ಸುತ್ತ ಮುತ್ತ
ಅಯೋಧ್ಯೆ ‘ದೀಪೋತ್ಸವ’ ಗಿನ್ನೆಸ್ ದಾಖಲೆ! ಸರಯೂ ನದಿ ತೀರದಲ್ಲಿ ಬೆಳಗಿದ 22 ಲಕ್ಷ ಮಣ್ಣಿನ ದೀಪಗಳು
ಪ್ರತಿ ವರ್ಷದಂತೆ ದೀಪಾವಳಿ ಹಿನ್ನೆಲೆಯಲ್ಲಿಶ್ರೀ ರಾಮಜನ್ಮಭೂಮಿ ಅಯೋಧ್ಯೆಯ ಸರಯೂ ನದಿ ತೀರದಲ್ಲಿ ಸರಕಾರದಿಂದ ಆಯೋಜಿಸಲಾಗುವ ಭವ್ಯ ದೀಪೋತ್ಸವ ಕಾರ್ಯಕ್ರಮವು ಈ ಬಾರಿ ಹೊಸ ಗಿನ್ನೆಸ್ ದಾಖಲೆ ನಿರ್ಮಿಸಿದೆ.22.23 ಲಕ್ಷ ಮಣ್ಣಿನ ಹಣತೆಗಳನ್ನು ಒಂದೇ ಬಾರಿಗೆ ಬೆಳಗಲಾಗಿದೆ. ಈ ಮೂಲಕ ಕಳೆದ ವರ್ಷ 15.76 ಲಕ್ಷ ದೀಪಗಳನ್ನು ಬೆಳಗುವ ಮೂಲಕ ನಿರ್ಮಿಸಲಾಗಿದ್ದ ದಾಖಲೆಯನ್ನು ಮುರಿಯಲಾಗಿದೆ. ಇದಕ್ಕೂ ಮುನ್ನ , ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಸಂಪುಟ ಸಚಿವರು ಸೇರಿದಂತೆ ಉತ್ತರಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು ಸಂಜೆ ವೇಳೆ ನಡೆದ ‘ಶೋಭಾಯಾತ್ರೆ’ಯಲ್ಲಿ ಭಾಗಿಯಾದರು. ರಾಮ-ಸೀತೆ -ಲಕ್ಷ್ಮಣ ವೇಷಧಾರಿಗಳು ಕುಳಿತಿದ್ದ ರಥವನ್ನು ಎಳೆದು ಜೈಕಾರ ಕೂಗಿದ್ದು ವಿಶೇಷವಾಗಿತ್ತು.
2024ರ ಜ.22ರಂದು ರಾಮ ಮಂದಿರದ ಉದ್ಘಾಟನೆ ಜರುಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.2017 ರಿಂದ ಆರಂಭವಾದ ಸರಯೂ ನದಿ ತೀರದಲ್ಲಿನ ಅದ್ದೂರಿ ದೀಪೋತ್ಸವ ಕಾರ್ಯಕ್ರಮದ ಭಾಗವಾಗಿ ಕಳೆದ ವರ್ಷ ರಾಮ್ ಕೀ ಪೈದಿಯ 51 ಘಾಟ್ಗಳಲ್ಲಿ ಒಟ್ಟಾರೆ 15.76 ಲಕ್ಷ ಮಣ್ಣಿನ ಹಣತೆಗಳಲ್ಲಿ ದೀಪವನ್ನು ಬೆಳಗುವ ಮೂಲಕ ಹೊಸ ದಾಖಲೆ ನಿರ್ಮಿಸಲಾಗಿತ್ತು. ಆ ಬಳಿಕ 18.82 ಲಕ್ಷ ಮಣ್ಣಿನ ಹಣತೆಗಳನ್ನು ಬೆಳಗಿಸಿದ ದಾಖಲೆಯು ಉಜ್ಜಯಿನಿಯ ಹೆಸರಲ್ಲಿತ್ತು.ತ್ರೇತಾಯುಗದಲ್ಲಿ ಲಂಕಾದಲ್ಲಿ ವಿಜಯ ಸಾಧಿಸಿ ಸೀತೆಯನ್ನು ಅಯೋಧ್ಯೆಯೆ ಶ್ರೀರಾಮ ಕರೆತಂದ ವೇಳೆ ದೀಪ ಬೆಳಗುವ ಮೂಲಕ ಸ್ಥಳೀಯರು ಭರ್ಜರಿ ಸ್ವಾಗತ ಕೋರಿದ್ದರು. ಅದನ್ನು ಮರುಸೃಷ್ಟಿಸುವ ಯತ್ನ ಜನರಿಂದಲೇ ಆಗಿದೆ ಎಂದು ಉ.ಪ್ರ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಸುತ್ತ ಮುತ್ತ
Borivali Railway Station Viral Video ಪ್ರೇಮಿಗಳ ಹಂಗಾಮಾ? 60 ಲಕ್ಷಕ್ಕೂ ಹೆಚ್ಚು ಬಾರಿ ವೀಕ್ಷಿಸಿದ ವೈರಲ್ ವಿಡಿಯೋ
ಮುಂಬೈ: Borivali Railway Station ದಲ್ಲಿ ನಡೆದಿರುವ ಎನ್ನಲಾದ ಒಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಯುವಕನ ವರ್ತನೆಗೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೈರಲ್ ಆಗಿರುವ ವಿಡಿಯೋದಲ್ಲಿ ತಿಳಿ ನೀಲಿ ಬಣ್ಣದ ಶರ್ಟ್ ಹಾಗೂ ಕಪ್ಪು ಪ್ಯಾಂಟ್ ಧರಿಸಿರುವ ಯುವಕನೊಬ್ಬ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ನಲ್ಲಿ ಮಲಗಿ, ಯುವತಿಯ ಕಾಲನ್ನು ಬಿಗಿಯಾಗಿ ಹಿಡಿದಿರುವುದು ಕಂಡುಬರುತ್ತದೆ. ಹಸಿರು-ಬಿಳಿ ಬಣ್ಣದ ಉಡುಪು ಧರಿಸಿರುವ ಯುವತಿ ಆತನ ಹಿಡಿತದಿಂದ ಹೊರಬರಲು ಹಲವು ಬಾರಿ ಪ್ರಯತ್ನಿಸುತ್ತಿರುವ ದೃಶ್ಯವೂ ವಿಡಿಯೋದಲ್ಲಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇಬ್ಬರೂ ಪ್ರೇಮಿಗಳಾಗಿರಬಹುದು ಎಂಬ ಹೇಳಿಕೆಗಳು ಹರಿದಾಡುತ್ತಿವೆ. ಆದರೆ ಈ ಸಂಬಂಧ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ಘಟನೆಯ ವೇಳೆ ಸ್ಥಳದಲ್ಲಿ ಜನರು ಸೇರಿ ದೃಶ್ಯ ವೀಕ್ಷಿಸುತ್ತಿರುವುದು ವಿಡಿಯೋದಲ್ಲಿ ಕಾಣುತ್ತದೆ. ಅಲ್ಲಿದ್ದ ರೈಲ್ವೆ ಪೊಲೀಸ್ ಸಿಬ್ಬಂದಿ ಯುವಕನನ್ನು ಪ್ರಶ್ನಿಸಿರುವ ದೃಶ್ಯವೂ ವೈರಲ್ ಕ್ಲಿಪ್ನಲ್ಲಿ ಇದೆ. ಈ ವಿಡಿಯೋವನ್ನು “True Love at Borivali Railway Station” ಎಂಬ ಶೀರ್ಷಿಕೆಯಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ಇದುವರೆಗೆ 60 ಲಕ್ಷಕ್ಕೂ ಹೆಚ್ಚು ಬಾರಿ ವೀಕ್ಷಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹೇಳಲಾಗುತ್ತಿದೆ.
ಈ ವಿಡಿಯೋಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕೆಲವರು ಯುವಕನ ಪ್ರೀತಿಯನ್ನು ಸಮರ್ಥಿಸುವ ಕಾಮೆಂಟ್ಗಳನ್ನು ಮಾಡಿದ್ದರೆ, ಅನೇಕರು ಜನದಟ್ಟಣೆಯ ಸಾರ್ವಜನಿಕ ಸ್ಥಳದಲ್ಲಿ ಇಂತಹ ವರ್ತನೆ ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಆದರೆ, ಈ ಘಟನೆಯ ಕುರಿತು ಮುಂಬೈ ಪೊಲೀಸರು ಅಥವಾ ಭಾರತೀಯ ರೈಲ್ವೆ ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ. ವಿಡಿಯೋದ ನಿಖರ ಸಂದರ್ಭ, ದಿನಾಂಕ ಹಾಗೂ ಘಟನೆಯ ಹಿನ್ನೆಲೆ ಸ್ವತಂತ್ರವಾಗಿ ದೃಢಪಟ್ಟಿಲ್ಲ.
ರಾಜ್ಯ
S Janaki ಹೆಸರನ್ನು ಮೈಸೂರಿನ ಗದ್ದಿಗೆ ರಸ್ತೆಗೆ ನಾಮಕರಣ ಮಾಡಿ: ಕೇರ್ಟೇಕರ್ ನವೀನ್ ಮನವಿ
ಮೈಸೂರು: S Janaki ಅವರ ನೆನಪನ್ನು ಶಾಶ್ವತವಾಗಿ ಉಳಿಸುವ ಉದ್ದೇಶದಿಂದ ಮೈಸೂರಿನ ಗದ್ದಿಗೆ ರಸ್ತೆಗೆ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಅವರ ಕೇರ್ಟೇಕರ್ ನವೀನ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಜಾನಕಮ್ಮನವರ ಕೊನೆಯ ದಿನಗಳ ನೆನಪುಗಳನ್ನು ಭಾವುಕರಾಗಿ ಹಂಚಿಕೊಂಡರು.
“ಜಾನಕಮ್ಮ ಯಾವಾಗಲೂ ‘ನಾನು ಕರ್ನಾಟಕದಲ್ಲೇ, ಅದರಲ್ಲೂ ಮೈಸೂರಿನಲ್ಲೇ ಇರುತ್ತೇನೆ’ ಎಂದು ಹೇಳುತ್ತಿದ್ದರು. ಹೈದರಾಬಾದ್ನಲ್ಲಿ ಅರಮನೆಯಂತಹ ದೊಡ್ಡ ಮನೆ ಇದ್ದರೂ ಅವರಿಗೆ ಮೈಸೂರಿನ ಮೇಲೆಯೇ ಅಪಾರ ಅಭಿಮಾನವಿತ್ತು. ಕೊನೆಯ ದಿನಗಳನ್ನು ಸಹ ಅವರು ಇಲ್ಲಿಯೇ ಕಳೆಯಲು ಬಯಸಿದ್ದರು,” ಎಂದು ನವೀನ್ ಹೇಳಿದರು.
ಮಗನ ಅಗಲಿಕೆಯ ಬಳಿಕ ಎಸ್. ಜಾನಕಿ ಮಾನಸಿಕವಾಗಿ ನೊಂದಿದ್ದು, ಕಳೆದ ಎರಡು ವರ್ಷಗಳಿಂದ ಮೈಸೂರಿನಲ್ಲಿ ನವೀನ್ ಅವರ ಮನೆಯಲ್ಲೇ ವಾಸವಿದ್ದರು ಎಂದು ಅವರು ತಿಳಿಸಿದರು. “ನಾನು ಎಲ್ಲಿಗೂ ಹೋಗುವುದಿಲ್ಲ, ನಿಮ್ಮ ಜೊತೆಯಲ್ಲೇ ಇರುತ್ತೇನೆ” ಎಂದು ಜಾನಕಮ್ಮ ಹೇಳುತ್ತಿದ್ದರು ಎಂದು ನೆನೆದು ನವೀನ್ ಕಣ್ಣೀರಿಟ್ಟರು. ಅವರ ಆರೈಕೆಯನ್ನು ಭಾಗ್ಯ ಅವರು ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು ಎಂದೂ ವಿವರಿಸಿದರು.
ನವೀನ್ ಅವರು ತಮ್ಮ ಬಾಲ್ಯದಿಂದಲೇ ಎಸ್. ಜಾನಕಿ ಅವರ ಅಭಿಮಾನಿಯಾಗಿದ್ದು, 2018ರಲ್ಲಿ ಮೈಸೂರಿನಲ್ಲಿ ನಡೆದ ಅವರ ಕೊನೆಯ ಸಾರ್ವಜನಿಕ ಸಂಗೀತ ಕಾರ್ಯಕ್ರಮವನ್ನು ನೆನಪಿಸಿಕೊಂಡರು. ಆ ಕಾರ್ಯಕ್ರಮದ ಬಳಿಕ ಅವರು ಯಾವುದೇ ಪ್ರಶಸ್ತಿಗಳನ್ನು ಸ್ವೀಕರಿಸಲು ಹೋಗುತ್ತಿರಲಿಲ್ಲ ಎಂದು ಹೇಳಿದರು.
ಎಸ್. ಜಾನಕಿ ಅವರ ಹೆಸರನ್ನು ಮೈಸೂರಿನ ಗದ್ದಿಗೆ ರಸ್ತೆಗೆ ಇಟ್ಟರೆ ಮುಂದಿನ ಪೀಳಿಗೆಗೂ ಅವರ ಸಾಧನೆ ನೆನಪಾಗುತ್ತದೆ. ಈ ಮೂಲಕ ಕನ್ನಡ ಹಾಗೂ ಭಾರತೀಯ ಸಂಗೀತ ಲೋಕಕ್ಕೆ ಅವರು ನೀಡಿದ ಅಪಾರ ಕೊಡುಗೆಗೆ ಸರ್ಕಾರ ಶಾಶ್ವತ ಗೌರವ ಸಲ್ಲಿಸಬೇಕು ಎಂದು ನವೀನ್ ಮನವಿ ಮಾಡಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಅಭಿಮಾನಿಗಳು ಈ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.
ಸಿನಿಮಾ
ದಕ್ಷಿಣ ಭಾರತದ ಗಾನಕೋಗಿಲೆ ಎಸ್. ಜಾನಕಿ ನಿಧನ: 88ನೇ ವಯಸ್ಸಿನಲ್ಲಿ ಸಂಗೀತ ಲೋಕದ ದಂತಕಥೆಗೆ ವಿದಾಯ
ದಕ್ಷಿಣ ಭಾರತದ ಖ್ಯಾತ ಹಿನ್ನಲೆ ಗಾಯಕಿ ಎಸ್. ಜಾನಕಿ ಅವರು 88ನೇ ವಯಸ್ಸಿನಲ್ಲಿ ಮೈಸೂರಿನ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು. “ದಕ್ಷಿಣ ಭಾರತದ ಗಾನಕೋಗಿಲೆ” ಎಂದೇ ಜನಪ್ರಿಯರಾಗಿದ್ದ ಅವರು ಭಾರತೀಯ ಸಂಗೀತ ಕ್ಷೇತ್ರಕ್ಕೆ ನೀಡಿದ ಅಪಾರ ಕೊಡುಗೆಯಿಂದ ಕೋಟ್ಯಾಂತರ ಅಭಿಮಾನಿಗಳ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ.1938ರ ಏಪ್ರಿಲ್ 23ರಂದು ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಜನಿಸಿದ ಎಸ್. ಜಾನಕಿ ಅವರು ತಮ್ಮ ಸಂಗೀತ ಪಯಣವನ್ನು ಆರಂಭಿಸಿ ಆರು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಚಿತ್ರರಂಗವನ್ನು ತಮ್ಮ ಸುಮಧುರ ಕಂಠದಿಂದ ರಂಜಿಸಿದರು. ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ ಹಲವು ಭಾರತೀಯ ಹಾಗೂ ವಿದೇಶಿ ಭಾಷೆಗಳಲ್ಲಿ 48,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಅಪರೂಪದ ಸಾಧನೆ ಅವರದು.ಕನ್ನಡ ಚಿತ್ರರಂಗದಲ್ಲಿ ಎಸ್. ಜಾನಕಿ ಅವರ ಧ್ವನಿ ವಿಶೇಷ ಜನಪ್ರಿಯತೆ ಗಳಿಸಿತ್ತು. ಅವರ ಹಾಡುಗಳು ಇಂದಿಗೂ ಸಂಗೀತಾಸಕ್ತರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿವೆ. ಭಾವಪೂರ್ಣ ಗಾಯನ, ಸ್ಪಷ್ಟ ಉಚ್ಚಾರಣೆ ಮತ್ತು ಧ್ವನಿಯ ವೈವಿಧ್ಯತೆ ಅವರ ಗಾಯನದ ಪ್ರಮುಖ ವೈಶಿಷ್ಟ್ಯಗಳಾಗಿದ್ದವು.ತಮ್ಮ ಅದ್ಭುತ ಸಂಗೀತ ಸೇವೆಗಾಗಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಸೇರಿದಂತೆ ಹಲವು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳು ಮತ್ತು ಗೌರವಗಳನ್ನು ಪಡೆದಿದ್ದರು. ಭಾರತೀಯ ಚಿತ್ರರಂಗದ ಅನೇಕ ಖ್ಯಾತ ಸಂಗೀತ ನಿರ್ದೇಶಕರು ಮತ್ತು ನಟರೊಂದಿಗೆ ಕೆಲಸ ಮಾಡಿ ಅಸಂಖ್ಯಾತ ಅಮರ ಗೀತೆಗಳನ್ನು ನೀಡಿದ್ದಾರೆ.ಎಸ್. ಜಾನಕಿ ಅವರ ನಿಧನದಿಂದ ಭಾರತೀಯ ಸಂಗೀತ ಲೋಕವು ಅಪರೂಪದ ಪ್ರತಿಭೆಯನ್ನು ಕಳೆದುಕೊಂಡಿದೆ. ಅಭಿಮಾನಿಗಳು, ಚಿತ್ರರಂಗದ ಗಣ್ಯರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅವರು ಹಾಡಿದ ಸಾವಿರಾರು ಹಾಡುಗಳು ಮುಂದಿನ ಪೀಳಿಗೆಗಳಿಗೂ ಪ್ರೇರಣೆಯಾಗಲಿದ್ದು, ಭಾರತೀಯ ಸಂಗೀತ ಇತಿಹಾಸದಲ್ಲಿ ಎಸ್. ಜಾನಕಿ ಅವರ ಹೆಸರು ಸದಾ ಚಿರಸ್ಥಾಯಿಯಾಗಿ ಉಳಿಯಲಿದೆ.
-
ಬೆಂಗಳೂರು8 hours agoಬೇಡ ಬ್ರೋ: ಡ್ರಗ್ಸ್ ವಿರುದ್ಧ MLA ಎಸ್.ಟಿ. ಸೋಮಶೇಖರ್ ಖಡಕ್ ಎಚ್ಚರಿಕೆ; ಯುವಕರಿಗೆ ಮಹತ್ವದ ಸಂದೇಶ
-
ಸುತ್ತ ಮುತ್ತ10 hours agoBorivali Railway Station Viral Video ಪ್ರೇಮಿಗಳ ಹಂಗಾಮಾ? 60 ಲಕ್ಷಕ್ಕೂ ಹೆಚ್ಚು ಬಾರಿ ವೀಕ್ಷಿಸಿದ ವೈರಲ್ ವಿಡಿಯೋ
-
ರಾಜ್ಯ14 hours agoಮಹಾರಾಜ ಕಾಲೇಜು ಮೈದಾನದಲ್ಲಿ ಎಸ್. ಜಾನಕಿಗೆ ಅಂತಿಮ ನಮನ; ಅಭಿಮಾನಿಗಳ ಕಣ್ಣೀರಿನ ಸಾಗರ
-
ರಾಜ್ಯ10 hours agoS Janaki ಹೆಸರನ್ನು ಮೈಸೂರಿನ ಗದ್ದಿಗೆ ರಸ್ತೆಗೆ ನಾಮಕರಣ ಮಾಡಿ: ಕೇರ್ಟೇಕರ್ ನವೀನ್ ಮನವಿ
-
ದೇಶ8 hours agoManmohan Singh ಕುರಿತು ಮಾಜಿ ಮುಖ್ಯ ಚುನಾವಣಾ ಆಯುಕ್ತರ ಪುಸ್ತಕದಲ್ಲಿ ಹೊಸ ಬಹಿರಂಗ; ರಾಜಕೀಯ ವಲಯದಲ್ಲಿ ಚರ್ಚೆ
-
ಕ್ರೀಡೆ8 hours agoSouth Africa ಫುಟ್ಬಾಲ್ಗೆ ಆಘಾತ; ಜೇಡನ್ ಆಡಮ್ಸ್ ಅಕಾಲಿಕ ನಿಧನ
-
ರಾಜ್ಯ8 hours agoCabinet Expansion: ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ನಾಯಕರ ಪೈಪೋಟಿ; ಹೈಕಮಾಂಡ್ ಅಂತಿಮ ತೀರ್ಮಾನ ಯಾವಾಗ?
-
ರಾಜ್ಯ9 hours agoBengaluru 2nd Airport: ದಕ್ಷಿಣ ಬೆಂಗಳೂರಿನ ಜನರಿಗೆ ಗುಡ್ ನ್ಯೂಸ್! ಡಿಕೆ ಶಿವಕುಮಾರ್ ಹೇಳಿದ್ದೇನು?
