Connect with us

ಬೆಂಗಳೂರು

MLA Pradeep Eshwar: ಕ್ಷೇತ್ರದ ಅಭಿವೃದ್ದಿಗೆ ಪ್ರದೀಪ್‌ ಹೊಸ ಸಂಕಲ್ಪ

Published

on

ಬೆಂಗಳೂರು: ಹಲವು ವಿನೂತನ ಯೋಜನೆಗಳ ಮೂಲಕ ‘ಮಾದರಿ’ ಎನಿಸಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು, ಹೊಸ ವರ್ಷಕ್ಕೆ ಹೊಸ ಆಲೋಚನೆಗಳೊಂದಿಗೆ ವರ್ಷ ಆರಂಭಿಸಲು ಮುಂದಾಗಿದ್ದಾರೆ.

ಚಿಕ್ಕಬಳ್ಳಾಪುರಕ್ಕೆ ಮೆಟ್ರೋ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಗಂಭೀರ ಪ್ರಯತ್ನ ಮಾಡುವುದು, ಚಿಕ್ಕಬಳ್ಳಾಪುರಕ್ಕೆ ಹೆಚ್ಚೆಚ್ಚು ಕೈಗಾರಿಕೆಗಳನ್ನು ತರುವ ನಿಟ್ಟಿನಲ್ಲಿ ಪ್ರಯಾಣಿಕ ಪ್ರಯತ್ನ ಮಾಡುವುದು, ಎಸ್‌ಎಸ್ ಎಲ್‌ಸಿ ವಿದ್ಯಾರ್ಥಿ ಗಳಿಗೆ ವಿಶೇಷ ಕೋಚಿಂಗ್ ನೀಡಲು ಕ್ರಮ ವಹಿಸುವುದು ಸೇರಿದಂತೆ ಹತ್ತು ಹಲವು ಹೊಸ ಸಂಕಲ್ಪಗಳನ್ನು ಮಾಡಿದ್ದಾರೆ.

ನಮ್ಮೂರಿಗೆ ನಮ್ಮ ಶಾಸಕ ಕನಸಿನ ಯೋಜನೆ ಯಶಸ್ವಿ: ಶಾಸಕರಾಗಿ ಆಯ್ಕೆಯಾದ ಕ್ಷಣ ಆರಂಭಿಸಿದ್ದ ‘ನಮಸ್ತೆ ಚಿಕ್ಕಬಳ್ಳಾಪುರ’ ಅಭಿಯಾನ ಮನೆಮಾತಾಗಿತ್ತು. ಅದಾದ ಬಳಿಕ ಆರಂಭಿಸಿದ ‘ನಮ್ಮೂರಿಗೆ ನಮ್ಮ ಶಾಸಕ ಕನಸಿನ ಯೋಜನೆ’ ಆರಂಭಿಸಿದ ಕೆಲವೇ ತಿಂಗಳಲ್ಲಿ ನೂರು ಗ್ರಾಮಗಳಿಗೆ ಭೇಟಿ ನೀಡಿ, ಜನರ ಸಂಕಷ್ಟವನ್ನು ಆಲಿಸಿದ್ದಾರೆ. ಪ್ರದೀಪ್ ಈಶ್ವರ್ ಆರಂಭಿಸಿದ ನಮ್ಮೂರಿಗೆ ನಮ್ಮ ಶಾಸಕ ಅಭಿಯಾನವನ್ನು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಶ್ಲಾಸಿದ್ದರು. ಇದೀಗ ಈ ಅಭಿಯಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುನ್ನಡೆಸಲು ಪ್ರದೀಪ್ ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ನಮ್ಮೂರಿಗೆ ನಮ್ಮ ಶಾಸಕ ಅಭಿಯಾನದಲ್ಲಿ ಕೇವಲ ಪ್ರದೀಪ್ ಈಶ್ವರ್ ಮಾತ್ರ ವಲ್ಲದೇ, ತಾಲೂಕಿನ ಎಲ್ಲ ಅಧಿಕಾರಿಗಳು ಭಾಗವಹಿಸುತ್ತಿದ್ದಾರೆ. ಆದ್ದರಿಂದ ಗ್ರಾಮಗಳಲ್ಲಿರುವ ಶೇ.60ಕ್ಕೂ ಹೆಚ್ಚು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಸಿಗುತ್ತಿದೆ.

ಇದರೊಂದಿಗೆ ಗ್ರಾಮೀಣ ಪ್ರದೇಶದಲ್ಲಿ ರಸ್ತೆ, ಚರಂಡಿ, ಸಾರಿಗೆ ಸಮಸ್ಯೆ ಇದ್ದಂತೆ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ನೀಡಲು ಕ್ರಮವಹಿಸಲಾಗಿದೆ. ಈ ಮೂಲಕ ಜನತೆ ಅನುಭವಿಸುತ್ತಿರುವ ನೈಜ ಸಮಸ್ಯೆಗಳಿಗೆ ಪರಿಹಾರ ನೀಡುವ
ಕೆಲಸವನ್ನು ಮಾಡುತ್ತಿದ್ದಾರೆ ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವೈಯಕ್ತಿಕವಾಗಿಯೂ ಸಹಾಯ: ಬಹುತೇಕ ಶಾಸಕರು ತಮ್ಮ ಕ್ಷೇತ್ರಕ್ಕೆ ಸರಕಾರದಿಂದ ಬರುವ ಅನುದಾನವನ್ನು ಪಡೆದು ಅಭಿವೃದ್ಧಿ ಪಡಿಸುತ್ತಾರೆ. ಆದರೆ ಇದಕ್ಕೆ ಅಪವಾದ ಎನ್ನುವ ರೀತಿಯಲ್ಲಿ ಪ್ರದೀಪ್ ಈಶ್ವರ್ ಅವರು ತಮ್ಮ
ವೈಯಕ್ತಿಕ ಹಣದಿಂದ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್ ವಿಶೇಷ ತರಬೇತಿ, ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ವಿಶೇಷ ತರಬೇತಿ, ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸಣೆ, ತಮ್ಮ ತಾಯಿಯ ನೆನಪಿನಲ್ಲಿ ‘ಅಮ್ಮ’ ಆಂಬ್ಯುಲೆನ್ಸ್ ಸೇವೆ, ಉಚಿತ ಶಸ್ತ್ರಚಿಕಿತ್ಸೆ ಸೇರಿದಂತೆ ಹಲವು ಯೋಜನೆಗಳನ್ನು ಕಳೆದ ವರ್ಷ ಕೈಗೆತ್ತಿಕೊಂಡಿದ್ದರು.

ಇದರೊಂದಿಗೆ ಇಡೀ ಕ್ಷೇತ್ರದ ಮಹಿಳೆಯರಿಗೆ ಸೀರೆಯನ್ನು ವಿತರಿಸಿದ್ದಾರೆ. ಪ್ರದೀಪ್ ಈಶ್ವರ್ ಕಾರ್ಯಚರಣೆ ಬಗ್ಗೆ
ರೇಣುಮಾಕಲಹಳ್ಳಿಯ ಮಾರಪ್ಪ ಮಾತನಾಡಿದ್ದು, ಈ ಹಿಂದೆ ಶಾಸಕರನ್ನು ಚುನಾವಣೆಯ ಸಮಯದಲ್ಲಿ ಮಾತ್ರ ನೋಡುತ್ತಿದ್ದೇವು. ಆದರೀಗ ಶಾಸಕರೇ ನಮ್ಮ ಮನೆಗೆ ಆಗಮಿಸಿ ಕಷ್ಟಗಳನ್ನು ಆಲಿಸುತ್ತಿದ್ದಾರೆ. ಇಂತಹ ಶಾಸಕ ರಿದ್ದರೆ ಕ್ಷೇತ್ರದ ಅಭಿವೃದ್ಧಿ ಸಾಧ್ಯ. ರಾಜಕೀಯದಲ್ಲಿ ಇನ್ನಷ್ಟು ಎತ್ತರದ ಸ್ಥಾನ ಅವರಿಗೆ ಸಿಕ್ಕರೆ ಕ್ಷೇತ್ರದ ಅಭಿವೃದ್ಧಿಗೆ ಸಹಾಯವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

200 ಕೋಟಿ ರು. ಅನುದಾನ ಹಂಚಿಕೆ: ಶಾಸಕರಾಗಿ ಆಯ್ಕೆಯಾದ ದಿನದಿಂದ ವಿವಿಧ ಕಾಮಗಾರಿಗಳಿಗೆ ಸಂಬಂಧಿ ಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿರುವ ಅವರು, ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ 200 ಕೋಟಿ ರು.ಗೂ ಹೆಚ್ಚುವರಿ ಅನುದಾನವನ್ನು ಕ್ಷೇತ್ರಕ್ಕೆ ತಂದಿದ್ದಾರೆ. ಅನುದಾನ ಬಿಡುಗಡೆಯಾದ ಎಲ್ಲ ಯೋಜನೆಗಳು ಕಾಲಮಿತಿಯಲ್ಲಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರೊಂದಿಗೆ ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಕಳೆದ ಒಂದೂ ವರೆ ವರ್ಷದ ಅವಧಿಯಲ್ಲಿ ಸಿಎಂ, ಡಿಸಿಎಂ ಅವರೊಂದಿಗೆ 10ಕ್ಕೂ ಹೆಚ್ಚು ಬಾರಿ ಸಭೆ ನಡೆಸಿದ್ದಾರೆ.

ಹೊಸ ಆಲೋಚನೆಗಳೇನು?
ಚಿಕ್ಕಬಳ್ಳಾಪುರಕ್ಕೆ ಮೆಟ್ರೋ ಸಂಪರ್ಕ ಕಲ್ಪಿಸುವಂತೆ ಸರಕಾರಕ್ಕೆ ಮನವಿ; ಈ ನಿಟ್ಟಿನಲ್ಲಿ ಗಂಭೀರ ಪ್ರಯತ್ನ
ಚಿಕ್ಕಬಳ್ಳಾಪುರಕ್ಕೆ ಹೆಚ್ಚೆಚ್ಚು ಕೈಗಾರಿಕೆಗಳನ್ನು ತರುವ ನಿಟ್ಟಿನಲ್ಲಿ ಪ್ರಯಾಣಿಕ ಪ್ರಯತ್ನ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಶೇಷ ಕೋಚಿಂಗ್ ನೀಡಲು ಕ್ರಮ

ಪ್ರಾಯೋಗಿಕವಾಗಿ ಇಸ್ರೇಲ್ ಮಾದರಿಯ ಕೃಷಿ ಆರಂಭ

2027ರ ವೇಳೆಗೆ ಎತ್ತಿನಹೊಳೆ ನೀರು ಚಿಕ್ಕಬಳ್ಳಾಪುರಕ್ಕೆ ಬರುವುದಕ್ಕೆ ಅಗತ್ಯ ತಯಾರಿ

ಸರಕಾರಿ ಮಕ್ಕಳನ್ನು ಏಮ್ಸ್, ಐಐಟಿಯಲ್ಲಿ ಪ್ರವೇಶ ಪಡೆಯುವಂತೆ ಮಾಡಲು ಉಚಿತ ಕೋಚಿಂಗ್

ವೈಯಕ್ತಿಕವಾಗಿ ಸಾವಿರ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್ ಕೋಚಿಂಗ್ (ಪ್ರತಿಯೊಬ್ಬರಿಗೂ 50 ಸಾವಿರ ವೆಚ್ಚ).

ದೇಶ

‘ನೀಟ್ ಅಕ್ರಮಕ್ಕೆ ಮೋದಿ-ಧರ್ಮೇಂದ್ರ ಪ್ರಧಾನ್ ಹೊಣೆ’: CM ಸಿದ್ದರಾಮಯ್ಯ

Published

on

ಬೆಂಗಳೂರು: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ NEET ವೈದ್ಯಕೀಯ ಪ್ರವೇಶ ಪರೀಕ್ಷೆಯ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಪ್ರಧಾನಿ Narendra Modi ಹಾಗೂ ಕೇಂದ್ರ ಶಿಕ್ಷಣ ಸಚಿವ Dharmendra Pradhan ನೇರ ಹೊಣೆ ಹೊರಬೇಕು ಎಂದು ಮುಖ್ಯಮಂತ್ರಿ Siddaramaiah ಒತ್ತಾಯಿಸಿದರು.

ಬೆಂಗಳೂರಿನ Freedom Park ನಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಸಿಎಂ, “ಈ ಹಿಂದೆ ರಾಜ್ಯಗಳು ತಮ್ಮದೇ CET ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸುತ್ತಿದ್ದರು. ಆದರೆ 2016ರಲ್ಲಿ ಮೋದಿ ಸರ್ಕಾರ ಬಲವಂತವಾಗಿ NEET ಜಾರಿಗೆ ತಂದ ಬಳಿಕ ಅಕ್ರಮಗಳು ಹೆಚ್ಚಾಗಿವೆ” ಎಂದು ಆರೋಪಿಸಿದರು.

“ಶಿಕ್ಷಣ ಸಂವಿಧಾನದ ಸಮವರ್ತಿ ಪಟ್ಟಿಯ ವಿಷಯ. ರಾಜ್ಯಗಳಿಗೆ ಸ್ವಾಯತ್ತತೆ ಇರಬೇಕು. ಆದರೆ ಕೇಂದ್ರ ಸರ್ಕಾರ ಎಲ್ಲಾ ಅಧಿಕಾರವನ್ನು ತನ್ನಲ್ಲೇ ಕೇಂದ್ರೀಕರಿಸಿಕೊಂಡ ಪರಿಣಾಮ ಇಂತಹ ಹಗರಣಗಳು ಮರುಕಳಿಸುತ್ತಿವೆ” ಎಂದು ಅವರು ಹೇಳಿದರು.

ಕಳೆದ ಹತ್ತು ವರ್ಷಗಳಲ್ಲಿ ಐದು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿದ ಸಿದ್ದರಾಮಯ್ಯ, “ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳು ವರ್ಷವಿಡೀ ಶ್ರಮಪಟ್ಟು ಪರೀಕ್ಷೆಗೆ ಸಿದ್ಧತೆ ನಡೆಸುತ್ತಾರೆ. ಆದರೆ ಪೇಪರ್ ಲೀಕ್ ಮೂಲಕ ಅವರ ಭವಿಷ್ಯದ ಜೊತೆ ಚೆಲ್ಲಾಟವಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಸಿಎಂ, “ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಹತಾಶರಾಗಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಘಟನೆಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಬಿಜೆಪಿ ಆಡಳಿತದಲ್ಲಿ ಅಕ್ರಮಗಳ ಸರಮಾಲೆ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ PSI ನೇಮಕಾತಿ ಹಗರಣವನ್ನೂ ಉಲ್ಲೇಖಿಸಿದರು. “ದೇಶದ ಯುವಜನತೆ ಆಕ್ರೋಶದಲ್ಲಿದ್ದರೂ ಪ್ರಧಾನಿ ಮೋದಿ ವಿದೇಶ ಪ್ರವಾಸದಲ್ಲಿದ್ದಾರೆ” ಎಂದು ಟೀಕಿಸಿದರು.

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ದೊರೆಯುವವರೆಗೂ ಕಾಂಗ್ರೆಸ್ ಹೋರಾಟ ಮುಂದುವರಿಯಲಿದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

Continue Reading

ದೇಶ

ಪೆಟ್ರೋಲ್-ಡಿಸೇಲ್ ತೆರಿಗೆ ಕಡಿತಕ್ಕೆ ಸಿಎಂ ಸ್ಪಷ್ಟ ನಕಾರ

Published

on

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಕುರಿತು ಚರ್ಚೆಗಳು ತೀವ್ರವಾಗಿರುವ ನಡುವೆ ಮುಖ್ಯಮಂತ್ರಿ Siddaramaiah ರಾಜ್ಯ ಸರ್ಕಾರ ಇಂಧನ ಮೇಲಿನ ತೆರಿಗೆಯನ್ನು ಕಡಿತ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಕೇಂದ್ರ ಸರ್ಕಾರ ಇಂಧನ ದರ ಹೆಚ್ಚಿಸಿದರೆ ನಾವು ತೆರಿಗೆ ಕಡಿಮೆ ಮಾಡಬೇಕಾ? ಅವರು ಬೆಲೆ ಏರಿಕೆ ಮಾಡಿದಾಗ ಯಾಕೆ ಪ್ರಶ್ನೆ ಕೇಳುವುದಿಲ್ಲ?” ಎಂದು ಪ್ರಶ್ನಿಸಿದರು. ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಇಂಧನ ದರ ಏರಿಕೆಗೆ ಪ್ರಮುಖ ಕಾರಣ ಕೇಂದ್ರ ಸರ್ಕಾರವೇ ಎಂದು ಆರೋಪಿಸಿದರು.

ಮುಂದುವರಿದು ಅವರು, “Narendra Modi ಅಧಿಕಾರಕ್ಕೆ ಬಂದಾಗ ಪೆಟ್ರೋಲ್ ಮತ್ತು ಡಿಸೇಲ್ ದರ ಎಷ್ಟು ಇತ್ತು? ಮಾಜಿ ಪ್ರಧಾನಿ Manmohan Singh ಅವಧಿಯಲ್ಲಿ ಪೆಟ್ರೋಲ್ ₹70 ಮತ್ತು ಡಿಸೇಲ್ ₹48 ಇತ್ತು. ಗ್ಯಾಸ್ ಸಿಲಿಂಡರ್ ಬೆಲೆ ₹414 ಇತ್ತು. ಈಗ ದರ ಎಷ್ಟು ಏರಿದೆ ಎಂಬುದನ್ನು ಜನರು ಗಮನಿಸಬೇಕು” ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರ ಜನರಿಗೆ ಯಾವುದೇ ನೆರವು ನೀಡುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಕೇಂದ್ರ ಸರ್ಕಾರ ದರ ಹೆಚ್ಚಿಸಿದಾಗ ಅವರ ವಿರುದ್ಧ ಪ್ರಶ್ನೆ ಕೇಳುವುದಿಲ್ಲ. ಆದರೆ ರಾಜ್ಯ ಸರ್ಕಾರ ತೆರಿಗೆ ಕಡಿಮೆ ಮಾಡಬೇಕೆಂದು ಕೇಳುತ್ತೀರಿ. ನಿಮ್ಮ ಪ್ರಶ್ನೆಗಳಲ್ಲೇ ಕೇಂದ್ರ ಸರ್ಕಾರದ ಪರ ನಿಲುವು ಕಾಣಿಸುತ್ತದೆ” ಎಂದು ಮಾಧ್ಯಮಗಳ ಮೇಲೆಯೂ ಅಸಮಾಧಾನ ವ್ಯಕ್ತಪಡಿಸಿದರು.

ಇಂಧನ ದರ ಏರಿಕೆ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವೆ ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಳ್ಳುವ ಲಕ್ಷಣಗಳು ಕಂಡುಬರುತ್ತಿವೆ.

Continue Reading

ದೇಶ

‘ಹೈದರಾಬಾದ್‌ನಲ್ಲಿ ಗುಂಡಿಗಳೇ ಇಲ್ಲ, ಬೆಂಗಳೂರಿನಲ್ಲಿ ಯಾಕೆ?’: ವಿದೇಶಿಗನ ಪ್ರಶ್ನೆ ವೈರಲ್

Published

on

ಹೈದರಾಬಾದ್: Bengaluru ನಗರದ ಟ್ರಾಫಿಕ್ ಮತ್ತು ರಸ್ತೆ ಸಮಸ್ಯೆಗಳು ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿವೆ. ಈ ಬಾರಿ ಕೆನಡಾ ಮೂಲದ ಕ್ಯಾಲೆಬ್ ಫ್ರೀಸೆನ್ ಎಂಬುವವರು Hyderabad ನಗರದ ರಸ್ತೆಗಳನ್ನು ಹೊಗಳಿ, ಬೆಂಗಳೂರಿನ ಮೂಲಸೌಕರ್ಯವನ್ನು ಪ್ರಶ್ನಿಸಿರುವ ವಿಡಿಯೋ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣ X ನಲ್ಲಿ ವಿಡಿಯೋ ಹಂಚಿಕೊಂಡಿರುವ ಕ್ಯಾಲೆಬ್, “ಹೈದರಾಬಾದ್‌ನಲ್ಲಿ ರಸ್ತೆಗಳು ಅತ್ಯುತ್ತಮವಾಗಿವೆ. ನಗರದ ಮಧ್ಯಭಾಗದಲ್ಲಿದ್ದರೂ ಸಂಚಾರ ಸುಲಭವಾಗಿದೆ. ಎಲ್ಲೆಡೆ ಉತ್ತಮ ರಸ್ತೆ ಸಂಪರ್ಕವಿದ್ದು, ಗುಂಡಿಗಳ ಸಮಸ್ಯೆ ಕಾಣುತ್ತಿಲ್ಲ” ಎಂದು ಹೇಳಿದ್ದಾರೆ.

ಮುಂದುವರಿದು ಅವರು, “ಇಲ್ಲಿ ರಸ್ತೆಗಳ ಮೇಲೆ ಪ್ರಾಣಿಗಳ ಓಡಾಟ ಇಲ್ಲ, ಪಾದಚಾರಿಗಳು ಹಠಾತ್ ವಾಹನಗಳ ಮುಂದೆ ಬರುತ್ತಿಲ್ಲ. ಹೈದರಾಬಾದ್‌ನಲ್ಲಿ ಇಷ್ಟು ಉತ್ತಮ ರಸ್ತೆ ವ್ಯವಸ್ಥೆ ಇರುವಾಗ ಬೆಂಗಳೂರಿನಲ್ಲಿ ಯಾಕೆ ಸಾಧ್ಯವಾಗುತ್ತಿಲ್ಲ ಎಂಬುದು ಅರ್ಥವಾಗುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ಹೈದರಾಬಾದ್‌ನಲ್ಲಿ ಟ್ರಾಫಿಕ್ ದಟ್ಟಣೆ ಕಡಿಮೆ ಇರುವುದನ್ನೂ ಅವರು ಮೆಚ್ಚಿಕೊಂಡಿದ್ದಾರೆ.

ಈ ವಿಡಿಯೋ ವೈರಲ್ ಆದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ‘ಬೆಂಗಳೂರು Vs ಹೈದರಾಬಾದ್’ ಚರ್ಚೆ ಜೋರಾಗಿದೆ. ಹಲವರು ಬೆಂಗಳೂರಿನಲ್ಲಿ ಯೋಜಿತ ರಸ್ತೆ ಅಭಿವೃದ್ಧಿ ಹಾಗೂ ಪರಿಣಾಮಕಾರಿ ಟ್ರಾಫಿಕ್ ನಿರ್ವಹಣೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೆಲವರು ಬಿಬಿಎಂಪಿ ಆಡಳಿತದ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದರೆ ಬೆಂಗಳೂರು ಪರವಾಗಿ ಪ್ರತಿಕ್ರಿಯಿಸಿದ ಕೆಲ ನೆಟ್ಟಿಗರು, “ಎಲ್ಲಾ ನಗರಗಳಲ್ಲೂ ಒಳ್ಳೆಯ ಮತ್ತು ಕೆಟ್ಟ ರಸ್ತೆಗಳು ಇರುತ್ತವೆ. ಹೈದರಾಬಾದ್‌ನ ಪ್ರಮುಖ ಪ್ರದೇಶಗಳನ್ನು ನೋಡಿ ಮಾತ್ರ ಇಂತಹ ಅಭಿಪ್ರಾಯ ನೀಡಲಾಗಿದೆ” ಎಂದು ತಿರುಗೇಟು ನೀಡಿದ್ದಾರೆ.

ಇದೇ ವೇಳೆ ಹೈದರಾಬಾದ್ ನಿವಾಸಿಯೊಬ್ಬರು, “ದಯವಿಟ್ಟು ನಮ್ಮ ನಗರವನ್ನು ಇಷ್ಟು ಹೊಗಳಬೇಡಿ. ಇಲ್ಲದಿದ್ದರೆ ಬೆಂಗಳೂರಿನಂತೆ ಮನೆ ಬಾಡಿಗೆಗಳು ಏರಿಬಿಡುತ್ತವೆ” ಎಂದು ಹಾಸ್ಯಭರಿತ ಕಾಮೆಂಟ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ರಸ್ತೆ ಅಭಿವೃದ್ಧಿ ಮತ್ತು ನಗರ ಯೋಜನೆ ಕುರಿತು ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ.

Continue Reading

Trending