ದೇಶ
ಇಂದಿರಾಗಾಂಧಿ ಅವರ ಆ ಒಂದು ಮಾತು: ಎಸ್.ಎಂ.ಕೃಷ್ಣ ಕಾಂಗ್ರೆಸ್ ಸೇರಿದ್ದೇ ರೋಚಕ
ಬೆಂಗಳೂರು: ಎಸ್.ಎಂ.ಕೃಷ್ಣ ಅವರು ಕಾಂಗ್ರೆಸ್ ಸೇರಿದ್ದು ಕೂಡ ರೋಚಕವಾಗಿದೆ. ಇಂದಿರಾ ಗಾಂಧಿ ಅವರೇ ಎಸ್.ಎಂ ಕೃಷ್ಣ ಅವರನ್ನು ಕಾಂಗ್ರೆಸ್ಗೆ ಸೇರ್ಪಡೆಯಾಗುವಂತೆ ಆಹ್ವಾನ ನೀಡಿದ್ದರು.
ಅಂದು ದೆಹಲಿಯಲ್ಲಿ ಪ್ರಧಾನಿ ಇಂದಿರಾಗಾಂಧಿ ನೇತೃತ್ವದಲ್ಲಿ ಸಭೆಯೊಂದು ಏರ್ಪಾಡಾಗಿತ್ತು. ಸಭೆ ಆರಂಭವಾಯಿತು. ಆದರೆ ಸಭೆಯ ಕಾರ್ಯಸೂಚಿಯನ್ನು ಓದಬೇಕಿದ್ದ ಇಂದಿರಾಗಾಂಧಿ ಅವರಿಗೆ ಗಂಟಲು ಕೈ ಕೊಟ್ಟಿತ್ತು. ಹೀಗಾಗಿ ಕಾರ್ಯಸೂಚಿಯನ್ನು ಓದಲಾಗದ ಇಂದಿರಾಗಾಂಧಿ ಮೌನವಾಗಿ ಸಭೆಯ ಸುತ್ತ ಕಣ್ಣಾಡಿಸಿದರು. ಸಭೆಯಲ್ಲಿ ಭಾಗವಹಿಸಿದ್ದ ಗಣ್ಯ ಅತಿಥಿಗಳು ತಮ್ಮತ್ತಲೇ ನೋಡುತ್ತಿದ್ದರು.
ಸಭೆಯಲ್ಲಿ ಮುಂದೇನು ಮಾಡಬೇಕು ಅಂತ ಇಂದಿರಾಗಾಂಧಿ ಯೋಚಿಸುತ್ತಿದ್ದಂತೆಯೇ ಸಭೆಯ ಕೊನೆಯಲ್ಲಿ ನಿಂತಿದ್ದ ಯುವ ಸಂಸದರೊಬ್ಬರು ಅವರ ಕಣ್ಣಿಗೆ ಕಾಣಿಸಿದ್ದರು. ಆ ಯುವ ಸಂಸದರ ಕತೆಯಾದರೂ ಅಷ್ಟೇ. ಅವರಿಗೆ ಸಭೆಯಲ್ಲಿ ಕೂರಲು ಕುರ್ಚಿ ಸಿಕ್ಕಿರಲಿಲ್ಲ. ಹೀಗಾಗಿ ಕುರ್ಚಿ ಹುಡುಕುತ್ತಿದ್ದ ಅವರಿಗೆ ಒಂದು ಕುರ್ಚಿ ಕಾಣಿಸಿತ್ತು. ಆದರೆ ಖಾಲಿ ಇದ್ದ ಕುರ್ಚಿ ಸ್ವತ: ಪ್ರಧಾನಿ ಇಂದಿರಾಗಾಂಧಿ ಅವರ ಪಕ್ಕದಲ್ಲಿತ್ತು. ಹಾಗಂತಲೇ ಮುಂದೇನು ಮಾಡಬೇಕು ಎನ್ನುವಂತೆ ಅವರು ಇಂದಿರಾ ಗಾಂಧಿ ಕಡೆ ನೋಡಿದ್ದರು. ಆ ಕ್ಷಣದಲ್ಲಿ ಪ್ರಧಾನಿ ಇಂದಿರಾ ಮತ್ತು ಆ ಯುವ ಸಂಸದರ ಕಣ್ಣು ಪರಸ್ಪರ ಸಂಧಿಸಿದವು. ಹೀಗೆ ಪರಸ್ಪರ ಒಬ್ಬರನ್ನೊಬ್ಬರು ನೋಡುತ್ತಿದ್ದಂತೆಯೇ ಒಂದು ವಿಸ್ಮಯ ಸಂಭವಿಸಿತು.
ಅದು ಏನೆಂದರೆ ಇಂದಿರಾ ಗಾಂಧಿ ತಕ್ಷಣವೇ ಅ ಯುವ ಸಂಸದರನ್ನು ತಮ್ಮ ಬಳಿ ಬರುವಂತೆ ಸೂಚಿಸಿದ್ದರು. ಸ್ವತ: ಪ್ರಧಾನಿಯೇ ತಮ್ಮ ಬಳಿ ಬರುವಂತೆ ಸೂಚಿಸಿದಾಗ ಸಂಸದ ಬೆರಗಾಗಿದ್ದಾರಾದರೂ ಅದೇ ಅಮಯಕ್ಕೆ ಪುಳಕಿತರಾದರು. ಹೀಗಾಗಿ ಅದೇ ಭಾವದಲ್ಲಿ ಇಂದಿರಾ ಹತ್ತಿರ ಹೋದಾಗ ಅವರು ತಮ್ಮ ಪಕ್ಕದ ಕುರ್ಚಿಯಲ್ಲಿ ಕೂರುವಂತೆ ಸೂಚಿಸಿದ್ದರು. ಹೀಗೆ ತಮ್ಮ ಪಕ್ಕ ಕುಳಿತ ಸಂಸದರ ಮುಂದೆ, ತಮ್ಮ ಮುಂದಿದ್ದ ಕಾರ್ಯಸೂಚಿಯನ್ನು ತಳ್ಳಿದ ಇಂದಿರಾ ಅವರು ಸಭೆಯಲ್ಲಿ ಅದನ್ನು ಓದುವಂತೆ, ಸಭೆಯ ನಡಾವಳಿಗಳನ್ನು ನೋಡಿಕೊಳ್ಳಲು ಸೂಚಿಸಿದ್ದರು.
ದೇಶದ ಪ್ರಧಾನಿ ತಮಗೆ ನೀಡಿದ ಈ ಜವಾಬ್ದಾರಿಯನ್ನು ಆ ಸಂಸದರು ಎಷ್ಟು ಚೆನ್ನಾಗಿ ನಿರ್ವಹಿಸಿದ್ದರೆಂದರೆ ಅವರ ಅಸ್ಖಲಿತ ಭಾಷೆ ಇಂದಿರಾಗಾಂಧಿ ಸೇರಿದಂತೆ ಇಡೀ ಸಭೆಯನ್ನು ಮಂತ್ರಮುಗ್ಧಗೊಳಿಸಿತ್ತು. ಸಭೆ ಮುಗಿದ ನಂತರ ಆ ಯುವ ಸಂಸದರನ್ನು ಮೆಚ್ಚುಗೆಯ ಕಣ್ಣುಗಳಿಂದ ನೋಡಿದ ಇಂದಿರಾಗಾಂಧಿ ತಮ್ಮ ಕೈಯಲ್ಲಿದ್ದ ಒಂದು ಚೀಟಿಯನ್ನು ಕೊಟ್ಟಿದ್ದರು.
ನೋಡಿದರೆ ಅದರಲ್ಲಿ ‘ಕಮ್ ಅಂಡ್ ಮೀಟ್ ಮೀ’ ಅಂತ ಆಹ್ವಾನ ಇತ್ತು. ಹೀಗೆ ತಮ್ಮನ್ನು ಭೇಟಿ ಮಾಡಲು ಖುದ್ದು ಪ್ರಧಾನಿಯೇ ಆಹ್ವಾನ ನೀಡಿದ್ದಾರೆಂದರೆ ಸುಮ್ಮನಿರಲು ಸಾಧ್ಯವೇ?. ಹಾಗಾಗಿ, ಆ ಸಂಸದರು ನಿಗದಿತ ಸಮಯಕ್ಕೆ ಇಂದಿರಾ ಅವರ ಚೇಂಬರಿಗೆ ಹೋಗಿ ಭೇಟಿ ಮಾಡಿದ್ದರು. ಅಷ್ಟೊತ್ತಿಗಾಗಲೇ ಗಂಟಲು ಬೇನೆಯಿಂದ ಸ್ವಲ್ಪ ರಿಲೀಫ್ ಆಗಿದ್ದ ಇಂದಿರಾ ಯುವ ಸಂಸದರ ಪೂರ್ವಾಪರವನ್ನು ವಿಚಾರಿಸಿದ್ದರು.
ಆಗ ಆ ಸಂಸದರು, ಮೇಡಂ, ನನ್ನ ಹೆಸರು ಎಸ್.ಎಂ. ಕೃಷ್ಣ. ಕರ್ನಾಟಕದ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪ್ರಜಾ ಸೋಷಲಿಸ್ಟ್ ಪಾರ್ಟಿಯ ಪ್ರತಿನಿಧಿಯಾಗಿ ಸಂಸತ್ತಿಗೆ ಅಯ್ಕೆಯಾಗಿದ್ದೇನೆ ಅಂತ ವಿವರಿಸಿದ್ದರು. ಆಗೆಲ್ಲ ತುಂಬ ವಿಶ್ವಾಸದಿಂದ ಮಾತನಾಡಿದ ಇಂದಿರಾಗಾಂಧಿ ಅವರು, ನೀವು ಪ್ರಜಾ ಸೋಷಲಿಸ್ಟ್ ಪಾರ್ಟಿಯವರು ಏಕೆ ಹೋರಾಡುತ್ತಿದ್ದೀರೋ? ಅದನ್ನು ಜಾರಿಗೊಳಿಸಲೆಂದೇ ನಮ್ಮ ಪಕ್ಷ, ಸರ್ಕಾರ ಹೋರಾಡುತ್ತಿದೆ. ಹೀಗಾಗಿ ನೀವೆಲ್ಲ ಪ್ರತ್ಯೇಕವಾಗಿರುವ ಬದಲು ಕಾಂಗ್ರೆಸ್ ಪಕ್ಷಕ್ಕೇ ಬನ್ನಿ ಅಂತ ಆಹ್ವಾನ ನೀಡಿದ್ದರು. ಹೀಗೆ ಪ್ರಧಾನಿ ನೀಡಿದ ಆಹ್ವಾನದ ಬಗ್ಗೆ ಪ್ರಜಾ ಸೋಷಲಿಸ್ಟ್ ಪಾರ್ಟಿಯ ಸಭೆಯಲ್ಲಿ ವಿವರಿಸಿದ್ದಾರಾದರೂ ಸಭೆ ಅದನ್ನು ಒಪ್ಪಲಿಲ್ಲ. ಹೀಗಾಗಿ ತಮ್ಮ ಪಕ್ಷದ ನಿಲುವನ್ನು ಕೃಷ್ಣ ಅವರು ಇಂದಿರಾಗೆ ಹೇಳಿದ್ದರು. ಯಾರೂ ಬರದಿದ್ದರೇನು ನೀವಾದರೂ ಬನ್ನಿ. ನೀವು ಬೆಳೆಯುವ ದಾರಿ ದೊಡ್ಡದಿದೆ ಎಂದರಂತೆ.
ಇಂದಿರಾಗಾಂಧಿ ಅವರ ಈ ವಿಶ್ವಾಸಪೂರ್ವಕ ಆಹ್ವಾನವನ್ನು ತಿರಸ್ಕರಿಸಲು ಎಸ್.ಎಂ. ಕೃಷ್ಣ ಅವರಿಗೆ ಸಾಧ್ಯವಾಗಲೇ ಇಲ್ಲ. ಹೀಗಾಗಿ ಒಂದು ದಿನ ಅವರು ಕಾಂಗ್ರೆಸ್ ಹಡಗು ಹತ್ತಿದರು. ಇಂದಿರಾಗಾಂಧಿ ಹೇಳಿದಂತೆ ತಮ್ಮ ಬದುಕಿನಲ್ಲಿ ಬಹುದೊಡ್ಡ ಹಾದಿಯನ್ನು ಕೃಷ್ಣ ಅವರು ಕ್ರಮಿಸಿದರು. ರಾಜ್ಯದ ಚುಕ್ಕಾಣಿ ಹಿಡಿದು ಕರ್ನಾಟಕ ತಿರುಗಿ ನೋಡುವಂತೆ ಮಾಡಿದ ಹೆಗ್ಗಳಿಕೆ ಎಸ್.ಎಂ.ಕೃಷ್ಣ ಅವರದ್ದು.
ದೇಶ
K. Govindraj ಸೇರಿ ಗಣ್ಯರಿಗೆ ಗೌರವ ಡಾಕ್ಟರೇಟ್ – ಬಿಸಿಯು ಘಟಿಕೋತ್ಸವ ಸಂಭ್ರಮ
ಬೆಂಗಳೂರು: Bengaluru City University (ಬಿಸಿಯು) 5ನೇ ಘಟಿಕೋತ್ಸವ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಕುಲಾಧಿಪತಿಗಳಾದ Thawar Chand Gehlot ಚಾಲನೆ ನೀಡಿದರು.
ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಈ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ Dr. Binay Kumar Das, Defence Research and Development Organisation (ಡಿಆರ್ಡಿಒ) ಮಹಾ ನಿರ್ದೇಶಕರು (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಸಿಸ್ಟಮ್ಸ್) ಭಾಗವಹಿಸಿದ್ದರು.
ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 6 ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಸಂಗೀತ ನಿರ್ದೇಶಕ Arjun Janya, ಕ್ರಿಕೆಟರ್ Venkatesh Prasad, ಶಿಕ್ಷಣ ತಜ್ಞ T. K. Narayanappa, ಎಂಎಲ್ಸಿ K. Govindaraj, ಶಿಕ್ಷಣ ಕ್ಷೇತ್ರದ Mohan Alva ಹಾಗೂ ಕೈಗಾರಿಕೋದ್ಯಮಿ Bava Mohammed Farooq ಅವರಿಗೆ ರಾಜ್ಯಪಾಲರು ಗೌರವಿಸಿದರು.
ಉಪ ಚುನಾವಣೆ ಪ್ರಚಾರದ ಹಿನ್ನೆಲೆ, ಉನ್ನತ ಶಿಕ್ಷಣ ಸಚಿವ Dr. C. N. Ashwath Narayan ಗೈರಾಗಿದ್ದರು.
ಘಟಿಕೋತ್ಸವದಲ್ಲಿ 73 ಪ್ರಥಮ ರ್ಯಾಂಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಪ್ರಮಾಣಪತ್ರ ಮತ್ತು ನಗದು ಬಹುಮಾನ ವಿತರಿಸಲಾಯಿತು. ಒಟ್ಟು 37,370 ವಿದ್ಯಾರ್ಥಿಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರದಾನವಾಗಿದ್ದು, 23 ವಿದ್ಯಾರ್ಥಿಗಳಿಗೆ ಪಿಎಚ್ಡಿ ಪದವಿ ನೀಡಲಾಯಿತು.
ವಿಶೇಷವಾಗಿ, ಸ್ನೇಹಾ ಟಿ (ಎಂಎಸ್ಸಿ ರಸಾಯನಶಾಸ್ತ್ರ) 4 ಚಿನ್ನದ ಪದಕಗಳನ್ನು ಪಡೆದು ಸಾಧನೆ ಮಾಡಿದ್ದು, ಅಭಿಷೇಕ್ ಶ್ರೀರಾಮ್ (ಬಿಕಾಂ) 3 ಚಿನ್ನದ ಪದಕ, ದಿವ್ಯಶ್ರೀ ಎಸ್ (ಬಿಬಿಎ) 3 ಚಿನ್ನದ ಪದಕ ಪಡೆದು ಗಮನಸೆಳೆದಿದ್ದಾರೆ.
ಗೌರವ ಡಾಕ್ಟರೇಟ್ ಪಡೆದ ಬಳಿಕ Arjun Janya ಅವರು ಮಾತನಾಡಿ, ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಕೃತಜ್ಞತೆ ಸಲ್ಲಿಸಿದರು.
ಚುನಾವಣೆ
TN 2026 ಟೀಸರ್ಗೆ ರಾಜಕೀಯ ಕಿಚ್ಚು! ವಿಜಯ್ ಟಾರ್ಗೆಟ್ ಆರೋಪ – ತಮಿಳುನಾಡಿನಲ್ಲಿ ಬಿಗುವಿನ ವಾತಾವರಣ
ಚೆನ್ನೈ: ಮುಂದಿನ ವಾರ ಬಿಡುಗಡೆಯಾಗಲಿರುವ ತಮಿಳು ಸಿನಿಮಾ TN 2026 – ತಂಗೈ ನಚ್ಚಥಿರಂ ಟೀಸರ್ ಏಪ್ರಿಲ್ 2ರಂದು ಬಿಡುಗಡೆಯಾದ ಬಳಿಕ ಭಾರೀ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಟೀಸರ್ನಲ್ಲಿ ನಟ Nataraj (Natti) ಅಭಿನಯಿಸಿರುವ “ಗೋಲ್ಡನ್ ಸ್ಟಾರ್ ಗುಲ್ಕಂದ್ ಕುಮಾರ್” ಎಂಬ ಪಾತ್ರ ರಾಜಕೀಯಕ್ಕೆ ಪ್ರವೇಶಿಸುವುದನ್ನು ತೋರಿಸಲಾಗಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗಿದೆ.
ಟೀಸರ್ ವೈರಲ್ ಆದ ತಕ್ಷಣ, Tamilaga Vettri Kazhagam (ಟಿವಿಕೆ) ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ನಟ Vijay ಅವರನ್ನು ಗುರಿಯಾಗಿಸಿಕೊಂಡು ಟೀಸರ್ ರೂಪಿಸಲಾಗಿದೆ ಎಂಬುದು ಅವರ ಆರೋಪವಾಗಿದೆ.
ಟೀಸರ್ನಲ್ಲಿ ಗುಲ್ಕಂದ್ ಕುಮಾರ್ ಪಾತ್ರವು ಬಿಳಿ ಶರ್ಟ್ ಮತ್ತು ಖಾಕಿ ಪ್ಯಾಂಟ್ ಧರಿಸಿ, ವಿಜಯ್ ಅವರಂತೆಯೇ ‘ಸಾಲ್ಟ್ ಅಂಡ್ ಪೆಪ್ಪರ್’ ಲುಕ್ನಲ್ಲಿ ಕಾಣಿಸಿಕೊಂಡಿದ್ದು, ಜೊತೆಗೆ ಅವರ ನಡಿಗೆ ಮತ್ತು ಜನರತ್ತ ಕೈ ಬೀಸುವ ಶೈಲಿಯನ್ನು ಅನುಕರಿಸಿರುವುದು ವಿವಾದಕ್ಕೆ ಪ್ರಮುಖ ಕಾರಣವಾಗಿದೆ. ಅಲ್ಲದೆ, ನಟ Redin Kingsley ಅವರ ಪಾತ್ರವೊಂದು ವೇದಿಕೆಯಲ್ಲಿ “ಹೇ ಮೂವಿ-ಬಾಯ್…” ಎಂದು ಗೇಲಿ ಮಾಡುವ ಸಂಭಾಷಣೆ ಕೂಡ ಟೀಕೆಗೆ ಗುರಿಯಾಗಿದೆ.
ಟೀಸರ್ ಕೊನೆಯಲ್ಲಿ ಕೇಳಿಬರುವ “ಓಂ ಶಕ್ತಿ ಪರಾಶಕ್ತಿ” ಘೋಷಣೆ ಕೂಡ ವಿಜಯ್ ಇತ್ತೀಚೆಗೆ ರಾಜಕೀಯ ವೇದಿಕೆಯಲ್ಲಿ ಬಳಸಿದ ನುಡಿಗಟ್ಟನ್ನು ಹೋಲುತ್ತದೆ ಎನ್ನಲಾಗುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಟಿವಿಕೆ ನಾಯಕ Aadhav Arjun, “ಇದು ವಿಜಯ್ ವರ್ಚಸ್ಸಿಗೆ ಧಕ್ಕೆ ತರಲು Dravida Munnetra Kazhagam (ಡಿಎಂಕೆ) ಮತ್ತು ಬಿಜೆಪಿ ಜಂಟಿಯಾಗಿ ನಡೆಸಿದ ಪಿತೂರಿ” ಎಂದು ಆರೋಪಿಸಿದ್ದಾರೆ. ಜನರು ಇಂತಹ ಚಿತ್ರಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದೂ ಅವರು ಕಿಡಿಕಾರಿದ್ದಾರೆ.
Umapathy Ramaiah ನಿರ್ದೇಶನದ ಈ ಚಿತ್ರದಲ್ಲಿ Thambi Ramaiah, M. S. Bhaskar, Ilavarasu, Yashika Aannand ಸೇರಿದಂತೆ ಹಲವು ನಟರು ಅಭಿನಯಿಸಿದ್ದಾರೆ. ಏಪ್ರಿಲ್ 10ರಂದು ಬಿಡುಗಡೆಯಾಗಲಿರುವ ಈ ಚಿತ್ರ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತದೆಯೇ ಎಂಬ ಕುತೂಹಲ ಹೆಚ್ಚಾಗಿದೆ.
ದೇಶ
ಹಳೆಯ ವಾಹನಗಳಿಗೆ HSRP ಕಡ್ಡಾಯವೇ? ಸಾರಿಗೆ ಇಲಾಖೆಯ ಸ್ಪಷ್ಟನೆ ಏನು ಗೊತ್ತಾ?
ಬೆಂಗಳೂರು: ಹಳೆಯ ವಾಹನಗಳಿಗೆ ಹೈ ಸಿಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಕೆ ಕಡ್ಡಾಯವಲ್ಲ ಎಂಬ ಸುದ್ದಿಗಳು ಇತ್ತೀಚೆಗೆ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದರೂ, ಇದಕ್ಕೆ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ಇಂತಹ ಸುದ್ದಿಗಳು ಸುಳ್ಳು ಎಂದು ಹೇಳಿ ಸಾರ್ವಜನಿಕರು ಯಾವುದೇ ವದಂತಿಗಳನ್ನು ನಂಬಬಾರದು ಎಂದು ಮನವಿ ಮಾಡಿದೆ.
ಕೇಂದ್ರ ಮೋಟಾರು ವಾಹನಗಳ ನಿಯಮಗಳು 1989ರ ನಿಯಮ 50ರಡಿ, ಕೇಂದ್ರ ಸರ್ಕಾರವು 2018 ಡಿಸೆಂಬರ್ 4ರಂದು ಅಧಿಸೂಚನೆ ಹೊರಡಿಸಿದ್ದು, 2019 ಏಪ್ರಿಲ್ 1ಕ್ಕಿಂತ ಮುಂಚಿತವಾಗಿ ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ಈ ನಿಯಮವನ್ನು ಅನುಸರಿಸಿ, ಕರ್ನಾಟಕ ಸರ್ಕಾರವು 2023 ಆಗಸ್ಟ್ 17ರಂದು ಅಧಿಸೂಚನೆ ಹೊರಡಿಸಿ ರಾಜ್ಯದಲ್ಲಿಯೂ ಇದೇ ನಿಯಮವನ್ನು ಜಾರಿಗೆ ತಂದಿದೆ.
ಇದಕ್ಕೂ ನಡುವೆ, HSRP ಅಳವಡಿಕೆ ಸಂಬಂಧ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಸರ್ಕಾರವು ಯಾವುದೇ ತರಾತುರಿ ಕ್ರಮ ಕೈಗೊಳ್ಳಬಾರದು ಎಂದು ಸೂಚಿಸಿದೆ. ಆದರೆ, ಈ ಆದೇಶವು HSRP ಕಡ್ಡಾಯ ಆದೇಶವನ್ನು ರದ್ದುಪಡಿಸುವುದಿಲ್ಲ ಎಂಬುದು ಮುಖ್ಯ.
ಸಾರಿಗೆ ಇಲಾಖೆಯ ಪ್ರಕಾರ, ಹೈಕೋರ್ಟ್ ಆದೇಶದಿಂದ ಹೊಸ ಕ್ರಮಗಳನ್ನು ಕೈಗೊಳ್ಳಲು ಅಡ್ಡಿಯಿದ್ದರೂ, HSRP ಅಳವಡಿಕೆ ಕುರಿತ ಅಧಿಸೂಚನೆ ಇನ್ನೂ ಜಾರಿಯಲ್ಲಿಯೇ ಇದೆ. ಆದ್ದರಿಂದ, ಸಾರ್ವಜನಿಕರು ತಮ್ಮ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ವದಂತಿಗಳಿಂದ ಗೊಂದಲಕ್ಕೀಡಾಗಬಾರದು ಎಂದು ಸಾರಿಗೆ ಇಲಾಖೆ ಮತ್ತೊಮ್ಮೆ ಸ್ಪಷ್ಟಪಡಿಸಿದೆ.
-
ದೇಶ11 hours agoಹಳೆಯ ವಾಹನಗಳಿಗೆ HSRP ಕಡ್ಡಾಯವೇ? ಸಾರಿಗೆ ಇಲಾಖೆಯ ಸ್ಪಷ್ಟನೆ ಏನು ಗೊತ್ತಾ?
-
ಚುನಾವಣೆ21 hours ago“ನಾಲ್ಕು ಮದುವೆಗೆ ಬ್ರೇಕ್” – ಶಾ ಘೋಷಣೆ ಸಂಚಲನ
-
ಆರೋಗ್ಯ15 hours agoಮೂತ್ರಪಿಂಡದ ಕಲ್ಲು: ಮೂತ್ರಕೋಶದಲ್ಲಿ ಸಿಲುಕಿದರೆ ಏನಾಗುತ್ತದೆ?
-
ದೇಶ17 hours agoಪ್ರಚಾರ ವೇಳೆ ಕಾರು ತಡೆದು ಹಲ್ಲೆ: ತರೂರ್ ಬೆಂಗಾವಲು ಮೇಲೆ ದಾಂಧಲೆ
-
ದೇಶ16 hours agoಜಮೀರ್ ಅಹ್ಮದ್ಗೆ ಎಐಸಿಸಿಯಲ್ಲಿ ಮಹತ್ವದ ಹುದ್ದೆ!
-
ದೇಶ13 hours agoಕಾಂಗ್ರೆಸ್ ಒಳಜಗಳ ಬಯಲು: ರಾಹುಲ್ ನಿಲುವಿಗೆ ಹಿರಿಯರ ವಿರೋಧ
-
ಚುನಾವಣೆ11 hours agoTN 2026 ಟೀಸರ್ಗೆ ರಾಜಕೀಯ ಕಿಚ್ಚು! ವಿಜಯ್ ಟಾರ್ಗೆಟ್ ಆರೋಪ – ತಮಿಳುನಾಡಿನಲ್ಲಿ ಬಿಗುವಿನ ವಾತಾವರಣ
-
ದೇಶ12 hours agoಇರಾನ್-ಅಮೆರಿಕಾ ಮಾತುಕತೆ ವಿಫಲ: ಪಾಕಿಸ್ತಾನಕ್ಕೆ ಮುಖಭಂಗ!
