Connect with us

ಕ್ರೀಡೆ

ಟೀಂ ಇಂಡಿಯಾದಲ್ಲಿ ಒಳಜಗಳ..!? ರೋಹಿತ್‌ ಶರ್ಮಾ-ಶಮಿ ನಡುವೆ ಮಾತಿನ ಚಕಮಕಿ.. ದಿಗ್ಗಜರ ಕಿತ್ತಾಟಕ್ಕೆ ಕಾರಣವೇನು?

Rohit Sharma and Mohammed Shami: ಭಾರತ ತಂಡದಲ್ಲಿ ಮೊಹಮ್ಮದ್ ಶಮಿ ಮತ್ತೆ ಯಾವಾಗ ಆಡುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಮನೆಮಾಡಿದೆ. ಕಳೆದ ಕೆಲವು ತಿಂಗಳಿಂದ ಗಾಯದಿಂದ ಬಳಲುತ್ತಿರುವ ಶಮಿ ತಂಡಕ್ಕೆ ಮರುಪ್ರವೇಶಿಸುವ ಸಾಧ್ಯತೆ ಹೆಚ್ಚಿದೆ ಎಂಬ ವರದಿಗಳು ಬಂದಿದ್ದವು. ಶಮಿ ನ್ಯೂಜಿಲೆಂಡ್ ಟೆಸ್ಟ್‌ನಲ್ಲಿ ಕಾಣಿಸಿಕೊಳ್ಳುತ್ತಾರೆ ಎಂದು ಹೇಳಲಾಗಿತ್ತು. ಆದರೆ ಅಲ್ಲಿಯೂ ಆಡಿರಲಿಲ್ಲ. ಆ ನಂತರ ರಣಜಿಯಲ್ಲಿ ಬಂಗಾಳ ತಂಡದ ಪರವಾಗಿ ಆಡಿದರು.

ಪಾದದ ಗಾಯದಿಂದಾಗಿ ಶಮಿ ಈ ವರ್ಷ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಗೊತ್ತೇ ಇದೆ. ಇದರಿಂದಾಗಿ ಐಪಿಎಲ್ 2024 ಮತ್ತು ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಕೊನೆಯ ಬಾರಿಗೆ 2023ರ ಏಕದಿನ ವಿಶ್ವಕಪ್‌ನಲ್ಲಿ ಶಮಿ ಆಡಿದ್ದರು. ಆ ಬಳಿಕ ಕಳೆದ ತಿಂಗಳಷ್ಟೇ ಮತ್ತೆ ಬೌಲಿಂಗ್ ಆರಂಭಿಸಿದ್ದರು. ರಣಜಿ ಟ್ರೋಫಿಯಲ್ಲಿ ಅವರು ಮಧ್ಯಪ್ರದೇಶ ವಿರುದ್ಧ 7 ವಿಕೆಟ್ ಪಡೆದರು. ಅದರ ಬೆನ್ನಲ್ಲೇ ಪ್ರಸ್ತುತ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿದ್ದಾರೆ.

2ನೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 10 ವಿಕೆಟ್‌ಗಳ ಸೋಲಿನ ನಂತರ ನಾಯಕ ರೋಹಿತ್ ಶರ್ಮಾ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದರು. ಇದೇ ಸಂದರ್ಭದಲ್ಲಿ ಮೊಹಮ್ಮದ್ ಶಮಿ ಬಗ್ಗೆ ಪ್ರಶ್ನೆ ಕೇಳಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ರೋಹಿತ್, “ಶಮಿಗಾಗಿ ಯಾವಗಲೂ ಟೀಂ ಇಂಡಿಯಾದ ಬಾಗಿಲು ತೆರೆದೇ ಇರುತ್ತದೆ. ಅವರ ಮೇಲೆ ಕೊಂಚ ನಿಗಾ ಇಟ್ಟಿದ್ದೇವೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಆಡುವಾಗ ಕೂಡ ಅವರ ಮೊಣಕಾಲುಗಳಲ್ಲಿ ಸ್ವಲ್ಪ ಊತ ಇತ್ತು” ಎಂದಿದ್ದರು.

ಇದೇ ಕಾರಣದಿಂದ ಟೆಸ್ಟ್‌ ಆಡಲು ಸಾಧ್ಯವಾಗಿರಲಿಲ್ಲ. ಅವರು ತುಂಬಾ ಜಾಗರೂಕತೆ ಅನುಸರಿಸಬೇಕೆಂದು ನಾವು ಇಚ್ಛಿಸುತ್ತೇವೆ. ಇಲ್ಲಿಗೆ ಬಂದು ಗಾಯವನ್ನು ದೊಡ್ಡದಾಗಿ ಮಾಡೋದು ನಮಗೆ ಇಷ್ಟವಿಲ್ಲ. ಶಮಿ 100 ಪ್ರತಿಶತ ಚೇತರಿಸಿಕೊಳ್ಳಲು ನಾವು ಕಾಯುತ್ತಿದ್ದೇವೆ. ಗಾಯಗೊಂಡು ಹಿಂತಿರುಗುತ್ತಿರುವ ಅವರನ್ನು ಇಲ್ಲಿಗೆ ಕರೆತಂದು ಹೆಚ್ಚಿನ ಕೆಲಸದ ಹೊರೆ ನೀಡಿ ಒತ್ತಡಕ್ಕೆ ಒಳಪಡಿಸುವುದು ನಮಗೆ ಇಷ್ಟವಿಲ್ಲ. ವೈದ್ಯಕೀಯ ತಂಡ ಅವರ ಮೇಲೆ ನಿಗಾ ಇರಿಸಿದೆ. ಭಾರತ ತಂಡದ ಪ್ರದರ್ಶನವನ್ನೂ ಅವರು ನೋಡಿಕೊಳ್ಳುತ್ತಾರೆ. ಸಂಪೂರ್ಣ ಚೇತರಿಸಿಕೊಂಡ ನಂತರ ಯಾವಾಗ ಬೇಕಾದರೂ ಬಂದು ಆಡಬಹುದು” ಎಂದು ರೋಹಿತ್ ಹೇಳಿದ್ದಾರೆ.

ಆದರೆ, ರೋಹಿತ್ ಮತ್ತು ಶಮಿ ನಡುವೆ ವಾಗ್ವಾದ ನಡೆದಿದೆ ಎನ್ನಲಾಗಿದೆ. ಕಳೆದ ತಿಂಗಳು ಬೆಂಗಳೂರಿನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಭಾರತದ ಮೊದಲ ಟೆಸ್ಟ್ ಪಂದ್ಯದ ವೇಳೆ ರೋಹಿತ್ ಶಮಿ ಮೊಣಕಾಲು ಊದಿಕೊಂಡಿದ್ದನ್ನು ಬಹಿರಂಗಪಡಿಸಿದ್ದರು. ನ್ಯೂಜಿಲೆಂಡ್ ಸರಣಿ ಆರಂಭಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ರೋಹಿತ್ ಶರ್ಮಾ, ಶಮಿ ಈ ಸರಣಿಗೆ ಅಥವಾ ಆಸ್ಟ್ರೇಲಿಯಾ ಸರಣಿಗೆ ಸಂಪೂರ್ಣ ಫಿಟ್ ಆಗುತ್ತಾರಾ ಎಂದು ಹೇಳಲು ಸಾಧ್ಯವಿಲ್ಲ.ಇದು ತುಂಬಾ ಕಷ್ಟದ ವಿಷಯ. ಶಮಿ ಮತ್ತೊಮ್ಮೆ ಗಾಯಗೊಂಡಿದ್ದಾರೆ. ಅವನ ಮೊಣಕಾಲಿನಲ್ಲಿ ಊತವಿದೆ ಚೇತರಿಸಿಕೊಳ್ಳುತ್ತಿದ್ದಾನೆ.” ಎಂದಿದ್ದರು.

ಆದರೆ ಆ ಸಮಯದಲ್ಲಿ ಅವರು ಸಂಪೂರ್ಣವಾಗಿ ಫಿಟ್ ಆಗಿದ್ದರು ಮತ್ತು ಆಡಲು ಸಿದ್ಧರಾಗಿದ್ದರು ಎಂದು ಶಮಿ ರೋಹಿತ್‌ಗೆ ಹೇಳಿದ್ದರಂತೆ. ಆದರೆ ಇದನ್ನು ರೋಹಿತ್ ಗಮನಿಸದೆ, ಶಮಿಗೆ ಸಮಸ್ಯೆಯಿದೆ ಎಂಬುದು ತಿಳಿದುಬಂದಿಲ್ಲ.

ಆಸ್ಟ್ರೇಲಿಯಾ ಸರಣಿಯಲ್ಲಿ ಶಮಿ ಆಡುತ್ತಾರಾ?
ವರದಿಯ ಪ್ರಕಾರ, ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಶಮಿ ಅವರನ್ನು ಸೇರಿಸಿಕೊಳ್ಳುವ ಬಗ್ಗೆ ಬಿಸಿಸಿಐ ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಶಮಿ ಆಸ್ಟ್ರೇಲಿಯಕ್ಕೆ ಹೋಗುವ ಸಾಧ್ಯತೆಯಿದ್ದರೂ, ಅವರು ಪ್ರಸ್ತುತ SMAT ನಲ್ಲಿ ಬಂಗಾಳದ ಪರವಾಗಿ ಆಡುತ್ತಿದ್ದಾರೆ. ಬಿಸಿಸಿಐ ಅವರಿಗೆ ಇನ್ನೂ ಅನುಮತಿ ನೀಡಿಲ್ಲ. ಎಲ್ಲರೂ ಎನ್‌ಸಿಎಯಿಂದ ಅಂತಿಮ ಅನುಮತಿಗಾಗಿ ಕಾಯುತ್ತಿದ್ದಾರೆ. ಒಂದು ವೇಳೆ ಶಮಿ ಆಸ್ಟ್ರೇಲಿಯಕ್ಕೆ ಬಂದರೂ 3ನೇ ಟೆಸ್ಟ್ ನಲ್ಲಿ ಆಡಲು ಅವಕಾಶವಿಲ್ಲ. ಬದಲಾಗಿ 4 ಮತ್ತು 5ನೇ ಟೆಸ್ಟ್ ನಲ್ಲಿ ಆಡುವ ಅವಕಾಶ ಪಡೆಯಬಹುದು.

ಕ್ರೀಡೆ

ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!

ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.

ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್‌ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.

ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.

ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.

Continue Reading

ಕ್ರೀಡೆ

ಭಾರತೀಯ ತಂಡದ ಕೋಚ್ ಗೌತಮ್ ಗಂಭೀರ್ ವಿರುದ್ಧ ಟೀಕೆ, ಬಿಸಿಸಿಐ ಸಹಾಯಕ ಕೋಚ್ ಮಾರ್ನೆ ಮಾರ್ಕೆಲ್-ಟೆನ್ ಡೊಶ್ಕಾಟೆ ಬದಲಾವಣೆ ಸಾಧ್ಯತೆ

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಕೋಚ್ ಗೌತಮ್ ಗಂಭೀರ್ ಅವರ ಕೋಚಿಂಗ್ ಶೈಲಿಯನ್ನು ಮಾಜಿ ಕ್ರಿಕೆಟಿಗರು ಸೇರಿದಂತೆ ಸುನಿಲ್ ಗವಾಸ್ಕರ್, ರಿಕಿ ಪಾಂಟಿಂಗ್ ಸೇರಿದಂತೆ ಹಲವು ಹಿರಿಯರು ಭಾರೀ ಟೀಕೆ ಮಾಡಿದ್ದಾರೆ. ಈ ಟೀಕೆಗಳಿಗೆ ಸಂಬಂಧಿಸಿ, ಗಂಭೀರ್ ಮನವಿ ಮಾಡಿಕೊಂಡ ಸಹಾಯಕ ಕೋಚ್‌ಗಳಾದ ಮಾರ್ನೆ ಮಾರ್ಕೆಲ್ (ಬೌಲಿಂಗ್ ಕೋಚ್) ಮತ್ತು ರ್ಯಾನ್ ಟೆನ್ ಡೊಶ್ಕಾಟೆ ಶೀಘ್ರದಲ್ಲೇ ತಮ್ಮ ಹುದ್ದೆಯಿಂದ ವಜಾಗೊಳ್ಳುವ ಸಾಧ್ಯತೆ ಇದೆ ಎಂದು ಮಾಧ್ಯಮ ವರದಿಗಳು ಸೂಚಿಸುತ್ತಿವೆ.

ಕಳೆದ ವರ್ಷ ಜುಲೈನಲ್ಲಿ ಗಂಭೀರ್ ಭಾರತದ ಕೋಚ್ ಆಗಿ ನೇಮಕಗೊಂಡಿದ್ದರು. ಅವರ ಮನವಿ ಮೇರೆಗೆ ಐಪಿಎಲ್ ತಂಡಗಳಲ್ಲಿ ಕಾರ್ಯನಿರ್ವಹಿಸಿದ್ದ ಅಭಿಷೇಕ್ ನಾಯರ್, ಮಾರ್ಕೆಲ್ ಮತ್ತು ಡೊಶ್ಕಾಟೆ ಸಹಾಯಕ ಕೋಚ್ ಆಗಿ ನೇಮಕಗೊಂಡಿದ್ದರು. ಆದರೆ, ನ್ಯೂಜಿಲೆಂಡ್ ವಿರುದ್ಧ ವೈಟ್ ವಾಷ್ ಹಾಗೂ ಆಸ್ಟ್ರೇಲಿಯಾ ತಂಡದ ಸೋಲುಗಳು ಬಿಸಿಸಿಐನಲ್ಲಿ ಅಸಮಾಧಾನ ಮೂಡಿಸಿದ ಕಾರಣ, ಮೊದಲನೆಯದಾಗಿ ಸಹಾಯಕ ಕೋಚ್ ಅಭಿಷೇಕ್ ನಾಯರ್ ಹುದ್ದೆಯಿಂದ ವಜಾಗೊಂಡಿದ್ದರು.

ಇದೇ ಹಿನ್ನೆಲೆಯಲ್ಲಿ, ಬೌಲಿಂಗ್ ಕೋಚ್ ಮಾರ್ನೆ ಮಾರ್ಕೆಲ್ ಮತ್ತು ರ್ಯಾನ್ ಟೆನ್ ಡೊಶ್ಕಾಟೆ ಸಹ ಇನ್ನೂ ಸಹ ಹುದ್ದೆಯಿಂದ ವಜಾಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ತಂಡದ ಆಯ್ಕೆ ಪ್ರಕ್ರಿಯೆ, ಆಟಗಾರರ ಕಾರ್ಯದೊತ್ತಡ, ಪಿಚ್ ಅನ್ವಯ 11 ಆಟಗಾರರ ಆಯ್ಕೆ ಮತ್ತು ಸಮತೋಲನ ಕಾಯ್ದುಕೊಳ್ಳುವ ವಿಚಾರದಲ್ಲಿ ಕೋಚ್‌ಗಳ ಕಾರ್ಯವೈಖರಿಗೆ ಬಿಸಿಸಿಐ ಅತೃಪ್ತಿ ವ್ಯಕ್ತಪಡಿಸಿದೆ.

ಹಾಗೂ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸ್ಥಾನಕ್ಕೂ ಸವಾಲು ಎದುರಾಗಿದೆ. 2023ರ ಜುಲೈನಲ್ಲಿ ನೇಮಕಗೊಂಡ ಈ ಸಮಿತಿ ಮುಖ್ಯಸ್ಥರ ನೇತೃತ್ವದಲ್ಲಿ ಭಾರತ ತಂಡದ ಪ್ರದರ್ಶನ ಕಳೆದ ಒಂದು ವರ್ಷದಿಂದ ತೀರಾ ಕಳಪೆಯಾಗಿದ್ದು, ಸಮರ್ಥ ಆಟಗಾರರ ಆಯ್ಕೆಯಲ್ಲಿ ನಿರಂತರ ಎಡವಾಟಗಳು ನಡೆದಿವೆ ಎಂದು ವಿಶ್ಲೇಷಣೆಗಳು ತಿಳಿಸುತ್ತಿವೆ.

Continue Reading

ಕ್ರೀಡೆ

ಕನ್ನಡಿಗ ಕ್ರಿಕೆಟಿಗ ದೇವದತ್ ಪಡಿಕ್ಕಲ್ ಮಹಾರಾಜ ಟ್ರೋಫಿ ಟಿ20 ಹರಾಜಿನಲ್ಲಿ ಅತಿ ಹೆಚ್ಚು ಬೆಲೆಗೆ ಮಾರಾಟ

ಕರ್ನಾಟಕದ ಪ್ರತಿಭಾವಂತ ಕ್ರಿಕೆಟಿಗ ದೇವದತ್ ಪಡಿಕ್ಕಲ್ ಮಹಾರಾಜ ಟ್ರೋಫಿ ಟಿ20 ಹರಾಜಿನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಅವರು ‘ಹುಬ್ಬಳ್ಳಿ ಟೈಗರ್ಸ್’ ತಂಡಕ್ಕೆ 13.20 ಲಕ್ಷ ರೂಪಾಯಿಗೆ ಮಾರಾಟ ಆಗಿದ್ದು, ಈ ಮೊತ್ತವು ಮಹಾರಾಜ ಟ್ರೋಫಿಯ ಇತಿಹಾಸದಲ್ಲಿ ಅತಿ ಹೆಚ್ಚು ಬೆಲೆಯಾಗಿದೆ. ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪರ ಉತ್ತಮ ಪ್ರದರ್ಶನ ನೀಡಿ, ಅವರು ಈ ಯಶಸ್ಸಿಗೆ ಪಾತ್ರರಾಗಿದ್ದಾರೆ.

ಕಳೆದ ಐಪಿಎಲ್ ಪಂದ್ಯಾವಳಿಯಲ್ಲಿ ಗಾಯದಿಂದ ಕೆಲವು ಪಂದ್ಯಗಳಿಂದ ದೂರ ಉಳಿದರೂ, ದೇವದತ್ ಪಡಿಕ್ಕಲ್ ಅವರ ಸಾಮರ್ಥ್ಯ ಎಲ್ಲರ ಮನಸ್ಸಿಗೆ ತಲುಪಿತ್ತು. 2024ರ ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್‌ನಿಂದ ಹೊರಬಂದ ಬಳಿಕ ಆರ್‌ಸಿಬಿ ತಂಡವು ಅವರನ್ನು 3.20 ಕೋಟಿ ರೂಪಾಯಿಗೆ ಖರೀದಿಸಿದೆ. ಇದೀಗ ಮಹಾರಾಜ ಟ್ರೋಫಿ ಟಿ20 ಹರಾಜಿನಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡವು 13.20 ಲಕ್ಷ ರೂಪಾಯಿಗೆ ದೇವದತ್ ಪಡಿಕ್ಕಲ್ ಅವರನ್ನು ಪಡೆದಿದ್ದು, ಇದು ಟೂರ್ನಿಯ ದಾಖಲೆಯ ಬೆಲೆಯಾಗಿದೆ.

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಜುಲೈ 15ರಂದು ಬೆಂಗಳೂರಿನಲ್ಲಿ ಆಯೋಜಿಸಿದ ಈ ಹರಾಜಿನಲ್ಲಿ ದೇವದತ್ ಪಡಿಕ್ಕಲ್ ಅತಿ ಹೆಚ್ಚು ಬೆಲೆಗೆ ಮಾರಾಟವಾದ ಕನ್ನಡಿಗ ಕ್ರಿಕೆಟಿಗರಾಗಿದ್ದಾರೆ. ಮಹಾರಾಜ ಟ್ರೋಫಿಯಲ್ಲಿ ಪ್ರತಿ ಫ್ರಾಂಚೈಸಿಯು ಕನಿಷ್ಠ ಇಬ್ಬರು ಸ್ಥಳೀಯ ಆಟಗಾರರನ್ನು ತಂಡದಲ್ಲಿ ಇರಿಸಬೇಕು ಎಂಬ ನಿಯಮವಿದ್ದು, ಇದರಿಂದ ಸ್ಥಳೀಯ ಪ್ರತಿಭೆಗಳ ಪ್ರೋತ್ಸಾಹಕ್ಕೆ ದೊಡ್ಡ ಅವಕಾಶ ಸಿಗುತ್ತದೆ.

ಈ ವರ್ಷದ ಪಂದ್ಯಗಳು ಮುಚ್ಚಿದ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅಭಿಮಾನಿಗಳಿಗೆ ಮೈದಾನದಲ್ಲಿ ವೀಕ್ಷಣೆಗೆ ಅವಕಾಶ ಇಲ್ಲ. ಆದರೂ ದೇವದತ್ ಪಡಿಕ್ಕಲ್ ಅವರ ಸಾಧನೆ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ ಮತ್ತು ಯುವ ಕ್ರಿಕೆಟಿಗರಿಗೆ ಪ್ರೇರಣೆಯಾಗಿದೆ.

Continue Reading

Trending