Connect with us

ದೇಶ

ಭಾರತವನ್ನು ವಿಶ್ವಗುರುವನ್ನಾಗಿಸಲು ಕಾಲಾವಕಾಶ ಬೇಕಿದೆ – ಶೋಭಾ ಕರಂದ್ಲಾಜೆ

Published

on

2024ರ ಲೋಕಾಸಭಾ ಚುನಾವಣೆ ಅಭ್ಯರ್ಥಿಯ ಚುನಾವಣೆ ಅಲ್ಲ ಈ ಚುನಾವಣೆ ನಮ್ಮ ದೇಶದ ಭವಿಷ್ಯವನ್ನು ನಿರ್ಧಾರ ಮಾಡುವ ಚುನಾವಣೆ ಎಂದು ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭ ಕರಂದ್ಲಾಜೆ ಹೇಳಿದರು. ಯಶವಂತಪುರ ಕ್ಷೇತ್ರದ ವೈಟ್ ಪ್ಯಾಲೆಸ್‌ನಲ್ಲಿ 427 ವೈದ್ಯರು, ಎಂಜಿನಿಯರ್, ಲಾಯರ್, ಮಾಜಿ ಸೈನಿಕರು ಇನ್ನೂ ಹಲವಾರು ಪ್ರಬದ್ದರು ಒಳಗೊಂಡಂಥಾ ಸಭೆಯಲ್ಲಿ ಅಭ್ಯರ್ಥಿ ಶೋಭ ಅವರು ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಅವರು ಮಾತನಾಡುತ್ತ 2014ರಲ್ಲಿ ಮೊದಲ ಬಾರಿ ಮೋದಿ ಅವರು ಪ್ರಧಾನಿ ಮಂತ್ರಿಯಾಗಿ ತಮ್ಮ ಮೊದಲ ಸಭೆಯಲ್ಲಿ ಭಾರತವನ್ನು ವಿಶ್ವ ಗುರುವನ್ನು ಮಾಡುವ ಸಂಕಲ್ಪ ನನ್ನದು, ಭಾರತವನ್ನು ವಿಶ್ವಗುರು ಮಾಡಲು ನನಗೆ 10 ವರ್ಷಗಳಕ್ಕಿಂತ ಹೆಚ್ಚು ಸಮಯ ಬೇಕು ಎಂದೇ ಅವರು ಸಭೆಯಲ್ಲಿ ಅವರು ತಿಳಿಸಿದ್ದರು. ಕೆಲ ವರ್ಷಗಳ ಹಿಂದೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಮ್ಮ ದೇಶದ ಮಾತುಗಳನ್ನು ಪರಿಗಣಿಸಲು ಯಾವ ದೇಶವು ಮುಂದಾಗುತ್ತಿರಲಿಲ್ಲ. ಇಂದು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತ ದೇಶದ ಮಾತುಗಳನ್ನು ಮೊದಲು ಪರಿಗಣಿಸಲು ಮುಖ್ಯ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರ ಕೆಲಸ ಹಾಗೂ ಅವರ ಜೊತೆ ನಮ್ಮ ಪ್ರಧಾನಿ ಬೆಳಸಿಕೊಂಡಿರುವ ಸಂಬಂಧ ಎಂದರು. ಉಕ್ರೇನ್ ಯುದ್ಧದಲ್ಲಿ ನಮ್ಮ ಭಾರತ ದೇಶದ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದರು ಸುಮಾರು ನಾಲ್ಕು ಗಂಟೆಗಳ ಕಾಲ ಯುದ್ಧವನ್ನು ನಿಲ್ಲಿಸಿ ನಮ್ಮ ಭಾರತ ದೇಶದ ವಿದ್ಯಾರ್ಥಿಗಳನ್ನು ನಾವು ಕರಕೊಂಡು ಬರಬೇಕು ಎಂದು ಇಬ್ಬರ ಪ್ರಧಾನಿಗಳ ಜೊತೆ ಮಾತನಾಡಿ ಯುದ್ಧ ನಿಲ್ಲಿಸಿ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಕರತರಲಾಯಿತು. ಈ ಸಂದರ್ಭದಲ್ಲಿ ನಮ್ಮ ವಿದ್ಯಾರ್ಥಿಗಳ ಜೊತೆ ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ ವಿದ್ಯಾರ್ಥಿಗಳು ಕೂಡ ನಮ್ಮ ಭಾರತದ ದ್ವಜವನ್ನು ಹಿಡಿದು ಬಸ್ಸಿನಲ್ಲಿ ಭಾರತ್ ಮಾತಾ ಕೀ ಜೈ ಎಂದು ಬಂದರು. ಇಂತಹ ಶಕ್ತಿ ಇಂದು ನಮ್ಮ ಭಾರತ ದೇಶ ಹಾಗೂ ಪ್ರಧಾನಿ ಅವರದ್ದು ಎಂದರು. ಭ್ರಷ್ಟರಹಿತ ಸರ್ಕಾರವನ್ನು ನೀಡಿ ಅವರ ಅಡಳಿತದ ಶಕ್ತಿಯನ್ನು ಪ್ರತಿಯೊಬ್ಬರಿಗೆ ತಿಳಿಸಿದ್ದಾರೆ, ಸುಮಾರು ವರ್ಷಗಳ ಹಿಂದೆ ಜಾಗತಿಕ ಮಟ್ಟದ ಸಭೆಗಳಲ್ಲಿ ಭಾರತ ದೇಶ ಮಾತನಾಡಿದರೆ ಬೇರೆ ದೇಶಗಳು ಇವರು ಅನುದಾನ ಕೇಳುತ್ತಾರೆ ಎಂದು ನಮ್ಮ ದೇಶದ ಪ್ರಧಾನಿಗಳನ್ನು ಅವಮಾನ ಮಾಡುತ್ತಿದ್ದರು. ಈ ಅವಮಾನಗಳು ನಮ್ಮ ಪ್ರಧಾನಿಗೆ ಮಾಡಿದ್ದು ಅಲ್ಲ ನಮ್ಮ ದೇಶಕ್ಕೆ ಮಾಡಿರುವುದು. ಅದರೆ ಈಗ ಪರಿಸ್ಧಿತಿ ಬದಲಾಗಿದೆ ಅದಕ್ಕೆ ಮುಖ್ಯ ಕಾರಣ ಪ್ರಧಾನಿ ಮೋದಿ ಅವರ ತೆಗೆದುಕೊಂಡ ನಿರ್ಧಾರಗಳು ಎಂದರು. ವಿದೇಶದಲ್ಲಿ ಇರುವ ಭಾರತೀಯರನ್ನು ಕೇಳಿ ಅವರು ಇರುವ ದೇಶದಲ್ಲಿ ಇಂದು ಭಾರತೀಯರನ್ನು ಹೇಗೆ ನೋಡುತ್ತಾರೆ ಎಂದು, ಇಂದು ನಾವು ಬಹು ಹೆಮ್ಮೆಯಿಂದ ಈ ವೇದಿಕೆಯಲ್ಲಿ ಹೇಳುತ್ತೇನೆ ಕೇಂದ್ರ ಸರ್ಕಾರ ಇಂದು ನಮ್ಮ ದೇಶದ ಗೋದಿ ಹಾಗೂ ರಾಗಿಯನ್ನು ಇಡೀ ವಿಶ್ವಕ್ಕೆ ಕಳುಹಿಸುತ್ತಿದ್ದೇವೆ. ನಮ್ಮ ದೇಶದ ಪ್ರಾಚೀನ ಆಯುರ್ವೇದದಲ್ಲಿ ಇರುವ ಪ್ರಯೋಜನಗಳನ್ನು ವಿಶ್ವಕ್ಕೆ ಪರಿಚಯ ಮಾಡಿದ್ದೇವೆ. ಯೋಗಭ್ಯಾಸದಲ್ಲಿ ಇರುವ ಲಾಭಗಳನ್ನು ವಿಶ್ವಕ್ಕೆ ಯೋಗ ಡೇ ಮೂಲಕ ತಿಳಿಸಿ ಇಂದು ಅನೇಕ ದೇಶದಲ್ಲಿ ಯೋಗಭ್ಯಾಸವನ್ನು ಮಾಡುತ್ತಿದ್ದಾರೆ. ದೇಶದ ರಕ್ಷಣೆಯಲ್ಲಿ ರಾಜಿಯಿಲ್ಲ ಎಂದು ಭಾರತದಲ್ಲೇ ನಾವು ಬುಲೆಟ್ಸ್, ರೈಫಲ್, ಹಾಗೂ ಹಲವಾರು ಯುದ್ಧಕ್ಕೆ ಬೇಕಾಗಿರುವ ಸಾಮಗ್ರಿಗಳನ್ನು ಭಾರತದಲ್ಲೇ ಉತ್ಪನ್ನ ಮಾಡಿ ವಿದೇಶಗಳಿಗೆ ಮಾರಾಟ ಮಾಡುತ್ತಿರುವುದು ಹೆಮ್ಮೆಯ ವಿಷಯ ಎಂದರು. ದೇಶದಲ್ಲಿ ಕೇಂದ್ರ ಸರ್ಕಾರ ಮಾಡಿರುವ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ಪ್ರತಿಯೊಬ್ಬರು ತಿಳಿದುಕೊಳ್ಳಬೇಕು. ರಾಮ ಮಂದಿರ ನಿರ್ಮಾಣದ ಕೇಸ್ ಕೋರ್ಟ್ನಲ್ಲಿ ಇತ್ತು. ಪ್ರಧಾನಿ ಮೋದಿ ಅವರು ಸರಿಯಾದ ದಾಖಲೆಗಳನ್ನು ಸರ್ಕಾರದಿಂದ ನೀಡಿ ರಾಮ ಮಂದಿರ ನಿರ್ಮಾಣದ ಕೆಲಸಗಳನ್ನು ಯಾವುದೇ ರಕ್ತಪಾತವಿಲ್ಲದೆ ಪೂರ್ಣಗೊಳಿಸಿದರು ಎಂದರು. ಕಾರ್ಯಕ್ರಮದಲ್ಲಿ ನಗರಮಂಡಲಾಧ್ಯಕ್ಷ ಅನಿಲ್ ಚಳಗೇರಿ, ಮಾಜಿ ಬಿಬಿಎಂಪಿ ಸದಸ್ಯ ವಿ.ವಿ.ಸತ್ಯನಾರಾಯಣ, ರ.ಅಂಜನಪ್ಪ, ರಾಜ್ಯ ಒಬಿಸಿ ಸದಸ್ಯ ಆರ್ ಪಿ ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಶಶಿಕುಮಾರ್, ಕೆಂಗೇರಿ ವಾರ್ಡ್ ಅಧ್ಯಕ್ಷ ಸಂತೋಷ್, ಬಿಜೆಪಿ ಮುಖಂಡರುಗಳಾದ ನವೀನ್, ರಾಮಣ್ಣ,ಜಂಗಾಮ ರಮೇಶ್, ಬಾಲಾಜಿ ಹಾಗೂ ಹಲವಾರು ಸ್ಧಳೀಯ ಮುಖಂಡರುಗಳು ಉಪಸ್ಥಿತರಿದ್ದರು.

ರಾಜಕೀಯ

Yathindra Siddaramaiah ಸದ್ದಿಲ್ಲದೆ ಶುರು ಮಾಡಿದ್ರಾ ಹೊಸ ರಾಜಕೀಯ ಲೆಕ್ಕಾಚಾರ? ಜಮೀರ್ ಭೇಟಿಗೆ ಹೆಚ್ಚಿದ ಕುತೂಹಲ

Published

on

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ Yathindra Siddaramaiah ಅವರು ಇತ್ತೀಚಿನ ದಿನಗಳಲ್ಲಿ ರಾಜಕೀಯವಾಗಿ ಹೆಚ್ಚು ಸಕ್ರಿಯರಾಗುತ್ತಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಯತೀಂದ್ರ ಭೇಟಿ ಮಾಡಿರುವುದು ಇದೀಗ ಕಾಂಗ್ರೆಸ್‌ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಯತೀಂದ್ರ ಸಿದ್ದರಾಮಯ್ಯ ಅವರು ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದ್ದಾರೆ. ಈ ಭೇಟಿ ಸೌಹಾರ್ದಯುತ ಭೇಟಿಯೇ ಅಥವಾ ಇದರ ಹಿಂದೆ ರಾಜಕೀಯ ಲೆಕ್ಕಾಚಾರವಿದೆಯೇ ಎಂಬ ಬಗ್ಗೆ ಇದೀಗ ಹಲವು ರೀತಿಯ ಚರ್ಚೆಗಳು ನಡೆಯುತ್ತಿವೆ.

ಸಿದ್ದರಾಮಯ್ಯ ಆಪ್ತರನ್ನು ಮತ್ತೆ ಒಗ್ಗೂಡಿಸುವ ಪ್ರಯತ್ನ?

ಸಿದ್ದರಾಮಯ್ಯ ಅವರ ರಾಜಕೀಯ ಪ್ರಭಾವವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ನಾಯಕರನ್ನು ಒಗ್ಗೂಡಿಸುವ ಪ್ರಯತ್ನಕ್ಕೆ ಯತೀಂದ್ರ ಮುಂದಾಗಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ವಿಶೇಷವಾಗಿ, ಹಿಂದೆ ಸಿದ್ದರಾಮಯ್ಯ ಅವರೊಂದಿಗೆ ಕೆಲವು ವಿಚಾರಗಳಲ್ಲಿ ಅಂತರ ಕಾಯ್ದುಕೊಂಡಿದ್ದ ನಾಯಕರೊಂದಿಗೂ ಯತೀಂದ್ರ ಮತ್ತೆ ಉತ್ತಮ ಸಂಬಂಧ ಬೆಳೆಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ಇದರ ಭಾಗವಾಗಿಯೇ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಭೇಟಿಯನ್ನು ನೋಡಲಾಗುತ್ತಿದೆ.

ಇದಕ್ಕೂ ಮುನ್ನ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೂ ಯತೀಂದ್ರ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದರು. ಸತೀಶ್ ಜಾರಕಿಹೊಳಿ ಮತ್ತು ಜಮೀರ್ ಅಹ್ಮದ್ ಖಾನ್ ಅವರಂತಹ ಪ್ರಮುಖ ನಾಯಕರನ್ನು ಯತೀಂದ್ರ ಸತತವಾಗಿ ಭೇಟಿ ಮಾಡುತ್ತಿರುವುದು ರಾಜಕೀಯವಾಗಿ ಗಮನ ಸೆಳೆದಿದೆ.

ಭೇಟಿಗಳ ಹಿಂದೆ ರಾಜಕೀಯ ಕಾರ್ಯತಂತ್ರ?

ಯತೀಂದ್ರ ಅವರ ಈ ಭೇಟಿಗಳನ್ನು ಸದ್ಯಕ್ಕೆ ಸಾಮಾನ್ಯ ಸೌಹಾರ್ದಯುತ ಭೇಟಿಗಳೆಂದು ಹೇಳಲಾಗುತ್ತಿದ್ದರೂ, ರಾಜಕೀಯ ಬೆಳವಣಿಗೆಗಳು ಹಾಗೂ ಮುಂದಿನ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆದಿರಬಹುದೆಂಬ ಮಾತುಗಳು ಕೇಳಿಬರುತ್ತಿವೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ರಾಜಕೀಯ ಸಮೀಕರಣಗಳು ಹೇಗೆ ಬದಲಾಗಲಿವೆ ಎಂಬುದು ಕುತೂಹಲ ಮೂಡಿಸಿರುವ ಸಂದರ್ಭದಲ್ಲೇ ಯತೀಂದ್ರ ಅವರ ಚಟುವಟಿಕೆಗಳು ಹೆಚ್ಚಾಗಿವೆ.

ತಂದೆ ಸಿದ್ದರಾಮಯ್ಯ ಅವರ ರಾಜಕೀಯ ಅನುಭವ ಮತ್ತು ಪ್ರಭಾವವನ್ನು ಬಳಸಿಕೊಂಡು ಪಕ್ಷದ ಪ್ರಮುಖ ನಾಯಕರೊಂದಿಗೆ ಬಾಂಧವ್ಯ ಬಲಪಡಿಸುವ ಪ್ರಯತ್ನ ಇದಾಗಿರಬಹುದು ಎಂಬ ವಿಶ್ಲೇಷಣೆ ರಾಜಕೀಯ ವಲಯದಲ್ಲಿ ವ್ಯಕ್ತವಾಗಿದೆ.

ಆದರೆ, ಜಮೀರ್ ಅಹ್ಮದ್ ಖಾನ್ ಮತ್ತು ಸತೀಶ್ ಜಾರಕಿಹೊಳಿ ಅವರೊಂದಿಗಿನ ಯತೀಂದ್ರ ಸಿದ್ದರಾಮಯ್ಯ ಅವರ ಭೇಟಿಗಳ ನಿಖರ ರಾಜಕೀಯ ಉದ್ದೇಶವೇನು ಎಂಬುದು ಇನ್ನೂ ಅಧಿಕೃತವಾಗಿ ಸ್ಪಷ್ಟವಾಗಿಲ್ಲ. ಹೀಗಾಗಿ ಈ ಸರಣಿ ಭೇಟಿಗಳು ಮುಂದಿನ ದಿನಗಳಲ್ಲಿ ಯಾವ ರೀತಿಯ ರಾಜಕೀಯ ಬೆಳವಣಿಗೆಗೆ ಕಾರಣವಾಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

Continue Reading

ದೇಶ

Indian Army ಗೆ ಅಮೆರಿಕದ ಜಾವೆಲಿನ್ ಕ್ಷಿಪಣಿ! ಚೀನಾ-ಪಾಕ್‌ ಗಡಿಗೆ ಮತ್ತಷ್ಟು ಬಲ; ದೊಡ್ಡ ಘೋಷಣೆ

Published

on

ನವದೆಹಲಿ: Indian Army ಭಾರತದ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಯುದ್ಧಭೂಮಿಯಲ್ಲಿ ಪರಿಣಾಮಕಾರಿ ಎಂದು ಸಾಬೀತಾಗಿರುವ ಜಾವೆಲಿನ್ ಆಂಟಿ-ಟ್ಯಾಂಕ್ ಕ್ಷಿಪಣಿ ವ್ಯವಸ್ಥೆಯನ್ನು ಅಮೆರಿಕದಿಂದ ಖರೀದಿಸಲು ಭಾರತ ಯೋಜಿಸುತ್ತಿದೆ ಎಂದು ಭಾರತದಲ್ಲಿನ ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್ ತಿಳಿಸಿದ್ದಾರೆ.

ಒಬ್ಬ ಸೈನಿಕನೇ ಹೊತ್ತೊಯ್ಯಬಹುದಾದ ಮಧ್ಯಮ ಶ್ರೇಣಿಯ ಜಾವೆಲಿನ್ ಕ್ಷಿಪಣಿ ವ್ಯವಸ್ಥೆಯು ‘ಫೈರ್ ಆ್ಯಂಡ್ ಫರ್ಗೆಟ್’ ತಂತ್ರಜ್ಞಾನವನ್ನು ಹೊಂದಿದೆ. ಅಂದರೆ ಕ್ಷಿಪಣಿಯನ್ನು ಗುರಿಯತ್ತ ಉಡಾಯಿಸಿದ ಬಳಿಕ ಅದನ್ನು ನಿರಂತರವಾಗಿ ನಿಯಂತ್ರಿಸುವ ಅಗತ್ಯವಿಲ್ಲ. ಈ ಸಾಮರ್ಥ್ಯವು ಆಧುನಿಕ ಯುದ್ಧಭೂಮಿಯಲ್ಲಿ ಮಹತ್ವದ್ದಾಗಿದೆ.

ಭಾರತ ಮತ್ತು ಅಮೆರಿಕ ನಡುವಿನ ರಕ್ಷಣಾ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ FGM-148 Javelin ಶಸ್ತ್ರಾಸ್ತ್ರ ವ್ಯವಸ್ಥೆಯನ್ನು ಭಾರತಕ್ಕೆ ಮಾರಾಟ ಮಾಡಲು ಅಮೆರಿಕದ ವಿದೇಶಾಂಗ ಇಲಾಖೆ ಕಳೆದ ವರ್ಷದ ನವೆಂಬರ್‌ನಲ್ಲಿ ಅನುಮೋದನೆ ನೀಡಿತ್ತು.

ಜಾವೆಲಿನ್ ಖರೀದಿ ಕುರಿತು ಅಮೆರಿಕದಿಂದ ಮಾಹಿತಿ

ಈ ಕುರಿತು ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಯುದ್ಧ-ಪರೀಕ್ಷಿತ ಜಾವೆಲಿನ್ ಆಂಟಿ-ಟ್ಯಾಂಕ್ ವ್ಯವಸ್ಥೆಯನ್ನು ಖರೀದಿಸಲು ಭಾರತ ಯೋಜಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಮೇ 2026ರಲ್ಲಿ ನಡೆದ ಶಾಂಗ್ರಿ-ಲಾ ಸಂವಾದದಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಪ್ರಸ್ತಾಪಿಸಿದ ರಕ್ಷಣಾ ಸಹಕಾರದ ಮುಂದುವರಿದ ಭಾಗವಾಗಿ ಈ ಬೆಳವಣಿಗೆ ನಡೆದಿದೆ ಎಂದು ಗೋರ್ ಹೇಳಿದ್ದಾರೆ.

ಜಾವೆಲಿನ್ ವ್ಯವಸ್ಥೆಯ ಖರೀದಿಯು ಅಮೆರಿಕ-ಭಾರತ ರಕ್ಷಣಾ ಸಂಬಂಧದಲ್ಲಿ ಮಹತ್ವದ ಹೆಜ್ಜೆಯಾಗಲಿದೆ. ಅಲ್ಲದೆ, ಭವಿಷ್ಯದಲ್ಲಿ ಈ ಶಸ್ತ್ರಾಸ್ತ್ರ ವ್ಯವಸ್ಥೆಯ ಜಂಟಿ ಉತ್ಪಾದನೆಗೆ ಅವಕಾಶಗಳನ್ನು ತೆರೆಯಬಹುದು ಎಂದು ಅವರು ತಿಳಿಸಿದ್ದಾರೆ.

ಎಷ್ಟು ಜಾವೆಲಿನ್ ಕ್ಷಿಪಣಿ ಖರೀದಿ?

ಸದ್ಯ ಭಾರತವು ಎಷ್ಟು ಸಂಖ್ಯೆಯ ಜಾವೆಲಿನ್ ಕ್ಷಿಪಣಿ ವ್ಯವಸ್ಥೆಗಳನ್ನು ಖರೀದಿಸಲಿದೆ ಎಂಬ ನಿಖರ ಮಾಹಿತಿ ಬಹಿರಂಗವಾಗಿಲ್ಲ. ಇದೇ ರೀತಿ ಒಪ್ಪಂದದ ಒಟ್ಟು ಮೌಲ್ಯ ಎಷ್ಟು ಎಂಬುದೂ ಇನ್ನೂ ಸ್ಪಷ್ಟವಾಗಿಲ್ಲ.

ಜಾವೆಲಿನ್ ಕ್ಷಿಪಣಿ ವ್ಯವಸ್ಥೆಯನ್ನು ಮುಖ್ಯವಾಗಿ ಶತ್ರುಗಳ ಟ್ಯಾಂಕ್‌ಗಳು ಮತ್ತು ಶಸ್ತ್ರಸಜ್ಜಿತ ವಾಹನಗಳನ್ನು ಗುರಿಯಾಗಿಸಲು ಬಳಸಲಾಗುತ್ತದೆ. ಅದರ ಸಾಗಾಟದ ಸುಲಭತೆ ಹಾಗೂ ‘ಫೈರ್ ಆ್ಯಂಡ್ ಫರ್ಗೆಟ್’ ಸಾಮರ್ಥ್ಯದಿಂದಾಗಿ ಸೈನಿಕರಿಗೆ ಯುದ್ಧಭೂಮಿಯಲ್ಲಿ ಹೆಚ್ಚಿನ ಚಲನೆಯ ಸ್ವಾತಂತ್ರ್ಯ ದೊರೆಯುತ್ತದೆ.

ಭಾರತ ಈಗಾಗಲೇ ತನ್ನ ಸಶಸ್ತ್ರ ಪಡೆಗಳ ಆಧುನೀಕರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ವಿವಿಧ ದೇಶಗಳಿಂದ ಅತ್ಯಾಧುನಿಕ ರಕ್ಷಣಾ ತಂತ್ರಜ್ಞಾನಗಳನ್ನು ಪಡೆಯುವುದರ ಜೊತೆಗೆ ದೇಶೀಯವಾಗಿ ಶಸ್ತ್ರಾಸ್ತ್ರಗಳ ಉತ್ಪಾದನೆಗೂ ಆದ್ಯತೆ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಜಾವೆಲಿನ್ ವ್ಯವಸ್ಥೆಯ ಖರೀದಿ ಹಾಗೂ ಭವಿಷ್ಯದಲ್ಲಿ ಜಂಟಿ ಉತ್ಪಾದನೆಯ ಸಾಧ್ಯತೆಗಳು ಭಾರತ-ಅಮೆರಿಕ ರಕ್ಷಣಾ ಸಹಕಾರಕ್ಕೆ ಮತ್ತಷ್ಟು ವೇಗ ನೀಡುವ ನಿರೀಕ್ಷೆಯಿದೆ.

Continue Reading

ರಾಜ್ಯ

Mysuru Dasara ಗಜಪಡೆ ಅರಮನೆಗೆ ಎಂಟ್ರಿ; ಜನಸಂದಣಿ ಕಂಡು ಶ್ರೀರಾಮ ಆನೆ ಗಾಬರಿ, ಬಳಿಕ ಏನಾಯ್ತು?

Published

on

ಮೈಸೂರು: ವಿಶ್ವವಿಖ್ಯಾತ Mysuru Dasara 2026 ಹಿನ್ನೆಲೆಯಲ್ಲಿ ದಸರಾ ಗಜಪಡೆಗಳಿಗೆ ಮೈಸೂರು ಅರಣ್ಯ ಭವನದಲ್ಲಿ ಇಂದು ಬೆಳಗ್ಗೆ ಸಾಂಪ್ರದಾಯಿಕ ಪೂಜೆ ನೆರವೇರಿಸಲಾಯಿತು. ಒಟ್ಟು 9 ದಸರಾ ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಗಜಪಡೆಗಳು ಮೈಸೂರು ಅರಮನೆಯತ್ತ ಪ್ರಯಾಣ ಬೆಳೆಸಿದವು.

ಅರಮನೆ ದ್ವಾರಕ್ಕೆ ಆಗಮಿಸಿದ ದಸರಾ ಗಜಪಡೆಗಳನ್ನು ಮೈಸೂರು ಜಿಲ್ಲಾಡಳಿತ ವತಿಯಿಂದ ಸಂಪ್ರದಾಯಬದ್ಧವಾಗಿ ಸ್ವಾಗತಿಸಲಾಯಿತು. ಶುಭ ಲಗ್ನದಲ್ಲಿ ಆನೆಗಳು ಅರಮನೆ ಪ್ರವೇಶಿಸಬೇಕಿದ್ದ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಸಾಂಪ್ರದಾಯಿಕ ಪೂಜೆ ಹಾಗೂ ಸ್ವಾಗತದ ಬಳಿಕ ದಸರಾ ಆನೆಗಳು ಅರಮನೆ ಆವರಣ ಪ್ರವೇಶಿಸಿದವು.

ಅರಮನೆ ಪ್ರವೇಶದ ವೇಳೆ ಶ್ರೀರಾಮ ಆನೆಗೆ ಗಾಬರಿ

ಇದೇ ವೇಳೆ ಮೈಸೂರು ಅಂಬಾವಿಲಾಸ ಅರಮನೆ ಪ್ರವೇಶಿಸುವ ಸಂದರ್ಭದಲ್ಲಿ ಶ್ರೀರಾಮ ಆನೆ ಏಕಾಏಕಿ ಗಾಬರಿಗೊಂಡ ಘಟನೆ ನಡೆದಿದೆ. ಅರಮನೆ ಮುಂಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದನ್ನು ಕಂಡು ಆನೆ ಕೆಲಕಾಲ ಬೆಚ್ಚಿಬಿದ್ದು ಹಿಂದಕ್ಕೆ ಸರಿಯಲು ಯತ್ನಿಸಿತು.

ಅರಮನೆ ದ್ವಾರದ ಬಳಿ ಹಾಕಲಾಗಿದ್ದ ಬ್ಯಾರಿಕೇಡ್‌ಗಳು, ಜನರ ಚಲನವಲನ ಹಾಗೂ ಸುತ್ತಮುತ್ತಲಿನ ಗದ್ದಲದಿಂದ ಶ್ರೀರಾಮ ಆನೆ ಮತ್ತಷ್ಟು ಆತಂಕಗೊಂಡಿತು. ಇದರ ನಡುವೆ ಕೇಳಿಬಂದ ನಾದಸ್ವರದ ಸದ್ದಿಗೂ ಆನೆ ಪ್ರತಿಕ್ರಿಯಿಸಿ, ಅರಮನೆ ಆವರಣ ಪ್ರವೇಶಿಸಲು ಹಿಂದೇಟು ಹಾಕಿತು.

ಶ್ರೀರಾಮ ಆನೆ ಗಾಬರಿಗೊಂಡಿದ್ದರಿಂದ ಸ್ಥಳದಲ್ಲಿದ್ದ ಜನರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಪರಿಸ್ಥಿತಿಯನ್ನು ಗಮನಿಸಿದ ಮಾವುತರು ಹಾಗೂ ಕಾವಾಡಿಗರು ತಕ್ಷಣವೇ ಆನೆಯನ್ನು ನಿಯಂತ್ರಣಕ್ಕೆ ತರಲು ಮುಂದಾದರು.

ಮಾವುತರು, ಕಾವಾಡಿಗರಿಂದ ಆನೆ ಹತೋಟಿ

ಮಾವುತರು ಮತ್ತು ಕಾವಾಡಿಗರು ಆನೆಯನ್ನು ಸಮಾಧಾನಪಡಿಸಿ ಹತೋಟಿಗೆ ತಂದ ಬಳಿಕ, ಯಾವುದೇ ತೊಂದರೆಯಾಗದಂತೆ ಸುರಕ್ಷಿತವಾಗಿ ಅರಮನೆ ಆವರಣದೊಳಗೆ ಕರೆದುಕೊಂಡು ಹೋದರು. ಇದರಿಂದ ಸ್ಥಳದಲ್ಲಿದ್ದವರು ನಿಟ್ಟುಸಿರು ಬಿಟ್ಟರು.

ಮೈಸೂರು ದಸರಾ ಜಂಬೂ ಸವಾರಿಯ ಪ್ರಮುಖ ಆಕರ್ಷಣೆಯಾಗಿರುವ ಗಜಪಡೆಯ ಆಗಮನದೊಂದಿಗೆ ಅರಮನೆ ಆವರಣದಲ್ಲಿ ದಸರಾ ಸಂಭ್ರಮ ಮತ್ತಷ್ಟು ಹೆಚ್ಚಾಗಿದೆ. ಆನೆಗಳ ಆರೋಗ್ಯ, ಸುರಕ್ಷತೆ ಮತ್ತು ತರಬೇತಿಗೆ ಅರಣ್ಯ ಇಲಾಖೆ ಹಾಗೂ ಮಾವುತರು ವಿಶೇಷ ಗಮನ ಹರಿಸುತ್ತಿದ್ದಾರೆ.

Continue Reading

Trending