Connect with us

ಬೆಂಗಳೂರು

ಸಧ್ಯದಲ್ಲೇ ನಿಮ್ಮ ಮುಂದೆ ಎಲ್ಲಾ ಬಿಚ್ಚಿಡಲಿದ್ದೇನೆ-ಉಪಚುನವಾಣೆಗೂ ಮುನ್ನ ವಿಡಿಯೋ ಹರಿಬಿಟ್ಟ ನಿಶಾ ಯೋಗೇಶ್ವರ್!

Published

on

ಬೆಂಗಳೂರು: ಉಪಚುನಾವಣೆಗೆ ದಿನ ಗಣನೆ ಪ್ರಾರಂಭವಾಗುತ್ತಿದ್ದಂತೆಯೇ ಚನ್ನಪಟ್ಟಣದ ರಾಜಕೀಯ ರಂಗೇರಗತೊಡಗಿದೆ, ಇದೇ ವೇಳೆ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಪುತ್ರಿ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ವಿಡಿಯೋ ಒಂದನ್ನು ಹಂಚಿಕೊಂಡಿದ್ದು ಶೀಘ್ರದಲ್ಲೇ ಜನರ ಮುಂದೆ ಎಲ್ಲಾ ಸತ್ಯ ತೆರದಿಡಲಿದ್ದೇನೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ,

ನಿಶಾ ಯೋಗೇಶ್ವರ್ ವಿಡಿಯೋ
ನಾನು ಹಲವಾರು ತಿಂಗಳಿಂದ ಎಲ್ಲದರಿಂದ ದೂರವಿದ್ದೇನೆ, ನಾನು ಯವುದೇ ಕ್ಷೇತ್ರಕ್ಕೆ ಹೋದರೂ ಕೆಲವರು ನನ್ನ ಬೆಳವಣಿಗೆಯನ್ನು ಸಹಿಸುತ್ತಿಲ್ಲ, ವಿದ್ಯಾರ್ಹತೆಯಲ್ಲಿ ನಾನು ಕಾಲೇಜಿನ ಟಾಪರ್ ಆಗಿದೆ, ಅದರೆ ನನ್ನ ಡಿಗ್ರಿ ಕಂಪ್ಲೀಟ್ ಮಾಡಲು ಬಿಟ್ಟಿಲ್ಲ, ಸಿನಿಮಾ ರಂಗಕ್ಕೆ ಬಂದರೆ ಅಲ್ಲೂ ನನ್ನನ್ನೂ ಬೆಳೆಯಲು ಬಿಟ್ಟಿಲ್ಲ, ಆಮೇಲೆ ರಾಜಕಾರಣದಲ್ಲಿ ಗುರುತಿಸಿಕೊಳ್ಳೋಣ ಎಂದು ಬಯಸಿದೆ, ಅದರೆ ಅಲ್ಲೂ ನನ್ನ ಆಸೆಗೆ ತಣ್ಣೀರೆರೆಚಿದರು, ಹೊಸ ಬಿಸಿನಲ್ ಮಾಡಲು ಮುಂದಾದೆ, ಅದಕ್ಕೂ ಕಲ್ಲು ಹಾಕಿದರು, ಕೊನೆಗೆ ಸಮಾಜಸೇವೆ ಮಾಡಲು ಮುಂದಾದರೂ ಸಹ ಮಾಡಲ ಮುಂದಾದೆ, ಅದಕ್ಕೂ ಕಲ್ಲು ಹಾಕಿದರು, ಕೊನೆಗೆ ಸಮಾಜಸೇವೆ ಮಾಡಲು ಮುಂದಾದರೂ ಸಹ ಮಾಡಲು ಬಿಡುತ್ತಿಲ್ಲ ಎಂದು ನಿಶಾ ಅವಲತ್ತುಕೊಂಡಿದ್ದಾರೆ,
ಸದ್ಯದಲ್ಲೇ ಎಲ್ಲರ ಮುಂದೆ ಬರುತ್ತೇನೆ, ಸತ್ಯವನ್ನು ಹೇಳುತ್ತೇನೆ ಎಂದಿರುವ ನಿಶಾ, ಯಾವುದರ ಬಗ್ಗೆ ಯಾರ ಬಗ್ಗೆ ಸತ್ಯ ಹೇಳುತ್ತೇನೆ ಎಂದು ಬಾಯ್ಬಿಟ್ಟಿಲ್ಲ, ಕೆಲವೇ ತಿಂಗಳ ಹಿಂದೆ ನಿಶಾ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ, ಅದರೆ ಡಿಕೆಶಿ ಇದು ಕುಟುಂಬದ ಸಮಸ್ಯೆ ಎಂದು ಅವರ ಬೇಡಿಕೆಯನ್ನು ತಳ್ಳಿಹಾಕಿದ್ದಾರು,

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಸಿನಿಮಾ

Yash ‘Toxic’ ನೋಡಿ ಪ್ರೇಕ್ಷಕರಿಂದ ಸೀಟಿ-ಚಪ್ಪಾಳೆ; ಗೀತು ಮೋಹನ್‌ದಾಸ್ ನಿರ್ದೇಶನಕ್ಕೆ ಭಾರೀ ಮೆಚ್ಚುಗೆ

Published

on

ಬೆಂಗಳೂರು: ರಾಕಿಂಗ್ ಸ್ಟಾರ್ Yash ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಕೊನೆಗೂ ಬೆಳ್ಳಿತೆರೆಗೆ ಅಪ್ಪಳಿಸಿದ್ದು, ಮೊದಲ ಪ್ರದರ್ಶನ ವೀಕ್ಷಿಸಿದ ಅಭಿಮಾನಿಗಳು ಹಾಗೂ ಸಿನಿಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಿನಿಮಾದ ದೃಶ್ಯ ವೈಭವ, ಯಶ್ ಅವರ ಮಾಸ್ ಲುಕ್ ಹಾಗೂ ಮ್ಯಾನರಿಸಂ ಕಂಡು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಚಿತ್ರದ ಮೊದಲ ಪ್ರದರ್ಶನದ ಬಳಿಕ ಸಾಮಾಜಿಕ ಜಾಲತಾಣಗಳಲ್ಲೂ ಪ್ರೇಕ್ಷಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದು, ‘ಟಾಕ್ಸಿಕ್’ ಪಕ್ಕಾ ಹಾಲಿವುಡ್ ರೇಂಜ್‌ನ ಸಿನಿಮಾ ಎಂಬ ಮಾತುಗಳು ಕೇಳಿಬರುತ್ತಿವೆ.

ಅಂತರರಾಷ್ಟ್ರೀಯ ಮಟ್ಟದ ಮೇಕಿಂಗ್

‘ಟಾಕ್ಸಿಕ್’ ಸಿನಿಮಾದ ಛಾಯಾಗ್ರಹಣ ಹಾಗೂ ಮೇಕಿಂಗ್ ಶೈಲಿ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಚಿತ್ರದ ಹಲವು ದೃಶ್ಯಗಳನ್ನು ಅಂತರರಾಷ್ಟ್ರೀಯ ಗುಣಮಟ್ಟದಲ್ಲಿ ರೂಪಿಸಲಾಗಿದೆ ಎಂಬ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ವಿಶೇಷವಾಗಿ ರಾಕಿಂಗ್ ಸ್ಟಾರ್ ಯಶ್ ಅವರ ವಿಭಿನ್ನ ಮಾಸ್ ಲುಕ್ ಹಾಗೂ ಪರದೆ ಮೇಲಿನ ಅವರ ಸ್ಕ್ರೀನ್ ಪ್ರೆಸೆನ್ಸ್ ಅಭಿಮಾನಿಗಳಲ್ಲಿ ಭಾರೀ ಉತ್ಸಾಹ ಮೂಡಿಸಿದೆ. ಯಶ್ ಅವರ ಮ್ಯಾನರಿಸಂ ಮತ್ತು ಪಾತ್ರದ ಸ್ಟೈಲ್ ಸಿನಿಮಾದ ಪ್ರಮುಖ ಆಕರ್ಷಣೆಯಾಗಿದೆ ಎಂದು ಪ್ರೇಕ್ಷಕರು ಅಭಿಪ್ರಾಯಪಟ್ಟಿದ್ದಾರೆ.

ಡಾರ್ಕ್ ಗ್ಯಾಂಗ್‌ಸ್ಟರ್ ಲೋಕದ ರೋಮಾಂಚನ

‘ಟಾಕ್ಸಿಕ್’ ಸಿನಿಮಾದ ಕಥಾಹಂದರ ಡಾರ್ಕ್ ಗ್ಯಾಂಗ್‌ಸ್ಟರ್ ಜಗತ್ತಿನ ಸುತ್ತ ಸಾಗುತ್ತದೆ. ಸಿನಿಮಾದಲ್ಲಿನ ಮಾಸ್ ಆ್ಯಕ್ಷನ್ ದೃಶ್ಯಗಳು ಪ್ರೇಕ್ಷಕರಿಗೆ ಥ್ರಿಲ್ ನೀಡುತ್ತಿವೆ.

ಭರ್ಜರಿ ಆ್ಯಕ್ಷನ್ ಸನ್ನಿವೇಶಗಳು ದೊಡ್ಡ ಪರದೆಯಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಮೂಡಿಬಂದಿದ್ದು, ಹಲವು ದೃಶ್ಯಗಳಿಗೆ ಥಿಯೇಟರ್‌ಗಳಲ್ಲಿ ಸೀಟಿ ಹಾಗೂ ಚಪ್ಪಾಳೆಗಳ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಯಶ್ ಅವರ ಮಾಸ್ ಇಮೇಜ್‌ಗೆ ಹೊಂದುವಂತಹ ಆ್ಯಕ್ಷನ್ ಸೀಕ್ವೆನ್ಸ್‌ಗಳು ಅಭಿಮಾನಿಗಳಿಗೆ ವಿಶೇಷ ಅನುಭವ ನೀಡುತ್ತಿವೆ.

ಗೀತು ಮೋಹನ್‌ದಾಸ್ ನಿರ್ದೇಶನಕ್ಕೆ ಮೆಚ್ಚುಗೆ

ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕಿ ಗೀತು ಮೋಹನ್‌ದಾಸ್ ಅವರ ವಿಭಿನ್ನ ಕಥೆ ಹೇಳುವ ಶೈಲಿಗೂ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಗ್ಯಾಂಗ್‌ಸ್ಟರ್ ಕಥೆಯನ್ನು ಸಾಂಪ್ರದಾಯಿಕ ರೀತಿಗಿಂತ ಭಿನ್ನವಾಗಿ ತೆರೆಗೆ ತಂದಿರುವ ನಿರ್ದೇಶನ ಶೈಲಿ ಪ್ರೇಕ್ಷಕರ ಗಮನ ಸೆಳೆದಿದೆ. ಕಥೆಯ ವಾತಾವರಣ, ಪಾತ್ರಗಳ ನಿರೂಪಣೆ ಹಾಗೂ ಆ್ಯಕ್ಷನ್ ದೃಶ್ಯಗಳನ್ನು ಕಟ್ಟಿಕೊಟ್ಟಿರುವ ರೀತಿಗೆ ಸಿನಿಪ್ರಿಯರು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಯಶ್ ಅಭಿಮಾನಿಗಳಲ್ಲಿ ಹೆಚ್ಚಿದ ಕ್ರೇಜ್

ಸಿನಿಮಾ ಬಿಡುಗಡೆಗೂ ಮುನ್ನವೇ ‘ಟಾಕ್ಸಿಕ್’ ಭಾರೀ ನಿರೀಕ್ಷೆ ಮೂಡಿಸಿತ್ತು. ಇದೀಗ ಮೊದಲ ಪ್ರದರ್ಶನದ ಬಳಿಕ ಯಶ್ ಅಭಿಮಾನಿಗಳ ಸಂಭ್ರಮ ಮತ್ತಷ್ಟು ಹೆಚ್ಚಾಗಿದೆ. ಸಿನಿಮಾದ ಮೇಕಿಂಗ್, ಯಶ್ ಅವರ ಲುಕ್, ಆ್ಯಕ್ಷನ್ ಹಾಗೂ ಗೀತು ಮೋಹನ್‌ದಾಸ್ ಅವರ ನಿರ್ದೇಶನ ಚಿತ್ರದ ಪ್ರಮುಖ ಹೈಲೈಟ್‌ಗಳಾಗಿ ಪ್ರೇಕ್ಷಕರ ಚರ್ಚೆಯಲ್ಲಿ ಕಾಣಿಸಿಕೊಳ್ಳುತ್ತಿವೆ.

ಒಟ್ಟಿನಲ್ಲಿ, ‘ಟಾಕ್ಸಿಕ್’ ಮೊದಲ ಪ್ರದರ್ಶನದ ಬಳಿಕ ಯಶ್ ಅಭಿಮಾನಿಗಳು ಹಾಗೂ ಸಿನಿಪ್ರಿಯರಿಂದ ಭರ್ಜರಿ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದ್ದು, ಸಿನಿಮಾ ಕುರಿತ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲೂ ಜೋರಾಗಿದೆ.

Continue Reading

ಬೆಂಗಳೂರು

Raghavendra Swamy Mutt Jayanagar ಆಗಸ್ಟ್ 29 ರಿಂದ ಪೂರ್ವಾರಾಧನೆ, ಮಧ್ಯಾರಾಧನೆ, ಉತ್ತರಾರಾಧನೆ; ರಾಯರ ಆರಾಧನೆಗೆ ಸಜ್ಜಾದ ಬೆಂಗಳೂರು

Published

on

ಬೆಂಗಳೂರು:Raghavendra Swamy Mutt Jayanagar ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ಬೆಂಗಳೂರಿನ ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆಗಸ್ಟ್ 27ರಿಂದ ಸೆಪ್ಟೆಂಬರ್ 2ರವರೆಗೆ ಏಳು ದಿನಗಳ ಕಾಲ ಆರಾಧನಾ ಸಪ್ತ ರಾತ್ರೋತ್ಸವ-ಮಹೋತ್ಸವ ನಡೆಯಲಿದೆ.

ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಹಾಗೂ ಅನುಗ್ರಹದೊಂದಿಗೆ, ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಹಾಗೂ ಭಕ್ತರ ಸಹಕಾರದೊಂದಿಗೆ ಈ ಮಹೋತ್ಸವವನ್ನು ಆಯೋಜಿಸಲಾಗಿದೆ.

ಆಗಸ್ಟ್ 27ರಂದು ಸಂಜೆ 6.30ಕ್ಕೆ ಮುಳಬಾಗಲು ಶ್ರೀಪಾದರಾಜ ಮಠದ ಪರಮಪೂಜ್ಯ ಶ್ರೀ 1008 ಶ್ರೀ ಸುಜಯನಿಧಿತೀರ್ಥ ಶ್ರೀಪಾದಂಗಳವರ ಅಮೃತ ಹಸ್ತದಿಂದ ಗೋಪೂಜೆ, ಧ್ವಜಾರೋಹಣ, ಶ್ರೀಲಕ್ಷ್ಮೀಪೂಜೆ, ಧನ-ಧಾನ್ಯ ಪೂಜೆ ಹಾಗೂ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಸಾವಿರಾರು ಭಕ್ತರಿಗೆ ವಿಶೇಷ ಪ್ರಸಾದ

ಆರಾಧನಾ ಮಹೋತ್ಸವಕ್ಕೆ ಆಗಮಿಸುವ ಸಾವಿರಾರು ಭಕ್ತರಿಗಾಗಿ ವಿಶೇಷ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. 55ಕ್ಕೂ ಹೆಚ್ಚಿನ ಅಡುಗೆ ಬಾಣಸಿಗರಿಂದ ವಿವಿಧ ರೀತಿಯ ಪ್ರಸಾದ ಹಾಗೂ ಪಂಚಭಕ್ಷ್ಯಗಳನ್ನು ಸಿದ್ಧಪಡಿಸಲಾಗುತ್ತಿದೆ.

ಶ್ರೀಮಠದ ಪ್ರಾಕಾರ, ಪೂಜಾ ಮಂದಿರ, ದ್ವಾರ, ಕಟ್ಟಡ ಹಾಗೂ ಮಠದ ಮುಂಭಾಗದ ರಾಜಬೀದಿಯನ್ನು ವಿಶೇಷ ದೀಪಗಳಿಂದ ಅಲಂಕರಿಸಲಾಗುತ್ತಿದೆ. ಭಕ್ತರಿಗೆ ಮಂತ್ರಾಕ್ಷತೆ ನೀಡಲು ವೇದಮಂತ್ರ ಹಾಗೂ ಸ್ತೋತ್ರಗಳೊಂದಿಗೆ ವಿಶೇಷ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಪೂರ್ವಾರಾಧನೆ, ಮಧ್ಯಾರಾಧನೆ, ಉತ್ತರಾರಾಧನೆ

ಆಗಸ್ಟ್ 29ರಂದು ಪೂರ್ವಾರಾಧನೆ, ಆಗಸ್ಟ್ 30ರಂದು ಮಧ್ಯಾರಾಧನೆ ಹಾಗೂ ಆಗಸ್ಟ್ 31ರಂದು ಉತ್ತರಾರಾಧನೆ ನಡೆಯಲಿದೆ.

ಈ ಮೂರು ದಿನಗಳಂದು ಬೆಳಗ್ಗೆ 6.30ಕ್ಕೆ ಅರ್ಚಕರಾದ ಶ್ರೀ ಕೃಷ್ಣಾಚಾರ್ ಹಾಗೂ ಗೊಗ್ಗಿ ರಾಮಚಂದ್ರಾಚಾರ್ ಅವರಿಂದ ಗುರು ರಾಯರ ಬೃಂದಾವನಕ್ಕೆ ವಿಶೇಷ ಫಲ ಪಂಚಾಮೃತ ಅಭಿಷೇಕ ಹಾಗೂ ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟೋತ್ತರ ಪಾರಾಯಣ ನಡೆಯಲಿದೆ.

ನಂತರ ನೂತನ ವಸ್ತ್ರ ಸಮರ್ಪಣೆ, ನವರತ್ನ ಕವಚ ಅಲಂಕಾರ, ವಿಶೇಷ ಹೂವಿನ ಅಲಂಕಾರ ಸೇರಿದಂತೆ ವಿವಿಧ ಉತ್ಸವಗಳು ನೆರವೇರಲಿವೆ.

ಪ್ರತಿದಿನ ಬೆಳಗ್ಗೆ 7 ಗಂಟೆಗೆ ಸೇವಾಕರ್ತರಿಗೆ ಸಂಕಲ್ಪ, ರಾಯರಿಗೆ ಫಲ ಸಮರ್ಪಣೆ ಹಾಗೂ ಸಾಮೂಹಿಕ ಪಾದಪೂಜೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಕನಕಾಭಿಷೇಕ, ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ಹಾಗೂ 12.30ಕ್ಕೆ ಭಕ್ತರಿಗೆ ಅನ್ನಸಂತರ್ಪಣೆ ಪ್ರಸಾದ ವಿತರಣೆ ನಡೆಯಲಿದೆ.

ರಥೋತ್ಸವ, ಪಲ್ಲಕ್ಕಿ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮ

ಮಹೋತ್ಸವದ ಏಳು ದಿನಗಳಲ್ಲೂ ಸಂಜೆ ಹರಿಭಜನೆ, ವಿದ್ವಾಂಸರಿಂದ ಪ್ರವಚನ, ಸಂಗೀತ, ಭರತನಾಟ್ಯ, ಪಲ್ಲಕ್ಕಿ ಉತ್ಸವ, ಗಜವಾಹನ ಉತ್ಸವ ಹಾಗೂ ರಥೋತ್ಸವ ಸೇರಿದಂತೆ ಹಲವು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಆಗಸ್ಟ್ 30ರಂದು ಬೆಳಗ್ಗೆ 8.30ಕ್ಕೆ ಜಯನಗರ 5ನೇ ಬಡಾವಣೆಯ ರಾಜಬೀದಿಯಲ್ಲಿ ಚಂಡೇವಾದನ, ಗೊಂಬೆಗಳ ಕುಣಿತ ಹಾಗೂ ವಿವಿಧ ವಾದ್ಯಗಳೊಂದಿಗೆ ಮಹಾರಥೋತ್ಸವ ನಡೆಯಲಿದೆ.

ಪ್ರತಿದಿನ ಸಂಜೆ 5ರಿಂದ 6ರವರೆಗೆ ವಿವಿಧ ಭಜನಾ ಮಂಡಳಿಗಳಿಂದ ಹರಿಭಜನೆ ಆಯೋಜಿಸಲಾಗಿದೆ. ಆಗಸ್ಟ್ 27ರಂದು ಶ್ರೀಮತಿ ಗೀತಾ ಬತ್ತದ್ ಮತ್ತು ತಂಡ, ಆಗಸ್ಟ್ 28ರಂದು ಶ್ರೀಮತಿ ಗೀತಾ ಪ್ರಸಾದ್ ಹಿರಣ್ಮಯಿ ತಂಡ, ಆಗಸ್ಟ್ 29ರಂದು ಹೃಷಿಕೇಶ ಭಜನಾ ಮಂಡಳಿ, ಆಗಸ್ಟ್ 30ರಂದು ಅಕ್ಷಯ ವಿಪ್ರ ಭಜನಾ ಮಂಡಳಿ, ಆಗಸ್ಟ್ 31ರಂದು ಮಂಜುಳವಾಣಿ ಭಜನಾ ಮಂಡಳಿ, ಸೆಪ್ಟೆಂಬರ್ 1ರಂದು ಹರಿ ವಾಯು ಭಜನಾ ಮಂಡಳಿ ಹಾಗೂ ಸೆಪ್ಟೆಂಬರ್ 2ರಂದು ಅಂಭ್ರಣೀಶ ಭಜನಾ ಮಂಡಳಿಯಿಂದ ಹರಿಭಜನೆ ನಡೆಯಲಿದೆ.

ದಾಸವಾಣಿ, ವಾದ್ಯ ಸಂಗೀತ, ದಾಸ ಲಹರಿ

ಸಂಜೆ 6.30ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಆಗಸ್ಟ್ 28ರಂದು ವಿದುಷಿ ಶ್ರೀಮತಿ ರಂಜಿತಾ ಪ್ರಸಾದ್ ಮತ್ತು ಸಂಗಡಿಗರಿಂದ ದಾಸವಾಣಿ, ಆಗಸ್ಟ್ 31ರಂದು ನಾದಸ್ವಾದ ತಂಡದಿಂದ ವಾದ್ಯ ಸಂಗೀತ, ಸೆಪ್ಟೆಂಬರ್ 1ರಂದು ಡಾ. ರಾಯಚೂರು ಶೇಷಗಿರಿದಾಸ್ ತಂಡದಿಂದ ದಾಸ ಲಹರಿ ಹಾಗೂ ಸೆಪ್ಟೆಂಬರ್ 2ರಂದು ಶ್ರೀಮತಿ ದರ್ಶಿನಿ ಮಂಜುನಾಥ್ ಅವರ ನಿರ್ದೇಶನದ ನೃತ್ಯ ದಿಶಾ ತಂಡದಿಂದ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ.

ಭಕ್ತರಿಗೆ ವಿಶೇಷ ವ್ಯವಸ್ಥೆ

ಮಹೋತ್ಸವದ ಸಂದರ್ಭದಲ್ಲಿ ಭಕ್ತರ ಅನುಕೂಲಕ್ಕಾಗಿ ಜಯನಗರ ಪೊಲೀಸ್ ಸಿಬ್ಬಂದಿಯ ಸಹಕಾರದೊಂದಿಗೆ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗುತ್ತಿದೆ. ವಯೋವೃದ್ಧರು, ವಿಕಲಚೇತನರು, ಗರ್ಭಿಣಿಯರು, ಸೇವಾಕರ್ತರು ಹಾಗೂ ಇತರ ಭಕ್ತರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದೀಂದ್ರಾಚಾರ್ಯರು ತಿಳಿಸಿದ್ದಾರೆ.

ಆರಾಧನಾ ಮಹೋತ್ಸವದಲ್ಲಿ ಸೇವೆ ಸಲ್ಲಿಸಲು ಬಯಸುವ ಭಕ್ತರು 9449133929 ಸಂಖ್ಯೆಯ ಮೂಲಕ ಆನ್‌ಲೈನ್ ಸೇವೆಯ ಮಾಹಿತಿಯನ್ನು ಪಡೆಯಬಹುದು. ಸೇವೆ ಸಲ್ಲಿಸಿದ ಭಕ್ತರು ಶ್ರೀಮಠಕ್ಕೆ ಆಗಮಿಸಿ ರಾಯರ ಶೇಷವಸ್ತ್ರ, ಪರಿಮಳ ಪ್ರಸಾದ ಹಾಗೂ ಫಲಮಂತ್ರಾಕ್ಷತೆ ಸ್ವೀಕರಿಸಬಹುದು.

ಇದೇ ವೇಳೆ ದಾನಿಗಳಿಗಾಗಿ ವಿಶೇಷ ಮಂತ್ರಾಲಯ ಯಾತ್ರೆ ಸೇವೆಯನ್ನೂ ಆಯೋಜಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ 08022443962, 9945429129 ಹಾಗೂ 9448847586 ಸಂಖ್ಯೆಯನ್ನು ಸಂಪರ್ಕಿಸಬಹುದು.

Continue Reading

ರಾಜ್ಯ

CM D K Shiv Kumar ಕೈ ಶಾಸಕರ ಜೊತೆ ಡಿಕೆಶಿ ಮಹತ್ವದ ಸಭೆ; ಅನುದಾನಕ್ಕೆ ಗ್ರೀನ್‌ ಸಿಗ್ನಲ್‌, SIRಗೆ ಫುಲ್‌ ಫೋಕಸ್‌

Published

on

ಬೆಂಗಳೂರು: CM D K Shiv Kumar ಅವರು ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಕಾಂಗ್ರೆಸ್‌ ಶಾಸಕರೊಂದಿಗೆ ದಿನಪೂರ್ತಿ ಸಭೆ ನಡೆಸಿ ಕ್ಷೇತ್ರಗಳ ಅಭಿವೃದ್ಧಿ, ಅನುದಾನ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದರು. ಶಾಸಕರ ಕುಂದುಕೊರತೆ ಹಾಗೂ ಬೇಡಿಕೆಗಳನ್ನು ಆಲಿಸಿದ ಸಿಎಂ, ಸಾಧ್ಯವಾದಷ್ಟು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಸಭೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಸಚಿವರು ಹಾಗೂ ಶಾಸಕರು ಉಪಸ್ಥಿತರಿದ್ದರು. ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನದಿಂದ ವಂಚಿತರಾದ ಕೆಲವು ಶಾಸಕರ ಅಸಮಾಧಾನಕ್ಕೂ ಸಭೆಯಲ್ಲಿ ಗಮನ ನೀಡಲಾಗಿದೆ. ಶಾಸಕರೊಂದಿಗೆ ನೇರವಾಗಿ ಚರ್ಚಿಸಿದ ಸಿಎಂ, ಅವರ ಕ್ಷೇತ್ರಗಳ ಅಭಿವೃದ್ಧಿ ಕಾಮಗಾರಿಗಳು ಮತ್ತು ಅನುದಾನದ ಅಗತ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಅನುದಾನಕ್ಕೆ ಶಾಸಕರ ಒತ್ತಾಯ

ಸಭೆಯಲ್ಲಿ ಬಹುತೇಕ ಕಾಂಗ್ರೆಸ್‌ ಶಾಸಕರು ತಮ್ಮ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ. ಬಜೆಟ್‌ನಲ್ಲಿ ಘೋಷಿಸಿರುವಂತೆ ಕ್ಷೇತ್ರವಾರು ಅನುದಾನ ಬಿಡುಗಡೆ ಮಾಡಬೇಕು. ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಹೆಚ್ಚುವರಿ ಅನುದಾನ ಅಗತ್ಯವಿದೆ ಎಂದು ಶಾಸಕರು ಸಿಎಂ ಗಮನಕ್ಕೆ ತಂದಿದ್ದಾರೆ.

ಶಾಸಕರ ಬೇಡಿಕೆಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ. ಕ್ಷೇತ್ರಗಳ ಅಭಿವೃದ್ಧಿ ವಿಚಾರದಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಇದೇ ವೇಳೆ ಹಲವು ಶಾಸಕರು ತಮ್ಮ ಕ್ಷೇತ್ರ ಹಾಗೂ ಜಿಲ್ಲೆಗಳಲ್ಲಿರುವ ಸಮಸ್ಯೆಗಳನ್ನೂ ಪ್ರಸ್ತಾಪಿಸಿದ್ದಾರೆ. ಸಚಿವರು ಶಾಸಕರ ಅಹವಾಲುಗಳಿಗೆ ಸ್ಪಂದಿಸಬೇಕು ಮತ್ತು ಶಾಸಕರ ಸಂಪರ್ಕಕ್ಕೆ ಸಿಗಬೇಕು ಎಂದು ಒತ್ತಾಯಿಸಿದ್ದಾರೆ.

SIR ಬಗ್ಗೆ ವಿಶೇಷ ಗಮನ

ಕಾಂಗ್ರೆಸ್‌ ಶಾಸಕರ ಸಭೆಯಲ್ಲಿ SIR (Special Intensive Revision) ವಿಚಾರಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಹ ಮತದಾರರನ್ನು ಗುರುತಿಸಿ, ಅವರ ಹೆಸರು ಪಟ್ಟಿಗೆ ಸೇರ್ಪಡೆಯಾಗುವಂತೆ ಸಹಕರಿಸಲು ಶಾಸಕರಿಗೆ ಸೂಚನೆ ನೀಡಲಾಗಿದೆ.

ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈತಪ್ಪದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಚುನಾವಣಾ ಆಯೋಗವು ಸುಮಾರು 43 ಲಕ್ಷ ಮತದಾರರಿಗೆ ನೋಟಿಸ್‌ ನೀಡಲು ಮುಂದಾಗಿರುವ ಹಿನ್ನೆಲೆಯಲ್ಲಿ, ನೋಟಿಸ್‌ ಪಡೆದವರಿಗೆ ಅಗತ್ಯ ದಾಖಲೆಗಳನ್ನು ಒದಗಿಸುವಲ್ಲಿ ಸಹಾಯ ಮಾಡುವಂತೆ ಶಾಸಕರಿಗೆ ಸಲಹೆ ನೀಡಲಾಗಿದೆ.

ಖಾಯಂ ನಿವಾಸ ಪ್ರಮಾಣಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಪಡೆಯಲು ನೋಟಿಸ್‌ ಪಡೆದ ಮತದಾರರಿಗೆ ನೆರವು ನೀಡಬೇಕು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಕ್ಷೇತ್ರ ಮಟ್ಟದಲ್ಲಿ ಕೆಲಸ ಮಾಡುವಂತೆ ಸಭೆಯಲ್ಲಿ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ಗ್ಯಾರಂಟಿ ಸಮಿತಿ, ಭಾರತ್ ಜೋಡೋ ಸಂಘದ ಚರ್ಚೆ

ಸಭೆಯ ಬಳಿಕ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಅಧಿವೇಶನದ ಬಳಿಕ ಎಲ್ಲಾ ಶಾಸಕರು ಬೆಂಗಳೂರಿನಲ್ಲಿರುವ ಹಿನ್ನೆಲೆಯಲ್ಲಿ ಸಿಎಂ ಸಭೆ ಕರೆದಿದ್ದರು ಎಂದು ತಿಳಿಸಿದರು. SIR ಜೊತೆಗೆ ಗ್ರಾಮೀಣ ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಹಾಗೂ ಭಾರತ್ ಜೋಡೋ ಸಂಘ ರಚನೆ ಕುರಿತು ಚರ್ಚೆ ನಡೆದಿದೆ ಎಂದರು.

ಕಸ್ತೂರಿ ರಂಗನ್ ವರದಿ ವಿಚಾರವೂ ಸಭೆಯಲ್ಲಿ ಪ್ರಸ್ತಾಪವಾಗಿದೆ. 2028ರ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಪ್ರಗತಿಪರ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಸಿಎಂ ಸಲಹೆ ನೀಡಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ಹೇಳಿದರು.

ಸಚಿವರು 15 ದಿನಕ್ಕೊಮ್ಮೆ ತಾಲೂಕುಗಳಿಗೆ ತೆರಳಿ ಸ್ಥಳೀಯ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಸೂಚಿಸಲಾಗಿದೆ. ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿಯೂ ಸಿಎಂ ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದರು.

ಒಟ್ಟಿನಲ್ಲಿ, ಅನುದಾನ, SIR, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಕ್ಷೇತ್ರಾಭಿವೃದ್ಧಿ ಸೇರಿದಂತೆ ಹಲವು ವಿಚಾರಗಳ ಕುರಿತು ನಡೆದ ಕಾಂಗ್ರೆಸ್‌ ಶಾಸಕರ ಸಭೆ ರಾಜ್ಯ ರಾಜಕೀಯದಲ್ಲಿ ಮಹತ್ವ ಪಡೆದುಕೊಂಡಿದೆ.

Continue Reading

Trending