ಕಾವೇರಿ
ಕೆಆರ್ಎಸ್ಗೆ ಮುತ್ತಿಗೆ ಹಾಕಲು ಯತ್ನಿಸಿದ ವಾಟಾಳ್ ಅರೆಸ್ಟ್
ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟಗಳ ಕಿಚ್ಚು ಇನ್ನೂ ಕಡಿಮೆಯಗಿಲ್ಲ, ಹೋರಾಟಕ ಭಾಗವಾಗಿ ಕೆ ಆರ್ ಎಸ್ ಡ್ಯಾಂಗೆ ಮುತ್ತಿಗೆ ಹಾಕಲು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಯತ್ನಿಸಿದರು, ಡ್ಯಾಂ ಪ್ರವೇಶಿಸಲು ಪೊಲೀಸರು ತಡೆಯೊಡ್ಡಿದ್ದು ವಾಟಾಳ್ ನಾಗರಾಜ್ ಅವರು ಜೊತೆಗೆ 30ಕ್ಕೂ ಹೆಚ್ಚು ಹೋರಾಟಗಾರರನ್ನು ವಶಕ್ಕೆ ಪಡೆದಿದ್ದಾರೆ,
ಪೊಲೀಸರ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ ವಾಟಾಳ್ ನಮ್ಮ ಹೋರಾಟ ಯಾವತ್ತೂ ವಿಫಲವಾಗಲ್ಲ ಯಾವ ಪೊಲೀಸರು ಏನೂ ಮಾಡೋಕೆ ಆಗಲ್ಲ ಎಂದು ಆಕ್ರೋಶವನ್ನು ಹರ ಹಾಕಿದ್ದಾರೆ, ನಮ್ಮ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲಲ್ಲ, ಕಾವೇರಿ ನಮ್ಮದು ಹೋರಾಟ ನಿರಂತರ ಎಂದು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾವೇರಿ
ಕಾವೇರಿ ತೀರದ ಗ್ರಾಮಗಳಿಗೆ ಎಚ್ಚರಿಕೆ!
ಮಂಡ್ಯ: ಮುಂಗಾರು ಮಳೆಯ ನಂತರ ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಮಳೆಯೂ ಚುರುಕುಗೊಂಡಿದೆ. ಈ ಪರಿಣಾಮವಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ಧ ಕೆಆರ್ಎಸ್ ಅಣೆಕಟ್ಟು (KRS Dam) ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ.
ಸದ್ಯ ಕೆಆರ್ಎಸ್ ಡ್ಯಾಂಗೆ 20,797 ಕ್ಯೂಸೆಕ್ ನೀರು ಒಳಹರಿಯುತ್ತಿದ್ದು, ಈಗಾಗಲೇ 25 ಸಾವಿರ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದೆ. ಡ್ಯಾಂನ ಗರಿಷ್ಠ ಮಟ್ಟವಾದ 124.80 ಅಡಿ ತಲುಪಿರುವುದರಿಂದ ಯಾವುದೇ ಕ್ಷಣದಲ್ಲಾದರೂ 40 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡುವ ಸಾಧ್ಯತೆ ಇದೆ ಎಂದು ಕಾವೇರಿ ನೀರಾವರಿ ನಿಗಮ ಎಚ್ಚರಿಕೆ ನೀಡಿದೆ.
ಡ್ಯಾಂನಲ್ಲಿ 49.452 ಟಿಎಂಸಿ ನೀರು ಸಂಗ್ರಹವಾಗಿದ್ದು, ಇದು ಸಂಪೂರ್ಣ ಸಾಮರ್ಥ್ಯದ ಮಟ್ಟವಾಗಿದೆ. ಹೀಗಾಗಿ ಕಾವೇರಿ ನದಿ ತೀರದ ಗ್ರಾಮಸ್ಥರು ಎಚ್ಚರಿಕೆಯಿಂದ ಇರಲು ಕಾವೇರಿ ನೀರಾವರಿ ನಿಗಮ ವಿನಂತಿಸಿದೆ.
ಕೆಆರ್ಎಸ್ನಿಂದ ನೀರು ಬಿಡುಗಡೆ ಮಾಡಿದರೆ, ಮೈಸೂರು, ಮಡ್ಡೂರು, ಪಾಂಡವಪುರ ಹಾಗೂ ಶ್ರಿರಂಗಪಟ್ಟಣದ ನದಿ ಪಾತ್ರ ಪ್ರದೇಶಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾವೇರಿ
ತಲಕಾವೇರಿಯಲ್ಲಿ ಪವಿತ್ರ ಕ್ಷಣ: ಕಾವೇರಿಮಾತೆಯ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭ
ಕರುನಾಡಿನ ಜೀವನದಿ ಕಾವೇರಿಯ (Kaveri) ಪವಿತ್ರ ತೀರ್ಥೋದ್ಭವ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಸಹಸ್ರಾರು ಭಕ್ತರು ತೀರ್ಥಸ್ವರೂಪಿಣಿ ಕಾವೇರಿಮಾತೆಯ ದರ್ಶನಕ್ಕಾಗಿ ತಲಕಾವೇರಿಗೆ ಆಗಮಿಸಲು ಸಿದ್ಧರಾಗಿದ್ದಾರೆ.
ಪ್ರತಿ ವರ್ಷ ಘಟಿಸುವ ಈ ಪವಿತ್ರ ಕ್ಷಣವನ್ನು ಕಣ್ತುಂಬಿಕೊಳ್ಳಲು ದೇಶದ ನಾನಾ ಭಾಗಗಳಿಂದ ಭಕ್ತರು ಕೊಡಗಿಗೆ ಆಗಮಿಸುತ್ತಿದ್ದಾರೆ. ಕೊಡಗಿನ ಜನರ ಕುಲದೇವತೆ ಹಾಗೂ ಕರ್ನಾಟಕದ ಜೀವನಾಡಿಯಾದ ಕಾವೇರಿಯ ತೀರ್ಥೋದ್ಭವದ ಸಿದ್ಧತೆಗಳನ್ನು ಜಿಲ್ಲಾಡಳಿತ ಭರ್ಜರಿಯಾಗಿ ಕೈಗೊಂಡಿದೆ.
ಶುಕ್ರವಾರ (ಅ.17) ಮಧ್ಯಾಹ್ನ 1:44ಕ್ಕೆ ಮಕರ ಲಗ್ನದಲ್ಲಿ ಬ್ರಹ್ಮಕುಂಡಿಕೆಯಿಂದ ಪವಿತ್ರ ತೀರ್ಥ ಉಕ್ಕಿಬರಲಿದೆ. ಈ ವೇಳೆ ಧಾರ್ಮಿಕ ವಿಧಿವಿಧಾನಗಳು, ಮಂತ್ರಪಠಣ ಮತ್ತು ಮಹಾಮಂಗಳಾರತಿ ನೆರವೇರಲಿವೆ. ಬೆಳಿಗ್ಗೆ 11:30ರಿಂದ ತೀರ್ಥೋದ್ಭವದ ತನಕ ಕ್ಷೇತ್ರದಲ್ಲಿ ಪೂಜೆಗಳು ನಡೆಯಲಿವೆ.
ತೀರ್ಥೋದ್ಭವದ ಪವಿತ್ರ ಕ್ಷಣವನ್ನು ಕಣ್ತುಂಬಿಕೊಳ್ಳಲು ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ರಾಮಲಿಂಗಾರೆಡ್ಡಿ ತಲಕಾವೇರಿಗೆ ಆಗಮಿಸಲಿದ್ದಾರೆ. ಭಕ್ತರು ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಸ್ನಾನಮಾಡಿ ಭಗಂಢೇಶ್ವರನಿಗೆ ಪೂಜೆ ಸಲ್ಲಿಸಿದ ನಂತರ ಕಾವೇರಿಮಾತೆಯ ದರ್ಶನ ಪಡೆಯಲಿದ್ದಾರೆ.
ಸದ್ಯ ತಲಕಾವೇರಿಯಲ್ಲಿ ತೀರ್ಥೋದ್ಭವದ ಭದ್ರತೆಗಾಗಿ 500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದ್ದು, ಸಿಸಿಟಿವಿ ಕಾವಲು ವ್ಯವಸ್ಥೆ ಮಾಡಲಾಗಿದೆ. ಈ ವರ್ಷದ ತೀರ್ಥೋದ್ಭವವನ್ನು ಕಣ್ತುಂಬಿಕೊಳ್ಳಲು ಭಕ್ತರ ಸಂಭ್ರಮ ತಲಕಾವೇರಿಯಲ್ಲಿ ತಾರಕ್ಕೇರಿದೆ.
ಕಾವೇರಿ
ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ – ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ನಾಳೆಯೇ ನಮ್ಮ ಬಳಿ ನೀರು ಇಲ್ಲ, ನೀರು ಬಿಡಲು ಸಾಧ್ಯವಿಲ್ಲ ಎಂದು ಮರುಪರಿಶೀಲನಾ ಅರ್ಜಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಅಡ್ವೊಕೇಟ್ ಜನರಲ್ ಅವರೊಂದಿಗೆ ನಡೆದ ಸಭೆಯ ಮಾತನಾಡಿದ ಅವರು, ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಮಾಜಿ ಅಡ್ವೊಕೇಟ್ ಜನರಲ್ ಗಳ ಸಲಹೆಗಳನ್ನು ಪರಿಗಣಿಸಿ ಮುಂದಿನ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು ಎಂದರು.
ಮುಖ್ಯವಾಗಿ ರಾಜ್ಯದ ನೀರಾವರಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪರಿಣಿತರ ಸಲಹಾ ಸಮಿತಿಯನ್ನು ರಚಿಸಿ, ಡಾಟಾ ಸಂಗ್ರಹ , ಸಲಹೆ ನೀಡುವ ಕಾರ್ಯವನ್ನು ಮಾಡಬೇಕು. ಅಂತರರಾಜ್ಯ ಜಲವಿವಾದಗಳ ಬಗ್ಗೆ ಸರ್ಕಾರಕ್ಕೆ ಸಲಹೆ ಸೂಚನೆ, ಕಾನೂನು ತಂಡಕ್ಕೆ ಮಾಹಿತಿ ನೀಡಲು ಕೂಡ ಸಮಿತಿ ಅಗತ್ಯ ಎನ್ನುವ ಸಲಹೆ ಬಂದಿದೆ. ಇದರಂತೆ ಕ್ರಮ ವಹಿಸಲಾಗುವುದು ಎಂದು ವಿವರಿಸಿದರು.
ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಬಿಡುವ ಬಗ್ಗೆ ಎರಡೂ ಸಮಿತಿಗಳ ಮುಂದೆ ನಮ್ಮಲ್ಲಿ ನೀರು ಇಲ್ಲ ಹಾಗಾಗಿ ನೀರು ಬಿಡಲು ಸಾಧ್ಯವಿಲ್ಲ ಎಂದು ವಾದ ಮಂಡಿಸಲಾಗಿದೆ. ಹಳೇ ಬಾಕಿ ಸರಿದೂಗಿಸಬೇಕು ಎಂದು 3000 ಕ್ಯೂಸೆಕ್ ನೀಡಲು ಸೂಚಿಸಿದ್ದಾರೆ. ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ಮರುಪರಿಶೀಲನಾ ಅರ್ಜಿ ಹಾಕುವಂತೆಯೂ ಸೂಚಿಸಿದ್ದಾರೆ ಎಂದರು.
ಮೇಕೆದಾಟು ಯೋಜನೆಯ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ಪ್ರಸ್ತಾಪ ಮಾಡಬೇಕು. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ತೊಂದರೆ ಇಲ್ಲ. ಹಾಗಾಗಿ ತೀವ್ರವಾಗಿ ಇದನ್ನು ಮಂಡಿಸಬೇಕು ಎಂದು ಸಲಹೆ ನೀಡಿದ್ದಾರೆ. ಮೇಕೆದಾಟು ಬ್ಯಾಲೆನ್ಸಿಂಗ್ ಜಲಾಶಯವಾಗಿ 67 ಟಿಎಂಸಿ ನೀರು ಸಂಗ್ರಹ ಮಾಡುವ ಸಾಮರ್ಥ್ಯ ಹೊಂದಲಿದೆ. ವಿದ್ಯುತ್ ಹಾಗೂ ಕುಡಿಯುವ ನೀರಿಗೆ ಅದನ್ನು ಬಳಸಲಾಗುವುದು. ಸಂಕಷ್ಟ ಬಂದಾಗ ತಮಿಳುನಾಡಿಗೆ ನೀರು ಬಿಡಬಹುದು ಎಂದು ಸಲಹೆ ನೀಡಿದ್ದಾರೆ ಎಂದರು.
-
ಬೆಂಗಳೂರು20 ಗಂಟೆಗಳು agoVande Mataram ಸಂಪೂರ್ಣ ಹಾಡುವ ವಿಚಾರಕ್ಕೆ ರಾಜಕೀಯ ರಂಪಾಟ; CM ಡಿಕೆಶಿ ಹೇಳಿದ್ದೇನು?
-
ರಾಜಕೀಯ22 ಗಂಟೆಗಳು agoValmiki ನಿಗಮದ ಅಕ್ರಮ: ಸಚಿವ ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಡಿಕೆ ಶಿವಕುಮಾರ್ ಹೇಳಿದ್ದೇನು?
-
ರಾಜಕೀಯ21 ಗಂಟೆಗಳು agoValmiki Corporation Scam: ‘ನಾಗೇಂದ್ರ ನಿರಪರಾಧಿ ಎಂದು ಸಾಬೀತಾದರೆ ಸಿಎಂ ಮಾಡಿಕೊಳ್ಳಿ’ ಎಂದ ವಿಜಯೇಂದ್ರ
-
ದೇಶ19 ಗಂಟೆಗಳು agoBJP ಶಾಸಕರ ಖಾಸಗಿ ಕಾರು ತೊಳೆಯಲು ಅಗ್ನಿಶಾಮಕ ವಾಹನ ಬಳಕೆ? ವಿಡಿಯೋ ವೈರಲ್, ಭಾರೀ ಆಕ್ರೋಶ
-
ದೇಶ22 ಗಂಟೆಗಳು agoONAM ಸದ್ಯ ಸವಿಯಲು ಸಾಲಿನಲ್ಲಿ ಕುಳಿತ ಕೋತಿಗಳು! 53 ವರ್ಷಗಳ ಅಪರೂಪದ ಸಂಪ್ರದಾಯ
-
ರಾಜ್ಯ22 ಗಂಟೆಗಳು agoOnline ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ? ಸಚಿವ ಖಾದರ್ ಸ್ಫೋಟಕ ಹೇಳಿಕೆ, ಶೀಘ್ರದಲ್ಲೇ ಕ್ರಮ
-
ಕ್ರೀಡೆ22 ಗಂಟೆಗಳು agoIndia vs Panama: ವಿಶ್ವಕಪ್ ಆಡಿದ ಪನಾಮ ವಿರುದ್ಧ ಭಾರತ ಸೆಣಸು; ಪಂದ್ಯಕ್ಕೆ ದಿನಾಂಕ ಫಿಕ್ಸ್
-
ದೇಶ22 ಗಂಟೆಗಳು agoPM Narendra Modi ಥರ್ಡ್ ಪಾರ್ಟಿ ಆಡಿಟ್ ಇದ್ದರೂ ಕಳಪೆ ಕಾಮಗಾರಿ ಏಕೆ? ಅಧಿಕಾರಿಗಳಿಗೆ ಮೋದಿ ನೇರ ಪ್ರಶ್ನೆ
