Connect with us

Blog

ಶಂಕರ್‌ ನಾಗ್‌ ಬಳಿಕ ಚಂದನವನಕ್ಕೆ ಸಿಲ್ವರ್‌ ಪಿಕಾಕ್‌ ಪ್ರಶಸ್ತಿ ತಂದ ರಿಷಬ್‌ ಶೆಟ್ಟಿ

Published

on

ಶಂಕರ್‌ ನಾಗ್‌ ಬಳಿಕ ಚಂದನವನಕ್ಕೆ ಸಿಲ್ವರ್‌ ಪಿಕಾಕ್‌ ಪ್ರಶಸ್ತಿ ತಂದ ರಿಷಬ್‌ ಶೆಟ್ಟಿ

ಬೆಂಗಳೂರು: ಭಾರತದ ಚಿತ್ರರಂಗಕ್ಕೆ ಹೆಮ್ಮೆ ತರುವಂತಹ ಸುದ್ದಿಯೊಂದು ಗೋವಾದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸಿನಿಮೋತ್ಸವದಿಂದ ಬಂದಿದೆ. ಕಾಂತಾರ ಸಿನಿಮಾಕ್ಕೆ ಪ್ರತಿಷ್ಠಿತ ಸಿಲ್ವರ್‌ ಪಿಕಾಕ್‌ ಪ್ರಶಸ್ತಿ ದೊರಕಿದೆ. ಶಂಕರ್‌ ನಾಗ್‌ ಅವರು ನಟಿಸಿದ ಒಂದಾನೊಂದು ಕಾಲದಲ್ಲಿ ಚಿತ್ರಕ್ಕೂ ಇದೇ ಪ್ರತಿಷ್ಠಿತ ಪ್ರಶಸ್ತಿ ದೊರಕಿತ್ತು. ಇದೀಗ ಕನ್ನಡದ ಇನ್ನೊಂದು ಚಿತ್ರಕ್ಕೆ ಈ ಪ್ರಶಸ್ತಿ ದೊರಕಿದೆ. ಈಗಾಗಲೇ ಹೊಂಬಾಳೆ ಫಿಲ್ಮ್ಸ್‌ ಕಾಂತಾರ ಚಾಪ್ಟರ್‌ 1ರ ಫಸ್ಟ್‌ ಲುಕ್‌ ಬಿಡುಗಡೆ ಮಾಡಿ, ಎಲ್ಲರನ್ನೂ ಆಶ್ಚರ್ಯಕ್ಕೆ ದೂಡಿದ್ದು, ಇದೇ ಸಮಯದಲ್ಲಿ ಕಾಂತಾರ ಸಿನಿಮಾಕ್ಕೆ ಪ್ರಶಸ್ತಿಯೂ ದೊರಕಿದೆ.ಗೋವಾದಲ್ಲಿ ಕಳೆದ ಹಲವು ದಿನಗಳಿಂದ ಅಂತಾರಾಷ್ಟ್ರೀಯ ಸಿನಿಮೋತ್ಸವ ನಡೆಯುತ್ತಿದೆ. ಈ ಸಮಾರಂಭದಲ್ಲಿ ಕಾಂತಾರ ಸಿನಿಮಾಕ್ಕೆ ಸಿಲ್ವರ್‌ ಪಿಕಾಕ್‌ ಪ್ರಶಸ್ತಿ ದೊರಕಿದೆ. ಕಾಂತಾರ ಸಿನಿಮಾ ಬಿಡುಗಡೆಯಾಗಿ ಸುಮಾರು ಒಂದು ವರ್ಷದ ಬಳಿಕ ಈ ಪ್ರತಿಷ್ಠಿತ ಪ್ರಶಸ್ತಿಯು ಕಾಂತಾರ ಸಿನಿಮಾಕ್ಕೆ ದೊರಕಿದೆ.1978ರಲ್ಲಿ ಒಂದಾನೊಂದು ಕಾಲದಲ್ಲಿ ಚಿತ್ರಕ್ಕಾಗಿ ಶಂಕರ್‌ನಾಗ್‌ಗೆ ಈ ಸಿಲ್ವರ್‌ ಪಿಕಾಕ್‌ ಪ್ರಶಸ್ತಿ ದೊರಕಿತ್ತು. ಇದೀಗ ಕಾಂತಾರ ಸಿನಿಮಾಕ್ಕಾಗಿ ರಿಷಬ್‌ ಶೆಟ್ಟಿ ಈ ಪ್ರಶಸ್ತಿ ಪಡೆದಿದ್ದಾರೆ. ಗೋವಾ ರಾಜ್ಯದ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್‌ ಅವರು ರಿಷಬ್‌ ಶೆಟ್ಟಿ ಅವರಿಗೆ ಸಿಲ್ವರ್‌ ಪಿಕಾಕ್‌ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಸಿಲ್ವರ್‌ ಪಿಕಾಕ್‌ ಪಡೆದ ಕನ್ನಡದ ಎರಡನೇ ನಟ
ಈ ಹಿಂದೆ ಶಂಕರ್‌ನಾಗ್‌ ಈ ಪ್ರಶಸ್ತಿ ಪಡೆದಿದ್ದರು. ಅಂದರೆ, 1978ರಲ್ಲಿ ಒಂದಾನೊಂದು ಕಾಲದಲ್ಲಿ ಚಿತ್ರಕ್ಕಾಗಿ ಶಂಕರ್‌ನಾಗ್‌ಗೆ ಈ ಸಿಲ್ವರ್‌ ಪಿಕಾಕ್‌ ಪ್ರಶಸ್ತಿ ದೊರಕಿತ್ತು. ಇದೀಗ ಕಾಂತಾರ ಸಿನಿಮಾಕ್ಕಾಗಿ ರಿಷಬ್‌ ಶೆಟ್ಟಿ ಈ ಪ್ರಶಸ್ತಿ ಪಡೆದಿದ್ದಾರೆ. ಗೋವಾ ರಾಜ್ಯದ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್‌ ಅವರು ರಿಷಬ್‌ ಶೆಟ್ಟಿ ಅವರಿಗೆ ಸಿಲ್ವರ್‌ ಪಿಕಾಕ್‌ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಈ ಪ್ರಶಸ್ತಿ ಪಡೆಯಲು ಅಂತಾರಾಷ್ಟ್ರೀಯ ಮಟ್ಟದ ಹನ್ನೆರಡು ಸಿನಿಮಾಗಳು ಮತ್ತು ಭಾರತದ ಮೂರು ಸಿನಿಮಾಗಳು ಸ್ಪರ್ಧೆ ನಡೆಸಿತ್ತು.ಕಾಂತಾರ ಸಿನಿಮಾಕ್ಕೆ ಈ ಬಾರಿ ಗೋಲ್ಡನ್‌ ಪಿಕಾಕ್‌ ಪ್ರಶಸ್ತಿ ಪಡೆಯುವ ನಿರೀಕ್ಷೆ ಇತ್ತು. ಆದರೆ, ಈ ಸಿನಿಮೋತ್ಸವದಲ್ಲಿ ಗೋಲ್ಡನ್‌ ಪಿಕಾಕ್‌ ಪ್ರಶಸ್ತಿಯನ್ನು ಪರ್ಷಿಯಾದ ಎಂಡ್‌ಲೆಸ್‌ ಬಾರ್ಡರ್ಸ್‌ ಎಂಬ ಸಿನಿಮಾ ಪಡೆದುಕೊಂಡಿದೆ. ಇದು ಅಬ್ಬಾಸ್‌ ಅಮಿನಿ ನಿರ್ದೇಶನದ ಚಿತ್ರವಾಗಿದೆ. ಈ ಸಿನಿಮಾವು ಹೊರಗಿನ ಗಡಿಗಳ ಬದಲು ನಮ್ಮೊಳಗಿನ ಸಂಕೀರ್ಣ ಗಡಿಗಳ ಕುರಿತು ಮಾತನಾಡುತ್ತದೆ.

ಶಂಕರ್‌ನಾಗ್‌ಗೂ ದೊರಕಿತ್ತು ಸಿಲ್ವರ್‌ ಪಿಕಾಕ್‌ ಪ್ರಶಸ್ತಿ
ಶಂಕರ್‌ನಾಗ್‌ ಅವರಿಗೆ 7ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಐಎಫ್‌ಐಐ ಅತ್ಯುತ್ತಮ ನಟ ಪ್ರಶಸ್ತಿ ಮತ್ತು ಸಿಲ್ವರ್‌ ಪಿಕಾಕ್‌ ಪ್ರಶಸ್ತಿ ದೊರಕಿತ್ತು. ಒಂದಾನೊಂದು ಕಾಲದಲ್ಲಿ ಚಿತ್ರದ ನಟನೆಗಾಗಿ ಈ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದರು.

ವಿಶೇಷ ಜ್ಯೂರಿ ಅವಾರ್ಡ್‌ ಪಡೆದ ಕಾಂತಾರ
ಸಿಲ್ವರ್‌ ಪಿಕಾಕ್‌ ಪ್ರಶಸ್ತಿ ಮಾತ್ರವಲ್ಲದೆ ಕಾಂತಾರ ಸಿನಿಮಾಕ್ಕೆ ಈ ಸಿನಿಮೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿಯೂ ದೊರಕಿದೆ. ಈ ಬಾರಿ ಅಂತಾರಾಷ್ಟ್ರೀಯ ಸ್ಪರ್ಧಾ ವಿಭಾಗದಲ್ಲಿ 15 ಚಿತ್ರಗಳು ಕಣದಲ್ಲಿದ್ದವು. ಈ ಪೈಕಿ ಭಾರತದಿಂದ ‘ಕಾಂತಾರ’ ಸೇರಿದಂತೆ ಒಟ್ಟು ಮೂರು ಚಿತ್ರಗಳು ಸ್ಪರ್ಧೆಯಲ್ಲಿದ್ದವು. ಈ ವಿಭಾಗದಲ್ಲಿ “ಕಾಂತಾರ” ಚಿತ್ರಕ್ಕೆ ತೀರ್ಪುಗಾರರ ವಿಶೇಷ ಪ್ರಶಸ್ತಿ ಸಿಕ್ಕಿದೆ. ಈ ಪ್ರಶಸ್ತಿ ಪ್ರಮಾಣ ಪತ್ರ, ರಜತ ಮಯೂರ ಮತ್ತು 15 ಲಕ್ಷ ರೂ. ನಗದನ್ನು ಒಳಗೊಂಡಿದೆ.

Continue Reading

Blog

11ನೇ ಮೈಲಿ ಬಳಿ ಬೆಂಕಿಯ ಕೆನ್ನಾಲಿಗೆ; ಚಾಲಕರ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ

Published

on

ಚಿಕ್ಕಬಳ್ಳಾಪುರ, ಜು.10: ಚಿಕ್ಕಬಳ್ಳಾಪುರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ 11ನೇ ಮೈಲಿ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪೆಟ್ರೋಲ್ ಟ್ಯಾಂಕರ್ ಲಾರಿ ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದಿದೆ. ಬೆಂಕಿಯ ಜ್ವಾಲೆ ಪಕ್ಕದಲ್ಲಿದ್ದ ಹಾಲಿನ ಟ್ಯಾಂಕರ್ಗೂ ವ್ಯಾಪಿಸಿ ಎರಡೂ ವಾಹನಗಳು ಬಹುತೇಕ ಸುಟ್ಟು ಕರಕಲಾಗಿವೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಪೆಟ್ರೋಲ್ ಟ್ಯಾಂಕರ್ ಅತಿವೇಗದಲ್ಲಿ ಸಂಚರಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಟ್ಯಾಂಕರ್‌ನಲ್ಲಿ ಕ್ಷಣಾರ್ಧದಲ್ಲೇ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ವಾಹನ ಸಂಪೂರ್ಣವಾಗಿ ಅಗ್ನಿಗಾಹುತಿಯಾಗಿದೆ.

ಈ ವೇಳೆ ಸಮೀಪದಲ್ಲಿದ್ದ ಹಾಲಿನ ಟ್ಯಾಂಕರ್ ರಿವರ್ಸ್ ಪಡೆಯುತ್ತಿದ್ದಾಗ ಬೆಂಕಿಯ ಜ್ವಾಲೆ ಅದಕ್ಕೂ ವ್ಯಾಪಿಸಿದೆ. ಎರಡೂ ವಾಹನಗಳಲ್ಲಿ ಬೆಂಕಿ ವ್ಯಾಪಿಸುತ್ತಿದ್ದರೂ, ಚಾಲಕರು ಸಮಯಪ್ರಜ್ಞೆ ತೋರಿಸಿ ತಕ್ಷಣ ವಾಹನಗಳಿಂದ ಹೊರಗೆ ಜಿಗಿದ ಪರಿಣಾಮ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಬೆಂಕಿಯ ತೀವ್ರತೆಯಿಂದ ಕೆಲಕಾಲ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು.

ಈ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಅಪಘಾತದ ನಿಖರ ಕಾರಣದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕವಾಗಿ ಅತಿವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಪ್ರಕರಣ ದಾಖಲಿಸಿ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅಧಿಕಾರಿಗಳು ವಾಹನ ಚಾಲಕರು ಸಂಚಾರ ನಿಯಮಗಳನ್ನು ಪಾಲಿಸಿ ಸುರಕ್ಷಿತವಾಗಿ ವಾಹನ ಚಲಾಯಿಸುವಂತೆ ಮನವಿ ಮಾಡಿದ್ದಾರೆ.

Continue Reading

Blog

ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ: ಸತ್ಯ ಹೊರಬರಲಿದೆ, ನಾನು ತಪ್ಪು ಮಾಡಿಲ್ಲ

Published

on

ಬೆಳ್ತಂಗಡಿ, ದಕ್ಷಿಣ ಕನ್ನಡ: ರಾಜ್ಯಸಭೆ ಚುನಾವಣೆಯಲ್ಲಿ ನಡೆದ ಅಡ್ಡಮತದಾನ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡ್ಡಮತದಾನದ ಹಿಂದೆ ತಾವಿಲ್ಲ ಎಂದು ಪುನರುಚ್ಚರಿಸಿದಷ್ಟೇ ಅಲ್ಲದೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಯಾವುದೇ ವ್ಯವಹಾರಿಕ ಅಥವಾ ಆತ್ಮೀಯ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದೇನೆ. ಅಲ್ಲಿಂದ ಮಂಗಳೂರಿಗೆ ಬಂದು ಧರ್ಮಸ್ಥಳದಲ್ಲಿ ದೇವರ ದರ್ಶನ ಪಡೆದಿದ್ದೇನೆ ಎಂದು ತಿಳಿಸಿದ ವಿಜಯೇಂದ್ರ, ರಾಜ್ಯಸಭೆ ಚುನಾವಣೆಯಲ್ಲಿ ನಡೆದ ಅಡ್ಡಮತದಾನದಿಂದ ಲಕ್ಷಾಂತರ ಬಿಜೆಪಿ ಕಾರ್ಯಕರ್ತರಿಗೆ ನೋವಾಗಿದೆ. ಈ ಬೆಳವಣಿಗೆಯಿಂದ ತಮಗೂ ಮಾನಸಿಕವಾಗಿ ಬೇಸರವಾಗಿದೆ ಎಂದು ಹೇಳಿದರು.

ಧರ್ಮಸ್ಥಳದಲ್ಲಿ ಸತ್ಯಾಸತ್ಯತೆ ಬಹಿರಂಗಪಡಿಸುವ ಉದ್ದೇಶದಿಂದ ಶಾಸಕರಿಂದ ಆಣೆ-ಪ್ರಮಾಣ ಮಾಡಿಸಬೇಕೆಂದು ಭಾವನಾತ್ಮಕವಾಗಿ ಹೇಳಿದ್ದೆ. ಆದರೆ ಪಕ್ಷದ ಹಿರಿಯ ನಾಯಕರು ಆ ಹಂತಕ್ಕೆ ಹೋಗುವುದು ಬೇಡ ಎಂದು ಸಲಹೆ ನೀಡಿದ ಹಿನ್ನೆಲೆಯಲ್ಲಿ ಆ ನಿರ್ಧಾರವನ್ನು ಕೈಬಿಟ್ಟಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆಶೀರ್ವಾದದಿಂದ ಪಕ್ಷದ ರಾಜ್ಯಾಧ್ಯಕ್ಷನ ಜವಾಬ್ದಾರಿ ಸಿಕ್ಕಿದೆ. ಅಂತಹ ಸಂದರ್ಭದಲ್ಲಿ ಪಕ್ಷಕ್ಕೆ ದ್ರೋಹ ಮಾಡುವ ಅಥವಾ ಕೀಳುಮಟ್ಟದ ರಾಜಕೀಯ ಮಾಡುವ ಪ್ರಶ್ನೆಯೇ ಇಲ್ಲ ಎಂದು ವಿಜಯೇಂದ್ರ ಹೇಳಿದರು.

ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ವಿವಿಧ ಹೆಸರುಗಳನ್ನು ತೇಲಿಬಿಟ್ಟು ಬಿಜೆಪಿ ಶಾಸಕರ ಬಗ್ಗೆ ಅನುಮಾನ ಮೂಡಿಸುವ ಪ್ರಯತ್ನ ಮಾಡುತ್ತಿದೆ. ನಮ್ಮೊಳಗೂ ಅನುಮಾನದ ವಾತಾವರಣ ನಿರ್ಮಾಣವಾಗಿರುವುದು ನಿಜ. ಆದರೆ ಸತ್ಯ ಇಂದು ಅಲ್ಲದಿದ್ದರೂ ನಾಳೆ ಹೊರಬರುತ್ತದೆ. ಕೇಂದ್ರ ನಾಯಕತ್ವಕ್ಕೂ ಎಲ್ಲ ಮಾಹಿತಿಯಿದ್ದು, ನನಗೆ ಯಾವುದೇ ತನಿಖಾ ವರದಿ ಬಂದಿಲ್ಲ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಚುನಾವಣೆಗೆ ಮೊದಲೇ ಕೆಲವು ಬಿಜೆಪಿ ಶಾಸಕರು ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದರು. ಅವರ ಅಭಿಪ್ರಾಯವನ್ನು ಉತ್ತಮ ಉದ್ದೇಶದಿಂದ ನೀಡಲಾಗಿದೆ ಎಂದು ಸ್ವಾಗತಿಸುತ್ತೇನೆ ಎಂದ ವಿಜಯೇಂದ್ರ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಆರೋಪಗಳಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡುವುದಾಗಿ ಹೇಳಿದರು.

ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷ ಸಂಘಟನೆಗೆ ಮತ್ತಷ್ಟು ಬಲ ತುಂಬಲಾಗುವುದು. ಬಿಡದಿ ಭೂಸ್ವಾಧೀನ ಪ್ರಕರಣದಲ್ಲಿ ರೈತರನ್ನು ಒಕ್ಕಲೆಬ್ಬಿಸುವ ಕೆಲಸಕ್ಕೆ ಬಿಜೆಪಿ ಅವಕಾಶ ನೀಡುವುದಿಲ್ಲ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಭ್ರಷ್ಟಾಚಾರ ನಡೆದಿದೆ ಹಾಗೂ ಮತದಾರರ ಪಟ್ಟಿಯಲ್ಲಿ ಅಕ್ರಮ ಹೆಸರು ಸೇರ್ಪಡೆ ವಿಚಾರದಲ್ಲಿ ಕಾಂಗ್ರೆಸ್ ಅಪಪ್ರಚಾರ ನಡೆಸುತ್ತಿದೆ ಎಂದು ಅವರು ಆರೋಪಿಸಿದರು.

“ನಾನು ಯಾವುದೇ ತಪ್ಪು ಮಾಡಿಲ್ಲ. ಒಬ್ಬ ಭಕ್ತನಾಗಿ ಧರ್ಮಸ್ಥಳಕ್ಕೆ ಬಂದಿದ್ದೇನೆ. ಸಮಯ ಬಂದಾಗ ಎಲ್ಲ ಸತ್ಯವೂ ಹೊರಬರುತ್ತದೆ. ಎಲ್ಲವನ್ನೂ ಕಾಲವೇ ನಿರ್ಧರಿಸುತ್ತದೆ” ಎಂದು ವಿಜಯೇಂದ್ರ ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ, ಯಶಪಾಲ್ ಸುವರ್ಣ, ರಾಜೇಶ್ ನಾಯ್ಕ್, ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ ಸೇರಿದಂತೆ ಕರಾವಳಿ ಭಾಗದ ಹಲವು ಬಿಜೆಪಿ ಶಾಸಕರು ಹಾಗೂ ಪಕ್ಷದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

Continue Reading

Blog

ಕಡಿಮೆ ಕ್ಯಾಲೋರಿ, ಹೆಚ್ಚು ಪೋಷಕಾಂಶ: ರಂಬುಟಾನ್ ಹಣ್ಣಿನತ್ತ ಜನರ ಒಲವು

Published

on

By

ರಂಬುಟಾನ್ ಹಣ್ಣಿನತ್ತ ಜನರ ಒಲವು

ಆರೋಗ್ಯಕರ ಆಹಾರಗಳತ್ತ ಜನರ ಆಸಕ್ತಿ ಹೆಚ್ಚುತ್ತಿರುವ ಹಿನ್ನೆಲೆ, ಉಷ್ಣವಲಯದ ಹಣ್ಣಾದ ರಂಬುಟಾನ್ ತನ್ನ ಪೌಷ್ಟಿಕಾಂಶದ ಗುಣಗಳಿಂದ ಗಮನ ಸೆಳೆಯುತ್ತಿದೆ. ಕಡಿಮೆ ಕ್ಯಾಲೋರಿ, ಹೆಚ್ಚಿನ ನೀರಿನ ಅಂಶ ಮತ್ತು ಸಮೃದ್ಧ ಪೋಷಕಾಂಶಗಳನ್ನು ಹೊಂದಿರುವ ಈ ಹಣ್ಣು ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವವರಿಗೆ ಉತ್ತಮ ಆಯ್ಕೆಯಾಗಿ ಪರಿಗಣಿಸಲಾಗುತ್ತಿದೆ.
ತಜ್ಞರ ಪ್ರಕಾರ, ರಂಬುಟಾನ್‌ನಲ್ಲಿ ಸಮೃದ್ಧವಾಗಿರುವ ವಿಟಮಿನ್ ಸಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದರ ಜೊತೆಗೆ ಶಕ್ತಿಶಾಲಿ ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ. ಇದು ಜೀವಕೋಶಗಳನ್ನು ಹಾನಿಯಿಂದ ರಕ್ಷಿಸಿ, ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
ರಂಬುಟಾನ್ ಹಣ್ಣಿನ ಆರೋಗ್ಯ ಪ್ರಯೋಜನಗಳು – ಮುಖ್ಯಾಂಶಗಳುಆರೋಗ್ಯಕರ ಆಹಾರ ಪದ್ಧತಿಯಲ್ಲಿ ರಂಬುಟಾನ್ ಸೇರಿಸಿಕೊಳ್ಳುವುದರಿಂದ ಹಲವು ಪೌಷ್ಟಿಕ ಲಾಭಗಳನ್ನು ಪಡೆಯಬಹುದು.ರಂಬುಟಾನ್ ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ನೀರಿನ ಅಂಶ ಹೊಂದಿರುವ ಪೌಷ್ಟಿಕ ಹಣ್ಣು.ವಿಟಮಿನ್ ಸಿ ಸಮೃದ್ಧವಾಗಿದ್ದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸಿ ಜೀವಕೋಶಗಳನ್ನು ರಕ್ಷಿಸುತ್ತದೆ.ಫೈಬರ್‌ ಅಂಶ ಜೀರ್ಣಕ್ರಿಯೆ ಸುಧಾರಿಸಿ ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ.ಆರೋಗ್ಯಕರ ಕರುಳಿನ ಸೂಕ್ಷ್ಮಜೀವಿಗಳ ಬೆಳವಣಿಗೆಗೆ ನೆರವಾಗುತ್ತದೆ.ಹೊಟ್ಟೆ ತುಂಬಿದ ಅನುಭವ ನೀಡುವ ಮೂಲಕ ತೂಕ ನಿಯಂತ್ರಣಕ್ಕೆ ಸಹಕಾರಿ.ಕಾಲಜನ್ ಉತ್ಪಾದನೆಯನ್ನು ಉತ್ತೇಜಿಸಿ ಚರ್ಮದ ಆರೋಗ್ಯ ಕಾಪಾಡಲು ಸಹಾಯ ಮಾಡುತ್ತದೆ.ಕ್ಯಾಲ್ಸಿಯಂ, ರಂಜಕ, ಮೆಗ್ನೀಸಿಯಮ್, ತಾಮ್ರ ಮತ್ತು ಪೊಟ್ಯಾಸಿಯಮ್ ಖನಿಜಗಳು ಮೂಳೆ, ಸ್ನಾಯು ಮತ್ತು ಹೃದಯದ ಆರೋಗ್ಯಕ್ಕೆ ನೆರವಾಗುತ್ತವೆ.ಹಣ್ಣಿನ ಬಿಳಿ ತಿರುಳು ಮಾತ್ರ ಸೇವನೆಗೆ ಯೋಗ್ಯ.ಸಿಪ್ಪೆ ಮತ್ತು ಬೀಜಗಳನ್ನು ಹಸಿಯಾಗಿ ತಿನ್ನಬಾರದು; ಅವು ವಿಷಕಾರಿ ಪರಿಣಾಮ ಉಂಟುಮಾಡುವ ಸಾಧ್ಯತೆ ಇದೆ.

Continue Reading

Trending