isro
ಡಾಕಿಂಗ್ ಸಾಹಸಕ್ಕೆ ಇಸ್ರೋ ರೆಡಿ – ಏನಿದು ಪ್ರಯೋಗ? ಇಷ್ಟೊಂದು ಮಹತ್ವ ಯಾಕೆ?
ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ (ISRO) ಇಂದು (ಡಿ.30) ಮಹತ್ವದ ದಿನ. ಸೋಮವಾರ ರಾತ್ರಿ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ‘ಸ್ಪೇಸ್ ಡಾಕಿಂಗ್ ಎಕ್ಸ್ಪರಿಮೆಂಟ್’ (SpaDEx) ಯೋಜನೆ ಭಾಗವಾಗಿ 2 ಉಪಗ್ರಹಗಳು ಉಡಾವಣೆಯಾಗಲಿದೆ.
ಬಾಹ್ಯಾಕಾಶ ಉಪಗ್ರಹಗಳ ಡಾಕಿಂಗ್ (Docking) ಮತ್ತು ಅನ್ಡಾಕಿಂಗ್ (Undocking) ಪ್ರಯೋಗ ಯಶಸ್ವಿಯಾದಲ್ಲಿ ಸ್ಪೇಡೆಕ್ಸ್ನಲ್ಲಿ ಯಶ ಕಂಡ ವಿಶ್ವದ 4ನೇ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಎರಡು ಉಪಗ್ರಹಗಳನ್ನು ಜೋಡಿಸುವ ಹಾಗೂ ಬೇರ್ಪಡಿಸುವ ಪ್ರಯೋಗದಲ್ಲಿ ಇಲ್ಲಿಯವರೆಗೆ ಅಮೆರಿಕ, ರಷ್ಯಾ ಮತ್ತು ಚೀನಾ ಯಶಸ್ಸು ಕಂಡಿದೆ.
ಈ ಪ್ರಯೋಗದ ಭಾಗವಾಗಿ ಎಸ್ಡಿಎಕ್ಸ್01 ಮತ್ತು ಎಸ್ಡಿಎಕ್ಸ್02 ಹೆಸರಿನ ಎರಡು ಉಪಗ್ರಹಗಳನ್ನು ಹೊತ್ತ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (PSLV) ರಾಕೆಟ್ ಇಂದು ರಾತ್ರಿ 9:58ಕ್ಕೆ ಉಡಾವಣೆಯಾಗಲಿದೆ. ಭೂಮಿಯಿಂದ 476 ಕಿ.ಮೀ ದೂರದ ಕಕ್ಷೆಗೆ ಉಪಗ್ರಹಗಳನ್ನು ರಾಕೆಟ್ ಯಶಸ್ವಿಯಾಗಿ ಸೇರಿಸಿದ ಬಳಿಕ ಜನವರಿ ಮೊದಲ ವಾರದಲ್ಲಿ ಇಸ್ರೋ ಡಾಕಿಂಗ್ ಪ್ರಯೋಗ ನಡೆಯಲಿದೆ.
ಏನಿದು ಪ್ರಯೋಗ?
ಈ ಎರಡೂ ಉಪಗ್ರಹಗಳು ತನ್ನಲ್ಲಿರುವ ಸೆನ್ಸರ್, ವ್ಯವಸ್ಥೆಯನ್ನು ಬಳಸಿ ಒಂದಕ್ಕೊಂದು ಜೋಡಣೆ ಆಗುವಂತೆ ಮಾಡುವುದು. ನಂತರ ಪರಸ್ಪರ ಬೇರೆಯಾಗುವಂತೆ ಮಾಡಲು ಇಸ್ರೋ ಈ ಪ್ರಯೋಗ ನಡೆಸಲಿದೆ. ಈ ಕಾರಣಕ್ಕೆ ಸ್ಪೇಸ್ ಡಾಕಿಂಗ್ ಎಕ್ಸ್ಪರಿಮೆಂಟ್’ (ಸ್ಪೇಡೆಕ್ಸ್) ಎಂಬ ಹೆಸರನ್ನು ಇಡಲಾಗಿದೆ.
ಯಾಕೆ ಇಷ್ಟೊಂದು ಮಹತ್ವ?
ಮಾನವಸಹಿತ ಅಂತರಿಕ್ಷಯಾನ, ಚಂದ್ರನ ಅಂಗಳಕ್ಕೆ ಮನುಷ್ಯರನ್ನು ಕಳುಹಿಸಿ, ವಾಪಸ್ ಕರೆತರಲು ಇಸ್ರೋ ಈಗಾಗಲೇ ಯೋಜನೆ ರೂಪಿಸಿದೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಂತೆ ಇಸ್ರೋ ತನ್ನದೇ ಆದ ಸ್ವದೇಶಿ ‘ಭಾರತೀಯ ಅಂತರಿಕ್ಷ ನಿಲ್ದಾಣ’ ಸ್ಥಾಪಿಸಲು ಸಿದ್ಧತೆ ಆರಂಭಿಸಿದೆ. ಆ ನಿಲ್ದಾಣಕ್ಕೆ ಗಗನಯಾತ್ರಿಗಳು, ಉಪಕರಣಗಳನ್ನು ಕಳುಹಿಸಲು ಡಾಕಿಂಗ್, ಅನ್ಡಾಕಿಂಗ್ ತಂತ್ರಜ್ಞಾನ ತಿಳಿದಿರಬೇಕು.
chandrayan 3
ಇಸ್ರೋ ವಿಜ್ಞಾನಿ ತೌಜಮ್ ರಘು ಸಿಂಗ್ ಎಂಬುವರು ಕೆಲಸದೊತ್ತಡದಿಂದ ಸುಮಾರು ೨ ವರ್ಷ ತಮ್ಮ ಮನೆಗೇ ಭೇಟಿ ನೀಡಿಲ್ಲ : ಚಂದ್ರಯಾನ ೩
ಬೆಂಗಳೂರು: ಚಂದ್ರಯಾನ ೩ರ ಯಶಸ್ಸಿನ ಹಿಂದೆ ಹಲವರ ಪರಿಶ್ರಮವಿದೆ, ಚಂದ್ರಯಾನ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಇಸ್ರೋ ವಿಜ್ಞಾನಿ ತೌಜಮ್ ರಘು ಸಿಂಗ್ ಎಂಬುವರು ಕೆಲಸದೊತ್ತಡದಿಂದ ಸುಮಾರು ೨ ವರ್ಷ ತಮ್ಮ ಮನೆಗೇ ಭೇಟಿ ನೀಡಿಲ್ಲ, ಚಂದ್ರಯಾನ ೩ ಯಶಸ್ವಿಯಾಗಬೇಕೆಂದು ಮನೆಗೆ ಹೋಗದೇ ಕೆಲಸದಲ್ಲಿ ಮುಳುಗಿದ್ದರು ಎಂಬ ಸಂಗತಿ ಬೆಳಕಿಗೆ ಬಂದಿದೆ, ಚಂದ್ರಯಾನ ೩ ಯಶಸ್ವಿಯಾದ ಬಳಿಕ ಇವರು ಮಾತನಾಡಿ ನಾನು ಮನೆಯನ್ನು ಮಿಸ್ ಮಾಡಿಕೊಂಡೆ, ನನ್ನ ಪೋಷಕರೊಂದಿಗೆ ವಿಡಿಯೋ ಕಾಲ್ನಲ್ಲಿ ಮಾತನಾಡುತ್ತಿದ್ದೆ, ಕೆಲಸದ ಕಾರಣ ೨ ವರ್ಷ ಮನೆಗೆ ಹೋಗಿಲ್ಲ ಎಂದು ಅವರು ಹೇಳಿದ್ದಾರೆ, ನಾವು ಈಗ ಗಗನಯಾನ ಮೇಲೆ ಗಮನವನ್ನು ಇಟ್ಟಿದ್ದೇವೆ,
-
ಬೆಂಗಳೂರು23 ಗಂಟೆಗಳು agoBengaluru ನಲ್ಲಿ ಖಾಲಿ ಸೈಟ್ ಮಾಲೀಕರಿಗೆ ಬಿಗ್ ಶಾಕ್: ಕಸ ತೆರವು ಮಾಡದಿದ್ದರೆ ₹38,400 ದಂಡ, ದೊಡ್ಡ ಸೈಟ್ಗೆ ಲಕ್ಷಕ್ಕೂ ಹೆಚ್ಚು!
-
ದೇಶ24 ಗಂಟೆಗಳು agoNepal flood ಮರಿಗಳನ್ನು ಬಿಟ್ಟು ಕದಲಲಿಲ್ಲ! ಪ್ರವಾಹದ ಮಧ್ಯೆ ಆನೆಗಳ ವಾತ್ಸಲ್ಯದ ದೃಶ್ಯ ವೈರಲ್
-
ಬೆಂಗಳೂರು20 ಗಂಟೆಗಳು agoLiver ಚಿಕಿತ್ಸೆಗೆ ಗುಡ್ ನ್ಯೂಸ್: ಹಲವು ತಜ್ಞರು ಒಂದೇ ಕಡೆ, ರೋಗಿಗಳಿಗೆ ಸುಲಭ ಚಿಕಿತ್ಸೆ
-
ದೇಶ3 ಗಂಟೆಗಳು agoPM Narendra Modi Foreign Visit: ಮೋದಿ 4 ದಿನಗಳ ವಿದೇಶ ಪ್ರವಾಸ, ಎಸ್ಸಿಒ ಶೃಂಗಸಭೆಯಲ್ಲಿ ಭಾಗಿ
-
ಬೆಂಗಳೂರು2 ಗಂಟೆಗಳು agoBadminton ಕೋರ್ಟ್ನಲ್ಲಿ ಮಹಾ ಕದನ; Make My Propertyz, MRCL, Hosa Suddi, ಗೌರೀಶ್, ಆಂಜನಪ್ಪ, ಹರೀಶ್, ಶಿವಕುಮಾರ್ ಕೈಜೋಡಿಕೆ!
-
ದೇಶ3 ಗಂಟೆಗಳು agoNepal ಭೀಕರ ಪ್ರವಾಹ: ಸಾವಿನ ಸಂಖ್ಯೆ 469ಕ್ಕೆ ಏರಿಕೆ, ಸಾವಿರಕ್ಕೂ ಹೆಚ್ಚು ಮಂದಿ ನಾಪತ್ತೆ!
-
ದೇಶ3 ಗಂಟೆಗಳು agoKashmir ದಲ್ಲಿ ಭದ್ರತಾ ಪಡೆಗಳ ಭರ್ಜರಿ ಬೇಟೆ: 5 ಹೈಬ್ರಿಡ್ ಉಗ್ರರು ಸೇರಿ 13 ಮಂದಿ ಅರೆಸ್ಟ್
-
ಸಿನಿಮಾ2 ಗಂಟೆಗಳು ago‘Toxic’ ವಿರುದ್ಧ ಮಾತನಾಡಿದವರಿಗೆ ಕಾನೂನು ನೋಟಿಸ್? ಚಿತ್ರತಂಡದ ನಡೆಗೆ ಕಾರಣವೇನು?
