ದೇಶ
ವಾರ ಭವಿಷ್ಯ: ಈ ರಾಶಿಯಲ್ಲಿ ಜನಿಸಿದವರಿಗೆ ಬಹಳಷ್ಟು ಒಳಿತು – Weekly Horoscope
ಮೇಷ : ವಾರದ ಆರಂಭದಲ್ಲಿ ಹೆಚ್ಚನ ಹಣ ವೆಚ್ಚವಾಗಲಿದೆ, ಆದರೆ ವಾರಾಂತ್ಯದವರೆಗೆ ಪ್ರಯಾಣ ನಿಮಗೆ ಸಂತೋಷ ಉಂಟುಮಾಡಲಿದೆ. ಹಳೆಯ ಸ್ನೇಹಿತರನ್ನು ಭೇಟಿಯಾಗಲಿದ್ದೀರಿ ಹಾಗೂ ನಿಮ್ಮ ಭವಿಷ್ಯದ ಬಗ್ಗೆ ಕೊಂಚ ಬೇಸರ ಮೂಡಲಿದೆ. ಮಾರುಕಟ್ಟೆಯಲ್ಲಿ ವಸ್ತುಗಳನ್ನು ಖರೀದಿಸುವುದು ನಿಮ್ಮಲ್ಲಿ ಸಂತೋಷ ಮತ್ತು ಹೊಸ ಹುಮ್ಮಸ್ಸು ಮೂಡಿಸಲಿದೆ. ಯಾವುದೇ ತೀರ್ಥಯಾತ್ರೆ ನಿಮಗೆ, ನಿಮ್ಮ ಸ್ನೇಹಿತರಿಗೆ ಹಾಗೂ ಕುಟುಂಬದವರಿಗೆ ಈ ಸಮಯದಲ್ಲಿ ಒಳಿತನ್ನು ಉಂಟುಮಾಡಲಿದೆ. ವಹಿವಾಟಿನಲ್ಲಿ ತೊಡಗಿಸಿಕೊಂಡಿರುವವರು ತಮ್ಮ ವ್ಯಾಪಾರವನ್ನು ವಿಸ್ತರಿಸುವ ನಿಟ್ಟಿನಲ್ಲಿ ಹೊಸ ಹೂಡಿಕೆಗಳನ್ನು ಮಾಡಬಹುದು ಹಾಗೂ ಬಂಡವಳಿಗರು ತಮ್ಮ ವಹಿವಾಟನ್ನು ಎಂದಿನಂತೆ ನಡೆಸಿಕೊಂಡು ಹೋಗುವುದು ಉತ್ತಮ. ಕುಟುಂಬದೊಂದಿಗೆ ದೀರ್ಘಕಾಲದ ಪ್ರವಾಸ ಕೈಗೊಳ್ಳಲಿದ್ದೀರಿ. ಪರೀಕ್ಷೆ ಎದುರಿಸಲು ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಈ ವಾರ ಆಸಕ್ತಿ ಕಡಿಮೆಯಾಗಿ, ಓದಿನ ಕಡೆ ಗಮನ ಕೇಂದ್ರೀಕರಿಸಲು ಕಷ್ಟವೆನಿಸಬಹುದು. ಗಾಯಗೊಳ್ಳುವ ಸಾಧ್ಯತೆ ಇರುವುದರಿಂದ, ಮಕ್ಕಳು ತಮ್ಮ ದೈಹಿಕ ಸುರಕ್ಷತೆಯ ಬಗ್ಗೆ ಹೆಚ್ಚಿನ ಗಮನ ವಹಿಸಬೇಕಿದೆ ಹಾಗೂ ಎಚ್ಚರಿಕೆಯಿಂದ ಇರಬೇಕಿದೆ. ದೈಹಿಕ ಕಸರತ್ತನ್ನು ದಿನಚರಿಯ ಭಾಗವಾಗಿಸಿಕೊಳ್ಳುವ ಮೂಲಕ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು.
ವೃಷಭ : ಈ ವಾರವು ವೃಷಭ ರಾಶಿಯವರಿಗೆ ಸಾಕಷ್ಟು ಅನುಕೂಲಗಳನ್ನು ತಂದುಕೊಡಲಿದೆ. ಜ್ಞಾನ ಮತ್ತು ಮನೋಬಲ ಹೆಚ್ಚಳವಾಗಲಿದೆ. ಪ್ರೀತಿ ಹಾಗೂ ಬೌದ್ಧಿಕ ಸಂಬಂಧಗಳ ಕಡೆಗಿನ ಒಲವು ಹೆಚ್ಚಲಿದೆ. ಒಂದು ತಂಡವಾಗಿ ಕೆಲಸ ಮಾಡುವಿಕೆ ಹಾಗೂ ಪರಸ್ಪರ ಸಹಕಾರದಂತಹ ಅನುಕೂಲಗಳು ನಿಮ್ಮದಾಗಲಿವೆ. ಕೌಟುಂಬಿಕ ಜೀವನ ಹೆಚ್ಚು ಸಂತಸದಾಯಕ ಹಾಗೂ ಶಾಂತಿಯುತವಾಗಿರಲಿದ್ದು, ಕುಟುಂಬದ ಸದಸ್ಯರಲ್ಲಿ ಪರಸ್ಪರ ಸಹಕಾರ ಹೆಚ್ಚಲಿದೆ. ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಕಲಿಯಲು ಕುಟುಂಬದ ಸದಸ್ಯರು ಪರಸ್ಪರರನ್ನು ಮಾರ್ಗದರ್ಶಕರಾಗಿ ಕಾಣಲಿದ್ದಾರೆ. ಭವಿಷ್ಯದ ಬಗೆಗಿನ ಕಳವಳ ನಿಮ್ಮಲ್ಲಿ ಆಧ್ಯಾತ್ಮಿಕ ಆಸಕ್ತಿಯನ್ನು ಜಾಗೃತಗೊಳಿಸಲಿದೆ. ಭಕ್ತಿಗೆ ಸಂಬಂಧಿಸಿದ ಕಾರ್ಯಗಳು ಹಾಗೂ ಸತ್ಸಂಗದಂತಹ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಅವಕಾಶ ದೊರೆಯಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದ್ದು, ಸ್ತ್ರೀಯರಿಂದ ಬೆಂಬಲ ಹಾಗೂ ಲಕ್ಷ್ಮಿಯ ಆಶೀರ್ವಾದ ದೊರೆಯಲಿದೆ. ಹೊಸ ಅವಕಾಶಗಳು ದೊರೆಯಲಿವೆ. ವ್ಯಕ್ತಿಗತ ಅಭಿವೃದ್ಧಿ ಹಾಗೂ ವೃತ್ತಿಜೀವನದಲ್ಲಿ ಹೊಸತನ್ನು ನಿರೀಕ್ಷಿಸುತ್ತಿರುವವರಿಗೆ ಈ ವಾರ ಶುಭವಾಲಿದೆ.
ಮಿಥುನ : ಈ ವಾರ ನಿಮಗೆ ಖಂಡಿತವಾಗಿ ಹೊಸ ಸಂತೋಷ ತಂದುಕೊಡಲಿದೆ ಹಾಗೂ ಬಾಕಿ ಉಳಿಸಿದ ಕೆಲಸವನ್ನು ಪೂರ್ಣಗೊಳಿಸಲು ಸಹಾಯಕವಾಗಿದೆ. ನಿಮ್ಮ ಹಾಗೂ ಸಂಗಾತಿಯ ನಡುವಿನ ಅಂತರ ಕಡಿಮೆಯಾಗಿ ಪ್ರೀತಿ ವೃದ್ಧಿಸಲಿದೆ. ವಾರಾಂತ್ಯದ ವೇಳೆಗೆ, ಕಲಿಕೆ ಹಾಗೂ ಪ್ರೇರಣೆಯ ಬಗೆಗಿನ ನಿಮ್ಮ ಪ್ರೀತಿ ಹೆಚ್ಚಲಿದೆ. ವಿವಾಹಿತರಿಗೆ ಸಾಂಸಾರಿಕ ಜೀವನ ತೃಪ್ತಿಕರವಾಗಿರಲಿದ್ದು, ಆಸೆಗಳು ಈಡೇರಲಿವೆ. ಜ್ಞಾನ ಪಡೆದುಕೊಳ್ಳಲು ಹಣ ಹೂಡಬೇಕಾಗಿ ಬರಬಹುದು, ಹಾಗಾಗಿ ನಿಮ್ಮ ಖರ್ಚುವೆಚ್ಚಗಳ ಬಗ್ಗೆ ಎಚ್ಚರ ವಹಿಸಬೇಕು. ಉನ್ನತ ವ್ಯಾಸಂಗ ಮಾಡುತ್ತಿರುವವರು ತಮ್ಮ ಇಷ್ಟದ ವಿಷಯದ ಕುರಿತು ಆಳವಾಗಿ ಅರ್ಥೈಸಿಕೊಳ್ಳಲು ಈ ವಾರ ಸಹಾಯಕವಾಗಿದೆ. ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು, ಜ್ಞಾನದ ಪರಿಧಿಯನ್ನು ವಿಸ್ತರಿಸಿಕೊಳ್ಳಲಿದ್ದೀರಿ. ಅಧ್ಯಾಪಕರು ನಿಮಗೆ ಸಹಾಯ ಮತ್ತು ಮಾರ್ಗದರ್ಶನ ಒದಗಿಸಲಿದ್ದಾರೆ. ಪ್ರವಾಸಕ್ಕೆ ತೆರಳಲು ಅವಕಾಶ ದೊರೆಯುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಲಾಭ ಕಾಣಲಿದ್ದು, ಸ್ವಂತ ಉದ್ಯಮ ನಡೆಸುತ್ತಿರುವವರಿಗೆ ಪ್ರಯಾಣದಿಂದ ಅನುಕೂಲ ಉಂಟಾಗಲಿದೆ.
ಕರ್ಕಾಟಕ : ಈ ವಾರದಲ್ಲಿ ಕುಟುಂಬದ ಬಗ್ಗೆ ಹೆಚ್ಚಿನ ಗಮನ ವಹಿಸಬೇಕಾದ ಅಗತ್ಯವಿದೆ. ಸಂಕೀರ್ತನೆ ಹಾಗೂ ಇನ್ನಿತರ ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಂತಸ ಹಾಗೂ ಶಾಂತಿ ಕಾಣಬಹುದಾಗಿದೆ. ವಿವಾಹಿತರಿಗೆ ಈ ವಾರವಿಡೀ ಭಕ್ತಿ ಹಾಗೂ ಪ್ರೀತಿಗಾಗಿ ಮೀಸಲಿದ್ದು, ಸಂತೋಷ ಹಾಗೂ ಪ್ರಗತಿ ಹೊಂದಲಿದ್ದೀರಿ. ಪರಿವಾರಗಳು ಪ್ರಮುಖವಾದ ಉಡುಗೊರೆಗಳನ್ನು ಪಡೆಯಬಹುದು. ಆರ್ಥಿಕ, ಮಾನಸಿಕ ಹಾಗೂ ಸಾಮಾಜಿಕ ಸ್ಥಿತಿಗತಿಗಳು ಸಾಕಷ್ಟು ಗಟ್ಟಿಯಾಗಿರಲಿವೆ. ಕೊಟ್ಟ ಕೆಲಸವನ್ನು ನಿಗದಿತ ಸಮಯದೊಳಗೆ ಮಾಡಿ ಮುಗಿಸುವ ಕಡೆ ನೌಕರರು ಗಮನ ಹರಿಸಬೇಕು. ವಹಿವಾಟುದಾರರು ಹೊಸ ಉಪಕರಣಗಳು ಹಾಗೂ ಶಿಕ್ಷಣದಲ್ಲಿ ಹಣ ಹೂಡಿಕೆ ಮಾಡುವುದು ಒಳಿತು. ಸಮರ್ಥವಾದ ಕಲಿಕೆ ಸಾಧ್ಯವಿರುವುದರಿಂದ, ಈ ವಾರ ಕಲಿಕೆ ಉತ್ತಮವಾಗಿ ನಡೆಯಲಿದೆ. ಆರೋಗ್ಯದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ, ಆದರೆ ಸಾಂಕ್ರಾಮಿಕ ರೋಗಗಳ ಬಗ್ಗೆ ಎಚ್ಚರ ವಹಿಸಬೇಕಿದೆ. ಹೊರಗಿನ ಆಹಾರ ಪದಾರ್ಥಗಳ ಸೇವನೆ ಕಡಿಮೆಗೊಳಿಸಿ, ನಿಯಮಿತ ಆಹಾರಪದ್ಧತಿ ಹಾಗೂ ದೇಹದಲ್ಲಿ ಸಾಕಷ್ಟು ನೀರಿನಂಶ ಇರುವಂತೆ ನೋಡಿಕೊಳ್ಳುವುದು ಅಗತ್ಯ.
ಸಿಂಹ : ಈ ವಾರ ಕೆಲವು ಸವಾಲುಗಳನ್ನು ಒಡ್ಡಲಿದೆ. ಬೇಸರ ಕಾಣಿಸಿಕೊಳ್ಳಬಹುದು ಹಾಗೂ ಕೆಲಸಗಳು ಪೂರ್ಣಗೊಳ್ಳಲು ಮಾಮೂಲಿಗಿಂತ ಹೆಚ್ಚಿನ ಸಮಯ ತೆಗೆದುಕೊಳ್ಳಬಹುದು. ಕುಟುಂಬದಲ್ಲಿ ಅಹಿತವಾದ ವಾತಾವರಣ ಕಾಣಿಸಿಕೊಳ್ಳಬಹುದು, ಆದರೆ ಕಷ್ಟಕಾಲದಲ್ಲಿ ನಿಮ್ಮ ಪ್ರೀತಿಪಾತ್ರರ ಸಹಕಾರ ಇರಲಿದೆ. ಸ್ವಲ್ಪ ಕಾಲ ನೀವು ಹಿಂದುಳಿಯಬಹುದು, ವ್ಯವಹಾರದಲ್ಲಿ ಇತರರೊಂದಿಗೆ ಸೇರಿ ಕೆಲಸ ಮಾಡುವುದರಿಂದ ಹೊಸ ಹೊಸ ದಾರಿಗಳು ನಿಮ್ಮ ಎದುರು ತೆರೆದುಕೊಳ್ಳಬಹುದು. ಇಂದಿನ ಹೂಡಿಕೆಗಳ ಮೂಲಕ ಮುಂದಿನ ದಿನಗಳಲ್ಲಿ ಒಳಿತಾಗುವ ಆಶಾಭಾವನೆ ಇರಿಸಿಕೊಳ್ಳಬಹುದು, ಜೊತೆಗೆ ಆದಾಯವೂ ಹೆಚ್ಚಬಹುದು. ಕೆಲವು ಅನಿರೀಕ್ಷಿತ ಸಂತೋಷಗಳು ಸಹ ನಿಮ್ಮದಾಗಬಹುದು. ಹೊಸ ಶಿಕ್ಷಣ ಪಡೆಯುವ ಸಿದ್ಧತೆಯಲ್ಲಿರುವ ವಿದ್ಯಾರ್ಥಿಗಳು ಶಿಕ್ಷಣದ ಬಗ್ಗೆ ಗಮನ ಕೇಂದ್ರೀಕರಿಸುವ ಜೊತೆಜೊತೆಗೆ, ಈಗ ಪಡೆಯುತ್ತಿರುವ ಶಿಕ್ಷಣವನ್ನು ಕಡೆಗಣಿಸದೆ ಇರುವುದು ಸಹ ಮುಖ್ಯವಾಗಿದೆ. ಅತಿಯಾದ ಕೆಲಸ ಮಾಡಿ ಆರೋಗ್ಯ ಹಾಳುಮಾಡಿಕೊಳ್ಳದೇ ನಿಮ್ಮ ಆರೋಗ್ಯವನ್ನು ಉತ್ತಮ ಸ್ಥಿತಿಯಲ್ಲಿ ಕಾಪಾಡಿಕೊಳ್ಳಬೇಕಿದೆ. ದೇಹದಲ್ಲಿ ಕಬ್ಬಿಣಾಂಶದ ಕೊರತೆ ಹಾಗೂ ಅಗತ್ಯ ಪ್ರಮಾಣದಲ್ಲಿ ನೀರು ಕುಡಿಯದ ಪರಿಣಾಮವಾಗಿ ನೀವು ಅನಾರೋಗ್ಯಕ್ಕೆ ಈಡಾಗುವ ಸಾಧ್ಯತೆ ಇದೆ.
ಕನ್ಯಾ : ಈ ವಾರ ಏರಿಳಿತಗಳಿಂದ ಕೂಡಿರಲಿದೆ. ಸಧ್ಯಕ್ಕೆ ಆರೋಗ್ಯ ಸಂಬಂಧಿತ ತೊಂದರೆಗಳು ಕಾಣಿಸಿಕೊಂಡರೂ, ನಂತರದ ದಿನಗಳಲ್ಲಿ ಕ್ರಮೇಣ ಅವೆಲ್ಲವೂ ಬಗೆಹರಿಯಲಿವೆ. ಹಳೆಯ ಸ್ನೇಹಿತರನ್ನು ಭೇಟಿಯಾಗುವ ಅವಕಾಶ ದೊರೆಯಲಿದೆ ಹಾಗೂ ವಿವಾಹಿತರು ತಮ್ಮ ವೈಯಕ್ತಿಕ ವಿಚಾರಗಳಿಗೆ ಸಂಬಂಧಿಸಿದಂತೆ ಹಳೆಯ ಸ್ನೇಹಿತರಿಂದ ಸಹಾಯ ಪಡೆದುಕೊಳ್ಳಬಹುದು. ಹಳೆಯ ಬಿಕ್ಕಟ್ಟುಗಳು ಬಗೆಹರಿದು, ಪರಿಹಾರ ನಿಮ್ಮ ಪರವಾಗಿ ಇರಲಿದೆ. ವ್ಯಾಪಾರದಲ್ಲಿ ಲಾಭ ಸಿಗಲಿದೆ. ಸರ್ಕಾರಿ ಯೋಜನೆಗಳ ಸವಲತ್ತು ದೊರೆಯಲಿದೆ. ಸರ್ಕಾರಿ ಕೆಲಸದ ಹುಡುಕಾಟದಲ್ಲಿ ಇರುವವರಿಗೆ ಸಿಹಿಸುದ್ದಿ ಸಿಗಲಿದೆ. ಪ್ರೇಮಸಂಬಂಧಗಳು ಎಂದಿನಂತೆ ಇರಲಿದ್ದು, ಹಳೆಯ ಸ್ನೇಹಿತರಿಂದ ಹೆಚ್ಚಿನ ಆತ್ಮೀಯತೆ ಅನುಭವಿಸಲಿದ್ದೀರಿ. ರಾಜಕೀಯವಾಗಿ ಯಶಸ್ಸು ಸಿಗಲಿದ್ದು, ಆರ್ಥಿಕ ಅನುಕೂಲ ಉಂಟಾಗಲಿದೆ. ನಿಮ್ಮ ಕೌಶಲ್ಯ ಹಾಗೂ ಪ್ರಶಾಂತತೆಯ ಕಾರಣದಿಂದ ಸಮಾಜದಲ್ಲಿ ನಿಮ್ಮ ಸ್ಥಾನಮಾನ ಎತ್ತರಕ್ಕೆ ಏರಲಿದೆ. ಪೋಷಕರ ಬಗ್ಗೆ ಗಮನ ವಹಿಸುವುದು ಮುಖ್ಯ. ಮದುವೆಗಾಗಿ ಹುಡುಕಾಟದಲ್ಲಿರುವ ಹುಡುಗಿಯರಿಗೆ ಈ ವಾರ ಸೂಕ್ತ ಸಂಗಾತಿ ದೊರೆಯಲಿದ್ದಾರೆ. ದಂಪತಿಗಳ ನಡುವಿನ ಆಳವಾದ ಪ್ರೇಮ ಇನ್ನಷ್ಟು ಹೆಚ್ಚಾಗಲಿದೆ. ಹೊಸ ವ್ಯಕ್ತಿಗಳ ಭೇಟಿಯಿಂದ ನಿಮ್ಮ ಭವಿಷ್ಯ ರೂಪುಗೊಳ್ಳಲಿದೆ.
ತುಲಾ : ಈ ವಾರ ನಿಮಗೆ ಉಜ್ವಲ ಹಾಗೂ ರಚನಾತ್ಮಕವಾಗಿ ಇರಲಿದೆ. ಉದ್ಯೋಗಸ್ಥರು ಪ್ರಮುಖ ಕರ್ತವ್ಯಗಳನ್ನು ನಿರ್ವಹಿಸಬೇಕಾದ ಸಂದರ್ಭ ಎದುರಾಗಲಿದೆ. ಇದಕ್ಕಾಗಿ ನೀವು ಹೆಚ್ಚಿನ ಶ್ರಮ ಮತ್ತು ಬುದ್ಧಿಶಕ್ತಿಯನ್ನು ವ್ಯಯಿಸಬೇಕಾಗುತ್ತದೆ. ಅಲ್ಲದೆ, ಇದರಿಂದ ನಿಮ್ಮ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು. ವ್ಯವಹಾರಸ್ಥರು ತಮ್ಮ ಇತರ ವೃತ್ತಿಬಾಂಧವರೊಂದಿಗೆ ಸ್ಪರ್ಧಿಸಿ ತಮ್ಮ ಬೆಲೆಯನ್ನು ನಿರೂಪಿಸಬೇಕಿದೆ. ಕೌಟುಂಬಿಕ ಬಿಕ್ಕಟ್ಟು ಎದುರಿಸುತ್ತಿರುವ ದಂಪತಿಗಳು ಸ್ನೇಹಿತರ ಸಹಾಯದೊಂದಿಗೆ ಸಮಸ್ಯೆಯನ್ನು ಅಂತ್ಯಗೊಳಿಸಬಹುದು. ನಿಮ್ಮ ಸಂಗಾತಿಯೆಡೆಗಿನ ಪ್ರೇಮ ವೃದ್ಧಿಸಲಿದ್ದು, ಒಟ್ಟಾಗಿ ಸುಂದರ ಕ್ಷಣಗಳನ್ನು ಜೀವಿಸಲಿದ್ದೀರಿ. ಮನೆಯಲ್ಲಿ ಸಂತೋಷ ಹಾಗೂ ಸಂತೃಪ್ತಿ ನೆಲೆಸಲಿದ್ದು, ಕುಟುಂಬದ ಸದಸ್ಯರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಲಿದ್ದೀರಿ.
ವೃಶ್ಚಿಕ : ಈ ರಾಶಿಯಲ್ಲಿ ಜನಿಸಿದವರಿಗೆ ಈ ವಾರ ಬಹಳಷ್ಟು ಒಳಿತನ್ನು ಮಾಡಲಿದೆ. ವೈಯಕ್ತಿಕ ಜೀವನದಲ್ಲಿ ಎಷ್ಟೋ ಕಾಲದಿಂದ ಪೂರ್ಣಗೊಳಿಸದೆ ಉಳಿದ ಕೆಲಸಗಳು ಈಗ ಸುಲಲಿತವಾಗಿ ನಡೆದು, ಉತ್ತಮ ಫಲಿತಾಂಶ ದೊರೆಯಲಿದೆ. ಬಹಳ ಕಾಲದಿಂದ ಇತ್ಯರ್ಥವಾಗದೆ ಉಳಿದ ಭಿನ್ನಾಭಿಪ್ರಾಯಗಳು ಹಾಗೂ ಕಾನೂನು ಹೋರಾಟಗಳು ಈ ವಾರ ಬಗೆಹರಿಯಲಿವೆ. ಒಂದು ನಿರ್ದಿಷ್ಟ ಕ್ಷೇತ್ರದಲ್ಲಿನ ನಿಮ್ಮ ಪ್ರಯತ್ನಗಳು ಯಶಸ್ವಿಯಾಗಲಿದ್ದು, ನಿಮ್ಮ ಸಾಧನೆಯನ್ನು ಇತರರು ಗುರುತಿಸಲಿದ್ದಾರೆ. ಔದ್ಯೋಗಿಕ ಅವಕಾಶಗಳು ನಿಮ್ಮ ಆರ್ಥಿಕ ಬೆಳವಣಿಗೆಗೆ ಹೊಸ ದಾರಿ ಮಾಡಿಕೊಡಲಿದ್ದು, ನಿಮ್ಮ ಸಂಪತ್ತು ವೃದ್ಧಿಸಲಿದೆ. ವೃತ್ತಿಯಲ್ಲಿ ನೀವು ನಡೆಸುವ ಪ್ರಯತ್ನಗಳು ಹಾಗೂ ನಿಮ್ಮ ಆರ್ಥಿಕ ಸಾಧನೆಗಳು ನಿಮ್ಮಲ್ಲಿ ಹೊಸ ಉತ್ಸಾಹ ಹಾಗೂ ಚೈತನ್ಯ ಮೂಡಿಸಲಿವೆ. ಹೊಸ ಯೋಜನೆಗಳನ್ನು ಕೈಗೆತ್ತಿಕೊಂಡು ಸಂಪಾದನೆಯನ್ನು ಹೆಚ್ಚಿಸಿಕೊಳ್ಳಲು ಇದು ಸಕಾಲ. ಪ್ರಮುಖ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ನಿಮ್ಮ ವಹಿವಾಟು ಬೆಳೆಯಲಿದೆ ಹಾಗೂ ವೃತ್ತಿಯಲ್ಲಿ ನೀವು ಎತ್ತರಕ್ಕೆ ಬೆಳೆಯಲು ಸಹಾಯವಾಗಲಿದೆ. ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಗಳು ನಿಮ್ಮ ಮನಸ್ಸಲ್ಲಿ ತುಂಬಿರಲಿವೆ.
ಧನು : ಈ ವಾರ ಅದೃಷ್ಟ ನಿಮ್ಮ ಕಡೆಗೆ ಇರಲಿದ್ದು, ಅದರ ಸಂಪೂರ್ಣ ಲಾಭ ಪಡೆದುಕೊಳ್ಳಬೇಕಾದಲ್ಲಿ ನೀವು ಆಲಸ್ಯ ಮತ್ತು ದುರಹಂಕಾರಗಳಂತಹ ಗುಣಗಳನ್ನು ಬಿಡಬೇಕಿದೆ. ಕಾಲ ನಿರಂತರ ಎಂಬುದನ್ನು ಗುರುತಿಸುವುದು ಬಹಳ ಮುಖ್ಯ. ನೀವು ತೆಗೆದುಕೊಳ್ಳುವ ಯಾವುದೇ ವಿರಾಮ ನಿಮ್ಮನ್ನು ಪ್ರಗತಿಯತ್ತ ಕೊಂಡೊಯ್ಯುವ ಸಂಭವ ಇದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಯಾವುದೇ ಜವಾಬ್ದಾರಿ ತೆಗೆದುಕೊಳ್ಳುತ್ತಿದ್ದಲ್ಲಿ, ಅದನ್ನು ಪರಿಣಾಮಕಾರಿಯಾಗಿ ಪೂರೈಸುವ ಕಡೆ ನಿಮ್ಮ ಗುರಿ ಇರಲಿ. ಅಲ್ಲದೆ, ವೈರಿಗಳ ಕುರಿತು ಸಹ ಎಚ್ಚರಿಕೆಯಿಂದ ಇರಬೇಕಾದುದು ಅಗತ್ಯ. ವ್ಯಾಪಾರ-ವಹಿವಾಟಿನ ವಿಷಯದಲ್ಲಿ ಈ ವಾರ ಬಹಳ ಅದೃಷ್ಟದಾಯಕವಾಗಿದ್ದು, ನಿಮ್ಮ ಆರ್ಥಿಕ ಗುರಿ ತಲುಪಲಿದ್ದೀರಿ. ನಿಮ್ಮ ಬಾಳಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯಲಿದ್ದು, ವೈವಾಹಿಕ ಜೀವನ ಸಂತೃಪ್ತಿಯಿಂದ ಕೂಡಿರಲಿದೆ. ವಿದ್ಯಾರ್ಥಿಗಳ ಸಾಧನೆಗೆ ಇದು ಸರಿಯಾದ ಕಾಲ, ಆದರೆ ಅತಿಯಾದ ವಿಶ್ವಾಸವು ನಿಮ್ಮ ಗಮನ ಬೇರೆಡೆಗೆ ಹರಿಯುವಂತೆ ಮಾಡಿ ಶೈಕ್ಷಣಿಕ ಸಾಧನೆಯಿಂದ ನಿಮ್ಮನ್ನು ದೂರಗೊಳಿಸಬಹುದು. ಈ ಸಮಯದಲ್ಲಿ ನಿಮ್ಮ ಆರೋಗ್ಯಕ್ಕೆ ಪ್ರಾಧಾನ್ಯತೆ ನೀಡಬೇಕಿದ್ದು, ಈ ವಾರ ನೆಮ್ಮದಿಯಿಂದ ಕಳೆಯಲಿದ್ದೀರಿ.
ಮಕರ : ಎಲ್ಲವೂ ಸರಿಯಾಗಿದ್ದರೂ ಈ ರಾಶಿಯವರು ಎಚ್ಚರಿಕೆಯಿಂದ ಇರಬೇಕಾದುದು ಅಗತ್ಯ. ವಾರದ ಆರಂಭದಲ್ಲಿ, ನಿಗದಿತ ಸಮಯಕ್ಕೆ ಸರಿಯಾಗಿ ಕೆಲಸಗಳನ್ನು ಮುಗಿಸಲು ಸಾಧ್ಯವಾಗದಂತಹ ಅಡ್ಡಿಗಳು ಎದುರಾಗಬಹುದು. ಆಯಾ ಋತುವಿನಲ್ಲಿ ಕಾಣಿಸಿಕೊಳ್ಳುವಂತಹ ಅಥವಾ ಇತರ ರೀತಿಯ ಆರೋಗ್ಯ ಸಂಬಂಧಿತ ಸಮಸ್ಯೆಗಳು ಸಹ ತಲೆದೋರಬಹುದು. ಕೆಲಸದೊತ್ತಡದ ಕಾರಣದಿಂದಾಗಿ ಹೆಚ್ಚಿನ ಸಮಯ ಕೆಲಸದಲ್ಲೇ ಕಳೆಯಬೇಕಿರುವುದರಿಂದ ಸಂಗಾತಿಯೊಡನೆ ಸಂಬಂಧ ಕೆಡದಂತೆ ಎಚ್ಚರ ವಹಿಸಬೇಕಿದೆ. ವ್ಯಾಪಾರಸ್ಥರು ಕೆಲವು ಏರುಪೇರುಗಳನ್ನು ಕಾಣಲಿದ್ದೀರಿ. ಸಣ್ಣಪುಟ್ಟ ಪ್ರಮಾದಗಳು ಸಹ ದೊಡ್ಡ ನಷ್ಟ ಉಂಟುಮಾಡುವ ಸಾಧ್ಯತೆ ಇರುವುದರಿಂದ, ಯಾವುದೇ ಹೊಸ ಕೆಲಸದಲ್ಲಿ ಹಣ ಹೂಡುವ ಸಿದ್ಧತೆಯಲ್ಲಿರುವವರು ಅತಿ ಎಚ್ಚರ ವಹಿಸಬೇಕಿದೆ. ಸಂಗಾತಿಯ ಹಿನ್ನೆಲೆ ಹಾಗೂ ಅವರು ಇರುವ ಸ್ಥಿತಿಯನ್ನು ಅರ್ಥಮಾಡಿಕೊಂಡು ನಡೆದುಕೊಳ್ಳುವುದು ಬಹಳ ಮುಖ್ಯ. ನಿಮ್ಮ ಹಾಗೂ ನಿಮ್ಮ ಬಾಳಸಂಗಾತಿಯ ಕಾಳಜಿ ವಹಿಸುವುದರಿಂದ ನಿಮ್ಮ ವೈವಾಹಿಕ ಸಂಬಂಧ ಕೆಡದಂತೆ ನೋಡಿಕೊಳ್ಳಬಹುದು.
ಕುಂಭ : ನಿಮ್ಮ ಸಮಸ್ಯೆಗಳು ಈ ವಾರ ಕಡಿಮೆಯಾಗಲಿವೆ ಹಾಗೂ ಬಹಳ ಕಾಲದಿಂದ ಮುಗಿಸಲಾಗದೆ ಉಳಿಸಿದ ಕೆಲಸಗಳು ಈ ವಾರ ಪೂರ್ಣಗೊಳ್ಳಲಿವೆ. ವೃತ್ತಿಗೆ ಸಂಬಂಧಿಸಿದಂತೆ ಹೊಸ ದಾರಿ ಹುಡುಕಿಕೊಳ್ಳಲು ನಿಮ್ಮ ಕುಟುಂಬ ನಿಮ್ಮ ಸಹಾಯಕ್ಕೆ ನಿಲ್ಲಲಿದೆ. ವಾರದ ಮಧ್ಯದ ವೇಳೆಗೆ ನೀವು ದೀರ್ಘಕಾಲದ ಪ್ರವಾಸ ಕೈಗೊಳ್ಳಲಿದ್ದು, ಅದರಲ್ಲಿ ಭೇಟಿಯಾಗುವ ಹೊಸ ಜನರಲ್ಲಿ ಆತ್ಮೀಯ ಸ್ನೇಹಿತರು ದೊರೆಯಲಿದ್ದಾರೆ. ಮನೆಯ ದುರಸ್ತಿ ಹಾಗೂ ಅಲಂಕಾರಕ್ಕಾಗಿ ಹಣ ಖರ್ಚು ಮಾಡಬೇಕಾದ ಸಾಧ್ಯತೆ ಇದೆ. ಹಣ ಸಂಪಾದಿಸುವ ಹೊಸ ದಾರಿಗಳು ನಿಮ್ಮ ಮುಂದೆ ತೆರೆದುಕೊಳ್ಳಲಿವೆ ಹಾಗೂ ಹಣದ ಸುರಿಮಳೆಯಾಗಲಿದೆ. ವಾರಾಂತ್ಯದ ವೇಳೆಗೆ ಬಿಡುವಿಲ್ಲದಷ್ಟು ಕೆಲಸಗಳು ಎದುರಾಗಲಿದ್ದು, ಕೆಲವು ಕಾರ್ಯಕ್ರಮಗಳನ್ನು ಸದ್ಯದ ಮಟ್ಟಿಗೆ ಮುಂದೂಡಬೇಕಾಗಲಿದೆ.
ಮೀನ : ನಿಮ್ಮ ಕೌಶಲ್ಯಗಳನ್ನು ಚೆನ್ನಾಗಿ ತೋರಿಸಿಕೊಳ್ಳಲು ಹಾಗೂ ಸಿಗುವ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳಲು ಇದು ಅನುಕೂಲಕರವಾದ ವಾರ. ವಾರದ ಆರಂಭದಲ್ಲಿ, ನಿಮ್ಮ ವೃತ್ತಿಗೆ ಸಂಬಂಧಿಸಿದಂತೆ ಸಿಹಿಸುದ್ದಿ ಕೇಳಲಿದ್ದು, ಇದರಿಂದ ವೃತ್ತಿಯಲ್ಲಿ ಮುಂದುವರೆಯಲು ಸಹಾಯವಾಗಲಿದೆ. ಉದ್ಯೋಗದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಿದ್ದಂತೆ ಮನೆಯವರು ಹಾಗೂ ಸಹೋದ್ಯೋಗಿಗಳಲ್ಲಿ ನಿಮ್ಮ ಬಗೆಗಿನ ಗೌರವ ಹಾಗೂ ಅಭಿಮಾನ ಹೆಚ್ಚಾಗಲಿದೆ. ವ್ಯಾಪಾರಸ್ಥರಿಗೆ ಇದು ಒಳ್ಳೆಯ ಸಮಯ. ಪ್ರೀತಿಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲು ಅವಕಾಶ ದೊರೆಯಲಿದೆ. ವಾರದ ಮಧ್ಯದ ವೇಳೆಗೆ, ಧಾರ್ಮಿಕವಾದ ಅಥವಾ ನಿಮಗೆ ಅದೃಷ್ಟ ತಂದುಕೊಡುವಂತಹ ಘಟನೆ ನಡೆಯುವ ಸಂದರ್ಭ ಬರಲಿದೆ. ಅವಿವಾಹಿತರಿಗೆ ಸಂಗಾತಿ ಸಿಗಬಹುದು. ವಿವಾಹಿತರಿಗೆ ನಿಮ್ಮ ಕುಟುಂಬ ವಿಸ್ತಾರಗೊಳ್ಳುವ ಸೂಚನೆ ದೊರೆಯಲಿದೆ. ಪ್ರೇಮಸಂಬಂಧಗಳು ಸಹ ಈ ವಾರ ಚೆನ್ನಾಗಿ ಅಭಿವೃದ್ಧಿಗೊಳ್ಳಲಿವೆ.
ಕ್ರೀಡೆ
ತಂಡದ ಸೋಲು ಸಹಿಸಲಾಗದೆ ಕಣ್ಣೀರಿಟ್ಟ ನೋರಾ; ಅಭಿಮಾನಿಗಳ ಮನಗೆದ್ದ ವಿಡಿಯೋ
ನ್ಯೂಯಾರ್ಕ್: ಫಿಫಾ ವಿಶ್ವಕಪ್ 2026ರ ಕ್ವಾರ್ಟರ್ಫೈನಲ್ನಲ್ಲಿ ಫ್ರಾನ್ಸ್ ವಿರುದ್ಧ ಮೊರಾಕ್ಕೊ ಸೋತ ಬಳಿಕ ಬಾಲಿವುಡ್ ನಟಿ ನೋರಾ ಫತೇಹಿ ಭಾವುಕರಾಗಿ ಕಣ್ಣೀರಿಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೊರಾಕ್ಕೊ ಮೂಲದ ನೋರಾ ಪಂದ್ಯದುದ್ದಕ್ಕೂ ತಮ್ಮ ನೆಚ್ಚಿನ ತಂಡವನ್ನು ಉತ್ಸಾಹದಿಂದ ಬೆಂಬಲಿಸುತ್ತಿದ್ದರು. ಆದರೆ ಸೋಲಿನ ಬಳಿಕ ಭಾವನೆಗಳನ್ನು ನಿಯಂತ್ರಿಸಿಕೊಳ್ಳಲಾಗದೆ ಕಣ್ಣೀರಿಟ್ಟರು.
ಪಂದ್ಯದ ವೇಳೆ ಕೆಂಪು ಬಣ್ಣದ ಮೊರಾಕ್ಕೊ ಜೆರ್ಸಿ ಧರಿಸಿದ್ದ ನೋರಾ ಫತೇಹಿ ತಮ್ಮ ತಂಡವನ್ನು ಜೋರಾಗಿ ಹುರಿದುಂಬಿಸುತ್ತಿದ್ದರು. ಅಂತಿಮ ಸಿಟಿ ಮೊಳಗಿದ ಬಳಿಕ ಅವರು ಭಾವುಕರಾಗಿದ್ದು, ಅವರ ಸ್ನೇಹಿತರು ಸಮಾಧಾನಪಡಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಕಾಣಿಸಿಕೊಂಡಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ವೀಕ್ಷಣೆಗಳನ್ನು ಪಡೆದು ವೈರಲ್ ಆಗಿದೆ.
ನೋರಾ ಫತೇಹಿ ಮತ್ತು FIFA ನಡುವಿನ ನಂಟು ಕೂಡ ವಿಶೇಷವಾಗಿದೆ. 2026ರ ಫಿಫಾ ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ಅವರು “ಸಿಯರ್ ಸಿಯರ್ (Siyer Siyer)” ಹಾಡಿನ ಮೂಲಕ ಅದ್ಧೂರಿ ಪ್ರದರ್ಶನ ನೀಡಿದ್ದರು. ಫ್ರೆಂಚ್ ಗಾಯಕ Vegedream ಹಾಗೂ ಸಂಗೀತ ನಿರ್ಮಾಪಕ Sanjoy ಅವರೊಂದಿಗೆ ಸಿದ್ಧಗೊಂಡ ಈ ಹಾಡು ಬಿಡುಗಡೆಯಾದ ಬಳಿಕ ಕೋಟ್ಯಂತರ ವೀಕ್ಷಣೆಗಳನ್ನು ಗಳಿಸಿ ಜಾಗತಿಕ ಮಟ್ಟದಲ್ಲಿ ಜನಪ್ರಿಯತೆ ಪಡೆದಿದೆ.
ಇತ್ತೀಚೆಗೆ ಡಲ್ಲಾಸ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ನೋರಾ, ಮೊರಾಕ್ಕೊ ತಂಡಕ್ಕೆ ಭಾರತ ಸೇರಿದಂತೆ ಹಲವು ದೇಶಗಳ ಅಭಿಮಾನಿಗಳಿಂದ ದೊರೆತ ಬೆಂಬಲಕ್ಕೆ ಸಂತಸ ವ್ಯಕ್ತಪಡಿಸಿದ್ದರು. ತಮ್ಮ ತಾಯ್ನಾಡಿನ ಮೇಲಿನ ಪ್ರೀತಿ ಹಾಗೂ ಫುಟ್ಬಾಲ್ ಮೇಲಿನ ಅಭಿಮಾನವನ್ನು ಅವರು ಹಲವು ಬಾರಿ ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ.
ಮೊರಾಕ್ಕೊ ವಿಶ್ವಕಪ್ ಪಯಣ ಅಂತ್ಯಗೊಂಡಿದ್ದರೂ, ತಂಡದ ಹೋರಾಟಕ್ಕೆ ವಿಶ್ವದಾದ್ಯಂತ ಮೆಚ್ಚುಗೆ ವ್ಯಕ್ತವಾಗಿದ್ದು, ನೋರಾ ಫತೇಹಿಯ ಭಾವುಕ ಕ್ಷಣ ಅಭಿಮಾನಿಗಳ ಮನಸ್ಸನ್ನು ಮುಟ್ಟಿದೆ.
ದೇಶ
ಜಿ. ಪರಮೇಶ್ವರ್ಗೆ ‘ಗೊತ್ತಿಲ್ಲ ಸಚಿವ’ ಬಿರುದು; ಬಿಜೆಪಿ ನಾಯಕಿಯ ತೀವ್ರ ಟೀಕೆ
ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು “ಆರ್ಎಸ್ಎಸ್ ಸಚಿವ” ಎಂದು ಹಾಗೂ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರನ್ನು “ಗೊತ್ತಿಲ್ಲ ಸಚಿವ” ಎಂದು ವ್ಯಂಗ್ಯವಾಡುವ ಮೂಲಕ ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಪ್ರಿಯಾಂಕ್ ಖರ್ಗೆ ತಮ್ಮ ಇಲಾಖೆಯ ಜವಾಬ್ದಾರಿಗಳಿಗಿಂತ ಆರ್ಎಸ್ಎಸ್ ಸಂಘಟನೆಯನ್ನು ಟೀಕಿಸುವುದರಲ್ಲೇ ಹೆಚ್ಚು ಸಮಯ ಕಳೆಯುತ್ತಿದ್ದಾರೆ ಎಂದು ಆರೋಪಿಸಿದರು. ಅವರಿಗೆ ವಹಿಸಿರುವ ಸಚಿವ ಖಾತೆಯ ಕೆಲಸಗಳನ್ನು ಬದಿಗೊತ್ತಿ ಪ್ರತಿದಿನ ಆರ್ಎಸ್ಎಸ್ ಕುರಿತು ಮಾತನಾಡುತ್ತಿರುವ ಕಾರಣ, ಅವರು ಕಾಂಗ್ರೆಸ್ ಸರ್ಕಾರದ **”ಆರ್ಎಸ್ಎಸ್ ಸಚಿವ”**ರಂತೆ ವರ್ತಿಸುತ್ತಿದ್ದಾರೆ ಎಂದು ಹೇಳಿದರು.
ಇದೇ ವೇಳೆ, ಉಪ ಮುಖ್ಯಮಂತ್ರಿ ಹಾಗೂ ಗೃಹ ಇಲಾಖೆಯ ಜವಾಬ್ದಾರಿ ನಿರ್ವಹಿಸುತ್ತಿರುವ ಜಿ. ಪರಮೇಶ್ವರ್ ಅವರ ಮೇಲೂ ಶೋಭಾ ಕರಂದ್ಲಾಜೆ ಟೀಕಾ ಪ್ರಹಾರ ನಡೆಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಅಥವಾ ಗಂಭೀರ ಘಟನೆಗಳ ಕುರಿತು ಮಾಧ್ಯಮಗಳು ಪ್ರಶ್ನಿಸಿದಾಗಲೆಲ್ಲಾ “ಗೊತ್ತಿಲ್ಲ”, “ಮಾಹಿತಿ ಇಲ್ಲ” ಎಂಬ ಉತ್ತರ ನೀಡುತ್ತಾರೆ ಎಂದು ಆರೋಪಿಸಿದರು. ಇದೇ ಕಾರಣಕ್ಕೆ ಅವರನ್ನು “ಗೊತ್ತಿಲ್ಲ ಸಚಿವ” ಎಂದು ಕರೆಯಬೇಕಾಗಿದೆ ಎಂದು ವ್ಯಂಗ್ಯವಾಡಿದರು.
ಬಿಜೆಪಿ, ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಆರ್ಎಸ್ಎಸ್ ಕುರಿತು ಕಾಂಗ್ರೆಸ್ ನಾಯಕರು ಮಾಡುತ್ತಿರುವ ಹೇಳಿಕೆಗಳನ್ನು ವಿರೋಧಿಸಿ ರಾಜ್ಯಾದ್ಯಂತ ರಾಜಕೀಯ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲೇ ಶೋಭಾ ಕರಂದ್ಲಾಜೆ ಈ ಹೇಳಿಕೆ ನೀಡಿದ್ದಾರೆ. ಅವರ ಈ ಟೀಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
ಸೂಚನೆ: ಈ ವರದಿಯಲ್ಲಿ ಉಲ್ಲೇಖಿಸಿರುವ ಆರೋಪಗಳು ಮತ್ತು ಹೇಳಿಕೆಗಳು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸಾರ್ವಜನಿಕವಾಗಿ ವ್ಯಕ್ತಪಡಿಸಿದ ಅಭಿಪ್ರಾಯಗಳಾಗಿವೆ. ಸಂಬಂಧಪಟ್ಟ ಸಚಿವರ ಪ್ರತಿಕ್ರಿಯೆ ಈ ವರದಿಯಲ್ಲಿ ಲಭ್ಯವಿಲ್ಲ.
ಕ್ರೀಡೆ
88ನೇ ನಿಮಿಷದ ಮೆರಿನೊ ಗೋಲು ಮ್ಯಾಜಿಕ್! ವಿಶ್ವಕಪ್ ಸೆಮಿಗೆ ಸ್ಪೇನ್ ಎಂಟ್ರಿ
ಲಾಸ್ ಏಂಜಲೀಸ್: 2026ರ FIFA ವಿಶ್ವಕಪ್ ಕ್ವಾರ್ಟರ್ಫೈನಲ್ನಲ್ಲಿ ಸ್ಪೇನ್ ತಂಡ ಬೆಲ್ಜಿಯಂ ವಿರುದ್ಧ 2-1 ಗೋಲುಗಳ ರೋಚಕ ಗೆಲುವು ದಾಖಲಿಸಿ ಸೆಮಿಫೈನಲ್ ಪ್ರವೇಶಿಸಿದೆ. ಪಂದ್ಯವು ಕೊನೆಯ ಕ್ಷಣದವರೆಗೂ ತೀವ್ರ ಕುತೂಹಲ ಮೂಡಿಸಿದ್ದು, 88ನೇ ನಿಮಿಷದಲ್ಲಿ ಮಿಕೆಲ್ ಮೆರಿನೊ ಗಳಿಸಿದ ನಿರ್ಣಾಯಕ ಗೋಲು ಸ್ಪೇನ್ಗೆ ಅಮೂಲ್ಯ ಜಯ ತಂದುಕೊಟ್ಟಿತು.
ಸ್ಪೇನ್ ಪರ ಮೊದಲ ಗೋಲನ್ನು 30ನೇ ನಿಮಿಷದಲ್ಲಿ ಫ್ಯಾಬಿಯನ್ ರುಯಿಜ್ ಗಳಿಸಿದರು. ಬಳಿಕ ಬೆಲ್ಜಿಯಂ ಪರ ಚಾರ್ಲ್ಸ್ ಡಿ ಕೆಟೆಲೇರೆ 41ನೇ ನಿಮಿಷದಲ್ಲಿ ಸಮಬಲದ ಗೋಲು ದಾಖಲಿಸಿದರು. ಕೊನೆಯ ಹಂತದಲ್ಲಿ ಬೆಲ್ಜಿಯಂ ಯುವ ಗೋಲ್ಕೀಪರ್ ಸ್ಯಾನ್ ಲ್ಯಾಮೆನ್ಸ್ ಮಾಡಿದ ತಪ್ಪನ್ನು ಚಾಣಾಕ್ಷತನದಿಂದ ಬಳಸಿಕೊಂಡ ಮಿಕೆಲ್ ಮೆರಿನೊ ಗೆಲುವಿನ ಗೋಲು ಬಾರಿಸಿದರು.
18 ವರ್ಷದ ಯುವ ತಾರೆ ಲ್ಯಾಮಿನ್ ಯಮಲ್ ಮತ್ತೊಮ್ಮೆ ಅದ್ಭುತ ಆಟ ಪ್ರದರ್ಶಿಸಿ ಬೆಲ್ಜಿಯಂ ರಕ್ಷಣಾ ಪಡೆಯನ್ನು ನಿರಂತರವಾಗಿ ಕಾಡಿದರು. ಗೋಲು ಗಳಿಸಲು ಸಾಧ್ಯವಾಗದಿದ್ದರೂ, ಹಲವು ಅಪಾಯಕಾರಿ ಅವಕಾಶಗಳನ್ನು ಸೃಷ್ಟಿಸಿ ಸ್ಪೇನ್ ದಾಳಿಗೆ ಜೀವ ತುಂಬಿದರು.
ಪಂದ್ಯದ ವೇಳೆ ಬೆಲ್ಜಿಯಂ ನಾಯಕ ಹಾಗೂ ಗೋಲ್ಕೀಪರ್ ತಿಬೌಟ್ ಕೋರ್ಟೊಯಿಸ್ ಎಡ ತೊಡೆಯ ಗಾಯದಿಂದ ಮೈದಾನ ತೊರೆಯಬೇಕಾಯಿತು. ಅವರ ಬದಲಿಗೆ ಕಣಕ್ಕಿಳಿದ ಸ್ಯಾನ್ ಲ್ಯಾಮೆನ್ಸ್ ಕೊನೆಯ ಕ್ಷಣದಲ್ಲಿ ಮಾಡಿದ ತಪ್ಪೇ ಬೆಲ್ಜಿಯಂಗೆ ದುಬಾರಿಯಾಯಿತು.
ಈ ಜಯದೊಂದಿಗೆ ಸ್ಪೇನ್ ತನ್ನ ಸತತ 36 ಪಂದ್ಯಗಳ ಸೋಲಿಲ್ಲದ ದಾಖಲೆಯನ್ನು ಮುಂದುವರಿಸಿದ್ದು, ಅರ್ಜೆಂಟೀನಾದ ದಾಖಲೆಯನ್ನು ಸರಿಗಟ್ಟಿದೆ. ಈಗ ಸ್ಪೇನ್ ಸೆಮಿಫೈನಲ್ನಲ್ಲಿ ಕೈಲಿಯನ್ ಎಂಬಾಪೆ ನೇತೃತ್ವದ ಫ್ರಾನ್ಸ್ ತಂಡವನ್ನು ಎದುರಿಸಲಿದೆ. ವಿಶ್ವಕಪ್ನ ಅತ್ಯಂತ ನಿರೀಕ್ಷಿತ ಪಂದ್ಯಗಳಲ್ಲಿ ಇದೂ ಒಂದಾಗಿದ್ದು, ಲ್ಯಾಮಿನ್ ಯಮಲ್ ಮತ್ತು ಎಂಬಾಪೆ ನಡುವಿನ ಮುಖಾಮುಖಿ ಮೇಲೆ ಫುಟ್ಬಾಲ್ ಅಭಿಮಾನಿಗಳ ಕಣ್ಣು ನೆಟ್ಟಿದೆ.
ಪಂದ್ಯದ ಗೋಲುಗಳು
- ಸ್ಪೇನ್: ಫ್ಯಾಬಿಯನ್ ರುಯಿಜ್ (30′), ಮಿಕೆಲ್ ಮೆರಿನೊ (88′)
- ಬೆಲ್ಜಿಯಂ: ಚಾರ್ಲ್ಸ್ ಡಿ ಕೆಟೆಲೇರೆ (41′)
ಸೂಚನೆ: ಈ ಲೇಖನವು ಬಳಕೆದಾರರು ಒದಗಿಸಿದ ಪಂದ್ಯ ವಿವರಗಳ ಆಧಾರದ ಮೇಲೆ ಸಿದ್ಧಪಡಿಸಲಾಗಿದೆ. ಪಂದ್ಯಕ್ಕೆ ಸಂಬಂಧಿಸಿದ ಕೆಲವು ಅಂಕಿಅಂಶಗಳು (ಉದಾಹರಣೆಗೆ ಸೋಲಿಲ್ಲದ ಸರಣಿ ಅಥವಾ ಇತಿಹಾಸದ ದಾಖಲೆಗಳು) ಅಧಿಕೃತ FIFA ದಾಖಲೆಗಳೊಂದಿಗೆ ಪರಿಶೀಲಿಸಿಕೊಳ್ಳುವುದು ಸೂಕ್ತ.
-
ದೇಶ13 hours agoಬಿಹಾರ ರಾಜಕೀಯದಲ್ಲಿ ಭಾರಿ ಟ್ವಿಸ್ಟ್: ನಾಮಪತ್ರದ ಮರುದಿನವೇ BJP ಅಭ್ಯರ್ಥಿ ಬದಲಾವಣೆ, ಪ್ರಶಾಂತ್ ಕಿಶೋರ್ ವಿರುದ್ಧ ಹೊಸ ಮುಖ!
-
ದೇಶ13 hours ago20 ಗಂಟೆಗಳ ಕಾಲ ನೀರಿನಡಿ ಸಾಹಸ! ‘ಮೈಸಾ’ ಸಿನಿಮಾದಲ್ಲಿ ಇತಿಹಾಸ ಸೃಷ್ಟಿಸಿದ ರಶ್ಮಿಕಾ ಮಂದಣ್ಣ
-
ದೇಶ13 hours agoIran-ಅಮೆರಿಕ ಯುದ್ಧ ಆತಂಕ: ಮಂಗಳೂರಿನಲ್ಲಿ ಮತ್ತೊಂದು ಬೃಹತ್ ತೈಲ ಸಂಗ್ರಹಾಗಾರ, ಭಾರತದ ಇಂಧನ ಭದ್ರತೆಗೆ ONGC ಮಹತ್ವದ ನಿರ್ಧಾರ
-
ದೇಶ14 hours ago40 ವರ್ಷಗಳ ಬಳಿಕ ಭಾರತೀಯ ಪ್ರಧಾನಿ ನ್ಯೂಜಿಲ್ಯಾಂಡ್ಗೆ; FTA ಮೂಲಕ ಹೊಸ ಅಧ್ಯಾಯ
-
ಚುನಾವಣೆ12 hours agoನರೋತ್ತಮ್ ಮಿಶ್ರಾಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಭಾರೀ ಬಂಡಾಯ! ರಸ್ತೆ ತಡೆ, ಕಲ್ಲು ತೂರಾಟ, ಹಲವು ರಾಜೀನಾಮೆ
-
ದೇಶ12 hours ago14 ಗಂಟೆಯಲ್ಲಿ 265 ಕಿ.ಮೀ ಪಯಣ; MLA ಸುರೇಶ್ ಕುಮಾರ್ ಅವರ ಫಿಟ್ನೆಸ್ಗೆ ಜನ ಫಿದಾ
-
ದೇಶ11 hours agoಕಾಶ್ಮೀರ ನಕ್ಷೆ ತಪ್ಪಾಗಿ ಪ್ರದರ್ಶನ; ಬಾಂಗ್ಲಾದೇಶದಲ್ಲೇ ಭಾರತದ ಅಧಿಕಾರಿ ಖಡಕ್ ಆಕ್ಷೇಪ
-
ದೇಶ14 hours agoಪ್ರಧಾನಿ ಮೋದಿ ಭದ್ರತೆಗೆ ಬೆದರಿಕೆ? ಆಸ್ಟ್ರೇಲಿಯಾದ ಹೋಟೆಲ್ನಲ್ಲಿ ಖಲಿಸ್ತಾನಿ ಘೋಷಣೆ
