ದೇಶ
ಸಾರ್ವಜನಿಕ ವಾಹನಗಳಿಗೆ ಪ್ಯಾನಿಕ್ ಬಟನ್ ಅಳವಡಿಕೆ-ಸೆ.10 ರವರೆಗೆ ಗುಡುವು!
ಬೆಂಗಳೂರು: ಮುಂಬರುವ ಸೆ.10 ರ ಬಳಗೆ ಎಲ್ಲಾ ಸಾರ್ವಜನಿಕ ವಾಹನಗಳೂ ಪ್ಯಾನಿಕ ಬಟನ್ ಅಳವಡಿಸಿಕೊಳ್ಳಬೇಕೆಂದು ಸರ್ಕಾರ ಆದೇಶಿಸಿದೆ, ಮಹಿಳೆಯರು, ಮಕ್ಕಳು ಪ್ರಯಾಣಿಕರ ಸುರಕ್ಷತೆಗಾಗಿ ಪ್ಯಾನಿಕ್ ಬಟನ್ ಕಡ್ಡಾಯಗೊಳಿಸಿದ್ದ ಸರ್ಕಾರ ಫೆ.9 ರಂದು ಈ ಕುರಿತು ಇ-ಟೆಂಡರ್ ಕರೆದಿತ್ತು,
ಖಾಸಗಿ ಬಸ್, ಟ್ಯಾಕ್ಸಿ, ಕ್ಯಾಬ್, ಗೂಡ್ಸ್ ವಾಹನಗಳಿಗೆ ಪ್ಯಾನಿಕ್ ಬಟನ್ ಕಡ್ಡಾಯ ಮಾಡಲಾಗಿದ್ದು ಇವುಗಳಿಂದ ಅಪರಾಧ ಕೃತ್ಯಗಳ ಪ್ರಮಾಣ ಕಡಿಮೆಯಾಗುವ ನಿರೀಕ್ಷೆಯಿದೆ,
ಪ್ರಯಾಣಿಕರು ಪ್ಯಾನಿಕ್ ಬಟನ್ ಒತ್ತಿದೊಡನೆಯೇ ಕಮಾಂಡ್ ಸೆಂಟರ್ ತಕ್ಷಣ ಸ್ಧಳೀಯ ಪೊಲೀಸರಿಗೂ ಮಾಹಿತಿ ನೀಡುತ್ತದೆ, ಇದರಿಂದ ಅಪಾಯದಲ್ಲಿರುವವರಿಗೆ ಶೀಘ್ರ ನೆರವು ನೀಡಲು ಪೊಲೀಸರಿಗೂ ಸಹಾಯವಾಗುತ್ತದೆ,
ಸೆ.10 ರೊಳಗೆ ಪ್ಯಾನಿಕ್ ಬಟನ್ ಅಳವಡಿಸಿದ ಖಾಸಗಿ ವಾಹನಗಳಿಗೆ ದಂಡ ವಿಧಿಸುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ..
ಬೆಂಗಳೂರು
KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು; ರಾಜ್ಯಪಾಲರಿಂದ ರಾಷ್ಟ್ರಪತಿಗೆ ತನಿಖೆ ಶಿಫಾರಸು
ಬೆಂಗಳೂರು: KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅಮಾನತುಗೊಳಿಸಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಅವರ ವಿರುದ್ಧ ಕೇಳಿಬಂದಿರುವ ನೇಮಕಾತಿ ಅಕ್ರಮ, ಸ್ವಜನಪಕ್ಷಪಾತ ಹಾಗೂ ಅಧಿಕಾರ ದುರುಪಯೋಗದ ಆರೋಪಗಳ ಕುರಿತು ತನಿಖೆ ನಡೆಸಲು ಭಾರತದ ಸಂವಿಧಾನದ 317(1)ನೇ ವಿಧಿ ಅಡಿಯಲ್ಲಿ ಸುಪ್ರೀಂ ಕೋರ್ಟ್ಗೆ ಉಲ್ಲೇಖಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಲಾಗಿದೆ.
ರಾಜ್ಯಪಾಲರ ಆದೇಶದಂತೆ, ತನಿಖೆ ಪೂರ್ಣಗೊಂಡು ರಾಷ್ಟ್ರಪತಿಗಳಿಂದ ಮುಂದಿನ ಆದೇಶ ಬರುವವರೆಗೆ ಶಿವಶಂಕರಪ್ಪ ಸಾಹುಕಾರ್ ಅವರನ್ನು ಕೆಪಿಎಸ್ಸಿ ಅಧ್ಯಕ್ಷ ಸ್ಥಾನದಿಂದ ತಕ್ಷಣದಿಂದಲೇ ಅಮಾನತುಗೊಳಿಸಲಾಗಿದೆ. ಅಲ್ಲಿಯವರೆಗೆ ಆಯೋಗದ ಹಿರಿಯ ಸದಸ್ಯರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಶಿವಶಂಕರಪ್ಪ ಸಾಹುಕಾರ್ ಅವರ ಪುತ್ರಿಯರು ಕೆಪಿಎಸ್ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಹಿತಾಸಕ್ತಿ ಸಂಘರ್ಷವನ್ನು ಘೋಷಿಸದೇ ಇದ್ದಿರುವುದು, ನೇಮಕಾತಿ ಪ್ರಕ್ರಿಯೆಯಿಂದ ದೂರ ಉಳಿಯದಿರುವುದು ಹಾಗೂ ಮೀಸಲಾತಿ ಸೌಲಭ್ಯ ಪಡೆಯಲು ತಪ್ಪು ಮಾಹಿತಿ ನೀಡಿರುವ ಆರೋಪಗಳು ತನಿಖೆಗೆ ಕಾರಣವಾಗಿವೆ. ಪ್ರಕರಣದಲ್ಲಿ ಅವರ ಪುತ್ರಿಯೊಬ್ಬರು ವಾರ್ಷಿಕ ಆದಾಯವನ್ನು ಕೇವಲ ₹40,000 ಎಂದು ನಮೂದಿಸಿದ ಆದಾಯ ಪ್ರಮಾಣಪತ್ರ ಸಲ್ಲಿಸಿ ಹಿಂದುಳಿದ ವರ್ಗಗಳ ಮೀಸಲಾತಿ ಹಾಗೂ ‘ಕ್ರೀಮಿ ಲೇಯರ್’ ವಿನಾಯಿತಿ ಪಡೆಯಲು ಯತ್ನಿಸಿದ್ದರೆಂಬ ಗಂಭೀರ ಆರೋಪ ಕೇಳಿಬಂದಿದೆ.
ಈ ಸಂಬಂಧ ಕೆಪಿಎಸ್ಸಿ ಕಾರ್ಯದರ್ಶಿ ಶೋಭಾ ಅವರ ದೂರಿನ ಮೇರೆಗೆ ಈಗಾಗಲೇ ಎಫ್ಐಆರ್ ದಾಖಲಾಗಿದ್ದು, ಆದಾಯ ಪ್ರಮಾಣಪತ್ರ ನೀಡಿದ ಕಂದಾಯ ಇಲಾಖೆಯ ಅಧಿಕಾರಿಗಳ ಪಾತ್ರದ ಬಗ್ಗೆಯೂ ತನಿಖೆ ನಡೆಯುತ್ತಿದೆ. ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಧಿಕಾರ ದುರುಪಯೋಗ ನಡೆದಿದೆಯೇ ಎಂಬುದರ ಕುರಿತು ಪೊಲೀಸರು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಈ ಬೆಳವಣಿಗೆಯಿಂದ ಕೆಪಿಎಸ್ಸಿ ನೇಮಕಾತಿ ಪ್ರಕ್ರಿಯೆ ಮತ್ತು ಆಡಳಿತ ವ್ಯವಸ್ಥೆಯ ಪಾರದರ್ಶಕತೆ ಕುರಿತು ಹೊಸ ಚರ್ಚೆ ಆರಂಭವಾಗಿದ್ದು, ತನಿಖೆಯ ಅಂತಿಮ ವರದಿಯತ್ತ ರಾಜ್ಯದ ಗಮನ ಕೇಂದ್ರೀಕೃತವಾಗಿದೆ.
ಅಪರಾಧ
Telangana ‘ಇದು ನನ್ನ ಆಯ್ಕೆ’ ಎಂದ ಎಸ್ಐಗೆ ದುಬಾರಿ ಆಯಿತು; ಡಿಜಿಪಿಯಿಂದ ಅಮಾನತು ಸೂಚನೆ
ಹೈದರಾಬಾದ್: Telangana ದ ರಂಗಾರೆಡ್ಡಿ ಜಿಲ್ಲೆಯಲ್ಲಿ ಆರು ವರ್ಷದ ಮೊಮ್ಮಗಳಿಗೆ ಸಾರ್ವಜನಿಕ ರಸ್ತೆಯಲ್ಲಿ ಕಾರು ಚಾಲನೆ ಮಾಡಲು ಅವಕಾಶ ನೀಡಿದ ಪೊಲೀಸ್ ಸಬ್-ಇನ್ಸ್ಪೆಕ್ಟರ್ (SI) ವಿರುದ್ಧ ಪ್ರಕರಣ ದಾಖಲಾಗಿದ್ದು, ರಾಜ್ಯ ಪೊಲೀಸ್ ಮಹಾನಿರ್ದೇಶಕರು (DGP) ಅಮಾನತು ಮಾಡಲು ಆದೇಶ ನೀಡಿದ್ದಾರೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ವರದಿಗಳ ಪ್ರಕಾರ, ಸಬ್-ಇನ್ಸ್ಪೆಕ್ಟರ್ ಪೂಜಾರಿ ತಿರುಪತಿ ಅವರು ತಮ್ಮ ಆರು ವರ್ಷದ ಮೊಮ್ಮಗಳನ್ನು ನಗರದ ಜನನಿಬಿಡ ರಸ್ತೆಯಲ್ಲಿ ಕಾರಿನ ಸ್ಟೀರಿಂಗ್ ಹಿಂದೆ ಕುಳ್ಳಿರಿಸಿ ಚಾಲನೆ ಮಾಡಲು ಅವಕಾಶ ನೀಡಿದ್ದರು. ವಾಹನ ನಿಧಾನವಾಗಿ ಚಲಿಸುತ್ತಿದ್ದರೂ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿ ವಾಹನಗಳ ಸಾಲು ನಿರ್ಮಾಣವಾಗಿತ್ತು.
ಸ್ಥಳೀಯರು ಈ ಅಪಾಯಕಾರಿ ಕ್ರಮವನ್ನು ಪ್ರಶ್ನಿಸಿದಾಗ, “ಇದು ನನ್ನ ಆಯ್ಕೆ, ಪ್ರಶ್ನೆ ಮಾಡಲು ನೀವು ಯಾರು?” ಎಂದು ಅಧಿಕಾರಿ ಪ್ರತಿಕ್ರಿಯಿಸಿದ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋ ವೈರಲ್ ಆದ ನಂತರ ಸಾರ್ವಜನಿಕರು ಹಾಗೂ ಸಾಮಾಜಿಕ ಜಾಲತಾಣ ಬಳಕೆದಾರರು ಪೊಲೀಸ್ ಇಲಾಖೆಯ ವಿರುದ್ಧ ಟೀಕೆ ವ್ಯಕ್ತಪಡಿಸಿ, ಕಾನೂನು ಎಲ್ಲರಿಗೂ ಸಮಾನವಾಗಿರಬೇಕು ಎಂದು ಆಗ್ರಹಿಸಿದರು.
ಘಟನೆಯ ಬಳಿಕ ನರ್ಸಿಂಗಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 125 ಹಾಗೂ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 180 ಮತ್ತು 184ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ವಿಚಾರಣೆ ವೇಳೆ ಇದು ಆಟೋಮ್ಯಾಟಿಕ್ ಕಾರಾಗಿದ್ದರಿಂದ ವಾಹನ ತನ್ನ ನಿಯಂತ್ರಣದಲ್ಲೇ ಇತ್ತು ಎಂದು ಎಸ್ಐ ಹೇಳಿದ್ದು, ಮೊಮ್ಮಗಳನ್ನು ವಿಶ್ವದ ಅತಿ ಕಿರಿಯ ಚಾಲಕಿ ಎಂಬ ಗಿನ್ನೆಸ್ ವಿಶ್ವ ದಾಖಲೆ ಪ್ರಯತ್ನಕ್ಕೆ ಸಿದ್ಧಪಡಿಸುತ್ತಿದ್ದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಆದರೆ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ತೆಲಂಗಾಣ ಡಿಜಿಪಿ ಸಿ.ವಿ. ಆನಂದ್, ಸೈಬರಾಬಾದ್ ಪೊಲೀಸ್ ಆಯುಕ್ತರಿಗೆ ಆರೋಪಿತ ಎಸ್ಐ ಅವರನ್ನು ಅಮಾನತುಗೊಳಿಸಿ ಇಲಾಖಾ ತನಿಖೆ ಆರಂಭಿಸುವಂತೆ ಸೂಚಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಮುಂದಿನ ಕ್ರಮವನ್ನು ಇಲಾಖೆ ಕೈಗೊಳ್ಳಲಿದೆ.
ಬೆಂಗಳೂರು
₹13 Crores ವೆಚ್ಚ, 2 ವರ್ಷ ಕಾಯುವಿಕೆ! ವಿಜಯನಗರ ಅಂಡರ್ಗ್ರೌಂಡ್ ಮಾರುಕಟ್ಟೆ ಇನ್ನೂ ಬಂದ್; 80ಕ್ಕೂ ಹೆಚ್ಚು ಮಳಿಗೆಗಳು ಖಾಲಿ
ಬೆಂಗಳೂರು: ₹13 Crores ರೂಪಾಯಿ ಸಾರ್ವಜನಿಕರ ತೆರಿಗೆ ಹಣ ವೆಚ್ಚ ಮಾಡಿ ವಿಜಯನಗರದಲ್ಲಿ ನಿರ್ಮಿಸಲಾಗಿರುವ ಅಂಡರ್ಗ್ರೌಂಡ್ ಮಾರುಕಟ್ಟೆ (Underground Market) ಉದ್ಘಾಟನೆಯಾಗಿ ಎರಡು ವರ್ಷ ಕಳೆದರೂ ವ್ಯಾಪಾರಿಗಳ ಬಳಕೆಗೆ ಇನ್ನೂ ಲಭ್ಯವಾಗಿಲ್ಲ. ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ 80ಕ್ಕೂ ಹೆಚ್ಚು ಸುಸಜ್ಜಿತ ಮಳಿಗೆಗಳು ಖಾಲಿಯಾಗಿ ಪಾಳುಬಿದ್ದಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ವ್ಯಾಪಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೆಹಲಿ ಪಾಲಿಕಾ ಬಜಾರ್ ಮಾದರಿಯಲ್ಲಿ ಆಧುನಿಕ ಸೌಲಭ್ಯಗಳೊಂದಿಗೆ ಸುಮಾರು ₹13 ಕೋಟಿ ವೆಚ್ಚದಲ್ಲಿ ಈ ಮಾರುಕಟ್ಟೆಯನ್ನು ನಿರ್ಮಿಸಲಾಗಿದೆ. ಉದ್ಘಾಟನೆ ನಡೆದಿದ್ದರೂ ಇಂದಿಗೂ ವ್ಯಾಪಾರ ಆರಂಭವಾಗದಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸ್ಥಳೀಯರ ಆರೋಪದ ಪ್ರಕಾರ, ಟೆಂಡರ್ ಪ್ರಕ್ರಿಯೆಯ ವಿಳಂಬ ಮತ್ತು ಆಡಳಿತಾತ್ಮಕ ನಿರಾಸಕ್ತಿಯಿಂದ ಈ ಯೋಜನೆ ಸಾರ್ವಜನಿಕರಿಗೆ ಯಾವುದೇ ಪ್ರಯೋಜನ ನೀಡದಂತಾಗಿದೆ.
ಇದೇ ವೇಳೆ ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ಸಣ್ಣ ವ್ಯಾಪಾರಿಗಳು ಸಂಕಷ್ಟ ಎದುರಿಸುತ್ತಿದ್ದಾರೆ. ಆದರೆ ಅವರಿಗೆ ಪರ್ಯಾಯವಾಗಿ ಬಳಸಬೇಕಿದ್ದ ವಿಜಯನಗರ ಅಂಡರ್ಗ್ರೌಂಡ್ ಮಾರುಕಟ್ಟೆ ಇನ್ನೂ ಕಾರ್ಯಾರಂಭ ಮಾಡದಿರುವುದು ವ್ಯಾಪಾರಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಮಾರುಕಟ್ಟೆಯೊಳಗಿನ ಲಿಫ್ಟ್, ಎಸ್ಕಲೇಟರ್ ಸೇರಿದಂತೆ ಹಲವು ಸೌಲಭ್ಯಗಳು ಉದ್ಘಾಟನೆಯಾದ ದಿನದಿಂದಲೇ ಬಂದ್ ಆಗಿದ್ದು, ನಿರ್ವಹಣೆಯ ಕೊರತೆಯಿಂದ ಕಟ್ಟಡವು ಪಾಳು ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯೇ ನಿರುಪಯುಕ್ತವಾಗುತ್ತಿದೆ ಎಂಬ ಟೀಕೆಗಳು ಕೇಳಿಬರುತ್ತಿವೆ.
ವ್ಯಾಪಾರಿಗಳು ಮತ್ತು ಸ್ಥಳೀಯರು ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಮಳಿಗೆಗಳನ್ನು ಹಂಚಿಕೆ ಮಾಡಿ ವ್ಯಾಪಾರ ಆರಂಭಿಸಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
“ಸರ್ಕಾರ ಸಾರ್ವಜನಿಕರ ತೆರಿಗೆ ಹಣದಲ್ಲಿ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ಸುಸಜ್ಜಿತ ಮಾರುಕಟ್ಟೆ ನಿರ್ಮಿಸಿದೆ. ಆದರೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳದೇ ಅದು ಉಪಯೋಗಕ್ಕೆ ಬರುತ್ತಿಲ್ಲ. ಸಚಿವರು ಮತ್ತು ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ವ್ಯಾಪಾರಿಗಳಿಗೆ ಮಳಿಗೆಗಳನ್ನು ನೀಡಬೇಕು.”
– ರಮೇಶ್, ವ್ಯಾಪಾರಸ್ಥ
-
ಬೆಂಗಳೂರು18 hours agoಬೇಡ ಬ್ರೋ: ಡ್ರಗ್ಸ್ ವಿರುದ್ಧ MLA ಎಸ್.ಟಿ. ಸೋಮಶೇಖರ್ ಖಡಕ್ ಎಚ್ಚರಿಕೆ; ಯುವಕರಿಗೆ ಮಹತ್ವದ ಸಂದೇಶ
-
ದೇಶ18 hours agoಗಾನಕೋಗಿಲೆ ಎಸ್. ಜಾನಕಿ ಪಂಚಭೂತಗಳಲ್ಲಿ ಲೀನ; ಸರ್ಕಾರಿ ಗೌರವದೊಂದಿಗೆ ಮೈಸೂರಿನಲ್ಲಿ ಅಂತ್ಯಸಂಸ್ಕಾರ
-
ಸುತ್ತ ಮುತ್ತ21 hours agoBorivali Railway Station Viral Video ಪ್ರೇಮಿಗಳ ಹಂಗಾಮಾ? 60 ಲಕ್ಷಕ್ಕೂ ಹೆಚ್ಚು ಬಾರಿ ವೀಕ್ಷಿಸಿದ ವೈರಲ್ ವಿಡಿಯೋ
-
ದೇಶ18 hours agoಜಮ್ಮು-ಕಾಶ್ಮೀರದಲ್ಲಿ ಉಗ್ರರ ವೈಭವೀಕರಣ ಆರೋಪ; ಪುಸ್ತಕ ಪ್ರಕಟಿಸಿದ ಮೂವರು ಪ್ರಕಾಶಕರು ಬಂಧನ
-
ದೇಶ19 hours agoManmohan Singh ಕುರಿತು ಮಾಜಿ ಮುಖ್ಯ ಚುನಾವಣಾ ಆಯುಕ್ತರ ಪುಸ್ತಕದಲ್ಲಿ ಹೊಸ ಬಹಿರಂಗ; ರಾಜಕೀಯ ವಲಯದಲ್ಲಿ ಚರ್ಚೆ
-
ರಾಜ್ಯ21 hours agoS Janaki ಹೆಸರನ್ನು ಮೈಸೂರಿನ ಗದ್ದಿಗೆ ರಸ್ತೆಗೆ ನಾಮಕರಣ ಮಾಡಿ: ಕೇರ್ಟೇಕರ್ ನವೀನ್ ಮನವಿ
-
ಕ್ರೀಡೆ19 hours agoSouth Africa ಫುಟ್ಬಾಲ್ಗೆ ಆಘಾತ; ಜೇಡನ್ ಆಡಮ್ಸ್ ಅಕಾಲಿಕ ನಿಧನ
-
ಬೆಂಗಳೂರು18 hours agoShakthi Scheme ಬಳಿಕ BMTC ಸೇವೆ ಹೇಗಿದೆ? ಬಸ್ನಲ್ಲಿ ಪ್ರಯಾಣಿಸಿದ ಸಚಿವರಿಗೆ ಸಿಕ್ಕ ಉತ್ತರ
