Connect with us

ದೇಶ

18ನೇ ವಯಸ್ಸಿಗೆ ಕಮರ್ಶಿಯಲ್ ಪೈಲಟ್ ಲೈಸೆನ್ಸ್ ಗಳಿಸಿದ ಸಮೈರಾ: ವಿಜಯಪುರದ ಯುವತಿ ದೇಶದ ಅತ್ಯಂತ ಕಿರಿಯ ಪೈಲಟ್

ವಿಜಯಪುರ: ಐತಿಹಾಸಿಕ ಜಿಲ್ಲೆ ವಿಜಯಪುರ ವಿಶ್ವವಿಖ್ಯಾತಿ ಪಡೆದಿದೆ. ಅದರ ಜೊತೆ ಜಿಲ್ಲೆಯ ಅನೇಕರು ರಾಜ್ಯ ಸೇರಿದಂತೆ ದೇಶಕ್ಕೆ ಕೀರ್ತಿ ತರುವಂತಹ ಸಾಧನೆ ಮಾಡುತ್ತಾರೆ. ಕ್ರಿಕೆಟ್, ವಿಜ್ಞಾನ, ಸಾಹಿತ್ಯ ಸೇರಿದಂತೆ ಅನೇಕ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿದ್ದಾರೆ. ಇದೀಗ ಮತ್ತೊಂದು ಸಾಧನೆಯಿಂದ ಜಿಲ್ಲೆ, ರಾಜ್ಯದ ಹಿರಿಮೆಯನ್ನು ಹೆಚ್ಚಿದೆ.

ವಿಜಯಪುರ ಜಿಲ್ಲೆಯ ಯುವತಿ ಸಮೈರಾ ಹುಲ್ಲೂರ ತಮ್ಮ 18ನೇ ವಯಸ್ಸಿಗೆ ಕಮರ್ಶಿಯಲ್ ಪೈಲಟ್ ಲೈಸೆನ್ಸ್ (CPL) ಪಡೆಯುವ ಮೂಲಕ ದೇಶದ ಅತ್ಯಂತ ಕಿರಿಯ ಪೈಲಟ್ ಎನಿಸಿಕೊಂಡಿದ್ದಾರೆ. ಈ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಹಾಗೂ ತಾತ, ಅಜ್ಜಿ, ತಂದೆ, ತಾಯಿ ಹಾಗೂ ತಮ್ಮ ಎಲ್ಲರ ಸಂಭ್ರಮಕ್ಕೆ ಕಾರಣರಾಗಿದ್ದಾರೆ. ಸಮೈರಾಳ ಅಭೂತಪೂರ್ವ ಸಾಧನೆಯಿಂದ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.

ಸಮೈರಾ ಪ್ರಾಥಮಿಕ, ಪ್ರೌಢ, ಹಾಗೂ ಪದವಿಪೂರ್ವ ವಿದ್ಯಾಭ್ಯಾಸವನ್ನು ವಿಜಯಪುರದಲ್ಲಿ ಮುಗಿಸಿದ್ದಾರೆ. ನಂತರ ನೇರವಾಗಿ ದೆಹಲಿಯಲ್ಲಿ 6 ತಿಂಗಳ ಪೈಲಟ್ ಟ್ರೈನಿಂಗ್ ಮುಗಿಸಿ 18ನೇ ವಯಸ್ಸಿಗೆ ಪೈಲಟ್ ಆಗಿದ್ದಾರೆ. ಇನ್ನು 25ನೇ ವಯಸ್ಸಿಗೆ ಪೈಲಟ್ ಆದ ಕ್ಯಾಪ್ಟನ್ ತಪೇಶ್​ ಕುಮಾರ್​ ಅವರಿಂದ ಪ್ರೇರಣೆ ಪಡೆದು, ಇವತ್ತು ಈ ಸಾಧನೆ ಮಾಡಿರುವುದು ಮಾತ್ರವಲ್ಲದೇ ಅವರ ದಾಖಲೆಯನ್ನು ಮುರಿದು ಮುಂದೆ ಸಾಗಿದ್ದಾರೆ.

ಸಮೈರಾಳ ಸಾಧನೆಗೆ ಜಿಲ್ಲೆ, ರಾಜ್ಯ ಹಾಗೂ ದೇಶದ ಹಲವಡೆಯಿಂದ ಶುಭಾಶಯಗಳು ಹರಿದು ಬರುತ್ತಿವೆ. ಹೆಣ್ಣು ಮಕ್ಕಳೆಂದರೆ ಕಡೆಗಣಿಸುವವರಿಗೆ ಸಮೈರಾ ಕುಟುಂಬ ಹಾಗೂ ಇಂದಿನ ಯುವ ಪೀಳಿಗೆಗೆ ಸಮೈರಾ ಸಾಧನೆ ಮಾದರಿ ಆಗಿದೆ.

ಮಗಳ ಸಾಧನೆ ಹೆಮ್ಮೆಯ ವಿಷಯ: ಸಮೈರಾ ಅವರ ತಂದೆ ಅಮೀನ್​ ಹುಲ್ಲೂರ ಮಾತನಾಡಿ, “ಮಗಳು ಪಿಯುಸಿ ಪರೀಕ್ಷೆ ಬರೆಯುವ ಮೊದಲೇ ಡಿಜಿಸಿಎ (Directorate General of Civil Aviation) ಪರೀಕ್ಷೆ ಬರೆಯಲು ಅರ್ಹಳಾಗಿದ್ದಳು. ಆದರೆ ಪಿಯುಸಿ ಫಲಿತಾಂಶದ ನಂತರವೇ ಡಿಜಿಸಿಎ ಪರೀಕ್ಷೆಗೆ ಅರ್ಜಿ ಹಾಕಿದ್ದು. ಒಂದೇ ಪ್ರಯತ್ನಕ್ಕೆ ಐದೂ ಪರೀಕ್ಷೆಗಳನ್ನು ಪಾಸ್​ ಮಾಡಿದ್ದಳು. ಕೊನೆಯ ಒಂದು ಪರೀಕ್ಷೆಗೆ 18 ವರ್ಷ ವಯಸ್ಸಿನ ಮಿತಿ ಇತ್ತು. ಹಾಗಾಗಿ ಅದೊಂದು ಬಾಕಿ ಇತ್ತು. ಅದರ ಜೊತೆಗೆ 200 ಗಂಟೆ ಅವಧಿಯ ಫ್ಲೈಯಿಂಗ್​ ಟ್ರೈನಿಂಗ್​ ಇತ್ತು. ಅದನ್ನು ಸಮೈರಾ 6 ತಿಂಗಳಲ್ಲಿ ಮುಗಿಸಿಕೊಂಡು ಬಂದಿದ್ದಾಳೆ. ಅದೊಂದು ದಾಖಲೆ. 18 ವರ್ಷಕ್ಕೆ ಮಗಳು ಈ ಸಾಧನೆಯನ್ನು ಮಾಡಿರುವುದು ನಮಗೆ ಮಾತ್ರ ಅಲ್ಲಿ ಇಡೀ ಜಿಲ್ಲೆಗೆ ಹೆಮ್ಮೆಯ ವಿಷಯ.” ಎಂದು ಸಂತಸ ಹಂಚಿಕೊಂಡರು.

ತಂದೆ, ತಾಯಿಯ ಪ್ರೋತ್ಸಾಹ: “ನಾನು ದೇಶದ ಅತ್ಯಂತ ಕಿರಿಯ ಪೈಲಟ್​ಗಳಲ್ಲಿ ಒಬ್ಬಳು ಎನ್ನುವ ದಾಖಲೆ ನಿರ್ಮಿಸಿದ್ದೇನೆ. ಸಿಪಿಎಲ್​ ಹೊಂದಿರುವ ಕರ್ನಾಟಕದ ಅತ್ಯಂತ ಕಿರಿಯ ಪೈಲಟ್​ ಆಗಿದ್ದೇನೆ. ಪೈಲಟ್​ ಆಗಬೇಕು ಎನ್ನುವ ಕನಸಿತ್ತು. ಹಾಗಾಗಿ ದ್ವಿತೀಯ ಪಿಯುಸಿ ಮುಗಿದ ತಕ್ಷಣ ಪರೀಕ್ಷೆ ಬರೆಯಲು ದೆಹಲಿಗೆ ಹೋಗಿ, ಐದು ಪರೀಕ್ಷೆಗಳನ್ನು ಪಾಸ್​ ಆಗಿದ್ದೆ. ಆದರೆ ಇನ್ನೊಂದು ಪರೀಕ್ಷೆಗೆ ನನಗೆ 18 ವರ್ಷ ಆಗಿರಬೇಕಿತ್ತು. ಆಗಿರದ ಕಾರಣ ನಾನು ಕಾರವಾರಕ್ಕೆ ಹೋಗಿ ಅಲ್ಲಿ ಟ್ರೈನಿಂಗ್​ ಮುಗಿಸಿ, ಎಸ್​ಪಿಎಲ್ ​(Student Pilot License) ಗಳಿಸಿದೆ. 18 ವರ್ಷ ಆದ ಬಳಿಕ ಕೊನೆಯ ಪರೀಕ್ಷೆ ಬರೆದು, ಟ್ರೈನಿಂಗ್​ ಮುಗಿಸಿದೆ. ಅಪ್ಪ ಅಮ್ಮ ನನ್ನ ಸಾಧನೆಯಿಂದ ತುಂಬಾ ಖುಷಿಯಾಗಿದ್ದಾರೆ. ಸಣ್ಣ ವಯಸ್ಸಿನಿಂದಲೇ ನನಗೆ ಅಪ್ಪ ಅಮ್ಮ ಎಲ್ಲದಕ್ಕೂ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ.” ಎಂದು ಖುಷಿ ಹಂಚಿಕೊಂಡರು.

ದೇಶ

ನವರಾತ್ರಿ ಸಮಯದಲ್ಲಿ ವಿಮಾನ ನಿಲ್ದಾಣಗಳಲ್ಲಿ ಭಯೋತ್ಪಾದಕ ದಾಳಿ ಎಚ್ಚರಿಕೆ – ಭದ್ರತೆ ಬಿಗಿ ಕ್ರಮ

ಭಾರತದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ನವರಾತ್ರಿಯ ವೇಳೆ ಭಯೋತ್ಪಾದಕ ದಾಳಿಯ ಅಪಾಯವಿರುವ ಬಗ್ಗೆ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಜಾರಿಯಲ್ಲಿದೆ.

ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ಆಗಸ್ಟ್ 4ರಂದು ಎಚ್ಚರಿಕೆ ಪ್ರಕಟಿಸಿ, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಭಯೋತ್ಪಾದನೆ ಅಥವಾ ಸಮಾಜ ವಿರೋಧಿ ಶಕ್ತಿಗಳಿಂದ ದಾಳಿ ಸಂಭವಿಸಬಹುದೆಂದು ಸೂಚಿಸಿದೆ.

🕵️ ಗುಪ್ತಚರ ಮೂಲದ ಮಹತ್ವದ ಎಚ್ಚರಿಕೆ:

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ದಾಳಿಗೆ ಸಿದ್ಧತೆ ನಡೆಸುತ್ತಿವೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳು, ಏರ್‌ಸ್ಟ್ರಿಪ್‌ಗಳು, ಹೆಲಿಪ್ಯಾಡ್‌ಗಳು ಮತ್ತು ತರಬೇತಿ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳಾಗಿ ಈ ಕೆಳಗಿನ ಕ್ರಮಗಳು ಜಾರಿಗೆ ಬಂದಿವೆ:

  • ಸಿಬ್ಬಂದಿ ಮತ್ತು ಸಂದರ್ಶಕರ ಗುರುತಿನ ಪರಿಶೀಲನೆ
  • ಸಿಸಿಟಿವಿ ಕಣ್ಗಾವಲು ಬಿಗಿತ
  • ಸರಕು, ಪಾರ್ಸೆಲ್ ಮತ್ತು ಮೇಲ್‌ಗಳ ತಪಾಸಣೆ
  • ಸ್ಥಳೀಯ ಪೊಲೀಸ್ ಮತ್ತು ಭದ್ರತಾ ಸಂಸ್ಥೆಗಳೊಂದಿಗೆ ಸಹಕಾರ

🇮🇳 ರಾಷ್ಟ್ರೀಯ ಭದ್ರತೆಗೆ ಒತ್ತು:

ದೆಹಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳು ಈ ಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಪ್ರಯಾಣಿಕರು ತಮ್ಮ ಗುರುತಿನ ದಾಖಲೆಗಳನ್ನು ಸಿದ್ಧವಾಗಿಡಬೇಕು. ತಪಾಸಣೆ ವಿಳಂಬದ ಸಾಧ್ಯತೆಯಿರುವುದರಿಂದ ಸಹಕಾರ ನೀಡುವಂತೆ BCAS ಮನವಿ ಮಾಡಿದೆ.

Continue Reading

ದೇಶ

ಅಮೆರಿಕ-ರಷ್ಯಾ ವ್ಯವಹಾರ: ಭಾರತದ ಟೀಕೆಗೆ ಟ್ರಂಪ್ ನುಣುಚು ಪ್ರತಿಕ್ರಿಯೆ

ವಾಷಿಂಗ್ಟನ್: ರಷ್ಯಾದಿಂದ ಈಗಲೂ ವ್ಯವಹಾರ ನಡೆಸುತ್ತಿರುವ ಅಮೆರಿಕದ ಕುರಿತಾಗಿ ಭಾರತ ಮಾಡಿರುವ ಗಂಭೀರ ಆರೋಪಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನುಣುಚು ಪ್ರತಿಕ್ರಿಯೆ ನೀಡಿದ್ದಾರೆ.

ಭಾರತ ಆರೋಪಿಸಿದಂತೆ, ಅಮೆರಿಕ 2024ರಲ್ಲಿ 1.1 ಶತಕೋಟಿ ಡಾಲರ್‌ ಮೌಲ್ಯದ ರಸಗೊಬ್ಬರ, 878 ಮಿಲಿಯನ್ ಡಾಲರ್‌ ಮೌಲ್ಯದ ಪಲ್ಲಾಡಿಯಮ್‌ ಸೇರಿದಂತೆ ಹಲವು ಅಮೂಲ್ಯ ಲೋಹಗಳನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಯುರೇನಿಯಂ ಹೆಕ್ಸಾಫ್ಲೋರೈಡ್‌ನಂತಹ ಪರಮಾಣು ಉತ್ಪನ್ನಗಳ ಆಮದು ಕೂಡ ಮುಂದುವರಿದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಟ್ರಂಪ್, “ನನಗೆ ಈ ವ್ಯಾಪಾರದ ವಿವರಗಳು ತಿಳಿದಿಲ್ಲ, ನಾನು ಪರಿಶೀಲನೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಭಾರತದ ಖಡಕ್ ಪ್ರತಿಕ್ರಿಯೆ:
ಭಾರತ, ತನ್ನ ರಷ್ಯಾ ತೈಲ ಆಮದು ಬಗ್ಗೆ ಅಮೆರಿಕದ ಟೀಕೆಗೆ ಅಂಕಿ-ಅಂಶಗಳೊಂದಿಗೆ ತಿರುಗೇಟು ನೀಡಿದೆ. ಯುರೋಪ್ ದೇಶಗಳೇ ರಷ್ಯಾದಿಂದ ಭಾರಿ ಪ್ರಮಾಣದಲ್ಲಿ ಎಲ್‌ಎನ್‌ಜಿ, ರಸಗೊಬ್ಬರ, ಲೋಹಗಳನ್ನು ಆಮದು ಮಾಡಿಕೊಳ್ಳುತ್ತಿವೆ. 2024ರಲ್ಲಿ ಯುರೋಪಿಯನ್ ಒಕ್ಕೂಟವು 67.5 ಬಿಲಿಯನ್ ಯುರೋಗಳಷ್ಟು ಸರಕು ವ್ಯಾಪಾರ ಹಾಗೂ 17.2 ಬಿಲಿಯನ್ ಯುರೋಗಳಷ್ಟು ಸೇವಾ ವ್ಯಾಪಾರವನ್ನು ರಷ್ಯಾ ಜೊತೆ ನಡೆಸಿದೆ.

ಟ್ರಂಪ್ ಅವರ ಆರೋಪ:
ಟ್ರಂಪ್ ಹೇಳುವಂತೆ, ಭಾರತ ರಷ್ಯಾದ ತೈಲವನ್ನು ಖರೀದಿ ಮಾಡುತ್ತಿದ್ದು, ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಲಾಭಕ್ಕಾಗಿ ಮಾರಾಟ ಮಾಡುತ್ತಿದೆ. ಅವರು ಈ ಕಾರಣಕ್ಕಾಗಿ ಭಾರತದಿಂದ ಸಂಗ್ರಹಿಸಬೇಕಾದ ಸುಂಕವನ್ನು ಹೆಚ್ಚಿಸುವುದಾಗಿ ಹೇಳಿದ್ದಾರೆ.

ಭಾರತದ ನಿಲುವು:
ಭಾರತ, ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಕಚ್ಚಾ ತೈಲವನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಇಂಧನದ ದರಗಳನ್ನು ಜನತೆಗೆ ಕೈಗೆಟುಕುವಂತೆ ಇರಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

Continue Reading

ಕ್ರೀಡೆ

ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!

ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.

ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್‌ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.

ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.

ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.

Continue Reading

Trending