Connect with us

ಬೆಂಗಳೂರು

ಬೆಂಗಳೂರು-ಮಂಗಳೂರು ನಡುವಿನ ರೈಲು ಸಂಚಾರ ಸ್ಧಗಿತ

Published

on

ಹಾಸನ: ಇತ್ತೀಚೆಗಷ್ಟೇ ಸಕಲೇಶಪುರದಲ್ಲಿ ರೈಲಿನ ಹಳಿ ಮೇಲೆ ಗುಡ್ಡ ಕುಸಿದು, ಸಂಚಾರಕ್ಕೆ ಅಡ್ಡಿಯಾಗಿತ್ತು, ಇದೀಗ ಮತ್ತೆ ಅದೇ ರೀತಿ ಭೂಕುಸಿತ ಉಂಟಾಗಿ, ರೈಲು ಸಂಚಾರ ದಿಢೀರ್ ಸ್ಧಗಿತಗೊಂಡಿದೆ,
ಹಾಸನದ ಸಕಲೇಶಪುರ ತಾಲೂಕಿನ ಆಚಂಗಿ-ದೊಡ್ಡಸಾಗರ ಬಳಿ ಘಟನೆ ಸಂಭವಿಸಿದೆ, ಕಳೆದ ಒಂದು ವಾರದ ಹಿಂದೆಯಷ್ಟೇ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿತ್ತು, ತಕ್ಷಣವೇ ಮಣ್ಣು ತೆರವು ಕಾರ್ಯಾಚರಣೆಗೊಳಿಸಿದ ಅಧಿಕಾರಿಗಳು, ರೈಲ್ವೆ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದರು,
ಇದೀಗ ಅದೇ ಸ್ಧಳದಲ್ಲಿ ಮತ್ತೇ ಭೂಕುಸಿತವಾಗಿದ್ದು, ಮಂಗಳೂರಿನತ್ತ ಹೊರಟಿದ್ದ ಯಶವಂತಪುರ-ಕಾರವಾರ ಎಕ್ಸ್‍ಪ್ರೆಸ್ ರೈಲು, ಕೆಲವು ಗಂಟೆಗಳಿಂದ ನಿಂತಲ್ಲೇ ನಿಂತಿದೆ, ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ,
ಸ್ವಾತಂತ್ರ್ಯ ದಿನಾಚರಣೆ, ವರಮಹಾಲಕ್ಷ್ಮೀ ಹಬ್ಬ ಸೇರಿದಂತೆ ಸರಣಿ ರಜೆ ಹಿನ್ನೆಲೆಯಲ್ಲಿ ಊರಿಗೆ ವಾಪಸ್ಸಾಗುವ ಋಷಿಯಲ್ಲಿದ್ದವರಿಗೆ ನಿರಾಸೆ ಉಂಟಾಗಿದೆ, ಸದ್ಯ ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಧಗಿತಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದ,

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ರಾಜ್ಯ

B Nagendra ರಾಜೀನಾಮೆ: ಡಿಕೆ ಶಿವಕುಮಾರ್‌ ಹೇಳಿದ್ದೇನು? ಬಿಜೆಪಿ ವಿರುದ್ಧ ಸಿಎಂ ಗರಂ, ‘ನಾಗೇಂದ್ರ ನಿರಪರಾಧಿ’ ಎಂದ ಡಿಸಿಎಂ

Published

on

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮ ಪ್ರಕರಣದ ಆರೋಪಗಳ ನಡುವೆ ಸಚಿವ ಸ್ಥಾನಕ್ಕೆ B Nagendra ರಾಜೀನಾಮೆ ಸಲ್ಲಿಸಿರುವ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ನಾಗೇಂದ್ರ ಅವರ ರಾಜೀನಾಮೆಯಿಂದ ತಮಗೂ ನೋವಾಗಿದೆ ಎಂದು ಹೇಳಿದ್ದಾರೆ.

ಪಕ್ಷಕ್ಕೆ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ಬಿ.ನಾಗೇಂದ್ರ ಅವರು ಸ್ವಯಂಪ್ರೇರಣೆಯಿಂದ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತು ಕಾಂಗ್ರೆಸ್‌ ಹೈಕಮಾಂಡ್‌ ನಾಯಕರೊಂದಿಗೆ ಚರ್ಚಿಸಿ ಶನಿವಾರ ಬೆಳಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

‘ನಾಗೇಂದ್ರ ವಿರುದ್ಧದ ಆರೋಪ ಸತ್ಯಕ್ಕೆ ದೂರ’

ಬಿಜೆಪಿ ಸತ್ಯಕ್ಕೆ ದೂರವಾದ ವಿಚಾರಗಳನ್ನು ಮುಂದಿಟ್ಟುಕೊಂಡು ನಾಗೇಂದ್ರ ಅವರ ವಿರುದ್ಧ ಆರೋಪ ಮಾಡುತ್ತಿದೆ ಎಂದು ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ. ನಾಗೇಂದ್ರ ಅವರು ದಲಿತ ಹಾಗೂ ಪರಿಶಿಷ್ಟ ಜಾತಿಯ ನಾಯಕರಾಗಿದ್ದು, ಬಿಜೆಪಿಯ ಹಿರಿಯ ನಾಯಕರ ವಿರುದ್ಧ ಎರಡು ಬಾರಿ ಸ್ಪರ್ಧಿಸಿ ಗೆದ್ದಿದ್ದಾರೆ. ಇದೇ ಕಾರಣಕ್ಕೆ ಅವರ ವಿರುದ್ಧ ರಾಜಕೀಯ ಉದ್ದೇಶದಿಂದ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ನಾಗೇಂದ್ರ ಅವರು ಪಕ್ಷಕ್ಕಾಗಿ ಯಾವುದೇ ತ್ಯಾಗಕ್ಕೂ ಸಿದ್ಧ ಎಂಬುದನ್ನು ತಮ್ಮ ರಾಜೀನಾಮೆ ಮೂಲಕ ಸಾಬೀತುಪಡಿಸಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಅವರು ಆರೋಪಗಳಿಂದ ಮುಕ್ತರಾಗಿ ಹೊರಬರುತ್ತಾರೆ ಎಂಬ ವಿಶ್ವಾಸವಿದೆ ಎಂದು ಶಿವಕುಮಾರ್‌ ಹೇಳಿದ್ದಾರೆ.

ರಾಜಭವನದ ನಿರ್ಧಾರದ ಬಗ್ಗೆ ಕಾನೂನು ಸಲಹೆ

ನಾಗೇಂದ್ರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿರುವ ವಿಚಾರವೂ ರಾಜಕೀಯವಾಗಿ ಮಹತ್ವ ಪಡೆದಿದೆ. ಈ ಹಿನ್ನೆಲೆಯಲ್ಲಿ ಕಾನೂನಿನ ಚೌಕಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಕಾನೂನು ಎಲ್ಲರಿಗೂ ಒಂದೇ ಆಗಿರುವುದರಿಂದ ಕಾನೂನು ತಜ್ಞರ ಸಲಹೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ನಾಗೇಂದ್ರ ಅವರು ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದರೂ, ಕಾಂಗ್ರೆಸ್‌ ಹೈಕಮಾಂಡ್‌ ನಾಯಕರೊಂದಿಗೆ ಚರ್ಚಿಸಿದ ನಂತರವೇ ಅದನ್ನು ಅಂಗೀಕರಿಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

‘ವಿಪಕ್ಷಗಳು ಕಲಾಪಕ್ಕೆ ಅಡ್ಡಿಪಡಿಸಿವೆ’

ಬಿಜೆಪಿ ಹಾಗೂ ಪ್ರತಿಪಕ್ಷಗಳು ಸುಳ್ಳು ಆರೋಪಗಳನ್ನು ಮುಂದಿಟ್ಟುಕೊಂಡು ವಿಧಾನಸಭೆ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಶಿವಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೋಟಿಸ್‌ ನೀಡಿ ಸೂಕ್ತ ಚರ್ಚೆಗೆ ಅವಕಾಶ ನೀಡುವಂತೆ ಆಹ್ವಾನಿಸಿದರೂ ವಿಪಕ್ಷಗಳು ಚರ್ಚೆಗೆ ಬರದೆ ರಾಜಕೀಯ ದುರುದ್ದೇಶದಿಂದ ಕಲಾಪಕ್ಕೆ ಅಡ್ಡಿಪಡಿಸಿವೆ ಎಂದು ಆರೋಪಿಸಿದ್ದಾರೆ.

‘ಸುಳ್ಳನ್ನೇ ಮನೆದೇವರು ಮಾಡಿಕೊಂಡವರಿಗೆ ಇದು ಗೆಲುವಾಗಲು ಸಾಧ್ಯವಿಲ್ಲ’ ಎಂದು ಅವರು ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸುರ್ಜೇವಾಲ ಹೇಳಿದ್ದೇನು?

ಬಿ.ನಾಗೇಂದ್ರ ರಾಜೀನಾಮೆ ಕುರಿತು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಕೂಡ ಪ್ರತಿಕ್ರಿಯಿಸಿದ್ದಾರೆ. ನಾಗೇಂದ್ರ ಅವರು ಸ್ವಯಂಪ್ರೇರಣೆಯಿಂದ ರಾಜೀನಾಮೆ ನೀಡುವ ಮೂಲಕ ಸಾರ್ವಜನಿಕ ಹೊಣೆಗಾರಿಕೆಯ ಪ್ರಜ್ಞೆ ಪ್ರದರ್ಶಿಸಿದ್ದಾರೆ ಎಂದು ಹೇಳಿದ್ದಾರೆ.

ತನಿಖಾ ಸಂಸ್ಥೆಗಳಿಗೆ ನಾಗೇಂದ್ರ ಅವರಿಗೂ ಪ್ರಕರಣಕ್ಕೂ ನೇರ ಸಂಬಂಧವಿದೆ ಎಂಬುದನ್ನು ಸಾಬೀತುಪಡಿಸಲು ಸಾಧ್ಯವಾಗಿಲ್ಲ ಎಂದು ಸುರ್ಜೇವಾಲ ಆರೋಪಿಸಿದ್ದಾರೆ. ಇದೇ ವೇಳೆ ಎಚ್‌.ಡಿ.ಕುಮಾರಸ್ವಾಮಿ, ಎಂ.ಪಿ.ರೇಣುಕಾಚಾರ್ಯ ಮತ್ತು ಗಾಲಿ ಜನಾರ್ದನ ರೆಡ್ಡಿ ಅವರ ವಿರುದ್ಧದ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್‌ ಅನುಮತಿ ವಿಚಾರದಲ್ಲಿ ರಾಜ್ಯಪಾಲರ ನಿಲುವಿನ ಬಗ್ಗೆಯೂ ಅವರು ಪ್ರಶ್ನೆ ಎತ್ತಿದ್ದಾರೆ.

ಬಿ.ನಾಗೇಂದ್ರ ಅವರ ರಾಜೀನಾಮೆ ಇದೀಗ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಕಾಂಗ್ರೆಸ್‌ ಹೈಕಮಾಂಡ್‌ ಅಂತಿಮವಾಗಿ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

Continue Reading

ರಾಜಕೀಯ

Yathindra Siddaramaiah ಸದ್ದಿಲ್ಲದೆ ಶುರು ಮಾಡಿದ್ರಾ ಹೊಸ ರಾಜಕೀಯ ಲೆಕ್ಕಾಚಾರ? ಜಮೀರ್ ಭೇಟಿಗೆ ಹೆಚ್ಚಿದ ಕುತೂಹಲ

Published

on

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ Yathindra Siddaramaiah ಅವರು ಇತ್ತೀಚಿನ ದಿನಗಳಲ್ಲಿ ರಾಜಕೀಯವಾಗಿ ಹೆಚ್ಚು ಸಕ್ರಿಯರಾಗುತ್ತಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಯತೀಂದ್ರ ಭೇಟಿ ಮಾಡಿರುವುದು ಇದೀಗ ಕಾಂಗ್ರೆಸ್‌ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಯತೀಂದ್ರ ಸಿದ್ದರಾಮಯ್ಯ ಅವರು ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದ್ದಾರೆ. ಈ ಭೇಟಿ ಸೌಹಾರ್ದಯುತ ಭೇಟಿಯೇ ಅಥವಾ ಇದರ ಹಿಂದೆ ರಾಜಕೀಯ ಲೆಕ್ಕಾಚಾರವಿದೆಯೇ ಎಂಬ ಬಗ್ಗೆ ಇದೀಗ ಹಲವು ರೀತಿಯ ಚರ್ಚೆಗಳು ನಡೆಯುತ್ತಿವೆ.

ಸಿದ್ದರಾಮಯ್ಯ ಆಪ್ತರನ್ನು ಮತ್ತೆ ಒಗ್ಗೂಡಿಸುವ ಪ್ರಯತ್ನ?

ಸಿದ್ದರಾಮಯ್ಯ ಅವರ ರಾಜಕೀಯ ಪ್ರಭಾವವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ನಾಯಕರನ್ನು ಒಗ್ಗೂಡಿಸುವ ಪ್ರಯತ್ನಕ್ಕೆ ಯತೀಂದ್ರ ಮುಂದಾಗಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ವಿಶೇಷವಾಗಿ, ಹಿಂದೆ ಸಿದ್ದರಾಮಯ್ಯ ಅವರೊಂದಿಗೆ ಕೆಲವು ವಿಚಾರಗಳಲ್ಲಿ ಅಂತರ ಕಾಯ್ದುಕೊಂಡಿದ್ದ ನಾಯಕರೊಂದಿಗೂ ಯತೀಂದ್ರ ಮತ್ತೆ ಉತ್ತಮ ಸಂಬಂಧ ಬೆಳೆಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ಇದರ ಭಾಗವಾಗಿಯೇ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಭೇಟಿಯನ್ನು ನೋಡಲಾಗುತ್ತಿದೆ.

ಇದಕ್ಕೂ ಮುನ್ನ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೂ ಯತೀಂದ್ರ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದರು. ಸತೀಶ್ ಜಾರಕಿಹೊಳಿ ಮತ್ತು ಜಮೀರ್ ಅಹ್ಮದ್ ಖಾನ್ ಅವರಂತಹ ಪ್ರಮುಖ ನಾಯಕರನ್ನು ಯತೀಂದ್ರ ಸತತವಾಗಿ ಭೇಟಿ ಮಾಡುತ್ತಿರುವುದು ರಾಜಕೀಯವಾಗಿ ಗಮನ ಸೆಳೆದಿದೆ.

ಭೇಟಿಗಳ ಹಿಂದೆ ರಾಜಕೀಯ ಕಾರ್ಯತಂತ್ರ?

ಯತೀಂದ್ರ ಅವರ ಈ ಭೇಟಿಗಳನ್ನು ಸದ್ಯಕ್ಕೆ ಸಾಮಾನ್ಯ ಸೌಹಾರ್ದಯುತ ಭೇಟಿಗಳೆಂದು ಹೇಳಲಾಗುತ್ತಿದ್ದರೂ, ರಾಜಕೀಯ ಬೆಳವಣಿಗೆಗಳು ಹಾಗೂ ಮುಂದಿನ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆದಿರಬಹುದೆಂಬ ಮಾತುಗಳು ಕೇಳಿಬರುತ್ತಿವೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ರಾಜಕೀಯ ಸಮೀಕರಣಗಳು ಹೇಗೆ ಬದಲಾಗಲಿವೆ ಎಂಬುದು ಕುತೂಹಲ ಮೂಡಿಸಿರುವ ಸಂದರ್ಭದಲ್ಲೇ ಯತೀಂದ್ರ ಅವರ ಚಟುವಟಿಕೆಗಳು ಹೆಚ್ಚಾಗಿವೆ.

ತಂದೆ ಸಿದ್ದರಾಮಯ್ಯ ಅವರ ರಾಜಕೀಯ ಅನುಭವ ಮತ್ತು ಪ್ರಭಾವವನ್ನು ಬಳಸಿಕೊಂಡು ಪಕ್ಷದ ಪ್ರಮುಖ ನಾಯಕರೊಂದಿಗೆ ಬಾಂಧವ್ಯ ಬಲಪಡಿಸುವ ಪ್ರಯತ್ನ ಇದಾಗಿರಬಹುದು ಎಂಬ ವಿಶ್ಲೇಷಣೆ ರಾಜಕೀಯ ವಲಯದಲ್ಲಿ ವ್ಯಕ್ತವಾಗಿದೆ.

ಆದರೆ, ಜಮೀರ್ ಅಹ್ಮದ್ ಖಾನ್ ಮತ್ತು ಸತೀಶ್ ಜಾರಕಿಹೊಳಿ ಅವರೊಂದಿಗಿನ ಯತೀಂದ್ರ ಸಿದ್ದರಾಮಯ್ಯ ಅವರ ಭೇಟಿಗಳ ನಿಖರ ರಾಜಕೀಯ ಉದ್ದೇಶವೇನು ಎಂಬುದು ಇನ್ನೂ ಅಧಿಕೃತವಾಗಿ ಸ್ಪಷ್ಟವಾಗಿಲ್ಲ. ಹೀಗಾಗಿ ಈ ಸರಣಿ ಭೇಟಿಗಳು ಮುಂದಿನ ದಿನಗಳಲ್ಲಿ ಯಾವ ರೀತಿಯ ರಾಜಕೀಯ ಬೆಳವಣಿಗೆಗೆ ಕಾರಣವಾಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

Continue Reading

ರಾಜ್ಯ

KRS ಡ್ಯಾಂಗೆ ಭಾರೀ ಶಾಕ್‌! ಒಳಹರಿವು ದಿಢೀರ್ ಕುಸಿತ; ಸದ್ಯದ ನೀರಿನ ಮಟ್ಟ ಎಷ್ಟು ಗೊತ್ತಾ?

Published

on

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಪರಿಣಾಮ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರ (KRS) ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ ದಿಢೀರ್ ಇಳಿಕೆಯಾಗಿದೆ. ಕೊಡಗು ಸೇರಿದಂತೆ ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ಮಳೆ ಕಡಿಮೆಯಾಗಿರುವುದರಿಂದ ಜಲಾಶಯದ ಒಳಹರಿವು ಗಣನೀಯವಾಗಿ ಕುಸಿದಿದೆ.

ಕಳೆದ ಕೆಲವು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿತ್ತು. ಇದರಿಂದ ಜಲಾಶಯದ ನೀರಿನ ಮಟ್ಟವೂ ವೇಗವಾಗಿ ಏರಿಕೆಯಾಗಿತ್ತು.

ಬುಧವಾರ ಬೆಳಿಗ್ಗೆ 9,438 ಕ್ಯೂಸೆಕ್ ಇದ್ದ ಕೆಆರ್‌ಎಸ್ ಜಲಾಶಯದ ಒಳಹರಿವು ಗುರುವಾರ ವೇಳೆಗೆ ಬರೋಬ್ಬರಿ 17,427 ಕ್ಯೂಸೆಕ್‌ಗೆ ಏರಿಕೆಯಾಗಿತ್ತು. ಆದರೆ ಇದೀಗ ಕಾವೇರಿ ಕೊಳ್ಳದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಶುಕ್ರವಾರದ ವೇಳೆಗೆ ಒಳಹರಿವು 10,028 ಕ್ಯೂಸೆಕ್‌ಗೆ ಕುಸಿದಿದೆ.

ಒಂದೇ ದಿನದಲ್ಲಿ ಒಳಹರಿವಿನಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿರುವುದು ಜಲಾಶಯದ ನೀರಿನ ಲಭ್ಯತೆ ಕುರಿತು ಕುತೂಹಲ ಮೂಡಿಸಿದೆ. ಮುಂದಿನ ದಿನಗಳಲ್ಲಿ ಕೊಡಗು ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಉತ್ತಮ ಮಳೆಯಾಗುತ್ತದೆಯೇ ಎಂಬುದರ ಮೇಲೆ ಕೆಆರ್‌ಎಸ್‌ಗೆ ಒಳಹರಿವಿನ ಪ್ರಮಾಣ ಅವಲಂಬಿತವಾಗಿರಲಿದೆ.

110 ಅಡಿ ದಾಟಿದ KRS ನೀರಿನ ಮಟ್ಟ

ಒಳಹರಿವು ಕಡಿಮೆಯಾಗಿದ್ದರೂ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 110.20 ಅಡಿಗೆ ತಲುಪಿದೆ. ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯದ ಮಟ್ಟ 124.80 ಅಡಿಯಾಗಿದೆ.

ಸದ್ಯ ಜಲಾಶಯದಲ್ಲಿ 31.923 ಟಿಎಂಸಿ ನೀರು ಸಂಗ್ರಹವಾಗಿದೆ. 110 ಅಡಿಗೂ ಹೆಚ್ಚು ನೀರು ಸಂಗ್ರಹವಾಗಿರುವುದು ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರಿಗೆ ಹಾಗೂ ಮಂಡ್ಯ, ಮೈಸೂರು ಸೇರಿದಂತೆ ಹಲವು ಪ್ರದೇಶಗಳ ಕುಡಿಯುವ ನೀರಿನ ಅಗತ್ಯಗಳಿಗೆ ಸದ್ಯಕ್ಕೆ ಆಶಾದಾಯಕ ಬೆಳವಣಿಗೆಯಾಗಿದೆ.

ಕಳೆದ ಕೆಲವು ದಿನಗಳಲ್ಲಿ ಹೆಚ್ಚಾಗಿದ್ದ ಒಳಹರಿವು ಇದೀಗ ಇಳಿಕೆಯಾಗಿರುವುದರಿಂದ ಜಲಾಶಯದ ನೀರಿನ ಮಟ್ಟ ಮತ್ತು ಒಳಹರಿವಿನ ಮೇಲೆ ರೈತರು ಹಾಗೂ ಅಧಿಕಾರಿಗಳು ನಿಗಾ ಇರಿಸಿದ್ದಾರೆ. ಮುಂದಿನ ಮಳೆಯ ಪ್ರಮಾಣದ ಆಧಾರದ ಮೇಲೆ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಳಿತವಾಗುವ ಸಾಧ್ಯತೆಯಿದೆ.

Continue Reading

Trending