Connect with us

ಸಿನಿಮಾ

ರಸ್ತೆಯ ಮೇಲೆ ಸಾಂಬಾರ್ ಅಡುಗೆ: ನಾಗಚೈತನ್ಯ ಪತ್ನಿ ಶೋಭಿತಾ ಧೂಲಿಪಲಾ ಸರಳ ಜೀವನದಿಂದ ಮೆಸೆಜ್!

Published

on

ಬೆಂಗಳೂರು: ಸಿನಿಮಾ ತಾರೆಗಳು ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದು, ಅವರ ಜೀವನ ಶೈಲಿಯೂ ಎಲ್ಲರ ಕಣ್ಗಾವಲಲ್ಲಿ ಇರುತ್ತದೆ. ಆದರೆ ಕೆಲ ಸೆಲೆಬ್ರಿಟಿಗಳು ಬೃಹತ್ ವೈಭವದಿಂದ ದೂರ ಉಳಿದು, ಸರಳ ಜೀವನವನ್ನೂ ಅನುಭವಿಸುತ್ತಾರೆ. ಇಂತಹ ವ್ಯಕ್ತಿತ್ವದ ನಟಿಯೆ ಶೋಭಿತಾ ಧೂಲಿಪಲಾ.

ನಾಗಾರ್ಜುನ ಅವರ ಮಗ ನಟ ನಾಗಚೈತನ್ಯ ಅವರ 2ನೇ ಪತ್ನಿಯಾದ ಶೋಭಿತಾ, ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಸೋಶಿಯಲ್ ಮೀಡಿಯಾದಲ್ಲಿ ವಿಭಿನ್ನ ಫೋಟೋಗಳು ಹಾಗೂ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಈ ಚಿತ್ರಗಳು ಮತ್ತು ದೃಶ್ಯಗಳಲ್ಲಿ ಅವರು ರಸ್ತೆ ಪಕ್ಕದಲ್ಲಿ ಕುಳಿತು ಸಾಂಬಾರ್ ಅಡುಗೆ ಮಾಡುತ್ತಿರುವುದು, ಬೆಂಡೇಕಾಯಿ ಕತ್ತರಿಸುತ್ತಿರುವುದು, ತೆಂಗಿನಕಾಯಿ ಒಡೆಯುವುದು ಮತ್ತು ಕುಟಾಣಿಯಲ್ಲಿ ಪದಾರ್ಥಗಳನ್ನು ಹಚ್ಚುತ್ತಿರುವುದನ್ನು ಕಾಣಬಹುದು.

ಸರಳ ಜೀವನದ ಪ್ರೀತಿಯ ಸಂದೇಶ:
ಸೂಪರ್‌ಮೋಡಲ್ ಆಗಿ ಗುರುತಿಸಿಕೊಂಡಿದ್ದರೂ, ಶೋಭಿತಾ ಈ ವಿಡಿಯೋಗಳ ಮೂಲಕ ತಾವು ಅಡುಗೆ ಮಾಡುವುದು ಎಷ್ಟರಮಟ್ಟಿಗೆ ಇಷ್ಟಪಡುತ್ತಾರೆ ಎಂಬುದನ್ನು ತೋರಿಸಿದ್ದಾರೆ. ಈ ಸರಳ ಜೀವನ ಶೈಲಿಯ ಜೊತೆಗೆ, ತಮ್ಮ ನೈಸರ್ಗಿಕ ನಡವಳಿಕೆಯಿಂದ ನೆಟ್ಟಿಗರನ್ನು ತಬ್ಬಿಸಿಹೋಗಿದ್ದಾರೆ.

ಅವರ ಸರಳ ನಡವಳಿಕೆಗೆ ಇನ್‌ಸ್ಟಾಗ್ರಾಂ ಬಳಕೆದಾರರು ಶ್ಲಾಘನೆ ವ್ಯಕ್ತಪಡಿಸುತ್ತಿದ್ದಾರೆ. “ಇಷ್ಟೊಂದು ಪ್ರಸಿದ್ಧಿಯಲ್ಲಿರುವವಳು ಸಹ ಇಷ್ಟು down to earth ಆಗಿರ್ತಾರಾ?” ಎಂಬ ಪ್ರಶ್ನೆ ಸಹ ಅಭಿಮಾನಿಗಳಿಂದ ಕೇಳಿಬರುತ್ತಿದೆ.

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಸಿನಿಮಾ

‘Toxic’ ವಿರುದ್ಧ ಮಾತನಾಡಿದವರಿಗೆ ಕಾನೂನು ನೋಟಿಸ್? ಚಿತ್ರತಂಡದ ನಡೆಗೆ ಕಾರಣವೇನು?

Published

on

By

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್, ಕಿಯಾರಾ ಅಡ್ವಾಣಿ ಹಾಗೂ ರುಕ್ಮಿಣಿ ವಸಂತ್ ಅಭಿನಯದ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಇದೀಗ ಬಾಕ್ಸ್ ಆಫೀಸ್ ಮಾತ್ರವಲ್ಲದೆ ಕಾನೂನು ವಿಚಾರದಿಂದಲೂ ಸುದ್ದಿಯಾಗಿದೆ. ಚಿತ್ರದ ಕುರಿತು ಸುಳ್ಳು, ಮಾನಹಾನಿಕರ ಅಥವಾ ನಿಂದನಾತ್ಮಕ ವಿಷಯಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಳ್ಳದಂತೆ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿರುವುದಾಗಿ ವರದಿಯಾಗಿದೆ.

ಯೂಟ್ಯೂಬರ್ ಸೂರಜ್ ಕುಮಾರ್ ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ತಮಗೆ ಬಂದಿರುವ ಕಾನೂನು ನೋಟಿಸ್‌ನ ಸ್ಕ್ರೀನ್‌ಶಾಟ್ ಹಂಚಿಕೊಂಡಿದ್ದಾರೆ. ಬೆಂಗಳೂರಿನ ಐಪ್ಲೆಕ್ಸ್ ಸಾಫ್ಟ್‌ವೇರ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮೂಲಕ ಈ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಪರವಾಗಿ ನೋಟಿಸ್ ನೀಡಿದೆ ಎಂದು ವರದಿಯಾಗಿದೆ.

ನೋಟಿಸ್‌ನಲ್ಲಿ, ‘ಟಾಕ್ಸಿಕ್’ ಸಿನಿಮಾಗೆ ಸಂಬಂಧಿಸಿದಂತೆ ಡಿಜಿಟಲ್ ಮತ್ತು ಆನ್‌ಲೈನ್ ಮಾಧ್ಯಮಗಳಲ್ಲಿ ಕಂಟೆಂಟ್ ಹಂಚಿಕೊಂಡಿರುವುದು ಗಮನಕ್ಕೆ ಬಂದಿದೆ. ಈ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಪಿಟಿಐ ವರದಿ ಪ್ರಕಾರ, ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಆಗಸ್ಟ್ 22ರಂದು ವಿವಿಧ ಪ್ರತಿವಾದಿಗಳ ವಿರುದ್ಧ ಎಕ್ಸ್-ಪಾರ್ಟಿ ಮಧ್ಯಂತರ ತಡೆಯಾಜ್ಞೆ ನೀಡಿದೆ. ಚಿತ್ರದ ಕುರಿತು ಸುಳ್ಳು ಅಥವಾ ಮಾನಹಾನಿಕರ ವಿಷಯಗಳ ಪ್ರಕಟಣೆ ಮತ್ತು ಪ್ರಸಾರವನ್ನು ತಡೆಯುವಂತೆ ಆದೇಶಿಸಲಾಗಿದೆ ಎಂದು ವರದಿಯಾಗಿದೆ.

ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದರೂ, ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ ಎಂದು ವರದಿಯಾಗಿದೆ. ಚಿತ್ರದ ಕುರಿತು ವಿಮರ್ಶೆಗಳು ಮತ್ತು ಸಾಮಾಜಿಕ ಮಾಧ್ಯಮ ಚರ್ಚೆಗಳು ಮುಂದುವರಿದಿರುವ ಬೆನ್ನಲ್ಲೇ ಈ ಕಾನೂನು ಬೆಳವಣಿಗೆ ಗಮನ ಸೆಳೆದಿದೆ.

Continue Reading

ಸಿನಿಮಾ

Yash ‘Toxic’ ನೋಡಿ ಪ್ರೇಕ್ಷಕರಿಂದ ಸೀಟಿ-ಚಪ್ಪಾಳೆ; ಗೀತು ಮೋಹನ್‌ದಾಸ್ ನಿರ್ದೇಶನಕ್ಕೆ ಭಾರೀ ಮೆಚ್ಚುಗೆ

Published

on

ಬೆಂಗಳೂರು: ರಾಕಿಂಗ್ ಸ್ಟಾರ್ Yash ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಕೊನೆಗೂ ಬೆಳ್ಳಿತೆರೆಗೆ ಅಪ್ಪಳಿಸಿದ್ದು, ಮೊದಲ ಪ್ರದರ್ಶನ ವೀಕ್ಷಿಸಿದ ಅಭಿಮಾನಿಗಳು ಹಾಗೂ ಸಿನಿಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಿನಿಮಾದ ದೃಶ್ಯ ವೈಭವ, ಯಶ್ ಅವರ ಮಾಸ್ ಲುಕ್ ಹಾಗೂ ಮ್ಯಾನರಿಸಂ ಕಂಡು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಚಿತ್ರದ ಮೊದಲ ಪ್ರದರ್ಶನದ ಬಳಿಕ ಸಾಮಾಜಿಕ ಜಾಲತಾಣಗಳಲ್ಲೂ ಪ್ರೇಕ್ಷಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದು, ‘ಟಾಕ್ಸಿಕ್’ ಪಕ್ಕಾ ಹಾಲಿವುಡ್ ರೇಂಜ್‌ನ ಸಿನಿಮಾ ಎಂಬ ಮಾತುಗಳು ಕೇಳಿಬರುತ್ತಿವೆ.

ಅಂತರರಾಷ್ಟ್ರೀಯ ಮಟ್ಟದ ಮೇಕಿಂಗ್

‘ಟಾಕ್ಸಿಕ್’ ಸಿನಿಮಾದ ಛಾಯಾಗ್ರಹಣ ಹಾಗೂ ಮೇಕಿಂಗ್ ಶೈಲಿ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಚಿತ್ರದ ಹಲವು ದೃಶ್ಯಗಳನ್ನು ಅಂತರರಾಷ್ಟ್ರೀಯ ಗುಣಮಟ್ಟದಲ್ಲಿ ರೂಪಿಸಲಾಗಿದೆ ಎಂಬ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ವಿಶೇಷವಾಗಿ ರಾಕಿಂಗ್ ಸ್ಟಾರ್ ಯಶ್ ಅವರ ವಿಭಿನ್ನ ಮಾಸ್ ಲುಕ್ ಹಾಗೂ ಪರದೆ ಮೇಲಿನ ಅವರ ಸ್ಕ್ರೀನ್ ಪ್ರೆಸೆನ್ಸ್ ಅಭಿಮಾನಿಗಳಲ್ಲಿ ಭಾರೀ ಉತ್ಸಾಹ ಮೂಡಿಸಿದೆ. ಯಶ್ ಅವರ ಮ್ಯಾನರಿಸಂ ಮತ್ತು ಪಾತ್ರದ ಸ್ಟೈಲ್ ಸಿನಿಮಾದ ಪ್ರಮುಖ ಆಕರ್ಷಣೆಯಾಗಿದೆ ಎಂದು ಪ್ರೇಕ್ಷಕರು ಅಭಿಪ್ರಾಯಪಟ್ಟಿದ್ದಾರೆ.

ಡಾರ್ಕ್ ಗ್ಯಾಂಗ್‌ಸ್ಟರ್ ಲೋಕದ ರೋಮಾಂಚನ

‘ಟಾಕ್ಸಿಕ್’ ಸಿನಿಮಾದ ಕಥಾಹಂದರ ಡಾರ್ಕ್ ಗ್ಯಾಂಗ್‌ಸ್ಟರ್ ಜಗತ್ತಿನ ಸುತ್ತ ಸಾಗುತ್ತದೆ. ಸಿನಿಮಾದಲ್ಲಿನ ಮಾಸ್ ಆ್ಯಕ್ಷನ್ ದೃಶ್ಯಗಳು ಪ್ರೇಕ್ಷಕರಿಗೆ ಥ್ರಿಲ್ ನೀಡುತ್ತಿವೆ.

ಭರ್ಜರಿ ಆ್ಯಕ್ಷನ್ ಸನ್ನಿವೇಶಗಳು ದೊಡ್ಡ ಪರದೆಯಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಮೂಡಿಬಂದಿದ್ದು, ಹಲವು ದೃಶ್ಯಗಳಿಗೆ ಥಿಯೇಟರ್‌ಗಳಲ್ಲಿ ಸೀಟಿ ಹಾಗೂ ಚಪ್ಪಾಳೆಗಳ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಯಶ್ ಅವರ ಮಾಸ್ ಇಮೇಜ್‌ಗೆ ಹೊಂದುವಂತಹ ಆ್ಯಕ್ಷನ್ ಸೀಕ್ವೆನ್ಸ್‌ಗಳು ಅಭಿಮಾನಿಗಳಿಗೆ ವಿಶೇಷ ಅನುಭವ ನೀಡುತ್ತಿವೆ.

ಗೀತು ಮೋಹನ್‌ದಾಸ್ ನಿರ್ದೇಶನಕ್ಕೆ ಮೆಚ್ಚುಗೆ

ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕಿ ಗೀತು ಮೋಹನ್‌ದಾಸ್ ಅವರ ವಿಭಿನ್ನ ಕಥೆ ಹೇಳುವ ಶೈಲಿಗೂ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಗ್ಯಾಂಗ್‌ಸ್ಟರ್ ಕಥೆಯನ್ನು ಸಾಂಪ್ರದಾಯಿಕ ರೀತಿಗಿಂತ ಭಿನ್ನವಾಗಿ ತೆರೆಗೆ ತಂದಿರುವ ನಿರ್ದೇಶನ ಶೈಲಿ ಪ್ರೇಕ್ಷಕರ ಗಮನ ಸೆಳೆದಿದೆ. ಕಥೆಯ ವಾತಾವರಣ, ಪಾತ್ರಗಳ ನಿರೂಪಣೆ ಹಾಗೂ ಆ್ಯಕ್ಷನ್ ದೃಶ್ಯಗಳನ್ನು ಕಟ್ಟಿಕೊಟ್ಟಿರುವ ರೀತಿಗೆ ಸಿನಿಪ್ರಿಯರು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಯಶ್ ಅಭಿಮಾನಿಗಳಲ್ಲಿ ಹೆಚ್ಚಿದ ಕ್ರೇಜ್

ಸಿನಿಮಾ ಬಿಡುಗಡೆಗೂ ಮುನ್ನವೇ ‘ಟಾಕ್ಸಿಕ್’ ಭಾರೀ ನಿರೀಕ್ಷೆ ಮೂಡಿಸಿತ್ತು. ಇದೀಗ ಮೊದಲ ಪ್ರದರ್ಶನದ ಬಳಿಕ ಯಶ್ ಅಭಿಮಾನಿಗಳ ಸಂಭ್ರಮ ಮತ್ತಷ್ಟು ಹೆಚ್ಚಾಗಿದೆ. ಸಿನಿಮಾದ ಮೇಕಿಂಗ್, ಯಶ್ ಅವರ ಲುಕ್, ಆ್ಯಕ್ಷನ್ ಹಾಗೂ ಗೀತು ಮೋಹನ್‌ದಾಸ್ ಅವರ ನಿರ್ದೇಶನ ಚಿತ್ರದ ಪ್ರಮುಖ ಹೈಲೈಟ್‌ಗಳಾಗಿ ಪ್ರೇಕ್ಷಕರ ಚರ್ಚೆಯಲ್ಲಿ ಕಾಣಿಸಿಕೊಳ್ಳುತ್ತಿವೆ.

ಒಟ್ಟಿನಲ್ಲಿ, ‘ಟಾಕ್ಸಿಕ್’ ಮೊದಲ ಪ್ರದರ್ಶನದ ಬಳಿಕ ಯಶ್ ಅಭಿಮಾನಿಗಳು ಹಾಗೂ ಸಿನಿಪ್ರಿಯರಿಂದ ಭರ್ಜರಿ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದ್ದು, ಸಿನಿಮಾ ಕುರಿತ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲೂ ಜೋರಾಗಿದೆ.

Continue Reading

ದೇಶ

Women Police Marriage ಮದುವೆಗೆ ದಿನಾಂಕ ಫಿಕ್ಸ್, ಆಮಂತ್ರಣ ಪತ್ರಿಕೆಯೂ ಸಿದ್ಧ; ಕೊನೆ ಕ್ಷಣದಲ್ಲಿ ಇಬ್ಬರು ಮಹಿಳಾ ಪೊಲೀಸರ ಮದುವೆ ರದ್ದು!

Published

on

ಪುಣೆ: ಮಹಾರಾಷ್ಟ್ರದ ಪಿಂಪ್ರಿ-ಚಿಂಚ್‌ವಾಡ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಇಬ್ಬರು ಮಹಿಳಾ ಪೊಲೀಸ್ ಕಾನ್ಸ್‌ಸ್ಟೇಬಲ್‌ಗಳು ಆಗಸ್ಟ್ 30ರಂದು ಆಳಂದಿಯಲ್ಲಿ ವೈದಿಕ ಪದ್ಧತಿಯಂತೆ ವಿವಾಹವಾಗಲು ನಿರ್ಧರಿಸಿದ್ದರು. ಆದರೆ, ಮದುವೆ ಸಮಾರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗಲೇ ವಿವಾಹ ರದ್ದಾಗಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.

ಇಬ್ಬರೂ ಕಾನ್ಸ್‌ಸ್ಟೇಬಲ್‌ಗಳು ಮದುವೆಗಾಗಿ ಪೊಲೀಸ್ ಇಲಾಖೆಯಿಂದ ಅಧಿಕೃತ ರಜೆ ಕೋರಿ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯೊಂದಿಗೆ ಮದುವೆಯ ಆಮಂತ್ರಣ ಪತ್ರಿಕೆಯನ್ನೂ ಲಗತ್ತಿಸಿದ್ದರು ಎನ್ನಲಾಗಿದೆ. ಆದರೆ, ಕೊನೆಯ ಕ್ಷಣದಲ್ಲಿ ಮದುವೆ ರದ್ದಾಗಲು ನಿಖರವಾದ ಕಾರಣವೇನು ಎಂಬುದು ಇದುವರೆಗೆ ಅಧಿಕೃತವಾಗಿ ಬಹಿರಂಗವಾಗಿಲ್ಲ.

ನೇಮಕಾತಿ ವೇಳೆ ಪರಿಚಯ, ಬಳಿಕ ಆತ್ಮೀಯತೆ

ಇಬ್ಬರು ಮಹಿಳಾ ಕಾನ್ಸ್‌ಸ್ಟೇಬಲ್‌ಗಳು ಪೊಲೀಸ್ ನೇಮಕಾತಿ ಪ್ರಕ್ರಿಯೆಯ ಸಂದರ್ಭದಲ್ಲಿ ಪರಸ್ಪರ ಪರಿಚಯವಾಗಿದ್ದರು. ನೇಮಕಾತಿಯಲ್ಲಿ ಯಶಸ್ವಿಯಾದ ಬಳಿಕ ಇಬ್ಬರೂ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿ ತರಬೇತಿ ಪೂರ್ಣಗೊಳಿಸಿದ್ದರು. ಆರಂಭದಲ್ಲಿ ಪೊಲೀಸ್ ಮುಖ್ಯ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಇವರಿಬ್ಬರನ್ನು ಬಳಿಕ ಒಂದೇ ಕೇಂದ್ರ ಪೊಲೀಸ್ ಠಾಣೆಗೆ ನಿಯೋಜಿಸಲಾಗಿತ್ತು.

ಒಟ್ಟಿಗೆ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಇಬ್ಬರ ನಡುವೆ ಆತ್ಮೀಯತೆ ಬೆಳೆದಿದ್ದು, ನಂತರ ಜೀವನವನ್ನು ಒಟ್ಟಾಗಿ ಸಾಗಿಸಲು ನಿರ್ಧರಿಸಿದ್ದರು ಎನ್ನಲಾಗಿದೆ. ಇದೇ ಹಿನ್ನೆಲೆಯಲ್ಲಿ ವಿವಾಹವಾಗಲು ಸಿದ್ಧತೆ ನಡೆಸಿದ್ದರು.

ಕುಟುಂಬದ ವಿರೋಧವೇ ಕಾರಣವೇ?

ಇಬ್ಬರಲ್ಲಿ ಒಬ್ಬರ ಕುಟುಂಬವು ಈ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿತ್ತು ಎಂಬ ವರದಿಗಳು ಈ ಹಿಂದೆ ಕೇಳಿಬಂದಿದ್ದವು. ಕುಟುಂಬ ಸದಸ್ಯರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಈ ಕುರಿತು ಮನವಿ ಮಾಡಿದ್ದರು ಎನ್ನಲಾಗಿದೆ. ಆದರೆ, ಕುಟುಂಬದ ವಿರೋಧವೇ ಮದುವೆ ರದ್ದಾಗಲು ಕಾರಣ ಎಂಬುದನ್ನು ಪೊಲೀಸ್ ಅಧಿಕಾರಿಗಳು ದೃಢಪಡಿಸಿಲ್ಲ.

ವೈಯಕ್ತಿಕ ಕಾರಣಗಳಿಂದ ಮದುವೆ ರದ್ದಾಗಿದೆಯೇ ಅಥವಾ ಬೇರೆ ಯಾವುದಾದರೂ ಪರಿಸ್ಥಿತಿ ಕಾರಣವೇ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ.

ಲಿಂಗ ಪರಿವರ್ತನೆ ಚಿಕಿತ್ಸೆಯ ಬಗ್ಗೆಯೂ ಚರ್ಚೆ

ಇಬ್ಬರಲ್ಲಿ ಒಬ್ಬರು ಲಿಂಗ ಪರಿವರ್ತನೆಗೆ ಸಂಬಂಧಿಸಿದ ವೈದ್ಯಕೀಯ ಚಿಕಿತ್ಸೆಗೆ ಒಳಗಾಗುತ್ತಿದ್ದಾರೆ ಎಂಬ ವರದಿಗಳೂ ಈ ಹಿಂದೆ ಹರಿದಾಡಿದ್ದವು. ಈ ವಿಚಾರವೂ ಪ್ರಕರಣದ ಕುರಿತು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಆದರೆ, ಈ ಮಾಹಿತಿಯನ್ನು ಸಂಬಂಧಪಟ್ಟ ಪೊಲೀಸ್ ಆಡಳಿತ ಅಧಿಕೃತವಾಗಿ ದೃಢಪಡಿಸಿಲ್ಲ.

ಈ ಪ್ರಕರಣವು ಭಾರತದಲ್ಲಿ ಸಲಿಂಗ ಸಂಬಂಧಗಳು ಮತ್ತು ವಿವಾಹದ ಕಾನೂನು ಸ್ಥಿತಿಯ ಕುರಿತ ಚರ್ಚೆಯನ್ನೂ ಮುನ್ನೆಲೆಗೆ ತಂದಿದೆ. ವಯಸ್ಕರ ನಡುವಿನ ಪರಸ್ಪರ ಒಪ್ಪಿಗೆಯ ಸಲಿಂಗ ಸಂಬಂಧಗಳು ಅಪರಾಧವಲ್ಲ. ಆದರೆ, ಪ್ರಸ್ತುತ ಭಾರತದಲ್ಲಿ ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ಇಲ್ಲ.

ಪಿಂಪ್ರಿ-ಚಿಂಚ್‌ವಾಡ ಪೊಲೀಸ್ ಆಡಳಿತವು ಮದುವೆ ರದ್ದಾಗಿರುವ ಕುರಿತು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಹೀಗಾಗಿ ಕುಟುಂಬದ ವಿರೋಧ, ವೈಯಕ್ತಿಕ ಕಾರಣ ಅಥವಾ ಬೇರೆ ಯಾವುದೇ ಪರಿಸ್ಥಿತಿಯಿಂದ ವಿವಾಹ ರದ್ದಾಗಿದೆಯೇ ಎಂಬುದು ಇನ್ನೂ ನಿಗೂಢವಾಗಿದೆ. ಸಂಬಂಧಪಟ್ಟವರು ಅಥವಾ ಪೊಲೀಸ್ ಇಲಾಖೆ ಅಧಿಕೃತ ಮಾಹಿತಿ ನೀಡಿದ ಬಳಿಕವೇ ನಿಜವಾದ ಕಾರಣ ಸ್ಪಷ್ಟವಾಗಲಿದೆ.

Continue Reading

Trending