Connect with us

ರಾಜಕೀಯ

ನಾನಿನ್ನು ಸತ್ತಿಲ್ಲ, ಬದುಕಿದ್ದೇನೆ: ಜೋಶಿ ಹೇಳಿಕೆಗೆ ಗೃಹಸಚಿವರು- ಪೊಲೀಸರು ಉತ್ತರಿಸ್ತಾರೆ; ಡಿ.ಕೆ ಶಿವಕುಮಾರ್

ಬೆಳಗಾವಿ: ನಾನಿನ್ನು ಸತ್ತಿಲ್ಲ, ಬದುಕಿದ್ದೇನೆ. ಈ ಡಿ.ಕೆ.ಶಿವಕುಮಾರ್ ಇನ್ನೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದಲ್ಲಿದ್ದಾನೆ. ಬಿಜೆಪಿಯವರ ಪ್ರತಿಭಟನೆಗೆ ನಾನು ಹೆದರುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲೆಸೆದರು.

ಬೆಳಗಾವಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಸೋಮವಾರ ಪ್ರತಿಕ್ರಿಯಿಸಿದರು. ಬೆಳಗಾವಿಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಆಚರಣೆ ವೇಳೆ ಬಿಜೆಪಿಯವರು ಪ್ರತಿಭಟನೆಗೆ ಮುಂದಾಗಿರುವ ಬಗ್ಗೆ ಕೇಳಿದಾಗ, “ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿ, ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಆಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ, ಸಂವಿಧಾನ, ರಾಷ್ಟ್ರಧ್ವಜ, ರಾಷ್ಟ್ರಗೀತೆ ನೀಡಿದ್ದಾರೆ. ಇದೆಲ್ಲವೂ ಅವರ ನೇತೃತ್ವದ ಹೋರಾಟದ ಫಲ. ಇದೆಲ್ಲವನ್ನು ಉಳಿಸಿಕೊಂಡು ಸರಿಯಾದ ರೀತಿಯಲ್ಲಿ ಜಾರಿಯಲ್ಲಿಡಬೇಕು. ಗಾಂಧೀಜಿ ಅವರನ್ನು ದಿನನಿತ್ಯ ನೆನೆಯಬೇಕು ಎಂಬ ಕಾರಣಕ್ಕೆ ಮಹಾತ್ಮ ಗಾಂಧಿಜಿ ಅವರ ಭಾವಚಿತ್ರವನ್ನು ನೋಟುಗಳ ಮೇಲೆ ಮುದ್ರಣ ಮಾಡಲಾಗಿದೆ. ಮಹಾತ್ಮ ಎಂಬ ಹೆಸರು ಪಡೆದ ನಾಯಕನ ಸ್ಮರಣೆ ಮಾಡುವ ಆಚರಣೆ ವೇಳೆ ಪ್ರತಿಭಟನೆ ಮಾಡುತ್ತೇವೆ ಎಂದರೆ ನಾವು ಹೆದರುತ್ತೇವಾ?” ಎಂದು ಸವಾಲೆಸೆದರು.

ಸಿ.ಟಿ ರವಿ ಅವರನ್ನು ಫೇಕ್ ಎನ್ ಕೌಂಟರ್ ಮಾಡುವ ಹುನ್ನಾರ ನಡೆದಿತ್ತು ಎಂಬ ಪ್ರಹ್ಲಾದ್ ಜೋಷಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ಜೋಷಿ ಅವರ ಹೇಳಿಕೆಗೆ ಉತ್ತರ ಕೊಡುವುದಿಲ್ಲ. ಅದಕ್ಕೆ ಗೃಹಸಚಿವರು, ಪೊಲೀಸರು ಉತ್ತರ ನೀಡುತ್ತಾರೆ” ಎಂದು ತಿಳಿಸಿದರು. ಸಿ.ಟಿ. ರವಿ ಅವರನ್ನು ಸುತ್ತಾಡಿಸಿದ್ದರ ಬಗ್ಗೆ ಮಾತನಾಡುವ ಬಿಜೆಪಿಯವರು ಸಿ.ಟಿ ರವಿ ಮಹಿಳೆಯರ ಬಗ್ಗೆ ಆಡಿರುವ ಮಾತಿನ ಬಗ್ಗೆ ಯಾರೂ ಕೇಳುತ್ತಿಲ್ಲ ಎಂದು ಕೇಳಿದಾಗ, “ಈ ವಿಚಾರವನ್ನು ಮಾಧ್ಯಮಗಳು ಪ್ರಶ್ನೆ ಮಾಡಬೇಕು. ಈ ವಿಚಾರವಾಗಿ ನಾವು ಈಗ ಮಾತನಾಡುವುದಿಲ್ಲ. 27ರಂದು ಕಾರ್ಯಕ್ರಮಗಳು ಮುಗಿಯಲಿ ನಂತರ ಮಾತನಾಡುತ್ತೇವೆ” ಎಂದರು. ರಾಜ್ಯದಲ್ಲಿ ಏನೇ ನಡೆದರೂ ಡಿ.ಕೆ. ಶಿವಕುಮಾರ್ ಕಾರಣ ಎಂಬ ರೀತಿ ಬಿಂಬಿಸಲಾಗುತ್ತಿದೆ ಎಂದು ಕೇಳಿದಾಗ, “ನೀವು ಬಲಿಷ್ಠರಾಗಿದ್ದಷ್ಟು ಹೆಚ್ಚು ಶತ್ರುಗಳು. 

ನೀವು ಕಡಿಮೆ ಶಕ್ತಿಶಾಲಿಯಾದರೆ ಕಡಿಮೆ ಶತ್ರುಗಳು, ನೀವು ದುರ್ಬಲರಾಗಿದ್ದರೆ ಯಾವುದೇ ಶತ್ರುಗಳಿರುವುದಿಲ್ಲ. ಹೆಚ್ಚು ಕೆಲಸ ಮಾಡಿದಷ್ಟು ಹೆಚ್ಚು ತಪ್ಪುಗಳು, ಕಡಿಮೆ ಕೆಲಸ ಮಾಡಿದಷ್ಟು ಕಡಿಮೆ ತಪ್ಪುಗಳು, ಕೆಲಸಗಳೇ ಮಾಡದಿದ್ದರೆ ತಪ್ಪುಗಳೇ ಇರುವುದಿಲ್ಲ” ಎಂದು ತಿಳಿಸಿದರು. ಸರ್ಕಾರಕ್ಕೆ ನಾಡಿನ ಭವಿಷ್ಯದ ಬಗ್ಗೆ ಚಿಂತೆ ಇಲ್ಲ ಎಂಬ ಕುಮಾರಸ್ವಾಮಿ ಅವರ ಟೀಕೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಬಗ್ಗೆ ಚನ್ನಪಟ್ಟಣದಲ್ಲಿ ಪ್ರತ್ಯೇಕವಾಗಿ ಮಾತನಾಡುತ್ತೇನೆ” ಎಂದರು.

ಬೆಂಗಳೂರು

ವೇತನ ವಿವಾದದಲ್ಲಿ ಸಿಎಂ ಸ್ಪಷ್ಟನೆ: 14 ತಿಂಗಳ ಹಿಂಬಾಕಿಗೆ ಮಾತ್ರ ಸರ್ಕಾರ ಸಿದ್ಧ

ಬೆಂಗಳೂರು: ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ಈ ಬೇಡಿಕೆ ಸಮಂಜಸವಲ್ಲ. ಸರ್ಕಾರ ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ” ಎಂದು ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ತಿಳಿಸಿದ್ದಾರೆ.

2020ರಿಂದ 2023ರ ಫೆಬ್ರವರಿವರೆಗಿನ ಬಾಕಿ ವೇತನ ಪಾವತಿಗೆ ನೌಕರ ಸಂಘಗಳು ಒತ್ತಾಯಿಸಿದ್ದರೊಂದಿಗೆ, 2024ರಿಂದ ನೂತನ ವೇತನವನ್ನೂ ಜಾರಿಗೆ ತರುವಂತೆ ಒತ್ತಾಯಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, “ನಿಗಮಗಳ ಆರ್ಥಿಕ ಪರಿಸ್ಥಿತಿ ಮತ್ತು ಹಿಂದಿನ ಸರ್ಕಾರದ ಆದೇಶಗಳ ದೋಷಗಳನ್ನು ಪರಿಗಣಿಸಿ 14 ತಿಂಗಳ ವೇತನ ಹಿಂಬಾಕಿಗೆ ಸಮ್ಮತಿಯಿದೆ,” ಎಂದು ಸ್ಪಷ್ಟಪಡಿಸಿದರು.

ವೇತನ ಪರಿಷ್ಕರಣೆ ಪಶ್ಚಾತ್ಪಟ
2016ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 12.5% ವೇತನ ಹೆಚ್ಚಳ ಜಾರಿಗೆ ಬಂದಿತ್ತು. ಆದರೆ 2020ರ ಕೋವಿಡ್ ಕಾರಣದಿಂದ ಆ ವೇಳೆಗೆ ಯಾವುದೇ ಪರಿಷ್ಕರಣೆ ಆಗಿರಲಿಲ್ಲ. ನಂತರದ ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀನಿವಾಸ ಮೂರ್ತಿ ಸಮಿತಿ ಶಿಫಾರಸ್ಸಿನಂತೆ 2022ರ ಜೂನ್‌ 01ರಿಂದ 2023ರ ಫೆಬ್ರವರಿವರೆಗೆ ಹಿಂಬಾಕಿ ಪಾವತಿ ಮಾಡಲು ತೀರ್ಮಾನಿಸಲಾಗಿತ್ತು.

ಸರ್ಕಾರದ ಆರ್ಥಿಕ ಹೊಣೆಗಾರಿಕೆ
ಸಿದ್ದರಾಮಯ್ಯ ಅವರು ಹೇಳಿದ್ದಾರೆ: “ನಾವು ಅಧಿಕಾರಕ್ಕೆ ಬಂದಾಗ ನಿಗಮಗಳಿಗೆ ಒಟ್ಟಾರೆ ₹4000 ಕೋಟಿ ಸಾಲ ಇತ್ತು. 2018 ರಲ್ಲಿ ಈ ಮೊತ್ತ ಕೇವಲ ₹14 ಕೋಟಿ ಮಾತ್ರ ಇತ್ತು. ಯಾವುದೇ ನಿಗಮ ಲಾಭದಲ್ಲಿ ಇಲ್ಲ.” ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಘದ ಚುನಾವಣೆ ಮತ್ತು ಮುಂದಿನ ಕ್ರಮ
ಸಾರಿಗೆ ನೌಕರರ ಸಂಘದ ಚುನಾವಣೆ ಹಾಗೂ ಬೇಡಿಕೆಗಳ ಕುರಿತಂತೆ ಸರ್ಕಾರ ಪರಿಶೀಲನೆ ನಡೆಸಲಿದ್ದು, ಮಾತುಕತೆ ಮೂಲಕ ಎಲ್ಲ ಅಹವಾಲುಗಳನ್ನು ಬಗೆಹರಿಸಲು ಸಿದ್ಧವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

Continue Reading

ಬೆಂಗಳೂರು

ಸಾರಿಗೆ ನೌಕರರ ಮುಷ್ಕರ ಆರಂಭ: ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ – “ಹಠವಿಲ್ಲದೆ ಸಹಕಾರ ನೀಡಿ”

ಬೆಂಗಳೂರು: ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ನೌಕರರು ಮುಷ್ಕರಕ್ಕೆ (Transport Employees Strike) ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಸಾರಿಗೆ ನೌಕರರು ಕೇಳಿರುವ ಬೇಡಿಕೆಯಲ್ಲಿ ತಪ್ಪಿಲ್ಲ. ಆದರೆ ಸರ್ಕಾರದ ಪರಿಸ್ಥಿತಿಯನ್ನೂ ಅವರು ಗಮನದಲ್ಲಿಟ್ಟುಕೊಳ್ಳಬೇಕು. ಹಠವಿಲ್ಲದೆ ಸಹಕಾರ ನೀಡಬೇಕು” ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಸಚಿವರು ನೌಕರರೊಂದಿಗೆ ಸಭೆ ನಡೆಸಿದ್ದಾರೆ ಎಂಬುದನ್ನು ಅವರು ನೆನಪಿಸಿದ್ದಾರೆ.

“ಸಾರ್ವಜನಿಕರ ಹಿತವೇ ಮೊದಲಾದ್ದು. ಕೆಲವು ನೌಕರರು ಈಗಾಗಲೇ ಕೆಲಸಕ್ಕೆ ಹಾಜರಾಗಿದ್ದಾರೆ. ಅವರಿಗೆ ಅಭಿನಂದನೆ” ಎಂದು ಡಿಸಿಎಂ ಹೇಳಿದ್ದಾರೆ.

ಇತ್ತ, ಹಳದಿ ಮೆಟ್ರೊ ಮಾರ್ಗದ (Yellow Metro Line) ಉದ್ಘಾಟನೆಯ ಕುರಿತು ಮಾತನಾಡಿದ ಡಿ.ಕೆ.ಶಿವಕುಮಾರ್, “ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್ 10ರಂದು ಬರುವ ಸಾಧ್ಯತೆ ಇದೆ. ನಾವು ಈಗಾಗಲೇ ತಯಾರಿ ಪರಿಶೀಲನೆ ಆರಂಭಿಸಿದ್ದೇವೆ. ಕಾರ್ಯಕ್ರಮದ ಅಧಿಕೃತ ಸಮಯ ಇನ್ನೂ ಘೋಷಣೆಯಾಗಿಲ್ಲ” ಎಂದು ತಿಳಿಸಿದ್ದಾರೆ.

ಇದೇ ದಿನ ಬಿಜೆಪಿ ವತಿಯಿಂದ ರೈಲ್ವೆ ಸಂಬಂಧಿತ ಕಾರ್ಯಕ್ರಮವೂ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

Continue Reading

ಬೆಂಗಳೂರು

ಕೆಆರ್‌ಎಸ್ ಡ್ಯಾಂ ಕಟ್ಟಲು ಮೈಸೂರಿನ ರಾಜಮಾತೆಯ ತ್ಯಾಗ: ಟಿಪ್ಪು ವಿವಾದದ ನಡುವೆ ಪೀಠಾಧಿಪತಿಯ ಸ್ಪಷ್ಟನೆ!

ರಾಯಚೂರು: ಕಾವೇರಿ ನದೀಪ್ರಾಂತ್ಯದ ಜನರಿಗೆ ನೀರಿನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಮೈಸೂರಿನ ರಾಜಮಾತೆ ತಮ್ಮ ಆಭರಣಗಳನ್ನು ಮಾರಾಟ ಮಾಡಿ ಕೆಆರ್‌ಎಸ್ ಡ್ಯಾಂವನ್ನು ನಿರ್ಮಿಸಿದರು ಎಂದು ಗುರುರಾಘವೇಂದ್ರ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಮಂತ್ರಾಲಯದಲ್ಲಿ ಮಾತನಾಡಿದ ಅವರು, ಕೆಆರ್‌ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದಾರೆ ಎಂಬ ಸಚಿವ ಮಹಾದೇವಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, “ಇದು ರಾಜಮನೆತನದ ತ್ಯಾಗದ ಫಲ. ಇತಿಹಾಸವನ್ನು ನಿಖರವಾಗಿ ತಿಳಿದುಕೊಳ್ಳಬೇಕಾದದ್ದು ಇತಿಹಾಸ ತಜ್ಞರ ಕೆಲಸ” ಎಂದು ಹೇಳಿದರು.

ಇದೇ ವೇಳೆ ಧರ್ಮಸ್ಥಳದ ತಾತ್ಕಾಲಿಕ ವಿವಾದಗಳ ಕುರಿತು ಮಾತನಾಡಿದ ಶ್ರೀಗಳು, “ಧಾರ್ಮಿಕ ಕ್ಷೇತ್ರಗಳ ಪಾವಿತ್ರ್ಯತೆಗಿಂತ ವ್ಯವಸ್ಥೆ ಬಗ್ಗೆ ಚರ್ಚೆ ಮಾಡಬೇಕು. ಜನ ಭಕ್ತಿಯಿಂದ ನಂಬುವ ಕ್ಷೇತ್ರಗಳನ್ನು ರಾಜಕೀಯವಾಗಿಸಬಾರದು” ಎಂದು ಎಚ್ಚರಿಸಿದರು.

ಸಾರಿಗೆ ನೌಕರರ ಮುಷ್ಕರದ ವಿಚಾರಕ್ಕೂ ಪ್ರತಿಕ್ರಿಯೆ ನೀಡಿದ ಅವರು, “ಅವರ ಬೇಡಿಕೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಭಕ್ತರಿಗೆ ತೊಂದರೆಯಾಗದಂತೆ ಸೂಕ್ತ ಪರಿಹಾರ ಒದಗಿಸಲಿ” ಎಂದಿದ್ದಾರೆ.

ಇದಕ್ಕೂ ಮುನ್ನ ಸಚಿವ ಎಚ್.ಸಿ. ಮಹಾದೇವಪ್ಪ ಟಿಪ್ಪು ಸುಲ್ತಾನ್ ಕನ್ನಂಬಾಡಿ ಡ್ಯಾಂಗೆ ಅಡಿಗಲ್ಲು ಹಾಕಿದರೆಂದು ಹೇಳಿಕೆ ನೀಡಿದ್ದರು. ಆದರೆ, ಇತಿಹಾಸವನ್ನ ತಿರುವುಮಾಡುವುದು ಸರಿಯಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Continue Reading

Trending