ರಾಜಕೀಯ
ಏನ್ ಸ್ವಾಮಿ.. ಈ ಬಾರಿ ಸಿಎಂ ಸೀಟನ್ನು ಒದ್ದು ಕಿತ್ಕೋತೀರಾ: ಡಿಕೆಶಿ ಅಶೋಕ್ ಪ್ರಶ್ನೆ
ಬೆಳಗಾವಿ: ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಇವತ್ತು ಡಿಕೆಶಿ ಸಿಎಂ ಹುದ್ದೆಗೇರುವ ವಿಚಾರದ ಬಗ್ಗೆ ಸ್ವಾರಸ್ಯಕರ ಚರ್ಚೆ ನಡೆಯಿತು,
ಏನ್ ಸ್ವಾಮಿ.. ಈ ಬಾರಿ ಸಿಎಂ ಸೀಟನ್ನು ಒದ್ದು ಕಿತ್ಕೋತೀರಾ ಎಂದು ಡಿಸಿಎಂ ಡಿಕೆಶಿಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನೆ ಮಾಡಿದರು,
ಎಸ್.ಎಂ.ಕೃಷ್ಣ ಬಗ್ಗೆ ಮಾತಾಡುವ ವೇಳೆ ೧೯೯೯ರಲ್ಲಿ ಮಂತ್ರಿಮAಡಲ ರಚನೆ ವೇಳೆ ನಡೆದ ಪ್ರಸಂಗವನ್ನು ಡಿಸಿಎಂ ಡಿಕೆಶಿ ವಿವರಿಸುತ್ತಿದ್ದರು, ಎಸ್ ಎಂ ಕೃಷ್ಣ ಕ್ಯಾಬಿನೆಟ್ ಸಿದ್ಧತೆ ವೇಳೆ ಎಲ್ಲ ಹೊಸ ಮಿನಿಸ್ಟರ್ ಹೆಸರು ಬಂದಿದ್ದು ನಾನು ಆದ್ರೆ ಕೊನೆ ಹಂತದಲ್ಲಿ ನನಗೆ ಸ್ಧಾನ ಮಿಸ್ ಆಗಿಹೋಯ್ತು ಎಂದು ಹೇಳಿದರು, ಅಲ್ಲದೆ ಈ ವಿಚಾರವನ್ನು ಜ್ಯೋತಿಷಿ ಬಳಿ ಕೇಳಿದಾಗ ಒದ್ದು ಮಂತ್ರಿಸ್ಧಾನ ಕಿತ್ತುಕೋ ಎಂದು ಸೂಚಿಸಿದರು, ಅವರ ಮಾತಿನಂತೆ ಎಸ್ ಎಂ ಕೃಷ್ಣ ಕೊಠಡಿ ಬಾಗಿಲನ್ನು ಒದ್ದು ಮಂತ್ರಿ ಮಾಡಿ ಎಂದು ಪಟ್ಟು ಹಿಡಿದೆ, ಅದರಂತೆಯೇ ಮುಂದೆ ಮಂತ್ರಿ ಸ್ಧಾನ ಸಿಕ್ಕಿತು ಎಂದರು,
ಇದಕ್ಕೆ ಕೌಂಟರ್ ಕೊಡೋಕೆ ಮುಂದಾದ ಆರ್ ಅಶೋಕ್ ಈಗಲೂ ನಿಮಗೆ ಹಾಗೂ ಸಿಎಂ ಸಿದ್ದರಾಮಯ್ಯ ನಡುವೆ ತಲಾ ೨.೫ ವರ್ಷ ಅಧಿಕಾರ ಹಂಚಿಕೆಯಾಗಿದೆ, ಈಗಲೂ ಒದ್ದು ಸಿಎಂ ಸ್ಧಾನ ಗಿಟ್ಟಿಸಿಕೊಳ್ತೀರಾ ಎಂದು ಕೇಳೆ ಕಾಲೆಳೆದರು,
ಇದಕ್ಕೆ ಉತ್ತರ ಕೊಟ್ಟ ಡಿಸಿಎಂ ನಮ್ಮ ಜೋತಿಷ್ಯರು ಯಾವ ಸಂದರ್ಭದಲ್ಲಿ ಏನಾಗುತ್ತದೆ ಎಂದು ಹೇಳಿದ್ದಾರೆ, ನನಗೆ ಏನು ಹೇಳಿದ್ದಾರೆ ಎಂದು ಈಗ ಮಾತಾಡಿದ್ರೆ ನಿಮ್ಮ ಕಡೆ ಹಾಘೂ ದಳದಲ್ಲಿರೂ ಸುಮಾರು ೩೦ ಮಂದಿ ಈಕಡೆ ಬಂದುಬಿಡ್ತಾರೆ ಎಂದು ಹಾಸ್ಯ ಚಟಾಕಿ ಹಾರಿಸಿದರು,
ದೇಶ
ರಾಜಾಜಿನಗರ ಶಾಸಕರ ಕಚೇರಿ ಮುಂದೆ ಹೈಡ್ರಾಮಾ: ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ವಾಗ್ವಾದ
ಬೆಂಗಳೂರು: ನಗರದ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ಮುಂಭಾಗದಲ್ಲಿ ಸೋಮವಾರ ನಡೆದ ‘ಜನರೊಂದಿಗೆ ಜನಸೇವಕ – ಜನಸ್ಪಂದನಾ’ ಕಾರ್ಯಕ್ರಮದ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.
ಶಾಸಕ ಎಸ್. ಸುರೇಶ್ ಕುಮಾರ್ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದ ವೇಳೆ **ಎನ್ಎಸ್ಯುಐ (NSUI)**ಗೆ ಸೇರಿದ ಕಾಂಗ್ರೆಸ್ ಕಾರ್ಯಕರ್ತರು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಥಳದಲ್ಲಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರು ಸಹ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆಗೆ ಮುಂದಾದರು.
ಎರಡೂ ಪಕ್ಷಗಳ ಕಾರ್ಯಕರ್ತರು ಪರಸ್ಪರ ಘೋಷಣೆಗಳನ್ನು ಕೂಗಿದ ಪರಿಣಾಮ ಕೆಲಕಾಲ ಪರಿಸ್ಥಿತಿ ಬಿಗಡಾಯಿಸಿತು. ಸ್ಥಳದಲ್ಲಿದ್ದ ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಬಳಿಕ ಪ್ರತಿಭಟನೆ ನಡೆಸುತ್ತಿದ್ದ ಎನ್ಎಸ್ಯುಐ ಕಾರ್ಯಕರ್ತರನ್ನು ವಶಕ್ಕೆ ಪಡೆದು ಸ್ಥಳದಿಂದ ತೆರವುಗೊಳಿಸಿದರು.
ಪೊಲೀಸರ ತ್ವರಿತ ಕ್ರಮದಿಂದ ಯಾವುದೇ ಅಹಿತಕರ ಘಟನೆ ನಡೆಯದೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿತು. ಘಟನೆಯ ಹಿನ್ನೆಲೆಯಲ್ಲಿ ಶಾಸಕರ ಕಚೇರಿ ಸುತ್ತಮುತ್ತ ಕೆಲಕಾಲ ಬಿಗಿ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿತ್ತು.
ರಾಜಾಜಿನಗರದಲ್ಲಿ ನಡೆದ ಈ ಘಟನೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಜನಸ್ಪಂದನಾ ಕಾರ್ಯಕ್ರಮದ ವೇಳೆ ಉಂಟಾದ ಪ್ರತಿಭಟನೆ ಗಮನ ಸೆಳೆದಿದೆ. ಪ್ರತಿಭಟನೆಗೆ ಕಾರಣ ಹಾಗೂ ಎನ್ಎಸ್ಯುಐ ಕಾರ್ಯಕರ್ತರು ಮುಂದಿಟ್ಟ ಬೇಡಿಕೆಗಳ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ದೇಶ
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅವ್ಯವಸ್ಥೆ? ಬಿಎಲ್ಒಗಳ ಮೇಲೆ ಒತ್ತಡ ಆರೋಪಿಸಿದ ವಿಜಯೇಂದ್ರ
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಗಂಭೀರ ಅವ್ಯವಸ್ಥೆ ನಡೆಯುತ್ತಿದ್ದು, ರಾಜ್ಯ ಸರ್ಕಾರ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಬೂತ್ ಮಟ್ಟದ ಅಧಿಕಾರಿಗಳ (BLO) ಮೇಲೆ ಒತ್ತಡ ಹೇರುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಐಆರ್ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಮನೆ ಮನೆಗೆ ತೆರಳಿ ನಮೂನೆಗಳನ್ನು ವಿತರಿಸುವ ಬದಲು ಕಲ್ಯಾಣ ಮಂಟಪ, ಚೌಲ್ಟ್ರಿ ಹಾಗೂ ಮಸೀದಿಗಳಲ್ಲಿ ಕುಳಿತು ಅರ್ಜಿಗಳನ್ನು ಹಂಚುತ್ತಿರುವುದು ನಿಯಮ ಉಲ್ಲಂಘನೆಯಾಗಿದೆ ಎಂದು ದೂರಿದರು. ಕೆಲವು ಶಾಸಕರ ಕಚೇರಿಗಳಲ್ಲೇ ಬಿಎಲ್ಒಗಳನ್ನು ಕೂರಿಸಿ ಕೆಲಸ ಮಾಡಿಸಲಾಗುತ್ತಿದೆ ಎಂದು ಆರೋಪಿಸಿ, ಈ ಕುರಿತು ಸಾಕ್ಷ್ಯ ಸಮೇತ ದೂರು ಸಲ್ಲಿಸಿರುವುದಾಗಿ ತಿಳಿಸಿದರು.
ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ವಿತರಿಸಲಾಗುತ್ತಿರುವ ಅರ್ಜಿಗಳ ಮೇಲೆ ಕಾಂಗ್ರೆಸ್ ಮುಖಂಡರ ಫೋಟೋಗಳು ಮುದ್ರಣಗೊಂಡಿರುವ ವಿಚಾರವನ್ನೂ ಚುನಾವಣಾ ಆಯೋಗದ ಗಮನಕ್ಕೆ ತಂದಿರುವುದಾಗಿ ವಿಜಯೇಂದ್ರ ಹೇಳಿದರು. ಎಸ್ಐಆರ್ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗಿರುವ ಎಲ್ಲೆಡೆ ಮರುಪರಿಷ್ಕರಣೆ ನಡೆಸುವಂತೆ ಆಗ್ರಹಿಸಿದರು.
ಮೈಸೂರು ಸಂಸದ ಯದುವೀರ್ ಒಡೆಯರ್ ಮಾತನಾಡಿ, ನರಸಿಂಹರಾಜ ಕ್ಷೇತ್ರದಲ್ಲಿ ಮತದಾರರ ಸಂಖ್ಯೆಯಲ್ಲಿ ಅಸಹಜ ಏರಿಕೆ ಕಂಡುಬಂದಿದ್ದು, ಮನೆಗಳ ಸಂಖ್ಯೆ ಹೆಚ್ಚಳವಾಗದೆ ಮತದಾರರ ಸಂಖ್ಯೆ ಮಾತ್ರ ಹೆಚ್ಚಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದರು. ಅಕ್ರಮ ಮತದಾರರನ್ನು ತಡೆಯಲು ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸುವುದು ಅಗತ್ಯ ಎಂದು ಒತ್ತಾಯಿಸಿದರು.
ಇದೇ ವೇಳೆ, ಬರ ಪರಿಸ್ಥಿತಿಯಲ್ಲಿ ಮೈಸೂರು ದಸರಾ ಸಂದರ್ಭದಲ್ಲಿ ಕಂಬಳ ಆಯೋಜನೆಗೆ ಕೋಟಿ ಕೋಟಿ ರೂಪಾಯಿ ವೆಚ್ಚ ಮಾಡುವ ಬದಲು ಸರಳ ಹಾಗೂ ಸಾಂಪ್ರದಾಯಿಕ ದಸರಾ ಆಚರಣೆ ನಡೆಸುವುದು ಸೂಕ್ತ ಎಂದು ಯದುವೀರ್ ಒಡೆಯರ್ ಅಭಿಪ್ರಾಯಪಟ್ಟರು.
ದೇಶ
ಸಚಿವ ಸ್ಥಾನ ಯಾರಿಗೆ? ಕಾಂಗ್ರೆಸ್ನಲ್ಲಿ ಹೈವೋಲ್ಟೇಜ್ ಸಭೆ; ನಿಗಮ-ಮಂಡಳಿಗಳಲ್ಲೂ ಭಾರೀ ಸರ್ಜರಿ
ಬೆಂಗಳೂರು, ಜು. 3: ಕರ್ನಾಟಕ ಕಾಂಗ್ರೆಸ್ನಲ್ಲಿ ಬಹುನಿರೀಕ್ಷಿತ **ಸಚಿವ ಸಂಪುಟ ವಿಸ್ತರಣೆ (Cabinet Reshuffle)**ಗೆ ವೇದಿಕೆ ಸಜ್ಜಾಗುತ್ತಿರುವ ಲಕ್ಷಣಗಳು ಗೋಚರಿಸುತ್ತಿವೆ. ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ನಾಯಕರನ್ನು ಸಮಾಧಾನಪಡಿಸುವುದು ಹಾಗೂ ಖಾಲಿ ಇರುವ ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಲು ಸಿದ್ಧರಾಗಿದ್ದಾರೆ.
ಎಐಸಿಸಿ ನಾಯಕ ರಾಹುಲ್ ಗಾಂಧಿ ವಿದೇಶ ಪ್ರವಾಸದಿಂದ ಮರಳುತ್ತಿದ್ದಂತೆ ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸ್ಥಾನಕ್ಕಾಗಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸಂಭಾವ್ಯ ಸಚಿವರ ಪಟ್ಟಿಯೊಂದಿಗೆ ಜುಲೈ 5ರಂದು ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಲಿದ್ದು, ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ರಾಷ್ಟ್ರ ರಾಜಧಾನಿ ಸೇರಲಿದ್ದಾರೆ.
ಜುಲೈ 6 ಮತ್ತು 7ರಂದು ಕಾಂಗ್ರೆಸ್ ಹೈಕಮಾಂಡ್ ನೇತೃತ್ವದಲ್ಲಿ ನಡೆಯಲಿರುವ ಮಹತ್ವದ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆಯ ಕುರಿತು ಅಂತಿಮ ಚರ್ಚೆ ನಡೆಯುವ ಸಾಧ್ಯತೆಯಿದೆ. ವರಿಷ್ಠರು ಒಪ್ಪಿಗೆ ನೀಡಿದರೆ ಜುಲೈ 10ರಿಂದ 12ರೊಳಗೆ ಹೊಸ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಬಹುದು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.
ಸಚಿವ ಸ್ಥಾನಕ್ಕಾಗಿ ಹಲವು ಪ್ರಭಾವಿ ನಾಯಕರು ರೇಸ್ನಲ್ಲಿದ್ದಾರೆ. ಉತ್ತರ ಹಾಗೂ ಕಲ್ಯಾಣ ಕರ್ನಾಟಕ ಭಾಗದಿಂದ ಲಕ್ಷ್ಮಣ ಸವದಿ, ಪ್ರಸಾದ್ ಅಬ್ಬಯ್ಯ, ಯಶವಂತರಾಯ ಪಾಟೀಲ ಹಾಗೂ ಅಪ್ಪಾಜಿ ನಾಡಗೌಡ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ. ಅಲ್ಪಸಂಖ್ಯಾತ ಕೋಟಾದಡಿ ಸಲೀಂ ಅಹ್ಮದ್ ಹೆಸರು ಚರ್ಚೆಯಲ್ಲಿದೆ.
ಮಧ್ಯ ಕರ್ನಾಟಕ ಭಾಗದಿಂದ ನಾಗೇಂದ್ರ, ಬಸವರಾಜ ರಾಯರೆಡ್ಡಿ, ರುದ್ರಪ್ಪ ಲಮಾಣಿ, ಬೇಳೂರು ಗೋಪಾಲಕೃಷ್ಣ ಅವರ ಹೆಸರುಗಳು ಮುನ್ನಲೆಯಲ್ಲಿದ್ದರೆ, ಹಳೆಯ ಮೈಸೂರು ಭಾಗದಿಂದ ಶ್ರೀನಿವಾಸ್ (ವಾಸು), ಕೆ.ಎಂ. ಶಿವಲಿಂಗೇಗೌಡ, ಪಿ.ಎಂ. ನರೇಂದ್ರಸ್ವಾಮಿ, ಪುಟ್ಟರಂಗಶೆಟ್ಟಿ, ಶರತ್ ಬಚ್ಚೇಗೌಡ ಸೇರಿದಂತೆ ಹಲವು ನಾಯಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.
ಬೆಂಗಳೂರು ಭಾಗದಿಂದ ಬಿ.ಝೆಡ್. ಜಮೀರ್ ಅಹಮದ್ ಖಾನ್, ರಿಜ್ವಾನ್ ಅರ್ಷದ್, ಬಿ.ಕೆ. ಹರಿಪ್ರಸಾದ್ ಹಾಗೂ ಎಂ. ಕೃಷ್ಣಪ್ಪ ಅವರ ಹೆಸರುಗಳು ಸದ್ದು ಮಾಡುತ್ತಿವೆ. ಕರಾವಳಿ ಹಾಗೂ ಮಲೆನಾಡು ಭಾಗದಿಂದ ತರೀಕೆರೆ ಶ್ರೀನಿವಾಸ್, ಮಂಕಾಳ ವೈದ್ಯ ಮತ್ತು ಆರ್.ವಿ. ದೇಶಪಾಂಡೆ ಹೆಸರುಗಳೂ ಚರ್ಚೆಯಲ್ಲಿವೆ.
ಇದರ ಜೊತೆಗೆ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರಕ್ಕೂ ಮುಂದಾಗಿದ್ದು, ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕಗೊಂಡಿದ್ದ ವಿವಿಧ ನಿಗಮ-ಮಂಡಳಿ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಗಳನ್ನು ರದ್ದುಗೊಳಿಸುವ ಸಾಧ್ಯತೆ ಇದೆ. ಬಳಿಕ ಪಕ್ಷದ ಹಿರಿಯ ನಾಯಕರು ಹಾಗೂ ಸಚಿವ ಸ್ಥಾನ ವಂಚಿತರಾದ ಶಾಸಕರಿಗೆ ನಿಗಮ-ಮಂಡಳಿಗಳ ಜವಾಬ್ದಾರಿ ನೀಡಿ ಅಸಮಾಧಾನ ಶಮನಗೊಳಿಸುವ ತಂತ್ರ ರೂಪಿಸಲಾಗುತ್ತಿದೆ.
-
ದೇಶ1 hour agoಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ! ಜುಲೈ 6ರ ಬೆಂಗಳೂರು ಗೋಲ್ಡ್ ರೇಟ್ ಇಲ್ಲಿದೆ
-
ದೇಶ2 hours agoರಾಜಾಜಿನಗರ ಶಾಸಕರ ಕಚೇರಿ ಮುಂದೆ ಹೈಡ್ರಾಮಾ: ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ವಾಗ್ವಾದ
-
ದೇಶ2 hours agoPoK ಪ್ರತಿಭಟನೆ ತೀವ್ರ: ‘ಗಡಿ ತೆರೆಯಿರಿ, ಮಾನವೀಯ ನೆರವು ನೀಡಿ’ ಎಂದು ಭಾರತದತ್ತ ಮೊರೆ
-
ದೇಶ4 hours agoSakkath Santhe 2026: ಗೃಹ ಉತ್ಪನ್ನಗಳಿಗೆ ವೇದಿಕೆ, ಇಂದಿರಾನಗರದಲ್ಲಿ ಜನಸಾಗರ
-
ದೇಶ3 hours agoಮುಂಬೈ-ಪುಣೆ ಎಕ್ಸ್ಪ್ರೆಸ್ವೇ ಮುಚ್ಚಳ: ಪುಣೆಗೆ ರೆಡ್ ಅಲರ್ಟ್ ಘೋಷಣೆ
-
ಕ್ರೀಡೆ3 hours ago“ಇಲ್ಲಿಂದ ಶುರುವಾಗಿತ್ತು, ಇಲ್ಲೇ ಮುಗಿಯಿತು” – ನೈಮರ್ ಅಂತಾರಾಷ್ಟ್ರೀಯ ಫುಟ್ಬಾಲ್ಗೆ ಭಾವನಾತ್ಮಕ ವಿದಾಯ
-
ದೇಶ24 minutes ago“ಇನ್ನೆಷ್ಟು ಜನ ಸತ್ತರೆ ಕ್ರಮ?” ಸರ್ಕಾರವನ್ನು ನೇರವಾಗಿ ಪ್ರಶ್ನಿಸಿದ ಎಸ್.ಟಿ. ಸೋಮಶೇಖರ್
-
ದೇಶ4 hours agoಇಂದಿನ ರಾಶಿ ಭವಿಷ್ಯ: ಮೇಷದಿಂದ ಮೀನದವರೆಗೆ ಯಾರಿಗೆ ಶುಭ? ಯಾರಿಗೆ ಎಚ್ಚರಿಕೆ?
