Connect with us

ರಾಜಕೀಯ

ಎಸ್ ಟಿ ಸೋಮಶೇಖರ ಅವರನ್ನು ಗೆಲ್ಲಿಸಿರುವುದು ಕ್ಷೇತ್ರದ ಜನರು ಬಿಜೆಪಿ ಪಕ್ಷ ಅಲ್ಲ

Published

on

ಎಸ್ ಟಿ ಸೋಮಶೇಖರ ಅವರನ್ನು ಗೆಲ್ಲಿಸಿರುವುದು ಕ್ಷೇತ್ರದ ಜನರು ಬಿಜೆಪಿ ಪಕ್ಷ ಅಲ್ಲ

ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ 1 ಲಕ್ಷ ಅಂತರದ ಮತಗಳಿಂದ ಬಿಜೆಪಿ ವಿರುದ್ಧ ಗೆಲುವು ಸಾಧಿಸುವುದು ಎಂದು ಕಾಂಗ್ರೆಸ್ ಮುಖಂಡ ಸಜ್ಜಾದ್ ಬಾಬು ಹೇಳಿದರು, ಹೊಸ ಸುದ್ದಿಯ ವಿಶೇಷ ಸಂದರ್ಶನದಲ್ಲಿ ಕಳೆದ ಬಾರಿ ಸದಾನಂದಗೌಡರು ಉತ್ತರ ಕ್ಷೇತ್ರದಲ್ಲಿ ಏನೂ ಕೆಲಸಗಳನ್ನು ಮಾಡಿಲ್ಲ, ಕೇಂದ್ರದಲ್ಲಿ ಇರುವ ಮೋದಿ ಸರ್ಕಾರದ ಕೂಡಗೆ ಇಲ್ಲ ಅವರು ಉತ್ತಮ ಭಾಷಣೆಗಳಿಂದಲ್ಲೇ ದೇಶದ ಜನರನ್ನು ದಾರಿ ತಪ್ಪಿಸಿದ್ದಾರೆ ಎಂದರು,

75 ವರ್ಷದಿಂದ ಕಾಂಗ್ರೆಸ್ ಅವರ ಕೊಡುಗೆ ಅಪಾರ ಈಗ 10 ವರ್ಷದಿಂದ ಭಾರತವನ್ನು ಬದಲಾಯಿಸಿದ್ದೇವೆ ಎಂದು ಅವರು ಹೇಳುತ್ತಾರೆ, ಕಾಂಗ್ರೆಸ್ ಪಕ್ಷ ದೇಶಕ್ಕೆ ಅನೇಕ ಯೋಜನೆಗಳನ್ನು ನೀಡಿದೆ ಅದರೆ ಇಂದು ಪ್ರಧಾನಿ ಮೋದಿ ಅವರು ಎಲ್ಲಾ ನಾನೇ ಮಾಡಿರುವುದು ಎಂದು ಹೇಳುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದರು,

ಆಲ್ಪ ಸಂಖ್ಯಾತರು ಕಾಂಗ್ರೆಸ್ ಪಕ್ಷವನ್ನು ಯಾವುದೇ ಕಾರಣಕ್ಕೂ ಬಿಡಲ್ಲ, ಏಕೆಂದರೆ ಬಿಜೆಪಿ ಪಕ್ಷದವರು ಎಲ್ಲಾ ಸಮುದಾಯಗಳಿಗೆ ಕೆಲಸ ಮಾಡಲ್ಲ, ಇಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಎಲ್ಲಾ ಸಮುದಾಯಗಳಿಗೆ ಯೋಜನೆ ನೀಡಿದೆ ಅವರು ಜಾತಿ ಎಂಬ ವಿಷಯವನ್ನು ನೋಡದೆ ಎಲ್ಲರಿಗೂ ಕೆಲಸ ಮಾಡುತ್ತಾರೆ ಅದರೆ ಬಿಜೆಪಿ ಮಾಡಲ್ಲ ಎಂದು ಆರೋಪಿಸಿದರು,

ನಾವು ಭಾರತದಲ್ಲೇ ಹುಟ್ಟಿ ಬೆಳದಿರುವುದು ನಮ್ಮಗೆ ಸಿಎಎ ಬಗ್ಗೆ ಯಾವುದೇ ಭಯವಿಲ್ಲ, ಅದರೆ ನಮ್ಮ ಜನಾಂಗದಲ್ಲಿ ಕೆಲವರಿಗೆ ಸಿಎಎ ಬಗ್ಗೆ ಸರಿಯಾದ ಮಾಹಿತಿ ಇಲ್ಲ, ನಮ್ಮ ಸಮುದಾಯದಲ್ಲಿ ವಿದ್ಯಾವಂತರು ಕಡಿಮೆ ಆ ಕಾರಣದಿಂದ ವೋಟರ್ ಹಾಗೂ ಅಧಾರ್ ಕಾರ್ಡ್ನಲ್ಲಿ ಬಹಳಷ್ಟು ಬಾರಿ ಹೆಸರುಗಳನ್ನು ಸರಿಯಾಗಿ ಇರುವುದಿಲ್ಲ ಏಕೆಂದರೆ ಕೆಲ ಬಾರಿ ಹೆಸರುಗಳ ಉಚ್ಚಾಟನೆ ವೇಳೆ ತಪ್ಪು ನಡದಿರುತ್ತದೆ ಎಂದರು,

ಯಶವಂತಪುರ ಕ್ಷೇತ್ರದಲ್ಲಿ ಶಾಸಕ ಎಸ್ ಟಿ ಸೋಮಶೇಖರ ಅವರನ್ನು ಗೆಲ್ಲಿಸಿರುವುದು ಕ್ಷೇತ್ರದ ಜನರು ಬಿಜೆಪಿ ಪಕ್ಷ ಅಲ್ಲ, ಅವರು ಮಾಡಿರುವ ಅಭಿವೃದ್ಧಿ ಕೆಲಸಗಳಿಂದ ಗೆದ್ದಿರುವುದು ಇಂದು ಅವರ ಜೊತೆ ನಾವು ನಿಂತಿದ್ದೇವೆ ಎಂದರೆ ಅದಕ್ಕೆ ಮುಖ್ಯ ಕಾರಣ ಅವರು ಚುನಾವಣೆಯ ಫಲಿತಾಂಶ ಏನೇ ಇರಲಿ ಅವರು ನಿರಂತರವಾಗಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾರೆ ಅದರೆ ಜನಾತದಳದ ಅಭ್ಯರ್ಥಿ ಜವರಾಯಿಗಡ್ರ ತರ ಚುನಾವಣೆ ಸಂದರ್ಭದಲ್ಲಿ ಬಂದು ಕಣ್ಣೀರು ಹಾಕಲ್ಲ ಹಾಗೂ ಚುನಾವಣೆ ಸೋತ ನಂತರ ಕ್ಷೇತ್ರದಲ್ಲಿ ಅವರನ್ನು ನೋಡಲು ಸಾಧ್ಯವೇ ಇಲ್ಲ ಎಂದರು, ಎಸ್ ಟಿ ಸೋಮಶೇಖರ ಅವರು ಕ್ಷೇತ್ರದ ಜನರ ಕಷ್ಟ ಸುಖಗಳಲ್ಲಿ ಅವರು ಭಾಗಿಯಾಗಿ ಇರುತ್ತಾರೆ ಇದು ನಾವುಗಳು ಹೆಮ್ಮೆ ಪಡುವ ವಿಷಯ ಎಂದರು,

ಕ್ಷೇತ್ರದ ಬಿಜೆಪಿ ನಾಯಕರುಗಳು ಶಾಸಕರ ವಿರುದ್ಧ ಕೆಲಸ ಮಾಡಿರುವುದು ಆತೀ ಹೆಚ್ಚು ಬೇಸರ ತಂದಿದೆ, ಅವರುಗಳು ನಿಷ್ಟವಂತ ಕಾರ್ಯಕರ್ತರು ನಾವು ಎಂದು ಹೇಳುತ್ತಾರೆ, ನಾನು ಬಿಜೆಪಿ ಪಕ್ಷದಲ್ಲಿ ಆಲ್ಪ ಸಂಖ್ಯಾತರ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ, ನಮ್ಮ ಸಮುದಾಯದಲ್ಲಿ ಸಿಎಎ ಬಗ್ಗೆ ಜಾಗೃತಿ ಮೂಡಿಸಲು ನಾನು ಕೆಲಸ ಮಾಡಿದ್ದೇನೆ ಹಾಗೂ ಕರೋನಾ ಸಂದರ್ಭದಲ್ಲಿ ಮನ ಮನೆಗೆ ಹೋಗಿ ಜನಸಾಮನ್ಯರ ಕಷ್ಟಕ್ಕೆ ನಾನು ಎಸ್ ಟಿ ಸೋಮಶೇಖರ ಅವರ ಅದೇಶದಂತೆ ಕೆಲಸ ಮಾಡಿದ್ದೇನೆ ಎಂದರು,

ಕಾAಗ್ರೆಸ್ ಸರ್ಕಾರದವರು ಬಂದರೆ ಕೋಮು ಗಲಭೆಗೆ ಆಸ್ಪಧ ಆಗಲ್ಲ, ಕೆಲವು ದಿನಗಳ ಹಿಂದೆ ವಿಧಾನಸೌಧದಲ್ಲಿ ಕೇಳಿ ಬಂದ ಜೈ ಪಾಕಿಸ್ತಾನವನ್ನು ನಾನು ಕಂಡಿಸಿತ್ತೇನೆ, ಭಾರತ ದೇಶದಲ್ಲಿ ಹುಟ್ಟಿ ಪಾಪಿ ಪಾಕಿಸ್ತಾನಕ್ಕೆ ಬೆಂಬಲ ನೀಡಲ್ಲ, ಎಲ್ಲಾ ಮಸೀದಿಯಲ್ಲಿ ನಮ್ಮ ಗುರುಗಳು ಪ್ರಯಿಯೊಬ್ಬರಿಗೆ ತಪ್ಪ ಮಾಡಬೇಡಿ ಎಂದು ತಿಳಿ ಹೇಳುತ್ತಾರೆ ಅದರೆ ಕೆಲವರು ಅರ್ಥ ಮಾಡಿಕೊಳ್ಳದೆ ಇಂತಹ ಕೆಲಸಗಳನ್ನು ಮಾಡುತ್ತಿದ್ದಾರೆ, ನಾವು ಕೂಡ ಭಾರತೀಯರೇ ಎಂಬುದನ್ನು ಅವರುಗಳು ಮೆರಯಬಾರದರು ಎಂದರು,

ರಾಜ್ಯ

Cabinet Expansion: ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ನಾಯಕರ ಪೈಪೋಟಿ; ಹೈಕಮಾಂಡ್ ಅಂತಿಮ ತೀರ್ಮಾನ ಯಾವಾಗ?

Published

on

ಬೆಂಗಳೂರು: Cabinet Expansion ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕುರಿತ ಚಟುವಟಿಕೆಗಳು ಮತ್ತೆ ವೇಗ ಪಡೆದಿದ್ದು, ಶೀಘ್ರದಲ್ಲೇ ರಾಜ್ಯದ ಪ್ರಮುಖ ನಾಯಕರಿಗೆ ದೆಹಲಿ ಬುಲಾವ್ ಬರಬಹುದಾದ ಸಾಧ್ಯತೆ ಇದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಹೈಕಮಾಂಡ್ ನಾಯಕರೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪ್ರಸ್ತುತ ರಾಜ್ಯ ಸಚಿವ ಸಂಪುಟದಲ್ಲಿ 20 ಸಚಿವ ಸ್ಥಾನಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡುವ ಕುರಿತು ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ. ರಾಜ್ಯ ನಾಯಕರು ತಮ್ಮ ಬೆಂಬಲಿಗ ಶಾಸಕರ ಪಟ್ಟಿಯೊಂದಿಗೆ ದೆಹಲಿಗೆ ತೆರಳಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. 2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಾದೇಶಿಕ, ಜಾತಿ ಹಾಗೂ ರಾಜಕೀಯ ಸಮೀಕರಣಗಳ ಆಧಾರದ ಮೇಲೆ ಸಚಿವರ ಆಯ್ಕೆ ನಡೆಯುವ ಸಾಧ್ಯತೆ ಇದೆ.

ಜುಲೈ 14ರಿಂದ ಆಷಾಢ ಮಾಸ ಆರಂಭವಾಗಲಿರುವ ಹಿನ್ನೆಲೆ, ಅದರ ಮೊದಲು ಸಂಪುಟ ವಿಸ್ತರಣೆ ನಡೆಯಬಹುದೇ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಹೆಚ್ಚಾಗಿದೆ. ಆದರೆ ಈ ಕುರಿತು ಯಾವುದೇ ಅಧಿಕೃತ ವೇಳಾಪಟ್ಟಿ ಪ್ರಕಟವಾಗಿಲ್ಲ.

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಂಪುಟ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದೆ ಎಂದು ಹೇಳಿದ್ದು, ಬರ ಹಾಗೂ ಪ್ರವಾಹದಂತಹ ಸನ್ನಿವೇಶಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಪೂರ್ಣ ಪ್ರಮಾಣದ ಸಚಿವ ಸಂಪುಟ ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇತ್ತ ಹಲವು ಕಾಂಗ್ರೆಸ್ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಮುಂದುವರಿಸಿದ್ದಾರೆ. ಅಜಯ್ ಸಿಂಗ್, ಸಿ. ಪುಟ್ಟರಂಗಶೆಟ್ಟಿ, ಎ.ಬಿ. ರಮೇಶ್ ಬಂಡಿಸಿದ್ದೇಗೌಡ ಸೇರಿದಂತೆ ಹಲವು ನಾಯಕರು ತಮ್ಮ ಹಕ್ಕು ಮಂಡಿಸುತ್ತಿದ್ದಾರೆ. ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಕೈಗೊಳ್ಳುವ ನಿರ್ಧಾರದತ್ತ ರಾಜ್ಯ ರಾಜಕೀಯದ ಗಮನ ನೆಟ್ಟಿದೆ.

Continue Reading

ರಾಜ್ಯ

Mysore ನಲ್ಲಿ ಬಿ.ವೈ. ವಿಜಯೇಂದ್ರ ಹೇಳಿದ್ದೇನು? ಕಾಂಗ್ರೆಸ್, ಮೋದಿ ಹಾಗೂ ದಸರಾ ಕುರಿತು ತೀಕ್ಷ್ಣ ಮಾತು

Published

on

ಮೈಸೂರು: Mysore ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯ ಸರ್ಕಾರದ ಹಲವು ನೀತಿಗಳ ಕುರಿತು ಟೀಕಿಸಿದ್ದಾರೆ. ಮೈಸೂರಿನಲ್ಲಿ ನಡೆದ ಕಾಯಕ ಸಮಾಜಗಳ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಕೇವಲ ಜಾತಿಯ ಕಾರಣದಿಂದಲೇ ಪ್ರಧಾನಿಯವರನ್ನು ಗುರಿಯಾಗಿಸಿಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

“ಅತ್ಯಂತ ಹಿಂದುಳಿದ ವರ್ಗದಿಂದ ಬಂದಿರುವ ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿರುವುದನ್ನು ಕಾಂಗ್ರೆಸ್ ನಾಯಕರು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ವಿಜಯೇಂದ್ರ ಹೇಳಿದರು. ಅಲ್ಲದೆ, ಅಲ್ಪಸಂಖ್ಯಾತರ ಓಲೈಕೆಗಾಗಿ ರಾಜ್ಯ ಸರ್ಕಾರ ಬಹುಸಂಖ್ಯಾತರ ಹಿತಾಸಕ್ತಿಯನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶ ಮೂಲದ ವಲಸಿಗರಿಗೆ ವಾಸದ ದೃಢೀಕರಣ ಪತ್ರಗಳನ್ನು ನೀಡಲಾಗುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದ್ದು, ಈ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು. ಈ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ತಕ್ಷಣದ ಪ್ರತಿಕ್ರಿಯೆ ಲಭ್ಯವಾಗಿಲ್ಲ.

ಇದೇ ವೇಳೆ, ಮೈಸೂರಿನ ವಿಶ್ವವಿಖ್ಯಾತ ದಸರಾ ಮಹೋತ್ಸವದ ಸಂದರ್ಭದಲ್ಲಿ ಕಂಬಳ ಆಯೋಜಿಸುವ ಸರ್ಕಾರದ ಪ್ರಸ್ತಾವಕ್ಕೂ ಅವರು ವಿರೋಧ ವ್ಯಕ್ತಪಡಿಸಿದರು. ಕಂಬಳ ಕರಾವಳಿ ಭಾಗದ ಸಾಂಪ್ರದಾಯಿಕ ಕ್ರೀಡೆಯಾಗಿದ್ದು, ಅದನ್ನು ಅಲ್ಲಿಯೇ ಇನ್ನಷ್ಟು ಅದ್ದೂರಿಯಾಗಿ ನಡೆಸಬೇಕು. ಮೈಸೂರಿನ ಐತಿಹಾಸಿಕ ದಸರಾ ಸಂಪ್ರದಾಯದೊಂದಿಗೆ ಕಂಬಳವನ್ನು ಸೇರಿಸುವುದು ಸೂಕ್ತವಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಸಮಾವೇಶದಲ್ಲಿ ಮಾತನಾಡಿದ ವಿಜಯೇಂದ್ರ, ಸರ್ಕಾರ ಜನರ ಭಾವನೆಗಳಿಗೆ ಗೌರವ ನೀಡಿ ರಾಜ್ಯದ ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Continue Reading

ರಾಜ್ಯ

Bengaluru 2nd Airport: ದಕ್ಷಿಣ ಬೆಂಗಳೂರಿನ ಜನರಿಗೆ ಗುಡ್ ನ್ಯೂಸ್! ಡಿಕೆ ಶಿವಕುಮಾರ್ ಹೇಳಿದ್ದೇನು?

Published

on

ಬೆಂಗಳೂರು: Bengaluru 2nd Airport ನಗರದ ಬಹುಕಾಲದ ನಿರೀಕ್ಷೆಯಾಗಿರುವ ಎರಡನೇ ವಿಮಾನ ನಿಲ್ದಾಣ (Bengaluru Second Airport) ನಿರ್ಮಾಣ ಯೋಜನೆಗೆ ಮಹತ್ವದ ಬೆಳವಣಿಗೆ ಸಿಕ್ಕಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಹೊಸ ವಿಮಾನ ನಿಲ್ದಾಣವು ಬೆಂಗಳೂರು ದಕ್ಷಿಣ ಭಾಗದಲ್ಲೇ ನಿರ್ಮಾಣವಾಗುವ ಸಾಧ್ಯತೆ ಹೆಚ್ಚಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ನಡೆದ ಉನ್ನತ ಮಟ್ಟದ ಸಭೆಯ ಬಳಿಕ ಮಾತನಾಡಿದ ಅವರು, ಈಗಾಗಲೇ ಬಂದಿರುವ ಪ್ರಸ್ತಾವನೆಗಳಲ್ಲಿ ಹೆಚ್ಚಿನವು ದಕ್ಷಿಣ ಬೆಂಗಳೂರಿಗೆ ಸಂಬಂಧಿಸಿದ್ದು, ಸರ್ಕಾರ ಕೆಲವು ಪ್ರಮುಖ ಷರತ್ತುಗಳನ್ನು ಮುಂದಿಟ್ಟಿದೆ ಎಂದರು.

ಹೊಸ ವಿಮಾನ ನಿಲ್ದಾಣಕ್ಕಾಗಿ ಯಾವುದೇ ಗ್ರಾಮವನ್ನು ಸ್ಥಳಾಂತರಿಸಬಾರದು. ಭೂಸ್ವಾಧೀನಕ್ಕೆ ಕಡಿಮೆ ವೆಚ್ಚವಾಗಬೇಕು. ಕಡಿಮೆ ಜಾಗದಲ್ಲಿಯೇ ತಾಂತ್ರಿಕವಾಗಿ ಕಾರ್ಯಸಾಧುವಾಗುವ ಪ್ರದೇಶವನ್ನು ಆಯ್ಕೆ ಮಾಡಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಪ್ರಸ್ತುತ ಚೂಡಹಳ್ಳಿ (ಕನಕಪುರ ರಸ್ತೆ-ಮೈಸೂರು ರಸ್ತೆ ನಡುವೆ) ಹಾಗೂ ಸೋಮನಹಳ್ಳಿ (ಕನಕಪುರ ರಸ್ತೆ-ಬನ್ನೇರುಘಟ್ಟ ರಸ್ತೆ ನಡುವೆ) ಪ್ರಮುಖ ಆಯ್ಕೆಗಳಾಗಿ ಪರಿಗಣನೆಯಲ್ಲಿವೆ. ಈ ಪ್ರದೇಶಗಳಲ್ಲಿ ಸಾವಿರಾರು ಎಕರೆ ಭೂಮಿ ಲಭ್ಯವಿರುವುದರಿಂದ ಅಧಿಕಾರಿಗಳು ತಾಂತ್ರಿಕ ಹಾಗೂ ಭೂಸ್ವಾಧೀನದ ಸಾಧ್ಯತೆಗಳನ್ನು ಪರಿಶೀಲಿಸುತ್ತಿದ್ದಾರೆ.

ಪ್ರಸ್ತುತ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ವರ್ಷದಿಂದ ವರ್ಷಕ್ಕೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ದಕ್ಷಿಣ ಬೆಂಗಳೂರಿನ ಜನರು ವಿಮಾನ ನಿಲ್ದಾಣ ತಲುಪಲು ಹಲವು ಗಂಟೆಗಳ ಕಾಲ ಪ್ರಯಾಣಿಸಬೇಕಾಗುತ್ತಿರುವುದರಿಂದ, ಹೊಸ ವಿಮಾನ ನಿಲ್ದಾಣ ನಿರ್ಮಾಣವು ಸಂಚಾರ ದಟ್ಟಣೆ ಕಡಿಮೆ ಮಾಡುವುದರ ಜೊತೆಗೆ ಪ್ರಯಾಣದ ಸಮಯವನ್ನು ಉಳಿಸುವ ನಿರೀಕ್ಷೆಯಿದೆ.

ರಾಜ್ಯ ಸರ್ಕಾರ ಅಂತಿಮವಾಗಿ ಸೂಕ್ತ ಸ್ಥಳವನ್ನು ಗುರುತಿಸಿದ ಬಳಿಕ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದ್ದು, ಅನುಮೋದನೆ ದೊರೆತ ನಂತರ ಯೋಜನೆಗೆ ಅಧಿಕೃತ ಚಾಲನೆ ಸಿಗಲಿದೆ.

Continue Reading

Trending