ದೇಶ
ಬೆಂಗಳೂರು 2 ನೇ ಏರ್ಪೋರ್ಟ್ಗೆ ಸರ್ವೆ; 6 ಸಾವಿರ ಎಕರೆ ಜಾಗದ ನಕ್ಷೆ ಸಿದ್ಧ! 23 ಹಳ್ಳಿ ರೈತರಿಗೆ ಆತಂಕ

ಬೆಂಗಳೂರು: ರಾಜಧಾನಿ ಬೆಂಗಳೂರು ಸಮೀಪದಲ್ಲೇ 2ನೇ ವಿಮಾನ ನಿಲ್ದಾಣ ನಿರ್ಮಿಸಲು ನೆಲಮಂಗಲ – ಕುಣಿಗಲ್ ರಾಷ್ಟ್ರೀಯ ಹೆದ್ದಾರಿ 75ರ ಸಮೀಪ ರಾಜ್ಯ ಸರ್ಕಾರ ಗುರುತಿಸಿರುವ 6 ಸಾವಿರ ಎಕರೆ ಜಾಗವನ್ನು ಹೆಲಿಕಾಪ್ಟರ್ ಮೂಲಕ ಡಿಜಿಟಲ್ ಸರ್ವೆ ನಡೆಸಿ ಪೂರ್ವ ನಿಯೋಜಿತ ಸ್ಥಳದ ನಕ್ಷೆ ತಯಾರಿಸಿದೆ. ಇದಕ್ಕೆ ಸ್ಥಳೀಯ ರೈತರ ವಿರೋಧ ವ್ಯಕ್ತವಾಗಿದೆ.
ಕೆಲ ದಿನಗಳ ಹಿಂದಷ್ಟೇ ಮಾಗಡಿಯ ಮೋಟಗೊಂಡನಹಳ್ಳಿ, ನೆಲಮಂಗಲ ಸೋಮಪುರದ ಯಂಟಗಾನಹಳ್ಳಿ ಹಾಗೂ ಸೋಲದೇವನಹಳ್ಳಿ ವ್ಯಾಪ್ತಿಯ ಮೂರು ಪಂಚಾಯಿತಿಗಳಲ್ಲಿ ಪರಿಸರ ಮಾಲಿನ್ಯ ಅಧಿಕಾರಿಗಳು ಮತ್ತು ಸರ್ವೆ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತಂಡ ಸ್ಥಳ ಸಮೀಕ್ಷೆ ನಡೆಸಿ ಅನೇಕ ಕಡೆಗಳಲ್ಲಿ ಎಸ್ಸಿಪಿ ಎಂಬ ಅಂಕಿಗಳ ಗುರುತು ಹಾಕಿತ್ತು.
ಹೆಲಿಕಾಪ್ಟರ್ನಲ್ಲಿ ಸರ್ವೆ
ಇದಾಗಿ ಕೆಲವು ದಿನ ಕಳೆಯುವುದರೊಳಗೆ ಅಂದರೆ ನಾಲ್ಕೈದು ದಿನಗಳಿಂದ ತಿಪ್ಪಗೊಂಡನಹಳ್ಳಿ ಜಲಾಶಯದ ವ್ಯಾಪ್ತಿಯೊಳಗೆ ಬರುವ ಹಾಗೂ ಅರ್ಕಾವತಿ ಮತ್ತು ಕುಮಧ್ವತಿ ನದಿ ಪಾತ್ರಕ್ಕೆ ಸೇರುವ ಇದೇ ಜಾಗದಲ್ಲಿರುವ ಫಲವತ್ತಾದ ಕೃಷಿ ಭೂಮಿಯನ್ನು ಹೆಲಿಕಾಪ್ಟರ್ ಮೂಲಕ ಸರ್ವೇ ನಡೆಸಲಾಗುತ್ತಿದೆ.
ಎಲ್ಲೆಲ್ಲಿ 6 ಸಾವಿರ ಎಕರೆ ಜಾಗ?
ಸೋಲದೇವನಹಳ್ಳಿ, ಮೋಟಗಾನಹಳ್ಳಿ, ಯಂಟಗಾನಹಳ್ಳಿಯ 3 ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ 13 ಗ್ರಾಮಗಳು ಮತ್ತು 10ಕ್ಕೂ ಹೆಚ್ಚು ಹಳ್ಳಿಗಳ 6000 ಎಕರೆ ಪ್ರದೇಶ ವಿಮಾನ ನಿಲ್ದಾಣಕ್ಕೆ ಬಳಸುವ ಭೂಮಿಯ ವ್ಯಾಪ್ತಿಗೆ ಸೇರಿದೆ.
ಗುಟ್ಟು ಬಿಡದ ಅಧಿಕಾರಿಗಳು
ಸ್ಥಳ ಪರಿಶೀಲನೆ, ಹೆಲಿಕಾಪ್ಟರ್ ಸರ್ವೆ ಸೇರಿದಂತೆ ದಿನಕ್ಕೊಂದು ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಅಧಿಕಾರಿಗಳ ತಂಡ, ಈ ಸಂಬಂಧ ರೈತರಿಗೆ ಯಾವುದೇ ಗುಟ್ಟು ಬಿಟ್ಟುಕೊಡುತ್ತಿಲ್ಲ. ಏಕೆ ಸರ್ವೆ ನಡೆಸುತ್ತಿದ್ದೀರಿ ಎಂಬ ರೈತರ ಪ್ರಶ್ನೆಗೆ ಅಧಿಕಾರಿಗಳು ಹಾರಿಕೆ ಉತ್ತರ ನೀಡುತ್ತಿದ್ದಾರೆ. ಅಧಿಕಾರಿಗಳ ಶಂಕಾಸ್ಪದ ನಡುವಳಿಕೆ ರೈತರಲ್ಲಿಆತಂಕ ಹೆಚ್ಚಲು ಕಾರಣವಾಗಿದೆ. ನೈಜ ಕಾರಣ ತಿಳಿಸುವಂತೆ ರೈತರು ಜನಪ್ರತಿನಿಧಿಗಳ ಹಿಂದೆ ಬಿದ್ದಿದ್ದಾರೆ.
ಸಿಎಂ, ಡಿಸಿಎಂ ಒಪ್ಪಿದ ಬಳಿಕ ಸರ್ವೆ
ದೇವನಹಳ್ಳಿ ವಿಮಾನ ನಿಲ್ದಾಣದ ಒತ್ತಡ ತಗ್ಗಿಸಲು ರಾಜಧಾನಿಯ ಸುತ್ತಮುತ್ತಲ ಬಿಡದಿ, ಹಾರೋಹಳ್ಳಿ, ದಾಬಸ್ಪೇಟೆ, ಶಿರಾ, ನೆಲಮಂಗಲ ವಯಾ ಮಾಗಡಿ ಮೂಲಕ ಹಾದು ಹೋಗುವ ಕುಣಿಗಲ್ ರಾಷ್ಟ್ರೀಯ ಹೆದ್ದಾರಿ ಸೇರಿ 5 ಜಾಗವನ್ನು ಬೃಹತ್ ಕೈಗಾರಿಕಾ ಸಚಿವಾಲಯ ಆಯ್ಕೆ ಮಾಡಿ ಸಚಿವ ಸಂಪುಟದ ಅನುಮೋದನೆ ಪಡೆದಿತ್ತು. ಅಂತಿಮವಾಗಿ ನೆಲಮಂಗಲ-ಕುಣಿಗಲ್ ರಾಷ್ಟ್ರೀಯ ಹೆದ್ದಾರಿ 75ರ ಜಾಗಕ್ಕೆ ಸಿಎಂ, ಡಿಸಿಎಂ ಇಬ್ಬರೂ ಸಹಮತ ಸೂಚಿಸಿದ ಬಳಿಕ ಸರ್ವೆ ಕಾರ್ಯ ನಡೆದಿದೆ.
ನಾನಾ ಯೋಜನೆಗಳು ಇಲ್ಲಿವೆ
ಸರ್ಕಾರ ಆಯ್ಕೆ ಮಾಡಿರುವ ಜಾಗದಲ್ಲಿಬೆಂಗಳೂರು -ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿಯಲ್ಲಿಯೇ ಬೆಂಗಳೂರು-ಹಾಸನ, ಕುಕ್ಕೆಸುಬ್ರಹ್ಮಣ್ಯ ಮಾರ್ಗವಾಗಿ ಮಂಗಳೂರಿನ ರೈಲ್ವೆ ಹಳಿಗಳಿವೆ. ಇದರ ಜತೆಗೆ ಸೋಲೂರನ್ನು ಉಪನಗರ ಮಾಡುವ ನಿಟ್ಟಿನಲ್ಲಿಟೌನ್ಶಿಪ್ಗೆ ಆಯ್ಕೆಯಾಗಿದೆ. ಸಂಸದರಾದ ಡಾ. ಸಿ.ಎನ್. ಮಂಜುನಾಥ್ ಪೆರಿಫೆರಲ್ ರಿಂಗ್ ರೋಡ್ ಮಾಡುವ ಸಂಬಂಧ ಈಗಾಗಲೇ ಇದೇ ಜಾಗವನ್ನು ಆಯ್ಕೆ ಮಾಡಿಸಿದ್ದಾರೆ. ಇದೇ ಮಾರ್ಗದಲ್ಲಿ ಹೇಮಾವತಿ ನೀರಿನ ಪೈಪ್ಲೈನ್ಗಳ ಕಾಮಗಾರಿ ನಡೆಯಬೇಕಿದೆ.
ಯೋಜನೆ ಕೈಬಿಡಲು ಮನವಿ
ನೆಲಮಂಗಲ- ಕುಣಿಗಲ್ ರಸ್ತೆಯಲ್ಲಿ ಪ್ರಸ್ತಾಪಿಸಿರುವ ಎರಡನೇ ವಿಮಾನ ನಿಲ್ದಾಣ ಸರ್ವೆ ಕಾರ್ಯದ ಕುರಿತು ಈಗಾಗಲೇ ಮಾಹಿತಿ ತರಿಸಿಕೊಂಡಿದ್ದೇನೆ. ಫಲವತ್ತಾದ ಭೂಮಿಯಾಗಿರುವುದರಿಂದ ನಮಗೆ ವಿಮಾನ ನಿಲ್ದಾಣದ ಅವಶ್ಯಕತೆಗಿಂತ ರೈತರ ಹಿತವೇ ಮುಖ್ಯ. ಹೀಗಾಗಿ ಈ ಭಾಗದಲ್ಲಿ ವಿಮಾನ ನಿಲ್ದಾಣ ಯೋಜನೆ ಕೈ ಬಿಡುವಂತೆ ಸಿಎಂ ಮತ್ತು ಡಿಸಿಎಂ ಅವರಿಗೆ ಮನವಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ನೆಲಮಂಗಲ ಶಾಸಕ ಎನ್. ಶ್ರೀನಿವಾಸ್ ತಿಳಿಸಿದ್ದಾರೆ.
ದೇಶ
ನವರಾತ್ರಿ ಸಮಯದಲ್ಲಿ ವಿಮಾನ ನಿಲ್ದಾಣಗಳಲ್ಲಿ ಭಯೋತ್ಪಾದಕ ದಾಳಿ ಎಚ್ಚರಿಕೆ – ಭದ್ರತೆ ಬಿಗಿ ಕ್ರಮ

ಭಾರತದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ನವರಾತ್ರಿಯ ವೇಳೆ ಭಯೋತ್ಪಾದಕ ದಾಳಿಯ ಅಪಾಯವಿರುವ ಬಗ್ಗೆ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಜಾರಿಯಲ್ಲಿದೆ.
ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ಆಗಸ್ಟ್ 4ರಂದು ಎಚ್ಚರಿಕೆ ಪ್ರಕಟಿಸಿ, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಭಯೋತ್ಪಾದನೆ ಅಥವಾ ಸಮಾಜ ವಿರೋಧಿ ಶಕ್ತಿಗಳಿಂದ ದಾಳಿ ಸಂಭವಿಸಬಹುದೆಂದು ಸೂಚಿಸಿದೆ.
🕵️ ಗುಪ್ತಚರ ಮೂಲದ ಮಹತ್ವದ ಎಚ್ಚರಿಕೆ:
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ದಾಳಿಗೆ ಸಿದ್ಧತೆ ನಡೆಸುತ್ತಿವೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳು, ಏರ್ಸ್ಟ್ರಿಪ್ಗಳು, ಹೆಲಿಪ್ಯಾಡ್ಗಳು ಮತ್ತು ತರಬೇತಿ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳಾಗಿ ಈ ಕೆಳಗಿನ ಕ್ರಮಗಳು ಜಾರಿಗೆ ಬಂದಿವೆ:
- ಸಿಬ್ಬಂದಿ ಮತ್ತು ಸಂದರ್ಶಕರ ಗುರುತಿನ ಪರಿಶೀಲನೆ
- ಸಿಸಿಟಿವಿ ಕಣ್ಗಾವಲು ಬಿಗಿತ
- ಸರಕು, ಪಾರ್ಸೆಲ್ ಮತ್ತು ಮೇಲ್ಗಳ ತಪಾಸಣೆ
- ಸ್ಥಳೀಯ ಪೊಲೀಸ್ ಮತ್ತು ಭದ್ರತಾ ಸಂಸ್ಥೆಗಳೊಂದಿಗೆ ಸಹಕಾರ
🇮🇳 ರಾಷ್ಟ್ರೀಯ ಭದ್ರತೆಗೆ ಒತ್ತು:
ದೆಹಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳು ಈ ಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಪ್ರಯಾಣಿಕರು ತಮ್ಮ ಗುರುತಿನ ದಾಖಲೆಗಳನ್ನು ಸಿದ್ಧವಾಗಿಡಬೇಕು. ತಪಾಸಣೆ ವಿಳಂಬದ ಸಾಧ್ಯತೆಯಿರುವುದರಿಂದ ಸಹಕಾರ ನೀಡುವಂತೆ BCAS ಮನವಿ ಮಾಡಿದೆ.
ದೇಶ
ಅಮೆರಿಕ-ರಷ್ಯಾ ವ್ಯವಹಾರ: ಭಾರತದ ಟೀಕೆಗೆ ಟ್ರಂಪ್ ನುಣುಚು ಪ್ರತಿಕ್ರಿಯೆ

ವಾಷಿಂಗ್ಟನ್: ರಷ್ಯಾದಿಂದ ಈಗಲೂ ವ್ಯವಹಾರ ನಡೆಸುತ್ತಿರುವ ಅಮೆರಿಕದ ಕುರಿತಾಗಿ ಭಾರತ ಮಾಡಿರುವ ಗಂಭೀರ ಆರೋಪಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನುಣುಚು ಪ್ರತಿಕ್ರಿಯೆ ನೀಡಿದ್ದಾರೆ.
ಭಾರತ ಆರೋಪಿಸಿದಂತೆ, ಅಮೆರಿಕ 2024ರಲ್ಲಿ 1.1 ಶತಕೋಟಿ ಡಾಲರ್ ಮೌಲ್ಯದ ರಸಗೊಬ್ಬರ, 878 ಮಿಲಿಯನ್ ಡಾಲರ್ ಮೌಲ್ಯದ ಪಲ್ಲಾಡಿಯಮ್ ಸೇರಿದಂತೆ ಹಲವು ಅಮೂಲ್ಯ ಲೋಹಗಳನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಯುರೇನಿಯಂ ಹೆಕ್ಸಾಫ್ಲೋರೈಡ್ನಂತಹ ಪರಮಾಣು ಉತ್ಪನ್ನಗಳ ಆಮದು ಕೂಡ ಮುಂದುವರಿದಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಟ್ರಂಪ್, “ನನಗೆ ಈ ವ್ಯಾಪಾರದ ವಿವರಗಳು ತಿಳಿದಿಲ್ಲ, ನಾನು ಪರಿಶೀಲನೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.
ಭಾರತದ ಖಡಕ್ ಪ್ರತಿಕ್ರಿಯೆ:
ಭಾರತ, ತನ್ನ ರಷ್ಯಾ ತೈಲ ಆಮದು ಬಗ್ಗೆ ಅಮೆರಿಕದ ಟೀಕೆಗೆ ಅಂಕಿ-ಅಂಶಗಳೊಂದಿಗೆ ತಿರುಗೇಟು ನೀಡಿದೆ. ಯುರೋಪ್ ದೇಶಗಳೇ ರಷ್ಯಾದಿಂದ ಭಾರಿ ಪ್ರಮಾಣದಲ್ಲಿ ಎಲ್ಎನ್ಜಿ, ರಸಗೊಬ್ಬರ, ಲೋಹಗಳನ್ನು ಆಮದು ಮಾಡಿಕೊಳ್ಳುತ್ತಿವೆ. 2024ರಲ್ಲಿ ಯುರೋಪಿಯನ್ ಒಕ್ಕೂಟವು 67.5 ಬಿಲಿಯನ್ ಯುರೋಗಳಷ್ಟು ಸರಕು ವ್ಯಾಪಾರ ಹಾಗೂ 17.2 ಬಿಲಿಯನ್ ಯುರೋಗಳಷ್ಟು ಸೇವಾ ವ್ಯಾಪಾರವನ್ನು ರಷ್ಯಾ ಜೊತೆ ನಡೆಸಿದೆ.
ಟ್ರಂಪ್ ಅವರ ಆರೋಪ:
ಟ್ರಂಪ್ ಹೇಳುವಂತೆ, ಭಾರತ ರಷ್ಯಾದ ತೈಲವನ್ನು ಖರೀದಿ ಮಾಡುತ್ತಿದ್ದು, ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಲಾಭಕ್ಕಾಗಿ ಮಾರಾಟ ಮಾಡುತ್ತಿದೆ. ಅವರು ಈ ಕಾರಣಕ್ಕಾಗಿ ಭಾರತದಿಂದ ಸಂಗ್ರಹಿಸಬೇಕಾದ ಸುಂಕವನ್ನು ಹೆಚ್ಚಿಸುವುದಾಗಿ ಹೇಳಿದ್ದಾರೆ.
ಭಾರತದ ನಿಲುವು:
ಭಾರತ, ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಕಚ್ಚಾ ತೈಲವನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಇಂಧನದ ದರಗಳನ್ನು ಜನತೆಗೆ ಕೈಗೆಟುಕುವಂತೆ ಇರಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಕ್ರೀಡೆ
ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!

ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.
ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.
ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.
ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ