ಬಿಬಿಎಂಪಿ
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಆಡಳಿತದ ಹೊಣೆ ಹೊತ್ತಿದ್ದ ʻಬಿಬಿಎಂಪಿʼ (BBMP) ಹೆಸರು ಇತಿಹಾಸ ಪುಟ ಸೇರಲಿದ್ದು, ನಾಳೆಯಿಂದ (ಮೇ 15) ಗ್ರೇಟರ್ ಬೆಂಗಳೂರು ಆಡಳಿತ ಜಾರಿಯಾಗಲಿದೆ. ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯು ʻಗ್ರೇಟರ್ ಬೆಂಗಳೂರು ಪ್ರಾಧಿಕಾರʼ (Greater Bengaluru Authority) ಆಗಿ ಬದಲಾಗಲಿದೆ. ಈ ಕುರಿತು ರಾಜ್ಯ ಸರ್ಕಾರ ಇಂದು ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಇದರೊಂದಿಗೆ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಯಲ್ಲಿ (Bengaluru Administrative Act) ಸುಗಮ ಆಡಳಿತ ತರುವ ದೃಷ್ಟಿಯಿಂದ ಗರಿಷ್ಠ 7 ಪಾಲಿಕೆ ರಚನೆಗೆ ಪ್ರಸ್ತಾಪ ಮಾಡಲಾಗಿದೆ. ಈ ಕಾಯ್ದೆಗೆ ನಿಯಮಾವಳಿ ರೂಪಿಸಿದ ಬಳಿಕ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ. ಜೊತೆಗೆ ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ಜಿಬಿಎ ಮುಖ್ಯ ಆಯುಕ್ತರು ಎಂದು ಹೆಸರು ಬದಲಾವಣೆ ಮಾಡಲಾಗಿದೆ. ಜೊತೆಗೆ ಹೊಸ ಆಡಳಿತಾಧಿಕಾರಿಯನ್ನೂ ನೇಮಕ ಮಾಡಲಾಗುತ್ತದೆ.
ಕಾಯ್ದೆ ಹಾದಿ ಹೇಗೆ?
ವಿಧಾನ ಮಂಡಲದಲ್ಲಿ ಮಾರ್ಚ್ 13ರಂದು ಅಂಗೀಕಾರವಾಗಿದ್ದ ʻಗ್ರೇಟರ್ ಬೆಂಗಳೂರು ಆಡಳಿತ ಮಸೂದೆ-2024ʼಯನ್ನು ರಾಜ್ಯಪಾಲರ ಅಂಕಿತಕ್ಕಾಗಿ 2025ರ ಮಾರ್ಚ್ 17ರಂದು ಕಳುಹಿಸಲಾಗಿತ್ತು. ಮಸೂದೆಯು ಸಂವಿಧಾನದ 74ನೇʼ ತಿದ್ದುಪಡಿಗೆ ವಿರುದ್ಧವಾಗಿದೆ ಮತ್ತು ದೆಹಲಿ ಮಹಾನಗರ ಪಾಲಿಕೆಯ ವಿಭಜನೆ ಸಂದರ್ಭದಲ್ಲಿ ಆದಂತೆ ಸಮಸ್ಯೆಗಳು ಸೃಷ್ಟಿಯಾಗುತ್ತವೆʼ ಎಂದು ಬೆಂಗಳೂರು ಟೌನ್ ಹಾಲ್ ಸಂಘಟನೆ ಹಾಗೂ ಬಿಜೆಪಿ ನಾಯಕರ ನಿಯೋಗಗಳು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದವು. ಮಸೂದೆಯನ್ನು ತಡೆ ಹಿಡಿಯುವಂತೆಯೂ ಒತ್ತಾಯಿಸಿದ್ದವು.
ಇದಕ್ಕೆ ಪ್ರತಿಕ್ರಿಯಿಸಿದ್ದ ರಾಜ್ಯಪಾಲರು ʻಎರಡೂ ಮನವಿಗಳನ್ನು ನಾನು ಪರಿಶೀಲಿಸಿದ್ದೇನೆ. ಈ ಮಸೂದೆಯು ಕಾನೂನಾತ್ಮಕ ಮತ್ತು ಸಾರ್ವಜನಿಕ ಹಿತಾಸಕ್ತಿಯ ವಿಷಯಗಳನ್ನು ಒಳಗೊಂಡಿದೆ. ಆದ್ದರಿಂದ ಎರಡೂ ಮನವಿ ಪತ್ರಗಳಲ್ಲಿ ಪ್ರಸ್ತಾಪಿಸಿರುವ ಪ್ರಮುಖ ವಿಷಯಗಳ ಕುರಿತು ಸ್ಪಷ್ಟನೆ ಅಗತ್ಯವಿದೆ’ ಎಂದು ಮಾರ್ಚ್ 25ರಂದು ಮಸೂದೆಯನ್ನು ಹಿಂದಿರುಗಿಸಿದ್ದರು. ಅದಕ್ಕೆ ಅಗತ್ಯ ಸ್ಪಷನೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಏಪ್ರಿಲ್ 24ರಂದು ಮಸೂದೆಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದರು. ಅಂದು ಸಂಜೆಯೇ ‘ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ- 2024’ ಅನ್ನು ಅಧಿಸೂಚಿಸಿ, ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿತ್ತು.
ಮೇ 15ರಿಂದ:
ಸದ್ಯ ಬಿಬಿಎಂಪಿಯ 225 ವಾರ್ಡ್ಗಳು ಜೆಬಿಎ ವ್ಯಾಪ್ತಿಯಲ್ಲಿರಲಿದೆ. ನಂತರ ಬಿಬಿಎಂಪಿ ವ್ಯಾಪ್ತಿ ಮಾತ್ರ ʻಗ್ರೇಟರ್ ಬೆಂಗಳೂರು ಪ್ರದೇಶʼ ಎಂದಾಗಲಿದ್ದರೂ ನಂತರದ ದಿನಗಳಲ್ಲಿ ವ್ಯಾಪ್ತಿ ಹಿಗ್ಗಲಿದೆ. ತಲಾ ಸುಮಾರು 125 ವಾರ್ಡ್ಗಳ ಮೂರು ನಗರ ಪಾಲಿಕೆಗಳನ್ನು ರಚಿಸುವ ಯೋಜನೆ ಇದ್ದು ಅದಕ್ಕೆ ತಕ್ಕಂತೆ ʻಗ್ರೇಟರ್ ಬೆಂಗಳೂರು ಪ್ರದೇಶʼದ ಗಡಿಯನ್ನು ಗುರುತಿಸಲಾಗುತ್ತದೆ. ನಗರದ ಸುತ್ತಲಿರುವ ಕೈಗಾರಿಕಾ ಪ್ರದೇಶಗಳನ್ನೂ ಒಳಗೊಂಡಂತೆ ಎಲೆಕ್ಟ್ರಾನಿಕ್ ಸಿಟಿ ಅತ್ತಿಬೆಲೆ ಜಿಗಣಿ ಕೈಗಾರಿಕೆ ಪ್ರದೇಶ ಬೊಮ್ಮಸಂದ್ರ, ಸರ್ಜಾಪುರ, ಬಾಗಲೂರು, ರಾಜಾನುಕುಂಟೆ, ಹೆಸರಘಟ್ಟ, ದಾಸನಪುರ, ಮಾಕಳಿ, ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ʻಗ್ರೇಟರ್ ಬೆಂಗಳೂರು ಪ್ರದೇಶʼಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಇದೆ. ಕಾಯ್ದೆಯಲ್ಲೇ ಇರುವಂತೆ ಎಲ್ಲ ನಗರ ಪಾಲಿಕೆಗಳ ಹೆಸರು ʻಬೆಂಗಳೂರುʼ ಎಂದೇ ಆರಂಭವಾಗಬೇಕಿದೆ. ʻಬೆಂಗಳೂರು ಕೇಂದ್ರ ನಗರ ಪಾಲಿಕೆʼ ʻಬೆಂಗಳೂರು ಉತ್ತರ ನಗರ ಪಾಲಿಕೆʼ ʻಬೆಂಗಳೂರು ದಕ್ಷಿಣ ನಗರ ಪಾಲಿಕೆʼ… ಹೀಗೆ ಹೆಸರಿಸಲಾಗುತ್ತದೆ. ʻಗ್ರೇಟರ್ ಬೆಂಗಳೂರು ಪ್ರದೇಶʼ ವ್ಯಾಪ್ತಿಯನ್ನು ಹಿಗ್ಗಿಸಿದ ಮೇಲೆ ಅದರನ್ವಯ ಮೂರು ಅಥವಾ ಐದು ನಗರಪಾಲಿಕೆಗಳನ್ನು ರಚಿಸಲಾಗುತ್ತದೆ ಎಂದು ಸರ್ಕಾರಿ ಮೂಲಗಳು ಮಾಹಿತಿ ನೀಡಿವೆ.
ರಾಜ್ಯ
Karnataka ಮುಂಗಾರು ಅಧಿವೇಶನದ ಹೈಲೈಟ್ ಸಿದ್ದರಾಮಯ್ಯ! ಮಾಜಿ ಸಿಎಂ ಹೊಸ ಪಾತ್ರದತ್ತ ಎಲ್ಲರ ಕಣ್ಣು
ಬೆಂಗಳೂರು: Karnataka ವಿಧಾನಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 13ರಿಂದ ಆರಂಭವಾಗಲಿದ್ದು, ಈ ಬಾರಿಯ ಅಧಿವೇಶನ ಹಲವು ರಾಜಕೀಯ ಕಾರಣಗಳಿಂದ ವಿಶೇಷ ಮಹತ್ವ ಪಡೆದುಕೊಂಡಿದೆ. ಅದರಲ್ಲೂ ಮಾಜಿ ಮುಖ್ಯಮಂತ್ರಿ siddaramaiah ಅವರ ಹಾಜರಾತಿ ಎಲ್ಲರ ಗಮನ ಸೆಳೆದಿದೆ. ಎರಡು ಬಾರಿ ವಿಧಾನಸಭೆಯ ಪ್ರತಿಪಕ್ಷ ನಾಯಕರಾಗಿ, ಬಳಿಕ ಸುಮಾರು ಏಳೂವರೆ ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಸಿದ್ದರಾಮಯ್ಯ ಇದೀಗ ಹಲವು ವರ್ಷಗಳ ಬಳಿಕ ಕೇವಲ ಶಾಸಕರಾಗಿ ವಿಧಾನಸಭೆಗೆ ಪ್ರವೇಶಿಸುತ್ತಿರುವುದು ವಿಶೇಷ ಚರ್ಚೆಗೆ ಕಾರಣವಾಗಿದೆ.
ರಾಜಕೀಯವಾಗಿ ಕಾಂಗ್ರೆಸ್ ಪಕ್ಷಕ್ಕೆ ಬಲ ತುಂಬಿದ್ದ ಸಿದ್ದರಾಮಯ್ಯ ಈಗ ಸದನದಲ್ಲಿ ಯಾವ ಆಸನದಲ್ಲಿ ಕುಳಿತುಕೊಳ್ಳಲಿದ್ದಾರೆ ಎಂಬ ಕುತೂಹಲವೂ ಹೆಚ್ಚಾಗಿದೆ. ವಿಧಾನಸಭೆಯ ಶಿಷ್ಟಾಚಾರದ ಪ್ರಕಾರ ಸಚಿವ ಸಂಪುಟದ ಸದಸ್ಯರಿಗೆ ಮೊದಲ ಸಾಲಿನಲ್ಲಿ ಆಸನ ವ್ಯವಸ್ಥೆ ಮಾಡಲಾಗುತ್ತದೆ. ಮಾಜಿ ಮುಖ್ಯಮಂತ್ರಿಗಳಿಗೆ ಆಸನ ಆಯ್ಕೆ ಮಾಡುವ ಸ್ವಾತಂತ್ರ್ಯವಿದ್ದು, ಅವರು ಬಯಸಿದ ಸ್ಥಳದಲ್ಲಿ ಕುಳಿತುಕೊಳ್ಳಬಹುದು.
ಸಾಮಾನ್ಯವಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಹಿರಿಯ ಸಚಿವರಿಗೆ ಮೊದಲ ಸಾಲಿನಲ್ಲಿ ಆಸನಗಳನ್ನು ಮೀಸಲಿಡಲಾಗುತ್ತದೆ. ಒಟ್ಟು ಸುಮಾರು 33 ಸಚಿವರ ಆಸನಗಳ ಬಳಿಕ ಉಳಿಯುವ ಸ್ಥಳಗಳಲ್ಲಿ ಅಥವಾ ಹಿಂಬದಿ ಸಾಲುಗಳಲ್ಲಿ ಮಾಜಿ ಮುಖ್ಯಮಂತ್ರಿಗಳಿಗೆ ಆಸನ ಕಲ್ಪಿಸುವ ಸಂಪ್ರದಾಯವಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮಂತ್ರಿಗಳ ಸಾಲಿನ ಹಿಂದಿನ ಆಸನವನ್ನು ಆಯ್ಕೆ ಮಾಡುತ್ತಾರೆಯೇ ಅಥವಾ ಸಂಪೂರ್ಣ ಹಿಂಬದಿ ಸಾಲಿನಲ್ಲಿ ಕುಳಿತುಕೊಳ್ಳುತ್ತಾರೆಯೇ ಎಂಬುದು ರಾಜಕೀಯ ವಲಯದಲ್ಲಿ ಚರ್ಚೆಯ ವಿಷಯವಾಗಿದೆ.
ಈ ಹಿಂದೆ ಮಾಜಿ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್ ಹಾಗೂ ವೀರಪ್ಪ ಮೊಯ್ಲಿ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಹಿಂಬದಿ ಸಾಲಿನ ಆಸನಗಳನ್ನೇ ಆಯ್ಕೆ ಮಾಡಿಕೊಂಡಿದ್ದರು. ಅದೇ ಸಂಪ್ರದಾಯವನ್ನು ಸಿದ್ದರಾಮಯ್ಯ ಮುಂದುವರಿಸುತ್ತಾರೆಯೇ ಎಂಬ ಪ್ರಶ್ನೆ ಈಗ ಉದ್ಭವಿಸಿದೆ.
ಆಸನದ ಆಯ್ಕೆ ಮಾತ್ರವಲ್ಲ, ಈ ಬಾರಿಯ ಅಧಿವೇಶನದಲ್ಲಿ ಸಿದ್ದರಾಮಯ್ಯ ಅವರ ಪಾತ್ರವೂ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಬಿಜೆಪಿ ಮತ್ತು ಜೆಡಿಎಸ್ ಸೇರಿದಂತೆ ಪ್ರತಿಪಕ್ಷಗಳು ಹಲವು ಪ್ರಮುಖ ವಿಷಯಗಳನ್ನು ಮುಂದಿಟ್ಟುಕೊಳ್ಳಲು ಸಜ್ಜಾಗಿವೆ. ಬರ ಪರಿಸ್ಥಿತಿ ನಿರ್ವಹಣೆ, ಕಾನೂನು ಸುವ್ಯವಸ್ಥೆ, ಕೆಪಿಎಸ್ಸಿ ನೇಮಕಾತಿ ಅಕ್ರಮ ಆರೋಪಗಳು ಸೇರಿದಂತೆ ಹಲವು ವಿಷಯಗಳು ಸದನದಲ್ಲಿ ಪ್ರತಿಧ್ವನಿಸುವ ಸಾಧ್ಯತೆಯಿದೆ.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಪರವಾಗಿ ಯಾವ ರೀತಿಯಲ್ಲಿ ವಾದ ಮಂಡಿಸುತ್ತಾರೆ, ತಮ್ಮ ಅನುಭವವನ್ನು ಹೇಗೆ ಬಳಸಿಕೊಳ್ಳುತ್ತಾರೆ ಹಾಗೂ ಆಡಳಿತಕ್ಕೆ ಯಾವ ರೀತಿಯ ರಾಜಕೀಯ ಬೆಂಬಲ ನೀಡುತ್ತಾರೆ ಎಂಬುದರ ಮೇಲೆ ಆಡಳಿತ ಮತ್ತು ಪ್ರತಿಪಕ್ಷ ಎರಡರ ಕಣ್ಣೂ ನೆಟ್ಟಿದೆ.
ಕಳೆದ ಅಧಿವೇಶನದಲ್ಲಿ ಮುಖ್ಯಮಂತ್ರಿಯಾಗಿ ಸದನ ಮುನ್ನಡೆಸಿದ್ದ ಸಿದ್ದರಾಮಯ್ಯ, ಈ ಬಾರಿ ಮಾಜಿ ಮುಖ್ಯಮಂತ್ರಿಯಾಗಿ ಮತ್ತು ಸಾಮಾನ್ಯ ಶಾಸಕರಾಗಿ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಿರುವುದು ವಿಧಾನಸಭೆಯ ಇತಿಹಾಸದಲ್ಲಿಯೂ ಗಮನಾರ್ಹ ಬೆಳವಣಿಗೆಯಾಗಿದೆ. ಹೀಗಾಗಿ ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಅವರ ಪ್ರತಿಯೊಂದು ನಡೆ ಮತ್ತು ಹೇಳಿಕೆ ರಾಜಕೀಯವಾಗಿ ಹೆಚ್ಚಿನ ಮಹತ್ವ ಪಡೆಯುವ ನಿರೀಕ್ಷೆಯಿದೆ.
ಚುನಾವಣೆ
GBA ELECTION : ಜುಲೈ ಮೊದಲ ವಾರದಲ್ಲೇ ವೇಳಾಪಟ್ಟಿ? ಬೆಂಗಳೂರು ರಾಜಕೀಯ ಕಣ ರಂಗೇರಲು ಸಜ್ಜು
ಬೆಂಗಳೂರು: ಸುಪ್ರೀಂ ಕೋರ್ಟ್ ನೀಡಿರುವ ಕಟ್ಟುನಿಟ್ಟಿನ ಆದೇಶದ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರಪಾಲಿಕೆಗಳ ಚುನಾವಣೆ ಆಗಸ್ಟ್ 31ರೊಳಗೆ ನಡೆಸುವುದು ಬಹುತೇಕ ಖಚಿತವಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ ಆಯೋಗವು ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಿದೆ.
ಮೂಲಗಳ ಪ್ರಕಾರ, ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಅಧಿಕೃತ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಜುಲೈ 10ರೊಳಗೆ ದಿನಾಂಕ ಘೋಷಣೆಯಾಗಬಹುದು ಎಂದು ಹೇಳಲಾಗುತ್ತಿದ್ದು, ವೇಳಾಪಟ್ಟಿ ಪ್ರಕಟವಾದ ತಕ್ಷಣವೇ ಬೆಂಗಳೂರು ನಗರದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಆಗಸ್ಟ್ ಮೂರನೇ ವಾರದಲ್ಲಿ ಮತದಾನ ನಡೆಸುವ ಬಗ್ಗೆ ಆಯೋಗ ಚಿಂತನೆ ನಡೆಸಿದೆ.
ಈ ಹಿಂದೆ ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಗಡುವು ನೀಡಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಹಾಗೂ ಸಿಬ್ಬಂದಿ ಕೊರತೆಯನ್ನು ಪರಿಗಣಿಸಿ ನ್ಯಾಯಾಲಯವು ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿತ್ತು. ಜೊತೆಗೆ, ಯಾವುದೇ ಕಾರಣಕ್ಕೂ ಮತ್ತೆ ಚುನಾವಣೆ ಮುಂದೂಡುವ ಪ್ರಸ್ತಾಪವನ್ನು ತನ್ನ ಮುಂದೆ ತರಬಾರದು ಎಂದು ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ನೀಡುವಂತೆ ಸರ್ಕಾರ ಸಲ್ಲಿಸಿದ್ದ ಮನವಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ.
ಇದರ ಬೆನ್ನಲ್ಲೇ ರಾಜ್ಯ ಚುನಾವಣಾ ಆಯೋಗವು ಮತದಾರರ ಪಟ್ಟಿ ಅಂತಿಮಗೊಳಿಸುವುದು, ಮತಗಟ್ಟೆಗಳ ಸಿದ್ಧತೆ ಹಾಗೂ ಸಿಬ್ಬಂದಿ ನಿಯೋಜನೆ ಸೇರಿದಂತೆ ಹಲವು ಕಾರ್ಯಗಳಲ್ಲಿ ತೊಡಗಿದೆ. ರಾಜಕೀಯ ಪಕ್ಷಗಳೂ ಚುನಾವಣೆಗೆ ಸಜ್ಜಾಗಿವೆ. ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಕಾರ್ಯಕರ್ತರಿಗೆ ಸೂಚನೆ ನೀಡಿದೆ. ಬಿಜೆಪಿ, ಕಳೆದ ಆರು ವರ್ಷಗಳಿಂದ ಚುನಾವಣೆ ನಡೆಯದ ಪರಿಣಾಮ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಆರೋಪಿಸುತ್ತಿದೆ. ಇತ್ತ ಬಿಜೆಪಿ-ಜೆಡಿಎಸ್ ಮೈತ್ರಿಯೂ ಚುನಾವಣಾ ಅಖಾಡಕ್ಕೆ ಸಜ್ಜಾಗಿದ್ದು, ಪಂಚ ಪಾಲಿಕೆ ಚುನಾವಣೆ ಭಾರೀ ಪೈಪೋಟಿಗೆ ಸಾಕ್ಷಿಯಾಗುವ ನಿರೀಕ್ಷೆ ಮೂಡಿದೆ.
ದೇಶ
ರಾಮಲಿಂಗಾರೆಡ್ಡಿ ಬಳಿಕ ಮುನಿಯಪ್ಪ ಬಂಡಾಯ! ಕಾಂಗ್ರೆಸ್ ಹೈಕಮಾಂಡ್ ತುರ್ತು ಸಭೆ
ದೇವನಹಳ್ಳಿ, ಜೂನ್ 5: ನೂತನ ಮುಖ್ಯಮಂತ್ರಿ D. K. Shivakumar ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಖಾತೆ ಹಂಚಿಕೆಯ ಬೆನ್ನಲ್ಲೇ ಅಸಮಾಧಾನದ ಹೊಗೆ ದಟ್ಟವಾಗುತ್ತಿದೆ. ಹಿರಿಯ ನಾಯಕ Ramalinga Reddy ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ ಬೆನ್ನಲ್ಲೇ ಆಹಾರ ಸಚಿವ K. H. Muniyappa ಕೂಡ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿರುವುದು ಕಾಂಗ್ರೆಸ್ ಹೈಕಮಾಂಡ್ಗೆ ತಲೆನೋವಾಗಿ ಪರಿಣಮಿಸಿದೆ.
ಈ ಬೆಳವಣಿಗೆಯಿಂದ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ವರಿಷ್ಠರು, ಸರ್ಕಾರದ ಆರಂಭದಲ್ಲೇ ಉಂಟಾಗಿರುವ ಬಿಕ್ಕಟ್ಟನ್ನು ಶಮನಗೊಳಿಸಲು ದೇವನಹಳ್ಳಿ ಬಳಿಯ Kempegowda International Airport ಸಮೀಪದ ವಿಐಪಿ ಲಾಂಜ್ ಹಾಗೂ ತಾಜ್ ಹೋಟೆಲ್ನಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಕಾಂಗ್ರೆಸ್ ನಾಯಕ Rahul Gandhi, ಎಐಸಿಸಿ ಉಸ್ತುವಾರಿ Randeep Singh Surjewala, ಮಾಜಿ ಮುಖ್ಯಮಂತ್ರಿ Siddaramaiah ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದು, ಅಸಮಾಧಾನಗೊಂಡಿರುವ ನಾಯಕರನ್ನು ಮನವೊಲಿಸುವ ಪ್ರಯತ್ನ ನಡೆದಿದೆ.
ಖಾತೆ ಹಂಚಿಕೆಯಲ್ಲಿ ತಮ್ಮ ಹಿರಿತನಕ್ಕೆ ಸೂಕ್ತ ಗೌರವ ಸಿಕ್ಕಿಲ್ಲ ಎಂದು ಬೇಸರಗೊಂಡಿರುವ ಕೆ.ಎಚ್. ಮುನಿಯಪ್ಪ, ತಮಗೆ ಕೃಷಿ ಅಥವಾ ಸಮಾಜ ಕಲ್ಯಾಣ ಇಲಾಖೆಯನ್ನು ನೀಡುವಂತೆ ವರಿಷ್ಠರ ಮುಂದೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ತಮಗೆ ಹಂಚಿಕೆಯಾಗಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜವಾಬ್ದಾರಿಯನ್ನು ಸ್ವೀಕರಿಸುವುದಿಲ್ಲ ಎಂದು ಅವರು ಹಠ ಹಿಡಿದಿರುವುದು ಸರ್ಕಾರಕ್ಕೆ ಮತ್ತಷ್ಟು ಮುಜುಗರ ಉಂಟುಮಾಡಿದೆ.
ಇದಕ್ಕೂ ಮುನ್ನ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೈತಪ್ಪಿದ್ದರಿಂದ ಅಸಮಾಧಾನಗೊಂಡ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಇದರಿಂದ ಸರ್ಕಾರ ರಚನೆಯಾದ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಒಳಗೆ ಭಿನ್ನಮತದ ಧ್ವನಿ ಜೋರಾಗಿದೆ.
ಈ ಬೆಳವಣಿಗೆಗಳು ಕಾಂಗ್ರೆಸ್ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಸವಾಲುಗಳನ್ನು ತಂದೊಡ್ಡಿದ್ದು, ಹೈಕಮಾಂಡ್ ನಡೆಸುತ್ತಿರುವ ಈ ಹೈವೋಲ್ಟೇಜ್ ಸಭೆಯ ಫಲಿತಾಂಶದ ಮೇಲೆ ರಾಜ್ಯ ರಾಜಕಾರಣದ ಮುಂದಿನ ಬೆಳವಣಿಗೆಗಳು ಅವಲಂಬಿತವಾಗಿವೆ.
-
ಬೆಂಗಳೂರು17 ಗಂಟೆಗಳು agoBengaluru ನಲ್ಲಿ ಖಾಲಿ ಸೈಟ್ ಮಾಲೀಕರಿಗೆ ಬಿಗ್ ಶಾಕ್: ಕಸ ತೆರವು ಮಾಡದಿದ್ದರೆ ₹38,400 ದಂಡ, ದೊಡ್ಡ ಸೈಟ್ಗೆ ಲಕ್ಷಕ್ಕೂ ಹೆಚ್ಚು!
-
ಬೆಂಗಳೂರು20 ಗಂಟೆಗಳು agoNalanda English Medium School ವಾರ್ಷಿಕೋತ್ಸವದಲ್ಲಿ ಎಸ್. ಜಾನಕಿ ಗೀತೆಗಳಿಗೆ ವಿದ್ಯಾರ್ಥಿಗಳ ನೃತ್ಯ ನಮನ
-
ದೇಶ20 ಗಂಟೆಗಳು agoMantralaya: ಇಂದಿನಿಂದ ಸಪ್ತರಾತ್ರೋತ್ಸವ ಆರಂಭ; ಮಹಾರಥೋತ್ಸವ, ತೆಪ್ಪೋತ್ಸವ ಸೇರಿದಂತೆ ಹಲವು ಕಾರ್ಯಕ್ರಮ
-
ಬೆಂಗಳೂರು21 ಗಂಟೆಗಳು agoEid Milad ಮೆರವಣಿಗೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಹಲವರ ವಿರುದ್ಧ FIR, 6 ಮಂದಿ ಬಂಧನ
-
ದೇಶ18 ಗಂಟೆಗಳು agoNepal flood ಮರಿಗಳನ್ನು ಬಿಟ್ಟು ಕದಲಲಿಲ್ಲ! ಪ್ರವಾಹದ ಮಧ್ಯೆ ಆನೆಗಳ ವಾತ್ಸಲ್ಯದ ದೃಶ್ಯ ವೈರಲ್
-
ಬೆಂಗಳೂರು19 ಗಂಟೆಗಳು agoBengaluru ಪಾರ್ಕ್ ಜಾಗ ಬಳಕೆಗೆ ವಿರೋಧ: ಸರ್ಕಾರದ ವಿರುದ್ಧ ಸಿಡಿದೆದ್ದ ನಾಗರಿಕರು, 6 ಪ್ರಮುಖ ಬೇಡಿಕೆ
-
ರಾಜ್ಯ19 ಗಂಟೆಗಳು agoMysuru ರಲ್ಲೂ ಭೂಸ್ವಾಧೀನ ವಿವಾದ: 165 ಎಕರೆ ಕೃಷಿ ಭೂಮಿಗೆ KIADB ನೋಟಿಸ್, ರೈತರ ಆಕ್ರೋಶ
-
ಬೆಂಗಳೂರು15 ಗಂಟೆಗಳು agoLiver ಚಿಕಿತ್ಸೆಗೆ ಗುಡ್ ನ್ಯೂಸ್: ಹಲವು ತಜ್ಞರು ಒಂದೇ ಕಡೆ, ರೋಗಿಗಳಿಗೆ ಸುಲಭ ಚಿಕಿತ್ಸೆ
