ಚುನಾವಣೆ
ಕ್ಷೇತ್ರದ ಜನರೇ ನನಗೆ ಹೈಕಮಾಂಡ್ ಶಾಸಕ ಎಸ್ ಟಿ ಸೋಮಶೇಖರ
ಬೆಂಗಳೂರು: ಕ್ಷೇತ್ರದ ಜನರೇ ನನಗೆ ಹೈಕಮಾಂಡ್ ಎಂದು ಅವರೇ ನನಗೆ ಶಕ್ತಿ ಎಂದು ಶಾಸಕರಾದ ಎಸ್ ಟಿ ಸೋಮಶೇಖರ ಹೇಳಿದರು, ಕುಂಬಳಗೋಡು ಹಾಗೂ ರಾಮೋಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನು ಅವರು ಉದ್ಘಾಟಿಸಿದರು, ಈ ಸಂದರ್ಭದಲ್ಲಿ ಅವರು ಮಾತನಾಡುತ್ತ ಸಾರ್ಕರದ 5 ಗ್ಯಾರೆಂಟಿ ಯೋಜೆನೆಗಳು ಬಡಕುಟುಂಬಗಳಿಗೆ ಆಸರೆ ನೀಡಿದೆ, ರಾಜ್ಯದಲ್ಲಿ ಕಾಂಗ್ರೆಸ್ ನುಡಿದಂತೆ ನಡೆದು ಲೋಕಾಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಸೀಟ್ಗಳು ಗೆಲ್ಲುವುದು ಎಂಬ ವಿಶ್ವಾಸ ನನಗಿದೆ, ಜೆಡಿಎಸ್ ಪಕ್ಷದ ಮುಖಂಡರಿಗೆ ಮಾನ ಮಾರ್ಯದೆ ಇಲ್ಲ, ಇಂದು ಅವರು ತಮ್ಮ ಕುಟುಂಬದ ಸದಸ್ಯರ ಅಧಿಕಾರಕ್ಕೆ ಬರಲು ಬಿಜೆಪಿ ನಾಯಕರ ಕಾಲಿಗೆ ಬಿದಿದ್ದಾರೆ, ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅವರ ಮಗನನ್ನೂ ಗೆಲ್ಲಿಸುವುದಕ್ಕೆ ಅವರಿಗೆ ಆಗಿಲ್ಲ, ಮಗನನ್ನು ಸೋಲಿಸಿದ ಸುಮಲತಾ ಅಂಬಿರೀಷ್ ಅವರ ಮನೆಗೆ ಹೋಗಿ ಕಾಲಿಗೆ ನಮಸ್ಕಾರವನ್ನು ಮಾಡಿ ಬಾಮ್ಮ ಚುನಾವಣೆಯಲ್ಲಿ ನನಗೆ ಬೆಂಬಲ ನೀಡಿ ಎನ್ನೂವ ಪರಿಸ್ಧಿತಿ ಅವರದ್ದು ಆಗಿದೆ ಎಂದರು,
ಬಿಜೆಪಿ ಉತ್ತರ ಕ್ಷೇತ್ರದ ಅಭ್ಯರ್ಥಿ ಚಿಕ್ಕಮಂಗಳೂರು, ಉಡುಪಿಯಲ್ಲಿ 10 ವರ್ಷದಿಂದ ಯಾವುದೇ ರೀತಿಯ ಅಭಿವೃದ್ಧಿ ಕೆಲಸಗಳನ್ನು ಮಾಡದೆ ಗೋಬ್ಯಾಕ್ ಎಂದು ಅವರ ಕಾರ್ಯಕರ್ತರೆ ಎಂದರೂ ಕೂಡ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾದ್ದರು, ಮಾಠ ಮಂತ್ರ ಮಾಡಿ ಉತ್ತರ ಕ್ಷೇತ್ರದ ಟಿಕೆಟ್ ಪಡದಿದ್ದಾರೆ ಎಂಬ ಅನುಮಾನ ನನಗೆ ಇದೆ ಏಕೆಂದರೆ ಉತ್ತರ ಕ್ಷೇತ್ರಕ್ಕೆ ಸಿ.ಟಿ.ರವಿ, ಮರಿಸ್ವಾಮಿ, ಸದಾನಂದಗೌಡ ಹಲವಾರು ಅಭ್ಯರ್ಥಿಗಳು ಪಟ್ಟಿಯ ಮುಂಚುಣಿಯಲ್ಲಿ ಇದ್ದರು, ಅದರೆ ಶೋಭಕ್ಕ ಏನು ಮಾಡಿದರು ಗೊತ್ತಿಲ್ಲ ಅವರಿಗೆ ಟಿಕೆಟ್ ಪಡೆದರು, ಬೆಂಗಳೂರಿನ ನಾಯಕರುಗಳು ಇವರ ಪರ ಪ್ರಚಾರ ಮಾಡುತ್ತಿಲ್ಲ ಇದಕ್ಕೆ ಮುಖ್ಯ ಕಾರಣ ಅವರು ಪ್ರಚೋದನೆಯ ಭಾಷಣೆ ಎಂದು ಆರೋಪಿಸಿದರು,
ನನ್ನ ಟೈಂ ಕೆಡಸುವ ಅಧಿಕಾರ ಇರುವುದು ಯಶವಂತಪುರ ಕ್ಷೇತ್ರದ ಜನತೆಗೆ ಮಾತ್ರ, ನನ್ನ ಮೇಲೆ ಮಾಠ ಮಂತ್ರ ಮಾಡಿಸಿದರೊ ಕ್ಷೇತ್ರದ ಜನರು ನನಗೆ ರಕ್ಷಣೆಯಾಗಿದ್ದಾರೆ ಎಂದರು, ಸರ್ಕಾರಿ ಜಮೀನಗಳನ್ನು ಕಬಳಿಸಿ ಅವರ ಪಕ್ಷದ ನಾಯಕರು ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಮಾತನಾಡಿರುವ ಜೆಡಿಎಸ್ ಪಕ್ಷದ ಎಂಎಲ್ಸಿ ಆಗಲು ಹೊರಟ್ಟಿದ ಅವರಿಗೆ ನಾನು ಬೆಂಬಲ ನೀಡಲ್ಲ ಎಂದು ಅವರಿಗೆ ನೇರವಾಗಿ ತಿಳಿಸಿದೆ ಇದು ನನ್ನ ಗಂಡಸ್ಧಾನ ಅಲ್ವಾ, ಬಿಜೆಪಿ ಅಭ್ಯರ್ಥಿಗೆ ಯಾವ ಕಾರಣಕ್ಕೂ ನಾನು ನಿಮಗೆ ಯಶವಂತಪುರದಲ್ಲಿ ವೆಲ್ಕಮ್ ಮಾಡಲ್ಲ ಎಂದು ಅವರಿಗೆ ನೇರವಾಗಿ ಹೇಳಿದ್ದೇನೆ, ಜೆಡಿಎಸ್ ಪಕ್ಷದ ವಿಧಾನಸಭಾ ಅಭ್ಯರ್ಥಿ ನಾಲ್ಕು ಬಾರಿ ಸೋತಿದ್ದಾರೆ ಎಂದು ಅವರ ಬಗ್ಗೆ ಮಾತನಾಡುವುದಕ್ಕೆ ಹೋಗಲ್ಲ ಅದರೆ ಚುನಾವಣೆಯಲ್ಲಿ ಕಣ್ಣೀರು ಇಟ್ಟಿಕೊಂಡು ಮತಯಾಚನೆ ಮಾಡಿದ್ದರೂ, ಅದರೆ ಕೋವಿಡ್ ಸಂದರ್ಭದಲ್ಲಿ ಸಾವಿರಾರು ಜನ ಸತ್ತಾಗ ಯಾಕೆ ನಿಮ್ಮ ಕಣ್ಣಲ್ಲಿ ನೀರು ಬಂದಿಲ್ಲ, ನನ್ನನ್ನೂ ಗೆಲ್ಲಿಸಿ ನಿಮ್ಮ ಮತಗಳನ್ನು ನನಗೆ ನೀಡಿ ಎಂದು ಜನರ ಮುಂದೆ ಕಣ್ಣೀರು ಹಾಕಿದರೆ ಪ್ರಯೋಜನ ಇಲ್ಲ ಜನರ ಕಷ್ಠಕ್ಕೆ ಸ್ಪಂಧಿಸುವ ಕೆಲಸ ಮಾಡಬೇಕು ಎಂದು ಅವರ ವಿರುದ್ಧ ವಾಗ್ದಾಳಿಯನ್ನ ನಡೆಸಿದರು,
ಕಾರ್ಯಕ್ರಮದಲ್ಲಿ ಪಾಲ್ಗೋಂಡಾ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜೀವ್ ಗೌಡ ಅವರು ಮಾತನಾಡುತ್ತ ಕಾಂಗ್ರೆಸ್ ಪಕ್ಷ ಎಲ್ಲಾ ಸಮುದಾಯಗಳಿಗಾಗಿ ಕೆಲಸ ಮಾಡುತ್ತದೆ ಅದರೆ ಬಿಜೆಪಿ ಪಕ್ಷ ಸಮುದಾಯಗಳನ್ನು ಒಡೆಯುವ ಕೆಲಸ ಮಾಡುತ್ತದೆ, ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದರೆ ಸಂವಿಧಾನವನ್ನು ಬದಲಾಯಿಸಿತ್ತೇವೆ ಎಂದು ಅವರ ನಾಯಕರುಗಳು ಹೇಳುತ್ತಿದ್ದಾರೆ, ಮಹಿಳೆಯರಿಗೆ ಸರ್ಕಾರದ ಕೆಲಸಗಳಲ್ಲಿ ಶೇ.50% ಮೀಸಲಾಯಿತಿಯನ್ನು ನೀಡಲಾಗುವುದು, ತೆರಿಗೆ ಹಣವನ್ನು ನೀಡದೆ ರಾಜ್ಯಕ್ಕೆ ತೊಂದರೆ ನೀಡುತ್ತಿದೆ ಮೋದಿ ಸರ್ಕಾರ ಎಂದರು, ರಾಜ್ಯದ ಹಿತಕ್ಕೆ ಬಿಜೆಪಿ ಸಂಸದರು ಕೆಲಸ ಮಾಡಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು, ಕಾರ್ಯಕ್ರಮದಲ್ಲಿ ಕುಂಬಳಗೋಡು ಪಂಚಾಯಿತಿ ಅಧ್ಯಕ್ಷ ಮಣ್ಣಿನ ಮಗ ರಾಮಕೃಷ್ಣ, ರಾಮೋಹಳ್ಳಿ ಪಂಚಾಯಿತಿ ಅಧ್ಯಕ್ಷ ವೇಣುಗೋಪಾಲ್, ಮುಖಂಡರಾದ ಪ್ರಭು ಹಾಗೂ ಮುಖಂಡರು ಉಪಸ್ಧಿತರಿದ್ದರು,
ದೇಶ
ಪಂಜಾಬ್ ಚುನಾವಣೆಗೆ Waris Punjab De ಮೊದಲ ಅಭ್ಯರ್ಥಿ; ಸತ್ವಂತ್ ಸಿಂಗ್ ಕಣಕ್ಕೆ
ಚಂಡೀಗಢ: 2027ರ ಪಂಜಾಬ್ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿರುವ ಬೆನ್ನಲ್ಲೇ, ಅಕಾಲಿ ದಳ್ Waris Punjab De ತನ್ನ ಮೊದಲ ಅಭ್ಯರ್ಥಿಯನ್ನು ಘೋಷಿಸಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಪ್ರಕರಣದಲ್ಲಿ ಅಪರಾಧಿಯಾಗಿ ಶಿಕ್ಷೆಗೆ ಗುರಿಯಾಗಿದ್ದ ಕೆಹರ್ ಸಿಂಗ್ ಅವರ ಪುತ್ರ ಸತ್ವಂತ್ ಸಿಂಗ್ ಅವರನ್ನು ಬಸ್ಸಿ ಪಠಾನಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ.
ಈ ಘೋಷಣೆ ಪಂಜಾಬ್ನ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಇಂದಿರಾ ಗಾಂಧಿ ಹತ್ಯೆಗೆ ಸಂಚು ರೂಪಿಸಿದ ಆರೋಪದಲ್ಲಿ ಕೆಹರ್ ಸಿಂಗ್ ದೋಷಿಯಾಗಿದ್ದರು. ಪ್ರಕರಣದಲ್ಲಿ ಅವರಿಗೆ ಮರಣದಂಡನೆ ವಿಧಿಸಲಾಗಿತ್ತು. ಇದೀಗ ಅವರ ಪುತ್ರನಿಗೆ 2027 Punjab Assembly Election ಟಿಕೆಟ್ ನೀಡಿರುವುದು ಪಂಥಿಕ್ ರಾಜಕೀಯದಲ್ಲಿ ಗಮನ ಸೆಳೆದಿದೆ.
ತ್ಯಾಗ ಮಾಡಿದ ಕುಟುಂಬಗಳಿಗೆ ಗೌರವ: ತರ್ಸೆಮ್ ಸಿಂಗ್
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತರ್ಸೆಮ್ ಸಿಂಗ್, ಪಕ್ಷದ ರಾಜಕೀಯ ಕೇವಲ ಅಧಿಕಾರ ಹಿಡಿಯುವುದಕ್ಕೆ ಸೀಮಿತವಾಗಿಲ್ಲ ಎಂದು ಹೇಳಿದ್ದಾರೆ. ಪಂಥಿಕ್ ತತ್ವಗಳು, ಪಂಜಾಬ್ನ ಹಕ್ಕುಗಳು ಹಾಗೂ ಸಮುದಾಯಕ್ಕಾಗಿ ತ್ಯಾಗ ಮಾಡಿದ ಕುಟುಂಬಗಳ ಗೌರವವನ್ನು ಎತ್ತಿಹಿಡಿಯುವುದು ಪಕ್ಷದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
ಪಂಥ್ ಮತ್ತು ಸಮುದಾಯಕ್ಕಾಗಿ ತ್ಯಾಗ ಮಾಡಿದ ಕುಟುಂಬಗಳನ್ನು ಪಕ್ಷ ಕಡೆಗಣಿಸುತ್ತಿದೆ ಎಂಬ ಆರೋಪಗಳು ಇತ್ತೀಚೆಗೆ ಕೇಳಿಬಂದಿದ್ದವು. ಆದರೆ, ಮೊದಲ ಅಭ್ಯರ್ಥಿಯಾಗಿಯೇ ಅಂತಹ ಕುಟುಂಬದ ಸದಸ್ಯರನ್ನು ಕಣಕ್ಕಿಳಿಸುವ ಮೂಲಕ ಪಕ್ಷ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ ಎಂದು ತರ್ಸೆಮ್ ಸಿಂಗ್ ಹೇಳಿದ್ದಾರೆ.
ಬಸ್ಸಿ ಪಠಾನಾದಲ್ಲಿ ಪಂಥಿಕ್ ಮತಗಳ ಲೆಕ್ಕಾಚಾರ
ಸತ್ವಂತ್ ಸಿಂಗ್ ಅವರ ಅಭ್ಯರ್ಥಿತನವು ಬಸ್ಸಿ ಪಠಾನಾ ಕ್ಷೇತ್ರದಲ್ಲಿ Panthic Politics in Punjab ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಅವರ ಕುಟುಂಬದ ಹಿನ್ನೆಲೆ ಮತದಾರರ ಮೇಲೆ ಯಾವ ರೀತಿಯ ಪ್ರಭಾವ ಬೀರುತ್ತದೆ ಎಂಬುದು ಮುಂದಿನ ದಿನಗಳಲ್ಲಿ ಕುತೂಹಲ ಮೂಡಿಸಿದೆ.
2022ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ 117 ಸ್ಥಾನಗಳ ಪೈಕಿ 92 ಸ್ಥಾನಗಳನ್ನು ಗೆದ್ದು ಭರ್ಜರಿ ಬಹುಮತ ಪಡೆದಿತ್ತು. ಕಾಂಗ್ರೆಸ್ 18 ಸ್ಥಾನಗಳಿಗೆ ಸೀಮಿತವಾಗಿತ್ತು. ಇದೀಗ 2027ರ ಚುನಾವಣೆಯಲ್ಲಿ ಪಂಥಿಕ್ ರಾಜಕೀಯದ ಪ್ರಭಾವ ಎಷ್ಟಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಬೆಂಗಳೂರು
SIR ಸಮೀಕ್ಷೆ ವೇಳೆ ಸರ್ಕಾರಿ ಅಧಿಕಾರಿಗೆ ಹಲ್ಲೆ: ಡಿ.ಜೆ.ಹಳ್ಳಿಯಲ್ಲಿ ಇಬ್ಬರು ಆರೋಪಿಗಳ ಬಂಧನ
ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಕಾರ್ಯಾಚರಣೆ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಜೀವನಹಳ್ಳಿ (D J Halli) ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಯಾರಬ್ ಮತ್ತು ದಸ್ತಗೀರ್ ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ ಸುಮಾರು 1.30 ಗಂಟೆ ವೇಳೆಗೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಸ್ಲಂ ಡೆವಲಪ್ಮೆಂಟ್ ಬೋರ್ಡ್ ಅಧಿಕಾರಿಗಳ ತಂಡವು ಡಿ.ಜೆ.ಹಳ್ಳಿಯ ರೋಶನ್ ನಗರದಲ್ಲಿರುವ ಕೌಸರ್ ಮಸೀದಿ ಸಮೀಪ SIR ಸಮೀಕ್ಷೆ ನಡೆಸುತ್ತಿತ್ತು.
ಈ ವೇಳೆ ಸ್ಥಳಕ್ಕೆ ಬಂದ ದಸ್ತಗೀರ್, ತನಗೂ SIR ಫಾರ್ಮ್ ನೀಡುವಂತೆ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾನೆ. ಆದರೆ ಆತ ಈಗಾಗಲೇ ಜಯನಗರಕ್ಕೆ ವಾಸ್ತವ್ಯ ಬದಲಾಯಿಸಿರುವುದರಿಂದ ಆ ಪ್ರದೇಶದಲ್ಲಿ ಫಾರ್ಮ್ ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರು.
ಈ ಉತ್ತರದಿಂದ ಆಕ್ರೋಶಗೊಂಡ ದಸ್ತಗೀರ್ ಹಾಗೂ ಆತನಿಗೆ ಬೆಂಬಲ ನೀಡಿದ ಯಾರಬ್, ಕರ್ತವ್ಯದಲ್ಲಿದ್ದ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಅಧಿಕಾರಿಗೆ ಗಾಯ
ಹಲ್ಲೆಯಲ್ಲಿ ಸ್ಲಂ ಡೆವಲಪ್ಮೆಂಟ್ ಬೋರ್ಡ್ನ ಸೂಪರಿಂಟೆಂಡೆಂಟ್ ಫಕೀರಪ್ಪ ಗಾಯಗೊಂಡಿದ್ದಾರೆ. ಆರೋಪಿಗಳು ಮುಖ ಹಾಗೂ ಕಟಿ ಭಾಗಕ್ಕೆ ಹೊಡೆದಿದ್ದು, ಬೆನ್ನಿನ ಮೇಲೂ ಹಲ್ಲೆ ನಡೆಸಿದ ಪರಿಣಾಮ ಅವರ ತುಟಿಗೆ ಗಾಯವಾಗಿ ರಕ್ತಸ್ರಾವವಾಗಿದೆ ಎಂದು ತಿಳಿದುಬಂದಿದೆ.
ಸ್ಥಳದಲ್ಲಿದ್ದ ಸಾರ್ವಜನಿಕರು ಮಧ್ಯಪ್ರವೇಶಿಸಿ ಗಲಾಟೆ ನಿಲ್ಲಿಸಿದ್ದು, ಗಾಯಗೊಂಡ ಅಧಿಕಾರಿಯನ್ನು ತಕ್ಷಣ ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಪ್ರಕರಣ ದಾಖಲು, ಇಬ್ಬರ ಬಂಧನ
ಚಿಕಿತ್ಸೆಯ ಬಳಿಕ ಫಕೀರಪ್ಪ ಅವರು ಡಿ.ಜೆ.ಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಪೊಲೀಸರು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಹಾಗೂ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪಗಳಡಿ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಬೆಂಗಳೂರು
GBA ಸೇರಿ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆ ಡಿಸೆಂಬರ್ ಒಳಗೆ; ಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನವದೆಹಲಿ: ಬೆಂಗಳೂರು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಚುನಾವಣೆ ಸೇರಿದಂತೆ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು (Local Body Elections) ನಿಗದಿತ ಅವಧಿಯೊಳಗೆ ನಡೆಸಲು ರಾಜ್ಯ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳು ಹಾಗೂ ಚುನಾವಣಾ ಸಿದ್ಧತೆಗಳ ಕುರಿತು ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಚುನಾವಣೆಗಳನ್ನು ಅನಗತ್ಯವಾಗಿ ಮುಂದೂಡುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು.
ಸಿಎಂ ಡಿ.ಕೆ. ಶಿವಕುಮಾರ್ ಅವರ ಪ್ರಕಾರ, ಬೆಂಗಳೂರು ಬೃಹತ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಮೊದಲಿಗೆ ಆಗಸ್ಟ್ 31ರೊಳಗೆ ನಡೆಸುವ ಉದ್ದೇಶ ಹೊಂದಲಾಗಿತ್ತು. ಆದರೆ ಎಸ್ಐಆರ್ (SIR) ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಹಾಗೂ ಕೆಲವು ತಾಂತ್ರಿಕ ಕಾರಣಗಳಿಂದಾಗಿ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್ನಲ್ಲಿ ಹೆಚ್ಚಿನ ಕಾಲಾವಕಾಶ ಕೋರಿತ್ತು.
ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದಂತೆ ಮುಂದಿನ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ ಸಿಎಂ, ಚುನಾವಣೆ ಪ್ರಕ್ರಿಯೆಯನ್ನು ವಿಳಂಬ ಮಾಡುವುದು ಸರ್ಕಾರದ ಉದ್ದೇಶವಲ್ಲ ಎಂದು ಪುನರುಚ್ಚರಿಸಿದರು.
ಬೆಂಗಳೂರು ಮಾತ್ರವಲ್ಲದೆ, ರಾಜ್ಯದಲ್ಲಿ ಬಾಕಿ ಉಳಿದಿರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳ ಚುನಾವಣೆಗಳನ್ನು ಈ ವರ್ಷದ ಡಿಸೆಂಬರ್ ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಸಂವಿಧಾನದ 73ನೇ ಮತ್ತು 74ನೇ ತಿದ್ದುಪಡಿ ಆಶಯಕ್ಕೆ ಅನುಗುಣವಾಗಿ ಗ್ರಾಮ ಪಂಚಾಯತ್ನಿಂದ ಮಹಾನಗರ ಪಾಲಿಕೆವರೆಗೆ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಯುವ ನಾಯಕತ್ವ ಹಾಗೂ ಹೊಸ ಮುಖಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಗಡುವಿನ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಅಗತ್ಯ ಸಿದ್ಧತೆಗಳನ್ನು ವೇಗಗೊಳಿಸುವ ಸಾಧ್ಯತೆ ಇದ್ದು, ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಂಡ ಬಳಿಕ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ನಿರೀಕ್ಷೆಯಿದೆ. ಇದರಿಂದ GBA ಚುನಾವಣೆ ಸೇರಿದಂತೆ ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆ ಇದೆ.
-
ಬೆಂಗಳೂರು17 ಗಂಟೆಗಳು agoVande Mataram ಸಂಪೂರ್ಣ ಹಾಡುವ ವಿಚಾರಕ್ಕೆ ರಾಜಕೀಯ ರಂಪಾಟ; CM ಡಿಕೆಶಿ ಹೇಳಿದ್ದೇನು?
-
ರಾಜಕೀಯ18 ಗಂಟೆಗಳು agoValmiki ನಿಗಮದ ಅಕ್ರಮ: ಸಚಿವ ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಡಿಕೆ ಶಿವಕುಮಾರ್ ಹೇಳಿದ್ದೇನು?
-
ರಾಜಕೀಯ18 ಗಂಟೆಗಳು agoValmiki Corporation Scam: ‘ನಾಗೇಂದ್ರ ನಿರಪರಾಧಿ ಎಂದು ಸಾಬೀತಾದರೆ ಸಿಎಂ ಮಾಡಿಕೊಳ್ಳಿ’ ಎಂದ ವಿಜಯೇಂದ್ರ
-
ರಾಜ್ಯ22 ಗಂಟೆಗಳು agoಸಚಿವ B Nagendra ರಾಜೀನಾಮೆ ನೀಡ್ತಾರಾ?CM D.K.Shiv Kumar ಗೆ ಕರೆ, ‘ಸರ್ಕಾರಕ್ಕೆ ಮುಜುಗರ ಬೇಡ’ ಎಂದ ಸಚಿವ!
-
ದೇಶ19 ಗಂಟೆಗಳು agoONAM ಸದ್ಯ ಸವಿಯಲು ಸಾಲಿನಲ್ಲಿ ಕುಳಿತ ಕೋತಿಗಳು! 53 ವರ್ಷಗಳ ಅಪರೂಪದ ಸಂಪ್ರದಾಯ
-
ರಾಜ್ಯ19 ಗಂಟೆಗಳು agoOnline ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ? ಸಚಿವ ಖಾದರ್ ಸ್ಫೋಟಕ ಹೇಳಿಕೆ, ಶೀಘ್ರದಲ್ಲೇ ಕ್ರಮ
-
ದೇಶ16 ಗಂಟೆಗಳು agoBJP ಶಾಸಕರ ಖಾಸಗಿ ಕಾರು ತೊಳೆಯಲು ಅಗ್ನಿಶಾಮಕ ವಾಹನ ಬಳಕೆ? ವಿಡಿಯೋ ವೈರಲ್, ಭಾರೀ ಆಕ್ರೋಶ
-
ರಾಜ್ಯ21 ಗಂಟೆಗಳು agoB Nagendra Resignation: ರಾಜೀನಾಮೆ ವದಂತಿಗೆ ನಾಗೇಂದ್ರ ಫುಲ್ಸ್ಟಾಪ್; ಕಾಂಗ್ರೆಸ್ನಿಂದಲೂ ಅಧಿಕೃತ ಹೇಳಿಕೆ ಇಲ್ಲ
