ದೇಶ
ಜಾಗತಿಕ ನಾಯಕರಲ್ಲಿ ‘ನಮೋ’ಗೆ ನಂಬರ್ 1 ಸ್ಥಾನ
ಸೆಪ್ಟೆಂಬರ್ 17ರಂದು 72ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ. ವಿಶ್ವದ ಪ್ರಭಾವಿ ನಾಯಕರು ಪಟ್ಟಿಯಲ್ಲಿ ನಮೋ ನಂಬರ್ 1 ಸ್ಥಾನ ಕಾಯ್ದುಕೊಂಡಿದ್ದಾರೆ.. ಸಮೀಕ್ಷೆಯ ಪ್ರಕಾರ ಪ್ರಧಾನಿ ನರೇಂದ್ರ ಮೋದಿಯವರು ಜಾಗತಿಕ ನಾಯಕರ ಅನುಮೋದನಾ ರೇಟಿಂಗ್ ಪಟ್ಟಿಯಲ್ಲಿ 76 ಪ್ರತಿ ಶತದೊಂದಿಗೆ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಸ್ವಿಜರ್ಲ್ಯಾಂಡ್ ಅಧ್ಯಕ್ಷರಾದ ಅಲೈನ್ ಬರ್ಸೆಟ್ 64% ರೈಟಿಂಗ್ ನೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ, ಜಿ20 ಶೃಂಗಸಭೆ ಯಶಸ್ಸಿನ ನಂತರ ಮೋದಿ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿದೆ. 2001ರ ಅಕ್ಟೋಬರ್ ನಲ್ಲಿ ನರೇಂದ್ರ ಮೋದಿ ರವರು ಮೊದಲ ಬಾರಿಗೆ ಗುಜರಾತ್ನ ಮುಖ್ಯಮಂತ್ರಿಯಾದರು, ಸತತ ನಾಲ್ಕು ಬಾರಿ ಗುಜರಾತ್ನ ಮುಖ್ಯಮಂತ್ರಿ ಆಗಿದ್ದರು… 2014ರ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿ ಪ್ರಧಾನ ಮಂತ್ರಿಯಾದರು… ದೇಶಾದ್ಯಂತ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ಆಚರಿಸಲು ಭರ್ಜರಿ ತಯಾರಿ ನಡೆಸಿದ್ದಾರೆ.”ಸೇವಾ ಹಿ ಸಂಘಟನೆ” ದೇಶಾದ್ಯಂತ ಆಯೋಜಿಸಲಾಗಿದೆ. ಸೆಪ್ಟೆಂಬರ್ 17ರಂದು ಈ ಕಾರ್ಯಕ್ರಮ ಆರಂಭವಾಗಲಿದ್ದು ಅಕ್ಟೋಬರ್ ಎರಡರಂದು ಕೊನೆಗೊಳ್ಳಲಿದೆ ಅಂದರೆ 16 ದಿನಗಳ ಕಾಲ ಈ ಕಾರ್ಯಕ್ರಮ ದೇಶದಾದ್ಯಂತ ಆಯೋಜಿಸಲಾಗಿದೆ.ವಿಶ್ವದ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿರುತ್ತಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿಯವರ ಟ್ವಿಟ್ಟರ್ ಖಾತೆಗೆಯಲ್ಲಿ 7 ಕೋಟಿಗೂ ಹೆಚ್ಚು ಫಾಲೋವರ್ ಗಳಾಗಿದ್ದಾರೆ. ಈ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ಅತಿ ಹೆಚ್ಚು ಹಿಂಬಾಲಕರನ್ನು ಹೊಂದಿದ ವಿಶ್ವದ ಸಕ್ರಿಯ ರಾಜಕಾರಣಿ ವಿಶ್ವನಾಯಕ ಎನಿಸಿಕೊಂಡಿದ್ದ ನಮೋ ಇದೀಗ ಜನಪ್ರಿಯ ಜಾಗತಿಕ ನಾಯಕರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
ದೇಶ
Nepal-Tibet ಪ್ರವಾಹದ ಭೀಕರ ದೃಶ್ಯ ಚೀನಾದಲ್ಲಿ ಕಾಣೆಯಾಗಿದ್ದೇಕೆ? ವೈರಲ್ ವಿಡಿಯೋಗೆ ಸೆನ್ಸಾರ್!
ಬೆಂಗಳೂರು: Nepal ಹಾಗೂ Tibet ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಪ್ರವಾಹದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದರೂ, ಚೀನಾದಲ್ಲಿ ಮಾತ್ರ ಅವುಗಳ ಪ್ರಸಾರಕ್ಕೆ ನಿರ್ಬಂಧ ಹೇರಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಗಯಿರಾಂಗ್ ಬಂದರು ಪ್ರದೇಶದಲ್ಲಿ ಪ್ರವಾಹದ ನೀರು ರಭಸವಾಗಿ ನುಗ್ಗಿ, ದಾರಿಯಲ್ಲಿದ್ದ ವಸ್ತುಗಳನ್ನು ಕೊಚ್ಚಿಕೊಂಡು ಹೋಗುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ.
ಗಯಿರಾಂಗ್ ಬಂದರು ನೇಪಾಳ ಮತ್ತು ಟಿಬೆಟ್ ನಡುವಿನ ಪ್ರಮುಖ ಗಡಿ ಸಂಪರ್ಕ ಕೇಂದ್ರಗಳಲ್ಲಿ ಒಂದಾಗಿದೆ. ಭೀಕರ ಪ್ರವಾಹದ ನೀರು ಏಕಾಏಕಿ ನುಗ್ಗಿದ ಪರಿಣಾಮ ನೂರಾರು ಜನರು ತಮ್ಮ ಜೀವ ಉಳಿಸಿಕೊಳ್ಳಲು ಓಡುತ್ತಿರುವ ದೃಶ್ಯಗಳು ವೈರಲ್ ಆಗಿವೆ. ಈ ವಿಡಿಯೋಗಳು ವಿಶ್ವದ ವಿವಿಧ ಭಾಗಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗಿದ್ದರೂ, ಚೀನಾದ ಸರ್ಕಾರಿ ಮಾಧ್ಯಮಗಳಲ್ಲಿ ಮಾತ್ರ ಇಂತಹ ದೃಶ್ಯಗಳ ಪ್ರಸಾರ ಸೀಮಿತವಾಗಿದೆ ಎಂಬ ವರದಿಗಳು ಬಂದಿವೆ.
ಚೀನಾದಲ್ಲಿ ಪ್ರವಾಹದ ವಿಡಿಯೋಗಳು ಕಾಣೆಯಾಗಿದ್ದೇಕೆ?
ಚೀನಾದ ಸರ್ಕಾರಿ ಪ್ರಮುಖ ಸುದ್ದಿಬುಲೆಟಿನ್ನಲ್ಲಿ ಈ ಘಟನೆಯ ಕುರಿತು ಇದುವರೆಗೆ ಒಂದು ಸ್ಥಿರಚಿತ್ರ ಮಾತ್ರ ಪ್ರಸಾರವಾಗಿದೆ ಎನ್ನಲಾಗಿದೆ. ಮತ್ತೊಂದೆಡೆ, ಚೀನಾದ ಕಟ್ಟುನಿಟ್ಟಿನ ಇಂಟರ್ನೆಟ್ ನಿಯಂತ್ರಣ ವ್ಯವಸ್ಥೆಯಿಂದಾಗಿ ಪ್ರವಾಹದ ವಿಡಿಯೋಗಳು ಮತ್ತು ಘಟನೆಯ ಕುರಿತು ಬಳಕೆದಾರರು ಹಂಚಿಕೊಂಡ ಮಾಹಿತಿಯನ್ನು ಹುಡುಕುವುದು ಕಷ್ಟವಾಗಿದೆ ಎಂಬ ಆರೋಪಗಳೂ ಕೇಳಿಬಂದಿವೆ.
ನೇಪಾಳದ ಭಾಗದಲ್ಲಿ ಪ್ರವಾಹದಿಂದ ಭಾರೀ ಪ್ರಮಾಣದ ಹಾನಿ ಸಂಭವಿಸಿದ್ದು, ನೂರಾರು ಮಂದಿ ಮೃತಪಟ್ಟಿದ್ದಾರೆ ಹಾಗೂ ಇನ್ನೂ ಹಲವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಚೀನಾದ ಅಧಿಕಾರಿಗಳು ಮಾತ್ರ ರಕ್ಷಣಾ ಕಾರ್ಯಾಚರಣೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ನೂರಾರು ತುರ್ತು ಸಿಬ್ಬಂದಿಯನ್ನು ಕಾರ್ಯಾಚರಣೆಗೆ ನಿಯೋಜಿಸಿದ್ದಾರೆ.
ಕ್ಸಿ ಜಿನ್ಪಿಂಗ್ ನೇತೃತ್ವದಲ್ಲಿ ತುರ್ತು ಸಭೆ
ಪ್ರವಾಹ ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ರಕ್ಷಣಾ ಕಾರ್ಯಾಚರಣೆಗಳನ್ನು ಸಮನ್ವಯಗೊಳಿಸುವಂತೆ ಸೂಚಿಸಿದ್ದಾರೆ. ಚೀನಾದ ಪ್ರಧಾನಿ ಲಿ ಕಿಯಾಂಗ್ ಕೂಡ ಪ್ರವಾಹಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.
ಚೀನಾದ ಸರ್ಕಾರಿ ಮಾಧ್ಯಮಗಳಲ್ಲಿ ರಕ್ಷಣಾ ಕಾರ್ಯಾಚರಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಕೆಸರು ಮತ್ತು ಬಂಡೆಗಳಿಂದ ತುಂಬಿರುವ ಪ್ರದೇಶಗಳಲ್ಲಿ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿರುವ ದೃಶ್ಯಗಳು ಪ್ರಸಾರವಾಗಿವೆ. ಪರ್ವತಗಳು ಮತ್ತು ಕಂದಕ ಪ್ರದೇಶಗಳಲ್ಲಿ ವಿಶೇಷ ತಂಡಗಳು ಶೋಧ ಕಾರ್ಯ ನಡೆಸುತ್ತಿವೆ.
ಟಿಬೆಟ್ ವಿಚಾರದಲ್ಲಿ ಚೀನಾದ ಕಟ್ಟುನಿಟ್ಟಿನ ನಿಯಂತ್ರಣ
ಟಿಬೆಟ್ ಹಲವು ದಶಕಗಳಿಂದ ಚೀನಾದ ರಾಜಕೀಯ ಹಾಗೂ ಆಡಳಿತಾತ್ಮಕ ನಿಯಂತ್ರಣದಲ್ಲಿದೆ. ಟಿಬೆಟ್ಗೆ ಸಂಬಂಧಿಸಿದ ರಾಜಕೀಯ ಬೆಳವಣಿಗೆಗಳು, ಪ್ರತಿಭಟನೆಗಳು ಮತ್ತು ದಲೈ ಲಾಮಾ ಕುರಿತ ವಿಚಾರಗಳಲ್ಲಿ ಚೀನಾ ಸರ್ಕಾರ ಕಟ್ಟುನಿಟ್ಟಿನ ನಿಲುವು ಹೊಂದಿದೆ.
ಈ ಹಿನ್ನೆಲೆ ಟಿಬೆಟ್ನಲ್ಲಿ ಸಂಭವಿಸಿದಂತಹ ದೊಡ್ಡ ಪ್ರಮಾಣದ ವಿಪತ್ತಿನ ಸಂದರ್ಭದಲ್ಲಿ ಸ್ಥಳೀಯ ಜನರ ಅನುಭವಗಳು ಮತ್ತು ಸ್ವತಂತ್ರ ದೃಶ್ಯಗಳು ಹೊರಜಗತ್ತಿಗೆ ತಲುಪುವುದು ಕಷ್ಟವಾಗುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ವಿದೇಶಿ ಪತ್ರಕರ್ತರಿಗೆ ಟಿಬೆಟ್ಗೆ ತೆರಳಲು ಸಾಮಾನ್ಯವಾಗಿ ಸರ್ಕಾರದ ಅನುಮತಿ ಅಗತ್ಯವಿದೆ. ಹೀಗಾಗಿ ಸ್ಥಳೀಯರೊಂದಿಗೆ ನೇರ ಸಂಪರ್ಕ ಸಾಧಿಸುವುದು ಮತ್ತು ಸ್ವತಂತ್ರವಾಗಿ ಘಟನೆಗಳನ್ನು ವರದಿ ಮಾಡುವುದು ಸವಾಲಿನ ಸಂಗತಿಯಾಗಿದೆ.
ರಕ್ಷಣಾ ಕಾರ್ಯಾಚರಣೆ ಬಗ್ಗೆ ಮಾತ್ರ ಹೆಚ್ಚು ಒತ್ತು
ಚೀನಾದ ಸರ್ಕಾರಿ ಮಾಧ್ಯಮಗಳು ಪ್ರವಾಹದ ಪರಿಣಾಮಗಳಿಗಿಂತ ರಕ್ಷಣಾ ಕಾರ್ಯಾಚರಣೆಯ ಚಿತ್ರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿವೆ ಎನ್ನಲಾಗಿದೆ. ರಕ್ಷಣಾ ಸಿಬ್ಬಂದಿ ಅಪಾಯಕಾರಿ ಪ್ರದೇಶಗಳಿಗೆ ತೆರಳಿ ಸಿಲುಕಿರುವವರನ್ನು ಹುಡುಕುತ್ತಿರುವ ದೃಶ್ಯಗಳು ಪ್ರಸಾರವಾಗಿವೆ.
ಆದರೆ ಪ್ರವಾಹದಲ್ಲಿ ಸಿಲುಕಿದವರ ನೈಜ ಅನುಭವಗಳು, ನಾಪತ್ತೆಯಾದವರ ಕುಟುಂಬಗಳ ಆತಂಕ ಮತ್ತು ಪ್ರವಾಹದ ಆರಂಭಿಕ ಕ್ಷಣಗಳ ದೃಶ್ಯಗಳು ಬಹುತೇಕ ಸಾರ್ವಜನಿಕ ವಲಯದಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಎಂಬುದು ಗಮನಾರ್ಹವಾಗಿದೆ.
ಚೀನಾ ಸರ್ಕಾರದ ಪ್ರತಿಕ್ರಿಯೆ ನಿಧಾನವಾಗಿದೆ ಎನ್ನುವುದಕ್ಕಿಂತ, ಮಾಹಿತಿಯ ಪ್ರಸಾರವನ್ನು ನಿಯಂತ್ರಿಸುವ ಮೂಲಕ ಸಾಮಾಜಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಪ್ರಯತ್ನಿಸುತ್ತಿದೆ ಎಂಬ ವಿಶ್ಲೇಷಣೆಗಳು ಕೇಳಿಬರುತ್ತಿವೆ. ಭಾರೀ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಸರ್ಕಾರದ ಸಿದ್ಧತೆ ಮತ್ತು ನಿರ್ವಹಣೆಯ ಕುರಿತು ಸಾರ್ವಜನಿಕ ಅಸಮಾಧಾನ ಉಂಟಾಗದಂತೆ ನೋಡಿಕೊಳ್ಳುವುದು ಆಡಳಿತಕ್ಕೆ ಪ್ರಮುಖವಾಗಿರಬಹುದು.
ಒಟ್ಟಿನಲ್ಲಿ, ನೇಪಾಳ-ಟಿಬೆಟ್ ಗಡಿ ಪ್ರದೇಶದ ಭೀಕರ ಪ್ರವಾಹವು ಭಾರೀ ಮಾನವೀಯ ಸಂಕಷ್ಟವನ್ನು ಸೃಷ್ಟಿಸಿರುವ ನಡುವೆಯೇ, ಚೀನಾದಲ್ಲಿ ಅದರ ದೃಶ್ಯಗಳು ಮತ್ತು ಸ್ಥಳೀಯರ ಧ್ವನಿಗಳು ಸೀಮಿತವಾಗಿ ಮಾತ್ರ ಹೊರಬರುತ್ತಿರುವುದು ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ.
ಬೆಂಗಳೂರು
Bengaluru ನಲ್ಲಿ ಕುಡಿದು ನೀರಿನ ಟ್ಯಾಂಕರ್ ಚಲಾಯಿಸುತ್ತಿದ್ದ 40 ಚಾಲಕರ ಬಂಧನ; ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಅಲರ್ಟ್!
ಬೆಂಗಳೂರು: ರಾಜಧಾನಿ Bengaluru ನಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸುವ (Drink And Drive) ಚಾಲಕರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಸಮರ ಸಾರಿದ್ದು, ಕುಡಿದು ನೀರಿನ ಟ್ಯಾಂಕರ್ ಚಲಾಯಿಸುತ್ತಿದ್ದ 40 ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶುಕ್ರವಾರ ಬೆಳಗಿನ ಜಾವ 6 ಗಂಟೆಯಿಂದ 9 ಗಂಟೆಯವರೆಗೆ ನಗರಾದ್ಯಂತ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದ ಪೊಲೀಸರು, ಒಟ್ಟು 1,476 ನೀರಿನ ಟ್ಯಾಂಕರ್ಗಳನ್ನು ತಡೆದು ತಪಾಸಣೆಗೆ ಒಳಪಡಿಸಿದ್ದರು. ಈ ವೇಳೆ ಮದ್ಯಪಾನ ಮಾಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ 40 ಚಾಲಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ.
ಚಾಲಕರ ಈ ಬೇಜವಾಬ್ದಾರಿ ಚಾಲನೆಯು ರಸ್ತೆ ಸುರಕ್ಷತೆಗೆ ಮತ್ತು ಸಾರ್ವಜನಿಕರ ಜೀವಕ್ಕೆ ಕಂಟಕವಾಗುವ ಕಾರಣಕ್ಕಾಗಿ, ಅವರ ಚಾಲನಾ ಪರವಾನಗಿಯನ್ನು (DL) ಅಮಾನತುಗೊಳಿಸುವಂತೆ ಸಂಬಂಧಪಟ್ಟ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ (RTO) ಶಿಫಾರಸು ಮಾಡಲಾಗಿದೆ. ಮುಂದಿನ ದಿನಗಳಲ್ಲೂ ಇಂತಹ ದಿಢೀರ್ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ಸಂಚಾರ ಪೊಲೀಸರು ಎಚ್ಚರಿಸಿದ್ದಾರೆ.
ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಮುನ್ನೆಚ್ಚರಿಕೆ:
ಇನ್ನೊಂದೆಡೆ, ನಗರದಲ್ಲಿ ವಿಐಪಿ ವಾಹನಗಳ ಸಂಚಾರವಿರುವ ಹಿನ್ನೆಲೆಯಲ್ಲಿ ಆಗಸ್ಟ್ 29ರ ಮಧ್ಯಾಹ್ನ 2:30 ರಿಂದ ಸಂಜೆ 4:30 ರವರೆಗೆ ಹಾಗೂ ಆಗಸ್ಟ್ 30ರ ಬೆಳಿಗ್ಗೆ 7 ರಿಂದ 8 ಗಂಟೆಯವರೆಗೆ ಸುರಂಜನ್ದಾಸ್ ರಸ್ತೆ ಮತ್ತು ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಸಂಚಾರ ಮಾರ್ಗಗಳಲ್ಲಿ ಯಾವುದೇ ವಾಹನಗಳ ನಿಲುಗಡೆಗೆ ಅವಕಾಶವಿರುವುದಿಲ್ಲ. ಸಾರ್ವಜನಿಕರು ಹಾಗೂ ಸವಾರರು ತಮ್ಮ ಪ್ರಯಾಣವನ್ನು ಮುಂಚಿತವಾಗಿಯೇ ಯೋಜಿಸಿಕೊಂಡು ಸಹಕರಿಸಬೇಕಾಗಿ ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ.
ದೇಶ
Sonia Gandhi ಆತ್ಮಕಥೆ ಪ್ರಕಾಶನ ವಿವಾದ: ಮೋದಿ, ಆರ್ಎಸ್ಎಸ್ ಹಾಗೂ ಚೀನಾ ಒತ್ತುವರಿ ಪ್ರಸ್ತಾಪವೇ ಕಾರಣ- ಕಾಂಗ್ರೆಸ್ ಗಂಭೀರ ಆರೋಪ!
ಹೊಸದೆಹಲಿ: ಯುಪಿಎ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಹಿರಿಯ ನಾಯಕಿ Sonia Gandhi ಅವರ ಬಹುನಿರೀಕ್ಷಿತ ಆತ್ಮಕಥೆ ‘ಬೆಲಾಂಗಿಂಗ್: ಎ ಜರ್ನಿ ಆಫ್ ಲವ್’ (Belonging: A Journey of Love) ಪುಸ್ತಕದ ಭಾರತೀಯ ಪ್ರಕಾಶನದ ಸುತ್ತ ಭಾರೀ ರಾಜಕೀಯ ವಿವಾದ ಭುಗಿಲೆದ್ದಿದೆ. ಪ್ರಸಿದ್ಧ ಪ್ರಕಾಶನ ಸಂಸ್ಥೆಯಾದ ‘ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ’ (PRHI) ಈ ಪುಸ್ತಕವನ್ನು ಭಾರತದಲ್ಲಿ ಪ್ರಕಟಿಸುವುದಿಲ್ಲ ಎಂದು ಹಿಂದೆ ಸರಿದಿರುವುದು ಚರ್ಚೆಗೆ ಗ್ರಾಸವಾಗಿದೆ. ಪುಸ್ತಕದಲ್ಲಿದ್ದ ಮೂರು ಪ್ರಮುಖ ವಿಚಾರಗಳೇ ಈ ವಿವಾದಕ್ಕೆ ಕಾರಣ ಎಂದು ಕಾಂಗ್ರೆಸ್ ಮೂಲಗಳು ಮತ್ತು ಹಿರಿಯ ನಾಯಕರು ಆರೋಪಿಸಿದ್ದಾರೆ.
ವಿವಾದಕ್ಕೆ ಕಾರಣವಾದ ಆ ಪ್ರಮುಖ 3 ವಿಚಾರಗಳು ಯಾವುವು? ಕಾಂಗ್ರೆಸ್ ವಲಯಗಳ ಪ್ರಕಾರ, ಹಸ್ತಪ್ರತಿಯ ಮುದ್ರಣ ಪೂರ್ವ ಹಂತದಲ್ಲಿ ಪ್ರಕಾಶಕರು ಮತ್ತು ಸೋನಿಯಾ ಗಾಂಧಿ ನಡುವೆ ಮೂರು ನಿರ್ದಿಷ್ಟ ಸಂಗತಿಗಳ ಕುರಿತು ಭಿನ್ನಾಭಿಪ್ರಾಯ ಮೂಡಿತ್ತು:
- ಚೀನಾ ಒತ್ತುವರಿ: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತಾವಧಿಯಲ್ಲಿ ಭಾರತದ ಗಡಿ ಭಾಗಗಳಲ್ಲಿ ಚೀನಾದ ಅತಿಕ್ರಮಣ ಮತ್ತು ನುಗ್ಗಾಟದ ಕುರಿತು ಸೋನಿಯಾ ಗಾಂಧಿ ಬರೆದಿರುವ ಕಟು ಅಂಶಗಳು.
- ಪ್ರಧಾನಿ ಮೋದಿ ನೀತಿಗಳು: ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ, ಕೇಂದ್ರ ಸರ್ಕಾರದ ನೀತಿಗಳು ಮತ್ತು ಅವರೊಡಗಿನ ಭೇಟಿಗಳ ಸಂದರ್ಭದ ವೈಯಕ್ತಿಕ ಅನಿಸಿಕೆಗಳು.
- ಆರ್ಎಸ್ಎಸ್ ಪಾತ್ರ: ಭಾರತದ ಸಾಮಾಜಿಕ ಇತಿಹಾಸದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಾತ್ರ ಮತ್ತು ಸಿದ್ಧಾಂತದ ಕುರಿತಾದ ನಿಲುವುಗಳು.
ಸೋನಿಯಾ ಗಾಂಧಿ ನಿರಾಕರಣೆ ಮತ್ತು ಪೆಂಗ್ವಿನ್ ಸ್ಪಷ್ಟನೆ: ಪುಸ್ತಕದಲ್ಲಿ ಉಲ್ಲೇಖಿಸಿರುವ ಈ ಸೂಕ್ಷ್ಮ ವಿಚಾರಗಳನ್ನು ಮತ್ತು ಪ್ರಧಾನಿ ಮೋದಿ, ಆರ್ಎಸ್ಎಸ್ ಹಾಗೂ ಚೀನಾಕ್ಕೆ ಸಂಬಂಧಿಸಿದ ಭಾಗಗಳನ್ನು ಕೈಬಿಡುವಂತೆ ಅಥವಾ ಬದಲಾಯಿಸುವಂತೆ ಪ್ರಕಾಶಕರು ಒತ್ತಡ ಹೇರಿದ್ದರು ಎನ್ನಲಾಗಿದೆ. ಆದರೆ ಇದು ತನ್ನ ಬದುಕಿನ ಕಥೆಯಾಗಿದ್ದು, ಸ್ವಯಂ-ಸೆನ್ಸಾರ್ಶಿಪ್ ಮಾಡಿಕೊಳ್ಳುವುದಿಲ್ಲ ಹಾಗೂ ಇತಿಹಾಸದ ಸತ್ಯಾಂಶಗಳನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ ಎಂದು ಸೋನಿಯಾ ಗಾಂಧಿ ಸ್ಪಷ್ಟಪಡಿಸಿದ್ದಾರೆಂದು ವರದಿಯಾಗಿದೆ.
ಅಂತಾರಾಷ್ಟ್ರೀಯ ಪ್ರಕಾಶಕರಾದ ‘ಅಲ್ಫ್ರೆಡ್ ಎ ನೂಪ್’ (Alfred A. Knopf) ಸಂಸ್ಥೆಯು ನವೆಂಬರ್ 10 ರಂದು ಜಾಗತಿಕ ಮಟ್ಟದಲ್ಲಿ ಮೂಲ ರೂಪದಲ್ಲೇ ಈ ಪುಸ್ತಕವನ್ನು ಬಿಡುಗಡೆ ಮಾಡುವುದಾಗಿ ಈಗಾಗಲೇ ಘೋಷಿಸಿದೆ. ಆದರೆ ಭಾರತೀಯ ವಿಭಾಗವಾದ ಪೆಂಗ್ವಿನ್ ಇಂಡಿಯಾ ಮಾತ್ರ ಇದನ್ನು ಪ್ರಕಟಿಸುವುದಿಲ್ಲ ಎಂದು ತಿಳಿಸಿದೆ.
ಪ್ರಜಾಪ್ರಭುತ್ವದ ಕಗ್ಗೊಲೆ – ಕಾಂಗ್ರೆಸ್ ಆಕ್ರೋಶ: ಈ ಬೆಳವಣಿಗೆಯನ್ನು ತೀವ್ರವಾಗಿ ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಪ್ರಮುಖ ಕಾಂಗ್ರೆಸ್ ನಾಯಕರು, ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಪ್ರಕಾಶಕರು ಪುಸ್ತಕವನ್ನು ತಡೆಯುತ್ತಿದ್ದಾರೆ ಎಂದು ದೂರಿದ್ದಾರೆ. ಜಾಗತಿಕ ಮಟ್ಟದಲ್ಲಿ ಪ್ರಕಟವಾಗುವ ಸತ್ಯಗಳು ಭಾರತೀಯರಿಗೆ ಸಿಗದಂತೆ ಮಾಡುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ನೇರ ದಾಳಿ ಹಾಗೂ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತ್ತೊಂದೆಡೆ, ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ಸಂಸ್ಥೆಯು ಸ್ಪಷ್ಟನೆ ನೀಡಿ, ಪುಸ್ತಕದ ಕುರಿತು ಲೇಖಕರೊಂದಿಗೆ ನಡೆದ ಚರ್ಚೆಗಳ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದಿದ್ದು, ಕೃತಿಯ ಹಿತದೃಷ್ಟಿಯಿಂದ ಮಾರುಕಟ್ಟೆಗೆ ತರುವ ಮುನ್ನ ಸಂಗತಿಗಳನ್ನು ಪರಿಶೀಲಿಸುವುದು (fact-check) ಮತ್ತು ಶಿಫಾರಸುಗಳನ್ನು ಮಾಡುವುದು ಪ್ರಕಾಶಕರ ಜವಾಬ್ದಾರಿಯಾಗಿದೆ ಎಂದು ಸಮರ್ಥಿಸಿಕೊಂಡಿದೆ.
-
ರಾಜಕೀಯ21 ಗಂಟೆಗಳು agoYathindra Siddaramaiah ಸದ್ದಿಲ್ಲದೆ ಶುರು ಮಾಡಿದ್ರಾ ಹೊಸ ರಾಜಕೀಯ ಲೆಕ್ಕಾಚಾರ? ಜಮೀರ್ ಭೇಟಿಗೆ ಹೆಚ್ಚಿದ ಕುತೂಹಲ
-
ರಾಜ್ಯ23 ಗಂಟೆಗಳು agoMysuru Dasara ಗಜಪಡೆ ಅರಮನೆಗೆ ಎಂಟ್ರಿ; ಜನಸಂದಣಿ ಕಂಡು ಶ್ರೀರಾಮ ಆನೆ ಗಾಬರಿ, ಬಳಿಕ ಏನಾಯ್ತು?
-
ದೇಶ21 ಗಂಟೆಗಳು agoIndian Army ಗೆ ಅಮೆರಿಕದ ಜಾವೆಲಿನ್ ಕ್ಷಿಪಣಿ! ಚೀನಾ-ಪಾಕ್ ಗಡಿಗೆ ಮತ್ತಷ್ಟು ಬಲ; ದೊಡ್ಡ ಘೋಷಣೆ
-
ರಾಜ್ಯ24 ಗಂಟೆಗಳು agoKRS ಡ್ಯಾಂಗೆ ಭಾರೀ ಶಾಕ್! ಒಳಹರಿವು ದಿಢೀರ್ ಕುಸಿತ; ಸದ್ಯದ ನೀರಿನ ಮಟ್ಟ ಎಷ್ಟು ಗೊತ್ತಾ?
-
ರಾಜ್ಯ2 ಗಂಟೆಗಳು agoB Nagendra ರಾಜೀನಾಮೆ: ಡಿಕೆ ಶಿವಕುಮಾರ್ ಹೇಳಿದ್ದೇನು? ಬಿಜೆಪಿ ವಿರುದ್ಧ ಸಿಎಂ ಗರಂ, ‘ನಾಗೇಂದ್ರ ನಿರಪರಾಧಿ’ ಎಂದ ಡಿಸಿಎಂ
-
ದೇಶ2 ಗಂಟೆಗಳು agoGuru Raghavendra Swamy ಆರಾಧನೆಗೆ ಭಕ್ತರ ಮಹಾಪೂರ: ಮಂತ್ರಾಲಯದಲ್ಲಿ ಪೂರ್ವಾರಾಧನೆ ಅದ್ಧೂರಿ ಆಚರಣೆ
-
ದೇಶ1 ಗಂಟೆ agoNepal-Tibet ಪ್ರವಾಹದ ಭೀಕರ ದೃಶ್ಯ ಚೀನಾದಲ್ಲಿ ಕಾಣೆಯಾಗಿದ್ದೇಕೆ? ವೈರಲ್ ವಿಡಿಯೋಗೆ ಸೆನ್ಸಾರ್!
-
ಬೆಂಗಳೂರು1 ಗಂಟೆ agoBengaluru ನಲ್ಲಿ ಕುಡಿದು ನೀರಿನ ಟ್ಯಾಂಕರ್ ಚಲಾಯಿಸುತ್ತಿದ್ದ 40 ಚಾಲಕರ ಬಂಧನ; ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಅಲರ್ಟ್!
