Connect with us

ಬಿಬಿಎಂಪಿ

ವಾಧ್ವಾನ್ ಪೋರ್ಟ್ ಪ್ರಾಜೆಕ್ಟ್ ಉದ್ಘಾಟನೆ, ಗ್ಲೋಬಲ್ ಫಿನ್‌ಟೆಕ್ ಫೆಸ್ಟ್‌ನಲ್ಲಿ ಭಾಗಿಯಾದ ಪ್ರಧಾನಿ ಮೋದಿ

Published

on

ಮುಂಬೈ: ಫಿನ್‌ಟೆಕ್ (FinTech) ಸೆಕ್ಟರ್ ಭಾರತದ ಆರ್ಥಿಕ ಮಾರುಕಟ್ಟೆಯಲ್ಲಿ ಹೊಸತನ್ನು ಸೃಷ್ಟಿಸಿದೆ. ಅದರ ಕ್ರಾಂತಿ ದೇಶದೆಲ್ಲೆಡೆ ಹಬ್ಬಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಮುಂಬೈನಲ್ಲಿ (Mumbai) ನಡೆದ 2024ರ ಜಾಗತಿಕ ಫಿನ್‌ಟೇಕ್ ಫೆಸ್ಟಿವಲ್‌ನಲ್ಲಿ (Global FinTech Festival 2024) ಹೇಳಿದರು.

ಸಮಾರಂಭದಲ್ಲಿ ಮಾತನಾಡಿದ ಅವರು, ಒಂದು ಕಾಲದಲ್ಲಿ ಜನರು ಸಾಂಸ್ಕೃತಿಕ ವೈವಿಧ್ಯತೆಯದಿಂದಲೇ ಬೆರಗಾಗುತ್ತಿದ್ದರು. ಆದರೆ ಇದೀಗ ಫಿನ್‌ಟೆಕ್ ಭಾರತಕ್ಕೆ ಬಂದ ಮೇಲೆ ಜನರು ಇನ್ನಷ್ಟು ಅಚ್ಚರಿಗೊಂಡಿದ್ದಾರೆ ಎಂದರು.

ದೇಶದಲ್ಲಿ ಫಿನ್‌ಟೆಕ್ ಶಾಖೆಗಳಿಲ್ಲ, ಹಳ್ಳಿಗಳಲ್ಲಿ ಬ್ಯಾಂಕ್‌ಗಳಿಲ್ಲ, ಇಂಟರ್ನೆಟ್ ಸೇವೆ ಕೂಡ ಸರಿಯಾಗಿ ಲಭ್ಯವಿಲ್ಲ. ಹೀಗಿರುವಾಗ ಫಿನ್‌ಟೆಕ್ ಕ್ರಾಂತಿ ದೇಶದೆಲ್ಲೆಡೆ ಹಬ್ಬಿದೆ ಎಂದರೆ ಹೇಗೆಂದು ಪಾರ್ಲಿಮೆಂಟ್‌ನಲ್ಲಿ ಪ್ರಶ್ನಿಸುತ್ತಿದ್ದರು. ಆದರೆ ಕೇವಲ ಒಂದು ದಶಕದಲ್ಲಿಯೇ ಬ್ರಾಡ್‌ಬ್ಯಾಂಡ್ (Broadband) ಬಳಕೆದಾರರು 6 ಕೋಟಿಯಿಂದ 94 ಕೋಟಿಗೆ ಹೆಚ್ಚಾಗಿದ್ದಾರೆ ಎಂದು ಪ್ರಧಾನಿ ತಿಳಿಸಿದರು.

ಕೋವಿಡ್‌ನಂತಹ ದೊಡ್ಡ ಸಾಂಕ್ರಾಮಿಕ ರೋಗ ಬಂದಾಗಲೂ ಭಾರತದಲ್ಲಿ ಬ್ಯಾಂಕಿಂಗ್ ಸೇವೆಗಳಲ್ಲಿ ಯಾವುದೇ ಸಮಸ್ಯೆಯಾಗಿರಲಿಲ್ಲ. ಜೊತೆಗೆ ಜನ್-ಧನ್ ಯೋಜನೆ ತನ್ನ 10 ವರ್ಷಗಳನ್ನು ಪೂರೈಸಿದ್ದು, ಈ ಯೋಜನೆಯಡಿಯಲ್ಲಿ ಮಹಿಳೆಯರಿಗಾಗಿ 29 ಕೋಟಿ ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದೆ. ಇದು ಮಹಿಳಾ ಸಬಲೀಕರಣದ ಉತ್ತಮ ಮಾಧ್ಯಮವಾಗಿ ಹೊರಹೊಮ್ಮಿದೆ ಎಂದು ಹೇಳಿದರು.

ಸೈಬರ್ ವಂಚನೆಗಳನ್ನು ತಡೆಯಲು, ಡಿಜಿಟಲ್ ಸಾಕ್ಷರತೆಯನ್ನು ಹೆಚ್ಚಿಸಲು ನಾವು ಹೆಚ್ಚಿನ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಆ ಕಾರಣದಿಂದ ಸರ್ಕಾರವು ಏಂಜೆಲ್ ತೆರಿಗೆಯನ್ನು ರದ್ದುಗೊಳಿಸಿದೆ ಮತ್ತು ಫಿನ್‌ಟೆಕ್ ವಲಯಕ್ಕೆ ಸಹಾಯ ಮಾಡಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದರು.

ಸರ್ಕಾರದ ನೂರಾರು ಯೋಜನೆಗಳ ಲಾಭವನ್ನು ಫಲಾನುಭವಿಗಳು ನೇರವಾಗಿ ಪಡೆದುಕೊಳ್ಳುತ್ತಿದ್ದಾರೆ. ಏಕೆಂದರೆ ಭಾರತವು ಡಿಜಿಟಲ್ ತಂತ್ರಜ್ಞಾನದ ಮೂಲಕ ಪಾರದರ್ಶಕತೆಯನ್ನು ತಂದಿದೆ. ಫಿನ್‌ಟೆಕ್‌ನಿಂದಾಗಿ ಭಾರತದಲ್ಲಿ ಆಗಿರುವ ಪರಿವರ್ತನೆಯು ಕೇವಲ ತಂತ್ರಜ್ಞಾನಕ್ಕೆ ಸೀಮಿತವಾಗಿಲ್ಲ, ಇದು ಹಳ್ಳಿಗಳು ಮತ್ತು ನಗರಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು.

J S Vasudev is a journalist and writer with 15 years of experience in writing and journalism. He founded Hosasuddi.in in 2023 with a vision to deliver credible and timely Kannada news. With a strong passion for journalism, he focuses on presenting news in a clear, simple and reader-friendly manner. His work covers current affairs, Karnataka news, national developments, business, technology and social issues. He believes in independent journalism and responsible reporting that puts readers first. His guiding motto is “Write on Your Own,” reflecting his commitment to original and independent content. Through Hosasuddi.in, he continues to contribute to Kannada digital journalism with dedication and integrity.

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ರಾಜ್ಯ

Karnataka ಮುಂಗಾರು ಅಧಿವೇಶನದ ಹೈಲೈಟ್ ಸಿದ್ದರಾಮಯ್ಯ! ಮಾಜಿ ಸಿಎಂ ಹೊಸ ಪಾತ್ರದತ್ತ ಎಲ್ಲರ ಕಣ್ಣು

Published

on

ಬೆಂಗಳೂರು: Karnataka ವಿಧಾನಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 13ರಿಂದ ಆರಂಭವಾಗಲಿದ್ದು, ಈ ಬಾರಿಯ ಅಧಿವೇಶನ ಹಲವು ರಾಜಕೀಯ ಕಾರಣಗಳಿಂದ ವಿಶೇಷ ಮಹತ್ವ ಪಡೆದುಕೊಂಡಿದೆ. ಅದರಲ್ಲೂ ಮಾಜಿ ಮುಖ್ಯಮಂತ್ರಿ siddaramaiah ಅವರ ಹಾಜರಾತಿ ಎಲ್ಲರ ಗಮನ ಸೆಳೆದಿದೆ. ಎರಡು ಬಾರಿ ವಿಧಾನಸಭೆಯ ಪ್ರತಿಪಕ್ಷ ನಾಯಕರಾಗಿ, ಬಳಿಕ ಸುಮಾರು ಏಳೂವರೆ ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಸಿದ್ದರಾಮಯ್ಯ ಇದೀಗ ಹಲವು ವರ್ಷಗಳ ಬಳಿಕ ಕೇವಲ ಶಾಸಕರಾಗಿ ವಿಧಾನಸಭೆಗೆ ಪ್ರವೇಶಿಸುತ್ತಿರುವುದು ವಿಶೇಷ ಚರ್ಚೆಗೆ ಕಾರಣವಾಗಿದೆ.

ರಾಜಕೀಯವಾಗಿ ಕಾಂಗ್ರೆಸ್ ಪಕ್ಷಕ್ಕೆ ಬಲ ತುಂಬಿದ್ದ ಸಿದ್ದರಾಮಯ್ಯ ಈಗ ಸದನದಲ್ಲಿ ಯಾವ ಆಸನದಲ್ಲಿ ಕುಳಿತುಕೊಳ್ಳಲಿದ್ದಾರೆ ಎಂಬ ಕುತೂಹಲವೂ ಹೆಚ್ಚಾಗಿದೆ. ವಿಧಾನಸಭೆಯ ಶಿಷ್ಟಾಚಾರದ ಪ್ರಕಾರ ಸಚಿವ ಸಂಪುಟದ ಸದಸ್ಯರಿಗೆ ಮೊದಲ ಸಾಲಿನಲ್ಲಿ ಆಸನ ವ್ಯವಸ್ಥೆ ಮಾಡಲಾಗುತ್ತದೆ. ಮಾಜಿ ಮುಖ್ಯಮಂತ್ರಿಗಳಿಗೆ ಆಸನ ಆಯ್ಕೆ ಮಾಡುವ ಸ್ವಾತಂತ್ರ್ಯವಿದ್ದು, ಅವರು ಬಯಸಿದ ಸ್ಥಳದಲ್ಲಿ ಕುಳಿತುಕೊಳ್ಳಬಹುದು.

ಸಾಮಾನ್ಯವಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಹಿರಿಯ ಸಚಿವರಿಗೆ ಮೊದಲ ಸಾಲಿನಲ್ಲಿ ಆಸನಗಳನ್ನು ಮೀಸಲಿಡಲಾಗುತ್ತದೆ. ಒಟ್ಟು ಸುಮಾರು 33 ಸಚಿವರ ಆಸನಗಳ ಬಳಿಕ ಉಳಿಯುವ ಸ್ಥಳಗಳಲ್ಲಿ ಅಥವಾ ಹಿಂಬದಿ ಸಾಲುಗಳಲ್ಲಿ ಮಾಜಿ ಮುಖ್ಯಮಂತ್ರಿಗಳಿಗೆ ಆಸನ ಕಲ್ಪಿಸುವ ಸಂಪ್ರದಾಯವಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮಂತ್ರಿಗಳ ಸಾಲಿನ ಹಿಂದಿನ ಆಸನವನ್ನು ಆಯ್ಕೆ ಮಾಡುತ್ತಾರೆಯೇ ಅಥವಾ ಸಂಪೂರ್ಣ ಹಿಂಬದಿ ಸಾಲಿನಲ್ಲಿ ಕುಳಿತುಕೊಳ್ಳುತ್ತಾರೆಯೇ ಎಂಬುದು ರಾಜಕೀಯ ವಲಯದಲ್ಲಿ ಚರ್ಚೆಯ ವಿಷಯವಾಗಿದೆ.

ಈ ಹಿಂದೆ ಮಾಜಿ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್ ಹಾಗೂ ವೀರಪ್ಪ ಮೊಯ್ಲಿ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಹಿಂಬದಿ ಸಾಲಿನ ಆಸನಗಳನ್ನೇ ಆಯ್ಕೆ ಮಾಡಿಕೊಂಡಿದ್ದರು. ಅದೇ ಸಂಪ್ರದಾಯವನ್ನು ಸಿದ್ದರಾಮಯ್ಯ ಮುಂದುವರಿಸುತ್ತಾರೆಯೇ ಎಂಬ ಪ್ರಶ್ನೆ ಈಗ ಉದ್ಭವಿಸಿದೆ.

ಆಸನದ ಆಯ್ಕೆ ಮಾತ್ರವಲ್ಲ, ಈ ಬಾರಿಯ ಅಧಿವೇಶನದಲ್ಲಿ ಸಿದ್ದರಾಮಯ್ಯ ಅವರ ಪಾತ್ರವೂ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಬಿಜೆಪಿ ಮತ್ತು ಜೆಡಿಎಸ್ ಸೇರಿದಂತೆ ಪ್ರತಿಪಕ್ಷಗಳು ಹಲವು ಪ್ರಮುಖ ವಿಷಯಗಳನ್ನು ಮುಂದಿಟ್ಟುಕೊಳ್ಳಲು ಸಜ್ಜಾಗಿವೆ. ಬರ ಪರಿಸ್ಥಿತಿ ನಿರ್ವಹಣೆ, ಕಾನೂನು ಸುವ್ಯವಸ್ಥೆ, ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪಗಳು ಸೇರಿದಂತೆ ಹಲವು ವಿಷಯಗಳು ಸದನದಲ್ಲಿ ಪ್ರತಿಧ್ವನಿಸುವ ಸಾಧ್ಯತೆಯಿದೆ.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಪರವಾಗಿ ಯಾವ ರೀತಿಯಲ್ಲಿ ವಾದ ಮಂಡಿಸುತ್ತಾರೆ, ತಮ್ಮ ಅನುಭವವನ್ನು ಹೇಗೆ ಬಳಸಿಕೊಳ್ಳುತ್ತಾರೆ ಹಾಗೂ ಆಡಳಿತಕ್ಕೆ ಯಾವ ರೀತಿಯ ರಾಜಕೀಯ ಬೆಂಬಲ ನೀಡುತ್ತಾರೆ ಎಂಬುದರ ಮೇಲೆ ಆಡಳಿತ ಮತ್ತು ಪ್ರತಿಪಕ್ಷ ಎರಡರ ಕಣ್ಣೂ ನೆಟ್ಟಿದೆ.

ಕಳೆದ ಅಧಿವೇಶನದಲ್ಲಿ ಮುಖ್ಯಮಂತ್ರಿಯಾಗಿ ಸದನ ಮುನ್ನಡೆಸಿದ್ದ ಸಿದ್ದರಾಮಯ್ಯ, ಈ ಬಾರಿ ಮಾಜಿ ಮುಖ್ಯಮಂತ್ರಿಯಾಗಿ ಮತ್ತು ಸಾಮಾನ್ಯ ಶಾಸಕರಾಗಿ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಿರುವುದು ವಿಧಾನಸಭೆಯ ಇತಿಹಾಸದಲ್ಲಿಯೂ ಗಮನಾರ್ಹ ಬೆಳವಣಿಗೆಯಾಗಿದೆ. ಹೀಗಾಗಿ ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಅವರ ಪ್ರತಿಯೊಂದು ನಡೆ ಮತ್ತು ಹೇಳಿಕೆ ರಾಜಕೀಯವಾಗಿ ಹೆಚ್ಚಿನ ಮಹತ್ವ ಪಡೆಯುವ ನಿರೀಕ್ಷೆಯಿದೆ.

Continue Reading

ಚುನಾವಣೆ

GBA ELECTION : ಜುಲೈ ಮೊದಲ ವಾರದಲ್ಲೇ ವೇಳಾಪಟ್ಟಿ? ಬೆಂಗಳೂರು ರಾಜಕೀಯ ಕಣ ರಂಗೇರಲು ಸಜ್ಜು

Published

on

ಬೆಂಗಳೂರು: ಸುಪ್ರೀಂ ಕೋರ್ಟ್ ನೀಡಿರುವ ಕಟ್ಟುನಿಟ್ಟಿನ ಆದೇಶದ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರಪಾಲಿಕೆಗಳ ಚುನಾವಣೆ ಆಗಸ್ಟ್ 31ರೊಳಗೆ ನಡೆಸುವುದು ಬಹುತೇಕ ಖಚಿತವಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ ಆಯೋಗವು ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಿದೆ.

ಮೂಲಗಳ ಪ್ರಕಾರ, ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಅಧಿಕೃತ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಜುಲೈ 10ರೊಳಗೆ ದಿನಾಂಕ ಘೋಷಣೆಯಾಗಬಹುದು ಎಂದು ಹೇಳಲಾಗುತ್ತಿದ್ದು, ವೇಳಾಪಟ್ಟಿ ಪ್ರಕಟವಾದ ತಕ್ಷಣವೇ ಬೆಂಗಳೂರು ನಗರದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಆಗಸ್ಟ್ ಮೂರನೇ ವಾರದಲ್ಲಿ ಮತದಾನ ನಡೆಸುವ ಬಗ್ಗೆ ಆಯೋಗ ಚಿಂತನೆ ನಡೆಸಿದೆ.

ಈ ಹಿಂದೆ ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಗಡುವು ನೀಡಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಹಾಗೂ ಸಿಬ್ಬಂದಿ ಕೊರತೆಯನ್ನು ಪರಿಗಣಿಸಿ ನ್ಯಾಯಾಲಯವು ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿತ್ತು. ಜೊತೆಗೆ, ಯಾವುದೇ ಕಾರಣಕ್ಕೂ ಮತ್ತೆ ಚುನಾವಣೆ ಮುಂದೂಡುವ ಪ್ರಸ್ತಾಪವನ್ನು ತನ್ನ ಮುಂದೆ ತರಬಾರದು ಎಂದು ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ನೀಡುವಂತೆ ಸರ್ಕಾರ ಸಲ್ಲಿಸಿದ್ದ ಮನವಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ.

ಇದರ ಬೆನ್ನಲ್ಲೇ ರಾಜ್ಯ ಚುನಾವಣಾ ಆಯೋಗವು ಮತದಾರರ ಪಟ್ಟಿ ಅಂತಿಮಗೊಳಿಸುವುದು, ಮತಗಟ್ಟೆಗಳ ಸಿದ್ಧತೆ ಹಾಗೂ ಸಿಬ್ಬಂದಿ ನಿಯೋಜನೆ ಸೇರಿದಂತೆ ಹಲವು ಕಾರ್ಯಗಳಲ್ಲಿ ತೊಡಗಿದೆ. ರಾಜಕೀಯ ಪಕ್ಷಗಳೂ ಚುನಾವಣೆಗೆ ಸಜ್ಜಾಗಿವೆ. ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಕಾರ್ಯಕರ್ತರಿಗೆ ಸೂಚನೆ ನೀಡಿದೆ. ಬಿಜೆಪಿ, ಕಳೆದ ಆರು ವರ್ಷಗಳಿಂದ ಚುನಾವಣೆ ನಡೆಯದ ಪರಿಣಾಮ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಆರೋಪಿಸುತ್ತಿದೆ. ಇತ್ತ ಬಿಜೆಪಿ-ಜೆಡಿಎಸ್ ಮೈತ್ರಿಯೂ ಚುನಾವಣಾ ಅಖಾಡಕ್ಕೆ ಸಜ್ಜಾಗಿದ್ದು, ಪಂಚ ಪಾಲಿಕೆ ಚುನಾವಣೆ ಭಾರೀ ಪೈಪೋಟಿಗೆ ಸಾಕ್ಷಿಯಾಗುವ ನಿರೀಕ್ಷೆ ಮೂಡಿದೆ.

Continue Reading

ದೇಶ

ರಾಮಲಿಂಗಾರೆಡ್ಡಿ ಬಳಿಕ ಮುನಿಯಪ್ಪ ಬಂಡಾಯ! ಕಾಂಗ್ರೆಸ್ ಹೈಕಮಾಂಡ್ ತುರ್ತು ಸಭೆ

Published

on

ದೇವನಹಳ್ಳಿ, ಜೂನ್ 5: ನೂತನ ಮುಖ್ಯಮಂತ್ರಿ D. K. Shivakumar ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಖಾತೆ ಹಂಚಿಕೆಯ ಬೆನ್ನಲ್ಲೇ ಅಸಮಾಧಾನದ ಹೊಗೆ ದಟ್ಟವಾಗುತ್ತಿದೆ. ಹಿರಿಯ ನಾಯಕ Ramalinga Reddy ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ ಬೆನ್ನಲ್ಲೇ ಆಹಾರ ಸಚಿವ K. H. Muniyappa ಕೂಡ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿರುವುದು ಕಾಂಗ್ರೆಸ್ ಹೈಕಮಾಂಡ್‌ಗೆ ತಲೆನೋವಾಗಿ ಪರಿಣಮಿಸಿದೆ.

ಈ ಬೆಳವಣಿಗೆಯಿಂದ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ವರಿಷ್ಠರು, ಸರ್ಕಾರದ ಆರಂಭದಲ್ಲೇ ಉಂಟಾಗಿರುವ ಬಿಕ್ಕಟ್ಟನ್ನು ಶಮನಗೊಳಿಸಲು ದೇವನಹಳ್ಳಿ ಬಳಿಯ Kempegowda International Airport ಸಮೀಪದ ವಿಐಪಿ ಲಾಂಜ್ ಹಾಗೂ ತಾಜ್ ಹೋಟೆಲ್‌ನಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಕಾಂಗ್ರೆಸ್ ನಾಯಕ Rahul Gandhi, ಎಐಸಿಸಿ ಉಸ್ತುವಾರಿ Randeep Singh Surjewala, ಮಾಜಿ ಮುಖ್ಯಮಂತ್ರಿ Siddaramaiah ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದು, ಅಸಮಾಧಾನಗೊಂಡಿರುವ ನಾಯಕರನ್ನು ಮನವೊಲಿಸುವ ಪ್ರಯತ್ನ ನಡೆದಿದೆ.

ಖಾತೆ ಹಂಚಿಕೆಯಲ್ಲಿ ತಮ್ಮ ಹಿರಿತನಕ್ಕೆ ಸೂಕ್ತ ಗೌರವ ಸಿಕ್ಕಿಲ್ಲ ಎಂದು ಬೇಸರಗೊಂಡಿರುವ ಕೆ.ಎಚ್. ಮುನಿಯಪ್ಪ, ತಮಗೆ ಕೃಷಿ ಅಥವಾ ಸಮಾಜ ಕಲ್ಯಾಣ ಇಲಾಖೆಯನ್ನು ನೀಡುವಂತೆ ವರಿಷ್ಠರ ಮುಂದೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ತಮಗೆ ಹಂಚಿಕೆಯಾಗಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜವಾಬ್ದಾರಿಯನ್ನು ಸ್ವೀಕರಿಸುವುದಿಲ್ಲ ಎಂದು ಅವರು ಹಠ ಹಿಡಿದಿರುವುದು ಸರ್ಕಾರಕ್ಕೆ ಮತ್ತಷ್ಟು ಮುಜುಗರ ಉಂಟುಮಾಡಿದೆ.

ಇದಕ್ಕೂ ಮುನ್ನ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೈತಪ್ಪಿದ್ದರಿಂದ ಅಸಮಾಧಾನಗೊಂಡ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಇದರಿಂದ ಸರ್ಕಾರ ರಚನೆಯಾದ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಒಳಗೆ ಭಿನ್ನಮತದ ಧ್ವನಿ ಜೋರಾಗಿದೆ.

ಈ ಬೆಳವಣಿಗೆಗಳು ಕಾಂಗ್ರೆಸ್ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಸವಾಲುಗಳನ್ನು ತಂದೊಡ್ಡಿದ್ದು, ಹೈಕಮಾಂಡ್ ನಡೆಸುತ್ತಿರುವ ಈ ಹೈವೋಲ್ಟೇಜ್ ಸಭೆಯ ಫಲಿತಾಂಶದ ಮೇಲೆ ರಾಜ್ಯ ರಾಜಕಾರಣದ ಮುಂದಿನ ಬೆಳವಣಿಗೆಗಳು ಅವಲಂಬಿತವಾಗಿವೆ.

Continue Reading

Trending