ಚುನಾವಣೆ
ಮಂಡ್ಯ ಸ್ಪರ್ಧೆಯಿಂದ ಹಿಂದೆ ಸರಿದ ರೆಬಲ್ ಲೇಡಿ; ಕುಮಾರಸ್ವಾಮಿ ಜೊತೆ ಸಂಧಾನ ಯಶಸ್ವಿಯಾಗಿದ್ದು ಹೇಗೆ?
ಮಂಡ್ಯ : ಮಂಡ್ಯ ಲೋಕಸಭಾ ಅಖಾಡ ಮತ್ತಷ್ಟು ರಂಗೇರಿದೆ. ಮಂಡ್ಯ ಬಿಟ್ಟು ಹೋಗಲ್ಲ ಅಂತಾ ಸಸ್ಪೆನ್ಸ್ ಉಳಿಸಿಕೊಂಡಿರುವ ಮಂಡ್ಯ ಹಾಲಿ ಸಂಸದೆ ಸುಮಲತಾ ಅವರ ನಡೆಯಿಂದ ಕಮಲ-ದಳ ದೋಸ್ತಿಗಳಿಗೆ ಟೆನ್ಷನ್ ಶುರುವಾಗಿತ್ತು. ಹೀಗಾಗಿ ಸುಮಲತಾರ ಮನವೊಲಿಕೆಗೆ ಖುದ್ದು ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿಯೇ ಅಖಾಡಕ್ಕಿಳಿದ್ದರು.
ಹೌದು, ಸುಮಲಿತಾ ಅವರನ್ನ ಖುದ್ದಾಗಿ ಭೇಟಿ ಮಾಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದಲ್ಲಿ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಮೋದಿ ಅವರ ಕೈ ಬಲ ಪಡಿಸುವ ನಿಟ್ಟಿನಲ್ಲಿ ಬೆಂಬಲಿಸಿ ಎಂದು ಸುಮಲತಾ ಅವರ ಜೊತೆಗೆ ಕುಮಾರಸ್ವಾಮಿ ಚರ್ಚೆ ನಡೆದಿದ್ದು, ಕೊನೆಗೂ ಸಂಧಾನ ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿವೆ.
2019 ರ ಲೋಕಸಭಾ ಚುನಾವಣೆಯಲ್ಲಿ ಕಳೆದು ಕೊಂಡ ಮಂಡ್ಯ ಕ್ಷೇತ್ರವನ್ನ ಈ ಬಾರಿಯ ಚುನಾವಣೆಯಲ್ಲಿ ವಶಕ್ಕೆ ಪಡೆಯಬೇಕು ಎಂದು ದಳಪತಿಗಳು ಮಾಸ್ಟರ್ ಪ್ಲಾನ್ ನಡೆಸಿದ್ದಾರೆ. ಅದರಂತೆ ಮೈತ್ರಿಯಾಗಿರುವ ಜೆಡಿಎಸ್ ನಾಯಕರು ಆರಂಭದಿಂದಲೂ ಮಂಡ್ಯ ಲೋಕಸಭಾ ಕ್ಷೇತ್ರದ ಮೇಲೆ ಕಣ್ಣೀಟ್ಟಿದ್ದರು. ಅದರಂತೆ ಬಿಜೆಪಿ ಹೈಕಮಾಂಡ್ ನಾಯಕರ ಜೊತೆಗೆ ಚರ್ಚೆ ನಡೆಸಿ, ಪಟ್ಟು ಹಿಡಿದಂತೆ ಮಂಡ್ಯ ಕ್ಷೇತ್ರವನ್ನ ಪಡೆಯುವಲ್ಲಿ ಮೊದಲ ಹಂತದಲ್ಲೇ ಯಶಸ್ವಿಯಾಗಿದ್ದಾರೆ. ಇನ್ನೂ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಕಣದಲ್ಲಿದ್ದು, ಮಂಡ್ಯದಲ್ಲಿ ಮತ್ತೆ ಸುಮಾಲಾತಾ ಸ್ಪರ್ಧೆ ಮಾಡುತ್ತಾರಾ ಎನ್ನುವ ಟೆನ್ಷನ್ ಶುರುವಾಗಿತ್ತು. ಆದರೆ, ಕುಮಾರಸ್ವಾಮಿ ಅವರು ಸುಮಲತಾ ಅವರ ಜೊತೆಗೆ ಮಾತುಕತೆ ನಡೆಸಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸುಮಾಲತಾ ಸ್ಪರ್ಧೆ ಮಾಡುವುದಿಲ್ಲ ಎಂದು ತಿಳಿದು ಬಂದಿದೆ. ಇನ್ನೂ ಸುಮಲತಾ ಅಂಬರೀಶ್ ಅವರನ್ನ ಮನವೊಲಿಸುವಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಯಶಸ್ವಿಯಾಗಿದ್ದು, ಮುನಿಸು ಮರೆತು ಮೈತ್ರಿ ಧರ್ಮ ಪಾಲಿಸಲು ಕುಮಾರಸ್ವಾಮಿ ಪರ ಪ್ರಚಾರ ನಡೆಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಾರಿ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನನ್ನ ಬೆಂಬಲಿಸಿ. ಮುಂದಿನ ದಿನಗಳಲ್ಲಿ ಪುತ್ರ ಅಭಿಷೇಕ್ ರಾಜಕೀಯ ಭವಿಷ್ಯ ನಾನು ನೋಡಿಕೊಳ್ಳುತ್ತೇನೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಮಂಡ್ಯದಲ್ಲಿ ಕಾಂಗ್ರೆಸ್ ಸೋಲಿಸಲು ನನಗೆ ನೀವು ಸಹಕಾರಿಸಿ, ಅಂಬರೀಶ್ ಅವರಿಗೆ ರಾಜಕೀಯವಾಗಿ ಕಾಂಗ್ರೆಸ್ ಅನ್ಯಾಯ ಮಾಡಿದೆ. ನಾವು ಇಬ್ಬರು ಒಟ್ಟಾಗಿ ಕೆಲಸ ಮಾಡಿದ್ರೆ ಮಂಡ್ಯ ಕಾಂಗ್ರೆಸ್ ನಿರ್ನಾಮ ಮಾಡಬಹುದು. ಅಂಬರೀಶ್ ಮತ್ತು ನಮ್ಮ ಕುಟುಂಬದ ನಡುವೆ ಉತ್ತಮ ಸಂಬಂಧವಿತ್ತು. ಅದೇ ಸಂಬಂಧವನ್ನ ನಾವು ಮುಂದುವರೆಸಿಕೊಂಡು ಹೋಗಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಮಂಡ್ಯದಲ್ಲಿ ಹೆಚ್ಚಿನ ಅಭಿವೃದ್ಧಿ ಇಬ್ಬರು ಜೊತೆಗೆ ಕೆಲಸ ಮಾಡೋಣ. ದೇಶದಲ್ಲಿ ಮೋದಿ ಗೆಲುವಿಗೆ ಇಬ್ಬರು ಜೊತೆಗೆ ಕೆಲಸ ಮಾಡೋಣ, ಮುಂದೆ ನಿಮ್ಮನ್ನ ರಾಜ್ಯಸಭೆಗೆ ಕಳುಹಿಸಲು ನಾನು ಬಿಜೆಪಿ ನಾಯಕರು ಜೊತೆಗೆ ಮಾತನಾಡುತ್ತೇನೆ, ನಿಮ್ಮ ರಾಜಕೀಯ ಭವಿಷ್ಯವು ನಮಗೆ ಮುಖ್ಯ ಎಂದು ಕುಮಾರಸ್ವಾಮಿ ಭರವಸೆಯನ್ನ ನೀಡಿದ್ದು, ಸದ್ಯ ಮಂಡ್ಯ ಹಾಲಿ ಸಂಸದೆಯಾಗಿರುವ ಸುಮಲತಾ ಅಂಬರೀಶ್ ಅವರು ಮಂಡ್ಯದಿಂದ ಸ್ಪರ್ಧೆ ಮಾಡದಂತೆ ಕುಮಾರಸ್ವಾಮಿ ಅವರು ಮನವೊಲಿಸಿದ್ದು, ಮುನಿಸು ಮರೆತು ಮೈತ್ರಿ ಧರ್ಮ ಪಾಲನೆಗೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
ಚುನಾವಣೆ
ನರೋತ್ತಮ್ ಮಿಶ್ರಾಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಭಾರೀ ಬಂಡಾಯ! ರಸ್ತೆ ತಡೆ, ಕಲ್ಲು ತೂರಾಟ, ಹಲವು ರಾಜೀನಾಮೆ
ಭೋಪಾಲ್: ಮಧ್ಯಪ್ರದೇಶದ ದತಿಯಾ ವಿಧಾನಸಭಾ ಉಪಚುನಾವಣೆಗೆ ಮಾಜಿ ಗೃಹಸಚಿವ ನರೋತ್ತಮ್ ಮಿಶ್ರಾ ಅವರಿಗೆ ಬಿಜೆಪಿ ಟಿಕೆಟ್ ನೀಡದೆ, ಅವರ ಬದಲಿಗೆ ಅಶುತೋಷ್ ತಿವಾರಿ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ನಿರ್ಧಾರವನ್ನು ವಿರೋಧಿಸಿ ದತಿಯಾ ಬಿಜೆಪಿ ಘಟಕದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು, ಜಿಲ್ಲಾಧ್ಯಕ್ಷ ರಘುವೀರ್ ಶರಣ್ ಸೇರಿದಂತೆ ಹಲವು ಕೌನ್ಸಿಲರ್ಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಟಿಕೆಟ್ ನಿರಾಕರಣೆಯ ಸುದ್ದಿ ಹೊರಬಿದ್ದ ತಕ್ಷಣ ಸಾವಿರಾರು ಬೆಂಬಲಿಗರು NH-44 ಝಾನ್ಸಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಪರಿಣಾಮ ಸುಮಾರು 15 ಕಿಲೋಮೀಟರ್ಗಳಷ್ಟು ಸಂಚಾರ ದಟ್ಟಣೆ ಉಂಟಾಗಿ ಸಾರ್ವಜನಿಕರು ಪರದಾಡುವಂತಾಯಿತು. ಪ್ರತಿಭಟನೆ ವೇಳೆ ಕೆಲವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಯಿತು.
ದತಿಯಾ ಎಸ್ಪಿ ಮಯೂರ್ ಖಾಂಡೇಲ್ವಾಲ್ ಅವರ ಪ್ರಕಾರ, 3,000ಕ್ಕೂ ಹೆಚ್ಚು ಪ್ರತಿಭಟನಾಕಾರರು ಮಾರುಕಟ್ಟೆ ಬಂದ್ ಮಾಡಲು ಯತ್ನಿಸಿದ್ದು, ಹಲವು ಬಾರಿ ಮನವಿ ಮಾಡಿದರೂ ರಸ್ತೆ ತಡೆ ಹಿಂಪಡೆಯಲಿಲ್ಲ. ಬಳಿಕ ಪೊಲೀಸರು ಅಶ್ರುವಾಯು ಬಳಸಿದರೂ ಕಲ್ಲು ತೂರಾಟ ಮತ್ತಷ್ಟು ತೀವ್ರಗೊಂಡಿತು. ಘಟನೆಯಲ್ಲಿ ಆರುಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಹೆಚ್ಚುವರಿ ಎಸ್ಪಿ ಹಾಗೂ ಎಸ್ಪಿಗೂ ಗಾಯಗಳಾಗಿವೆ. ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಯಾರು ನರೋತ್ತಮ್ ಮಿಶ್ರಾ?
ನರೋತ್ತಮ್ ಮಿಶ್ರಾ ಮಧ್ಯಪ್ರದೇಶದ ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಗೃಹಸಚಿವರಾಗಿದ್ದಾರೆ. 2008ರಿಂದ ದತಿಯಾ ಕ್ಷೇತ್ರವನ್ನು ಪ್ರತಿನಿಧಿಸಿರುವ ಅವರು ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದಲ್ಲಿ ಗೃಹ, ಆರೋಗ್ಯ, ವೈದ್ಯಕೀಯ ಶಿಕ್ಷಣ, ಜಲಸಂಪನ್ಮೂಲ, ನಗರಾಭಿವೃದ್ಧಿ ಸೇರಿದಂತೆ ಹಲವು ಪ್ರಮುಖ ಸಚಿವಾಲಯಗಳನ್ನು ನಿರ್ವಹಿಸಿದ್ದರು.
ಉಪಚುನಾವಣೆ ಏಕೆ ನಡೆಯುತ್ತಿದೆ?
ಕಾಂಗ್ರೆಸ್ ಶಾಸಕ ರಾಜೇಂದ್ರ ಭಾರತಿ ವಿರುದ್ಧ ವಂಚನೆ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಬಳಿಕ ಅವರ ಶಾಸಕ ಸ್ಥಾನ ರದ್ದುಗೊಂಡಿದೆ. ಇದರ ಪರಿಣಾಮವಾಗಿ ದತಿಯಾ ಕ್ಷೇತ್ರಕ್ಕೆ ಜುಲೈ 30ರಂದು ಉಪಚುನಾವಣೆ ನಡೆಯಲಿದ್ದು, ಆಗಸ್ಟ್ 3ರಂದು ಮತ ಎಣಿಕೆ ನಡೆಯಲಿದೆ. ಟಿಕೆಟ್ ಘೋಷಣೆಯ ಬೆನ್ನಲ್ಲೇ ಬಿಜೆಪಿ ಒಳಜಗಳ ತೀವ್ರಗೊಂಡಿರುವುದು ಚುನಾವಣೆಗೆ ಹೊಸ ತಿರುವು ನೀಡಿದೆ.
ಚುನಾವಣೆ
ಐದು ನಗರ ಪಾಲಿಕೆ ಚುನಾವಣೆ ಕಾವು: ಕಾಂಗ್ರೆಸ್ ಸೇರಿದಂತೆ ಪಕ್ಷಗಳಲ್ಲಿ ಚಟುವಟಿಕೆ ಜೋರು
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಆಗಸ್ಟ್ 31ರೊಳಗೆ ಕಡ್ಡಾಯವಾಗಿ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಚುನಾವಣಾ ಸಿದ್ಧತೆಗಳನ್ನು ಚುರುಕುಗೊಳಿಸಿದೆ. ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದ್ದು, ಆಗಸ್ಟ್ ಮೂರನೇ ವಾರದಲ್ಲಿ ಮತದಾನ ನಡೆಯುವ ನಿರೀಕ್ಷೆ ಮೂಡಿದೆ.
ಸುಪ್ರೀಂ ಕೋರ್ಟ್ ಮೊದಲು ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸೂಚಿಸಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ, ಸಿಬ್ಬಂದಿ ಕೊರತೆ ಹಾಗೂ ಆಡಳಿತಾತ್ಮಕ ಕಾರಣಗಳನ್ನು ಪರಿಗಣಿಸಿ ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿದೆ. ಆದರೆ ಇದೇ ಅಂತಿಮ ಅವಕಾಶವಾಗಿದ್ದು, ಮತ್ತೊಮ್ಮೆ ಯಾವುದೇ ಕಾರಣಕ್ಕೂ ಕಾಲಾವಕಾಶ ನೀಡುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟ ಎಚ್ಚರಿಕೆ ನೀಡಿದೆ.
ರಾಜ್ಯ ಸರ್ಕಾರವು ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ಕೋರಿ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಚುನಾವಣಾ ಪ್ರಕ್ರಿಯೆ ವೇಗ ಪಡೆಯಲು ಕಾರಣವಾಗಿದೆ. ಈ ಬೆಳವಣಿಗೆಯ ನಂತರ ರಾಜ್ಯ ಚುನಾವಣಾ ಆಯೋಗ ಸದ್ದಿಲ್ಲದೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಿದೆ.
ಮತದಾರರ ಪಟ್ಟಿ ಅಂತಿಮಗೊಳಿಸುವುದು, ಮತಗಟ್ಟೆಗಳ ಗುರುತಿಸುವಿಕೆ, ಚುನಾವಣಾ ಸಿಬ್ಬಂದಿ ನಿಯೋಜನೆ ಹಾಗೂ ಇತರೆ ಆಡಳಿತಾತ್ಮಕ ಕಾರ್ಯಗಳು ಈಗಾಗಲೇ ನಡೆಯುತ್ತಿವೆ. ಎಲ್ಲ ಸಿದ್ಧತೆಗಳು ಪೂರ್ಣಗೊಂಡ ಬಳಿಕ ಜುಲೈ 10ರೊಳಗೆ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ವೇಳಾಪಟ್ಟಿ ಘೋಷಣೆಯಾದ ತಕ್ಷಣ ಜಿಬಿಎ ವ್ಯಾಪ್ತಿಯಲ್ಲಿ ಮಾದರಿ ನೀತಿಸಂಹಿತೆ ಜಾರಿಗೆ ಬರಲಿದೆ.
ಇತ್ತ ರಾಜಕೀಯ ಪಕ್ಷಗಳೂ ಚುನಾವಣಾ ಕಣಕ್ಕೆ ಇಳಿಯಲು ಸಜ್ಜಾಗಿವೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಐದು ನಗರ ಪಾಲಿಕೆಗಳ ವ್ಯಾಪ್ತಿಯ ಮುಖಂಡರು ಮತ್ತು ಕಾರ್ಯಕರ್ತರಿಗೆ ಸಂಘಟನಾ ಚಟುವಟಿಕೆಗಳನ್ನು ತೀವ್ರಗೊಳಿಸುವಂತೆ ಸೂಚಿಸಿದೆ. ಮನೆಮನೆಗೆ ಭೇಟಿ, ಸರ್ಕಾರದ ಸಾಧನೆಗಳ ಪ್ರಚಾರ, ಗ್ಯಾರಂಟಿ ಯೋಜನೆಗಳ ಮಾಹಿತಿ ಹಾಗೂ ವಾರ್ಡ್ವಾರು ಮತದಾರರ ಸಂಪರ್ಕ ಅಭಿಯಾನಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.
ಜಿಬಿಎ ಚುನಾವಣೆಗಳು ಬೆಂಗಳೂರು ನಗರ ಆಡಳಿತದ ಭವಿಷ್ಯವನ್ನು ನಿರ್ಧರಿಸುವ ಮಹತ್ವದ ಚುನಾವಣೆಗಳಾಗಿದ್ದು, ರಾಜಕೀಯ ಪಕ್ಷಗಳ ನಡುವೆ ತೀವ್ರ ಪೈಪೋಟಿ ನಿರೀಕ್ಷಿಸಲಾಗಿದೆ.
ಚುನಾವಣೆ
GBA ELECTION : ಜುಲೈ ಮೊದಲ ವಾರದಲ್ಲೇ ವೇಳಾಪಟ್ಟಿ? ಬೆಂಗಳೂರು ರಾಜಕೀಯ ಕಣ ರಂಗೇರಲು ಸಜ್ಜು
ಬೆಂಗಳೂರು: ಸುಪ್ರೀಂ ಕೋರ್ಟ್ ನೀಡಿರುವ ಕಟ್ಟುನಿಟ್ಟಿನ ಆದೇಶದ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರಪಾಲಿಕೆಗಳ ಚುನಾವಣೆ ಆಗಸ್ಟ್ 31ರೊಳಗೆ ನಡೆಸುವುದು ಬಹುತೇಕ ಖಚಿತವಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ ಆಯೋಗವು ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಿದೆ.
ಮೂಲಗಳ ಪ್ರಕಾರ, ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಅಧಿಕೃತ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಜುಲೈ 10ರೊಳಗೆ ದಿನಾಂಕ ಘೋಷಣೆಯಾಗಬಹುದು ಎಂದು ಹೇಳಲಾಗುತ್ತಿದ್ದು, ವೇಳಾಪಟ್ಟಿ ಪ್ರಕಟವಾದ ತಕ್ಷಣವೇ ಬೆಂಗಳೂರು ನಗರದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಆಗಸ್ಟ್ ಮೂರನೇ ವಾರದಲ್ಲಿ ಮತದಾನ ನಡೆಸುವ ಬಗ್ಗೆ ಆಯೋಗ ಚಿಂತನೆ ನಡೆಸಿದೆ.
ಈ ಹಿಂದೆ ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಗಡುವು ನೀಡಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಹಾಗೂ ಸಿಬ್ಬಂದಿ ಕೊರತೆಯನ್ನು ಪರಿಗಣಿಸಿ ನ್ಯಾಯಾಲಯವು ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿತ್ತು. ಜೊತೆಗೆ, ಯಾವುದೇ ಕಾರಣಕ್ಕೂ ಮತ್ತೆ ಚುನಾವಣೆ ಮುಂದೂಡುವ ಪ್ರಸ್ತಾಪವನ್ನು ತನ್ನ ಮುಂದೆ ತರಬಾರದು ಎಂದು ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ನೀಡುವಂತೆ ಸರ್ಕಾರ ಸಲ್ಲಿಸಿದ್ದ ಮನವಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ.
ಇದರ ಬೆನ್ನಲ್ಲೇ ರಾಜ್ಯ ಚುನಾವಣಾ ಆಯೋಗವು ಮತದಾರರ ಪಟ್ಟಿ ಅಂತಿಮಗೊಳಿಸುವುದು, ಮತಗಟ್ಟೆಗಳ ಸಿದ್ಧತೆ ಹಾಗೂ ಸಿಬ್ಬಂದಿ ನಿಯೋಜನೆ ಸೇರಿದಂತೆ ಹಲವು ಕಾರ್ಯಗಳಲ್ಲಿ ತೊಡಗಿದೆ. ರಾಜಕೀಯ ಪಕ್ಷಗಳೂ ಚುನಾವಣೆಗೆ ಸಜ್ಜಾಗಿವೆ. ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಕಾರ್ಯಕರ್ತರಿಗೆ ಸೂಚನೆ ನೀಡಿದೆ. ಬಿಜೆಪಿ, ಕಳೆದ ಆರು ವರ್ಷಗಳಿಂದ ಚುನಾವಣೆ ನಡೆಯದ ಪರಿಣಾಮ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಆರೋಪಿಸುತ್ತಿದೆ. ಇತ್ತ ಬಿಜೆಪಿ-ಜೆಡಿಎಸ್ ಮೈತ್ರಿಯೂ ಚುನಾವಣಾ ಅಖಾಡಕ್ಕೆ ಸಜ್ಜಾಗಿದ್ದು, ಪಂಚ ಪಾಲಿಕೆ ಚುನಾವಣೆ ಭಾರೀ ಪೈಪೋಟಿಗೆ ಸಾಕ್ಷಿಯಾಗುವ ನಿರೀಕ್ಷೆ ಮೂಡಿದೆ.
-
ದೇಶ20 hours agoಬಿಹಾರ ರಾಜಕೀಯದಲ್ಲಿ ಭಾರಿ ಟ್ವಿಸ್ಟ್: ನಾಮಪತ್ರದ ಮರುದಿನವೇ BJP ಅಭ್ಯರ್ಥಿ ಬದಲಾವಣೆ, ಪ್ರಶಾಂತ್ ಕಿಶೋರ್ ವಿರುದ್ಧ ಹೊಸ ಮುಖ!
-
ದೇಶ20 hours ago20 ಗಂಟೆಗಳ ಕಾಲ ನೀರಿನಡಿ ಸಾಹಸ! ‘ಮೈಸಾ’ ಸಿನಿಮಾದಲ್ಲಿ ಇತಿಹಾಸ ಸೃಷ್ಟಿಸಿದ ರಶ್ಮಿಕಾ ಮಂದಣ್ಣ
-
ದೇಶ21 hours agoIran-ಅಮೆರಿಕ ಯುದ್ಧ ಆತಂಕ: ಮಂಗಳೂರಿನಲ್ಲಿ ಮತ್ತೊಂದು ಬೃಹತ್ ತೈಲ ಸಂಗ್ರಹಾಗಾರ, ಭಾರತದ ಇಂಧನ ಭದ್ರತೆಗೆ ONGC ಮಹತ್ವದ ನಿರ್ಧಾರ
-
ಕ್ರೀಡೆ14 hours agoತಂಡದ ಸೋಲು ಸಹಿಸಲಾಗದೆ ಕಣ್ಣೀರಿಟ್ಟ ನೋರಾ; ಅಭಿಮಾನಿಗಳ ಮನಗೆದ್ದ ವಿಡಿಯೋ
-
ದೇಶ21 hours ago40 ವರ್ಷಗಳ ಬಳಿಕ ಭಾರತೀಯ ಪ್ರಧಾನಿ ನ್ಯೂಜಿಲ್ಯಾಂಡ್ಗೆ; FTA ಮೂಲಕ ಹೊಸ ಅಧ್ಯಾಯ
-
ದೇಶ18 hours agoಕಾಶ್ಮೀರ ನಕ್ಷೆ ತಪ್ಪಾಗಿ ಪ್ರದರ್ಶನ; ಬಾಂಗ್ಲಾದೇಶದಲ್ಲೇ ಭಾರತದ ಅಧಿಕಾರಿ ಖಡಕ್ ಆಕ್ಷೇಪ
-
ಚುನಾವಣೆ19 hours agoನರೋತ್ತಮ್ ಮಿಶ್ರಾಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಭಾರೀ ಬಂಡಾಯ! ರಸ್ತೆ ತಡೆ, ಕಲ್ಲು ತೂರಾಟ, ಹಲವು ರಾಜೀನಾಮೆ
-
ದೇಶ19 hours ago14 ಗಂಟೆಯಲ್ಲಿ 265 ಕಿ.ಮೀ ಪಯಣ; MLA ಸುರೇಶ್ ಕುಮಾರ್ ಅವರ ಫಿಟ್ನೆಸ್ಗೆ ಜನ ಫಿದಾ
