Connect with us

ಬೆಂಗಳೂರು

ಲೋಕಸಭೆಗೆ ಬೊಮ್ಮಾಯಿ‌ ಕಣಕ್ಕಿಳಿಸಲು ಬಿಜೆಪಿ ಪ್ಲಾನ್!? ಕೈ ತಪ್ಪುತ್ತಾ ವಿಪಕ್ಷ ಸ್ಥಾನ?

Published

on

ಲೋಕಸಭೆಗೆ ಬೊಮ್ಮಾಯಿ ಕಣಕ್ಕಿಳಿಸಲು ಬಿಜೆಪಿ ಪ್ಲಾನ್!? ಕೈ ತಪ್ಪುತ್ತಾ ವಿಪಕ್ಷ ಸ್ಥಾನ?
ಲೋಕಸಭೆಗೆ ಬೊಮ್ಮಾಯಿ ಕಣಕ್ಕಿಳಿಸಲು ಬಿಜೆಪಿ ಪ್ಲಾನ್!? ಕೈ ತಪ್ಪುತ್ತಾ ವಿಪಕ್ಷ ಸ್ಥಾನ?

ಬೆಂಗಳೂರು, ಸೆಪ್ಟೆಂಬರ್‌ 02: ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನ ಗೆಲ್ಲುವ ಟಾರ್ಗೆಟ್‌ ಹಾಕಿಕೊಂಡಿದ್ದು, ಬಿಜೆಪಿ ಹೈಕಮಾಂಡ್‌ ಸಹ ಗೆಲ್ಲುವ ನಾಯಕರನ್ನ ಕಣಕ್ಕಿಳಿಸಲು ಚಿಂತನೆ ನಡೆಸಿದ್ದು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನ ಹಾವೇರಿ ಕ್ಷೇತ್ರದಿಂದ ಕಣಕ್ಕಿಳಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ

ಲೋಕಸಭಾ ಚುನಾವಣೆಯಲ್ಲಿ ಕೆಲ ತಿಂಗಳು ಮಾತ್ರ ಬಾಕಿ ಉಳಿದಿದ್ದು, ಹಾಲಿ ಸಂಸದ ಶಿವಕುಮಾರ್ ಉದಾಸಿ ಅವರು ಸ್ಪರ್ಧಿಸುವುದಿಲ್ಲ ಎಂದು ಹೇಳಿರುವ ಹಿನ್ನೆಲೆಯಲ್ಲಿ ಹೊಸ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿರುವ ಬಿಜೆಪಿ ನಾಯಕತ್ವವು ಹಾವೇರಿ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ.

ಇನ್ನೂ ಬಸವರಾಜ ಬೊಮ್ಮಾಯಿಯವರು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಸತತ ಮೂರು ಬಾರಿ ಆಯ್ಕೆಯಾಗಿದ್ದಾರೆ. ಶಿಗ್ಗಾಂವಿ ಕ್ಷೇತ್ರ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಸೇರಿದರೂ ಹಾವೇರಿ ಜಿಲ್ಲೆಯಲ್ಲಿ ಮಾಜಿ ಸಿಎಂ ಗಣನೀಯ ಪ್ರಭಾವ ಹೊಂದಿದ್ದಾರೆ. ಅದಲ್ಲದೇ ಮುಖ್ಯಮಂತ್ರಿ ಆಗಿದ್ದಾಗ ಹಾವೇರಿ ಜಿಲ್ಲೆಯ ಅಭಿವೃದ್ಧಿಗಾಗಿ ಮಾಡಿದ ಕೆಲಸಗಳನ್ನು ಹೈಕಮಾಂಡ್‌ ಗಮನಿಸಿದ್ದು, ಇವು ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಗೆಲ್ಲಿಸುತ್ತವೆ ಎಂಬ ಚಿಂತನೆಯಲ್ಲಿ ಪಕ್ಷದ ನಾಯಕರು ಇದ್ದಾರೆ. ಹಾವೇರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಗದಗ ಜಿಲ್ಲೆಯ ಕೆಲ ಕ್ಷೇತ್ರಗಳು ಕೂಡ ಬರಲಿದ್ದು, ಬಿಜೆಪಿಗೆ ಸವಾಲಾಗಿ ಪರಿಣಮಿಸಿದೆ. ಏಕೆಂದರೆ ಈ ಸಲದ ವಿಧಾನಸಭಾ ಚುನಾವಣೆಯಲ್ಲಿ ಎರಡು ಜಿಲ್ಲೆಗಳಲ್ಲಿ ಬಿಜೆಪಿ ಹೀನಾಯ ಪ್ರದರ್ಶನ ತೋರಿದ್ದು, ಗದಗ ಜಿಲ್ಲೆಯ 7 ಕ್ಷೇತ್ರಗಳ ಪೈಕಿ ಶಿರಹಟ್ಟಿ ಹಾಗೂ ಹಾವೇರಿಯ 6 ಕ್ಷೇತ್ರಗಳ ಪೈಕಿ ಶಿಗ್ಗಾಂವಿಯಲ್ಲಿ ಮಾತ್ರ ಬಿಜೆಪಿ ಅಭ್ಯರ್ಥಿಗಳು ಗೆಲುವು ಕಂಡಿದ್ದಾರೆ.ಇತ್ತ ಕಾಂಗ್ರೆಸ್‌ ತನ್ನ ಶಕ್ತಿಯನ್ನ ವೃದ್ದಿಸಿಕೊಂಡಿದೆ. ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಬಳಿಕ ಐದು ಚುನಾವಣಾ ಗ್ಯಾರಂಟಿಗಳಿಗೆ ಜನರಿಂದ ಬರುವ ಪ್ರತಿಕ್ರಿಯೆ ಕಾಂಗ್ರೆಸ್‌ ಅನ್ನು ಆತ್ಮವಿಶ್ವಾಸದ ಅಲೆಯಲ್ಲಿ ತೇಲಾಡಿಸುತ್ತಿದೆ. ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು ಕಷ್ಟಸಾಧ್ಯ ಎನ್ನುವ ಮಾತುಗಳು ಕೇಳಿ ಬಂದಿವೆ.

ಇನ್ನೂ ಈ ಬಗ್ಗೆ ಧಾರವಾಡ ವಿಭಾಗದ ಚುನಾವಣಾ ಉಸ್ತುವಾರಿ ಲಿಂಗರಾಜ್‌ ಪಾಟೀಲ್‌, ಹಾವೇರಿಯಲ್ಲಿ ಬಿಜೆಪಿಗಿರುವ ಸವಾಲಿನ ಬಗ್ಗೆ ನಮಗೆ ಅರಿವಿದೆ. ಹಾವೇರಿಗೆ ಸಮರ್ಥ ಅಭ್ಯರ್ಥಿಯನ್ನು ಘೋಷಿಸುತ್ತೇವೆ. ಸೆಪ್ಟೆಂಬರ್‌ ಮೊದಲ ವಾರದಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಸರ್ವೇ ಆರಂಭಿಸುತ್ತೇವೆ ಎಂದು ಹೇಳಿದ್ದಾರೆ. ಶಿವಕುಮಾರ್‌ ಉದಾಸಿ ಅವರು 2009ರಿಂದ ಹಾವೇರಿಯಲ್ಲಿ ಸತತ ಮೂರು ಬಾರಿ ಗೆಲುವು ಸಾಧಿಸಿದ್ದಾರೆ. ಆದರೆ, ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಇದರಿಂದ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಅವರ ಪುತ್ರ ಕಾಂತೇಶ್‌, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ್‌ ಕಲ್ಕೋಟಿ, ಒಬಿಸಿ ನಾಯಕ ರಾಜಶೇಖರ್‌ ಕತ್ತೆಗೌಡರ್‌ ಬಿಜೆಪಿ ಟಿಕೆಟ್‌ಗೆ ಲಾಬಿ ನಡೆಸಿದ್ದಾರೆ. ಇನ್ನೂ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆ ವಿಳಂಬದ ಕುರಿತು ಈಗಾಗಲೇ ಬಿಜೆಪಿ ಪಕ್ಷದ ವಿರುದ್ದ ಕಾಂಗ್ರೆಸ್‌ ನಾಯಕರು ಸಾಕಷ್ಟು ಟೀಕೆ ಟಿಪ್ಪಣಿಗಳನ್ನ ನಡೆಸಿದ್ದು, ಇತ್ತ ಲೋಕಸಭಾ ಚುನಾವಣಾ ಸಿದ್ದತೆ ಕುರಿತು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್‌ ಸಂತೋಷ್‌ ಅವರು ಗುರುವಾರ ಬಿಜೆಪಿ ನಾಯಕರ ಜೊತೆ ಬೆಂಗಳೂರಿನಲ್ಲಿ ಸಭೆ ನಡೆಸಿದ್ದಾರೆ. ಈ ವೇಳೆ ವಿಧಾನಸಭಾ ವಿರೋಧ ಪಕ್ಷದ ನಾಯಕನ ನೇಮಕ ವಿಳಂಬದ ಬಗ್ಗೆಯೂ ಚರ್ಚೆ ನಡೆದಿದೆ. ಜೊತೆಗೆ ಬಸವರಾಜ ಬೊಮ್ಮಾಯಿ ಪಾತ್ರದ ಬಗ್ಗೆಯೂ ಮಾತುಕತೆ ನಡೆದಿದೆ. ಹಾವೇರಿಯಿಂದ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಹೆಸರು ಕೇಳಿಬರುತ್ತಿದೆ. ಅವರು ಎರಡು ಬಾರಿ ಈ ಸ್ಥಾನಕ್ಕೆ ಸ್ಪರ್ಧಿಸಿದರು ಮತ್ತು 2014 ರಲ್ಲಿ 43% ಮತಗಳನ್ನು ಪಡೆದಿದ್ದರು, ಇನ್ನೂ 2019 ರಲ್ಲಿ ಉದಾಸಿ ವಿರುದ್ಧ ಸೋತ DR ಪಾಟೀಲ್ ಮತ್ತು ಕಾನೂನು ಸಚಿವ HK ಪಾಟೀಲ್ ಅವರ ಪುತ್ರ ಕೃಷ್ಣ ಪಾಟೀಲ್ ಇತರ ಸಂಭಾವ್ಯರಲ್ಲಿ ಸೇರಿದ್ದಾರೆ. ಪಕ್ಷ ಬಯಸಿದರೆ ನಾನು ಸ್ಪರ್ಧಿಸಲು ಸಿದ್ಧ ಎಂದು ಸಲ್ಲಿಂ ಅಹ್ಮದ್ ಹೇಳಿದ್ದಾರೆ.


ರಾಜಕೀಯ

Yathindra Siddaramaiah ಸದ್ದಿಲ್ಲದೆ ಶುರು ಮಾಡಿದ್ರಾ ಹೊಸ ರಾಜಕೀಯ ಲೆಕ್ಕಾಚಾರ? ಜಮೀರ್ ಭೇಟಿಗೆ ಹೆಚ್ಚಿದ ಕುತೂಹಲ

Published

on

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ Yathindra Siddaramaiah ಅವರು ಇತ್ತೀಚಿನ ದಿನಗಳಲ್ಲಿ ರಾಜಕೀಯವಾಗಿ ಹೆಚ್ಚು ಸಕ್ರಿಯರಾಗುತ್ತಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಯತೀಂದ್ರ ಭೇಟಿ ಮಾಡಿರುವುದು ಇದೀಗ ಕಾಂಗ್ರೆಸ್‌ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಯತೀಂದ್ರ ಸಿದ್ದರಾಮಯ್ಯ ಅವರು ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದ್ದಾರೆ. ಈ ಭೇಟಿ ಸೌಹಾರ್ದಯುತ ಭೇಟಿಯೇ ಅಥವಾ ಇದರ ಹಿಂದೆ ರಾಜಕೀಯ ಲೆಕ್ಕಾಚಾರವಿದೆಯೇ ಎಂಬ ಬಗ್ಗೆ ಇದೀಗ ಹಲವು ರೀತಿಯ ಚರ್ಚೆಗಳು ನಡೆಯುತ್ತಿವೆ.

ಸಿದ್ದರಾಮಯ್ಯ ಆಪ್ತರನ್ನು ಮತ್ತೆ ಒಗ್ಗೂಡಿಸುವ ಪ್ರಯತ್ನ?

ಸಿದ್ದರಾಮಯ್ಯ ಅವರ ರಾಜಕೀಯ ಪ್ರಭಾವವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ನಾಯಕರನ್ನು ಒಗ್ಗೂಡಿಸುವ ಪ್ರಯತ್ನಕ್ಕೆ ಯತೀಂದ್ರ ಮುಂದಾಗಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ವಿಶೇಷವಾಗಿ, ಹಿಂದೆ ಸಿದ್ದರಾಮಯ್ಯ ಅವರೊಂದಿಗೆ ಕೆಲವು ವಿಚಾರಗಳಲ್ಲಿ ಅಂತರ ಕಾಯ್ದುಕೊಂಡಿದ್ದ ನಾಯಕರೊಂದಿಗೂ ಯತೀಂದ್ರ ಮತ್ತೆ ಉತ್ತಮ ಸಂಬಂಧ ಬೆಳೆಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ಇದರ ಭಾಗವಾಗಿಯೇ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಭೇಟಿಯನ್ನು ನೋಡಲಾಗುತ್ತಿದೆ.

ಇದಕ್ಕೂ ಮುನ್ನ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೂ ಯತೀಂದ್ರ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದರು. ಸತೀಶ್ ಜಾರಕಿಹೊಳಿ ಮತ್ತು ಜಮೀರ್ ಅಹ್ಮದ್ ಖಾನ್ ಅವರಂತಹ ಪ್ರಮುಖ ನಾಯಕರನ್ನು ಯತೀಂದ್ರ ಸತತವಾಗಿ ಭೇಟಿ ಮಾಡುತ್ತಿರುವುದು ರಾಜಕೀಯವಾಗಿ ಗಮನ ಸೆಳೆದಿದೆ.

ಭೇಟಿಗಳ ಹಿಂದೆ ರಾಜಕೀಯ ಕಾರ್ಯತಂತ್ರ?

ಯತೀಂದ್ರ ಅವರ ಈ ಭೇಟಿಗಳನ್ನು ಸದ್ಯಕ್ಕೆ ಸಾಮಾನ್ಯ ಸೌಹಾರ್ದಯುತ ಭೇಟಿಗಳೆಂದು ಹೇಳಲಾಗುತ್ತಿದ್ದರೂ, ರಾಜಕೀಯ ಬೆಳವಣಿಗೆಗಳು ಹಾಗೂ ಮುಂದಿನ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆದಿರಬಹುದೆಂಬ ಮಾತುಗಳು ಕೇಳಿಬರುತ್ತಿವೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ರಾಜಕೀಯ ಸಮೀಕರಣಗಳು ಹೇಗೆ ಬದಲಾಗಲಿವೆ ಎಂಬುದು ಕುತೂಹಲ ಮೂಡಿಸಿರುವ ಸಂದರ್ಭದಲ್ಲೇ ಯತೀಂದ್ರ ಅವರ ಚಟುವಟಿಕೆಗಳು ಹೆಚ್ಚಾಗಿವೆ.

ತಂದೆ ಸಿದ್ದರಾಮಯ್ಯ ಅವರ ರಾಜಕೀಯ ಅನುಭವ ಮತ್ತು ಪ್ರಭಾವವನ್ನು ಬಳಸಿಕೊಂಡು ಪಕ್ಷದ ಪ್ರಮುಖ ನಾಯಕರೊಂದಿಗೆ ಬಾಂಧವ್ಯ ಬಲಪಡಿಸುವ ಪ್ರಯತ್ನ ಇದಾಗಿರಬಹುದು ಎಂಬ ವಿಶ್ಲೇಷಣೆ ರಾಜಕೀಯ ವಲಯದಲ್ಲಿ ವ್ಯಕ್ತವಾಗಿದೆ.

ಆದರೆ, ಜಮೀರ್ ಅಹ್ಮದ್ ಖಾನ್ ಮತ್ತು ಸತೀಶ್ ಜಾರಕಿಹೊಳಿ ಅವರೊಂದಿಗಿನ ಯತೀಂದ್ರ ಸಿದ್ದರಾಮಯ್ಯ ಅವರ ಭೇಟಿಗಳ ನಿಖರ ರಾಜಕೀಯ ಉದ್ದೇಶವೇನು ಎಂಬುದು ಇನ್ನೂ ಅಧಿಕೃತವಾಗಿ ಸ್ಪಷ್ಟವಾಗಿಲ್ಲ. ಹೀಗಾಗಿ ಈ ಸರಣಿ ಭೇಟಿಗಳು ಮುಂದಿನ ದಿನಗಳಲ್ಲಿ ಯಾವ ರೀತಿಯ ರಾಜಕೀಯ ಬೆಳವಣಿಗೆಗೆ ಕಾರಣವಾಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

Continue Reading

ರಾಜ್ಯ

KRS ಡ್ಯಾಂಗೆ ಭಾರೀ ಶಾಕ್‌! ಒಳಹರಿವು ದಿಢೀರ್ ಕುಸಿತ; ಸದ್ಯದ ನೀರಿನ ಮಟ್ಟ ಎಷ್ಟು ಗೊತ್ತಾ?

Published

on

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಪರಿಣಾಮ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರ (KRS) ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ ದಿಢೀರ್ ಇಳಿಕೆಯಾಗಿದೆ. ಕೊಡಗು ಸೇರಿದಂತೆ ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ಮಳೆ ಕಡಿಮೆಯಾಗಿರುವುದರಿಂದ ಜಲಾಶಯದ ಒಳಹರಿವು ಗಣನೀಯವಾಗಿ ಕುಸಿದಿದೆ.

ಕಳೆದ ಕೆಲವು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿತ್ತು. ಇದರಿಂದ ಜಲಾಶಯದ ನೀರಿನ ಮಟ್ಟವೂ ವೇಗವಾಗಿ ಏರಿಕೆಯಾಗಿತ್ತು.

ಬುಧವಾರ ಬೆಳಿಗ್ಗೆ 9,438 ಕ್ಯೂಸೆಕ್ ಇದ್ದ ಕೆಆರ್‌ಎಸ್ ಜಲಾಶಯದ ಒಳಹರಿವು ಗುರುವಾರ ವೇಳೆಗೆ ಬರೋಬ್ಬರಿ 17,427 ಕ್ಯೂಸೆಕ್‌ಗೆ ಏರಿಕೆಯಾಗಿತ್ತು. ಆದರೆ ಇದೀಗ ಕಾವೇರಿ ಕೊಳ್ಳದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಶುಕ್ರವಾರದ ವೇಳೆಗೆ ಒಳಹರಿವು 10,028 ಕ್ಯೂಸೆಕ್‌ಗೆ ಕುಸಿದಿದೆ.

ಒಂದೇ ದಿನದಲ್ಲಿ ಒಳಹರಿವಿನಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿರುವುದು ಜಲಾಶಯದ ನೀರಿನ ಲಭ್ಯತೆ ಕುರಿತು ಕುತೂಹಲ ಮೂಡಿಸಿದೆ. ಮುಂದಿನ ದಿನಗಳಲ್ಲಿ ಕೊಡಗು ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಉತ್ತಮ ಮಳೆಯಾಗುತ್ತದೆಯೇ ಎಂಬುದರ ಮೇಲೆ ಕೆಆರ್‌ಎಸ್‌ಗೆ ಒಳಹರಿವಿನ ಪ್ರಮಾಣ ಅವಲಂಬಿತವಾಗಿರಲಿದೆ.

110 ಅಡಿ ದಾಟಿದ KRS ನೀರಿನ ಮಟ್ಟ

ಒಳಹರಿವು ಕಡಿಮೆಯಾಗಿದ್ದರೂ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 110.20 ಅಡಿಗೆ ತಲುಪಿದೆ. ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯದ ಮಟ್ಟ 124.80 ಅಡಿಯಾಗಿದೆ.

ಸದ್ಯ ಜಲಾಶಯದಲ್ಲಿ 31.923 ಟಿಎಂಸಿ ನೀರು ಸಂಗ್ರಹವಾಗಿದೆ. 110 ಅಡಿಗೂ ಹೆಚ್ಚು ನೀರು ಸಂಗ್ರಹವಾಗಿರುವುದು ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರಿಗೆ ಹಾಗೂ ಮಂಡ್ಯ, ಮೈಸೂರು ಸೇರಿದಂತೆ ಹಲವು ಪ್ರದೇಶಗಳ ಕುಡಿಯುವ ನೀರಿನ ಅಗತ್ಯಗಳಿಗೆ ಸದ್ಯಕ್ಕೆ ಆಶಾದಾಯಕ ಬೆಳವಣಿಗೆಯಾಗಿದೆ.

ಕಳೆದ ಕೆಲವು ದಿನಗಳಲ್ಲಿ ಹೆಚ್ಚಾಗಿದ್ದ ಒಳಹರಿವು ಇದೀಗ ಇಳಿಕೆಯಾಗಿರುವುದರಿಂದ ಜಲಾಶಯದ ನೀರಿನ ಮಟ್ಟ ಮತ್ತು ಒಳಹರಿವಿನ ಮೇಲೆ ರೈತರು ಹಾಗೂ ಅಧಿಕಾರಿಗಳು ನಿಗಾ ಇರಿಸಿದ್ದಾರೆ. ಮುಂದಿನ ಮಳೆಯ ಪ್ರಮಾಣದ ಆಧಾರದ ಮೇಲೆ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಳಿತವಾಗುವ ಸಾಧ್ಯತೆಯಿದೆ.

Continue Reading

ದೇಶ

KPSC Recruitment Scam: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌ಡಿಕೆ ಗಂಭೀರ ಆರೋಪ; ನೇಮಕಾತಿ ದಂಧೆ ಬಯಲು ಎಂದ ಕೇಂದ್ರ ಸಚಿವ

Published

on

By

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ KPSC ದಲ್ಲಿ ಅಕ್ರಮ ಹಾಗೂ ನೇಮಕಾತಿ ದಂಧೆ ನಡೆಯುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. KPSC ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ ಅವರು, ಸರ್ಕಾರದ ಕಾರ್ಯವೈಖರಿಯನ್ನು ಪ್ರಶ್ನಿಸಿದ್ದಾರೆ.

KPSC ಸಂಸ್ಥೆಯ ಮೇಲಿನ ಜನರ ವಿಶ್ವಾಸ ಕಡಿಮೆಯಾಗಿದೆ ಎಂದು ಆರೋಪಿಸಿದ ಎಚ್‌ಡಿಕೆ, ಉದ್ಯೋಗಾಕಾಂಕ್ಷಿಗಳಿಗೆ ಆಯೋಗದ ಬಗ್ಗೆ ಯಾವುದೇ ಭರವಸೆ ಉಳಿದಿಲ್ಲ ಎಂದು ಹೇಳಿದ್ದಾರೆ. KPSC ಸದಸ್ಯರ ನೇಮಕಾತಿಯಲ್ಲಿಯೇ ದೊಡ್ಡ ಮಟ್ಟದ ದಂಧೆ ನಡೆಯುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

KPSC ಸದಸ್ಯರ ನೇಮಕಕ್ಕೂ ರೇಟ್ ಫಿಕ್ಸ್?

KPSC ಸದಸ್ಯರನ್ನು ನೇಮಕ ಮಾಡುವಾಗ ನಿರ್ದಿಷ್ಟ ದರ ನಿಗದಿಪಡಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಜಾತಿಯ ಹೆಸರಿನಲ್ಲಿ ಹಾಗೂ ಹಣದ ಆಧಾರದ ಮೇಲೆ ಸದಸ್ಯರ ನೇಮಕಾತಿ ನಡೆಯುತ್ತಿದೆ ಎಂದು ಅವರು ದೂರಿದ್ದಾರೆ.

KPSC ಮೇಲಿನ ಜನರ ನಂಬಿಕೆ ಕಳೆದುಹೋಗಲು ರಾಜ್ಯ ಸರ್ಕಾರವೇ ಕಾರಣ ಎಂದು ಟೀಕಿಸಿರುವ ಅವರು, ನೇಮಕಾತಿ ಪ್ರಕ್ರಿಯೆಯಲ್ಲಿನ ಅಕ್ರಮಗಳ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

73 ಸಾವಿರ ಉದ್ಯೋಗ ಭರವಸೆ ಏನಾಯಿತು?

ರಾಜ್ಯದ ನಾಲ್ಕು ಇಲಾಖೆಗಳ ನೇಮಕಾತಿ ಪ್ರಕ್ರಿಯೆಯನ್ನು ಉಲ್ಲೇಖಿಸಿದ ಎಚ್‌ಡಿಕೆ, ಕಾಂಗ್ರೆಸ್ ಸರ್ಕಾರ ನೀಡಿದ್ದ 73 ಸಾವಿರ ಉದ್ಯೋಗಗಳ ಭರವಸೆ ಏನಾಯಿತು ಎಂದು ಪ್ರಶ್ನಿಸಿದ್ದಾರೆ.

ಭ್ರಷ್ಟಾಚಾರಕ್ಕೆ ಅವಕಾಶವೇ ಇಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳುತ್ತಾರೆ. ಆದರೆ ನೇಮಕಾತಿ ಸೇರಿದಂತೆ ವಿವಿಧ ವಿಚಾರಗಳಲ್ಲಿ ಹೊಸ ತಿದ್ದುಪಡಿಗಳ ಹೆಸರಿನಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಸರ್ಕಾರ ಗಮನಿಸಬೇಕು ಎಂದು ಅವರು ಹೇಳಿದ್ದಾರೆ.

ಎಂಜಿನಿಯರ್ ನೇಮಕಾತಿಯಲ್ಲೂ ಅಕ್ರಮ ಆರೋಪ

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನಾಲ್ವರು ಕಾರ್ಯನಿರ್ವಾಹಕ ಎಂಜಿನಿಯರ್‌ಗಳ ನೇಮಕಾತಿಗೆ ಸಂಬಂಧಿಸಿದಂತೆ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕುಮಾರಸ್ವಾಮಿ, ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದಾರೆ.

ಈ ಇಲಾಖೆಯ ಸಚಿವರಾಗಿ ಹಿಂದೆ ಕಾರ್ಯನಿರ್ವಹಿಸಿದ್ದ ಪ್ರಿಯಾಂಕ್ ಖರ್ಗೆ ಅವರಿಗೆ ನೇಮಕಾತಿಯಲ್ಲಿನ ಅಕ್ರಮದ ಬಗ್ಗೆ ಮಾಹಿತಿ ಇದ್ದರೂ ನೇಮಕಾತಿ ಮಾಡಲಾಗಿದೆ ಎಂದು ಎಚ್‌ಡಿಕೆ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿ ಉದ್ಯೋಗ ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿರಬೇಕು. ಉದ್ಯೋಗಕ್ಕಾಗಿ ಕಾಯುತ್ತಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯದೊಂದಿಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು ಎಂದು ಅವರು ಹೇಳಿದ್ದಾರೆ.

Continue Reading

Trending