Connect with us

ಬೆಂಗಳೂರು

ಬಸನಗೌಡ ಪಾಟೀಲ್ ಯತ್ನಾಳರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು: ಸಿಎಂ ಇಬ್ರಾಹಿಂ ವಾಗ್ದಾಳಿ

ಹುಬ್ಬಳ್ಳಿ: “ರಾಜ್ಯ ರಾಜಕಾರಣ ಹೊಲಸೆದ್ದು ಹೋಗಿದೆ. ಬಿಜೆಪಿಯವರು ಇಷ್ಟು ದಿನ ರಾಮನ ಹೆಸರಿನಲ್ಲಿ ವೋಟ್ ಕೇಳಿದ್ರು. ಇದೀಗ ಸಾಬರ ಹೆಸರಲ್ಲಿ ವೋಟ್ ಕೇಳುತ್ತಿದ್ದಾರೆ. ಅವರಿಗೆ ಎಷ್ಟು ಗತಿಗೇಡು ಬಂದಿದೆ” ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ವಾಗ್ದಾಳಿ ನಡೆಸಿದರು.

ನಗರದಲ್ಲಿಂದು ಮಾತನಾಡಿದ ಅವರು,‌ “ಯತ್ನಾಳ್​ ಹಿಂದೂ ಸಮಾವೇಶ ಅಂತಾರೆ. ವಿಜಯೇಂದ್ರ, ಯಡಿಯೂರಪ್ಪ ಹಿಂದೂ ಅಲ್ವಾ? ವಕ್ಫ್​ ವಿಚಾರವಾಗಿ ನಾನು ರಾಜ್ಯ ಸರ್ಕಾರಕ್ಕೆ ಒಂದು ಪೇಪರ್ ಅಲ್ಲಿ ಜಾಹೀರಾತು ಕೊಡಲು ಹೇಳುತ್ತೇನೆ. ಯಾರ ಹೆಸರಲ್ಲಿ ಪಹಣಿ ಇದೆಯೋ, ಅವನೇ ಭೂ ಒಡೆಯ. ಇದಕ್ಕೆ ಯಾಕೆ ಚಳವಳಿ ಬೇಕು? ಇವರಿಗೆ ವಿಷಯ ಇಲ್ಲ, ಹೀಗಾಗಿ ಇದನ್ನು ಹಿಡಿದುಕೊಂಡು ಹೋಗುತ್ತಿದ್ದಾರೆ. ಹಿಂದುತ್ವದ ಮೇಲೆ ವೋಟ್ ಬರಲ್ಲ. ಹಾಗಾಗಿ ಹಿಂದುತ್ವ ಸಾಕಾಗಿ ಹೋಗಿದೆ” ಎಂದರು.

ಮೆಂಟಲ್​ ಆಸ್ಪತ್ರೆಗೆ ಸೇರಿಸಬೇಕು: “ಬಸನಗೌಡ ಪಾಟೀಲ್ ಯತ್ನಾಳ್​ ಅವರನ್ನು ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕು. ಬಸವಣ್ಣನ ಬಗ್ಗೆ ಮಾತಾಡುತ್ತಾರೆ. ಎಲ್ಲಿ ಅವರೂ ಕೂಡಲಸಂಗಮ ನದಿಗೆ ಹಾರ್ತಾರೋ ಏನೋ” ಎಂದು ಯತ್ನಾಳ್​ ವಿರುದ್ಧ ವ್ಯಂಗ್ಯವಾಡಿದರು.

“ಯತ್ನಾಳ್​​ ಮೊದಲು ಸಾಣೇಹಳ್ಳಿಗೆ ಹೋಗಿ ರಾಗಿ ಮುದ್ದೆ ತಿಂದು ಬಸವ ತತ್ವ ಕಲಿಯಲಿ. ವಕ್ಫ್​ ಎಂದರೇನು? ವಕ್ಫ್​ ಕಾಯ್ದೆ ಮಾಡಿದ್ದು ಕಾಂಗ್ರೆಸ್ ಅಲ್ಲ. ಅದನ್ನು ಮಾಡಿದ್ದು ಬ್ರಿಟಿಷರು. ಯಾವ ಆಸ್ತಿಯನ್ನು ವಕ್ಫ್​ ಎಂದು ಹೇಳಲು ಆಗಲ್ಲ. ಅದಕ್ಕೆ ಅದರದೇ ಆದ ನಿಯಮ ಇದೆ. ಆ ಹುಚ್ಚ ಮಂತ್ರಿ ಅದಾಲತ್ ಮಾಡಿ, ರಸ್ತೆಯಲ್ಲಿರೋ ಕಸವನ್ನು ಮೈಮೇಲೆ ಹಾಕಿಕೊಂಡ” ಎಂದು ಪರೋಕ್ಷವಾಗಿ ಜಮೀರ್ ಅಹಮ್ಮದ್​ಗೆ ಕುಟುಕಿದರು.

ನಿಮ್ಮಿಬ್ಬರ ಜಗಳದಲ್ಲಿ ಸಾಬರನ್ನು ಏಕೆ ಎಳೆದು ತರುತ್ತೀರಿ – ಇಬ್ರಾಹಿಂ: “ಇವರು ಎಲ್ಲೆಲ್ಲಿ ದಾರಿ ತಪ್ಪಿಸಿದ್ದಾರೋ, ನಾವು ಅದನ್ನು ಅರಿವು ಮೂಡಿಸುವ ಕೆಲಸ ಮಾಡುತ್ತೇವೆ. ಯತ್ನಾಳ್​ ಅವರೇ ನಿಮ್ಮ ವಿಜಯೇಂದ್ರ ಜಗಳದಲ್ಲಿ ಸಾಬರನ್ನು ಯಾಕೆ ತರ್ತೀರಿ. ವಿಜಯೇಂದ್ರ ಹಾಗೂ ಯತ್ನಾಳ್​ ಗಲಾಟೆಯನ್ನು ಕಂಟ್ರೋಲ್ ಮಾಡಲು ಹೈಕಮಾಂಡ್​ಗೆ ಆಗುತ್ತಿಲ್ಲ. ನೋಟಿಸ್ ಕೊಟ್ಟರೂ ಏನೂ ಆಗಲ್ಲ. ಯತ್ನಾಳ್​ ಅವರನ್ನು ಪಕ್ಷದಿಂದ ಬಿಟ್ಟರೆ ಏನು ನಷ್ಟ ಆಗುತ್ತೆ ಗೊತ್ತಿಲ್ಲ. ಯಡಿಯೂರಪ್ಪ ಅವರನ್ನು ಬಿಟ್ಟರೆ ನಷ್ಟ ಆಗುತ್ತೆ ಎನ್ನುವುದನ್ನು ಈಗಾಗಲೇ ತೋರಿಸಿದ್ದಾರೆ” ಎಂದರು.

“ವಕ್ಫ್​ ಕಾಯ್ದೆಯ ವಿಚಾರದಲ್ಲಿ ಜಿಲ್ಲಾಧಿಕಾರಿಗೆ ಅಧಿಕಾರ ಕೊಡಬೇಕು ಅಂತಾರೆ. ಜಿಲ್ಲಾಧಿಕಾರಿಗೆ ಅಲ್ಲ, ಹೈಕೋರ್ಟ್​ ನ್ಯಾಯಾಧೀಶರಿಗೆ ಅಧಿಕಾರ ಕೊಡಿ. ಹಿಂದೂ ಸಮಾವೇಶ ಯಾಕೆ, ಮಹಾದಾಯಿ ವಿಚಾರವಾಗಿ ಸಭೆ ಮಾಡಿ” ಎಂದರು.

’ಆ ಪ್ರತಾಪ್ ಸಿಂಹಗೆ ಕಾಯ್ದೆಯೇ ಗೊತ್ತಿಲ್ಲ‘: “ಆ ಪ್ರತಾಪ್ ಸಿಂಹಗೆ ಕಾಯ್ದೆಯೇ ಗೊತ್ತಿಲ್ಲ. ಹೈಕಮಾಂಡ್ ಹಾಗೂ ಮೋದಿ, ಅಮಿತ್ ಶಾ ಅವರನ್ನು ಒಲಿಸಲು ವಕ್ಫ್​ ಹೋರಾಟ ಮಾಡುತ್ತಿದ್ದಾರೆ. ವಿಜಯಪುರದಲ್ಲಿ ಹೋಗಿ ದಾಂಧಲೆ ಮಾಡಿದ್ರು. ಬಿಜೆಪಿಯವರನ್ನು ಎಲ್ಲ ಸಮಾಜದ ಜ‌ನ ತಿರಸ್ಕಾರ ‌ಮಾಡಿದ್ದಾರೆ. ಕುಮಾರಸ್ವಾಮಿ ಅವರನ್ನು ಅಡ್ರೆಸ್ ಇಲ್ಲದಂತೆ ಕಳುಹಿಸಿದ್ದಾರೆ. ನಾನು ಇದ್ದ ಕಾರಣಕ್ಕೆ ಕುಮಾರಸ್ವಾಮಿ ಗೆದ್ದಿದ್ದರು. ಮುಸ್ಲಿಂ ವೋಟ್​ನಿಂದ ನಾವು 19 ಸೀಟ್ ಗೆದ್ದಿದ್ದು. ಬಿಜೆಪಿ ಜೊತೆ ಹೋಗಿರೋದಕ್ಕೆ ನಾವು ಬೇರೆಯಾಗಿದ್ದು. ಇದೀಗ ಬಿಜೆಪಿಯವರ ಜೊತೆ ಲವ್ ಮ್ಯಾರೇಜ್ ಆಗಿದ್ದಾರೆ. ನೊಡೋಣ ಎಷ್ಟು ದಿನ‌ ಇರುತ್ತೆ ಅಂತ. ನಾವು ತೃತೀಯ ರಂಗ ಹುಟ್ಟುಹಾಕುತ್ತೇವೆ. ಒಂದು ಸಂಘ ಕಟ್ಟಲು ತೀರ್ಮಾನ ಮಾಡಿದ್ದೇವೆ” ಎಂದರು.

“ಸಿದ್ದರಾಮಯ್ಯ ಅವರ ಸ್ವಾಭಿಮಾನದ ಸಮಾವೇಶದ ಬಗ್ಗೆ ನಾನು ಮಾತಾಡಲ್ಲ. ಸಿದ್ದರಾಮಯ್ಯ ಶಕ್ತಿ ಸಿದ್ದರಾಮಯ್ಯಗೆ ಇದೆ. ಡಿ.ಕೆ.ಶಿವಕುಮಾರ್ ಶಕ್ತಿ ಅವರಿಗೆ ಇದೆ.‌ ಸಿಎಂ ಅವರನ್ನು ಇಳಿಸುವ ಪ್ರಯತ್ನದ ಬಗ್ಗೆ ಗೊತ್ತಿಲ್ಲ. ಬಸನಗೌಡ ಪಾಟೀಲ್ ಯತ್ನಾಳ್​ ಫ್ರಸ್ಟ್ರೇಟ್ ಆಗಿದ್ದಾರೆ. ಹಾಗೆ ಆಗಬೇಡಿ. ಅವರೇ ಎಲ್ಲಿ ನದಿಗೆ ಹಾರ್ತಾರೋ ಎನ್ನುವ ಅನುಮಾನ ಇದೆ. ಹೀಗಾಗಿ ಬಸವ ತತ್ವ ಓದಿ ನಿಮಗೆ ಜ್ಞಾನೋದಯ ಆಗತ್ತದೆ. ಮೋಹನ್ ಭಾಗವತ್ ಮೊದಲು ಮದುವೆಯಾಗಲಿ” ಎಂದು ಹೇಳಿದರು.

ಮುಸ್ಲಿಂರಿಗೆ ಮತದಾನದ ಹಕ್ಕು ಇಲ್ಲ ಎಂದ ಸ್ವಾಮೀಜಿ ಮೇಲೆ ಕೇಸ್ ದಾಖಲಿಸಿರುವ ಕುರಿತು ಪ್ರತಿಕ್ರಿಯಿಸಿ, “ಅವರ ಮೇಲೆ ಎಫ್​ಐಆರ್ ಹಾಕಬೇಡಿ. ಅವರು ವಿಷಾಧ ವ್ಯಕ್ತಪಡಿಸಿದ್ದಾರೆ. ಹಿರಿಯರಿದ್ದಾರೆ. ಕೂಡಲೇ ಅವರ ಮೇಲೆ ಹಾಕಿರುವ ಕೇಸ್ ವಾಪಸ್ ತೆಗೆದುಕೊಳ್ಳಿ, ಇದು ನನ್ನ ಪ್ರಾರ್ಥನೆ” ಎಂದರು.

Continue Reading
Click to comment

Leave a Reply

Your email address will not be published. Required fields are marked *

ಅಪರಾಧ

Breaking News ಚಾಲಕ ಆತ್ಮಹತ್ಯೆ – ಡೆತ್ ನೋಟ್‌ನಲ್ಲಿ ಸಂಸದ ಡಾ. ಸುಧಾಕರ್ ಹೆಸರು ಉಲ್ಲೇಖ!

ಚಿಕ್ಕಬಳ್ಳಾಪುರ, ಆಗಸ್ಟ್ 7 – ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದೈನಂದಿನ ಶಾಂತಿಯನ್ನು ಬೆಚ್ಚಿಬೀಳಿಸುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಜಿಲ್ಲಾ ಪಂಚಾಯತ್ ಕಚೇರಿಯ ಆವರಣದಲ್ಲಿ 33 ವರ್ಷದ ಗುತ್ತಿಗೆ ಚಾಲಕ ಬಾಬು ಎಂ. ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೋಕಾಂತರವಾಗಿದೆ.

ಡೆತ್ ನೋಟ್‌ನಲ್ಲಿ ಸಂಸದ ಡಾ. ಕೆ. ಸುಧಾಕರ್ ಹೆಸರು:
8 ವರ್ಷಗಳಿಂದ ಲೆಕ್ಕಪರಿಶೋಧನೆ ವಿಭಾಗದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಬಾಬು, ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಹಾಗೂ ಅವರ ಬೆಂಬಲಿಗರಾದ ನಾಗೇಶ್ ಮತ್ತು ಮಂಜುನಾಥ್ ವಿರುದ್ಧ ಗಂಭೀರ ಆರೋಪಗಳನ್ನು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಆತ್ಮಹತ್ಯೆಗೆ ಕಾರಣವೆನಿಸಿದ ಹಣಕಾಸು ವಂಚನೆ:
ಬಾಬು ಅವರು ಡೆತ್ ನೋಟ್‌ನಲ್ಲಿ, ಸರ್ಕಾರಿ ಕೆಲಸ ಕೊಡಿಸುತ್ತೇವೆಂದು ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಬಾಬು, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿಯ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು:
ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ತಕ್ಷಣವೇ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ FIR ದಾಖಲಾತಿ ನಡೆಯುವ ಸಾಧ್ಯತೆ ಇದ್ದು, ತನಿಖೆ ಮುಂದುವರಿದಿದೆ.

Continue Reading

ಬೆಂಗಳೂರು

ಬೆಂಗಳೂರಿನಲ್ಲಿ ವಸತಿ ಯೋಜನೆಗಳ ಅವ್ಯವಸ್ಥೆ: ಹೊಸ ಯೋಜನೆಗಳ ಬಗ್ಗೆ ಶಾಸಕ ಎಸ್.ಟಿ. ಸೋಮಶೇಖರ್ ಅಸಮಾಧಾನ

ಬೆಂಗಳೂರು, ಆಗಸ್ಟ್ 7 – ನಗರದಲ್ಲಿ ಈಗಿನ ವಸತಿ ಯೋಜನೆಗಳು ಪೂರ್ಣವಾಗಿಲ್ಲದಿರುವಾಗ ಹೊಸ ಭೂಸ್ವಾಧೀನ ಅಧಿಸೂಚನೆಗಳನ್ನು ನೀಡುವುದು ಅರ್ಥವಿಲ್ಲ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಕಿಡಿಕಾರಿದರು.

ಯಶವಂತಪುರ ಕ್ಷೇತ್ರದ ಚುಂಚನಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಬ್ಬರಾಯನಪಾಳ್ಯ ಎ ಹಾಗೂ ಬಿ ಗ್ರಾಮಗಳಲ್ಲಿ ಹೊಸ ಅಂಗನವಾಡಿ ಕಟ್ಟಡ ಮತ್ತು ಕಿರಿಯ ಪ್ರಾಥಮಿಕ ಶಾಲೆಯ ಲೋಕಾರ್ಪಣೆ ವೇಳೆ ಅವರು ಮಾತನಾಡಿದರು.

ಅವರು ಅಭಿಪ್ರಾಯಪಟ್ಟ ಪ್ರಮುಖ ವಿಷಯಗಳು:

  • ಬೆಂಗಳೂರಿನ ಜನಸಂಖ್ಯೆ ಈಗಾಗಲೇ 1.5 ಕೋಟಿಗೂ ಮೀರುತ್ತಿದೆ.
  • ವಸತಿ ಸಮುಚ್ಛಯಗಳಲ್ಲಿ ಇನ್ನೂ ಅನೇಕ ಅಭಿವೃದ್ಧಿ ಕೆಲಸಗಳು ಬಾಕಿಯಿವೆ.
  • ಕುಡಿಯುವ ನೀರಿನ ಕೊರತೆ, ಒಳಚರಂಡಿ ಸಮಸ್ಯೆ, ರಾಜಕಾಲುವೆಗಳ ಉಕ್ಕಿಹರಿವು ನಗರದ ಮುಖ್ಯ ಸಮಸ್ಯೆಗಳಾಗಿವೆ.
  • ಕೆಲ ಕಟ್ಟಡಗಳು ಕಳಪೆ ಗುಣಮಟ್ಟದಿಂದ ನಿರ್ಮಾಣವಾಗಿದ್ದು, ಸೋರಿಕೆ ಸಮಸ್ಯೆ ಜನರನ್ನು ಕಾಡುತ್ತಿದೆ.
  • “ಕಟ್ಟಡ ಕುಸಿದು ಅನಾಹುತವಾದರೆ ಹೊಣೆ ಯಾರು?” ಎಂದು ಅವರು ಪ್ರಶ್ನಿಸಿದರು.

ಬೇರೆ ಪ್ರಮುಖ ಅಂಶಗಳು:
ನಗರದ ವಾಹನ ಸಂಚಾರ ದಟ್ಟಣೆ, ನಿಯಂತ್ರಣ ತಪ್ಪಿದ ನಗರ ವಿಸ್ತರಣೆ, ಮೂಲಸೌಕರ್ಯದ ಕೊರತೆ ಇವುಗಳಿಂದ ನಾಗರಿಕರು ಪರದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬೆಂಗಳೂರಿನಿಂದ ಹೊರಗೆ ಹೊಸ ವಸತಿ ಯೋಜನೆಗಳನ್ನು ರೂಪಿಸಿ ಮೂಲಸೌಕರ್ಯ ಒದಗಿಸಿದರೆ ಜನಸಂದಣಿ ನಿಯಂತ್ರಣ ಸಾಧ್ಯವೆಂದು ಶಾಸಕ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಹಾಜರಿದ್ದವರು:
ಪಂಚಾಯತ್ ಅಧ್ಯಕ್ಷೆ ಹೇಮಾ ನಾರಾಯಣ್, ಸದಸ್ಯರು ಸದಾನಂದ.ಡಿ, ಎನ್.ಕುಮಾರ್, ರೇವಣಸಿದ್ದಯ್ಯ, ಅಶ್ವತ್, ವೆಂಕಟಾಚಲ, ಸುನಿಲ್, ಪುಟ್ಟಮಲ್ಲು, ತಾತಪ್ಪ, ಶಿವಣ್ಣ, ಹನುಮಂತ ಹಾಗೂ ಗ್ರಾಮಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Continue Reading

ಬಿಬಿಎಂಪಿ

ಜಿಬಿಎ ಚುನಾವಣೆ ಪೂರ್ವಸಿದ್ಧತೆ: ನವೆಂಬರ್ 1ರೊಳಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ – ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದ ಪೂರ್ವಸಿದ್ಧತೆಗಳನ್ನು ನವೆಂಬರ್ 1ರೊಳಗೆ ಪೂರ್ಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಹಿರಿಯ ಮುಖಂಡರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಚುನಾವಣೆಗಾಗಿ ಮತದಾರರ ನೋಂದಣಿ ನಿಯಮಗಳನ್ನು ಹೇಗೆ ರೂಪಿಸಬೇಕು ಎಂಬ ಕುರಿತು ಚುನಾವಣಾ ಆಯೋಗದ ಅಭಿಪ್ರಾಯವನ್ನು ಕೇಳಲಾಗುವುದು,” ಎಂದು ಸ್ಪಷ್ಟಪಡಿಸಿದರು.

ಚುನಾವಣೆ ಹಕ್ಕು ಕಾಪಾಡುವ ಕುರಿತು ಮಾರ್ಗದರ್ಶನ:
ಪಕ್ಷದ ಕಾರ್ಯಕರ್ತರು ಮತ್ತು ಬ್ಲಾಕ್ ಅಧ್ಯಕ್ಷರಿಗೆ, ತಮ್ಮ ಮತದಾನದ ಹಕ್ಕನ್ನು ಕಾಪಾಡಿಕೊಳ್ಳುವ ಕುರಿತು ಮಾರ್ಗದರ್ಶನ ನೀಡಲಾಗಿದೆ. “ಶಾಸಕರನ್ನು ಹಾಗೂ ಬ್ಲಾಕ್ ಲೆವಲ್ ನಾಯಕರನ್ನು ಮತ್ತೊಮ್ಮೆ ಸಭೆಗೆ ಕರೆದು ಸಿದ್ಧತೆ ಕುರಿತ ಚರ್ಚೆ ನಡೆಯಲಿದೆ,” ಎಂದರು.

ಇಂಡಿಯಾ ಒಕ್ಕೂಟ ಮತ್ತು ಪ್ರತಿಭಟನೆ ಕುರಿತು ಸ್ಪಷ್ಟನೆ:
ಮುಖ್ಯಮಂತ್ರಿಗಳಿಗೆ ಇಂಡಿಯಾ ಒಕ್ಕೂಟದ ಸಭೆಗೆ ಆಹ್ವಾನ ಇದೆ. ನಾನು ಇಲ್ಲಿ ಪ್ರತಿಭಟನಾ ಸಭೆಗಾಗಿ ಸಿದ್ಧತೆಗಳನ್ನು ನೋಡಿಕೊಳ್ಳುತ್ತಿದ್ದೇನೆ,” ಎಂದು ಡಿಸಿಎಂ ಹೇಳಿದರು. “ಸ್ವಾತಂತ್ರ ಉದ್ಯಾನದಲ್ಲಿ ಮತಚೂರಿ ವಿರುದ್ಧsymbolic ಪ್ರತಿಭಟನೆ ನಡೆಯಲಿದ್ದು, ಇದು ನ್ಯಾಯಾಲಯದ ಆದೇಶದಂತೆ ಹಮ್ಮಿಕೊಳ್ಳಲಾಗಿದೆ,” ಎಂದು ಹೇಳಿದರು.

ರಾಜ್ಯಮಟ್ಟದ ಪ್ರತಿಭಟನೆ:
ಪ್ರತಿಯೊಬ್ಬ ಜಿಲ್ಲೆಯಿಂದ ಕನಿಷ್ಠ 50 ನಾಯಕರು, ಕಾರ್ಯಕರ್ತರು, ಪರಾಜಿತ ಅಭ್ಯರ್ಥಿಗಳು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಲಾಗಿದೆ. “ಬೆಂಗಳೂರು ಮಾತ್ರವಲ್ಲ, ಇಡೀ ಕರ್ನಾಟಕದಿಂದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ,” ಎಂದು ಅವರು ಹೇಳಿದ್ದಾರೆ.

Continue Reading

Trending