ ಎಂದು ಅರ್ಥ ಮಾಡಿಕೊಂಡಿದ್ದೇನೆ ಎಂದು ಹೇಳಿದರು.

ದೇಶ

ಜಿ. ಪರಮೇಶ್ವರ್‌ಗೆ ‘ಗೊತ್ತಿಲ್ಲ ಸಚಿವ’ ಬಿರುದು; ಬಿಜೆಪಿ ನಾಯಕಿಯ ತೀವ್ರ ಟೀಕೆ

Published

on

ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು “ಆರ್‌ಎಸ್‌ಎಸ್ ಸಚಿವ” ಎಂದು ಹಾಗೂ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರನ್ನು “ಗೊತ್ತಿಲ್ಲ ಸಚಿವ” ಎಂದು ವ್ಯಂಗ್ಯವಾಡುವ ಮೂಲಕ ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಪ್ರಿಯಾಂಕ್ ಖರ್ಗೆ ತಮ್ಮ ಇಲಾಖೆಯ ಜವಾಬ್ದಾರಿಗಳಿಗಿಂತ ಆರ್‌ಎಸ್‌ಎಸ್ ಸಂಘಟನೆಯನ್ನು ಟೀಕಿಸುವುದರಲ್ಲೇ ಹೆಚ್ಚು ಸಮಯ ಕಳೆಯುತ್ತಿದ್ದಾರೆ ಎಂದು ಆರೋಪಿಸಿದರು. ಅವರಿಗೆ ವಹಿಸಿರುವ ಸಚಿವ ಖಾತೆಯ ಕೆಲಸಗಳನ್ನು ಬದಿಗೊತ್ತಿ ಪ್ರತಿದಿನ ಆರ್‌ಎಸ್‌ಎಸ್ ಕುರಿತು ಮಾತನಾಡುತ್ತಿರುವ ಕಾರಣ, ಅವರು ಕಾಂಗ್ರೆಸ್ ಸರ್ಕಾರದ **”ಆರ್‌ಎಸ್‌ಎಸ್ ಸಚಿವ”**ರಂತೆ ವರ್ತಿಸುತ್ತಿದ್ದಾರೆ ಎಂದು ಹೇಳಿದರು.

ಇದೇ ವೇಳೆ, ಉಪ ಮುಖ್ಯಮಂತ್ರಿ ಹಾಗೂ ಗೃಹ ಇಲಾಖೆಯ ಜವಾಬ್ದಾರಿ ನಿರ್ವಹಿಸುತ್ತಿರುವ ಜಿ. ಪರಮೇಶ್ವರ್ ಅವರ ಮೇಲೂ ಶೋಭಾ ಕರಂದ್ಲಾಜೆ ಟೀಕಾ ಪ್ರಹಾರ ನಡೆಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಅಥವಾ ಗಂಭೀರ ಘಟನೆಗಳ ಕುರಿತು ಮಾಧ್ಯಮಗಳು ಪ್ರಶ್ನಿಸಿದಾಗಲೆಲ್ಲಾ “ಗೊತ್ತಿಲ್ಲ”, “ಮಾಹಿತಿ ಇಲ್ಲ” ಎಂಬ ಉತ್ತರ ನೀಡುತ್ತಾರೆ ಎಂದು ಆರೋಪಿಸಿದರು. ಇದೇ ಕಾರಣಕ್ಕೆ ಅವರನ್ನು “ಗೊತ್ತಿಲ್ಲ ಸಚಿವ” ಎಂದು ಕರೆಯಬೇಕಾಗಿದೆ ಎಂದು ವ್ಯಂಗ್ಯವಾಡಿದರು.

ಬಿಜೆಪಿ, ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಆರ್‌ಎಸ್‌ಎಸ್ ಕುರಿತು ಕಾಂಗ್ರೆಸ್ ನಾಯಕರು ಮಾಡುತ್ತಿರುವ ಹೇಳಿಕೆಗಳನ್ನು ವಿರೋಧಿಸಿ ರಾಜ್ಯಾದ್ಯಂತ ರಾಜಕೀಯ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲೇ ಶೋಭಾ ಕರಂದ್ಲಾಜೆ ಈ ಹೇಳಿಕೆ ನೀಡಿದ್ದಾರೆ. ಅವರ ಈ ಟೀಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

ಸೂಚನೆ: ಈ ವರದಿಯಲ್ಲಿ ಉಲ್ಲೇಖಿಸಿರುವ ಆರೋಪಗಳು ಮತ್ತು ಹೇಳಿಕೆಗಳು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸಾರ್ವಜನಿಕವಾಗಿ ವ್ಯಕ್ತಪಡಿಸಿದ ಅಭಿಪ್ರಾಯಗಳಾಗಿವೆ. ಸಂಬಂಧಪಟ್ಟ ಸಚಿವರ ಪ್ರತಿಕ್ರಿಯೆ ಈ ವರದಿಯಲ್ಲಿ ಲಭ್ಯವಿಲ್ಲ.

Continue Reading

ದೇಶ

ಸಾರ್ವಜನಿಕರಿಗೆ ಗುಡ್ ನ್ಯೂಸ್! ಭಾನುವಾರವೂ ಸಿಗಲಿವೆ ನೋಂದಣಿ ಸೇವೆಗಳು

Published

on

ಬೆಂಗಳೂರು: ರಾಜ್ಯದಾದ್ಯಂತ ಇರುವ ಎಲ್ಲಾ ಉಪ ನೋಂದಣಿ ಕಚೇರಿಗಳು ಜುಲೈ 12ರ ಭಾನುವಾರ ರಜಾ ದಿನವಾಗಿದ್ದರೂ ಸಾರ್ವಜನಿಕರ ಅನುಕೂಲಕ್ಕಾಗಿ ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ ಮಹತ್ವದ ಪ್ರಕಟಣೆ ಹೊರಡಿಸಿದೆ.

ಸಾಮಾನ್ಯವಾಗಿ ಭಾನುವಾರ ಸರ್ಕಾರಿ ಕಚೇರಿಗಳಿಗೆ ರಜೆ ಇರುತ್ತದೆ. ಆದರೆ ಇಲಾಖೆಯಲ್ಲಿ ಹೆಚ್ಚುತ್ತಿರುವ ಕಾರ್ಯದೊತ್ತಡವನ್ನು ಕಡಿಮೆ ಮಾಡುವ ಜೊತೆಗೆ ಸಾರ್ವಜನಿಕರಿಗೆ ತ್ವರಿತ ಸೇವೆ ಒದಗಿಸುವ ಉದ್ದೇಶದಿಂದ ಈ ವಿಶೇಷ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ಆಸ್ತಿ ನೋಂದಣಿ ಸೇರಿದಂತೆ ವಿವಿಧ ಸೇವೆಗಳನ್ನು ಪಡೆಯಲು ಕಾಯುತ್ತಿದ್ದವರಿಗೆ ಅನುಕೂಲವಾಗಲಿದೆ.

ಇಲಾಖೆಯ ಪ್ರಕಟಣೆಯ ಪ್ರಕಾರ, ಜುಲೈ 12ರಂದು ಎಲ್ಲಾ ಉಪ ನೋಂದಣಿ ಕಚೇರಿಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ. ಸಾರ್ವಜನಿಕರು ಎಂದಿನಂತೆ ಆಸ್ತಿ ನೋಂದಣಿ, ಮುದ್ರಾಂಕ (Stamp) ಖರೀದಿ ಹಾಗೂ ಇಲಾಖೆಗೆ ಸಂಬಂಧಿಸಿದ ಇತರ ಸೇವೆಗಳನ್ನು ಯಾವುದೇ ಅಡಚಣೆಯಿಲ್ಲದೆ ಪಡೆಯಬಹುದಾಗಿದೆ.

ಈ ವಿಶೇಷ ವ್ಯವಸ್ಥೆಯಿಂದ ವಾರದ ಕೆಲಸದ ದಿನಗಳಲ್ಲಿ ಕಚೇರಿಗೆ ತೆರಳಲು ಸಾಧ್ಯವಾಗದ ಉದ್ಯೋಗಿಗಳು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈಗಾಗಲೇ ನೋಂದಣಿ ಪ್ರಕ್ರಿಯೆಗೆ ಸಮಯ ನಿಗದಿಪಡಿಸಿಕೊಂಡಿರುವವರು ಕೂಡ ಈ ಅವಕಾಶವನ್ನು ಬಳಸಿಕೊಳ್ಳಬಹುದು.

ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ ಸಾರ್ವಜನಿಕರು ಈ ವಿಶೇಷ ಸೇವೆಯ ಸದುಪಯೋಗ ಪಡೆದು ತಮ್ಮ ನೋಂದಣಿ ಸಂಬಂಧಿತ ಕೆಲಸಗಳನ್ನು ಪೂರ್ಣಗೊಳಿಸಿಕೊಳ್ಳುವಂತೆ ಮನವಿ ಮಾಡಿದೆ. ಭಾನುವಾರವೂ ಸೇವೆ ಲಭ್ಯವಿರುವುದರಿಂದ ನೋಂದಣಿ ಪ್ರಕ್ರಿಯೆಯಲ್ಲಿ ಉಂಟಾಗುವ ವಿಳಂಬವೂ ಕಡಿಮೆಯಾಗುವ ನಿರೀಕ್ಷೆಯಿದೆ.

Continue Reading

ದೇಶ

14 ಗಂಟೆಯಲ್ಲಿ 265 ಕಿ.ಮೀ ಪಯಣ; MLA ಸುರೇಶ್ ಕುಮಾರ್ ಅವರ ಫಿಟ್ನೆಸ್‌ಗೆ ಜನ ಫಿದಾ

Published

on

ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರು ಮತ್ತೊಮ್ಮೆ ತಮ್ಮ ಫಿಟ್ನೆಸ್ ಮತ್ತು ಆರೋಗ್ಯದ ಬಗ್ಗೆ ಇರುವ ಬದ್ಧತೆಯನ್ನು ಸಾಬೀತುಪಡಿಸಿದ್ದಾರೆ. 70 ವರ್ಷದ ವಯಸ್ಸಿನಲ್ಲಿಯೂ ಯುವಕರಿಗೆ ಮಾದರಿಯಾಗುವಂತೆ ಅವರು ಬೆಂಗಳೂರುದಿಂದ ತಿರುಪತಿವರೆಗೆ 265 ಕಿಲೋಮೀಟರ್‌ಗಳನ್ನು ಸೈಕಲ್‌ನಲ್ಲಿ ಕ್ರಮಿಸಿ ಗಮನ ಸೆಳೆದಿದ್ದಾರೆ.

ರಾಜಾಜಿನಗರ ಪೆಡಲ್ ಪವರ್-ಸೈಕ್ಲಿಂಗ್‘ ತಂಡದ ಸದಸ್ಯರೊಂದಿಗೆ ಅವರು ಜುಲೈ 10ರಂದು ಆರಂಭವಾದ ಈ ಸೈಕ್ಲಿಂಗ್ ಯಾತ್ರೆಯಲ್ಲಿ ಭಾಗವಹಿಸಿದ್ದರು. ಜುಲೈ 9ರಂದು ಬೆಳಗ್ಗೆ 4:30ಕ್ಕೆ ಬಸವೇಶ್ವರನಗರದಿಂದ ಹೊರಟ ತಂಡವು ಶುಕ್ರವಾರ ಮಧ್ಯಾಹ್ನ ಸುಮಾರು 2 ಗಂಟೆಗೆ ತಿರುಪತಿ ತಲುಪಿತು. ಮಧ್ಯದಲ್ಲಿ ಮದನಪಲ್ಲಿಯಲ್ಲಿ ರಾತ್ರಿ ವಾಸ್ತವ್ಯ ಮಾಡಿದ್ದ ತಂಡ ಒಟ್ಟು 265 ಕಿಲೋಮೀಟರ್‌ಗಳನ್ನು ಸುಮಾರು 14 ಗಂಟೆ 10 ನಿಮಿಷಗಳಲ್ಲಿ ಪೂರ್ಣಗೊಳಿಸಿದೆ.

ವಿಶೇಷವೆಂದರೆ, ಇದು ಸುರೇಶ್ ಕುಮಾರ್ ಅವರ ಮೊದಲ ತಿರುಪತಿ ಸೈಕಲ್ ಯಾತ್ರೆಯಲ್ಲ. 2024 ಮತ್ತು 2025ರಲ್ಲೂ ಇದೇ ರೀತಿಯಲ್ಲಿ ಸೈಕಲ್ ಮೂಲಕ ತಿರುಪತಿಗೆ ತೆರಳಿ ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ಸಾರಿದ್ದರು. ಈ ವರ್ಷವೂ ತಮ್ಮ ತಂಡದೊಂದಿಗೆ ಪೆಡಲ್ ಹೊಡೆದು ಯಶಸ್ವಿಯಾಗಿ ಗುರಿ ತಲುಪಿದ್ದಾರೆ.

ಪ್ರಯಾಣದ ಬಳಿಕ ಮಾತನಾಡಿದ ಶಾಸಕ ಎಸ್. ಸುರೇಶ್ ಕುಮಾರ್, “ಈ ಯಾತ್ರೆ ನಮ್ಮ ತಂಡಕ್ಕೆ ಹೊಸ ಉತ್ಸಾಹ ಮತ್ತು ಆತ್ಮವಿಶ್ವಾಸ ನೀಡಿದೆ. ಇಂತಹ ಸೈಕ್ಲಿಂಗ್ ಚಟುವಟಿಕೆಗಳು ಆರೋಗ್ಯ ಕಾಪಾಡಿಕೊಳ್ಳಲು ಅತ್ಯುತ್ತಮ ಮಾರ್ಗ” ಎಂದು ಹೇಳಿದರು.

ಸಾರ್ವಜನಿಕ ಜೀವನದ ಜೊತೆಗೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡಿರುವ ಸುರೇಶ್ ಕುಮಾರ್ ಅವರ ಈ ಸಾಧನೆ ಸಾಮಾಜಿಕ ಜಾಲತಾಣಗಳಲ್ಲೂ ಮೆಚ್ಚುಗೆಗೆ ಪಾತ್ರವಾಗಿದ್ದು, ಯುವಜನತೆಗೆ ಮಾತ್ರವಲ್ಲದೆ ಎಲ್ಲ ವಯೋಮಾನದವರಿಗೂ ಫಿಟ್ನೆಸ್ ಬಗ್ಗೆ ಜಾಗೃತಿ ಮೂಡಿಸುವ ಸಂದೇಶವಾಗಿದೆ.

Continue Reading

Trending