ಬೆಂಗಳೂರು
ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಗೆ ಎಸ್.ಎಂ.ಕೃಷ್ಣ ಹೆಸರು: ಕಸಪ ಅಧ್ಯಕ್ಷ ಮಹೇಶ ಜೋಶಿ
ಬೆಂಗಳೂರು: ಎಸ್ ಎಂ ಕೃಷ್ಣ ನಿಧನದಿಂದ ಕರುನಾಡು ಬಡವಾಗಿದೆ, ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಗಲಿದೆ ಮಹಾನ್ ಚೇತನಕ್ಕೆ ವಿಶಿಷ್ಟ ರೀತಿ ಗೌರವ ಸಲ್ಲಿಸಲು ತೀರ್ಮಾನಿಸಲಾಗಿದೆ,
ಮಂಡ್ಯದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಎಸ್.ಎಂ.ಕೃಷ್ಣ ಅವರ ಉಪಸ್ಧಿತಿ ಸಮ್ಮೇಳನದ ವೆರಗು ಹೆಚ್ಚಿಸುತ್ತಿತ್ತು, ಅದರೆ ಈಗ ಅವರ ಹೆಸರನ್ನು ವೇದಿಕೆಗೆ ಇಡುವಂತಹ ಸಂದರ್ಭ ಬಂದಿರುವುದು ನಿಜಕ್ಕೂ ವಿಷಾದಕರ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಹೇಳಿದರು,
ಕಸಾಪ ಹಮ್ಮಿಕೊಂಡಿದ್ದ ಎಸ್.ಎಂ.ಕೃಷ್ಣ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು ೮೭ನೇ ಸಾಹಿತ್ಯ ಸಮ್ಮೇಳನ ನಡೆಯಲಿರುವ ನೆಲದಿಂದ ಬಂದಿದ್ದ ಎಸ್ ಎಂ ಕೃಷ್ಣ ಅವರನ್ನು ಸಮ್ಮೇಳನಕ್ಕೆ ಕರೆತರಬೇಕೆಂದು ಸಾಕಷ್ಟು ಪ್ರಯತ್ನಿಸಿದ್ದೆ, ಇದಕ್ಕೇ ಸಕಾರಾತ್ಮಕ ಸ್ಪಂದನೆಯೂ ದೂರಕಿತ್ತು, ಸಮ್ಮೇಳನ ಘೋಷಣೆಯಾದ ದಿನದಿಂದಲೂ ಉತ್ಸಾಹ ತೋರಿದ ಅವರು, ಹಲವು ಉಪಯುಕ್ತ ಸಲಹೆಗಳನ್ನು ನೀಡಿದ್ದರು, ಎಲ್ಲ ರೀತಿಯ ಸಹಕಾರ ನೀಡುವ ಭರವಸೆ ಯನ್ನೂ ನೀಡಿದ್ದರು, ಈಗ ಅವರ ನಿಧನ ದೊಡ್ಡ ಶೂನ್ಯವನ್ನು ಸೃಷ್ಟಿಸಿದೆ ಎಂದು ವಿಷಾದ ವ್ಯಕ್ತಪಡಿಸಿದರು,
ಸುಸಂಸ್ಕೃತ ರಾಜಕಾರಣಿಯಾಗಿದ್ದ ಅವರು ಕಲೆ ಮತ್ತು ಸಾಹಿತ್ಯದ ಬಗ್ಗೆ ಅಪಾಟ ಪ್ರೇಮ ಇಟ್ಟುಕೊಂಡಿದ್ದರು, ಹಲವು ಕ್ಷೇತ್ರಗಳಲ್ಲಿ ಆಳವಾದ ಅಧ್ಯಯನ ನಡೆಸಿದ್ದ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು, ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಾಲ್ಕು ಸಾಹಿತ್ಯ ಸಮ್ಮೇಳನಗಳು ಯಶಸ್ವಿಯಾಗಿ ನಡೆದಿದ್ದವು ಎಂದು ಸ್ಮರಿಸಿಕೊಂಡರು..
ದೇಶ
‘ನೀಟ್ ಅಕ್ರಮಕ್ಕೆ ಮೋದಿ-ಧರ್ಮೇಂದ್ರ ಪ್ರಧಾನ್ ಹೊಣೆ’: CM ಸಿದ್ದರಾಮಯ್ಯ
ಬೆಂಗಳೂರು: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ NEET ವೈದ್ಯಕೀಯ ಪ್ರವೇಶ ಪರೀಕ್ಷೆಯ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಪ್ರಧಾನಿ Narendra Modi ಹಾಗೂ ಕೇಂದ್ರ ಶಿಕ್ಷಣ ಸಚಿವ Dharmendra Pradhan ನೇರ ಹೊಣೆ ಹೊರಬೇಕು ಎಂದು ಮುಖ್ಯಮಂತ್ರಿ Siddaramaiah ಒತ್ತಾಯಿಸಿದರು.
ಬೆಂಗಳೂರಿನ Freedom Park ನಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಸಿಎಂ, “ಈ ಹಿಂದೆ ರಾಜ್ಯಗಳು ತಮ್ಮದೇ CET ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸುತ್ತಿದ್ದರು. ಆದರೆ 2016ರಲ್ಲಿ ಮೋದಿ ಸರ್ಕಾರ ಬಲವಂತವಾಗಿ NEET ಜಾರಿಗೆ ತಂದ ಬಳಿಕ ಅಕ್ರಮಗಳು ಹೆಚ್ಚಾಗಿವೆ” ಎಂದು ಆರೋಪಿಸಿದರು.
“ಶಿಕ್ಷಣ ಸಂವಿಧಾನದ ಸಮವರ್ತಿ ಪಟ್ಟಿಯ ವಿಷಯ. ರಾಜ್ಯಗಳಿಗೆ ಸ್ವಾಯತ್ತತೆ ಇರಬೇಕು. ಆದರೆ ಕೇಂದ್ರ ಸರ್ಕಾರ ಎಲ್ಲಾ ಅಧಿಕಾರವನ್ನು ತನ್ನಲ್ಲೇ ಕೇಂದ್ರೀಕರಿಸಿಕೊಂಡ ಪರಿಣಾಮ ಇಂತಹ ಹಗರಣಗಳು ಮರುಕಳಿಸುತ್ತಿವೆ” ಎಂದು ಅವರು ಹೇಳಿದರು.
ಕಳೆದ ಹತ್ತು ವರ್ಷಗಳಲ್ಲಿ ಐದು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿದ ಸಿದ್ದರಾಮಯ್ಯ, “ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳು ವರ್ಷವಿಡೀ ಶ್ರಮಪಟ್ಟು ಪರೀಕ್ಷೆಗೆ ಸಿದ್ಧತೆ ನಡೆಸುತ್ತಾರೆ. ಆದರೆ ಪೇಪರ್ ಲೀಕ್ ಮೂಲಕ ಅವರ ಭವಿಷ್ಯದ ಜೊತೆ ಚೆಲ್ಲಾಟವಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಸಿಎಂ, “ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಹತಾಶರಾಗಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಘಟನೆಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.
ಬಿಜೆಪಿ ಆಡಳಿತದಲ್ಲಿ ಅಕ್ರಮಗಳ ಸರಮಾಲೆ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ PSI ನೇಮಕಾತಿ ಹಗರಣವನ್ನೂ ಉಲ್ಲೇಖಿಸಿದರು. “ದೇಶದ ಯುವಜನತೆ ಆಕ್ರೋಶದಲ್ಲಿದ್ದರೂ ಪ್ರಧಾನಿ ಮೋದಿ ವಿದೇಶ ಪ್ರವಾಸದಲ್ಲಿದ್ದಾರೆ” ಎಂದು ಟೀಕಿಸಿದರು.
ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ದೊರೆಯುವವರೆಗೂ ಕಾಂಗ್ರೆಸ್ ಹೋರಾಟ ಮುಂದುವರಿಯಲಿದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ದೇಶ
ಪೆಟ್ರೋಲ್-ಡಿಸೇಲ್ ತೆರಿಗೆ ಕಡಿತಕ್ಕೆ ಸಿಎಂ ಸ್ಪಷ್ಟ ನಕಾರ
ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಕುರಿತು ಚರ್ಚೆಗಳು ತೀವ್ರವಾಗಿರುವ ನಡುವೆ ಮುಖ್ಯಮಂತ್ರಿ Siddaramaiah ರಾಜ್ಯ ಸರ್ಕಾರ ಇಂಧನ ಮೇಲಿನ ತೆರಿಗೆಯನ್ನು ಕಡಿತ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಕೇಂದ್ರ ಸರ್ಕಾರ ಇಂಧನ ದರ ಹೆಚ್ಚಿಸಿದರೆ ನಾವು ತೆರಿಗೆ ಕಡಿಮೆ ಮಾಡಬೇಕಾ? ಅವರು ಬೆಲೆ ಏರಿಕೆ ಮಾಡಿದಾಗ ಯಾಕೆ ಪ್ರಶ್ನೆ ಕೇಳುವುದಿಲ್ಲ?” ಎಂದು ಪ್ರಶ್ನಿಸಿದರು. ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಇಂಧನ ದರ ಏರಿಕೆಗೆ ಪ್ರಮುಖ ಕಾರಣ ಕೇಂದ್ರ ಸರ್ಕಾರವೇ ಎಂದು ಆರೋಪಿಸಿದರು.
ಮುಂದುವರಿದು ಅವರು, “Narendra Modi ಅಧಿಕಾರಕ್ಕೆ ಬಂದಾಗ ಪೆಟ್ರೋಲ್ ಮತ್ತು ಡಿಸೇಲ್ ದರ ಎಷ್ಟು ಇತ್ತು? ಮಾಜಿ ಪ್ರಧಾನಿ Manmohan Singh ಅವಧಿಯಲ್ಲಿ ಪೆಟ್ರೋಲ್ ₹70 ಮತ್ತು ಡಿಸೇಲ್ ₹48 ಇತ್ತು. ಗ್ಯಾಸ್ ಸಿಲಿಂಡರ್ ಬೆಲೆ ₹414 ಇತ್ತು. ಈಗ ದರ ಎಷ್ಟು ಏರಿದೆ ಎಂಬುದನ್ನು ಜನರು ಗಮನಿಸಬೇಕು” ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯ ಸರ್ಕಾರ ಜನರಿಗೆ ಯಾವುದೇ ನೆರವು ನೀಡುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಕೇಂದ್ರ ಸರ್ಕಾರ ದರ ಹೆಚ್ಚಿಸಿದಾಗ ಅವರ ವಿರುದ್ಧ ಪ್ರಶ್ನೆ ಕೇಳುವುದಿಲ್ಲ. ಆದರೆ ರಾಜ್ಯ ಸರ್ಕಾರ ತೆರಿಗೆ ಕಡಿಮೆ ಮಾಡಬೇಕೆಂದು ಕೇಳುತ್ತೀರಿ. ನಿಮ್ಮ ಪ್ರಶ್ನೆಗಳಲ್ಲೇ ಕೇಂದ್ರ ಸರ್ಕಾರದ ಪರ ನಿಲುವು ಕಾಣಿಸುತ್ತದೆ” ಎಂದು ಮಾಧ್ಯಮಗಳ ಮೇಲೆಯೂ ಅಸಮಾಧಾನ ವ್ಯಕ್ತಪಡಿಸಿದರು.
ಇಂಧನ ದರ ಏರಿಕೆ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವೆ ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಳ್ಳುವ ಲಕ್ಷಣಗಳು ಕಂಡುಬರುತ್ತಿವೆ.
ದೇಶ
‘ಹೈದರಾಬಾದ್ನಲ್ಲಿ ಗುಂಡಿಗಳೇ ಇಲ್ಲ, ಬೆಂಗಳೂರಿನಲ್ಲಿ ಯಾಕೆ?’: ವಿದೇಶಿಗನ ಪ್ರಶ್ನೆ ವೈರಲ್
ಹೈದರಾಬಾದ್: Bengaluru ನಗರದ ಟ್ರಾಫಿಕ್ ಮತ್ತು ರಸ್ತೆ ಸಮಸ್ಯೆಗಳು ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿವೆ. ಈ ಬಾರಿ ಕೆನಡಾ ಮೂಲದ ಕ್ಯಾಲೆಬ್ ಫ್ರೀಸೆನ್ ಎಂಬುವವರು Hyderabad ನಗರದ ರಸ್ತೆಗಳನ್ನು ಹೊಗಳಿ, ಬೆಂಗಳೂರಿನ ಮೂಲಸೌಕರ್ಯವನ್ನು ಪ್ರಶ್ನಿಸಿರುವ ವಿಡಿಯೋ ವೈರಲ್ ಆಗಿದೆ.
ಸಾಮಾಜಿಕ ಜಾಲತಾಣ X ನಲ್ಲಿ ವಿಡಿಯೋ ಹಂಚಿಕೊಂಡಿರುವ ಕ್ಯಾಲೆಬ್, “ಹೈದರಾಬಾದ್ನಲ್ಲಿ ರಸ್ತೆಗಳು ಅತ್ಯುತ್ತಮವಾಗಿವೆ. ನಗರದ ಮಧ್ಯಭಾಗದಲ್ಲಿದ್ದರೂ ಸಂಚಾರ ಸುಲಭವಾಗಿದೆ. ಎಲ್ಲೆಡೆ ಉತ್ತಮ ರಸ್ತೆ ಸಂಪರ್ಕವಿದ್ದು, ಗುಂಡಿಗಳ ಸಮಸ್ಯೆ ಕಾಣುತ್ತಿಲ್ಲ” ಎಂದು ಹೇಳಿದ್ದಾರೆ.
ಮುಂದುವರಿದು ಅವರು, “ಇಲ್ಲಿ ರಸ್ತೆಗಳ ಮೇಲೆ ಪ್ರಾಣಿಗಳ ಓಡಾಟ ಇಲ್ಲ, ಪಾದಚಾರಿಗಳು ಹಠಾತ್ ವಾಹನಗಳ ಮುಂದೆ ಬರುತ್ತಿಲ್ಲ. ಹೈದರಾಬಾದ್ನಲ್ಲಿ ಇಷ್ಟು ಉತ್ತಮ ರಸ್ತೆ ವ್ಯವಸ್ಥೆ ಇರುವಾಗ ಬೆಂಗಳೂರಿನಲ್ಲಿ ಯಾಕೆ ಸಾಧ್ಯವಾಗುತ್ತಿಲ್ಲ ಎಂಬುದು ಅರ್ಥವಾಗುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ಹೈದರಾಬಾದ್ನಲ್ಲಿ ಟ್ರಾಫಿಕ್ ದಟ್ಟಣೆ ಕಡಿಮೆ ಇರುವುದನ್ನೂ ಅವರು ಮೆಚ್ಚಿಕೊಂಡಿದ್ದಾರೆ.
ಈ ವಿಡಿಯೋ ವೈರಲ್ ಆದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ‘ಬೆಂಗಳೂರು Vs ಹೈದರಾಬಾದ್’ ಚರ್ಚೆ ಜೋರಾಗಿದೆ. ಹಲವರು ಬೆಂಗಳೂರಿನಲ್ಲಿ ಯೋಜಿತ ರಸ್ತೆ ಅಭಿವೃದ್ಧಿ ಹಾಗೂ ಪರಿಣಾಮಕಾರಿ ಟ್ರಾಫಿಕ್ ನಿರ್ವಹಣೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೆಲವರು ಬಿಬಿಎಂಪಿ ಆಡಳಿತದ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆದರೆ ಬೆಂಗಳೂರು ಪರವಾಗಿ ಪ್ರತಿಕ್ರಿಯಿಸಿದ ಕೆಲ ನೆಟ್ಟಿಗರು, “ಎಲ್ಲಾ ನಗರಗಳಲ್ಲೂ ಒಳ್ಳೆಯ ಮತ್ತು ಕೆಟ್ಟ ರಸ್ತೆಗಳು ಇರುತ್ತವೆ. ಹೈದರಾಬಾದ್ನ ಪ್ರಮುಖ ಪ್ರದೇಶಗಳನ್ನು ನೋಡಿ ಮಾತ್ರ ಇಂತಹ ಅಭಿಪ್ರಾಯ ನೀಡಲಾಗಿದೆ” ಎಂದು ತಿರುಗೇಟು ನೀಡಿದ್ದಾರೆ.
ಇದೇ ವೇಳೆ ಹೈದರಾಬಾದ್ ನಿವಾಸಿಯೊಬ್ಬರು, “ದಯವಿಟ್ಟು ನಮ್ಮ ನಗರವನ್ನು ಇಷ್ಟು ಹೊಗಳಬೇಡಿ. ಇಲ್ಲದಿದ್ದರೆ ಬೆಂಗಳೂರಿನಂತೆ ಮನೆ ಬಾಡಿಗೆಗಳು ಏರಿಬಿಡುತ್ತವೆ” ಎಂದು ಹಾಸ್ಯಭರಿತ ಕಾಮೆಂಟ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ರಸ್ತೆ ಅಭಿವೃದ್ಧಿ ಮತ್ತು ನಗರ ಯೋಜನೆ ಕುರಿತು ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ.
-
ಕ್ರೀಡೆ8 hours agoಹಾಂಗ್ ಕಾಂಗ್ನಲ್ಲಿ ನಡೆಯುವ ಏಷ್ಯನ್ ಚಾಂಪಿಯನ್ಶಿಪ್ಗೆ ಕರ್ನಾಟಕದ ಇಬ್ಬರು ಆಯ್ಕೆ
-
ದೇಶ11 hours ago59 ವರ್ಷಗಳ ಬಳಿಕ ತಮಿಳುನಾಡು ಸಚಿವ ಸಂಪುಟಕ್ಕೆ ಕಾಂಗ್ರೆಸ್ ಎಂಟ್ರಿ! ಇಂದು ವಿಜಯ್ ಕ್ಯಾಬಿನೆಟ್ ವಿಸ್ತರಣೆ
-
ದೇಶ11 hours agoಬಿಜೆಪಿಗಿಂತ ವೇಗವಾಗಿ ಬೆಳೆದ ‘Cockroach Janta Party’!
-
ದೇಶ5 hours ago“ನಾವು ಯಾರೂ ಸುರಕ್ಷಿತರಲ್ಲ”: ಮುಂದಿನ ಮಹಾಮಾರಿಯ ಬಗ್ಗೆ ಜಾಗತಿಕ ವರದಿ ಆತಂಕ
-
ದೇಶ6 hours agoCockroach Janata Party ಖಾತೆ ತಡೆ: ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆ
-
ಅಪರಾಧ10 hours agoLatest : ನಿಪ್ಪಾಣಿಯಲ್ಲಿ ಆಶ್ರಯ ಮನೆ ಹಂಚಿಕೆ ವೇಳೆ ಗಲಾಟೆ: ಕಣ್ಣೀರಿಟ್ಟ ಶಾಸಕಿ ಶಶಿಕಲಾ ಜೊಲ್ಲೆ
-
ದೇಶ9 hours agoಮೆಲೊಡಿ ಟ್ರೆಂಡ್ಗೆ ಎಂಟ್ರಿ ಕೊಟ್ಟ ಬಾಲಿವುಡ್ ಜೋಡಿ: ಸೋನಾಕ್ಷಿ ವಿಡಿಯೋ ಸದ್ದು
-
ದೇಶ9 hours ago‘ಒಂದು ರಾಷ್ಟ್ರ, ಒಂದು ಚುನಾವಣೆ’ ಜಾರಿಯಾದರೆ ₹7 ಲಕ್ಷ ಕೋಟಿ ಉಳಿತಾಯ: ಜೆಪಿಸಿ ಸಮಿತಿ
