Connect with us

ಕ್ರೀಡೆ

ಭಾರತೀಯ ಬ್ಯಾಟರ್‌ಗಳಲ್ಲಿ ತಾಂತ್ರಿಕ ಕೊರತೆಗಳಿವೆ, ಅವರು ಹೆಚ್ಚು ದೇಶಿ ಕ್ರಿಕೆಟ್ ಆಡಬೇಕು: ಸುನಿಲ್ ಗವಾಸ್ಕರ್ – SUNIL GAVASKAR

ಸಿಡ್ನಿ(ಆಸ್ಟ್ರೇಲಿಯಾ): ಮುಂದಿನ ಆವೃತ್ತಿಯ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ಗೂ ಮುನ್ನ ಭಾರತ ಕ್ರಿಕೆಟ್‌ ತಂಡದ ಆಟಗಾರರು ಹೆಚ್ಚು ದೇಶಿ ಕ್ರಿಕೆಟ್‌ ಆಡುವುದನ್ನು ಮುಖ್ಯ ಕೋಚ್‌ ಖಾತ್ರಿಪಡಿಸಿಕೊಳ್ಳಬೇಕು ಎಂದು ಭಾರತದ ಹಿರಿಯ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಹೇಳಿದ್ದಾರೆ. ಅದೇ ರೀತಿ, ತವರಿನಲ್ಲಿ ನ್ಯೂಜಿಲೆಂಡ್‌ ವಿರುದ್ಧ ಮತ್ತು ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಉತ್ತಮ ರೀತಿಯಲ್ಲಿ ಬ್ಯಾಟಿಂಗ್ ಪ್ರದರ್ಶನ ನೀಡಲು ವಿಫಲರಾಗಿಯೂ ದೇಶಿ ಕ್ರಿಕೆಟ್‌ನಿಂದ ಹೊರಗುಳಿಯಲು ಬಯಸುವ ಕ್ರಿಕೆಟಿಗರ ವಿರುದ್ಧ ಮುಲಾಜಿಲ್ಲದೆ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಬಾರ್ಡರ್‌-ಗವಾಸ್ಕರ್ ಟ್ರೋಫಿಯಲ್ಲಿ ಭಾರತದ ಬ್ಯಾಟಿಂಗ್‌ ಲೈನಪ್‌ನಲ್ಲಿ ಕಂಡುಬಂದ ತಾಂತ್ರಿಕ ಕೌಶಲಗಳ ಕೊರತೆಗಳ ಕುರಿತು ಗವಾಸ್ಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಮುಖ್ಯವಾಗಿ, ನಾಯಕ ರೋಹಿತ್ ಶರ್ಮಾ (3 ಪಂದ್ಯ ಮತ್ತು 5 ಇನ್ನಿಂಗ್ಸ್‌ನಲ್ಲಿ 6.20ರ ಸರಾಸರಿಯಲ್ಲಿ 31 ರನ್‌), ವಿರಾಟ್ ಕೊಹ್ಲಿ (5 ಪಂದ್ಯ ಮತ್ತು 9 ಇನ್ನಿಂಗ್ಸ್‌ನಲ್ಲಿ 23.75ರ ಸರಾಸರಿಯಲ್ಲಿ 190 ರನ್) ಇಬ್ಬರೂ ಕೂಡಾ ಕ್ರೀಸ್‌ನಲ್ಲಿ ಹೆಚ್ಚು ಹೊತ್ತು ನಿಲ್ಲಲು ವಿಫಲರಾಗಿದ್ದರು. ವಿರಾಟ್ ಕೊಹ್ಲಿ ಇಡೀ ಟೂರ್ನಿಯಾದ್ಯಂತ ಔಟ್‌ಸೈಡ್‌ ಆಫ್ ಸ್ಟಂಪ್‌ನಲ್ಲೇ ಆಸೀಸ್ ಆಟಗಾರರಿಗೆ ಸುಲಭವಾಗಿ ವಿಕೆಟ್‌ ನೀಡಿ ಪೆವಿಲಿಯನ್ ಸೇರುತ್ತಿದ್ದರು. ವೇಗದ ಬೌಲರ್ ಸ್ಕಾಟ್‌ ಬಾಲೆಂಡ್ ಕೊಹ್ಲಿಯನ್ನು ನಾಲ್ಕು ಬಾರಿ ಔಟ್‌ ಮಾಡಿದ್ದರು ಎಂಬುದು ಗಮನಾರ್ಹ.

ಸ್ಟಾರ್‌ ಸ್ಪೋರ್ಟ್ಸ್‌ ವಾಹಿನಿ ಜೊತೆ ಭಾರತದ ಬ್ಯಾಟಿಂಗ್ ವೈಫಲ್ಯದ ಕುರಿತು ಮಾತನಾಡಿದ ಗವಾಸ್ಕರ್, “ನಾನು ಭಾರತೀಯ ಬ್ಯಾಟರ್‌ಗಳಲ್ಲಿ ತಾಂತ್ರಿಕ ಕೊರತೆಗಳನ್ನು ಕಂಡೆ. ಮಾಡಿದ ತಪ್ಪನ್ನೇ ಅವರು ಮತ್ತೆ ಮತ್ತೆ ಮಾಡುತ್ತಿದ್ದಾರೆ. ಇದೊಂದೇ ಸರಣಿಯನ್ನು ಉದ್ದೇಶಿಸಿ ನಾನು ಮಾತನಾಡುತ್ತಿಲ್ಲ. ಇದಕ್ಕೂ ಹಿಂದಿನ ನ್ಯೂಜಿಲೆಂಡ್‌ ಸರಣಿಯ ಕುರಿತು ಕೂಡಾ ಮಾತನಾಡುತ್ತಿದ್ದೇನೆ. ನೀವು ನ್ಯೂಜಿಲೆಂಡ್‌ ವಿರುದ್ಧ ಭಾರತದಲ್ಲಿ ಹೇಗೆ ಆಡಿದ್ದೀರಿ? ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಮುಂದಿನ ಆವೃತ್ತಿ ಜೂನ್‌ನಿಂದ ಆರಂಭವಾಗಲಿದೆ. ಈ ಬಾರಿ ನಾವು ಅರ್ಹತೆ ಪಡೆದಿಲ್ಲ. ಹೀಗಾಗಿ, ಇಂದಿನಿಂದಲೇ ಸರಿಯಾದ ಸಿದ್ಧತೆ ನಡೆಸಬೇಕು. ಕಠಿಣ ನಿರ್ಧಾರಗಳನ್ನು ತೆಗೆದುಕೊಂಡರೆ ಮಾತ್ರ ನಾವು ಅವರನ್ನು ಎದುರಿಸಬಹುದು” ಎಂದು ಹೇಳಿದರು.

ರಣಜಿ ಕ್ರಿಕೆಟ್‌ ಆಡಲೇಬೇಕು: ಈ ನಿಟ್ಟಿನಲ್ಲಿ ಮುಂಬರುವ ರಣಜಿ ಕ್ರಿಕೆಟ್‌ ಪಂದ್ಯಗಳಲ್ಲಿ ಆಟಗಾರರು ಆಡಲೇಬೇಕು ಎಂದು ಒತ್ತಾಯಿಸಿರುವ ಗವಾಸ್ಕರ್, “ಜನವರಿ 23ರಿಂದ ರಣಜಿ ಟ್ರೋಫಿಯ ಮುಂದಿನ ಹಂತ ನಡೆಯುತ್ತದೆ. ಎಷ್ಟು ಮಂದಿ ಈ ತಂಡದಿಂದ ಆಡುತ್ತಾರೆ, ಎಷ್ಟು ಮಂದಿ ರಣಜಿಗೆ ಲಭ್ಯವಾಗುತ್ತಾರೆ ನೋಡೋಣ. ಈ ಪಂದ್ಯಗಳಲ್ಲಿ ಆಡದೇ ಇರುವವರ ವಿಚಾರವಾಗಿ ಯಾವುದೇ ಸಬೂಬು, ನೆಪ, ಸಮರ್ಥನೆಗೆ ಅವಕಾಶವೇ ಇರಕೂಡದು. ಒಂದು ವೇಳೆ ಆಡದೇ ಇದ್ದಲ್ಲಿ ಮುಖ್ಯ ಕೋಚ್ ಗೌತಮ್ ಗಂಭೀರ್ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲೇಬೇಕು. ಆಟಗಾರರಲ್ಲಿ ಬದ್ಧತೆಯ ಕೊರತೆ ಎದ್ದು ಕಾಣುತ್ತಿದೆ. ನಮಗೆ ನಿಮ್ಮಲ್ಲಿ ಬದ್ಧತೆ ಬೇಕು. ನೀವು ಸೂಕ್ತ ರೀತಿಯಲ್ಲಿ ಆಡುತ್ತಿಲ್ಲ. ನೀವು ಏನೆಲ್ಲಾ ಮಾಡಬೇಕೋ ಮಾಡಿ. ಇಲ್ಲದೇ ಹೋದರೆ ನಿಮಗೆ ಟೆಸ್ಟ್ ತಂಡದಲ್ಲಿ ಸ್ಥಾನವಿರದು” ಎಂದು ಚಾಟಿ ಬೀಸಿದರು.

ದೃಢ ನಿರ್ಧಾರಕ್ಕೆ ಬದ್ಧತೆಯ ಕೊರತೆ: ಆಸ್ಟೇಲಿಯಾ ವಿರುದ್ಧ ಭಾರತದ ಬ್ಯಾಟಿಂಗ್‌ ಲೈನಪ್‌ನಿಂದ ಶತಕಗಳ ಕೊರತೆಯ ಕುರಿತು ಮಾತನಾಡಿದ ಗವಾಸ್ಕರ್, “ಯಶಸ್ವಿ ಜೈಸ್ವಾಲ್ ಮತ್ತು ನಿತಿಶ್ ಕುಮಾರ್ ರೆಡ್ಡಿ ಮಾತ್ರ ತಲಾ ಒಂದೊಂದು ಶತಕ ಬಾರಿಸಿದರು. ಇಲ್ಲಿ ತಂಡದ ಬದ್ಧತೆ, ಯೋಜನೆ, ಯೋಚನೆಗಳ ಅನ್ವಯಿಸುವಿಕೆ ಅತ್ಯಂತ ಕೆಳ ಮಟ್ಟದಲ್ಲಿರುವುದು ಕಾಣುತ್ತದೆ. ಎಷ್ಟು ಮಂದಿ ಭಾರತದ ಬ್ಯಾಟರ್‌ಗಳ ಶತಕ ಬಾರಿಸಿದರು?, ಮೊದಲ ಟೆಸ್ಟ್‌ನಲ್ಲಿ ಮೂಡಿಬಂದ ಎರಡು ಶತಕಗಳನ್ನು ಹೊರತುಪಡಿಸಿದರೆ ನಿತೀಶ್ ರೆಡ್ಡಿ ಮಾತ್ರ ಶತಕ ಬಾರಿಸಿದ್ದಾರೆ. ಎಷ್ಟು ಮಂದಿ ಆಟಗಾರರು ಅರ್ಧ ಶತಕ ಸಿಡಿಸಿದರು?, ಶತಕ ಸಿಡಿಸುವುದು ಸುಲಭವಲ್ಲ ಎಂದು ನೀವು ಹೇಳಬಹುದು. ಆದರೆ, ಎಷ್ಟು ಮಂದಿ ಆಟಗಾರರು ಕನಿಷ್ಠ ಅರ್ಧ ಶತಕ ಸಿಡಿಸಿ ಪಂದ್ಯ ಗತಿಯನ್ನು ಬದಲಿಸಲು ಪ್ರಯತ್ನಿಸಿದರು?, ಇದು ನಡೆಯಲೇ ಇಲ್ಲ, ಏಕೆಂದರೆ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅನ್ವಯಿಸುವಿಕೆ ಬಹಳ ಮುಖ್ಯ. ಹಾಗಾಗಿ ಈ ಅನ್ವಯಿಸುವಿಕೆ ಮತ್ತು ಗಟ್ಟಿ ನಿರ್ಧಾರ ತೆಗೆದುಕೊಳ್ಳುವಲ್ಲಿನ ಬದ್ಧತೆಯ ಕೊರತೆ ಕಂಡುಬಂತು” ಎಂದರು.

ಕ್ರೀಡೆ

T20 WORLD CUP : ಪಾಕ್ ಪಂದ್ಯಕ್ಕೂ ಅಭಿಷೇಕ್ ಶರ್ಮಾ ಅನುಮಾನ: ನಾಯಕ ಸೂರ್ಯಕುಮಾರ್ ಸ್ಪಷ್ಟನೆ

ನವದೆಹಲಿ, ಫೆ.13: ಹೊಟ್ಟೆನೋವಿನಿಂದ ಚೇತರಿಸಿಕೊಳ್ಳುತ್ತಿರುವ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಗುರುವಾರ ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಆಡಲಿಲ್ಲ. ಭಾನುವಾರ ನಡೆಯಲಿರುವ ಪಾಕಿಸ್ತಾನ ಎದುರಿನ ಮಹತ್ವದ ಪಂದ್ಯಕ್ಕೂ ಅವರ ಲಭ್ಯತೆ ಅನುಮಾನಾಸ್ಪದವಾಗಿದೆ ಎಂದು ನಾಯಕ Suryakumar Yadav ತಿಳಿಸಿದ್ದಾರೆ.

ಅಭಿಷೇಕ್‌ ಸೋಮವಾರ ಅಸ್ವಸ್ಥತೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಬುಧವಾರ ತಂಡಕ್ಕೆ ಮರಳಿದರೂ ತರಬೇತಿಯಲ್ಲಿ ಭಾಗವಹಿಸಲಿಲ್ಲ. ಈ ಬಗ್ಗೆ Board of Control for Cricket in India (BCCI) ಪ್ರಕಟಣೆಯಲ್ಲಿ, “ಅಭಿಷೇಕ್ ಇನ್ನೂ ಚೇತರಿಕೆ ಹಂತದಲ್ಲಿದ್ದಾರೆ. ವೈದ್ಯಕೀಯ ತಂಡ ನಿಗಾ ವಹಿಸಿದೆ” ಎಂದು ತಿಳಿಸಿತ್ತು.

ಟಾಸ್ ವೇಳೆ ಮಾತನಾಡಿದ ಸೂರ್ಯಕುಮಾರ್, “ಅಭಿಷೇಕ್ ಒಂದು ಅಥವಾ ಎರಡು ಪಂದ್ಯಗಳಿಗೆ ವಿಶ್ರಾಂತಿ ಪಡೆಯಬಹುದು. ಸಂಪೂರ್ಣ ಫಿಟ್ ಆಗಿಲ್ಲ” ಎಂದರು. ಹೀಗಾಗಿ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಅವರು ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. 24 ವರ್ಷದ ಅಭಿಷೇಕ್ ಪಾಕಿಸ್ತಾನ ವಿರುದ್ಧ ಮೂರು ಪಂದ್ಯಗಳಲ್ಲಿ 189 ಸ್ಟ್ರೈಕ್ ರೇಟ್‌ನಲ್ಲಿ 110 ರನ್ ಗಳಿಸಿದ್ದಾರೆ.


🇮🇳 ಭಾರತಕ್ಕೆ ಭರ್ಜರಿ ಜಯ

ಗುರುವಾರ ನಡೆದ ಪಂದ್ಯದಲ್ಲಿ ಭಾರತ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 209 ರನ್ ಪೇರಿಸಿತು. ಕಠಿಣ ಗುರಿ ಬೆನ್ನಟ್ಟಿದ ನಮೀಬಿಯಾ 18.2 ಓವರ್‌ಗಳಲ್ಲಿ 116 ರನ್‌ಗಳಿಗೆ ಆಲೌಟ್ ಆಯಿತು.

ಆರಂಭಿಕ ಆಟಗಾರ Ishan Kishan ಕೇವಲ 20 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಮಿಂಚಿದರು. ಮಧ್ಯಮ ಕ್ರಮಾಂಕದಲ್ಲಿ Hardik Pandya 52 ರನ್ ಗಳಿಸಿ ತಂಡದ ಮೊತ್ತವನ್ನು 200 ದಾಟಿಸಿದರು. ಬೌಲಿಂಗ್‌ನಲ್ಲಿ Varun Chakravarthy 3 ವಿಕೆಟ್ ಪಡೆದರೆ, Axar Patel ಮತ್ತು ಹಾರ್ದಿಕ್ ತಲಾ ಎರಡು ವಿಕೆಟ್ ಕಿತ್ತು ಮಿಂಚಿದರು

Continue Reading

ಕ್ರೀಡೆ

BENGALURU : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ಗೆ ಒಪ್ಪಿಗೆ: 35 ಸಾವಿರ ಜನ ಮಿತಿ, ಭದ್ರತೆಗೆ ಸಮಿತಿ

ಬೆಂಗಳೂರು: ನಗರದ **M. Chinnaswamy Stadium**ನಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸಲು ರಾಜ್ಯ ಸರ್ಕಾರ ಹಸಿರು ನಿಶಾನೆ ನೀಡಿದೆ. ಭದ್ರತೆ ಹಾಗೂ ಜನಸಂಚಾರ ನಿಯಂತ್ರಣಕ್ಕೆ ವಿಶೇಷ ಸಮಿತಿ ರಚನೆ ಮಾಡಲಾಗಿದೆ ಎಂದು ಗೃಹಸಚಿವ G. Parameshwara ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಹೊಸದಾಗಿ ಏನೂ ಮಾಡುವುದಿಲ್ಲ. ಸೇಫ್ಟಿ ಮೋಸ್ಟ್ ಇಂಪಾರ್ಟೆಂಟ್. ಸಮಿತಿ ಎಲ್ಲಾ ಕ್ರಮ ಕೈಗೊಳ್ಳುತ್ತದೆ” ಎಂದು ಸ್ಪಷ್ಟಪಡಿಸಿದರು.


35 ಸಾವಿರ ಜನರ ಮಿತಿ

ರಾಜ್ಯ ಸರ್ಕಾರದ ಕ್ಯಾಬಿನೆಟ್ ಸಭೆಯಲ್ಲಿ Indian Premier League (IPL) ಪಂದ್ಯ ಆಯೋಜನೆಗೆ ಷರತ್ತುಬದ್ಧ ಒಪ್ಪಿಗೆ ನೀಡಲಾಗಿದೆ. ಒಂದು ಪಂದ್ಯಕ್ಕೆ ಗರಿಷ್ಠ 35 ಸಾವಿರಕ್ಕಿಂತ ಹೆಚ್ಚು ಪ್ರೇಕ್ಷಕರು ಸೇರಬಾರದು ಎಂಬ ನಿಯಮ ವಿಧಿಸಲಾಗಿದೆ.

ಕ್ಯಾಬಿನೆಟ್ ಸಭೆಗೆ ಮುನ್ನ ವಿಧಾನಸೌಧದಲ್ಲಿ ಗೃಹ ಸಚಿವರು, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್ ನೇತೃತ್ವದ ಸಮಿತಿ, Karnataka State Cricket Association (KSCA) ಹಾಗೂ Royal Challengers Bengaluru (RCB) ಪ್ರತಿನಿಧಿಗಳು ಭಾಗವಹಿಸಿದ್ದರು.


ಬೈರತಿ ಬಸವರಾಜ್ ಬಂಧನ ಕುರಿತು ಪ್ರತಿಕ್ರಿಯೆ

ಬಿಜೆಪಿ ಶಾಸಕ Bairathi Basavaraj ಬಂಧನ ಪ್ರಕರಣದ ಕುರಿತು ಮಾತನಾಡಿದ ಗೃಹಸಚಿವರು, ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬಳಿಕ ಅವರು ಸಿಐಡಿ ಮುಂದೆ ಶರಣಾಗಿದ್ದಾರೆ ಎಂದು ತಿಳಿಸಿದ್ದಾರೆ. ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

Continue Reading

ಕ್ರೀಡೆ

IND vs PAK ಹೈವೋಲ್ಟೇಜ್ ಪಂದ್ಯಕ್ಕೆ ಮುನ್ನ ಉಸ್ಮಾನ್ ತಾರಿಕ್ ಎಚ್ಚರಿಕೆ: “ಭಾರತೀಯರು ನನ್ನ ಬೌಲಿಂಗ್‌ಗೆ ಹೆದರುತ್ತಿದ್ದಾರೆ!”

ಟಿ20 ವಿಶ್ವಕಪ್ ಟೂರ್ನಿಯ ಬಹು ನಿರೀಕ್ಷಿತ ಭಾರತ–ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ ಫೆಬ್ರವರಿ 15ರಂದು ಶ್ರೀಲಂಕಾದ ಕೊಲಂಬೊದಲ್ಲಿ ನಡೆಯಲಿದೆ. ಶಿವರಾತ್ರಿ ಹಬ್ಬದಂದೇ ನಡೆಯಲಿರುವ ಈ ನಿರ್ಣಾಯಕ ಸಮರಕ್ಕಾಗಿ ಎರಡೂ ತಂಡಗಳು ಭರ್ಜರಿ ಸಿದ್ಧತೆಯಲ್ಲಿ ತೊಡಗಿವೆ.

ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ, ಫೆ.12ರಂದು ನಮೀಬಿಯಾ ವಿರುದ್ಧ ಕಣಕ್ಕಿಳಿದು ಗೆಲುವಿನ ಆತ್ಮವಿಶ್ವಾಸದೊಂದಿಗೆ ಪಾಕಿಸ್ತಾನ ಎದುರಿಸಲು ಸಜ್ಜಾಗಿದೆ.

ಈ ಮಧ್ಯೆ, ಪಾಕಿಸ್ತಾನದ ನಿಗೂಢ ಸ್ಪಿನ್ನರ್ ಉಸ್ಮಾನ್ ತಾರಿಕ್ ಭಾರತಕ್ಕೆ ಬಲವಾದ ಎಚ್ಚರಿಕೆ ನೀಡಿದ್ದಾರೆ. “ಭಾರತೀಯರು ನನ್ನ ಬೌಲಿಂಗ್‌ಗೆ ಹೆದರುತ್ತಿದ್ದಾರೆ. ಅದಕ್ಕಾಗಿ ನನ್ನ ಬೌಲಿಂಗ್ ಶೈಲಿಯ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ” ಎಂದು ಸಂಚಲನಕಾರಿ ಹೇಳಿಕೆ ನೀಡಿದ್ದಾರೆ.


ಮಾತಿನ ಸಮರ ಜೋರಾಗಿದೆ

ಟಿ20 ವಿಶ್ವಕಪ್ ಈಗ ರೋಚಕ ಹಂತ ತಲುಪಿದ್ದು, ಈಗಾಗಲೇ 15ಕ್ಕೂ ಹೆಚ್ಚು ಪಂದ್ಯಗಳು ಪೂರ್ಣಗೊಂಡಿವೆ. ಭಾರತ–ಪಾಕಿಸ್ತಾನ ಪಂದ್ಯ ನಡೆಯುತ್ತದೆಯೇ? ಎಂಬ ಅನುಮಾನಕ್ಕೆ ತೆರೆಬಿದ್ದಿದ್ದು, ಪಾಕಿಸ್ತಾನ ಪಂದ್ಯಕ್ಕೆ ಒಪ್ಪಿಗೆ ನೀಡಿದೆ.

ಪಂದ್ಯ ಖಚಿತವಾದ ಬೆನ್ನಲ್ಲೇ ಎರಡೂ ತಂಡಗಳ ನಡುವೆ ಮಾತಿನ ಸಮರ ಜೋರಾಗಿದೆ. ಪಾಕಿಸ್ತಾನಿ ಆಟಗಾರರು ಭಾರತವನ್ನು ಸೋಲಿಸುತ್ತೇವೆ ಎಂದು ಹೇಳುತ್ತಿದ್ದರೆ, ಭಾರತೀಯರು ಪಾಕಿಸ್ತಾನವನ್ನು ಮಣಿಸುತ್ತೇವೆ ಎಂದು ತಿರುಗೇಟು ನೀಡುತ್ತಿದ್ದಾರೆ.


ತಾರಿಕ್ ಸಮರ್ಥನೆ

ಭಾರತೀಯರು ನನ್ನ ಬೌಲಿಂಗ್ ಕುರಿತು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಐಸಿಸಿ ನಿಯಮಗಳ ಪ್ರಕಾರ ನನ್ನ ಬೌಲಿಂಗ್ ಶೈಲಿ ಮಾನ್ಯವಾಗಿದೆ ಎಂದು ಉಸ್ಮಾನ್ ತಾರಿಕ್ ಸಮರ್ಥಿಸಿಕೊಂಡಿದ್ದಾರೆ.

“ಭಾರತೀಯ ಆಟಗಾರರಿಗೆ ನನ್ನ ಬೌಲಿಂಗ್‌ನಿಂದ ಹೆಚ್ಚುವರಿ ಒತ್ತಡ ಇದೆ. ಅದಕ್ಕಾಗಿಯೇ ಆರೋಪ ಮಾಡುತ್ತಿದ್ದಾರೆ. ಫೆಬ್ರವರಿ 15ರಂದು ಭಾರತದ ಅಗ್ರ ಕ್ರಮಾಂಕವನ್ನು ಕೆಡವುತ್ತೇನೆ” ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ನನ್ನ ಬಗ್ಗೆ ಏನು ಚರ್ಚೆ ನಡೆಯುತ್ತಿದೆ ಎಂಬುದನ್ನು ನಾನು ಪರಿಗಣಿಸುವುದಿಲ್ಲ. ನನ್ನ ಗಮನ ಪಂದ್ಯದಲ್ಲೇ ಇದೆ” ಎಂದು ತಾರಿಕ್ ಹೇಳಿದ್ದಾರೆ.

Continue Reading

Trending