ರಾಜಕೀಯ
ಬೆಂಗಳೂರು ಜೈಲಿಗೆ ಸಿ.ಟಿ.ರವಿ ಸ್ಧಳಾಂತರ-ಇಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ!

ಬೆಂಗಳೂರು ಜೈಲಿಗೆ ಸಿ.ಟಿ.ರವಿ ಸ್ಧಳಾಂತರ-ಇಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ!
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅಶ್ಲೀಲ ಪದ ಬಳಿಕೆ ಆರೋಪಕ್ಕೆ ಸಂಬಂಧಪಟ್ಟಂತೆ ಬೆಳಗಾವಿ ಪೊಲೀಸರು ಸಿ.ಟಿ.ರವಿ ಅವರನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ,
ವಿಧಾನಸಭೆ ಚಳಿಗಾಲದ ಅಧಿವೇಶವನದ ಕೊನೆಯ ದಿನದ ಕಲಾಪದಲ್ಲಿ ಬಿಜೆಪಿ ಪರಿಷತ್ ಸದಸ್ಯ ಸಿ ಟಿ ರವಿ ತಮ್ಮ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದೂರು ದಾಖಲಿಸಿದ್ದರು,
ಲೈಂಗಿಕ ಕಿರುಕುಳ, ಮಹಿಳೆ ಇಚ್ಚೆ ವಿರುದ್ಧ ಅವಮಾನಿಸುವ ಉದ್ದೇಶದಿಂದ ಮಾಡಿದ ಪದಬಳಕೆ ಆರೋಪದಡಿ ಬಿಎನ್ಎಸ್ ಕಾಯ್ದೆ 75 ಮತ್ತು 79 ರಡಿ ದೂರು ದಾಖಲಾಗಿದೆ, ದೂರಿನನ್ವಯ ಪೊಲೀಸರು ಸಿಟಿ ರವಿ ಅವರನ್ನು ಗುರುವಾರವೇ ಬಂಧಿಸಿದ್ದು ಇದೀಗ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆತರಲಾಗುತ್ತಿದೆ,
ಸಿಟಿ ರವಿ ಬಂಧನ ವಿರೋಧಿಸಿ ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಅತ್ತ ಚಿಕ್ಕಮಂಗಳೂರು ಬಂದ್ ಗೆ ಕರೆ ಕೊಡಲಾಗಿದ್ದು, ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ರ ಗಂಟೆವರೆಗೆ ಬಂದ್ ಗೆ ಕರೆ ಕೊಟ್ಟಿದೆ, ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನೂರಾರು ಪೊಲೀಸರು ಸ್ಧಳದಲ್ಲಿ ಬೀಡುಬಿಟ್ಟಿದ್ದಾರೆ,
ಇನ್ನ ಬಂಧನದ ಬಳಿಕ ನಿನ್ನೆ ಸಂಜೆ ಸಿಟಿ ರವಿ ಅವರನ್ನು ಬಂಧಿಸಿರುವ ಪೊಲೀಸರು ರಾತ್ರಿಯಿಡೀ ಜೆಲ್ಲೆಯನ್ನು ಸುತ್ತಾಡಿಸಿದ್ದಾರೆ, ಇದರಿಂದ ತಮಗೆ ಮಾನಸಿಕ ಹಿಂಸೆ ನೀಡಿದ್ದಾರೆಂದು ಸಿಟಿ ರವಿ ಆಕ್ರೋಶ ಹೊರಹಾಕಿದ್ದು, ನನ್ನನ್ನು ಕೊಲ್ಲಲು ಕಾಂಗ್ರೆಸ್ ಪ್ಲಾನ್ ಮಾಡಿದೆ ಎಂದು ಕಿಡಿಕಾರಿದ್ದಾರೆ,