cinema
ಹಾಟ್ ಟಾಪಿಕ್ ಆಗಿರುವ ವಿಜಯ್ ದೇವರಕೊಂಡ ಇನ್ಸ್ಟಾ ಸ್ಟೋರಿ
ಟಾಲಿವುಡ್ ಖ್ಯಾತ ನಟ ವಿಜಯ್ ದೇವರಕೊಂಡ ಮದುವೆಗೆ ಸಿದ್ಧವಾಗುತ್ತಿದ್ದಾರಾ? ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ವಿಜಯ್ ದೇವರಕೊಂಡ ಮದುವೆ ಹಾಗೂ ಭಾವಿ ಪತ್ನಿಗೆ ಇರಬೇಕಾದ ಗುಣಗಳ ಬಗ್ಗೆ ಮಾತನಾಡಿದ್ದಾರೆ. ಯಾರೋ ಒತ್ತಡ ಹಾಕಿದ್ರು ಅಂತ ಮದುವೆ ಆಗುವುದಿಲ್ಲ, ನನಗೆ ಇಷ್ಟಅದ್ರೆ ಮಾತ್ರ ಮದುವೆಯಾಗುತ್ತೇನೆ ಎಂದರು. ತನ್ನ ಫೀಲಿಂಗ್ಸ್ಗೆ ಹೊಂದುವ ಹಾಗೂ ನನ್ನನ್ನು ಚೆನ್ನಾಗಿ ರ್ಥ ಮಾಡಿಕೊಳ್ಳುವ ಹುಡುಗಿಯನ್ನೇ ಮದುವೆ ಆಗುವೆ ಎಂದು ವಿಜಯ್ ದೇವರಕೊಂಡ ಹೇಳಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಚಿಕ್ಕ ಚಿಕ್ಕ ವಿಷಯಗಳನ್ನೂ ಆಕೆ ನೆನಪಿಸಿಕೊಳ್ಳಬೇಕು, ಜೊತೆಗೆ ಸ್ವಲ್ಪ ಬುದ್ಧಿವಂತೆ ಕೂಡ ಆಗಿರಬೇಕು ಎಂದು ವಿಜಯ್ ದೇವರಕೊಂಡ ಹೇಳಿದ್ದಾರೆ….ಆದರೆ ಮತ್ತೊಂದು ಕಡೆ ನಾಯಕಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಡೇಟಿಂಗ್ ಬಗ್ಗೆ ಹಲವು ರೂರ್ಸ್ ಹರಿದಾಡ್ತಿದೆ.ಈ ಮಧ್ಯೆ ವಿಜಯ್ ದೇವರಕೊಂಡ ತಮ್ಮ ಮದುವೆಯ ಬಗ್ಗೆ ಮಾತನಾಡಿದ್ದಾರೆ. ವಿಜಯ್ ದೇವರಕೊಂಡ ಇನ್ಸ್ಟಾ ಸ್ಟೋರಿಯಲ್ಲಿ ಹುಡುಗಿಯ ಕೈ ಹಿಡಿದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಒಂದು ಕೈ ಅವರದ್ದೇ ಅಂತ ಸ್ಪಷ್ಟವಾಗಿ ತಿಳಿಯುತ್ತದೆ. ಆದ್ರೆ ಇನ್ನೊಂದು ಕೈ ಯಾರದ್ದು ಎನ್ನುವುದು ತಿಳಿದಿಲ್ಲ. ಅಲ್ಲದೆ, “ಜೀವನದಲ್ಲಿ ಬಹಳಷ್ಟು ನಡೆಯುತ್ತಿದೆ. ಆದ್ರೆ, ಇದು ತುಂಬಾ ವಿಶೇಷ! ಶೀಘ್ರವೇ ಪ್ರಕಟಿಸಲಾಗುವುದು,’’ ಅಂತ ಕ್ಯಾಪ್ಷನ್ ಕೊಟ್ಟಿದ್ದು, ಅಭಿಮಾನಿಗಳ ತೆಲೆ ಕೆಡುವಂತೆ ಮಾಡಿದೆ.ವಿಜಯ್ ದೇವರಕೊಂಡ ಪೋಸ್ಟ್ ಮಾಡಿರುವ ಈ ಫೋಟೋ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಶೀಘ್ರದಲ್ಲೇ ನಟ ವಿಜಯ್ ಗುಡ್ ನ್ಯೂಸ್ ಕೊಡಲಿದ್ದಾರೆ ಎನ್ನಲಾಗ್ತಿದೆ.
cinema
ಆಸ್ಕರ್: ಭಾರತಕ್ಕೆ ಈ ಬಾರಿ ನಿರಾಸೆ
96ನೇ ಆಸ್ಕರ್ ಪ್ರಶಸ್ತಿಗಾಗಿ ಭಾರತದಿಂದ ಅಧಿಕೃತವಾಗಿ ಆಯ್ಕೆಯಾಗಿದ್ದ, ಮಲಯಾಳಂನ 2018ನೇ ಹೆಸರಿನ ಸಿನಿಮಾ ಅಂತಿಮ ಸುತ್ತಿನ ಸ್ಪರ್ಧೆಗೆ ಎಂಟ್ರಿ ಪಡೆಯುವಲ್ಲಿ ವಿಫಲವಾಗಿದೆ. ಇದರಿಂದಾಗಿ ಸಹಜವಾಗಿಯೇ ಭಾರತೀಯ ಸಿನಿಮಾ ಪ್ರೇಕ್ಷಕರಿಗೆ ನಿರಾಸೆಯಾಗಿದೆ. ಅಂತಾರಾಷ್ಟ್ರೀಯ ಫೀಚರ್ ಫಿಲ್ಮ್ ವಿಭಾಗಕ್ಕೆ ಈ ಸಿನಿಮಾವನ್ನು ಭಾರತದಿಂದ ಆಯ್ಕೆ ಮಾಡಿ ಕಳುಹಿಸಲಾಗಿತ್ತು. ಆದರೆ, ಮುಂದಿನ ಸುತ್ತಿಗೆ ಹೋಗುವಲ್ಲಿ ಅದು ವಿಫಲವಾಗಿದೆ.ಕಳೆದ ಸಲ ರಾಜಮೌಳಿ ನಿರ್ದೇಶನದ ‘ಆರ್.ಆರ್.ಆರ್’ ಸಿನಿಮಾದ ‘ನಾಟು ನಾಟು’ ಹಾಡಿಗಾಗಿ ಆಸ್ಕರ್ ಪ್ರಶಸ್ತಿ ಬಂದಿತ್ತು. ಈ ಬಾರಿ ದಕ್ಷಿಣದ ಮತ್ತೊಂದು ಸಿನಿಮಾ ಈ ವರ್ಷದ ಆಸ್ಕರ್ ಪ್ರಶಸ್ತಿಗಾಗಿ ನಾಮಿನೇಟ್ ಆಗಿ ಸಂಭ್ರಮಕ್ಕೆ ಕಾರಣವಾಗಿತ್ತು. ಈ ವಿಷಯವನ್ನು ಈ ಹಿಂದೆ ಆಸ್ಕರ್ ಆಯ್ಕೆ ಸಮಿತಿ ಅಧ್ಯಕ್ಷ, ಕನ್ನಡದವರೇ ಆಗಿರುವ ಗಿರೀಶ್ ಕಾಸರವಳ್ಳಿ ತಿಳಿಸಿದ್ದರು.ಟೊವಿನೋ ಥಾಮಸ್ ನಟನೆಯ 2018 ಹೆಸರಿನ ಮಲಯಾಳಂ ಸಿನಿಮಾ ವಿಶೇಷ ಕಥಾವಸ್ತುವನ್ನು ಹೊಂದಿದೆ. ಕೇರಳದಲ್ಲಿ ನಾಲ್ಕು ವರ್ಷಗಳ ಹಿಂದೆ ನಡೆದ ಅತಿವೃಷ್ಠಿ ಸೃಷ್ಟಿಸಿದ ಆವಾಂತರವನ್ನು ಆಧರಿಸಿದ ಚಿತ್ರಿಸಲಾಗಿದೆ. ಈ ಚಿತ್ರಕ್ಕೆ ಭಾರೀ ಪ್ರತಿಕ್ರಿಯೆ ಕೂಡ ಉತ್ತಮವಾಗಿತ್ತು. ಈ ಸಿನಿಮಾವನ್ನು ಕಾಸರವಳ್ಳಿ ಅಧ್ಯಕ್ಷತೆಯ ಕಮೀಟಿಯು ಆಸ್ಕರ್ ಪ್ರಶಸ್ತಿ ಸ್ಪರ್ಧೆಗಾಗಿ ಆಯ್ಕೆ ಮಾಡಲಾಗಿತ್ತು. ಈ ಆಯ್ಕೆಯು ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಮೂಲಕ ನಡೆದಿತ್ತು. ಇದು ಪ್ರತಿ ವರ್ಷವೂ ಒಂದು ಸಿನಿಮಾವನ್ನು ಆಯ್ಕೆ ಮಾಡಿ, ಸರಕಾರವೇ ಉಳಿದ ವೆಚ್ಚವನ್ನು ಭರಿಸಿ ಕಳುಹಿಸುತ್ತದೆ. ಖಾಸಗಿಯಾಗಿ ಯಾವ ಸಿನಿಮಾಗಳು ಬೇಕಾದರೂ ಸ್ಪರ್ಧಿಸಬಹುದಾಗಿದೆ.
ಬಲಗಮ್, ದಿ ಕೇರಳ ಸ್ಟೋರಿ, ಆಗಸ್ಟ್ 16 ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಚಿತ್ರಗಳನ್ನು ನೋಡಿರುವ ಸದಸ್ಯರು ಕೊನೆಗೆ 2018: ಎವರಿ ಒನ್ ಇಸ್ ಎ ಹೀರೋ ಚಿತ್ರವನ್ನು ಆಯ್ಕೆ ಮಾಡಿದ್ದಾರೆ. ಆಸ್ಕರ್ ನಾಮಿನೇಷನ್ ಯಾದಿಗೆ ಈ ಸಿನಿಮಾ ಸೇರ್ಪಡೆ ಆಗಬೇಕಾದರೆ, ಆಸ್ಕರ್ ಕಮೀಟಿ ಕೂಡ ಈ ಸಿನಿಮಾ ನೋಡಬೇಕಿತ್ತು. ಆದರೆ, ಈ ಸುತ್ತಿನಲ್ಲಿ ವಿಫಲವಾಗಿದೆ.
cinema
ದೋಸ್ತಿಗೆ ಗ್ರೀನ್ ಸಿಗ್ನಲ್ : ಡಿ ಬಾಸ್ ?
ಬೆಂಗಳೂರು: ಅಭಿಮಾನಿಗಳಿಗೆ ಡಿ ಬಾಸ್ ಬ್ಯಾಕ್ ಟು ಬ್ಯಾಕ್ ಸಿಹಿ ಸುದ್ದಿಯನ್ನು ಕೊಡ್ತಿದ್ದಾರೆ, ಸಂಸದೆ ಸುಮಲತಾ ಅಂಬರೀಷ್ ಬರ್ತ್ಡೇ ವೇಳೆ ದರ್ಶನ್ ಹಾಗೂ ಸುದೀಪ್ 6 ವರ್ಷಗಳ ಬಳಿಕ ಮುಖಾಮುಖಿಯಾಗಿದ್ದರು, ಈ ಗೆಳೆಯರು ದೂರವಾದ ಮೇಲೆ ಯಾವುದೇ ವೇದಿಕೆಯಲ್ಲಿ ಒಟ್ಟಾಗಿ ಕಾಣಿಸಿಕೊಂಡಿರಲಿಲ್ಲ, ರಾಜ್ಯದ ಕೋಟ್ಯಾಂತರ ಅಭಿಮಾನಿಗಳು ಇವರಿಬ್ಬರು ಮತ್ತೆ ಒಂದಾಗ್ಬೇಕು ಎಂದು ಎದುರು ನೋಡುತ್ತಿದ್ದಾರೆ, ಈ ಗೆಳೆಯರು ಒಂದೇ ವೇದಿಕೆ ಮೇಲಿದ್ದ ವಿಡಿಯೋ ಎಲ್ಲಿರಿಗೂ ಸಂತೋಷ ತಂದಿದೆ, ಇವರಿಬ್ಬರ ನಡುವೆ ಸುಮಲತಾ ಸಂಧಾನ ಮಾಡಿಸಿದ್ದಾರೆ, ಇವರ ಮತ್ತೆ ಒಂದಾಗ್ತಾರೆ ಅಂತೆಲ್ಲ ಚರ್ಚೆ ನಡೆಯುತ್ತಿದ್ದ ಬೆನ್ನಲ್ಲೇ ಡಿ ಬಾಸ್ ಮಾಡಿರುವ ಪೋಸ್ಟ್ ಮತ್ತಷ್ಟು ಕುತೂಹಲ ಹುಟ್ಟಿಹಾಕಿದೆ,
ಜೋಡೆತ್ತಗಳನ್ನು ಹಿಡಿದುಕೊಂಡಿರುವ ಫೋಟೋ ಒಂದನ್ನೂ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿ ಕಾಲಾಯ ತಸ್ಮೈ ನಮಃ ಎಂಬ ಸಾಲುಗಳನ್ನು ಬರೆದಿದ್ದಾರೆ ಇದು ಕಿಚ್ಚ ಸುದೀಪ್ ಮತ್ತು ದರ್ಶನ್ ಒಂದಾಗುವ ಕಾಲ ಸಮೀಪ ಬಂದಿದೆ ಎಂದು ಹೇಳಲಾಗುತ್ತಿದೆ, ಏಕೆಂದರೆ ಪೋಸ್ಟ್ ಮಾಡಿರುವ ಜೋಡೆತ್ತುಗಳ ಫೋಟೋ ಇದಕ್ಕೆ ಪುಷ್ಟಿ ಕೊಟ್ಟಂತೆ ಇದೆ, ಇದಕ್ಕಾಗಿ ಫ್ಯಾನ್ಸ್ ವಿಧ ವಿಧವಾದ ಕಮೆಂಟ್ಸ್ ಮಾಡುತ್ತಿದ್ದಾರೆ,
-
ದೇಶ14 ಗಂಟೆಗಳು agoKPSC Recruitment Scam: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಗಂಭೀರ ಆರೋಪ; ನೇಮಕಾತಿ ದಂಧೆ ಬಯಲು ಎಂದ ಕೇಂದ್ರ ಸಚಿವ
-
ದೇಶ14 ಗಂಟೆಗಳು agoNepal Flood Horror: ಮಹಿಳೆಯ ಮೃತದೇಹದಿಂದ ಆಭರಣ ಕಳವು; ವೈರಲ್ ವಿಡಿಯೋ ಆಧರಿಸಿ ಇಬ್ಬರ ಬಂಧನ
-
ಬೆಂಗಳೂರು15 ಗಂಟೆಗಳು agoMake My Propertyz ಟೈಟಲ್ ಸ್ಪಾನ್ಸರ್; ಮೋಹನ್, ಆಂಜನಪ್ಪ, ಹರೀಶ್, ಸಂತೋಷ್, ಗೌರೀಶ್, Hosa Suddi, ಶಿವಕುಮಾರ್ರಿಂದ ಕ್ರೀಡೆಗೆ ಬೆಂಬಲ!
-
ರಾಜ್ಯ12 ಗಂಟೆಗಳು agoMysuru Dasara ಗಜಪಡೆ ಅರಮನೆಗೆ ಎಂಟ್ರಿ; ಜನಸಂದಣಿ ಕಂಡು ಶ್ರೀರಾಮ ಆನೆ ಗಾಬರಿ, ಬಳಿಕ ಏನಾಯ್ತು?
-
ರಾಜ್ಯ13 ಗಂಟೆಗಳು agoKRS ಡ್ಯಾಂಗೆ ಭಾರೀ ಶಾಕ್! ಒಳಹರಿವು ದಿಢೀರ್ ಕುಸಿತ; ಸದ್ಯದ ನೀರಿನ ಮಟ್ಟ ಎಷ್ಟು ಗೊತ್ತಾ?
-
ರಾಜಕೀಯ10 ಗಂಟೆಗಳು agoYathindra Siddaramaiah ಸದ್ದಿಲ್ಲದೆ ಶುರು ಮಾಡಿದ್ರಾ ಹೊಸ ರಾಜಕೀಯ ಲೆಕ್ಕಾಚಾರ? ಜಮೀರ್ ಭೇಟಿಗೆ ಹೆಚ್ಚಿದ ಕುತೂಹಲ
-
ದೇಶ10 ಗಂಟೆಗಳು agoIndian Army ಗೆ ಅಮೆರಿಕದ ಜಾವೆಲಿನ್ ಕ್ಷಿಪಣಿ! ಚೀನಾ-ಪಾಕ್ ಗಡಿಗೆ ಮತ್ತಷ್ಟು ಬಲ; ದೊಡ್ಡ ಘೋಷಣೆ
-
ದೇಶ17 ಗಂಟೆಗಳು agoPM Narendra Modi Foreign Visit: ಮೋದಿ 4 ದಿನಗಳ ವಿದೇಶ ಪ್ರವಾಸ, ಎಸ್ಸಿಒ ಶೃಂಗಸಭೆಯಲ್ಲಿ ಭಾಗಿ
