ಬೆಂಗಳೂರು
ಕನ್ನಡದ ಒಂದೇ ಒಂದು ಸಿನಿಮಾ (Cinema) ಹಿಟ್ ಲಿಸ್ಟ್ ಸೇರಿಲ್ಲ Special Report
ಕನ್ನಡದ ಮಾರ್ಕೆಟ್ ನ ಕಬ್ಜಾ ಮಾಡ್ಕೊತಿದ್ದಾವಾ ಪರಭಾಷೆ ಸಿನಿಮಾಗಳು? ಮಲಯಾಳಂ ಸಿನಿಮಾಗಳು (Malayalam Cinema) ಗಳಿಸ್ತಿವೆ ಕೋಟಿ ಕೋಟಿ ಹಣ? ಈ ವರ್ಷ ಕನ್ನಡದ ಒಂದೇ ಒಂದು ಸಿನಿಮಾ (Cinema) ಹಿಟ್ ಲಿಸ್ಟ್ ಸೇರಿಲ್ಲ. ಆ ಕುರಿತ ಆ ಸ್ಪೆಷಲ್ ರಿಪೋರ್ಟ್ ಇಲ್ಲಿದೆ .
ಕನ್ನಡ ನೆಲದಲ್ಲಿ ಕನ್ನಡಿಗನೇ ಸಾರ್ವಭೌಮ. ಈ ಮಾತು ಸಿನಿಮಾ ವಿಚಾರದಲ್ಲಿ ಸುಳ್ಳಾಗ್ತಿದೆ. ಕನ್ನಡಿಗರು ಕನ್ನಡ ಸಿನಿಮಾಗಳತ್ತ ಬೆನ್ನು ಮಾಡಿ ಕೂತಿದ್ದಾರೆ. ಅದರಲ್ಲೂ ಥಿಯೇಟರಿಗೆ ಬರಲು ಜಪ್ಪಯ್ಯ ಅಂದ್ರೂ ಒಪ್ಪುತ್ತಿಲ್ಲ ಕನ್ನಡ ಸಿನಿರಸಿಕರು.
ಪರಿಣಾಮ ಈ ವರ್ಷ ಶುರುವಾಗಿ ನಾಲ್ಕು ತಿಂಗಳಾದ್ರೂ ಒಂದೇ ಒಂದು ಕನ್ನಡ ಸಿನಿಮಾ ಹಿಟ್ ಲಿಸ್ಟ್ ಸೇರಿಲ್ಲ. ಬಾಕ್ಸಾಫೀಸ್ ನಲ್ಲಿ ಝಣ ಝಣ ಕಾಂಚಾಣ ಎಣಿಸಿಲ್ಲ.
ಹೌದು, 2025 ಸ್ಯಾಂಡಲ್ ವುಡ್ ಪಾಲಿಗೆ ದುಸ್ವಪ್ನವಾಗಿದೆ. ಎಷ್ಟು ಒಳ್ಳೆಯ ಸಿನಿಮಾ ಕೊಟ್ರೂ ಜನ ಬರ್ತಿಲ್ಲ. ಇನ್ನೆಂಥ ಸಿನಿಮಾ ಕೊಡಬೇಕು ಗುರು ಅಂತ ಸಿನಿಮಾ ಮಂದಿ ತಲೆ ಕೆರೆದುಕೊಳ್ಳುವಂತೆ ಮಾಡಿದೆ.
ಜನವರಿಯಿಂದ ಏಪ್ರಿಲ್ ಕೊನೆಯ ತನಕ ಕನ್ನಡದ 80 ಸಿನಿಮಾಗಳು ರಿಲೀಸ್ ಆಗಿವೆ. ಅದರಲ್ಲಿ ಛೂಮಂತರ್, ಯುದ್ಧಕಾಂಡ, ಫಾರೆಸ್ಟ್ ನಂತಹ ಸಿನಿಮಾಗಳು ಪಾಸಿಟಿವ್ ರಿಪೋರ್ಟ್ ಪಡ್ಕೊಂಡಿವೆ. ಪರ್ವಾಗಿಲ್ಲ ಒಮ್ಮೆ ನೋಡಬಹುದು ಎಂಬ ಟಾಕ್ ಪಡ್ಕೊಂಡಿವೆ.. ಆದ್ರೆ ರಿಸಲ್ಟ್ ಮಾತ್ರ ಶೂನ್ಯ.
ಅತ್ಯಧಿಕ ಗಳಿಕೆಯೇ 6 ಕೋಟಿಯಾ?
ಕನ್ನಡದ ಸಿನಿಮಾವೊಂದು ಈ ವರ್ಷ ಹೈಯೆಸ್ಟ್ ಗಳಿಕೆ ಕಂಡಿದೆ ಅಂದ್ರೆ? ಅದು ಶರಣ್ ನಟನೆಯ ಛೂಮಂತರ್ ಸಿನಿಮಾ. ಈ ಸಿನಿಮಾ 5 ರಿಂದ 6 ಕೋಟಿ ಗಳಿಸಿದೆ ಎನ್ನಲಾಗ್ತಿದೆ. ಇದುವೆ ಈ ವರ್ಷದ ಹೈಯೆಸ್ಟ್ ಗಳಿಕೆ ಇಲ್ಲಿತನಕ ಅಂದ್ರೆ? ಅದು ನಿಜಕ್ಕೂ ದುರಂತವೇ ಸರಿ.
ಕನ್ನಡ ಸಿನಿಮಾಗಳ ಕಡೆ ಮಾತ್ರ ಯಾಕೆ ನಿರಾಸಕ್ತಿ?
ಇದು ಕನ್ನಡ ನೆಲದಲ್ಲಿ ಕನ್ನಡ ಸಿನಿಮಾಗಳಿಗೆ ಮಾತ್ರ ನಿರಾಸಕ್ತಿ. ಆದ್ರೆ ಇದೇ ಕನ್ನಡ ಮಣ್ಣಲ್ಲಿ ಪರಭಾಷೆಯ ಸಿನಿಮಾಗಳು ಕೋಟಿ ಕೋಟಿಯನ್ನ ಲೂಟಿ ಮಾಡ್ತಾ ಇವೆ.. ಅದಕ್ಕೆ ಬೆಸ್ಟ್ ಎಕ್ಸಾಂಪಲ್ ಅಂದ್ರೆ? ಮೋಹನ್ ಲಾಲ್ ನಟನೆಯ ಎಂಪುರಾನ್ ಸಿನಿಮಾ.. ಈ ಸಿನಿಮಾ ಬಗ್ಗೆ ಅಂತಹ ಪಾಸಿಟಿವ್ ಟಾಕ್ ಏನು ಕೇಳಿ ಬರಲಿಲ್ಲ.. ನೋಡಿದವರೆಲ್ಲಾ ಬಯ್ಕೊಂಡೇ ಆಚೆ ಬಂದ್ರು.. ಆದ್ರೂ ಸಹ ಈ ಸಿನಿಮಾ ಕರ್ನಾಟಕದಲ್ಲಿಯೇ 15 ಕೋಟಿ ಹಣ ಗಳಿಸಿದೆ.. ಹಂಗಂತ ಕೇವಲ ಮಲಯಾಳಿಗಳು ಮಾತ್ರ ಈ ಸಿನಿಮಾವನ್ನ ನೋಡಿಲ್ಲ.. ಕನ್ನಡಿಗರು ಸಹ ಮುಗಿಬಿದ್ದು ನೋಡಿದ್ದಾರೆ.
ಹೌಸ್ಫುಲ್ ಪ್ರದರ್ಶನ ಕಾಣ್ತಿದೆ ಪರಭಾಷೆ ಸಿನಿಮಾ
ಅಷ್ಟೇ ಅಲ್ಲದೆ ರಿಸೆಂಟಾಗಿ ಬಿಡುಗಡೆಯಾದ ತುಡರುಮ್ ಎಂಬ ಸಿನಿಮಾ ಬೆಂಗಳೂರು, ಮಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಹಲವು ಪ್ರಮುಖ ನಗರಗಳಲ್ಲಿ ಬಿಡುಗಡೆಯಾದ 9 ದಿನಗಳಾದ್ರೂ ಸಹ ಹೌಸ್ ಫುಲ್ ಪ್ರದರ್ಶನ ಕಾಣ್ತಿದೆ.
ಬೆಂಗಳೂರಿನಲ್ಲಿಯೇ ತುಡರುಮ್ ಮಲಯಾಳಂ ವರ್ಷನ್ 300 ಪ್ಲಸ್ ಶೋ ಪ್ರದರ್ಶನ ಕಾಣ್ತಿದೆ. ಅಷ್ಟೂ ಶೋಸ್ ಫಾಸ್ಟ್ ಫಿಲ್ಲಿಂಗ್ ಆಗ್ತಿವೆ ಅಂದ್ರೆ? ಕರ್ನಾಟಕ ನೆಲದಲ್ಲಿ ಪರಭಾಷೆ ಸಿನಿಮಾಗಳ ಅಬ್ಬರ ಹೇಗಿದೆ ಎಂಬುದಕ್ಕೆ ಸಾಕ್ಷಿ.
ಕನ್ನಡ ಸಿನಿಮಾಗೆ ಮಾತ್ರ ನೀರಸ ಪ್ರತಿಕ್ರಿಯೆ
ಹಾಗೆ ಅಜಿತ್ ನಟನೆಯ ಗುಡ್ ಬ್ಯಾಡ್ ಅಗ್ಲಿ, ವೆಂಕಟೇಶ್ ನಟನೆಯ ಸಂಕ್ರಾತಿಕಿ ವಸ್ತುನ್ನಾಮ್, ನಾನಿ ನಟನೆಯ ಹಿಟ್3 ಸಿನಿಮಾಗಳು ಸಹ ಕರ್ನಾಟಕದಲ್ಲಿ ಒಳ್ಳೆಯ ಗಳಿಕೆಯನ್ನ ಕಾಣ್ತಿವೆ.. ಆದ್ರೆ ಕನ್ನಡ ಸಿನಿಮಾಗಳು ಮಾತ್ರ ಯಾವುದೇ ಪೈಪೋಟಿಯನ್ನ ಕೊಡಲಾಗದೆ ನೀರಸ ಪ್ರತಿಕ್ರಿಯೆಯನ್ನ ಪಡ್ಕೊಳ್ತಿವೆ.
ಕರ್ನಾಟಕದ ಎಷ್ಟೋ ಸಿನಿಮಾ ಮಂದಿರಗಳು ಹಾಕಲು ಒಳ್ಳೆಯ ಕನ್ನಡ ಸಿನಿಮಾಗಳಿಲ್ಲದೆ. ಅನಿವಾರ್ಯವಾಗಿ ಪರಭಾಷೆ ಸಿನಿಮಾಗಳಿಗೆ ಮಣೆ ಹಾಕುವ ನಿರ್ಧಾರಕ್ಕೆ ಬಂದಿವೆ.. ಇಷ್ಟೆಲ್ಲಾ ಆದ್ರೂ ಸಹ ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿಯಾಗಲಿ, ಕಲಾವಿದರ ಸಂಘವಾಗಲಿ, ನಿರ್ಮಾಪಕರ ಸಂಘವಾಗಲಿ ಮುಂದೇನು ಮಾಡಬೇಕು ಎಂಬ ಚಿಂತನೆ ನಡೆಸಿದಂತೆ ಇಲ್ಲ.
ಕನ್ನಡ ಸಿನಿಮಾಗಳ ಈ ಸ್ಥಿತಿಗೆ ಈ ಗತಿಗೆ ಪ್ಯಾನ್ ಇಂಡಿಯಾ ಎಂಬ ಟ್ರೆಂಡ್ ನ ಹಿಂದೆ ಬಿದ್ದಿದ್ದೇ ಕಾರಣ. ಸ್ಟಾರ್ ನಟರು ಮೂರು ವರ್ಷಕ್ಕೆ ಒಂದು ಸಿನಿಮಾ ಮಾಡ್ಕಂಡು ಕಾಲಹರಣ ಮಾಡ್ತಿರೋದೆ ಕಾರಣ ಎಂಬುದು ಸಿನಿರಂಗದಲ್ಲಿಯೇ ಕೇಳಿ ಬರ್ತಿರೋ ಅಪಸ್ವರ. ಸದ್ಯಕ್ಕಂತೂ ಕನ್ನಡ ಚಿತ್ರರಂಗಕ್ಕೆ ಯಾವುದೇ ಆಶಕಿರಣ ಕಾಣಿಸ್ತಾ ಇಲ್ಲ. ಸದ್ಯದ ಪರಿಸ್ಥಿತಿ ಕಂಡು ದೊಡ್ಡ ದೊಡ್ಡವರೇ ಹೆದರುವಂತಹ ಪರಿಸ್ತಿತಿ ಇದೆ. ಹಾಗೆ ಕನ್ನಡ ಸಿನಿಮಾಗಳು ಅಂದ್ರೆ ಸ್ಯಾಟ್ ಲೈಟ್ ರೈಟ್ಸ್ ಸೇಲಾಗ್ತಿಲ್ಲ. ಒಟಿಟಿಗೆ ಕೇಳೋರೆ ಇಲ್ಲ.
ಹಿಂಗಾದ್ರೆ ಹೆಂಗೆ ಗುರು? ಇದಕ್ಕೆ ಶಾಸ್ವತ ಪರಿಹಾರ ಕಂಡು ಹಿಡಿಯೋ ನಿಟ್ಟಿನಲ್ಲಿ ಚಿತ್ರರಂಗ ಒಮ್ಮತದಿಂದ ಕಾರ್ಯಕ್ರಮವನ್ನ ರೂಪಿಸಬೇಕಿದೆ.
ಬೆಂಗಳೂರು
Shakthi Scheme ಬಳಿಕ BMTC ಸೇವೆ ಹೇಗಿದೆ? ಬಸ್ನಲ್ಲಿ ಪ್ರಯಾಣಿಸಿದ ಸಚಿವರಿಗೆ ಸಿಕ್ಕ ಉತ್ತರ
ಬೆಂಗಳೂರು: Shakthi Scheme ಜಾರಿಯಾದ ಬಳಿಕ ಬಿಎಂಟಿಸಿ ಸೇವೆಗಳ ನೈಜ ಸ್ಥಿತಿ ತಿಳಿಯಲು ಸಾರಿಗೆ ಸಚಿವ ಬೈರತಿ ಸುರೇಶ್ ಸಾಮಾನ್ಯ ಪ್ರಯಾಣಿಕರಂತೆ ಬಸ್ನಲ್ಲಿ ಸಂಚರಿಸಿ ರಿಯಾಲಿಟಿ ಚೆಕ್ ನಡೆಸಿದರು. ಜಯಮಹಲ್, ಆರ್.ಟಿ.ನಗರ, ಸಿಬಿಐ ರಸ್ತೆ, ಹೆಬ್ಬಾಳ ಹಾಗೂ ನಾಗವಾರ ಮಾರ್ಗಗಳಲ್ಲಿ ಪ್ರಯಾಣಿಸಿದ ಸಚಿವರು, ಸಾರ್ವಜನಿಕರು ಪ್ರತಿದಿನ ಎದುರಿಸುವ ಸಮಸ್ಯೆಗಳನ್ನು ಖುದ್ದಾಗಿ ಗಮನಿಸಿದರು.
ಈ ವೇಳೆ ಹೆಬ್ಬಾಳ ಮಾರ್ಗದ ಬಸ್ನಲ್ಲಿ ಸಚಿವರಿಗೆ ಅಚ್ಚರಿಯ ಅನುಭವ ಎದುರಾಯಿತು. ಟಿಕೆಟ್ ಪಡೆಯಲು ಅವರು ₹100 ಮುಖಬೆಲೆಯ ನೋಟು ನೀಡಿದಾಗ, ಅವರನ್ನು ಗುರುತಿಸದ ಕಂಡಕ್ಟರ್ ತನ್ನ ಬಳಿ ಚಿಲ್ಲರೆ ಇಲ್ಲ ಎಂದು ಹೇಳಿ ಬಸ್ನಿಂದ ಕೆಳಗೆ ಇಳಿಯುವಂತೆ ಸೂಚಿಸಿದ್ದಾನೆ. ಸಚಿವರು ಯಾವುದೇ ವಾಗ್ವಾದ ನಡೆಸದೆ ಬಸ್ನಿಂದ ಇಳಿದು, ಬಳಿಕ ಚಿಲ್ಲರೆ ಹಣ ಹೊಂದಿಸಿಕೊಂಡು ಮತ್ತೊಂದು ಬಸ್ನಲ್ಲಿ ಪ್ರಯಾಣ ಮುಂದುವರಿಸಿದರು. ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪರಿಶೀಲನೆ ವೇಳೆ ಮತ್ತೊಂದು ಗಂಭೀರ ಲೋಪವೂ ಸಚಿವರ ಗಮನಕ್ಕೆ ಬಂತು. ಫನ್ ವರ್ಲ್ಡ್ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರು ಕೈ ತೋರಿಸಿದರೂ ಬಸ್ ನಿಲ್ಲಿಸದೇ ಚಾಲಕ ಮುಂದಕ್ಕೆ ಚಲಿಸಿದ್ದನ್ನು ಅವರು ಖುದ್ದಾಗಿ ವೀಕ್ಷಿಸಿದರು. ಪ್ರಯಾಣಿಕರಿಗೆ ಆಗಿರುವ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು ಸಂಬಂಧಿಸಿದ ಚಾಲಕ ಮತ್ತು ನಿರ್ವಾಹಕರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಚಿವರ ಆದೇಶದಂತೆ ಸಂಬಂಧಪಟ್ಟ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುವುದು ಸಾರಿಗೆ ಇಲಾಖೆಯ ಮೊದಲ ಆದ್ಯತೆಯಾಗಿದ್ದು, ನಿರ್ಲಕ್ಷ್ಯ ತೋರಿಸುವ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂಬ ಸ್ಪಷ್ಟ ಸಂದೇಶವನ್ನು ಬೈರತಿ ಸುರೇಶ್ ನೀಡಿದ್ದಾರೆ.
ಬೆಂಗಳೂರು
ಬೇಡ ಬ್ರೋ: ಡ್ರಗ್ಸ್ ವಿರುದ್ಧ MLA ಎಸ್.ಟಿ. ಸೋಮಶೇಖರ್ ಖಡಕ್ ಎಚ್ಚರಿಕೆ; ಯುವಕರಿಗೆ ಮಹತ್ವದ ಸಂದೇಶ
ಬೆಂಗಳೂರು: ‘ಬೇಡ ಬ್ರೋ’… ಇದೇ ಘೋಷಣೆಯೊಂದಿಗೆ ಬೆಂಗಳೂರು ಪಶ್ಚಿಮ ವಿಭಾಗ ಪೊಲೀಸ್ ವತಿಯಿಂದ ಗ್ಲೋಬಲ್ ವಿಲೇಜ್ನಲ್ಲಿ ಡ್ರಗ್ಸ್ ವಿರೋಧಿ ಬೃಹತ್ ಜಾಗೃತಿ ಅಭಿಯಾನ ನಡೆಯಿತು. ಯುವಜನಾಂಗವನ್ನು ಮಾದಕ ವಸ್ತುಗಳ ವ್ಯಸನದಿಂದ ದೂರವಿಡುವ ಉದ್ದೇಶದಿಂದ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ವೈದ್ಯರು, ಪೊಲೀಸ್ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ವೈದ್ಯೆ ಡಾ. ಮಾತಂಗಿ, ದೇಶದಲ್ಲಿ ಮಾದಕ ವ್ಯಸನ ಗಂಭೀರ ಸಮಸ್ಯೆಯಾಗಿ ಬೆಳೆಯುತ್ತಿದ್ದು, ವಿಶೇಷವಾಗಿ 18ರಿಂದ 25 ವರ್ಷದೊಳಗಿನ ಯುವಕರು ಡ್ರಗ್ಸ್ ಜಾಲಕ್ಕೆ ಹೆಚ್ಚು ಬಲಿಯಾಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು. ಗಾಂಜಾ, ಅಪೀಮು ಸೇರಿದಂತೆ ವಿವಿಧ ಮಾದಕ ವಸ್ತುಗಳು ಯುವಕರ ಶಿಕ್ಷಣ, ಆರೋಗ್ಯ ಮತ್ತು ಭವಿಷ್ಯವನ್ನು ಹಾಳು ಮಾಡುತ್ತಿವೆ. ಸಮಾಜದಲ್ಲಿ ಪ್ರಭಾವಿ ವ್ಯಕ್ತಿಗಳು ಉತ್ತಮ ಮೌಲ್ಯಗಳನ್ನು ಬೆಳೆಸುವ ಸಂದೇಶ ನೀಡಬೇಕು ಎಂದು ಅವರು ಕರೆ ನೀಡಿದರು.
ಶಾಸಕ ಎಸ್.ಟಿ. ಸೋಮಶೇಖರ್ ಮಾತನಾಡಿ, ಡ್ರಗ್ಸ್ ಹಾವಳಿ ನಿಯಂತ್ರಣಕ್ಕೆ ಸರ್ಕಾರ, ಶಿಕ್ಷಣ ಸಂಸ್ಥೆಗಳು, ಪೊಲೀಸರು ಹಾಗೂ ಸಮಾಜ ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ ಎಂದರು. ಕೆಲವು ಕಾಲೇಜುಗಳಲ್ಲಿ ಡ್ರಗ್ಸ್ ಜಾಲದ ಬಗ್ಗೆ ಆತಂಕಕಾರಿ ಮಾಹಿತಿ ದೊರೆಯುತ್ತಿದ್ದು, ಯುವಕರನ್ನು ರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಹೇಳಿದರು. ಡ್ರಗ್ಸ್ ವಿರುದ್ಧದ ‘ಬೇಡ ಬ್ರೋ’ ಅಭಿಯಾನ ಸಮಾಜದಲ್ಲಿ ದೊಡ್ಡ ಜಾಗೃತಿ ಮೂಡಿಸಬೇಕು ಎಂದು ಆಶಿಸಿದರು.
ನೈರುತ್ಯ ವಿಭಾಗದ ಡಿಸಿಪಿ ಅನಿತಾ ಬಿ. ಹದ್ದಣ್ಣ ಮಾತನಾಡಿ, ಇಂದಿನ ಕಾಲದಲ್ಲಿ ಬಂದೂಕಿಗಿಂತ ಡ್ರಗ್ಸ್ ಸಮಾಜವನ್ನು ಹೆಚ್ಚು ಅಪಾಯಕ್ಕೆ ತಳ್ಳುತ್ತಿದೆ ಎಂದು ಎಚ್ಚರಿಸಿದರು. ಎಸಿಪಿ ಸತ್ಯವತಿ ಕೂಡ ಕ್ಷಣಿಕ ಸುಖಕ್ಕಾಗಿ ವ್ಯಸನದ ದಾರಿ ಹಿಡಿಯಬಾರದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಂತ್ಯದಲ್ಲಿ ವಿದ್ಯಾರ್ಥಿಗಳು “ಡ್ರಗ್ಸ್ಗೆ ಬೇಡ… ಬದುಕಿಗೆ ಹೌದು” ಎಂಬ ಸಂದೇಶದೊಂದಿಗೆ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿದರು.
ರಾಜ್ಯ
Cabinet Expansion: ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ನಾಯಕರ ಪೈಪೋಟಿ; ಹೈಕಮಾಂಡ್ ಅಂತಿಮ ತೀರ್ಮಾನ ಯಾವಾಗ?
ಬೆಂಗಳೂರು: Cabinet Expansion ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕುರಿತ ಚಟುವಟಿಕೆಗಳು ಮತ್ತೆ ವೇಗ ಪಡೆದಿದ್ದು, ಶೀಘ್ರದಲ್ಲೇ ರಾಜ್ಯದ ಪ್ರಮುಖ ನಾಯಕರಿಗೆ ದೆಹಲಿ ಬುಲಾವ್ ಬರಬಹುದಾದ ಸಾಧ್ಯತೆ ಇದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಹೈಕಮಾಂಡ್ ನಾಯಕರೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪ್ರಸ್ತುತ ರಾಜ್ಯ ಸಚಿವ ಸಂಪುಟದಲ್ಲಿ 20 ಸಚಿವ ಸ್ಥಾನಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡುವ ಕುರಿತು ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ. ರಾಜ್ಯ ನಾಯಕರು ತಮ್ಮ ಬೆಂಬಲಿಗ ಶಾಸಕರ ಪಟ್ಟಿಯೊಂದಿಗೆ ದೆಹಲಿಗೆ ತೆರಳಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. 2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಾದೇಶಿಕ, ಜಾತಿ ಹಾಗೂ ರಾಜಕೀಯ ಸಮೀಕರಣಗಳ ಆಧಾರದ ಮೇಲೆ ಸಚಿವರ ಆಯ್ಕೆ ನಡೆಯುವ ಸಾಧ್ಯತೆ ಇದೆ.
ಜುಲೈ 14ರಿಂದ ಆಷಾಢ ಮಾಸ ಆರಂಭವಾಗಲಿರುವ ಹಿನ್ನೆಲೆ, ಅದರ ಮೊದಲು ಸಂಪುಟ ವಿಸ್ತರಣೆ ನಡೆಯಬಹುದೇ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಹೆಚ್ಚಾಗಿದೆ. ಆದರೆ ಈ ಕುರಿತು ಯಾವುದೇ ಅಧಿಕೃತ ವೇಳಾಪಟ್ಟಿ ಪ್ರಕಟವಾಗಿಲ್ಲ.
ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಂಪುಟ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದೆ ಎಂದು ಹೇಳಿದ್ದು, ಬರ ಹಾಗೂ ಪ್ರವಾಹದಂತಹ ಸನ್ನಿವೇಶಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಪೂರ್ಣ ಪ್ರಮಾಣದ ಸಚಿವ ಸಂಪುಟ ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇತ್ತ ಹಲವು ಕಾಂಗ್ರೆಸ್ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಮುಂದುವರಿಸಿದ್ದಾರೆ. ಅಜಯ್ ಸಿಂಗ್, ಸಿ. ಪುಟ್ಟರಂಗಶೆಟ್ಟಿ, ಎ.ಬಿ. ರಮೇಶ್ ಬಂಡಿಸಿದ್ದೇಗೌಡ ಸೇರಿದಂತೆ ಹಲವು ನಾಯಕರು ತಮ್ಮ ಹಕ್ಕು ಮಂಡಿಸುತ್ತಿದ್ದಾರೆ. ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಕೈಗೊಳ್ಳುವ ನಿರ್ಧಾರದತ್ತ ರಾಜ್ಯ ರಾಜಕೀಯದ ಗಮನ ನೆಟ್ಟಿದೆ.
-
ಬೆಂಗಳೂರು16 hours agoಬೇಡ ಬ್ರೋ: ಡ್ರಗ್ಸ್ ವಿರುದ್ಧ MLA ಎಸ್.ಟಿ. ಸೋಮಶೇಖರ್ ಖಡಕ್ ಎಚ್ಚರಿಕೆ; ಯುವಕರಿಗೆ ಮಹತ್ವದ ಸಂದೇಶ
-
ದೇಶ15 hours agoಗಾನಕೋಗಿಲೆ ಎಸ್. ಜಾನಕಿ ಪಂಚಭೂತಗಳಲ್ಲಿ ಲೀನ; ಸರ್ಕಾರಿ ಗೌರವದೊಂದಿಗೆ ಮೈಸೂರಿನಲ್ಲಿ ಅಂತ್ಯಸಂಸ್ಕಾರ
-
ಸುತ್ತ ಮುತ್ತ18 hours agoBorivali Railway Station Viral Video ಪ್ರೇಮಿಗಳ ಹಂಗಾಮಾ? 60 ಲಕ್ಷಕ್ಕೂ ಹೆಚ್ಚು ಬಾರಿ ವೀಕ್ಷಿಸಿದ ವೈರಲ್ ವಿಡಿಯೋ
-
ದೇಶ16 hours agoManmohan Singh ಕುರಿತು ಮಾಜಿ ಮುಖ್ಯ ಚುನಾವಣಾ ಆಯುಕ್ತರ ಪುಸ್ತಕದಲ್ಲಿ ಹೊಸ ಬಹಿರಂಗ; ರಾಜಕೀಯ ವಲಯದಲ್ಲಿ ಚರ್ಚೆ
-
ದೇಶ16 hours agoಜಮ್ಮು-ಕಾಶ್ಮೀರದಲ್ಲಿ ಉಗ್ರರ ವೈಭವೀಕರಣ ಆರೋಪ; ಪುಸ್ತಕ ಪ್ರಕಟಿಸಿದ ಮೂವರು ಪ್ರಕಾಶಕರು ಬಂಧನ
-
ರಾಜ್ಯ18 hours agoS Janaki ಹೆಸರನ್ನು ಮೈಸೂರಿನ ಗದ್ದಿಗೆ ರಸ್ತೆಗೆ ನಾಮಕರಣ ಮಾಡಿ: ಕೇರ್ಟೇಕರ್ ನವೀನ್ ಮನವಿ
-
ರಾಜ್ಯ23 hours agoಮಹಾರಾಜ ಕಾಲೇಜು ಮೈದಾನದಲ್ಲಿ ಎಸ್. ಜಾನಕಿಗೆ ಅಂತಿಮ ನಮನ; ಅಭಿಮಾನಿಗಳ ಕಣ್ಣೀರಿನ ಸಾಗರ
-
ಕ್ರೀಡೆ17 hours agoSouth Africa ಫುಟ್ಬಾಲ್ಗೆ ಆಘಾತ; ಜೇಡನ್ ಆಡಮ್ಸ್ ಅಕಾಲಿಕ ನಿಧನ
