ಬೆಂಗಳೂರು
ಬಜೆಟ್ನ ಸಂಪೂರ್ಣ ಮಾಹಿತಿ – KARNATAKA BUDGET 2025 LIVE
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಒಟ್ಟು 4,09,549 ಕೋಟಿ ರೂ. ಗಾತ್ರದ ರಾಜ್ಯ ಬಜೆಟ್ ಮಂಡಿಸಿದರು. ವಿಧಾನಸಭೆಯಲ್ಲಿ ಸುಮಾರು 3.30 ಗಂಟೆಗಳ ಕಾಲ ಸಿಎಂ ಬಜೆಟ್ ಪ್ರತಿ ಓದಿದರು. ಈ ಬಾರಿಯ ಬಜೆಟ್ನಲ್ಲಿ 19,262 ಕೋಟಿ ರೂ. ರಾಜಸ್ವ ಕೊರತೆ ಕಂಡುಬಂದಿದೆ. ಇಲಾಖಾವಾರು ಬಜೆಟ್ ಮಾಹಿತಿ ಇಲ್ಲಿದೆ.
ಹಿಂದುಳಿದ ವರ್ಗಗಳ ಕಲ್ಯಾಣ
- ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು 50 ಕೋಟಿ ರೂ
- ಬಾಡಿಗೆ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ 30 ಸ್ವಂತ ಕಟ್ಟಡಗಳನ್ನು ನಿರ್ಮಾಣ
- ಹಿಂದುಳಿದ ವರ್ಗಗಳಲ್ಲಿಯೇ ಅತೀ ಹಿಂದುಳಿದ, ಶೈಕ್ಷಣಿಕ ಸೌಲಭ್ಯಗಳಿಂದ ವಂಚಿತರಾಗಿರುವ, 46 ಅಲೆಮಾರಿ, ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯದ 4 ಕಂದಾಯ ವಿಭಾಗಗಳಲ್ಲಿ ತಲಾ ಒಂದು ಡಿ.ದೇವರಾಜ ಅರಸು ವಸತಿ ಶಾಲೆಗಳ ನಿರ್ಮಾಣ
- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದ ವತಿಯಿಂದ ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿ ಮತ್ತು ಖಾನಾಪುರ ತಾಲ್ಲೂಕಿನ ನಂದಗಡದಲ್ಲಿ 28 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ
- ಇಂಜಿನಿಯರಿಂಗ್, ಮೆಡಿಕಲ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರತಿ ಜಿಲ್ಲೆಗೆ ಎರಡರಂತೆ 62 ಮೆಟ್ರಿಕ್ ನಂತರದ ವಸತಿ ನಿಲಯಗಳ ನಿರ್ಮಾಣ
- ಸ್ವಂತ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಕಟ್ಟಡ ದುರಸ್ತಿಗೆ 25 ಕೋಟಿ ರೂ
- ಅಲೆಮಾರಿ, ಅರೆಅಲೆಮಾರಿ ಜನಾಂಗದವರ ಕಾಲೋನಿಗಳ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ ಅನುದಾನ
- ಅಲೆಮಾರಿ, ಅರೆಅಲೆಮಾರಿ ಜನಾಂಗದವರಿಗೆ ಭೂ ಒಡೆತನ ಯೋಜನೆ ಅನುಷ್ಠಾನ ; ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಕೌಶಲ್ಯ ತರಬೇತಿ
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ IAS, IPS, KAS, KSPS ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರು ನಗರದಲ್ಲಿ ಎರಡು ಸುಸಜ್ಜಿತ ವಸತಿ ನಿಲಯ ಪ್ರಾರಂಭ
- ಜಿಲ್ಲಾ ಕೇಂದ್ರಗಳಲ್ಲಿರುವ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ನಿಲಯಾರ್ಥಿಗಳಿಗೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ವೃತ್ತಿ ಮಾರ್ಗದರ್ಶನಕ್ಕೆ (career guidance) ತರಬೇತಿ
- ಹಿಂದುಳಿದ ವರ್ಗಗಳ ನಿರುದ್ಯೋಗಿಗಳಿಗೆ ಆಹಾರ ಕಿಯೋಸ್ಟ್ (Kiosk) ಪ್ರಾರಂಭಿಸಲು ವಿದ್ಯುತ್ ಚಾಲಿತ ನಾಲ್ಕು ಚಕ್ರಗಳ ವಾಹನ ಖರೀದಿಗೆ ನಿಗಮದ ವತಿಯಿಂದ ಗರಿಷ್ಠ 3 ಲಕ್ಷ ರೂ ಸಹಾಯಧನ
- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳಿಗೆ 2025-26 ನೇ ಸಾಲಿನಲ್ಲಿ 422 ಕೋಟಿ ರೂ. ಅನುದಾನ
1:40 PM, 7 Mar 2025 (IST)
ಗುತ್ತಿಗೆಯಲ್ಲಿ ಮೀಸಲಾತಿ
- 2 ಕೋಟಿ ರೂವರೆಗಿನ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ ಮತ್ತು 2ಬಿ ಗುತ್ತಿಗೆದಾರರಿಗೆ ಮೀಸಲಾತಿ
- ಸರ್ಕಾರದ ವಿವಿಧ ಇಲಾಖೆ, ನಿಗಮ, ಸಂಸ್ಥೆಗಳಲ್ಲಿ ಖರೀದಿಸುವ ಸರಕು ಮತ್ತು ಸೇವೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ ಮತ್ತು 2ಬಿ ಸರಬರಾಜುದಾರರಿಗೆ ಒಂದು ಕೋಟಿ ರೂ. ವರೆಗೆ ಮೀಸಲಾತಿ
- ಪ್ರಗತಿ ಕಾಲೋನಿ ಯೋಜನೆಗೆ 2025-26ನೇ ಸಾಲಿನಲ್ಲಿ 222 ಕೋಟಿ ರೂ ವೆಚ್ಚ
- ಪ.ಜಾತಿ, ಪ.ಪಂಗಡ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ ಒಟ್ಟು 31 ವಸತಿ ಶಾಲೆಗಳನ್ನು ಪಿಯು ಕಾಲೇಜುಗಳಾಗಿ ಉನ್ನತೀಕರಣ
- ವಸತಿ ಶಾಲೆಗಳಿಲ್ಲದ ಹೋಬಳಿಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 26 ಹೊಸ ವಸತಿ ಶಾಲೆಗ ಪ್ರಾರಂಭ
- ಪ.ಜಾತಿಯ 40, ಪ.ಪಂಗಡದ 7, ಹಿಂದುಳಿದ ವರ್ಗಗಳ 14 ವಸತಿ ಶಾಲೆಗಳು ಸೇರಿದಂತೆ ನಿವೇಶನ ಲಭ್ಯವಿರುವ ಒಟ್ಟು 61 ಕ್ರೈಸ್ ವಸತಿ ಶಾಲೆಗಳಿಗೆ 1,292 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡಗಳ ನಿರ್ಮಾಣ
- ಕ್ರೈಸ್ ವಸತಿ ಶಾಲೆಗಳಿಗೆ ಒಟ್ಟು 213 ಕೋಟಿ ರೂ. ವೆಚ್ಚದಲ್ಲಿ ಅಗತ್ಯವಿರುವ ಡೆಸ್ಕ್, ಬೆಂಚ್, ಪೀಠೋಪಕರಣ ಇತ್ಯಾದಿ ಶೈಕ್ಷಣಿಕ ಮೂಲಸೌಕರ್ಯ
- ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿರುವ ಸಮಾಜ ಕಲ್ಯಾಣ ಇಲಾಖೆಯ 34 ವಿದ್ಯಾರ್ಥಿನಿಲಯಗಳಿಗೆ 238 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡಗಳ ನಿರ್ಮಾಣ
- ಡಾ| ಬಿ.ಆರ್.ಅಂಬೇಡ್ಕರ್ ರವರು ಅಧ್ಯಯನ ಮಾಡಿರುವ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಹಾಗೂ ಕೊಲಂಬಿಯಾ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಾಂಗಕ್ಕೆ ಆಯ್ಕೆಯಾದ ಇಬ್ಬರು ವಿದ್ಯಾರ್ಥಿಗಳಿಗೆ ಡಾ। ಬಿ.ಆರ್.ಅಂಬೇಡ್ಕರ್ ಫೆಲೋಶಿಪ್ ಯೋಜನೆಯಡಿ 1 ಕೋಟಿ ರೂ.
- ಿಗಮಗಳ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಪ.ಜಾತಿಯ 2532 ನಿರುದ್ಯೋಗಿ ಯುವಕ/ಯುವತಿಯರಿಗೆ ಫಾಸ್ಟ್ ಫುಡ್ ಟ್ರಕ್ ಟ್ರೈಲರ್/ಮೊಬೈಲ್ ಕಿಚನ್ ಫುಡ್ ಕಿಯೋಸ್ಟ್ (Kiosk) ಸೌಲಭ್ಯ
- ನಿರಾಶ್ರಿತರ ಮಾನಸಿಕ ಸ್ವಸ್ಥತೆಗಾಗಿ ಬೆಂಗಳೂರಿನ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಮಾನಸಿಕ ಆರೋಗ್ಯ ಕೇಂದ್ರ ಸ್ಥಾಪನೆ
- ಬಂಜಾರ ಸಮುದಾಯದ ಪ್ರಮುಖ ಧಾರ್ಮಿಕ ಸ್ಥಳವಾದ ದಾವಣಗೆರೆ ಜಿಲ್ಲೆಯ ಸೇವಾಲಾಲ್ ಪುಣ್ಯಕ್ಷೇತ್ರ ಸೂರಗೊಂಡನ ಕೊಪ್ಪದಲ್ಲಿ ಒಂದು ವಸತಿ ಶಾಲೆ ಪ್ರಾರಂಭ
- ದೇಶದ ಪ್ರತಿಷ್ಠಿತ 100 ಶಿಕ್ಷಣ ಸಂಸ್ಥೆಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ಕೋರ್ಸ್ಗಳಿಗೆ ಪ್ರವೇಶ ಪಡೆಯುವ ಪ.ಜಾತಿಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಬೆಂಬಲ ನೀಡಲು ಪ್ರೋತ್ಸಾಹ ಧನ
- ಸರ್ಕಾರಿ, ಖಾಸಗಿ ಮೆಡಿಕಲ್ & ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ.ಜಾತಿ ಹಾಗೂ ಪ.ಪಂಗಡದ ವಿದ್ಯಾರ್ಥಿಗಳು ಅದೇ ಕಾಲೇಜಿನ ವಸತಿ ನಿಲಯಗಳಲ್ಲಿ ಪ್ರವೇಶ ಪಡೆದಿದ್ದಲ್ಲಿ, ಅವರಿಗೆ ವಸತಿ ನಿಲಯದ ವೆಚ್ಚವಾಗಿ ಪ್ರತಿ ತಿಂಗಳು 3,500/- ರೂ ಪಾವತಿ
- ಪ.ಜಾತಿ/ ಪ.ಪಂಗಡದವರು ಹೈನುಗಾರಿಕೆ ಕೈಗೊಳ್ಳಲು 2 ಎಮ್ಮೆ/ಹಸುಗಳಿಗೆ ಘಟಕ ವೆಚ್ಚದ ಶೇ.50 ರಷ್ಟು ಅಥವಾ ಗರಿಷ್ಠ 1.25 ಲಕ್ಷ ರೂ. ಸಹಾಯಧನ
- ಪ.ಜಾತಿ/ ಪ.ಪಂಗಡದ ಮಹಿಳಾ ಸ್ವಸಹಾಯ ಸಂಘಗಳಿಗೆ ನೀಡುತ್ತಿರುವ 1 ಲಕ್ಷ ರೂ. ಸಾಲ ಮತ್ತು 1.50.ಲಕ್ಷ ರೂ ಸಹಾಯ ಧನವನ್ನು 2.50 ಲಕ್ಷ ರೂ. ಸಾಲ ಮತ್ತು 2.50 ಲಕ್ಷ ರೂಗೆ ಹೆಚ್ಚಳ.
- ಸಮಾಜ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳಿಗೆ 2025-26ನೇ ಸಾಲಿನಲ್ಲಿ 488 ಕೋಟಿ ರೂ. ಅನುದಾನ
12:43 PM, 7 Mar 2025 (IST)
ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ ಅನುದಾನ
- ಗೃಹಲಕ್ಷ್ಮಿ ಯೋಜನೆಗೆ ಪ್ರಸಕ್ತ ವರ್ಷದಲ್ಲಿ ಈ ಯೋಜನೆಗೆ 28,608 ಕೋಟಿ ರೂ. ಒದಗಿಸಲಾಗಿದೆ.
- ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಿಕೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 1,000 ರೂ. ಹಾಗೂ ಸಹಾಯಕಿಯರ ಗೌರವಧನವನ್ನು 750 ರೂ. ಹೆಚ್ಚಿಸಲಾಗುವುದು.
- ಸಕ್ಷಮ ಅಂಗನವಾಡಿ ಯೋಜನೆಯಡಿ ರಾಜ್ಯದ 17,454 ಅಂಗನವಾಡಿ ಕೇಂದ್ರಗಳಿಗೆ ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಲು ತಲಾ ಒಂದು ಲಕ್ಷ ರೂ. ನಂತೆ ಒಟ್ಟು 175 ಕೋಟಿ ರೂ. ಒದಗಿಸಲಾಗುವುದು.
- ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕಾಗಿ ನಗರಸಭೆ/ ಪುರಸಭೆಗಳಲ್ಲಿ ಲಭ್ಯವಿರುವ 173 ಸಿ.ಎ ನಿವೇಶನಗಳನ್ನು ನಗರಾಭಿವೃದ್ಧಿ ಇಲಾಖೆಯಿಂದ ಶೇ.50 ರಷ್ಟು ರಿಯಾಯಿತಿ ದರದಲ್ಲಿ ಖರೀದಿಸಲು 10 ಕೋಟಿ ರೂ. ಮೀಸಲಿರಿಸಲಾಗಿದೆ.
- ಮೈಸೂರು ಮತ್ತು ಬೆಳಗಾವಿಯಲ್ಲಿರುವ ವಿಶೇಷ ಮಕ್ಕಳ ಸರ್ಕಾರಿ ವಸತಿಯುತ ಶಾಲೆಗಳನ್ನು ಉನ್ನತೀಕರಿಸಲು ಐದು ಕೋಟಿ ರೂ. ನೀಡಲಾಗುವುದು. ಇವುಗಳ ನಿರ್ವಹಣೆಯನ್ನು ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕೈಗೊಳ್ಳಲಾಗುವುದು.
- Cerebral Palsy, Muscular Dystrophy, Parkinsons ಮತ್ತು Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ನೀಡುತ್ತಿರುವ ಮಾಸಿಕ 1,000 ರೂ. ಪ್ರೋತ್ಸಾಹಧನ ಯೋಜನೆಯನ್ನು ಆಟಿಸಂ, ಬೌದ್ಧಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ಮತ್ತು ದೃಷ್ಟಿ ನ್ಯೂನ್ಯತೆ) ಕಾಯಿಲೆಗಳಿಂದ ಬಳಲುತ್ತಿರುವ ಆರೈಕೆದಾರರಿಗೂ ವಿಸ್ತರಿಸಲಾಗುವುದು.
- ಬಳ್ಳಾರಿಯ ಸರ್ಕಾರಿ ಶ್ರವಣದೋಷವುಳ್ಳ ಮಕ್ಕಳ ಶಾಲೆ ಹಾಗೂ ಹುಬ್ಬಳ್ಳಿಯ ದೃಷ್ಟಿದೋಷವುಳ್ಳ ಮಕ್ಕಳ ಶಾಲೆಗಳನ್ನು ಪ್ರಾಥಮಿಕ ಶಾಲಾ ಹಂತದಿಂದ ಪ್ರೌಢ ಶಾಲಾ ಹಂತಕ್ಕೆ ಮೇಲ್ದರ್ಜೆಗೇರಿಸಲಾಗುವುದು.
- ವಿಶೇಷ ಪಾಲನಾ ಯೋಜನೆಯಡಿ ಹೆಚ್.ಐ.ವಿ. ಸೋಂಕಿತ ಮತ್ತು ಬಾಧಿತ ಮಕ್ಕಳ ಪೌಷ್ಟಿಕ ಆಹಾರ ಮತ್ತು ಶಿಕ್ಷಣವನ್ನು ಪ್ರೋತ್ಸಾಹಿಸಲು ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಧನ ಸಹಾಯವನ್ನು 1,000 ರೂ.ನಿಂದ 2,000 ರೂ.ಗೆ ಹೆಚ್ಚಿಸಲಾಗುವುದು.
- ರಾಜ್ಯ ಅನುದಾನದಡಿಯಲ್ಲಿ ನಡೆಯುತ್ತಿರುವ ವಸತಿಯುತ ವಿಶೇಷ ಶಾಲೆಗಳ ಮಕ್ಕಳ ಪಥ್ಯಾಹಾರ ಭತ್ಯೆಯನ್ನು ಮಾಸಿಕ 1,750 ರೂ.ಗಳಿಗೆ ಹೆಚ್ಚಿಸಲಾಗುವುದು.
- ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 2025-26ನೇ ಸಾಲಿನಲ್ಲಿ ಒಟ್ಟಾರೆಯಾಗಿ 94,084 ಕೋಟಿ ರೂ. ಒದಗಿಸಲಾಗುವುದು.
- ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 2025-26ನೇ ಸಾಲಿನಲ್ಲಿ ಒಟ್ಟಾರೆಯಾಗಿ 62,033 ಕೋಟಿ ರೂ. ಒದಗಿಸಲಾಗುವುದು.
12:40 PM, 7 Mar 2025 (IST)
ಕಂದಾಯ ಇಲಾಖೆ
- ಹೊಸ ಭೂ ಕಂದಾಯ ಕಾಯ್ದೆ ಜಾರಿಗೆ.
- ಹೊಸ 100 ನಾಡ ಕಚೇರಿಗಳ ನಿರ್ಮಾಣ.
- 2025-26 ನೇ ಸಾಲಿನಲ್ಲಿ 21 ತಾಲೂಕುಗಳಲ್ಲಿ ಪ್ರಜಾಸೌಧ ನಿರ್ಮಾಣ ಮಾಡಲು ಕ್ರಮ.
- ಅನುಭವ ಮಂಟಪ ಕಾಮಗಾರಿ ಶೀಘ್ರ ಪೂರ್ಣ.
- ಸಾಮಾಜಿಕ ಭದ್ರತಾ ಪಿಂಚಣಿ ಮಂಜೂರಾತಿ ಸೇವೆ ನೀಡಲು ಸಕಾಲ ಕಾಯ್ದೆಯಡಿ ಪ್ರಸ್ತುತ ಇರುವ ಕಾಲಮಿತಿಯನ್ನು 45 ದಿನಗಳಿಂದ 21 ದಿನಗಳಿಗೆ ಇಳಿಕೆ.
- ಕರ್ನಾಟಕ ಜಲ ಭದ್ರತೆ ಮತ್ತು ವಿಪತ್ತು ತಡೆಯುವಿಕೆ ಕಾರ್ಯಕ್ರಮದಡಿ ವಿಶ್ವಬ್ಯಾಂಕ್ ಸಾಲ ಸೇರಿ 5 ಸಾವಿರ ಕೋಟಿ ರೂ. ವೆಚ್ಚದಲ್ಲಿ 2025-31 ರ ಅವಧಿಯಲ್ಲಿ ಕಾರ್ಯಕ್ರಮ.
- ಬೆಂಗಳೂರು ನಗರದಲ್ಲಿ 239 ಕೋಟಿ ರೂ. ವೆಚ್ಚದಲ್ಲಿ ಮಳೆ ನೀರು ಚರಂಡಿಗಳ ಪುನರ್ ನಿರ್ಮಾಣ ಮತ್ತು ಕೆರೆಗಳ ಪುನಃಶ್ಚೇತನ.
- ಬರ ಉಪಶನಕ್ಕಾಗಿ 100 ಕೋಟಿ ರೂ. ವೆಚ್ಚದಲ್ಲಿ ಕೃಷಿ ಹೊಂಡಗಳ ನಿರ್ಮಾಣ.
- ಕಾವೇರಿ-2.0 ತಂತ್ರಾಂಶದ ಮೂಲಕ ಸರ್ಕಾರದ ಇ-ಸ್ಟ್ಯಾಂಪಿಂಗ್ ವ್ಯವಸ್ಥೆ ಜಾರಿ.
- ನೋಂದಣಿ ಪ್ರಕ್ರಿಯೆಯನ್ನು ಸುಗಮಗೊಳಿಸಲು ಕಾವೇರಿ-2.0 ತಂತ್ರಾಂಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯಡಿಯಲ್ಲಿಯೇ ನಿರ್ವಹಿಸಲು ಕ್ರಮ.
- ಬೆಂಗಳೂರಿನ 36 ನೋಂದಣೀ ಕಚೇರಿಗಳ ಆಧುನೀಕರಣ.
12:38 PM, 7 Mar 2025 (IST)
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ
- ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ, ಪಿಂಚಣಿ ಮತ್ತು ಕೆಲವು ನಿರ್ದಿಷ್ಟ ಭತ್ಯೆಗಳನ್ನು ಪರಿಷ್ಕರಿಸಲು ವಾರ್ಷಿಕ 19,401 ಕೋಟಿ ರೂ ವೆಚ್ಚ.
- ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ (KSRSAC) ಕರ್ನಾಟಕ-ಜಿಐಎಸ್ (ಕೆ-ಜಿಐಎಸ್) ಪೋರ್ಟ್ಲ್ನಲ್ಲಿ 29 ಸಾವಿರಕ್ಕೂ ಹೆಚ್ಚು ಕಂದಾಯ ಗ್ರಾಮಗಳ ನಕ್ಷೆ ಡಿಜಿಟಲೀಕರಣಕ್ಕೆ 150 ಕೋಟಿ ರೂ.ಗಳ ನಿಗದಿ.
- ರಾಜ್ಯದ ಬಹುತೇಕ ಕಚೇರಿಗಳಲ್ಲಿ ಸರ್ಕಾರದ ಇ-ಆಫೀಸ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲು ಯೋಜನೆ.
- ಸಾರ್ವಜಿನಕರ ಕುಂದು ಕೊರತೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು AI ಚಾಲಿತ ತಂತ್ರಜ್ಞಾನದಿಂದ ನವೀಕರಿಸಿ iPGRS-2.0 ಮೂಲಕ ಕರ್ನಾಟಕ ನಾಗರಿಕ ಕೇಂದ್ರಿತ ಡಿಜಿಟಲ್ ಆಡಳಿತ ಮುಂಚೂಣಿಯಲ್ಲಿಡುವುದು.
12:22 PM, 7 Mar 2025 (IST)
ಧಾರ್ಮಿಕ ದತ್ತಿ ಇಲಾಖೆ
- ದೇವಾಲಯಗಳ ಅರ್ಚಕರಿಗೆ ಪಾವತಿಸುತ್ತಿರುವ ವಾರ್ಷಿಕ ತಸ್ತೀಕ್ ಮೊತ್ತವನ್ನು 60 ರಿಂದ 72 ಸಾವಿರಗಳಿಗೆ ಹೆಚ್ಚಳ.
- ಧಾರ್ಮಿಕ ದತ್ತಿ ಇಲಾಖೆಯ ಅಧಿಸೂಚಿತ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಸರ್ಕಾರಿ ಅಧಿಕಾರಿಗಳು, ನೌಕರರಿಗೆ ಸರ್ಕಾರದಿಂದಲೇ ನೇರವಾಗಿ ವೇತನ ಪಾವತಿ.
- ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮವನ್ನು ಧಾರ್ಮಿಕ ತಾಣವಾಗಿ ಅಭಿವೃದ್ಧಿಪಡಿಸಲು ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರ ರಚನೆ.
- ಧಾಮಿಕ ಸ್ಥಳಗಳ ರಾಜ್ಯದ ಛತ್ರಗಳಲ್ಲಿ ತಂಗುವ ಯಾತ್ರಾರ್ಥಿಗಳಿಗೆ ಮೂಲಸೌಲಭ್ಯ ಕಲ್ಪಿಸುವುದು, ನಿರ್ವಹಣೆ ಮಾಡಲು ಕರ್ನಾಟಕ ದೇವಾಲಯಗಳ ವಸತಿ ಕೋಶ ಪ್ರಾರಂಭ.
- ರಾಜ್ಯದಲ್ಲಿ ಒತ್ತುವರಿಯಾದ ದೇವಾಲಯಗಳ ಆಸ್ತಿಗಳ ಸಂರಕ್ಷಣೆ ಮಾಡಲು ಭೂ-ವರಹಾಠ ಯೋಜನೆಯಲ್ಲಿ ಸ್ಥಿರಾಸ್ತಿಗಳ ದಾಖಲೀಕರಣ.
12:13 PM, 7 Mar 2025 (IST)
ಮೈಸೂರು ಮತ್ತು ಕಲಬುರಗಿಯ ವೈದ್ಯಕೀಯ ಕಾಲೇಜುಗಳಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ
- 26 ಕೋಟಿ ರೂ. ವೆಚ್ಚದ ಬೆಂಗಳೂರಿನ ನೆಫ್ರೊ-ಯುರಾಲಾಜಿ ಸಂಸ್ಥೆಯ ಕಟ್ಟಡವನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಸಮರ್ಪಿಸಲಾಗುವುದು.
- ಬಾಗಲಕೋಟೆಯಲ್ಲಿ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಘಟಕ ವೈದ್ಯಕೀಯ ಕಾಲೇಜನ್ನು ಹಾಗೂ ಕೋಲಾರದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ವೈದ್ಯಕೀಯ ಕಾಲೇಜನ್ನು ಆರಂಭಿಸಲು ಉದ್ದೇಶಿಸಲಾಗಿದೆ.
- ಬೀದರ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕ್ಯಾನ್ಸರ್ ಪತ್ತೆ ವಿಭಾಗವನ್ನು ಆರಂಭಿಸಲಾಗುವುದು.
- ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು 297 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲಾಗುವುದು.
- ಬಾದಾಮಿ ತಾಲ್ಲೂಕಿನ ಕುಳಗೇರಿ ಕ್ರಾಸ್ ಹಾಗೂ ಚಿತ್ರದುರ್ಗದಲ್ಲಿ ಸುಸಜ್ಜಿತ ಟ್ರಾಮಾ ಕೇರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
- ಮೈಸೂರು ಮತ್ತು ಕಲಬುರಗಿ ವೈದ್ಯಕೀಯ ಕಾಲೇಜುಗಳ ವ್ಯಾಪ್ತಿಯಲ್ಲಿ ಒಟ್ಟು 100 ಕೋಟಿ ರೂ. ವೆಚ್ಚದಲ್ಲಿ ಪ್ರಾದೇಶಿಕ ಎಂಡೋಕ್ರೈನಾಲಜಿ (Endocrinology) ಕೇಂದ್ರಗಳನ್ನು ಆರಂಭಿಸಲಾಗುವುದು.
- ಮೈಸೂರು ಮತ್ತು ಕಲಬುರಗಿಯ ವೈದ್ಯಕೀಯ ಕಾಲೇಜುಗಳಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಗಳನ್ನು ತಲಾ 100 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು
- ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀನದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲಾಗುವುದು.
- ರಾಯಚೂರಿನ ರಾಜೀವ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಪೆರಿಫರೆಲ್ ಕ್ಯಾನ್ಸರ್ ಚಿಕಿತ್ಸಾ ಘಟಕ ಸ್ಥಾಪಿಸಲಾಗುವುದು.
- ಯಲಬುರ್ಗಾ, ಜೇವರ್ಗಿ ಮತ್ತು ಯಾದಗಿರಿಯಲ್ಲಿ ತಲಾ ಆರು ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ನರ್ಸಿಂಗ್ ಕಾಲೇಜುಗಳನ್ನು KKRDB ಅನುದಾನದಲ್ಲಿ ಆರಂಭಿಸಲಾಗುವುದು.
12:06 PM, 7 Mar 2025 (IST)
ನಗದು ರಹಿತ ಚಿಕಿತ್ಸೆ
- ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ ಗುತ್ತಿಗೆ / ಹೊರಗುತ್ತಿಗೆ / ಗೌರವಧನ ಆಧಾರದ ಸಿಬ್ಬಂದಿ ಹಾಗೂ ಅವಲಂಬಿತರಿಗೆ 5 ಲಕ್ಷದವರೆಗೂ ನಗದು ರಹಿತ ಚಿಕಿತ್ಸೆ ನೀಡಲು ಯೋಜನೆ.(ಸಿಬ್ಬಂದಿಯ ಮಾಸಿಕ ವಂತಿಕೆ 100 ರೂ. ಮತ್ತು ಸರ್ಕಾರದ ಮಾಸಿಕ ವಂತಿಕೆ 200 ರೂಗಳೊಂದಿಗೆ ಸುವರ್ ಆರೋಗ್ಯ ಟ್ರಸ್ಟ್ ಮೂಲಕ ಅನುಷ್ಠಾನ)
- ಪ್ರಸವ ಪೂರ್ವ ಮತ್ತು ನವಜಾತ ಶಿಶುಗಳಲ್ಲಿ ಅಪರೂಪದ ಚಯಾಪಚಯ ಖಾಯಿಲೆಗಳ ಪತ್ತೆಗಾಗಿ ಕಾರ್ಯಕ್ರಮ ; ಮೊದಲ ಹಂತದಲ್ಲಿ ಕಲ್ಯಾಣ ಕರ್ನಾಟಕ ಮತ್ತು ಗಣಿಬಾಧಿತ ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ 10 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ
- ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಗೆ ಪ್ರಥಮ ಹಂತದಲ್ಲಿ ಗಣಿ ಬಾಧಿತ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ 20 ತಾಲ್ಲೂಕುಗಳಲ್ಲಿ 9 ಕೋಟಿ ರೂ. ವೆಚ್ಚದಲ್ಲಿ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆ
- ‘ಗೃಹ ಆರೋಗ್ಯ’ ಯೋಜನೆಯಡಿ 2024-25ನೇ ಸಾಲಿನಲ್ಲಿ ಆರು ಅಸಾಂಕ್ರಾಮಿಕ ರೋಗಗಳ ತಪಾಸಣೆ ಮತ್ತು ಚಿಕಿತ್ಸಾ ಕಾರ್ಯಕ್ರಮವನ್ನು ಕೋಲಾರ ಜಿಲ್ಲೆಯಲ್ಲಿ ಪ್ರಾರಂಭಿಸಲಾಗಿದ್ದು, ಈ ಯೋಜನೆಯನ್ನು 100 ಕೋಟಿ ರೂ. ವೆಚ್ಚದಲ್ಲಿ ರಾಜ್ಯಾದ್ಯಂತ ವಿಸ್ತರಣೆ
- ರಾಜ್ಯದಲ್ಲಿ 108 ಆ್ಯಂಬುಲೆನ್ಸ್ ಸೇವೆಯನ್ನು ಉತ್ತಮಗೊಳಿಸುವ ಉದ್ದೇಶದಿಂದ ಈ ಸೇವೆಯನ್ನು ನಿಯಂತ್ರಣ ಮಾಡುವ ಕಮಾಂಡ್ ಕಂಟ್ರೋಲ್ ಕೇಂದ್ರವನ್ನು ಆರೋಗ್ಯ ಇಲಾಖೆಯ ಅಧೀನಕ್ಕೆ ಒಳಪಡಿಸುವುದರ ಮೂಲಕ ‘ಆರೋಗ್ಯ ಕವಚ’ ಸೇವೆಗೆ ಬಲ
- ಸಾಂಕ್ರಾಮಿಕ ರೋಗಗಳಾದ ಚಿಕೂನ್ಗುನ್ಯ, ಡೆಂಗ್ಯೂ ಹಾಗೂ ಮಲೆನಾಡು ಭಾಗದಲ್ಲಿ ಕಾಣಿಸಿಕೊಳ್ಳುವ ಕ್ಯಾಸನೂರು ಕಾಡಿನ ಖಾಯಿಲೆಗಳ (KFD) ಪರಿಣಾಮಕಾರಿ ನಿಯಂತ್ರಣಕ್ಕಾಗಿ 50 ಕೋಟಿ ರೂ. ವೆಚ್ಚದಲ್ಲಿ ವಿಶೇಷ ಅಭಿಯಾನ ರೂಪದಲ್ಲಿ ಮುಂಜಾಗ್ರತಾ ನಿಯಂತ್ರಣ ಕ್ರಮ
- ‘ಶ್ರವಣ ಸಂಜೀವಿನಿ’ ಯೋಜನೆಯಡಿ ಮಕ್ಕಳಲ್ಲಿ ಕಂಡುಬರುವ ಶ್ರವಣದೋಷವನ್ನು ಆರಂಭದಲ್ಲಿಯೇ ಗುರುತಿಸಿ (Cochlear Implant) ಶಸ್ತ್ರಚಿಕಿತ್ಸೆ ಹಾಗೂ ಇಂಪ್ಲಾಂಟ್ಗಳ ಬಿಡಿಭಾಗಗಳ ನಿರ್ವಹಣೆ, ದುರಸ್ತಿ, ಬದಲಾವಣೆಗೆ 12 ಕೋಟಿ ರೂ ವೆಚ್ಚ
- ಹೆಚ್ಚಿನ ಟಿ.ಬಿ ಪ್ರಕರಣಗಳಿರುವ ಆರೋಗ್ಯ ಕೇಂದ್ರಗಳಿಗೆ 2025-26ನೇ ಸಾಲಿನಲ್ಲಿ 100 True-NAT machine ಗಳನ್ನ ಒದಗಿಸಲು ಕ್ರಮ
- ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನ ನೀಡುವುದರ ಮೂಲಕ ಗೌರವಧನವನ್ನು 1,000 ರೂಗೆವ ಹೆಚ್ಚಳ
- ಆಹಾರದ ಗುಣಮಟ್ಟ ಮತ್ತು ಸುರಕ್ಷತೆಯನ್ನು ದೃಢಪಡಿಸಲು ಸಂಚಾರಿ ಆಹಾರ ಪ್ರಯೋಗಾಲಯಗಳ ಮೂಲಕ ಆಹಾರ ಮಾದರಿಗಳನ್ನು ವಿಶ್ಲೇಷಿಸಿ, ಅಸುರಕ್ಷಿತ ಮತ್ತು ಕಳಪೆ ಆಹಾರವನ್ನು ಗುರುತಿಸಿ ಕಾನೂನಿನ ಅನುಸಾರ ಕ್ರಮ
- ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಗುಣಮಟ್ಟದ ಔಷಧಗಳನ್ನು ವಿತರಿಸಲು KSMSCL ಸಂಸ್ಥೆಯನ್ನು ಬಲಪಡಿಸಲಾಗುವುದು. ವೈದ್ಯಕೀಯ ಉಪಕರಣಗಳ ಮೇಲ್ವಿಚಾರಣೆ ಮತ್ತು ನಿರ್ವಹಣೆಗಾಗಿ ತಂತ್ರಾಂಶವನ್ನು ಪರಿಚಯಿಸಲು ಕ್ರಮ
- ಸುಟ್ಟ ಗಾಯಗಳ ಸಂತ್ರಸ್ತರ ಚಿಕಿತ್ಸೆಗಾಗಿ ದೇಶದಲ್ಲಿಯೇ ಮೊದಲ ಬಾರಿಗೆ ಸುಟ್ಟ ಗಾಯಗಳ ಚಿಕಿತ್ಸಾ ನೀತಿ ಜಾರಿಗೆ ತರಲಾಗುವುದು
- ಕೆ.ಪಿ.ಎಂ.ಇ ಕಾಯ್ದೆಯಡಿ ನೀಡಲಾಗುವ ಮಾನ್ಯತೆ ಪ್ರಮಾಣ (Accreditation Certificate) 30 ದಿನಗಳ ಕಾಲಮಿತಿಯೊಳಗೆ ಒದಗಿಸಲಾಗುವುದು.
- ಮೊಬೈಲ್ ತಂತ್ರಾಂಶದ ಮೂಲಕ ಹಾಜರಾತಿ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು. ವರ್ಗಾವಣೆ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಎಲ್ಲಾ ಅಧಿಕಾರಿ ಸಿಬ್ಬಂದಿ ವರ್ಗದವರಿಗೂ ಪಾರದರ್ಶಕವಾದ ವರ್ಗಾವಣೆ ನೀತಿಯನ್ನು ರೂಪಿಸಲು ಕ್ರಮ
- ರಾಜ್ಯದಲ್ಲಿನ ತಾಲ್ಲೂಕು ಆಸ್ಪತ್ರೆಗಳ ಆಡಳಿತವನ್ನು ಜಿಲ್ಲಾ ಶಸ್ತ್ರಚಿಕಿತ್ಸಕರ ವ್ಯಾಪ್ತಿಗೆ ಒಳಪಡಿಸಲು ಕ್ರಮ
- ಇಲಾಖೆಯಲ್ಲಿ ಖಾಲಿಯಿರುವ Critical Vacancy ಹುದ್ದೆಗಳನ್ನ ತರ್ಕಬದ್ಧಗೊಳಿಸಿ ಆದ್ಯತೆಯ ಆಧಾರದಲ್ಲಿ ಭರ್ತಿಗೆ ಕ್ರಮ
11:55 AM, 7 Mar 2025 (IST)
ಆರೋಗ್ಯ ಇಲಾಖೆ
- ತಾಯಿ ಮರಣ ಪ್ರಮಾಣವನ ಶೂನ್ಯಕ್ಕೆ ಇಳಿಸಲು ಅಭಿಯಾನ ರೂಪದಲ್ಲಿ ಕ್ರಮ ಕೈಗೊಳ್ಳಲು 320 ಕೋಟಿ ರೂ
- ಗರ್ಭಿಣಿಯರಲ್ಲಿ ರಕ್ತಹೀನತೆ ತಡೆಗೆ ಹಿಂದುಳಿದ ಜಿಲ್ಲೆಗಳಲ್ಲಿ ಪೌಷ್ಟಿಕಾಂಶ ಕಿಟ್, ಪ್ರೋತ್ಸಾಹ ಧನ ಹಾಗೂ ತಾಯಂದಿರಿಗೆ ವಾತ್ಸಲ್ಯ ಕಿಟ್ಗಳು ವಿತರಣೆ.
- ಹುದ್ದೆಗಳ ಪುನರ್ ಹಂಚಿಕೆಯ ಮೂಲಕ ಪ್ರತಿ ತಾಲ್ಲೂಕು ಆಸ್ಪತ್ರೆಗಳಲ್ಲಿ MCH ತಜ್ಞರ ನೇಮಕ
- ತಾಯಿ ಮರಣದ ಕುರಿತು ರಾಜ್ಯ ತಾಂತ್ರಿಕ ತಜ್ಞರ ಸಮಿತಿಯಿಂದ ಆಡಿಟ್ ಮಾಡಿಸಿ ಶಿಫಾರಸ್ಸುಗಳನ್ನು ರಾಜ್ಯ ಅಧಿಕಾರಯುಕ್ತ ಸಮಿತಿ ಮುಂದೆ ಮಂಡನೆ. ಸಮಿತಿಯ ನಿರ್ದೇಶನದಂತೆ ತಾಯಿ ಮರಣ ತಡೆಗಟ್ಟುವ ನಿಟ್ಟಿನಲ್ಲಿ ಯೋಜನೆ
- ಅಥಣಿ, ಹುನಗುಂದ ಮತ್ತು ಮುಧೋಳದಲ್ಲಿ 50 ಹಾಸಿಗೆ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ಸ್ಥಾಪನೆ ಮಾಡಲು ಅನುಮೋದನೆ
- ಆಶಾಕಿರಣ ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದಡಿ 1.4 ಕೋಟಿ ಜನರಿಗೆ ಕಣ್ಣಿನ ತಪಾಸಣೆ, 3.3 ಲಕ್ಷ ಜನರಿಗೆ ಉಚಿತ ಕನ್ನಡಕ ವಿತರಣೆ ಮತ್ತು 93.80% ಜನರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಗಿದೆ
- ನರವೈಜ್ಞಾನಿಕ ಖಾಯಿಲೆಗಳಿಗೆ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದ (KaBHI) ಅಡಿಯಲ್ಲಿ ನಿಮ್ಹಾನ್ಸ್ ಸಹಯೋಗದೊಂದಿಗೆ ಒಟ್ಟು 2.61 ಲಕ್ಷ ತಪಾಸಣೆ ಮಾಡಿ 32,630 ನರರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಈ ಯೋಜನೆಯನ್ನು ಎಲ್ಲಾ ಹಂತದ ಆರೋಗ್ಯ ಕೇಂದ್ರಗಳಿಗೆ ವಿಸ್ತರಿಸಲು 20 ಕೋಟಿ ರೂ.
- ಮಾನಸಿಕ ಅಸ್ವಸ್ಥರ ಆರೈಕೆಗೆ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಸರ್ಕಾರೇತರ ಸಂಸ್ಥೆಗಳ ಸಹಯೋಗದೊಂದಿಗೆ ಆರೈಕೆ ಕೇಂದ್ರಗಳ ಸ್ಥಾಪನೆ
- ಬೆಂಗಳೂರು ಉತ್ತರ ತಾಲ್ಲೂಕಿನ ವ್ಯಾಪ್ತಿಯಲ್ಲಿ 200 ಹಾಸಿಗೆಯ ಅತ್ಯಾಧುನಿಕ ಮತ್ತು ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ 150 ಕೋಟಿ ರೂ. ವೆಚ್ಚ
- ಹೊಸದಾಗಿ ಘೋಷಣೆಯಾಗಿರುವ ತಾಲ್ಲೂಕುಗಳಾದ ಹನೂರು, ಅಳ್ಳಾವರ, ಅಣ್ಣಿಗೇರಿ, ಮಸ್ಕಿ, ಸಿರಿವಾರ, ಕಾಪು, ಬಬಲೇಶ್ವರ, ಕೊಲ್ದಾರ, ಚೇಳೂರು, ತೇರದಾಳದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಣ.ಪೊನ್ನಂಪೇಟೆಯಲ್ಲಿ ಹೊಸ ಸಮುದಾಯ ಆರೋಗ್ಯ ಕೇಂದ್ರ ಆರಂಭ
- ಮಾಲೂರು, ಮಾಗಡಿ, ಕುಶಾಲನಗರ, ಕೊರಟಗೆರೆ, ಜಗಳೂರು, ಸವಣೂರು, ರಾಮದುರ್ಗ ಮತ್ತು ಸವದತ್ತಿ ತಾಲ್ಲೂಕು ಮಟ್ಟದ ಆಸ್ಪತ್ರೆಗಳನ್ನು ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗಳ ನವೀಕರಣ
- ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕಣಕ್ಕೆ ಕ್ರಮ
- ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಕೂರಿನಲ್ಲಿ 200 ಹಾಸಿಗೆ ಹಾಗೂ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳ ಸ್ಥಾಪನೆ
- ಮೈಸೂರು ಜಿಲ್ಲೆಯ ತಗಡೂರು ಆರೋಗ್ಯ ಕೇಂದ್ರವನ್ನು 100 ಹಾಸಿಗೆ ಆಸ್ಪತ್ರೆಯನ್ನಾಗಿ ಮೇಲ್ದರ್ಜೆ
- ಹೆಚ್ಚಿನ ದುರಸ್ತಿ ಅಗತ್ಯವಿರುವ ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆಗಳನ್ನು 183 ಕೋಟಿ ರೂ. ವೆಚ್ಚದಲ್ಲಿ ಹಂತ ಹಂತವಾಗಿ ದುರಸ್ತಿ
- ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಸೂಚ್ಯಂಕವನ್ನು ವೃದ್ಧಿಸಲು ಒಟ್ಟು 873 ಕೋಟಿ ರೂ. ವೆಚ್ಚದಲ್ಲಿ ಕಾರ್ಯಯೋಜನೆ
11:42 AM, 7 Mar 2025 (IST)
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
- 5,200 ಕೋಟಿ ರೂ. ವೆಚ್ಚದಲ್ಲಿ ಪ್ರಗತಿ ಪಥ ರಸ್ತೆ ಅಭಿವೃದ್ಧಿ ಯೋಜನೆ ಅನುಷ್ಠಾನ.
- ಜಲ ಜೀವನ್ ಮಿಷನ್ ಯೋಜನೆಗೆ 2025-26 ಸಾಲಿಗೆ 6,050 ಕೋಟಿ ರೂ.
- ಕಲ್ಯಾಣ ಕರ್ನಾಟಕ ಭಾಗದಲ್ಲಿ 38 ವಿಧಾನಸಭಾ ಕ್ಷೇತ್ರಗಳಿಗೆ ಘೋಷಿಸಲಾದ ಕಲ್ಯಾಣ ಪಥ ಯೋಜನೆಯಡಿ 1 ಸಾವಿರ ಕೋಟಿ ರೂ. ಮೊತ್ತದ 286 ರಸ್ತೆ ಕಾಮಗಾರಿ ಶೀಘ್ರ ಪೂರ್ಣ.
- ಆಸ್ತಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಿಉ ಇ-ಸ್ವತ್ತು ಅಭಿಯಾನ ಆರಂಭ.
- ಪಂಚತಂತ್ರ ತಂತ್ರಾಂಶ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿಗಳಿಗೂ ವಿಸ್ತರಣೆ.
- ಗ್ರಾಮ ಪಂಚಾಯಿತಿ ದತ್ತು ಕಾರ್ಯಕ್ರಮ ಆರಂಭ.
- ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ 500 ಗ್ರಾಮಗಳಲ್ಲಿ ಬೂದು ನೀರು ನಿರ್ವಹಣಾ ಘಟಕಗಳ ನಿರ್ಮಾಣ.
- ರಾಜ್ಯ ಮತ್ತು ಜಿಲ್ಲಾ ರಸ್ತೆಗಳ 5,000 ಕಿ.ಮೀ ಬದಿಗಳಲ್ಲಿ ಸಸಿಗಳನ್ನು ಬೆಳೆಸಲು ಹಸಿರು ಪಥ ನಿರ್ಮಾಣ.
- ರೈತರ ಹೊಲಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಪಡಿಸಲು ಕೃಷಿ ಪಥ ಯೋಜನೆ ಜಾರಿ.
- ಕೃಷಿ ಕವಚ ಕಾರ್ಯಕ್ರಮದಡಿ ಗ್ರಾಮೀಣ ಪ್ರದೇಶಗಳಲ್ಲಿ ಒಟ್ಟು 50 ಸಾವಿರ ಹೆಕ್ಟೇರ್ ಬದು ನಿರ್ಮಾಣ.
11:39 AM, 7 Mar 2025 (IST)
ಒಳಾಡಳಿತ ಇಲಾಖೆ
- ದೌರ್ಜನ್ಯಕ್ಕೊಳಗಾದ ಮಹಿಳೆಯರು ಹಾಗೂ ಮಕ್ಕಳಿಗೆ ಪೊಲೀಸ್ ನೆರವು ಒದಗಿಸಲು ಬೆಂಗಳೂರಿನಲ್ಲಿ 60 ಮಹಿಳಾ ಔಟ್ ಪೋಸ್ಟ್ ಸ್ಥಾಪನೆ
- ಪ್ರಸ್ತಕ ಸಾಲಿನಲ್ಲಿ 7 ಪೊಲೀಸ್ ಠಾಣೆ ಹಾಗೂ ಕಚೇರಿ ಕಟ್ಟಡಗಳ ಲೋಕಾರ್ಪಣೆ
- ಈ ವರ್ಷದಲ್ಲಿ 30 ಕೋಟಿ ವೆಚ್ಚದಲ್ಲಿ 12 ಪೊಲೀಸ್ ಠಾಣೆ, ಒಂದು ಉಪವಿಭಾಗದ ಕಚೇರಿ, ಎರಡು ವೃತ್ತ ಕಚೇರಿ ಹಾಗೂ ಒಂದು ಹೊರಠಾಣೆ ಕಟ್ಟಡ ನಿರ್ಮಾಣ
- ಒಳಾಡಳಿತ ಇಲಾಖೆ ವ್ಯಾಪ್ತಿಯ ಬರುವ ಎಲ್ಲಾ ಇಲಾಖೆಗಳಿಗೆ ಒಟ್ಟು 1 ಸಾವಿರ ನೂತನ ವಾಹನಗಳ ಖರೀದಿಸಲು ಪೊಲೀಸ್ ಮೊಬಿಲಿಟಿ ಯೋಜನೆಯಡಿ 50 ಕೋಟಿ ಮೀಸಲು
- ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಮೂಲಸೌಕರ್ಯ ಒದಗಿಸಲು 10 ಕೋಟಿ ವಿಶೇಷ ಪ್ಯಾಕೇಜ್
- ಸೈಬರ್ ಹಾಗೂ ಡ್ರಗ್ಸ್ ಅಪರಾಧ ವಿಭಾಗ ಬಲಗೊಳಿಸಲು 5 ಕೋಟಿ ರೂ. ಅನುದಾನ
- ನಂದಿಬೆಟ್ಟದ ಕೂಡುಗುರ್ಕಿ ಮತ್ತು ಕೆಜಿಎಫ್ ಬಳಿ ಎರಡು ಭಾರತೀಯ ಮೀಸಲು ಪೊಲೀಸ್ ಪಡೆ ನಿರ್ಮಾಣಕ್ಕೆ 80 ಕೋಟಿ ಅನುದಾನ
- ಬೆಂಗಳೂರು ನಗರ ವ್ಯಾಪ್ತಿಯಲ್ಲಿರುವ 8 ವಿಭಾಗಗಳಿಂದ 11ಕ್ಕೆ ಹೆಚ್ಚಳ
- ಬಳ್ಳಾರಿ, ದಾವಣಗೆರೆ, ಮೈಸೂರು ಮತ್ತು ಬೆಂಗಳೂರು ಕೇಂದ್ರ ವಲಯಗಳಲ್ಲಿ ಬಾಂಬ್ ಪತ್ತೆ ನಿಷ್ಕ್ರಿಯ ದಳ ಸ್ಥಾಪನೆ
- ಪೊಲೀಸ್ ಸಿಬ್ಬಂದಿಗಳ ವಾರ್ಷಿಕ ಆರೋಗ್ಯ ತಪಾಸಣೆಗಾಗಿ ಈ ಸಾಲಿನಲ್ಲಿ 1 ಸಾವಿರ ರೂ. 1500ಕ್ಕೆ ಏರಿಕೆ
- ಬಂದೋಬಸ್ತ್ ನಿಯೋಜಿಸುವ ಪೊಲೀಸ್ ಸಿಬ್ಬಂದಿಗಳಿಗೆ ಆಹಾರ ಭತ್ಯೆ ದರ 200ರಿಂದ 300ಕ್ಕೆ ಹೆಚ್ಚಳಕ್ಕೆ ಕ್ರಮ
- ಗೃಹರಕ್ಷಕ ಹಾಗೂ ಪೌರರಕ್ಷಣಾ ಸ್ವಯಂಸೇವಕರು ಕರ್ತವ್ಯ ಸಂದರ್ಭದಲ್ಲಿ ಮರಣ ಹೊಂದಿದರೆ ಅವಲಂಬಿಕ ಕುಟುಂಬಸ್ಥರಿಗೆ ನೀಡುವ ಪರಿಹಾರ 5ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಳ
- ಕಾರಾಗೃಹ ಇಲಾಖೆ ಮೂಲಸೌಕರ್ಯ ಅಭಿವೃದ್ಧಿಗೆ 100 ಕೋಟಿ ಅನುದಾನ ಮಂಜೂರು
- ಕೆ.ಸೇಫ್- 2 ಯೋಜನೆಯಡಿ ಉಪಕರಣ ಹಾಘೂ ಕಟ್ಟಡ ನಿರ್ಮಾಣಕ್ಕೆ ಅಗ್ನಿಶಾಮಕ ಇಲಾಖೆಗೆ 50 ಕೋಟಿ ಅನುದಾನ
- ಮೈಸೂರು ನಗರ ವ್ಯಾಪ್ತಿಯಲ್ಲಿ 3 ಕೋಟಿ ವೆಚ್ಚದಲ್ಲಿ ಹೊಸ ಅಗ್ನಿಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ ಕ್ರಮ
11:30 AM, 7 Mar 2025 (IST)
ಶಿಕ್ಷಣ ಇಲಾಖೆ
- ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳ ಪ್ರಾರಂಭ
- ಶಾಲಾಮಕ್ಕಳಿಗೆ ವಿತರಿಸಲಾಗುತ್ತಿರುವ ಮೊಟ್ಟೆ / ಬಾಳೆಹಣ್ಣು ಆರು ದಿನಕ್ಕೆ ವಿಸ್ತರಣೆ ; ಅಜೀಮ್ ಪ್ರೇಮ್ ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚ
- ವಾರದಲ್ಲಿ ಮೂರು ದಿನ ವಿತರಿಸಲಾಗುತ್ತಿರುವ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿಯನ್ನು ಐದು ದಿನಗಳಿಗೆ ವಿಸ್ತರಣೆ ; ಒಟ್ಟಾರೆ 100 ಕೋಟಿ ರೂ. ವೆಚ್ಚದ ಈ ಯೋಜನೆಯ ಶೇ.25 ರಷ್ಟು ವೆಚ್ಚ ರಾಜ್ಯ ಸರ್ಕಾರವೇ ಭರಿಸಲಿದೆ.
- ಸರ್ಕಾರಿ ಪ್ರಾಥಮಿಕ ಮತ್ತು ಪೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನ ತಲಾ 2,000 ರೂ. ಹೆಚ್ಚಳ
- ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1,000 ರೂ ಹೆಚ್ಚಳ
- ರಾಜ್ಯದ ಅರ್ಹ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಣ
- 2619 ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಿಗೆ ಉತ್ತಮ ಪ್ರತಿಕ್ರಿಯೆ ; ಮುಂದಿನ ದಿನಗಳಲ್ಲಿ 70 ಕೋಟಿ ರೂ ವೆಚ್ಚದಲ್ಲಿ 500 ಶಾಲೆಗಳಿಗೆ ವಿಸ್ತರಣೆ
- ‘ಕಲಿಕಾ ಚಿಲುಮೆ’ ಕಾರ್ಯಕ್ರಮದಡಿ ಒಂದರಿಂದ ಐದನೆ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸಂತಸದಾಯಕ ಕಲಿಕಾ ಅನುಭವ
- ‘ಗಣಿತ ಗಣಕ’ ಕಾರ್ಯಕ್ರಮದಡಿ 3 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಫೋನ್ ಮೂಲಕ ವೈಯಕ್ತಿಕ ಬೋಧನೆಯೊಂದಿಗೆ ಬುನಾದಿ ಗಣಿತ ಕೌಶಲ್ಯವನ್ನು ಅಭಿವೃದ್ಧಿ, ರಾಜ್ಯಾದ್ಯಂತ ವಿಸ್ತರಣೆ
- ‘ಓದು ಕರ್ನಾಟಕ’ ಯೋಜನೆಯಡಿ 4 ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾಜ್ಞಾನದ ಕೌಶಲ್ಯಗಳ ಅಭಿವೃದ್ಧಿ
- ಸರ್ಕಾರಿ ಶಾಲೆಗಳಲ್ಲಿ ಅತೀ ಕಡಿಮೆ ಕಲಿಕಾ ಸ್ತರದಲ್ಲಿರುವ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ‘ಮರುಸಿಂಚನ’ ಕಾರ್ಯಕ್ರಮ ವಿಸ್ತರಣೆ
- ಕನ್ನಡ ಮತ್ತು ಅಂಗ್ಲ ಭಾಷೆಯನ್ನು ಆತ್ಮವಿಶ್ವಾಸದಿಂದ ಓದಲು ಹಾಗೂ ಗಣಿತದ ಆರಂಭಿಕ ಸಾಮರ್ಥ್ಯಗಳನ್ನು ಗಳಿಸಲು Ek-Step ಸಂಸ್ಥೆಯ ಸಹಯೋಗದೊಂದಿಗೆ AI ಆಧಾರಿತ ‘ಕಲಿಕಾದೀಪ’ ಕಾರ್ಯಕ್ರಮವನ್ನು 2,000 ಶಾಲೆಗಳಿಗೆ ವಿಸ್ತರಣೆ
- ‘ಜ್ಞಾನಸೇತು’ ಕಾರ್ಯಕ್ರಮದಡಿ ಸರ್ಕಾರಿ ಶಾಲೆಗಳಲ್ಲಿ ವಿಜ್ಞಾನ ಮತ್ತು ಗಣಿತ ವಿಷಯಗಳ ಬೋಧನಾ ವಿಧಾನದಲ್ಲಿ ನಾವೀನ್ಯತೆ ಅಳವಡಿಸಿ, ಖಾನ್ ಅಕಾಡೆಮಿ ಸಹಯೋಗದಲ್ಲಿ ಯೋಜನೆ
- ರಾಜ್ಯದ 5,000 ಸರ್ಕಾರಿ ಶಾಲೆಗಳ 20 ಲಕ್ಷ ವಿದ್ಯಾರ್ಥಿಗಳು ಹಾಗೂ 15,000 ಶಿಕ್ಷಕರಿಗೆ ಈ ಯೋಜನೆಯ ಪ್ರಯೋಜನ
- ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕೋಡಿಂಗ್ ಕಲಿಕೆ ಪರಿಚಯಿಸಲು ಅಗಸ್ತ್ಯ ಫೌಂಡೇಶನ್ ಸಹಯೋಗದೊಂದಿಗೆ ಐ-ಕೋಡ್ ಲ್ಯಾಬ್ ಸ್ಥಾಪನೆ. ಈ ನಿಟ್ಟಿನಲ್ಲಿ ಪ್ರಸಕ್ತ ವರ್ಷ ICT ಸೌಲಭ್ಯವಿರುವ ಆಯ್ದ 63 ಶಾಲೆಗಳನ್ನು ಹಬ್ ಎಂದು ಪರಿಗಣಿಸಿ 756 ಶಾಲೆಗಳಿಗೆ ಅನುಕೂಲ
- ‘ವಿದ್ಯಾವಿಜೇತ’ ಕಾರ್ಯಕ್ರಮದಡಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ 25,000 ವಿದ್ಯಾರ್ಥಿಗಳು CET/NEET/JEE ತರಬೇತಿ ನೀಡಲಾಗಿದ್ದು, ಸರ್ದ ಕಾರ್ಯಕ್ರಮವನ್ನು ಮುಂದುವರೆಸಲು 5 ಕೋಟಿ ರೂ
- ‘ನಿರಂತರ’ ಕಾರ್ಯಕ್ರಮದಡಿ Face Recognition ತಂತ್ರಜ್ಞಾನದ ಮೂಲಕ ಮಕ್ಕಳ ಹಾಜರಾತಿಯನ್ನು ಖಚಿತಪಡಿಸುವ ವ್ಯವಸ್ಥೆ ಜಾರಿ
- ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಜೊತೆಗೆ ಆಂಗ್ಲಭಾಷೆಯ ಕೌಶಲ್ಯ ಬೆಳೆಸಲು ರಾಜ್ಯದ 4,000 ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ವಿಭಾಗ ಪ್ರಾರಂಭ
- ರಾಜ್ಯದ 2,710 ಸರ್ಕಾರಿ ಪ್ರೌಢಶಾಲೆಗಳಲ್ಲಿ ಈಗಾಗಲೆ: ಕಂಪ್ಯೂಟರ್ ಮತ್ತು ವಿಜ್ಞಾನ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಇನ್ನೂ 500 ಶಾಲೆಗಳಿಗೆ ವಿಸ್ತರಣೆ
- ಪ್ರೌಢಶಾಲಾ / ಪದವಿ ಪೂರ್ವ ಕಾಲೇಜು ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಲು Skill at School ಕಾರ್ಯಕ್ರಮ ರೂಪಿಸಲಾಗಿದ್ದು, ಇದರಡಿ, ಆಯ್ದ 7,500 ವಿದ್ಯಾರ್ಥಿಗಳಿಗೆ ಉನ್ನತೀಕರಿಸಿದ 150 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ತರಬೇತಿ
- ಸರ್ಕಾರಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳಿಗೆ 725 ಕೋಟಿ ರೂ. ಹಾಗೂ ಅಗತ್ಯ ಪೀಠೋಪಕರಣಗಳನ್ನು ನೀಡಲಾಗಿದೆ
- ಮಧ್ಯಾಹ್ನ ಉಪಹಾರ ಯೋಜನೆಯಡಿ ರಾಜ್ಯದ 16,347 ಶಾಲೆಗಳ ಅಡುಗೆಮನೆ ಆಧುನೀಕರಣ ಕಾರ್ಯ ಮತ್ತು ಹೊಸ ಪಾತ್ರೆ ಪರಿಕರಗಳನ್ನು ಒದಗಿಸಲು 46 ಕೋಟಿ ರೂ. ವೆಚ್ಚ
- ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಕ್ಷರ ಆವಿಷ್ಕಾರ ಯೋಜನೆ ಅಡಿ 200 ಕೋಟಿ ರೂ. ವೆಚ್ಚದಲ್ಲಿ ಆಯ್ದ 50 ಶಾಲೆಗಳನ್ನು ಸುಸಜ್ಜಿತ ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಣ
- ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆಗಳನ್ನು ಭರ್ತಿ. ಮುಂದುವರೆದು, ಇಲಾಖೆಯಲ್ಲಿ ಇನ್ನೂ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತರ್ಕಬದ್ಧಗೊಳಿಸಿ 5,000 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ
- ದಕ್ಷಿಣ ಕನ್ನಡದ ಪಿಲಿಕುಳದಲ್ಲಿ ಭಾರತ್ ಸ್ಕೌಟ್ಸ್ & ಗೈಡ್ಸ್ ಅಂತರಾಷ್ಟ್ರೀಯ ಯುವಕರ ತರಬೇತಿ ಕೇಂದ್ರದ ಅಭಿವೃದ್ಧಿಗೆ 2 ಕೋಟಿ ರೂ
11:26 AM, 7 Mar 2025 (IST)
ನೀರಾವರಿ ಯೋಜನೆಗಳಿಗೆ ಆದ್ಯತೆ
- ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಕಾಲಮಿತಿಯೊಳಗೆ ಪೂರ್ಣ.
- ಒಂದು ಲಕ್ಷದ ಎಪ್ಪತ್ತೇಳು ಸಾವಿರ ಎಕರೆ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸಾಮರ್ಥ್ಯ.
- ಕೃಷ್ಣ ಮೇಲ್ದಂಡೆ ಯೋಜನೆ 3ನೇ ಹಂತ ವ್ಯಾಪ್ತಿಯ ಆಲಮಟ್ಟಿ ಅಣೆಕಟ್ಟಿನ ಗೇಟ್ ಅನ್ನು 524.256 ಮೀಟರ್ ವರೆಗೆ ಎತ್ತರಿಸುವುದು, ರೈತರಿಗೆ ಪರಿಹಾರ ವಿತರಣೆಗೆ ಕ್ರಮ.
- 2.01 ಲಕ್ಷ ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸುವ ಬಾಕಿ ಕಾಮಗಾರಿ ಅನುಷ್ಟಾನಗೊಳಿಸಲು ಕ್ರಮ.
- ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ ಪೂರ್ವ ಸಿದ್ಧತಾ ಕಾರ್ಯ ಅಂತಿಮ.
- ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರಗಳ ತೀರುವಳಿ ದೊರೆತ ಕೂಡಲೇ ಯೋಜನೆ ಅನುಷ್ಠಾನ.
- ಕಳಸಾ – ಬಂಡೂರಾ ನಾಲಾ ತಿರುವು ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ದೊರೆತ ತಕ್ಷಣ ಕಾಮಗಾರಿ ಆರಂಭ.
- ಕೃಷ್ಣಾ ಕಣಿವೆ, ಕಾವೇರಿ ಕಣಿವೆ ಹಾಗೂ ಇತರ ನದಿಗಳ ಕಣಿವೆಯ ವಿವಿಧ ಯೋಜನೆಗಳಡಿ ಬಾಕಿ ಕಾಮಗಾರಿಗಳ ಪೂರ್ಣಗೊಳಿಸಲು ಕ್ರಮ.
- ಜಲಸಂಪನ್ಮೂಲ ಇಲಾಖೆಯಲ್ಲಿ ಕಾಮಗಾರಿಗಳ ಅಂದಾಜು ತಯಾರಿಕೆಯಲ್ಲಿ ಏಕರೂಪದ ತಾಂತ್ರಿಕ ಮಾನದಂಡ ಜಾರಿ.
- ಸಣ್ಣ ನೀರಾವರಿ: ಎತ್ತಿನಹೊಳೆ ಯೋಜನೆಯಿಂದ ಮಧುಗಿರಿ ತಾಲೂಕಿನ 45 ಕೆರೆಗಳು, ಕೊರಟಗೆರೆ ತಾಲೂಕಿನ 62 ಕೆರೆಗಳಿಗೆ ನೀರು ತುಂಬಿಸಲು 553 ಕೋಟಿ ರೂ. ಅನುಷ್ಠಾನಗೊಳಿಸಲು ಕ್ರಮ.
- 1,080 ಕೋಟಿ ರೂ. ಮೊತ್ತದ ವೃಷಭಾವತಿ ವ್ಯಾಲಿ ಮೊದಲನೇ ಹಂತದ 70 ಕೆರೆ ತುಂಬಿಸುವ ಯೋಜನೆ.
- ರಾಜ್ಯಾದ್ಯಂತ ಸಣ್ಣ ನೀರಾವರಿ ಯೋಜನೆಗಳಿಗೆ 2 ಸಾವಿರ ಕೋಟಿ ರೂ.
11:23 AM, 7 Mar 2025 (IST)
ಶಕ್ತಿ ಯೋಜನೆಗೆ 5,300 ಕೋಟಿ ರೂ. ಅನುದಾನ
ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ:
- MSME ಘಟಕಗಳಿಗೆ ನೆರವು ನೀಡಲು 185 ಕೋಟಿ ರೂ.
- 90,645 ನೇಕಾರರಿಗೆ ಉಚಿತ ವಿದ್ಯುತ್ ಹಾಗೂ ರಿಯಾಯಿತಿ ವಿದ್ಯುತ್ ಸವಲತ್ತು ಒದಗಿಸಲು 100 ಕೋಟಿ ರೂ.
- ಡೀಪ್ ಟೆಕ್ ಅಭಿವೃದ್ಧಿಗಾಗಿ 100 ಕೋಟಿ ರೂ. ಕಾರ್ಪಸ್ ನಿಧಿ ಹಾಗೂ 300 ಕೋಟಿ ರೂ. ಫಂಡ್ ಆಫ್ ಫಂಡ್ ಸ್ಥಾಪನೆ
- ಬೆಂಕಿಗೆ ಹಾನಿಯಾದ ಬೆಂಗಳೂರು ಬಯೋ-ಇನ್ನೋವೇಷನ್ ಸೆಂಟರ್ನ ಪುನರ್ ನಿರ್ಮಾಣಕ್ಕೆ ಒಟ್ಟು 57 ಕೋಟಿ ರೂ.
ಪ್ರವಾಸೋದ್ಯಮ ಇಲಾಖೆ
- ರಾಜ್ಯದ 10 ಜಿಲ್ಲೆಗಳಲ್ಲಿ ಪ್ರವಾಸಿ ತಾಣ ಅಭಿವೃದ್ಧಿ ಪಡಿಸಲು 50 ಕೋಟಿ ಅನುದಾನ
ಸಾರಿಗೆ ಇಲಾಖೆ:
- ಶಕ್ತಿ ಯೋಜನೆಗೆ 5,300 ಕೋಟಿ ರೂ. ಅನುದಾನ
- ಬೆಂಗಳೂರು ಮೆಜೆಸ್ಟಿಕ್ ಬಸ್ ನಿಲ್ದಾಣ ಜಾಗವನ್ನು ಪ್ರಾಜೆಕ್ಟ್ ಮೆಜೆಸ್ಟಿಕ್ ಯೋಜನೆಯಡಿ ಸಾರಿಗೆ ಹಬ್ ನಿರ್ಮಾಣ
- ಹೊನ್ನಾವರ, ಚಾಮರಾಜನಗರ, ಚಿತ್ರದುರ್ಗದಲ್ಲಿ 20 ಕೋಟಿ ವೆಚ್ಚದಲ್ಲಿ ಸ್ವಯಂಚಾಲಿತ ಪರೀಕ್ಷಾ ಪಥ ನಿರ್ಮಾಣ.12 ಕೋಟಿ ರೂ. ಅನುದಾನ
- 25 ಕೋಟಿ ರೂ.ವೆಚ್ಚದಲ್ಲಿ ಐದು ಪ್ರಾದೇಶಿಕ ಸಾರಿಗೆ ಕಚೇರಿಗಳ ದಾಖಲೆ ಡಿಜಿಟಲೀಕರಣ
- ಒಟ್ಟು 60 ಸ್ಥಳಗಳಲ್ಲಿ 50 ಕೋಟಿ ರೂ. ವೆಚ್ಚದಲ್ಲಿ AI ಆಧಾರಿತ ವಿದ್ಯುನ್ಮಾನ ಕ್ಯಾಮರಾ ಅಳವಡಿಕೆ
- 14,750 ಹೊಸ ವಿದ್ಯುತ್ ಚಾಲಿತ ಬಸ್ ಸೇರ್ಪಡೆ ಗುರಿ. ಈ ಪೈಕಿ ಬಿಎಂಟಿಸಿಗೆ 9000 ಬಸ್ ಸೇರ್ಪಡೆ
- ವಿವಿಧ ಸಾರಿಗೆ ನಿಗಮಗಳಿಗೆ ಜಿಸಿಸಿ ಆಧಾರದಲ್ಲಿ 1,000 ಹೊಸ ಡೀಸೆಲ್ ಬಸ್
- ಕೆಆರ್.ಪುರಂನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಾಣ
11:14 AM, 7 Mar 2025 (IST)
ಗೃಹ ಜ್ಯೋತಿಗೆ 10,100 ಕೋಟಿ ರೂ. ಅನುದಾನ
- ಸಾರ್ವಜನಿಕ ವಿತರಣಾ ವ್ಯವಸ್ಥೆ ಸುಧಾರಣೆಗೆ 5 ಕೋಟಿ ವೆಚ್ಚದಲ್ಲಿ ಸಗಟು ಗೋದಾಮುಗಳಿಗೆ ಸಿಸಿಟಿವಿ, ಜಿಪಿಎಸ್ ಆಧಾರಿತ ವಾಹನ ಟ್ರಾಕಿಂಗ್ ವ್ಯವಸ್ಥೆ ಮತ್ತು ಕಮಾಂಡ್ ಕಂಟ್ರೋಲ್ ಕೇಂದ್ರ ಸ್ಥಾಪನೆ.
- ಅನ್ನಭಾಗ್ಯ ಯೋಜನೆ ಸಗಟು ಲಾಭಾಂಶ ಪ್ರತಿ ಕ್ವಿಂಟ್ವಾಲ್ ಗೆ 35 ರೂ. ನಿಂದ 45 ರೂ. ಹೆಚ್ಚಳ
- ಗೃಹ ಜ್ಯೋತಿಗೆ 10,100 ಕೋಟಿ ರೂ. ಅನುದಾನ
- 8,833 ಕೋಟಿ ವೆಚ್ಚದಲ್ಲಿ 100 ಹೊಸ ಉಪಕೇಂದ್ರಗಳ ಸ್ಥಾಪನೆ
ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ:
- MSME ಘಟಕಗಳಿಗೆ ನೆರವು ನೀಡಲು 185 ಕೋಟಿ ರೂ.
- 90,645 ನೇಕಾರರಿಗೆ ಉಚಿತ ವಿದ್ಯುತ್ ಹಾಗೂ ರಿಯಾಯಿತಿ ವಿದ್ಯುತ್ ಸವಲತ್ತು ಒದಗಿಸಲು 100 ಕೋಟಿ ರೂ.
- ಡೀಪ್ ಟೆಕ್ ಅಭಿವೃದ್ಧಿಗಾಗಿ 100 ಕೋಟಿ ರೂ. ಕಾರ್ಪಸ್ ನಿಧಿ ಹಾಗೂ 300 ಕೋಟಿ ರೂ. ಫಂಡ್ ಆಫ್ ಫಂಡ್ ಸ್ಥಾಪನೆ
- ಬೆಂಕಿಗೆ ಹಾನಿಯಾದ ಬೆಂಗಳೂರು ಬಯೋ-ಇನ್ನೋವೇಷನ್ ಸೆಂಟರ್ನ ಪುನರ್ ನಿರ್ಮಾಣಕ್ಕೆ ಒಟ್ಟು 57 ಕೋಟಿ ರೂ.
11:10 AM, 7 Mar 2025 (IST)
ಶಾಲಾ ಮಕ್ಕಳಿಗೆ ಆರು ದಿನ ಮೊಟ್ಟೆ ವಿತರಣೆ
- ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ 6 ದಿನಕ್ಕೆ ವಿಸ್ತರಣೆ. ಅಜೀಂ ಪ್ರೇಮ್ಜಿ ಸಹಯೋಗದಲ್ಲಿ ವಾರದಲ್ಲಿ 6 ದಿನ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ನೀಡಲು 1,500 ಕೋಟಿ ರೂ. ಮೀಸಲಿಡಲಾವುದು ಎಂದು ಸಿಎಂ ತಿಳಿಸಿದ್ದಾರೆ.
11:05 AM, 7 Mar 2025 (IST)
ಕಾರ್ಮಿಕ ಇಲಾಖೆ
- ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಬ್ಯಾಸಕ್ಕೆ ಪ್ರೋತ್ಸಾಹಿಸಲು ಕಟ್ಟಡ ರಾಜ್ಯದ 31 ಜಿಲ್ಲೆಗಳಲ್ಲಿ 6 ರಿಂದ 12ನೇ ತರಗತಿಯವರೆಗೂ ವಸತಿ ಶಾಲೆಗಳ ಪ್ರಾರಂಭಕ್ಕೆ 750 ಕೋಟಿ ರೂ.ಗಳ ನಿಗದಿ.
- ನೋಂದಾಯಿತ ಕಾರ್ಮಿಕರಿಗೆ ಶೈಕ್ಷಣಿಕ, ವೈದ್ಯಕೀಯ ಸೌಲಭ್ಯಕ್ಕಾಗಿ ನೀಡುತ್ತಿರುವ ಸಹಾಯಧನ ದ್ವಿಗುಣ
- ಸಹಜ ಮರಣ ಹೊಂದಿದಲ್ಲಿ 1.5 ಲಕ್ಷ ಪರಿಹಾರ. ಕೆಲಸದ ಸ್ಥಳದಲ್ಲಿ ಮರಣಹೊಂದಿದರೆ 8 ಲಕ್ಷ ರೂ.ಗಳ ಪರಿಹಾರ ಘೋಷಣೆ.
- ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯಡಿ 5 ಲಕ್ಷ ಮಿತಿ ಪೂರ್ಣಗೊಂಡಲ್ಲಿ ಹೃದ್ರೋಗ, ಕ್ಯಾನ್ಸ್ರಗೆ 5 ಲಕ್ಷ ರೂ. ಇತರೆ ಕಾಯಿಲೆಗಳಿಗೆ 2 ಲಕ್ಷ ರೂ.ಗಳನ್ನು ಪಾವತಿ.
- ರಾಜ್ಯ ವಿಮಾ ಆಸ್ಪತ್ರೆ(ಇಎಸ್ಐ) ಮೂಲಸೌಲಭ್ಯ ಹೆಚ್ಚಳ ಮಾಡಲು 51 ಕೋಟಿ ರೂ.ಗಳ ನಿಗದಿ
11:03 AM, 7 Mar 2025 (IST)
ಬೆಂಗಳೂರು ನಗರಾಭಿವೃದ್ಧಿ
- ಬೆಂಗಳೂರು ನಗರ ಮೂಲಸೌಕರ್ಯ ಅಭಿವೃದ್ಧಿಗೆ ನೀಡುತ್ತಿದ್ದ 3 ಸಾವಿರ ಕೋಟಿಯಿಂದ 7 ಸಾವಿರ ಕೋಟಿ ಅನುದಾನ ಹೆಚ್ಚಳ
- 40 ಸಾವಿರ ಕೋಟಿ ವೆಚ್ಚದಲ್ಲಿ ಉತ್ತರ-ದಕ್ಷಿಣ ಮತ್ತು ಪೂರ್ವ- ಪಶ್ಚಿಮ ಸುರಂಗ ಮಾರ್ಗದ ಕಾರಿಡಾರ್ ನಿರ್ಮಿಸಲು ಪ್ರಸ್ತಕ ಸಾಲಿನಲ್ಲಿ 19 ಸಾವಿರ ಕೋಟಿ ಮೀಸಲು
- ನಮ್ಮ ಮೆಟ್ರೋ ಹಂತ-3 ಯೋಜನೆಯೊಂದಿಗೆ 8.916 ಕೋಟಿ ರೂ.ವೆಚ್ಚದಲ್ಲಿ 40.50 ಕಿ.ಮೀ ಉದ್ದದ ಡಬಲ್ ಡೆಕ್ಕರ್ ಫ್ಲೇಓವರ್ ರಸ್ತೆ ನಿರ್ಮಾಣ
- ಬಿಬಿಎಂಪಿ ವ್ಯಾಪ್ತಿಯ 460 ಕಿ.ಮೀ.ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆ ಜಾಲ ನಿರ್ಮಾಣಕ್ಕೆ 660 ಕೋಟಿ ಮೀಸಲು
- ರಾಜಧಾನಿಯಲ್ಲಿ 120 ಕಿ.ಮೀ. ಉದ್ದದ ಮೇಲುಸೇತುವೆ ಹಾಗೂ ಗ್ರೇಡ್ ಸಪರೇಟರ್ ನಿರ್ಮಾಣಕ್ಕೆ ಒತ್ತು
- ಬ್ರ್ಯಾಂಡ್ ಬೆಂಗಳೂರು ಅಭಿಯಾನದ ಅಡಿಯಲ್ಲಿ ಮುಂದಿನ ಮೂರು ವರ್ಷಗಳಲ್ಲಿ 413 ಕೋಟಿ ವೆಚ್ಚದಲ್ಲಿ ಸಮಗ್ರ ಆರೋಗ್ಯ ಯೋಜನೆ ಜಾರಿ
- ನಗರದ ಒಳಚರಂಡಿ ಜಾಲ ಹಾಘೂ ಎಸ್ ಟಿಪಿ ನಿರ್ಮಾಣಕ್ಕೆ ಬಿಬಿಎಂಪಿ ಹಾಗೂ ಬೆಂಗಳೂರು ಜಲಮಂಡಳಿಗೆ 3 ಸಾವಿರ ಕೋಟಿ ಆರ್ಥಿಕ ನೆರವು
- ಎಸ್ ಟಿಪಿ ಘಟಕಗಳ ತ್ಯಾಜ್ಯ ಬಳಸಿ ಬಯೋಗ್ಯಾಸ್ ಆಧಾರಿತ ಮತ್ತು ಕಾರ್ಬನ್ ಕ್ರೆಡಿಟ್ ಉಪಯೋಗ ಪಡೆಯಲು ಪಿಪಿಪಿ ಮಾದರಿ ಯೋಜನೆ ಜಾರಿ
- ಮೆಟ್ರೊ ಜಾಲವನ್ನ ದೇವನಹಳ್ಳಿಯವರೆಗೆ ವಿಸ್ತರಣೆ
- ಕಾವೇರಿ ಹಂತ-6 ಅನುಷ್ಠಾನಕ್ಕಾಗಿ ವಿಸ್ಕೃತ ಯೋಜನಾ ವರದಿಗೆ ತಯಾರಿಗೆ ಅಸ್ತು
10:57 AM, 7 Mar 2025 (IST)
ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ
ಮಹಿಳಾ ಮತ್ತು ಮಕ್ಕಳ ಕಲ್ಯಾಣ:
- ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 1,000 ರೂ., ಸಹಾಯಕಿಯರಿಗೆ 750 ರೂ. ಗೌರವಧನ ಹೆಚ್ಚಳ
- ಗೃಹ ಲಕ್ಷ್ಮಿ ಯೋಜನೆಗೆ 2025-26 ಸಾಲಿನಲ್ಲಿ 28,608 ಕೋಟಿ ರೂ. ಅನುದಾನ
- ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗೆ ಒಟ್ಟು 94,084 ಕೋಟಿ ರೂ. ಅನುದಾನ
- ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗೆ 62,033 ಕೋಟಿ ರೂ. ಅನುದಾನ
10:52 AM, 7 Mar 2025 (IST)
ರೇಷ್ಮೆ ಕೃಷಿಗೆ ಉತ್ತೇಜನ
- ಮಧ್ಯಮ ವರ್ಗದ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ 120 ಕೊನೆಗಳ ಸ್ವಯಂಚಾಲಿತ ರೀಲಿಂಗ್ ಘಟಕಗಳ ಸ್ಥಾಪನೆ.
- ರಾಮನಗರ ಮತ್ತು ಶಿಡ್ಲಘಟ್ಟ ಹೈಟೆಕ್ ರೇಷ್ಮೆ ಗೂಡಿನ ಮೊದಲ ಹಂತದ ಕಾಮಗಾರಿ ಪೂರ್ಣ. ಪ್ರಸ್ತಕ ಸಾಲಿನಲ್ಲಿ ಎರಡನೇ ಹಂತದ ಕಾಮಗಾರಿಗೆ 250 ಕೋಟಿ ರೂ. ವೆಚ್ಚ.
- ಮೈಸೂರಿನಲ್ಲಿ ರೇಷ್ಮೆಗೂಡಿನ ಮಾರುಕಟ್ಟೆ ನಬಾರ್ಡ್ ಸಹಯೋಗದಲ್ಲಿ ಸ್ಥಾಪನೆ.
- ರೇಷ್ಮೆ ಬೆಳೆ ವಿಸ್ತರಿಸಲು 55 ಕೋಟಿ ರೂ. ಅನುದಾನ.
- ಪಶುಸಂಗೋಪನೆ : ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ ಅನುಗ್ರಹ ಯೋಜನೆ ಜಾರಿ.
- 2025-26 ನೇ ಸಾಲಿನಲ್ಲಿ 50 ನೂತನ ಪಶು ಚಿಕಿತ್ಸಾಲಯ ಪ್ರಾರಂಭ.
- 100 ಪಶು ವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡ ನಬಾರ್ಡ್ ಸಹಯೋಗದಲ್ಲಿ ನಿರ್ಮಾಣ.
- ಅರಣ್ಯ ಇಲಾಖೆ ಹಾಗೂ ನರೇಗಾ ಸಹಯೋಗದೊಂದಿಗೆ ಮೇವಿನ ಮರಗಳ ನೆಡುತೋಪು ಅಭಿವೃದ್ಧಿ.
10:49 AM, 7 Mar 2025 (IST)
ತೆರಿಗೆ ಸಂಗ್ರಹ ಗುರಿ
ವಾಣಿಜ್ಯ ತೆರಿಗೆ:
2025-26ರಲ್ಲಿ 1,20,000 ಕೋಟಿ ರೂ. ಸಂಗ್ರಹ ಗುರಿ
2024-25ರಲ್ಲಿ 1,05,000 ಸಂಗ್ರಹಿಸುವ ನಿರೀಕ್ಷೆ
ಅಬಕಾರಿ:
2025-26 ಸಾಲಿನಲ್ಲಿ 40,000 ಕೋಟಿ ಸಂಗ್ರಹದ ಗುರಿ
2024-25 ಸಾಲಿನ ಮಾರ್ಚ್ ಅಂತ್ಯಕ್ಕೆ 36,500 ಸಂಗ್ರಹದ ನಿರೀಕ್ಷೆ
ನೋಂದಣಿ ಮತ್ತು ಮುದ್ರಾಂಕ ಶುಲ್ಕ:
2025-26 ಸಾಲಿನಲ್ಲಿ 28,000 ಕೋಟಿ ರೂ. ಸಂಗ್ರಹದ ಗುರಿ
2024-25ರಲ್ಲಿ 24,000 ಕೋಟಿ ರೂ. ಸಂಗ್ರಹದ ನಿರೀಕ್ಷೆ
ಮೋಟಾರು ವಾಹನ ತೆರಿಗೆ:
2025-26 ಸಾಲಿನಲ್ಲಿ 15,000 ಕೋಟಿ ರೂ. ಸಂಗ್ರಹದ ಗುರಿ
2024-25 ಸಾಲಿನಲ್ಲಿ 12,500 ಕೋಟಿ ರೂ. ಸಂಗ್ರಹದ ನಿರೀಕ್ಷೆ
ಗಣಿ ಮತ್ತು ಭೂ ವಿಜ್ಞಾನ:
2025-26ರಲ್ಲಿ 3,000 ಕೋಟಿ ರೂ. ಖನಿಜ ತೆರಿಗೆ ಸಂಗ್ರಹದ ಗುರಿ. ಒಟ್ಟು 9,000 ಕೋಟಿ ರೂ. ತೆರಿಗೆಯೇತರ ರಾಜಸ್ವ ಸಂಗ್ರಹದ ಗುರಿ
10:41 AM, 7 Mar 2025 (IST)
ಡಿಜಿಟಲ್ ಕೃಷಿ ಕೇಂದ್ರ
- ರಾಜ್ಯದಲ್ಲಿ ಇನ್ನು 5 ಸಾವಿರ ಕಿರು ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆ.
- ಪ್ರಸ್ತಕ ವರ್ಷದಲ್ಲಿ 12 ಸಾವಿರ ಕೃಷಿ ಹೊಂಡ ನಿರ್ಮಾಣ.
- ಡಿಜಿಟಲ್ ಕೃಷಿ ಸೇವೆಗಳ ಕೇಂದ್ರ ಸ್ಥಾಪನೆ.
- ಜೈವಿಕ ಗೊಬ್ಬರ ಮತ್ತಿತರ ಗುಣಮಟ್ಟವನ್ನು ಪರೀಕ್ಷಿಸಲು ಇಲಾಖೆಯಡಿ 58 ಪ್ರಯೋಗಾಲಯಗಳನ್ನು ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಬಲವರ್ಧನೆ.
- ಪ್ರಸ್ತಕ ಸಾಲಿನಲ್ಲಿ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸಮೀಕ್ಷೆಯನ್ನು ಪೂರ್ಣಗೊಳಿಸಲು ಕ್ರಮ.
- ಮಂಡ್ಯ ಕೃಷಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಅನುಮೋದನೆ, ಮೂಲಸೌಕರ್ಯ ಕಲ್ಪಿಸಲು 25 ಕೋಟಿ ರೂ. ಒದಗಿಸಿ, ಪ್ರಸಕ್ತ ಸಾಲಿನಲ್ಲಿ ತರಗತಿಗಳ ಆರಂಭ.
- ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸ್ಯ ಫೀನೋಟೈಪಿಂಗ್ ಸೌಲಭ್ಯ.
- ರೈತರಿಗೆ ಸೂಕ್ತ ಮಾರುಕಟ್ಟೆಯನ್ನು ಕಲ್ಪಿಸುವ ಉದ್ದೇಶದಿಂದ 20 ಕೋಟಿ ರೂ. ಮೊತ್ತದ ಸಾವಯವ ಮತ್ತು ಸಿರಿಧಾನ್ಯಗಳ ಹಬ್ ಸ್ಥಾಪನೆ.
- ವಿಜಯಪುರದ ಮುದ್ದೇಬಿಹಾಳ ತಾಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆ.
- ತೋಟಗಾರಿಕೆ ಇಲಾಖೆ : ಸಮಗ್ರ ತೋಟಗಾರಿಕಾ ಅಭಿವೃದ್ಧಿ ಯೋಜನೆ-2 ಜಾರಿ. ಈ ಯೋಜನೆಗೆ 95 ಕೋಟಿ ರೂ. ಅನುದಾನ.
- ರೈತರಿಗೆ ಮಾಹಿತಿ ಒದಗಿಸಲು ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಸ್ಪೇಸ್ ಸೈನ್ಸ್ ಟೆಕ್ನಾಲಜಿ ಮತ್ತು ಖಾಸಗಿ ಸಹಯೋಗದಲ್ಲಿ ಜ್ಞಾನ ಕೋಶ ಸ್ಥಾಪನೆ.
- ತೋಟಗಾರಿಕಾ ಬೆಳೆಗಳ ಹನಿ ನೀರಾವರಿ ಕಾರ್ಯಕ್ರಮದಡಿ ಸುಮಾರು 52 ಸಾವಿರ ಫಲಾನುಭವಿಗಳಿಗೆ 426 ಕೋಟಿ ರೂ. ಸಹಾಯ ಧನ.
- ಮಲೆನಾಡು ಜಿಲ್ಲೆಗಳಲ್ಲಿ ಎಲೆ ಚುಕ್ಕೆ ರೋಗದ ನಿಯಂತ್ರಣಕ್ಕೆ ಸಸ್ಯ ಸಂರಕ್ಷಣಾ ಕ್ರಮಗಳೀಗೆ 62 ಕೋಟಿ ರೂ.
- ಜೊಯಿಡಾ ತಾಲೂಕು ಅನ್ನು ರಾಜ್ಯದ ಪ್ರಥಮ ಸಾವಯುವ ತಾಲೂಕನ್ನಾಗಿ ನಿರ್ಮಾಣ ಮಾಡಲಾಗುವುದು.
10:37 AM, 7 Mar 2025 (IST)
ಕೃಷಿಗೆ ಅನುದಾನ
- ಕೃಷಿ : ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ಅನುದಾನ.
- 1.81 ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಗೆ 440 ಕೋಟಿ ರೂ. ಸಹಾಯ ಧನ.
10:35 AM, 7 Mar 2025 (IST)
4,09,549 ಕೋಟಿ ರೂ. ಗಾತ್ರದ ಬಜೆಟ್ ಮಂಡನೆ
- 4,09,549 ಕೋಟಿ ರೂ. ಗಾತ್ರದ ಬಜೆಟ್ ಮಂಡನೆ
- 2025-26 ಸಾಲಿನಲ್ಲಿ ಪಂಚ ಗ್ಯಾರಂಟಿಗೆ 51,034 ಕೋಟಿ ರೂ. ಅನುದಾನ
- ಬಂಡವಾಳ ವೆಚ್ಚ 26,474 ಕೋಟಿ ರೂ.
- ರಾಜಸ್ವ ವೆಚ್ಚ ಅಂದಾಜು 3,11,739 ಕೋಟಿ ರೂ.
- 19,262 ಕೋಟಿ ರೂ. ರಾಜಸ್ವ ಕೊರತೆಯ ಬಜೆಟ್ ಮಂಡನೆ
- 1,16,000 ಕೋಟಿ ರೂ. ಸಾಲದ ಮೊರೆ
- ಒಟ್ಟು ರಾಜಸ್ವ ಸ್ವೀಕೃತಿ ಅಂದಾಜು 2,92,477 ಕೋಟಿ ರೂ.
- ಈ ಪೈಕಿ 2,08,100 ಕೋಟಿ ಸ್ವಂತ ತೆರಿಗೆ ಸಂಗ್ರಹದ ಗುರಿ
10:33 AM, 7 Mar 2025 (IST)
20 ಲಕ್ಷ ಉದ್ಯೋಗ ಸೃಷ್ಟಿ
- ಕರ್ನಾಟಕ ವೇಗವಾಗಿ ಬೆಳೆಯುತ್ತಿರುವ ರಾಜ್ಯ. ಪ್ರಸಕ್ತ ಸಾಲಿನಲ್ಲಿ ದೇಶದ ಆರ್ಥಿಕತೆಗಿಂತ ರಾಜ್ಯದ ಆರ್ಥಿಕತೆ ಉತ್ತಮವಾಗಿದೆ.
- ಕೈಗಾರಿಕಾ ಮತ್ತು ಉತ್ಪಾದನಾ ವಲಯದ ಅಭಿವೃದ್ಧಿ ಸರ್ಕಾರ ಬದ್ಧವಾಗಿದೆ. 2023ರ ವೇಳೆಗೆ ರಾಜ್ಯದಲ್ಲಿ 20 ಲಕ್ಷ ಉದ್ಯೋಗ ಸೃಜಿಸುವ ಯೋಜನೆ ಇದೆ.
10:33 AM, 7 Mar 2025 (IST)
ಬ್ರ್ಯಾಂಡ್ ಬೆಂಗಳೂರು
- ನಗರಾಭಿವೃದ್ಧಿ, ಕೃಷಿ, ಶಿಕ್ಷಣಕ್ಕೆ ಬಜೆಟ್ನಲ್ಲಿ ಆದ್ಯತೆ. ಜೊತೆಗೆ ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ಬೆಂಗಳೂರಿಗೆ ಎಲ್ಲ ಮೂಲಭೂತ ಸೌಕರ್ಯ ಒದಗಿಸಲು ಕ್ರಮ
- ಬಜೆಟ್ನಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಜೊತೆಗೆ 6 ಅಭಿವೃದ್ಧಿ ಆಯಾಮ ಗುರುತಿಸಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ. ಜೊತೆಗೆ ಗ್ರಾಮೀಣ ಅಭಿವೃದ್ಧಿಯೆ ಒತ್ತು ನೀಡುತ್ತೇವೆ.
- ಗೋಪಾಲಕೃಷ್ಣ ಅಡಿಗರ ನುಡಿ ಮೂಲಕ ಬಜೆಟ್ ಮಂಡನೆ ಆರಂಭಿಸಿದ ಸಿಎಂ
10:11 AM, 7 Mar 2025 (IST)
ಬಜೆಟ್ ಮಂಡನೆ ಆರಂಭ
- ಮಂಡಿ ನೋವಿನ ಹಿನ್ನೆಲೆಯಲ್ಲಿ ಕುಳಿತುಕೊಂಡೇ ಬಜೆಟ್ ಮಂಡನೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ
- 15 ಬಾರಿ ನಿಂತುಕೊಂಡು ಬಜೆಟ್ ಓದಿದ್ದ ಸಿಎಂ, ಈ ಬಾರಿ ಮಂಡಿ ನೋವಿನಿಂದಾಗಿ ಕುಳಿತುಕೊಂಡು ಬಜೆಟ್ ಓದುತ್ತಿದ್ದಾರೆ.
ಬೆಂಗಳೂರು
Vande Mataram ಸಂಪೂರ್ಣ ಹಾಡುವ ವಿಚಾರಕ್ಕೆ ರಾಜಕೀಯ ರಂಪಾಟ; CM ಡಿಕೆಶಿ ಹೇಳಿದ್ದೇನು?
ಬೆಂಗಳೂರು: ‘Vande Mataram’ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕು ಎಂಬ ಕಾಂಗ್ರೆಸ್ ಪಕ್ಷದ ನಿರ್ಧಾರಕ್ಕೆ ಕರ್ನಾಟಕ ಸರ್ಕಾರ ಬದ್ಧವಾಗಿರಲಿದೆ ಎಂದು ಮುಖ್ಯಮಂತ್ರಿ D.K.Shivkumar ಸ್ಪಷ್ಟಪಡಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಗೀತೆಯ ಎಲ್ಲಾ ಆರು ಚರಣಗಳನ್ನು ಹಾಡಲಾಗಿದ್ದರೂ, ಅದು ತಮ್ಮ ಗಮನಕ್ಕೆ ಬಾರದೆ ನಡೆದ ಘಟನೆ ಎಂದು ಅವರು ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್ ಕೈಗೊಂಡಿರುವ ನಿರ್ಧಾರದಂತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
‘ಪಕ್ಷದ ನಿರ್ಧಾರಕ್ಕೆ ನಾನು ಬದ್ಧ’
ಇಂಡಿಯಾ ಟುಡೇ ಆಯೋಜಿಸಿದ್ದ ರೌಂಡ್ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ತಾವು ಪಕ್ಷದ ಸಿದ್ಧಾಂತವನ್ನು ನಂಬುವ ವ್ಯಕ್ತಿಯಾಗಿದ್ದು, ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಹೇಳಿದರು.
ಸ್ವಾತಂತ್ರ್ಯ ದಿನಾಚರಣೆಯಂದು ವಂದೇ ಮಾತರಂ ಗೀತೆಯ ಆರು ಚರಣಗಳನ್ನು ಹಾಡಿದ ವಿಚಾರ ತಮ್ಮ ಗಮನಕ್ಕೆ ಬಂದಿರಲಿಲ್ಲ ಎಂದು ಅವರು ತಿಳಿಸಿದರು. ಅದು ತಮ್ಮ ಗಮನಕ್ಕೆ ಬಾರದೆ ನಡೆದಿರಬಹುದು ಅಥವಾ ರಾಜಭವನದಲ್ಲಿ ನಡೆದಿರಬಹುದು ಎಂದು ಹೇಳಿದ ಅವರು, ಮುಂದೆ ಯಾವುದೇ ಸರ್ಕಾರಿ ಕಾರ್ಯಕ್ರಮದಲ್ಲೂ ಹಿಂದಿನ ನಿರ್ಧಾರದಂತೆ ಮೊದಲ ಎರಡು ಚರಣಗಳಿಗೆ ಮಾತ್ರ ಸೀಮಿತವಾಗುವುದಾಗಿ ಸ್ಪಷ್ಟಪಡಿಸಿದರು.
ಕಾಂಗ್ರೆಸ್ ನಿರ್ಧಾರವೇನು?
ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ತನ್ನ ಹಿಂದಿನ ನಿಲುವನ್ನು ಪುನರುಚ್ಚರಿಸಿರುವ ಹಿನ್ನೆಲೆಯಲ್ಲಿ ಈ ಹೇಳಿಕೆ ಬಂದಿದೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು 1937ರಲ್ಲಿ ಕೈಗೊಂಡ ನಿರ್ಣಯವನ್ನು ಇತ್ತೀಚೆಗೆ ಮತ್ತೊಮ್ಮೆ ಉಲ್ಲೇಖಿಸಿದ್ದು, ಸಾರ್ವಜನಿಕ ಮತ್ತು ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವ ನಿಲುವನ್ನು ಮುಂದುವರಿಸಲು ನಿರ್ಧರಿಸಿದೆ.
ಈ ನಿರ್ಧಾರ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ವಂದೇ ಮಾತರಂ ಗೀತೆಯ ಸಂಪೂರ್ಣ ಆವೃತ್ತಿಯನ್ನು ಹಾಡಬೇಕೆಂಬ ಅಭಿಪ್ರಾಯ ಒಂದು ಕಡೆ ಇದ್ದರೆ, ಕಾಂಗ್ರೆಸ್ ತನ್ನ ಹಿಂದಿನ ಪದ್ಧತಿಯಂತೆ ಮೊದಲ ಎರಡು ಚರಣಗಳನ್ನಷ್ಟೇ ಹಾಡುವ ನಿಲುವನ್ನು ಮುಂದುವರಿಸಿದೆ.
ವಂದೇ ಮಾತರಂ ವಿವಾದಕ್ಕೆ ಕಾರಣವೇನು?
ಬಂಕಿಮ್ ಚಂದ್ರ ಚಟರ್ಜಿ ರಚಿಸಿರುವ ವಂದೇ ಮಾತರಂ ಭಾರತದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಅತ್ಯಂತ ಪ್ರಮುಖ ರಾಷ್ಟ್ರಭಕ್ತಿ ಗೀತೆಯಾಗಿ ಹೊರಹೊಮ್ಮಿತ್ತು. ಸ್ವಾತಂತ್ರ್ಯ ಚಳವಳಿಯಲ್ಲಿ ಇದು ಜನರಲ್ಲಿ ರಾಷ್ಟ್ರೀಯ ಭಾವನೆ ಮೂಡಿಸುವ ಪ್ರಮುಖ ಸಂಕೇತವಾಗಿತ್ತು.
ಇದೀಗ ಗೀತೆಯ ಸಂಪೂರ್ಣ ಆವೃತ್ತಿಯನ್ನು ಸರ್ಕಾರಿ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಹಾಡಬೇಕೇ ಅಥವಾ ಮೊದಲ ಎರಡು ಚರಣಗಳಿಗೆ ಮಾತ್ರ ಸೀಮಿತವಾಗಬೇಕೇ ಎಂಬ ವಿಚಾರ ರಾಜಕೀಯ ಚರ್ಚೆಯ ಕೇಂದ್ರವಾಗಿದೆ.
ಸಂಪೂರ್ಣ ವಂದೇ ಮಾತರಂ ಹಾಡುವುದನ್ನು ಬೆಂಬಲಿಸುವವರು ಗೀತೆಗೆ ಅದರ ಪೂರ್ಣ ರೂಪದಲ್ಲೇ ಗೌರವ ಸಲ್ಲಿಸಬೇಕು ಎಂದು ವಾದಿಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ತನ್ನ ಐತಿಹಾಸಿಕ ನಿಲುವಿನಂತೆ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ.
‘ತುಷ್ಟಿಕರಣ ರಾಜಕೀಯ’ದ ಆರೋಪಕ್ಕೂ ಡಿಕೆಶಿ ತಿರುಗೇಟು
ಇದೇ ಸಂದರ್ಭದಲ್ಲಿ ದೇಶದಲ್ಲಿ ನಡೆಯುತ್ತಿರುವ ತುಷ್ಟಿಕರಣ ರಾಜಕೀಯದ ಆರೋಪಗಳ ಬಗ್ಗೆಯೂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ಪಕ್ಷವು ದೇಶದ ವೈವಿಧ್ಯತೆಯನ್ನು ನಂಬುತ್ತದೆ ಎಂದು ಅವರು ಹೇಳಿದರು.
ಭಾರತ ವಿವಿಧ ಸಮುದಾಯಗಳು, ಸಂಸ್ಕೃತಿಗಳು ಮತ್ತು ನಂಬಿಕೆಗಳನ್ನು ಹೊಂದಿರುವ ವೈವಿಧ್ಯಮಯ ದೇಶವಾಗಿದ್ದು, ಸಮಾಜದ ಪ್ರತಿಯೊಂದು ವರ್ಗವನ್ನೂ ಒಟ್ಟಿಗೆ ಕರೆದೊಯ್ಯುವುದು ಕಾಂಗ್ರೆಸ್ನ ಸಿದ್ಧಾಂತವಾಗಿದೆ ಎಂದು ಅವರು ಹೇಳಿದರು.
ಬಿಜೆಪಿ ಕಾಂಗ್ರೆಸ್ ವಿರುದ್ಧ ತುಷ್ಟಿಕರಣ ರಾಜಕೀಯದ ಆರೋಪ ಮಾಡುತ್ತಿದೆ. ಆದರೆ ವಾಸ್ತವವಾಗಿ ಬಿಜೆಪಿಯೇ ತುಷ್ಟಿಕರಣದ ರಾಜಕೀಯ ನಡೆಸುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದರು.
ಮುಂದಿನ ಸರ್ಕಾರಿ ಕಾರ್ಯಕ್ರಮಗಳಲ್ಲಿ ಏನಾಗಲಿದೆ?
ಸ್ವಾತಂತ್ರ್ಯ ದಿನಾಚರಣೆಯಂದು ನಡೆದ ಗಾಯನದ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಅವರ ಸ್ಪಷ್ಟನೆ ಮಹತ್ವ ಪಡೆದುಕೊಂಡಿದೆ.
ಮುಂದಿನ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್ನ ನಿರ್ಧಾರದಂತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನಷ್ಟೇ ಹಾಡುವ ಸಾಧ್ಯತೆ ಇದೆ. ಈ ವಿಚಾರ ಈಗಾಗಲೇ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿರುವುದರಿಂದ, ಮುಂದಿನ ದಿನಗಳಲ್ಲಿ ವಿವಾದ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ.
ರಾಜಕೀಯ
Valmiki Corporation Scam: ‘ನಾಗೇಂದ್ರ ನಿರಪರಾಧಿ ಎಂದು ಸಾಬೀತಾದರೆ ಸಿಎಂ ಮಾಡಿಕೊಳ್ಳಿ’ ಎಂದ ವಿಜಯೇಂದ್ರ
ಬೆಂಗಳೂರು: Valmiki Corporation Scam ಹಣ ದುರ್ಬಳಕೆ ಪ್ರಕರಣ ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಕಾವು ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ತನಿಖೆಯಲ್ಲಿ ನಾಗೇಂದ್ರ ನಿರಪರಾಧಿ ಎಂದು ಸಾಬೀತಾದರೆ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿಕೊಳ್ಳಲಿ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಚಾರ್ಜ್ಶೀಟ್ನಲ್ಲೂ ನಾಗೇಂದ್ರ ಅವರ ಹೆಸರು ಉಲ್ಲೇಖವಾಗಿದೆ ಎಂದು ಆರೋಪಿಸಿದರು.
‘ನಾಗೇಂದ್ರ ಹೆಸರು ಚಾರ್ಜ್ಶೀಟ್ನಲ್ಲಿದೆ’
ವಾಲ್ಮೀಕಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾದ ಪ್ರಕರಣದ ತನಿಖೆಯಲ್ಲಿ ಹಲವು ಗಂಭೀರ ಅಂಶಗಳು ಹೊರಬಂದಿವೆ ಎಂದು ವಿಜಯೇಂದ್ರ ಹೇಳಿದರು. ಶಿವಮೊಗ್ಗದಲ್ಲಿ ಪ್ರಾಮಾಣಿಕ ಅಧಿಕಾರಿ ಹಾಗೂ ಬೋವಿ ಸಮಾಜದ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಡೆತ್ನೋಟ್ನಲ್ಲಿ ಅಂದಿನ ಸಚಿವ ನಾಗೇಂದ್ರ ಅವರ ಮೌಖಿಕ ಆದೇಶದ ಮೇರೆಗೆ ಹಣವನ್ನು ತೆಲಂಗಾಣಕ್ಕೆ ವರ್ಗಾಯಿಸಲಾಗಿತ್ತು ಎಂದು ಉಲ್ಲೇಖಿಸಿರುವುದಾಗಿ ಅವರು ಹೇಳಿದರು.
ಈ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ಅವರನ್ನು ತಕ್ಷಣ ಸಚಿವ ಸ್ಥಾನದಿಂದ ಕೈಬಿಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.
‘ದಲಿತರ ಹಣವನ್ನು ಲೂಟಿ ಮಾಡಲಾಗಿದೆ’
ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಹಣ ದುರ್ಬಳಕೆಯಾಗಿದೆ ಎಂಬುದು ಬಿಜೆಪಿಯ ಪ್ರಮುಖ ಆರೋಪವಾಗಿದೆ. ₹187 ಕೋಟಿ ಹಣ ಲೂಟಿಯಾಗಿದೆ ಎಂದು ವಿಜಯೇಂದ್ರ ಆರೋಪಿಸಿದ್ದು, ಆ ಹಣವನ್ನು ವಾಪಸ್ ಪಡೆದು ದಲಿತ ಸಮುದಾಯದ ಅಭಿವೃದ್ಧಿಗೆ ಬಳಸಬೇಕು ಎಂದು ಒತ್ತಾಯಿಸಿದರು.
“ಬಿಜೆಪಿ ಎತ್ತಿರುವ ಪ್ರಶ್ನೆ ಗಂಭೀರವಾಗಿದೆ. ಯಾವುದೇ ಕಾರಣಕ್ಕೂ ಇಂತಹ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವವರನ್ನು ಮುಂದುವರಿಸಬಾರದು” ಎಂಬ ಸಂದೇಶವನ್ನು ಅವರು ಸರ್ಕಾರಕ್ಕೆ ನೀಡಿದ್ದಾರೆ.
ಅಧಿವೇಶನ ಆರಂಭಕ್ಕೂ ಮುನ್ನವೇ ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಆಗ್ರಹಿಸಿತ್ತು ಎಂದು ವಿಜಯೇಂದ್ರ ಹೇಳಿದರು. ಉತ್ತರ ಕರ್ನಾಟಕದ ಸಮಸ್ಯೆಗಳು, ಬರಗಾಲ, ನೀರಾವರಿ ಯೋಜನೆಗಳು ಹಾಗೂ ಕೆಪಿಎಸ್ಸಿ ಹಗರಣ ಸೇರಿದಂತೆ ಹಲವು ವಿಚಾರಗಳು ಅಧಿವೇಶನದಲ್ಲಿ ಚರ್ಚೆಯಾಗಬೇಕಿವೆ ಎಂದರು.
‘ನಮ್ಮ ಹೋರಾಟವನ್ನು ಹಗುರವಾಗಿ ತೆಗೆದುಕೊಳ್ಳಬೇಡಿ’
ವಾಲ್ಮೀಕಿ ನಿಗಮದ ಪ್ರಕರಣದ ವಿಚಾರದಲ್ಲಿ ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಹೋರಾಟವನ್ನು ಸರ್ಕಾರ ಹಗುರವಾಗಿ ಪರಿಗಣಿಸಬಾರದು ಎಂದು ವಿಜಯೇಂದ್ರ ಎಚ್ಚರಿಸಿದರು.
ಸದನದಲ್ಲಿ ದಲಿತರ ಪರವಾಗಿ ಧ್ವನಿ ಎತ್ತುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರನ್ನು ಗೂಂಡಾಗಳು ಎಂದು ಕರೆಯಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ದಲಿತ ಸಮುದಾಯಕ್ಕೆ ನ್ಯಾಯ ದೊರೆಯುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು.
‘ನಾಗೇಂದ್ರ ಸಣ್ಣ ಮೀನು, ದೊಡ್ಡ ಮೀನುಗಳು ಇನ್ನೂ ಇವೆ’
ಪ್ರಕರಣದ ಹಿಂದೆ ಇನ್ನಷ್ಟು ದೊಡ್ಡ ವ್ಯಕ್ತಿಗಳು ಮತ್ತು ಶಕ್ತಿಗಳು ಇರಬಹುದು ಎಂದು ವಿಜಯೇಂದ್ರ ಗಂಭೀರ ಆರೋಪ ಮಾಡಿದರು.
“ಸಚಿವ ನಾಗೇಂದ್ರ ಬಹಳ ಸಣ್ಣ ಮೀನು ಮಾತ್ರ. ಇದರ ಹಿಂದೆ ದೊಡ್ಡ ಮೀನುಗಳು, ತಿಮಿಂಗಿಲಗಳು ಇವೆ” ಎಂದು ಹೇಳಿದ ಅವರು, ಪ್ರಕರಣದ ಸಂಪೂರ್ಣ ಸತ್ಯವನ್ನು ಹೊರಗೆ ತರುವ ನಿಟ್ಟಿನಲ್ಲಿ ಬಿಜೆಪಿ ಹೋರಾಟ ನಡೆಸಲಿದೆ ಎಂದರು.
ನಾಗೇಂದ್ರ ಅವರ ವೈಯಕ್ತಿಕ ತೇಜೋವಧೆ ಮಾಡುವುದು ಬಿಜೆಪಿಯ ಉದ್ದೇಶವಲ್ಲ. ದಲಿತ ಸಮುದಾಯಕ್ಕೆ ನ್ಯಾಯ ಕೊಡಿಸುವುದೇ ಪಕ್ಷದ ಉದ್ದೇಶ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.
ರಾಜೀನಾಮೆ ಪಡೆಯುವವರೆಗೂ ಹೋರಾಟ
ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡುವವರೆಗೂ ಬಿಜೆಪಿ ಹೋರಾಟ ಮುಂದುವರಿಯಲಿದೆ ಎಂದು ವಿಜಯೇಂದ್ರ ಘೋಷಿಸಿದರು. ವಾಲ್ಮೀಕಿ ನಿಗಮದ ಹಣವನ್ನು ಸಂಪೂರ್ಣವಾಗಿ ವಾಪಸ್ ಪಡೆದು, ಅದನ್ನು ಸಂಬಂಧಪಟ್ಟ ಸಮುದಾಯದ ಅಭಿವೃದ್ಧಿಗೆ ಬಳಸಬೇಕು ಎಂಬುದು ಬಿಜೆಪಿಯ ಪ್ರಮುಖ ಬೇಡಿಕೆಯಾಗಿದೆ.
ಈ ವಿಚಾರ ಮುಂದಿನ ವಿಧಾನಸಭಾ ಅಧಿವೇಶನದಲ್ಲೂ ಪ್ರತಿಧ್ವನಿಸುವ ಸಾಧ್ಯತೆ ಇದೆ.
ವಿಧಾನಪರಿಷತ್ ಚುನಾವಣೆಗೂ ಬಿಜೆಪಿ ತಂತ್ರ
ಇದೇ ವೇಳೆ ಮುಂಬರುವ ವಿಧಾನಪರಿಷತ್ ಚುನಾವಣೆಗಳ ಬಗ್ಗೆಯೂ ವಿಜಯೇಂದ್ರ ಮಾಹಿತಿ ನೀಡಿದರು. ಅಕ್ಟೋಬರ್-ನವೆಂಬರ್ನಲ್ಲಿ ನಡೆಯಲಿರುವ ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರ ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆ ಕುರಿತು ಬಿಜೆಪಿ ಶಾಸಕರ ವಿಶೇಷ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದರು.
ಈ ಮೂರು ಕ್ಷೇತ್ರಗಳಲ್ಲೂ ಪ್ರಸ್ತುತ ಬಿಜೆಪಿ ಅಭ್ಯರ್ಥಿಗಳು ಹಾಗೂ ಸಂಘಟನೆ ಬಲಪಡಿಸುವ ಕುರಿತು ಕಾರ್ಯತಂತ್ರ ರೂಪಿಸಲಾಗುತ್ತಿದೆ. ಅಭ್ಯರ್ಥಿಗಳು ಮತ್ತು ಪಕ್ಷದ ಸಂಘಟನೆಯನ್ನು ಸಮನ್ವಯಗೊಳಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಸಿದ್ಧತೆ ನಡೆಸಲಾಗುತ್ತಿದೆ ಎಂದು ವಿಜಯೇಂದ್ರ ತಿಳಿಸಿದರು
ರಾಜಕೀಯ
Valmiki ನಿಗಮದ ಅಕ್ರಮ: ಸಚಿವ ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಡಿಕೆ ಶಿವಕುಮಾರ್ ಹೇಳಿದ್ದೇನು?
ಬೆಂಗಳೂರು: ಮಹರ್ಷಿ Valmiki ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರಕರಣದ ತನಿಖೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ವಿರೋಧ ಪಕ್ಷಗಳಿಂದ ಒತ್ತಡ ಹೆಚ್ಚಾಗಿದೆ. ಈ ನಡುವೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವರ ರಾಜೀನಾಮೆ ವಿಚಾರವಾಗಿ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
‘ನಾವೆಲ್ಲ ಪಕ್ಷದ ಶಿಸ್ತಿನ ಸಿಪಾಯಿಗಳು’
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳು ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಕುರಿತು ಪ್ರಶ್ನಿಸಿದಾಗ ಡಿ.ಕೆ. ಶಿವಕುಮಾರ್ ಅವರು ನೇರವಾಗಿ ರಾಜೀನಾಮೆ ಬಗ್ಗೆ ಯಾವುದೇ ನಿರ್ಧಾರವನ್ನು ಪ್ರಕಟಿಸಲಿಲ್ಲ.
“ನಮ್ಮ ಪಕ್ಷದಲ್ಲಿ ಸಚಿವರು, ಶಾಸಕರು ಹಾಗೂ ಕಾರ್ಯಕರ್ತರು ಎಲ್ಲರೂ ಪಕ್ಷದ ಶಿಸ್ತಿನ ಸಿಪಾಯಿಗಳು. ಈ ವಿಷಯದಲ್ಲಿ ನಾನು ಇಷ್ಟೇ ಹೇಳಲು ಬಯಸುತ್ತೇನೆ” ಎಂದು ಅವರು ಸಂಕ್ಷಿಪ್ತವಾಗಿ ಪ್ರತಿಕ್ರಿಯಿಸಿದರು.
ಮುಖ್ಯಮಂತ್ರಿಗಳ ಈ ಹೇಳಿಕೆ ಇದೀಗ ಹಲವು ರೀತಿಯ ಚರ್ಚೆಗೆ ಕಾರಣವಾಗಿದೆ. ಸಚಿವ ನಾಗೇಂದ್ರ ಅವರ ರಾಜೀನಾಮೆ ಕುರಿತು ಪಕ್ಷದೊಳಗೆ ಯಾವ ರೀತಿಯ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಬೇಕಿದೆ.
ವಿರೋಧ ಪಕ್ಷಗಳಿಂದ ರಾಜೀನಾಮೆಗೆ ಆಗ್ರಹ
ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣ ಬೆಳಕಿಗೆ ಬಂದ ಬಳಿಕ ರಾಜ್ಯದ ರಾಜಕೀಯ ವಾತಾವರಣದಲ್ಲಿ ಸಾಕಷ್ಟು ಬದಲಾವಣೆ ಕಂಡುಬಂದಿದೆ. ಪ್ರಕರಣದ ತನಿಖೆ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ಹೊಣೆಗಾರಿಕೆ ಕುರಿತು ಪ್ರಶ್ನೆಗಳನ್ನು ಎತ್ತಿರುವ ವಿರೋಧ ಪಕ್ಷದ ನಾಯಕರು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ.
ತನಿಖೆ ಮತ್ತಷ್ಟು ವೇಗ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುಂದಿನ ನಡೆ ಏನು ಎಂಬುದು ಈಗ ಪ್ರಮುಖ ಪ್ರಶ್ನೆಯಾಗಿದೆ. ಸಚಿವ ನಾಗೇಂದ್ರ ಅವರು ತಮ್ಮ ಸ್ಥಾನದಲ್ಲಿ ಮುಂದುವರಿಯಲಿದ್ದಾರೆಯೇ ಅಥವಾ ರಾಜೀನಾಮೆ ನೀಡಲಿದ್ದಾರೆಯೇ ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ತೀವ್ರಗೊಂಡಿದೆ.
ಹೈಕಮಾಂಡ್ ನಿರ್ಧಾರದತ್ತ ಕುತೂಹಲ
ವಾಲ್ಮೀಕಿ ನಿಗಮದ ಪ್ರಕರಣದ ಹಿನ್ನೆಲೆಯಲ್ಲಿ ಆಡಳಿತಾರೂಢ ಪಕ್ಷದ ಮುಂದಿನ ನಡೆ ಮೇಲೆ ಎಲ್ಲರ ಗಮನ ನೆಟ್ಟಿದೆ. ಸಚಿವರ ರಾಜೀನಾಮೆ ವಿಚಾರದಲ್ಲಿ ರಾಜ್ಯ ನಾಯಕತ್ವ ಯಾವ ನಿರ್ಧಾರ ಕೈಗೊಳ್ಳಲಿದೆ ಮತ್ತು ಪಕ್ಷದ ಹೈಕಮಾಂಡ್ನಿಂದ ಯಾವುದೇ ಸೂಚನೆ ಬರಲಿದೆಯೇ ಎಂಬುದು ಕುತೂಹಲ ಮೂಡಿಸಿದೆ.
ಸಿಎಂ ಡಿ.ಕೆ. ಶಿವಕುಮಾರ್ ಅವರ ‘ಪಕ್ಷದ ಶಿಸ್ತಿನ ಸಿಪಾಯಿಗಳು’ ಎಂಬ ಹೇಳಿಕೆಯನ್ನು ರಾಜಕೀಯವಾಗಿ ಹಲವು ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ. ಆದರೆ ಸಚಿವ ನಾಗೇಂದ್ರ ಅವರ ರಾಜೀನಾಮೆ ಕುರಿತು ಅಂತಿಮ ನಿರ್ಧಾರ ಏನು ಎಂಬುದನ್ನು ಅವರು ಸ್ಪಷ್ಟವಾಗಿ ತಿಳಿಸಿಲ್ಲ.
ಪ್ರಕರಣದ ತನಿಖೆಯತ್ತ ಎಲ್ಲರ ಚಿತ್ತ
ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ವಿವಿಧ ಹಂತಗಳಲ್ಲಿ ತನಿಖೆ ನಡೆಯುತ್ತಿದೆ. ಪ್ರಕರಣದಲ್ಲಿ ಹಣದ ವಹಿವಾಟು ಸೇರಿದಂತೆ ಹಲವು ಅಂಶಗಳು ತನಿಖೆಯ ವ್ಯಾಪ್ತಿಗೆ ಬಂದಿವೆ.
ಈ ಹಿನ್ನೆಲೆಯಲ್ಲಿ ತನಿಖೆಯ ಪ್ರಗತಿ, ಆರೋಪಿಗಳ ವಿರುದ್ಧ ಕೈಗೊಳ್ಳಲಾಗುವ ಕ್ರಮ ಹಾಗೂ ಪ್ರಕರಣದಲ್ಲಿ ಸಚಿವರ ಪಾತ್ರದ ಕುರಿತು ಮುಂದಿನ ದಿನಗಳಲ್ಲಿ ಹೊರಬರುವ ಮಾಹಿತಿಗಳು ರಾಜ್ಯ ರಾಜಕೀಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.
ಸದ್ಯಕ್ಕೆ ಸಚಿವ ನಾಗೇಂದ್ರ ಅವರ ರಾಜೀನಾಮೆ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಯಾವುದೇ ನೇರ ಘೋಷಣೆ ಮಾಡಿಲ್ಲ. ಹೀಗಾಗಿ ಸಚಿವ ಸ್ಥಾನ ಉಳಿಯುತ್ತದೆಯೇ ಅಥವಾ ರಾಜೀನಾಮೆ ಅನಿವಾರ್ಯವಾಗುತ್ತದೆಯೇ ಎಂಬ ಪ್ರಶ್ನೆಗೆ ಮುಂದಿನ ದಿನಗಳಲ್ಲಿ ಉತ್ತರ ಸಿಗಬೇಕಿದೆ.
-
ಬೆಂಗಳೂರು16 ಗಂಟೆಗಳು agoVande Mataram ಸಂಪೂರ್ಣ ಹಾಡುವ ವಿಚಾರಕ್ಕೆ ರಾಜಕೀಯ ರಂಪಾಟ; CM ಡಿಕೆಶಿ ಹೇಳಿದ್ದೇನು?
-
ರಾಜಕೀಯ17 ಗಂಟೆಗಳು agoValmiki ನಿಗಮದ ಅಕ್ರಮ: ಸಚಿವ ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಡಿಕೆ ಶಿವಕುಮಾರ್ ಹೇಳಿದ್ದೇನು?
-
ರಾಜಕೀಯ17 ಗಂಟೆಗಳು agoValmiki Corporation Scam: ‘ನಾಗೇಂದ್ರ ನಿರಪರಾಧಿ ಎಂದು ಸಾಬೀತಾದರೆ ಸಿಎಂ ಮಾಡಿಕೊಳ್ಳಿ’ ಎಂದ ವಿಜಯೇಂದ್ರ
-
ರಾಜ್ಯ21 ಗಂಟೆಗಳು agoಸಚಿವ B Nagendra ರಾಜೀನಾಮೆ ನೀಡ್ತಾರಾ?CM D.K.Shiv Kumar ಗೆ ಕರೆ, ‘ಸರ್ಕಾರಕ್ಕೆ ಮುಜುಗರ ಬೇಡ’ ಎಂದ ಸಚಿವ!
-
ದೇಶ18 ಗಂಟೆಗಳು agoONAM ಸದ್ಯ ಸವಿಯಲು ಸಾಲಿನಲ್ಲಿ ಕುಳಿತ ಕೋತಿಗಳು! 53 ವರ್ಷಗಳ ಅಪರೂಪದ ಸಂಪ್ರದಾಯ
-
ರಾಜ್ಯ17 ಗಂಟೆಗಳು agoOnline ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ? ಸಚಿವ ಖಾದರ್ ಸ್ಫೋಟಕ ಹೇಳಿಕೆ, ಶೀಘ್ರದಲ್ಲೇ ಕ್ರಮ
-
ದೇಶ15 ಗಂಟೆಗಳು agoBJP ಶಾಸಕರ ಖಾಸಗಿ ಕಾರು ತೊಳೆಯಲು ಅಗ್ನಿಶಾಮಕ ವಾಹನ ಬಳಕೆ? ವಿಡಿಯೋ ವೈರಲ್, ಭಾರೀ ಆಕ್ರೋಶ
-
ರಾಜ್ಯ20 ಗಂಟೆಗಳು agoB Nagendra Resignation: ರಾಜೀನಾಮೆ ವದಂತಿಗೆ ನಾಗೇಂದ್ರ ಫುಲ್ಸ್ಟಾಪ್; ಕಾಂಗ್ರೆಸ್ನಿಂದಲೂ ಅಧಿಕೃತ ಹೇಳಿಕೆ ಇಲ್ಲ
