Connect with us

ರಾಜಕೀಯ

ಕೆರೆಗೋಡು ಪ್ರಕರಣದಲ್ಲಿ ಕಾಂಗ್ರೆಸ್‍ನಿಂದ ಸುಳ್ಳುದಾಖಲೆ ಸೃಷ್ಟಿ ಎಚ್‍ಡಿಕೆ ಆರೋಪ

Published

on

ಕೆರೆಗೋಡು ಪ್ರಕರಣದಲ್ಲಿ ಕಾಂಗ್ರೆಸ್‍ನಿಂದ ಸುಳ್ಳುದಾಖಲೆ ಸೃಷ್ಟಿ ಎಚ್‍ಡಿಕೆ ಆರೋಪ
ಕೆರೆಗೋಡು ಪ್ರಕರಣದಲ್ಲಿ ಕಾಂಗ್ರೆಸ್‍ನಿಂದ ಸುಳ್ಳುದಾಖಲೆ ಸೃಷ್ಟಿ ಎಚ್‍ಡಿಕೆ ಆರೋಪ

ಬೆಂಗಳೂರು: ಮಂಡ್ಯದ ಕೆರೆಗೋಡು ಗ್ರಾಮದಲ್ಲಿ ನಡೆದ ಹನುಮ ಧ್ವಜ ತೆರೆವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸುಳ್ಳು ದಾಖಲೆ ಸೃಷ್ಟಿಸಿ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ, ಮಂಗಳವಾರ ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟೀಕರಣ ನೀಡಿದ ಅವರು ತಾವು ಸಹ ತಮ್ಮ ಅಭಿಮಾನಿಗಳೂ ಹಾಗೂ ಕಾರ್ಯಕರ್ತರ ಒತ್ತಾಯದ ಮೇರೆಗೆ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾಗಿ ಹೇಳಿದರು,
ಗೌರಿಶಂಕರ ಟ್ರಸ್ಟ್ ವತಿಯಿಂದ ಕೆರೆಗೋಡು ಗ್ರಾಮದಲ್ಲಿ ಧ್ವಜಸ್ತಂಭ ನಿರ್ಮಾಣಕ್ಕೆ ಅನುಮತಿ ಕೇಳಲಾಗಿತ್ತು, ಕೆರೆಗೋಡು ಗ್ರಾಮಪಂಚಾಯಿತಿ ಅನುಮತಿಯನ್ನು ಸಹ ನೀಡಿತ್ತು ಅನುಮತಿಯಲ್ಲಿ ರಾಷ್ಟ್ರ ಧ್ವಜ ಅಥವಾ ಕೇಸರಿ ಧ್ವಜ ಎಂದು ಪ್ರತ್ಯೇಕವಾಗಿ ನಮೂದಿಸಿರಲಿಲ್ಲ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ, ಜ.19 ರಂದು ಅನುಮತಿ ಕೇಳಿರುವಂತೆ ಕಾಂಗ್ರೆಸ್ ನಕಲಿ ದಾಖಲೆ ಸೃಷ್ಟಿಸಿದೆ ಎಂದು ಆರೋಪಿಸಿದ ಎಚ್‍ಡಿಕೆ ಜ.26 ರಂದು ರಾಷ್ಟ್ರಧ್ವಜ ಹಾರಿಸಿರುವ ಗ್ರಾಮಸ್ಧರೇ ಮಾರನೆಯ ದಿನ ಹನುಮ ಧ್ವಜ ಹಾರಿಸಿದ್ದಾರೆ, ಈ ಧ್ವಜಸ್ತಂಭವನ್ನು ಸ್ವತಃ ಸಿ ಎಂ ಸಿದ್ದರಾಮಯ್ಯನವರೇ ಉದ್ಘಾಟನೆ ಮಾಡಿದ್ದು ಶಾಸಕರನ್ನು ಆಹ್ವಾನಿಸದ ಕಾರಣ ಇವೆಲ್ಲಾ ನಡೆದಿದೆ ಎಂದರು,

J S Vasudev is a journalist and writer with 15 years of experience in writing and journalism. He founded Hosasuddi.in in 2023 with a vision to deliver credible and timely Kannada news. With a strong passion for journalism, he focuses on presenting news in a clear, simple and reader-friendly manner. His work covers current affairs, Karnataka news, national developments, business, technology and social issues. He believes in independent journalism and responsible reporting that puts readers first. His guiding motto is “Write on Your Own,” reflecting his commitment to original and independent content. Through Hosasuddi.in, he continues to contribute to Kannada digital journalism with dedication and integrity.

ರಾಜ್ಯ

K N Rajanna: ಸಿದ್ದರಾಮಯ್ಯ, ಡಿಕೆಶಿ, ದೇವೇಗೌಡ ಬಗ್ಗೆ ರಾಜಣ್ಣ ಕೊಟ್ಟ ಮಹತ್ವದ ಹೇಳಿಕೆ

Published

on

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನೊಳಗಿನ ನಾಯಕತ್ವ ಮತ್ತು ಮತಬ್ಯಾಂಕ್ ಕುರಿತ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಮಾಜಿ ಸಚಿವ ಹಾಗೂ ಮಧುಗಿರಿ ಶಾಸಕ K N Rajanna ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಪ್ರಭಾವದ ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಕಾಂಗ್ರೆಸ್‌ನಲ್ಲಿ ಚರ್ಚೆಗೆ ಕಾರಣವಾಗಿದೆ.

ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರಾಜಣ್ಣ, “ಸಿದ್ದರಾಮಯ್ಯ ಬಲಿಷ್ಠರಾಗಿದ್ದರೆ ಕಾಂಗ್ರೆಸ್ ಬಲಿಷ್ಠವಾಗಿರುತ್ತದೆ. ಸಿದ್ದರಾಮಯ್ಯ ದುರ್ಬಲರಾದರೆ ಕಾಂಗ್ರೆಸ್ ದುರ್ಬಲವಾಗುತ್ತದೆ” ಎಂದು ಹೇಳಿದ್ದಾರೆ. ತಮ್ಮ ಹೇಳಿಕೆಯನ್ನು ರಾಜ್ಯದ ರಾಜಕೀಯ ವಾಸ್ತವಾಂಶ ಎಂದು ಪರಿಗಣಿಸಿ ನೀಡುತ್ತಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಪ್ರಭಾವದ ಬಗ್ಗೆ ರಾಜಣ್ಣ ಹೇಳಿದ್ದೇನು?

ಕರ್ನಾಟಕದ ಒಕ್ಕಲಿಗ ಮತಗಳ ಕುರಿತು ಮಾತನಾಡಿದ ಕೆ.ಎನ್. ರಾಜಣ್ಣ, ಜನರು ಕೇವಲ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ನೋಡಿ ಮತ ಹಾಕುವುದಿಲ್ಲ ಎಂದು ಹೇಳಿದ್ದಾರೆ.

“ಜನರು ಶಿವಕುಮಾರ್ ಅವರನ್ನು ಮಾತ್ರ ನೋಡಿ ಮತ ಹಾಕುವುದಿಲ್ಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನೂ ಗಮನಿಸುತ್ತಾರೆ” ಎಂದು ರಾಜಣ್ಣ ಹೇಳಿದ್ದಾರೆ. ಅಧಿಕಾರದಲ್ಲಿರುವ ತಮ್ಮವರಿಂದ ಅಧಿಕಾರಿಗಳು ಅಥವಾ ಮತದಾರರಲ್ಲಿ ಸ್ವಲ್ಪ ಒಲವು ಉಂಟಾಗಿ ಹೆಚ್ಚುವರಿಯಾಗಿ ಕೆಲವು ಮತಗಳು ಬರಬಹುದು ಎಂಬುದನ್ನು ನಿರಾಕರಿಸುವುದಿಲ್ಲ ಎಂದರೂ, ಗೆಲುವಿಗೆ ಅಗತ್ಯವಿರುವ ಮತಗಳನ್ನು ತಂದುಕೊಡುವುದು ಮುಖ್ಯ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ, ಯಡಿಯೂರಪ್ಪ, ದೇವೇಗೌಡ ಬಗ್ಗೆ ರಾಜಣ್ಣ ಉಲ್ಲೇಖ

ರಾಜಣ್ಣ ಅವರು ರಾಜ್ಯದ ಪ್ರಮುಖ ರಾಜಕೀಯ ನಾಯಕರ ಮತ ಪ್ರಭಾವದ ಕುರಿತು ಕೂಡ ಮಾತನಾಡಿದ್ದಾರೆ. ತಮ್ಮ ಸಮುದಾಯದ ಬೆಂಬಲದ ಆಧಾರದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್‌ಗೆ, ಬಿ.ಎಸ್. ಯಡಿಯೂರಪ್ಪ ಬಿಜೆಪಿಗೆ ಹಾಗೂ ಎಚ್.ಡಿ. ದೇವೇಗೌಡ ಜೆಡಿಎಸ್‌ಗೆ ಮತಗಳನ್ನು ತಂದುಕೊಡುತ್ತಾರೆ ಎಂದು ಅವರು ಹೇಳಿದ್ದಾರೆ. ಇದು ರಾಜಣ್ಣ ಅವರ ರಾಜಕೀಯ ವಿಶ್ಲೇಷಣೆಯಾಗಿದೆ.

ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ನಲ್ಲಿ ಮಹತ್ವದ ಮತ ಆಧಾರವಿದೆ ಎಂಬುದನ್ನೇ ತಮ್ಮ ಹೇಳಿಕೆಯ ಮೂಲಕ ರಾಜಣ್ಣ ಒತ್ತಿ ಹೇಳಿದ್ದಾರೆ.

ಕಾಂಗ್ರೆಸ್‌ನಲ್ಲಿ ನಾಯಕತ್ವ ಚರ್ಚೆ ಮತ್ತೆ ಚುರುಕು

ರಾಜಣ್ಣ ಅವರ ಇತ್ತೀಚಿನ ಹೇಳಿಕೆಗಳು ಕಾಂಗ್ರೆಸ್‌ನಲ್ಲಿನ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಪಾತ್ರದ ಕುರಿತ ಚರ್ಚೆಯ ಹಿನ್ನೆಲೆಯಲ್ಲಿ ಗಮನ ಸೆಳೆದಿವೆ.

ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರದ ನಾಯಕತ್ವ, ಪಕ್ಷದ ಸಂಘಟನೆ ಹಾಗೂ ವಿವಿಧ ರಾಜಕೀಯ ನೇಮಕಾತಿಗಳ ಕುರಿತು ಪಕ್ಷದೊಳಗೆ ಹಲವು ಹೇಳಿಕೆಗಳು ಕೇಳಿಬಂದಿವೆ. ಸೆಪ್ಟೆಂಬರ್‌ನಲ್ಲಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿಯ ಹಿನ್ನೆಲೆಯಲ್ಲಿ ಅಸಮಾಧಾನದ ಊಹಾಪೋಹಗಳು ಕೇಳಿಬಂದಿದ್ದರೂ, ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅವರು ಆ ಭೇಟಿಗೂ ಯಾವುದೇ ಅಸಮಾಧಾನಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದರು.

ಇದೇ ಸಂದರ್ಭದಲ್ಲಿ ಕೆ.ಎನ್. ರಾಜಣ್ಣ ಅವರ ಇತ್ತೀಚಿನ ಹೇಳಿಕೆಗಳು ಮತ್ತೊಮ್ಮೆ ಕಾಂಗ್ರೆಸ್‌ನೊಳಗಿನ ನಾಯಕತ್ವದ ವಿಚಾರಗಳತ್ತ ಗಮನ ಸೆಳೆದಿವೆ. ಆದರೆ ಮುಂದಿನ ನಾಯಕತ್ವದ ಕುರಿತು ಯಾವುದೇ ಅಧಿಕೃತ ನಿರ್ಧಾರ ಪ್ರಕಟವಾಗಿಲ್ಲ.

Continue Reading

ರಾಜ್ಯ

Mangaluru Cabinet Meeting: ಪ್ರತಿಪಕ್ಷಗಳಿಗೆ CM D K Shiv Kumar ಮಾರ್ಮಿಕ ತಿರುಗೇಟು; ಏನಂದ್ರು ಸಿಎಂ?

Published

on

ಮಂಗಳೂರು: “ನಮಗೆ ರಾಜಕೀಯ ಮುಖ್ಯವಲ್ಲ, ಜನರ ಬದುಕು ಮುಖ್ಯ. ನಾವು ಜನರ ಭಾವನೆಗಳ ಮೇಲೆ ರಾಜಕಾರಣ ಮಾಡುವವರಲ್ಲ, ಬದುಕಿನ ಮೇಲೆ ರಾಜಕಾರಣ ಮಾಡುವವರು. ಹಾಗಾಗಿ ನಮ್ಮ ಸಂಪುಟ ಸಭೆಗೆ ಯಾರೂ ಗಾಬರಿಯಾಗಬೇಕಿಲ್ಲ” ಎಂದು CM D K Shiv Kumar ಹೇಳಿದ್ದಾರೆ.

ಮಂಗಳೂರಿನಲ್ಲಿ ಶುಕ್ರವಾರ ನಡೆಯುತ್ತಿರುವ ವಿಶೇಷ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ನಗರದ ಸರ್ಕ್ಯೂಟ್ ಹೌಸ್ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರಾವಳಿಯಲ್ಲಿ ನಡೆಯುತ್ತಿರುವ ಸಂಪುಟ ಸಭೆಯ ಉದ್ದೇಶದ ಕುರಿತು ಪ್ರತಿಕ್ರಿಯಿಸಿದರು. ಕರಾವಳಿ ಭಾಗದ ಅಭಿವೃದ್ಧಿ ಹಾಗೂ ಸ್ಥಳೀಯ ಅಗತ್ಯಗಳಿಗೆ ಸಂಬಂಧಿಸಿದಂತೆ ಹಲವು ವಿಚಾರಗಳು ಸರ್ಕಾರದ ಮುಂದಿದ್ದು, ಈ ಹಿನ್ನೆಲೆಯಲ್ಲಿ ಸಭೆ ಮಹತ್ವ ಪಡೆದುಕೊಂಡಿದೆ.

‘ಯಾರೂ ಆತಂಕಪಡುವ ಅಗತ್ಯವಿಲ್ಲ’

ಸಂಪುಟ ಸಭೆ ಕುರಿತು ಕೆಲವರು ಆತಂಕ ವ್ಯಕ್ತಪಡಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಡಿ.ಕೆ. ಶಿವಕುಮಾರ್, ಯಾವುದೇ ಪಕ್ಷದವರೂ ಗಾಬರಿಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಜನರ ಭಾವನೆಗಳನ್ನು ಕೆರಳಿಸಿ ರಾಜಕೀಯ ಮಾಡುವುದಕ್ಕಿಂತ ಜನರ ದಿನನಿತ್ಯದ ಬದುಕು, ಅವರ ಸಮಸ್ಯೆಗಳು ಮತ್ತು ಕಲ್ಯಾಣಕ್ಕೆ ಆದ್ಯತೆ ನೀಡುವುದು ಸರ್ಕಾರದ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.

ಕರಾವಳಿ ಜಿಲ್ಲೆಗಳ ಅಭಿವೃದ್ಧಿ, ಮೂಲಸೌಕರ್ಯ, ಬಂದರು, ಮೀನುಗಾರಿಕೆ, ಕೈಗಾರಿಕೆ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ವಿಚಾರಗಳು ಮಂಗಳೂರು ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿವೆ ಎಂದು ಸರ್ಕಾರ ಈಗಾಗಲೇ ತಿಳಿಸಿದೆ.

ಗಾಂಧೀಜಿ ಉಳಿದುಕೊಂಡಿದ್ದ ಮನೆಗೆ ಭೇಟಿ

ಸಿಎಂ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಬೆಳಗ್ಗೆ ಮಹಾತ್ಮ ಗಾಂಧೀಜಿ ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಉಳಿದುಕೊಂಡಿದ್ದ ಐತಿಹಾಸಿಕ ಮನೆಗೆ ಭೇಟಿ ನೀಡಿದರು.

ಅಲ್ಲಿ ಉಪಹಾರ ಸೇವಿಸಿದ ಅವರು, ಮಂಗಳೂರು ಬನ್ಸ್, ದೋಸೆ ಸೇರಿದಂತೆ ಕರಾವಳಿಯ ಸಾಂಪ್ರದಾಯಿಕ ತಿಂಡಿಗಳನ್ನು ಸವಿದಿದ್ದಾಗಿ ತಿಳಿಸಿದರು. ಬಳಿಕ ಮಂಗಳೂರು ಮೂಲದ ಸಾಮಾಜಿಕ ಜಾಲತಾಣದ ಪ್ರಭಾವಿಗಳೊಂದಿಗೆ ನಗರದ ಕೆಫೆಯೊಂದರಲ್ಲಿ ಸಂವಾದ ನಡೆಸಿದರು.

ತಮ್ಮ ಮುಂದಿನ ಕಾರ್ಯಕ್ರಮಗಳ ಕುರಿತು ಮಾತನಾಡಿದ ಸಿಎಂ, ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲೆಲ್ಲಿಗೆ ಕರೆದುಕೊಂಡು ಹೋಗುತ್ತಾರೋ ಅಲ್ಲೆಲ್ಲಾ ಭೇಟಿ ನೀಡುವುದಾಗಿ ಹೇಳಿದರು.

ಮಂಗಳೂರಿನಲ್ಲಿ ಮೊದಲ ಬಾರಿಗೆ ವಿಶೇಷ ಸಂಪುಟ ಸಭೆ

ಕರ್ನಾಟಕ ಸಚಿವ ಸಂಪುಟದ ವಿಶೇಷ ಸಭೆ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧದಲ್ಲಿ ನಡೆಯುತ್ತಿದೆ. ಕರಾವಳಿ ಭಾಗದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟದ ಪೂರ್ಣ ಪ್ರಮಾಣದ ಸಭೆ ನಡೆಯುತ್ತಿರುವುದರಿಂದ ಸಾಕಷ್ಟು ಗಮನ ಸೆಳೆದಿದೆ.

ಸಭೆಗೆ ಮುನ್ನ ಮುಖ್ಯಮಂತ್ರಿ ಹಾಗೂ ಸಚಿವರು ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ. ಬಳಿಕ ಪಂಪ್‌ವೆಲ್‌ನಿಂದ ಸಚಿವರು ತೆರೆದ ವಾಹನದಲ್ಲಿ ಪ್ರಜಾಸೌಧದತ್ತ ತೆರಳುವ ಮೂಲಕ ಭವ್ಯ ಸ್ವಾಗತಕ್ಕೆ ವ್ಯವಸ್ಥೆ ಮಾಡಲಾಗಿದೆ.

ಕರಾವಳಿಯ ವಿವಿಧ ಸಂಘಟನೆಗಳು, ಜನಪ್ರತಿನಿಧಿಗಳು ಮತ್ತು ಕೈಗಾರಿಕಾ ವಲಯಗಳು ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದು, ತುಳು ಭಾಷೆಗೆ ಅಧಿಕೃತ ಸ್ಥಾನಮಾನ, ಕೈಗಾರಿಕಾ ಅಭಿವೃದ್ಧಿ, ಪ್ರವಾಸೋದ್ಯಮ, ಕರಾವಳಿ ಕೊರೆತ ನಿಯಂತ್ರಣ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ನಿರೀಕ್ಷೆ ಮೂಡಿದೆ.

ಕಪ್ಪು ಪತಾಕೆ ಪ್ರದರ್ಶನ

ಇದೇ ವೇಳೆ, ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ದೊರೆತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಎಸ್‌ಡಿಪಿಐ ಕಾರ್ಯಕರ್ತರು ಮಂಗಳೂರಿನ ರಾವ್ & ರಾವ್ ಸರ್ಕಲ್ ಬಳಿ ಕಪ್ಪು ಪತಾಕೆ ಪ್ರದರ್ಶಿಸಿದರು ಎಂದು ವರದಿಯಾಗಿದೆ.

ಪ್ರತಿಭಟನೆಯ ಸಂದರ್ಭದಲ್ಲಿ ಎಸ್‌ಡಿಪಿಐ ನಾಯಕರಾದ ಅನ್ವರ್ ಸಾದತ್, ರಿಯಾಜ್ ಕಡಂಬು ಸೇರಿದಂತೆ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

Continue Reading

ರಾಜ್ಯ

Mangaluru Cabinet Meeting: ಮಂಗಳೂರಿನಲ್ಲಿ ಐತಿಹಾಸಿಕ ಸಂಪುಟ ಸಭೆ; ಕರಾವಳಿ ಅಭಿವೃದ್ಧಿಗೆ ಸಿಎಂ ಡಿಕೆ ಶಿವಕುಮಾರ್ ಮಹತ್ವದ ಚರ್ಚೆ

Published

on

ಮಂಗಳೂರು: ಕರಾವಳಿ ಭಾಗದ ಬಹುಕಾಲದ ಬೇಡಿಕೆಗಳು ಹಾಗೂ ಅಭಿವೃದ್ಧಿ ವಿಚಾರಗಳ ನಿರೀಕ್ಷೆಯ ನಡುವೆ ಇಂದು ಸೆಪ್ಟೆಂಬರ್ 18ರಂದು Mangaluru ನಲ್ಲಿ ರಾಜ್ಯ ಸಚಿವ ಸಂಪುಟದ ವಿಶೇಷ ಸಭೆ ನಡೆಯುತ್ತಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಈ ಸಭೆ ಮಂಗಳೂರಿನಲ್ಲಿ ನಡೆಯುತ್ತಿರುವ ಮೊದಲ ರಾಜ್ಯ ಸಚಿವ ಸಂಪುಟ ಸಭೆಯಾಗಿದ್ದು, ಕರಾವಳಿ ಅಭಿವೃದ್ಧಿಯ ವಿಚಾರದಲ್ಲಿ ವಿಶೇಷ ಗಮನ ಸೆಳೆದಿದೆ.

ಪಡೀಲ್‌ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ‘ಪ್ರಜಾಸೌಧ’ದ ಎರಡನೇ ಮಹಡಿಯಲ್ಲಿ ಸಭೆ ನಡೆಯುತ್ತಿದೆ. ಸಭೆಗೆ ಮುನ್ನ ಸ್ಥಳದಲ್ಲಿ ಭದ್ರತೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಕರಾವಳಿ ಭಾಗದ ಜನರ ಬಹುಕಾಲದ ಬೇಡಿಕೆಗಳನ್ನು ಪರಿಗಣಿಸಿ ಬಂದರು, ಮೂಲಸೌಕರ್ಯ, ಮೀನುಗಾರಿಕೆ, ಕೈಗಾರಿಕೆ ಸೇರಿದಂತೆ ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ಸಭೆಯಲ್ಲಿ ಪರಿಶೀಲಿಸುವ ನಿರೀಕ್ಷೆಯಿದೆ.

ತಣ್ಣೀರುಬಾವಿಯಲ್ಲಿ ಸಚಿವರಿಗೆ ಕರಾವಳಿ ಆತಿಥ್ಯ

ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಸಚಿವರಿಗೆ ತಣ್ಣೀರುಬಾವಿ ಕಡಲತೀರದಲ್ಲಿ ಔತಣಕೂಟ ಆಯೋಜಿಸಲಾಗಿತ್ತು.

ಕರಾವಳಿಯ ಸಾಂಪ್ರದಾಯಿಕ ಖಾದ್ಯಗಳ ಜತೆಗೆ ತುಳುನಾಡಿನ ಇತಿಹಾಸ, ಕೃಷಿ ಹಾಗೂ ದೈವಾರಾಧನೆ ಸಂಸ್ಕೃತಿಯನ್ನು ಬಿಂಬಿಸುವ ಪಾರಂಪರಿಕ ವಸ್ತುಗಳ ಪ್ರದರ್ಶನವನ್ನೂ ಏರ್ಪಡಿಸಲಾಗಿತ್ತು.

ತುಳುನಾಡಿನ ಸಂಸ್ಕೃತಿ ವೀಕ್ಷಿಸಿದ ಡಿಕೆ ಶಿವಕುಮಾರ್

ಸಚಿವ ಯು.ಟಿ. ಖಾದರ್ ಅವರೊಂದಿಗೆ ಪ್ರದರ್ಶನ ಮಳಿಗೆಗಳಿಗೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್ ಅವರು ತುಳುನಾಡಿನ ವಿವಿಧ ಸಾಂಪ್ರದಾಯಿಕ ವಸ್ತುಗಳನ್ನು ವೀಕ್ಷಿಸಿದರು.

ದೈವಾರಾಧನೆಯಲ್ಲಿ ಬಳಸುವ ಪ್ರಾಚೀನ ಕಂಚಿನ ಮುಖವರ್ಣಿಕೆಗಳು, ಖಡ್ಗ, ಗಂಟೆಗಳು, ಯಕ್ಷಗಾನದ ಮುಂಡಾಸು, ಕಿರೀಟ ಹಾಗೂ ಪಿಲಿನಲಿಕೆ ಮುಖವಾಡಗಳು ಪ್ರದರ್ಶನದಲ್ಲಿದ್ದವು.

ಇದಲ್ಲದೆ ಕಹಳೆ, ಚಂಡೆ ಹಾಗೂ ದುಡಿ ಸೇರಿದಂತೆ ವಿವಿಧ ಸಾಂಪ್ರದಾಯಿಕ ವಾದ್ಯಗಳನ್ನೂ ಪ್ರದರ್ಶಿಸಲಾಗಿತ್ತು. ಸಿಎಂ ಡಿ.ಕೆ. ಶಿವಕುಮಾರ್ ಅವರು ಕೆಲವು ವಾದ್ಯಗಳನ್ನು ಸ್ವತಃ ನುಡಿಸಿ ಸಂಭ್ರಮಿಸಿದರು.

ಕರಾವಳಿ ತಿನಿಸುಗಳ ಸವಿದ ಸಚಿವರು

ತಣ್ಣೀರುಬಾವಿ ಬೀಚ್ ಆವರಣದಲ್ಲಿ ಸಿತಾರ್, ಕೊಳಲು ಹಾಗೂ ತಬಲಾ ವಾದಕರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವೂ ನಡೆಯಿತು. ಕರಾವಳಿ ಶೈಲಿಯ ಸಮುದ್ರಾಹಾರ ಸೇರಿದಂತೆ ತುಳುನಾಡಿನ ವಿವಿಧ ಸಾಂಪ್ರದಾಯಿಕ ತಿನಿಸುಗಳನ್ನು ಗಣ್ಯರಿಗೆ ಉಣಬಡಿಸಲಾಯಿತು.

ಸಚಿವ ಯು.ಟಿ. ಖಾದರ್ ಮಾತನಾಡಿ, ಸಚಿವ ಸಂಪುಟ ಸಭೆಯ ದಿನ ಸಮಯದ ಅಭಾವ ಇರುವುದರಿಂದ ಸಂಜೆ ಕರಾವಳಿ ಭಾಗದ ವಿವಿಧ ಆಹಾರ ಪದಾರ್ಥಗಳನ್ನು ಸಚಿವರಿಗೆ ಪರಿಚಯಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಸ್ತೂರಿರಂಗನ್ ವರದಿ ಕುರಿತು ಸಿಎಂಗೆ ಮನವಿ

ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರ ನಿಯೋಗವೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಕರಾವಳಿ ಭಾಗದ ಪ್ರಮುಖ ಸಮಸ್ಯೆಗಳ ಕುರಿತು ಚರ್ಚಿಸಿದೆ.

ವಿಶೇಷವಾಗಿ ಕಸ್ತೂರಿರಂಗನ್ ವರದಿ ಜಾರಿ ವಿಚಾರದಲ್ಲಿ ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ವಾಸಿಸುವ ಜನರ ಕೃಷಿ, ಮನೆ, ಜೀವನೋಪಾಯ ಹಾಗೂ ಅಭಿವೃದ್ಧಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ನಿಯೋಗ ಮನವಿ ಮಾಡಿದೆ.

ಕಸ್ತೂರಿರಂಗನ್ ವರದಿ ವ್ಯಾಪ್ತಿಗೆ ಸಂಬಂಧಿಸಿದ ಸ್ಥಳೀಯ ಗೊಂದಲಗಳಿಗೆ ಸ್ಪಷ್ಟತೆ ನೀಡಬೇಕು ಹಾಗೂ ಪರಿಸರ ಸಂರಕ್ಷಣೆಯ ಜತೆಗೆ ಅಲ್ಲಿನ ಜನರ ಹಿತಾಸಕ್ತಿಯನ್ನೂ ಪರಿಗಣಿಸಬೇಕು ಎಂದು ಮನವಿ ಮಾಡಲಾಗಿದೆ.

ಈ ವಿಚಾರವಾಗಿ ಸೆಪ್ಟೆಂಬರ್ 18 ಮತ್ತು 19ರಂದು ಸಿಎಂ ಡಿ.ಕೆ. ಶಿವಕುಮಾರ್ ಪಶ್ಚಿಮ ಘಟ್ಟದ ವ್ಯಾಪ್ತಿಗೆ ಒಳಪಡುವ ಪ್ರದೇಶಗಳ ಜನರೊಂದಿಗೆ ಸಭೆ ನಡೆಸಿ ಅವರ ಅಭಿಪ್ರಾಯಗಳನ್ನು ಆಲಿಸುವ ಕಾರ್ಯಕ್ರಮವೂ ನಿಗದಿಯಾಗಿದೆ.

ಜಂಟಿ ಸರ್ವೆ ಸಮಸ್ಯೆಗೂ ಪರಿಹಾರಕ್ಕೆ ಮನವಿ

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಗ್ರಾಮೀಣ ಹಾಗೂ ಅರಣ್ಯ ಅಂಚಿನ ಪ್ರದೇಶಗಳಲ್ಲಿ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಕಂದಾಯ-ಅರಣ್ಯ ಜಂಟಿ ಸರ್ವೆ ವಿಚಾರವನ್ನೂ ನಿಯೋಗ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದೆ.

ಜಮೀನುಗಳ ಗಡಿ, ಹಕ್ಕು ಹಾಗೂ ದಾಖಲೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಜಂಟಿ ಸರ್ವೆ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಮನವಿ ಮಾಡಲಾಗಿದೆ.

ಮಂಗಳೂರಿನಲ್ಲಿ ನಡೆಯುತ್ತಿರುವ ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ದೀರ್ಘಕಾಲದ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸರ್ಕಾರ ಯಾವ ನಿರ್ಧಾರಗಳನ್ನು ಕೈಗೊಳ್ಳಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

Continue Reading

Trending