ದೇಶ
ಮಹಾ ಚುನಾವಣೆಯಲ್ಲಿ ಇವಿಎಂ ಹ್ಯಾಕ್ ಬಗ್ಗೆ ಸಮಗ್ರ ತನಿಖೆ ಅಗತ್ಯ-ಡಿ ಕೆ ಶಿವಕುಮಾರ್
ಬೆಂಗಳೂರು: ಮಹಾರಾಷ್ಟ್ರ ಎಲೆಕ್ಷನ್ ನಲ್ಲಿ ಮಹಾ ವಿಕಾಸ ಆಘಾಡಿಗೆ ತೀವ್ರ ಹಿನ್ನಡೆ ಆದ ಪರಿಣಾಮ ಕೈ ನಾಯಕರು ಇವಿಎಂ ಹ್ಯಾಕ್ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ,
ಬೆಂಗಳೂರಿನಲ್ಲಿ ಈ ಬಗ್ಗೆ ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ನೀಡಿದ್ದಾರೆ, ಎನ್ಸಿಪಿ ನಾಯಕಿ ಸುಪ್ರಿಯಾ ಸುಳೆ ಹೇಳಿರುವ ಮಾತಿನಂತೆ ನಾವೆಲ್ಲರೂ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳುವ ಸಮಯ ಬಂದಿದೆ, ಕೆಲವೇ ದಿನಗಳಲ್ಲಿ ತಾವು ಕೂಡ ದಿಲ್ಲಿಗೆ ಹೋಗಲಿದ್ದು, ಈ ಬಗ್ಗೆ ಹಿರಿಯ ನಾಯಕರ ಜೊತೆ ಸಮಾಲೋಚನೆ ನಡೆಸೋದಾಗಿ ಹೇಳಿದರು, ಇಡೀ ರಾಷ್ಟ್ರ ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು, ವಿಪಕ್ಷಗಳನ್ನು ಮಟ್ಟಹಾಕಲಾಗುತ್ತಿದೆ, ಇವಿಎಂ ಹ್ಯಾಕ್ ಬಗ್ಗೆ ಸಮಗ್ರ ತನಿಖೆ ಅಗತ್ಯ ಎಂದು ಹೇಳಿದರು,
ಕಾಂಗ್ರೆಸ್ ನಾಯಕ ಗೃಹಮಂತ್ರಿ ಜಿ ಪರಮೇಶ್ವರ್ ಕೂಡ ಮಹಾರಾಷ್ಟ್ರದಲ್ಲಿ ಇವಿಎಂ ಹ್ಯಾಕಿಂಗ್ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದರು, ಈ ಬಗ್ಗೆ ಪ್ರತಿಕ್ರಿಯಿಸಿರುವ ಎನ್ಸಿಪಿ ನಾಯಕಿ ಸುಪ್ರಿಯಾ ಸುಳೆ ಅವರು ಕಾಂಗ್ರೆಸ್ ಪಕ್ಷದೊಂದಿಗೆ ಈ ಬಗ್ಗೆ ಚರ್ಚೆ ನಡೆಸಲಾಗುವುದು, ಬಳಿಕ ಸಂಘಟಿತ ಹೋರಾಟದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ, ಸುಪ್ರಿಯಾ ಸುಳೆ ಅವರ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿರುವ ಡಿಕೆಶಿ ಇವಿಎಂ ಹ್ಯಾಕ್ ಬಗ್ಗೆ ತನಿಖೆ ಅಗತ್ಯ ಎಂದು ನುಡಿದಿದ್ದಾರೆ,
ಅಪರಾಧ
Hassan Jail Fight: ಫೋನ್ ಕರೆ ವಿಚಾರಕ್ಕೆ ಕೈದಿಗಳ ಮಾರಾಮಾರಿ; ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ
ಹಾಸನ: ವಿಚಾರಣಾಧೀನ ಕೈದಿಗಳ ನಡುವೆ ಫೋನ್ ಕರೆ ಮಾಡುವ ವಿಚಾರಕ್ಕೆ ಆರಂಭವಾದ ಜಗಳ ಜೈಲಿನೊಳಗೇ ಮಾರಾಮಾರಿಗೆ ತಿರುಗಿದ ಘಟನೆ Hassan ನಗರದ ಸಂತೇಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಜಗಳ ಬಿಡಿಸಲು ಮುಂದಾದ ಜೈಲು ಸಿಬ್ಬಂದಿ ಮೇಲೂ ಕೈದಿಗಳು ಹಲ್ಲೆ ನಡೆಸಿದ್ದು, ಘಟನೆಯಿಂದ ಜೈಲಿನೊಳಗೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಫೋನ್ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದ ವಿಚಾರಣಾಧೀನ ಕೈದಿಗಳಾದ ಮೋಹನಕುಮಾರ ಹಾಗೂ ರಂಗಸ್ವಾಮಿ ನಡುವೆ ಮೊದಲು ಫೋನ್ ಕರೆ ಮಾಡುವ ವಿಚಾರವಾಗಿ ವಾಗ್ವಾದ ಆರಂಭವಾಗಿದೆ. ಮಾತಿನ ಚಕಮಕಿ ಬಳಿಕ ಇಬ್ಬರೂ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ
ಕೈದಿಗಳ ನಡುವಿನ ಜಗಳವನ್ನು ಗಮನಿಸಿದ ಜೈಲು ಮುಖ್ಯ ವೀಕ್ಷಕರಾದ ಪರಶುರಾಮ ಹಾಗೂ ವೀರೇಶ್ ಸಂಗಮದ್ ಅವರು ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಒಂಬತ್ತು ಮಂದಿ ವಿಚಾರಣಾಧೀನ ಕೈದಿಗಳು ಪಿಸಿಎಸ್ ಕೊಠಡಿಯೊಳಗೆ ಏಕಾಏಕಿ ನುಗ್ಗಿ ರಂಗಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಶಶಿಧರ, ರಾಕೇಶ, ಯಲ್ಲಾಲಿಂಗ, ಆಕಾಶ, ಉಮೇಶ, ಸಾಯಿನಾಥ, ನಿರೂಪ್, ಭರತ ಹಾಗೂ ಚೇತನ್ ಎಂಬುವವರು ರಂಗಸ್ವಾಮಿ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದಾರೆ.
ಕೈದಿಗಳ ದಾಳಿಯನ್ನು ತಡೆಯಲು ಮುಂದಾದ ಜೈಲು ಸಿಬ್ಬಂದಿ ವೀರೇಶ್ ಸಂಗಮದ್, ಶಿವಕುಮಾರ ಹಾಗೂ ಪರಶುರಾಮ ಹೆಚ್. ಅವರ ಮೇಲೂ ಹಲ್ಲೆ ನಡೆದಿದೆ ಎನ್ನಲಾಗಿದೆ. ವೀರೇಶ್ ಸಂಗಮದ್ ಅವರನ್ನು ಆರೋಪಿಗಳು ತಳ್ಳಿ ಕೆಳಗೆ ಬೀಳಿಸಿ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.
ಜೈಲು ಸಿಬ್ಬಂದಿಗೆ ಗಾಯ
ಕೈದಿಗಳ ಹಲ್ಲೆಯಿಂದ ಗಾಯಗೊಂಡಿರುವ ಜೈಲು ವೀಕ್ಷಕ ವೀರೇಶ್ ಸಂಗಮದ್ ಅವರನ್ನು ಹಾಸನ ಜಿಲ್ಲಾಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಘಟನೆ ಬಳಿಕ ಜೈಲು ಅಧಿಕಾರಿಗಳು ಭದ್ರತಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
ಕೊಲೆ ಪ್ರಕರಣದ ಆರೋಪಿಗಳು
ಹಲ್ಲೆ ನಡೆಸಿದ ಆರೋಪಿಗಳು ನಟೋರಿಯಸ್ ರೌಡಿಶೀಟರ್ ಮಂಜೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ವಿಚಾರಣಾಧೀನ ಕೈದಿಗಳಾಗಿರುವ ಇವರ ವಿರುದ್ಧ ಇದೀಗ ಜೈಲಿನೊಳಗಿನ ಹಲ್ಲೆ ಪ್ರಕರಣವೂ ದಾಖಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಜೈಲಿನೊಳಗೆ ಕೈದಿಗಳ ನಡುವೆ ನಡೆದ ಈ ಗಲಾಟೆ ಹಾಗೂ ಸಿಬ್ಬಂದಿ ಮೇಲಿನ ಹಲ್ಲೆಯ ಕುರಿತು ಹೆಚ್ಚಿನ ಮಾಹಿತಿ ತನಿಖೆಯಿಂದ ಹೊರಬರಬೇಕಿದೆ.
ಸಿನಿಮಾ
‘Toxic’ ಬಾಕ್ಸ್ ಆಫೀಸ್ನಲ್ಲಿ ತೀವ್ರ ಕುಸಿತ; ಯಶ್ ಸಿನಿಮಾಗೆ ಎದುರಾಯ್ತಾ ನಿರೀಕ್ಷೆಗೂ ಮೀರಿದ ಶಾಕ್?
ನವದೆಹಲಿ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘Toxic: A Fairy Tale for Grown-Ups’ ಬಾಕ್ಸ್ ಆಫೀಸ್ನಲ್ಲಿ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡುತ್ತಿಲ್ಲ ಎಂಬ ಚರ್ಚೆ ಶುರುವಾಗಿದೆ. ಮೊದಲ ದಿನವೇ ₹100 ಕೋಟಿಗೂ ಹೆಚ್ಚು ಗಳಿಕೆ ದಾಖಲಿಸಿದ್ದ ಸಿನಿಮಾದ ಕಲೆಕ್ಷನ್ ಎರಡನೇ ದಿನ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಇದೀಗ ಮೂರನೇ ದಿನದ ಥಿಯೇಟರ್ ಆಕ್ಯುಪೆನ್ಸಿಗೆ ಸಂಬಂಧಿಸಿದ ವರದಿಗಳು ಮತ್ತಷ್ಟು ಗಮನ ಸೆಳೆದಿವೆ.

ಮೂರನೇ ದಿನ ನೋಯ್ಡಾದ ಪ್ರಮುಖ ಚಿತ್ರಮಂದಿರವೊಂದರಲ್ಲಿ ಬೆಳಗ್ಗೆ 9 ಗಂಟೆಯ ಶೋಗೆ ಒಬ್ಬ ಪ್ರೇಕ್ಷಕರೂ ಇರಲಿಲ್ಲ ಎನ್ನಲಾಗಿದೆ. ಅದೇ ಥಿಯೇಟರ್ನ 10.30ರ ಶೋಗೆ 300 ಆಸನಗಳ ಪೈಕಿ ಕೇವಲ ಐವರು ಪ್ರೇಕ್ಷಕರು ಹಾಜರಾಗಿದ್ದರು ಎಂಬ ವರದಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ.
ಎರಡನೇ ದಿನ ಕಲೆಕ್ಷನ್ನಲ್ಲಿ ಭಾರೀ ಕುಸಿತ
ಗೀತು ಮೋಹನ್ದಾಸ್ ನಿರ್ದೇಶನದ ‘Toxic’ ಮೊದಲ ದಿನ ಭಾರತದಲ್ಲಿ ₹101.10 ಕೋಟಿ ನಿವ್ವಳ ಗಳಿಕೆ ದಾಖಲಿಸಿತ್ತು ಎನ್ನಲಾಗಿದೆ. ಆದರೆ ಎರಡನೇ ದಿನ ಕಲೆಕ್ಷನ್ನಲ್ಲಿ ಸುಮಾರು 64ರಷ್ಟು ಕುಸಿತ ಕಂಡುಬಂದಿದೆ.
ವರದಿಗಳ ಪ್ರಕಾರ, ಗುರುವಾರ ಸಿನಿಮಾ ಭಾರತದಲ್ಲಿ ₹36.40 ಕೋಟಿ ನಿವ್ವಳ ಗಳಿಕೆ ಮಾಡಿದೆ. ಇದರೊಂದಿಗೆ ಎರಡು ದಿನಗಳಲ್ಲಿ ಚಿತ್ರದ ಒಟ್ಟು ಭಾರತ ನಿವ್ವಳ ಕಲೆಕ್ಷನ್ ₹137.50 ಕೋಟಿಗೆ ತಲುಪಿದೆ.
ಎರಡನೇ ದಿನ ದೇಶಾದ್ಯಂತ 19,413 ಶೋಗಳಲ್ಲಿ ಸಿನಿಮಾ ಪ್ರದರ್ಶನಗೊಂಡಿದ್ದು, ಒಟ್ಟಾರೆ ಶೇ.26.6ರಷ್ಟು ಆಕ್ಯುಪೆನ್ಸಿ ದಾಖಲಾಗಿದೆ ಎನ್ನಲಾಗಿದೆ.
ಕನ್ನಡಕ್ಕಿಂತ ಹಿಂದಿ ಅವತರಣಿಕೆಗೆ ಹೆಚ್ಚು ಗಳಿಕೆ?
ಯಶ್ ಅಭಿನಯದ ‘Toxic’ ಸಿನಿಮಾದ ಮೂಲ ಭಾಷೆ ಕನ್ನಡವಾದರೂ, ಸದ್ಯ ಹಿಂದಿ ಅವತರಣಿಕೆ ಉತ್ತಮ ಪ್ರದರ್ಶನ ನೀಡುತ್ತಿದೆ ಎನ್ನಲಾಗಿದೆ. ತೆಲುಗು ಆವೃತ್ತಿಯೂ ಚಿತ್ರದ ಒಟ್ಟಾರೆ ಗಳಿಕೆಗೆ ಗಮನಾರ್ಹ ಕೊಡುಗೆ ನೀಡುತ್ತಿದೆ. ತಮಿಳು ಮತ್ತು ಮಲಯಾಳಂ ಆವೃತ್ತಿಗಳ ಗಳಿಕೆ ತುಲನಾತ್ಮಕವಾಗಿ ಕಡಿಮೆಯಾಗಿದೆ ಎಂದು ವರದಿಗಳು ತಿಳಿಸಿವೆ.
ಭಾರೀ ಬಜೆಟ್ನ ಸಿನಿಮಾ
‘Toxic: A Fairy Tale for Grown-Ups’ ಸಿನಿಮಾವನ್ನು ಗೀತು ಮೋಹನ್ದಾಸ್ ನಿರ್ದೇಶಿಸಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಎಲ್ಎಲ್ಪಿ ಅಡಿಯಲ್ಲಿ ವೆಂಕಟ್ ಕೆ. ನಾರಾಯಣ ಮತ್ತು ಯಶ್ ಚಿತ್ರವನ್ನು ನಿರ್ಮಿಸಿದ್ದಾರೆ.
ಸಿನಿಮಾದಲ್ಲಿ ಯಶ್ ಅವರು ರಾಯ ಮತ್ತು ಟಿಕೆಟ್ ಎಂಬ ಎರಡು ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಸೇರಿದಂತೆ ಪ್ರಮುಖ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ.
2023ರಲ್ಲಿ ಅಧಿಕೃತವಾಗಿ ಘೋಷಣೆಯಾದಾಗಿನಿಂದಲೇ ‘Toxic’ ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿತ್ತು. ದೊಡ್ಡ ಬಜೆಟ್ನಲ್ಲಿ ನಿರ್ಮಾಣಗೊಂಡ ಈ ಚಿತ್ರಕ್ಕೆ ಯಶ್ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲವಿತ್ತು. ಆದರೆ ಬಿಡುಗಡೆಯ ಬಳಿಕ ಹಿಂಸಾತ್ಮಕ ದೃಶ್ಯಗಳು, ಸಂವೇದನಾಶೀಲ ಅಂಶಗಳು ಹಾಗೂ ಭಾವನಾತ್ಮಕ ಆಳದ ಕೊರತೆಯ ಕುರಿತು ಕೆಲ ಪ್ರೇಕ್ಷಕರಿಂದ ಟೀಕೆಗಳು ವ್ಯಕ್ತವಾಗಿವೆ.
ಗಮನಿಸಿ: ಬಾಕ್ಸ್ ಆಫೀಸ್ ಅಂಕಿಅಂಶಗಳು ವರದಿಗಳ ಆಧಾರದ ಮೇಲಿದ್ದು, ಅಂತಿಮ ಗಳಿಕೆಯಲ್ಲಿ ಬದಲಾವಣೆ ಆಗುವ ಸಾಧ್ಯತೆಯಿದೆ.
ಕ್ರೀಡೆ
Ravindra Jadejaಗೆ ಸುನಿಲ್ ಗವಾಸ್ಕರ್ ಕ್ಲಾಸ್; ನೋ-ಬಾಲ್ಗಳ ಸರಣಿಗೆ ಕಠಿಣ ದಂಡಕ್ಕೆ ಆಗ್ರಹ
ಕ್ರಿಕೆಟ್: ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡ ಬೆನ್ನಲ್ಲೇ ಭಾರತದ ಆಲ್ರೌಂಡರ್ Ravindra Jadeja ಅವರ ನೋ-ಬಾಲ್ಗಳು ಚರ್ಚೆಗೆ ಗ್ರಾಸವಾಗಿವೆ. ಪದೇಪದೇ ಬೌಲಿಂಗ್ ಕ್ರೀಸ್ ದಾಟುತ್ತಿರುವ ಜಡೇಜಾ ವಿರುದ್ಧ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಇಂತಹ ತಪ್ಪುಗಳಿಗೆ ಕಠಿಣ ದಂಡ ವಿಧಿಸಬೇಕು ಎಂದು ಸಲಹೆ ನೀಡಿದ್ದಾರೆ.

ಶ್ರೀಲಂಕಾ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳಲ್ಲೂ ಜಡೇಜಾ ಹಲವು ಬಾರಿ ನೋ-ಬಾಲ್ ಎಸೆದಿದ್ದರು. 2021ರಿಂದ ಜಡೇಜಾ 85ಕ್ಕೂ ಹೆಚ್ಚು ನೋ-ಬಾಲ್ಗಳನ್ನು ಎಸೆದಿದ್ದಾರೆ ಎಂಬ ಅಂಕಿ-ಅಂಶವೂ ಚರ್ಚೆಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಅವರ ಬೌಲಿಂಗ್ ಶಿಸ್ತಿನ ಬಗ್ಗೆ ಪ್ರಶ್ನೆಗಳು ಎದ್ದಿವೆ.
‘ನೋ-ಬಾಲ್ಗಳನ್ನು ತುರ್ತಾಗಿ ನಿಯಂತ್ರಿಸಬೇಕು’
ನೋ-ಬಾಲ್ಗಳು ಪಂದ್ಯದ ಫಲಿತಾಂಶದ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ. ಆಟಗಾರನ ನಿಯಂತ್ರಣದಲ್ಲಿರುವ ಕೆಲವೇ ಸಂಗತಿಗಳಲ್ಲಿ ಬೌಲರ್ ನೋ-ಬಾಲ್ ಎಸೆಯದಿರುವುದೂ ಒಂದು ಎಂದು ಅವರು ಹೇಳಿದ್ದಾರೆ.
ಇಂದಿನ ಆಧುನಿಕ ಕ್ರಿಕೆಟ್ನಲ್ಲಿ ರನ್ಅಪ್ ಅಳೆಯಲು ಟೇಪ್ ಸೇರಿದಂತೆ ಅಗತ್ಯ ಸೌಲಭ್ಯಗಳಿವೆ. ಹೀಗಿರುವಾಗ ಬೌಲರ್ಗಳು ಪದೇಪದೇ ಕ್ರೀಸ್ ದಾಟುವುದಕ್ಕೆ ಯಾವುದೇ ಕಾರಣ ನೀಡಲು ಸಾಧ್ಯವಿಲ್ಲ ಎಂದು ಗವಾಸ್ಕರ್ ತಮ್ಮ ಅಂಕಣದಲ್ಲಿ ಹೇಳಿದ್ದಾರೆ.
ಫ್ರೀ ಹಿಟ್ ಸಲಹೆಗೆ ಗವಾಸ್ಕರ್ ವಿರೋಧ
ಭಾರತದ ಸ್ಪಿನ್ ಬೌಲಿಂಗ್ ಕೋಚ್ ಸೈರಾಜ್ ಬಹುತುಲೆ, ನೋ-ಬಾಲ್ ಬಳಿಕ ಫ್ರೀ ಹಿಟ್ ನೀಡಿದರೆ ಆಟಗಾರರು ಎಚ್ಚರಿಕೆಯಿಂದ ಬೌಲಿಂಗ್ ಮಾಡಬಹುದು ಎಂಬ ರೀತಿಯಲ್ಲಿ ಹಾಸ್ಯವಾಗಿ ಪ್ರತಿಕ್ರಿಯಿಸಿದ್ದರು. ಆದರೆ ಈ ಸಲಹೆಯನ್ನು ಗವಾಸ್ಕರ್ ಒಪ್ಪಿಕೊಂಡಿಲ್ಲ.
ಟೆಸ್ಟ್ ಕ್ರಿಕೆಟ್ನಲ್ಲಿ ಈಗಾಗಲೇ ಬ್ಯಾಟರ್ಗಳಿಗೆ ರನ್ ಗಳಿಸಲು ಹಲವು ಅನುಕೂಲಗಳಿವೆ. ಇಂತಹ ಸಂದರ್ಭದಲ್ಲಿ ನೋ-ಬಾಲ್ಗೆ ಫ್ರೀ ಹಿಟ್ ನೀಡುವುದು ಟೆಸ್ಟ್ ಕ್ರಿಕೆಟ್ನಲ್ಲಿ ಬ್ಯಾಟಿಂಗ್ ಅನ್ನು ಮತ್ತಷ್ಟು ಸುಲಭಗೊಳಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
‘ತಪ್ಪು ಪುನರಾವರ್ತನೆಯಾದರೆ ದಂಡ ಹೆಚ್ಚಿಸಿ’
ನೋ-ಬಾಲ್ ನಿಯಮ ಉಲ್ಲಂಘನೆಯನ್ನು ತಡೆಯಲು ದಂಡದ ಮೊತ್ತವನ್ನು ಪ್ರತಿ ಬಾರಿ ಹೆಚ್ಚಿಸುವಂತೆ ಗವಾಸ್ಕರ್ ಸಲಹೆ ನೀಡಿದ್ದಾರೆ. ಮೊದಲ ತಪ್ಪಿಗೆ ಒಂದು ಮೊತ್ತದ ದಂಡ, ಮತ್ತೆ ತಪ್ಪು ಮಾಡಿದರೆ ಅದರ ಎರಡು ಪಟ್ಟು, ನಂತರ ಮತ್ತೆ ಉಲ್ಲಂಘನೆಯಾದರೆ ಇನ್ನಷ್ಟು ಹೆಚ್ಚಿನ ದಂಡ ವಿಧಿಸುವ ವ್ಯವಸ್ಥೆ ಜಾರಿಗೆ ತರಬಹುದು ಎಂದು ಹೇಳಿದ್ದಾರೆ.
ಅಷ್ಟೇ ಅಲ್ಲದೆ, ಆಟಗಾರರು ಪದೇಪದೇ ನೋ-ಬಾಲ್ ಎಸೆಯುತ್ತಿದ್ದರೆ ಬೌಲಿಂಗ್ ಕೋಚ್ಗೂ ದಂಡದ ಒಂದು ಭಾಗವನ್ನು ವಿಧಿಸಬಹುದು ಎಂಬ ಸಲಹೆಯನ್ನು ನೀಡಿದ್ದಾರೆ.
ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಜಡೇಜಾ ಮಾತ್ರವಲ್ಲದೆ ಪದಾರ್ಪಣೆ ಮಾಡಿದ ಸ್ಪಿನ್ನರ್ ಸಾರಾಂಶ್ ಜೈನ್ ಕೂಡ ನೋ-ಬಾಲ್ಗಳನ್ನು ಎಸೆದಿದ್ದರು. ಹೀಗಾಗಿ ಭಾರತೀಯ ಬೌಲರ್ಗಳು ಬೌಲಿಂಗ್ ಕ್ರೀಸ್ ಬಗ್ಗೆ ಹೆಚ್ಚಿನ ಶಿಸ್ತು ಪಾಲಿಸಬೇಕಾದ ಅಗತ್ಯವಿದೆ ಎಂಬ ಚರ್ಚೆ ಇದೀಗ ಜೋರಾಗಿದೆ.
-
ರಾಜ್ಯ19 ಗಂಟೆಗಳು agoST Leaders ನ್ನೇ ಗುರಿಯಾಗಿಸಲಾಗುತ್ತಿದೆ: B Nagendra ರಾಜೀನಾಮೆ ಕುರಿತು K N Rajanna ಸ್ಫೋಟಕ ಹೇಳಿಕೆ
-
ದೇಶ19 ಗಂಟೆಗಳು agoRewa Hospital ‘ಇಲ್ಲಿ ಡೆಲಿವರಿ ಮಾಡಿಸಬೇಡಿ’ ಎಂದ ಯುವತಿ: ಹೆರಿಗೆ ಬಳಿಕ ತಾಯಿ-ಮಗು ದಾರುಣ ಸಾವು
-
ದೇಶ19 ಗಂಟೆಗಳು agoNepal ದಲ್ಲಿ ಪ್ರವಾಹದ ಆರ್ಭಟ: ತೇಲಿಬಂದ Bank ಲಾಕರ್ ಒಡೆದು ಲಕ್ಷಾಂತರ ರೂಪಾಯಿ ಕಳವು
-
ಬೆಂಗಳೂರು8 ಗಂಟೆಗಳು agoGruha Lakshmi ಯೋಜನೆ: ಫಲಾನುಭವಿಗಳಿಗೆ ಹೊಸ ನಿಯಮ, ಆಗಸ್ಟ್ 30ರಿಂದ ಬಯೋಮೆಟ್ರಿಕ್ ಪರಿಶೀಲನೆ
-
ರಾಜ್ಯ21 ಗಂಟೆಗಳು agoOld Pension Scheme ಮರುಜಾರಿ: ಸರ್ಕಾರಿ ನೌಕರರಿಗೆ ಶೀಘ್ರವೇ ಸಿಗಲಿದೆಯೇ ಸಿಹಿಸುದ್ದಿ?
-
ರಾಜಕೀಯ24 ಗಂಟೆಗಳು agoB Nagendra ಗೆ Janardhana Reddy ಸವಾಲ್; 10 ಶಾಸಕರಿಗೆ ರಾಜೀನಾಮೆ ಕೊಡಿಸಿ ಚುನಾವಣೆ ಎದುರಿಸಿ ಎಂದ ಬಿಜೆಪಿ ಶಾಸಕ
-
ಕ್ರೀಡೆ20 ಗಂಟೆಗಳು agoಒಲಿಂಪಿಕ್ಸ್ನಲ್ಲಿ ಕನ್ನಡಿಗರು 10ರಿಂದ 15 ಪದಕ ಗೆಲ್ಲಬೇಕು: K Govindaraj
-
ಬೆಂಗಳೂರು21 ಗಂಟೆಗಳು agoRavichandran ರಾಜಕೀಯಕ್ಕೆ ಬರ್ತಾರಾ? ವಿಧಾನ ಪರಿಷತ್ ಸ್ಥಾನಕ್ಕೆ ಹೆಸರು ಮುನ್ನೆಲೆಗೆ
