ರಾಜ್ಯ
ಕನ್ನಡದ ಬಾವುಟದ ಸ್ಟಿಕ್ಕರ್ ಇದ್ದ ಕಾರಿಗೆ ತಿರುಪತಿಯಲ್ಲಿ ಪ್ರವೇಶಾವಕಾಶ ನಿರ್ಬಂಧ!

ಆಂಧ್ರದ ತಿರುಮಲ ದೇವಸ್ಧಾನಕ್ಕೆ ತೆರಳುವ ಮುಖ್ಯದ್ವಾರದಲ್ಲಿ ಕನ್ನಡ ಬಾವುಟಕ್ಕೆ ಕರ್ನಾಟಕದ ವಾಹನಗಳಿಗೆ ಪದೇ ಪದೇ ಅವಮಾನ ಮಾಡಲಾಗುತ್ತಿದ್ದು, ರಾಜ್ಯ ಸರ್ಕಾಋ ಆದಷ್ಟು ಬೇಗೆ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಕನ್ನಡಿಗರು ಆಗ್ರಹಿಸಿದ್ದಾರೆ,
ತಿರುಪತಿಯಲ್ಲಿ ಕನ್ನಡ ಧ್ವಜ ಹಾಕುವಂತಿಲ್ಲ, ಅದರೆ ಇದೀಗ ಕನ್ನಡ ಧ್ವಜದ ಬಣ್ಣದಲ್ಲಿ ಅಕ್ಷರ ಕೂಡ ಕಾರಿನ ಮೇಲೆ ಇರುವಂತಿಲ್ಲ, ಒಂದು ವೇಳೆ ಈ ರೀತಿಯಲ್ಲಿ ಏನಾದರೂ ಇದ್ದಾರೆ, ತಿರುಪತಿಗೆ ಹೋಗುವ ಮಧ್ಯದಲ್ಲೇ ನಿಮ್ಮ ಕಾರಿನಲ್ಲಿ ಇಂಥ ಸ್ಟಿಕ್ಕರ್ ಇದ್ರೆ ಕಿತ್ತು ಹಾಕ್ತಾರೆ,
ತಿರುಮಲ ಗೇಟ್ ನಲ್ಲಿ ಕನ್ನಡಿಗರು ಅತ್ಯಂತ ಕೆಟ್ಟ ಅನುಭವ ಎದುರಿಸಿದ್ದಾರೆ, ಸಿಬ್ಬಂದಿ ಕರ್ನಾಟಕದಿಂದ ಬರುವ ಪ್ರತಿಯೊಂದು ವಾಹನ ತಪಾಸಣೆ ಮಾಡುತ್ತಾರೆ, ಕಾರಿನಲ್ಲಿ ಕನ್ನಡಪರ ಸ್ಟಿಕ್ಕರ್ ಇದ್ರೆ ಕಿತ್ತುಹಾಕ್ತಾರೆ, ಕರ್ನಾಟಕ ಧ್ವಜ, ಕನ್ನಡ ಬಾವುಟ ಸ್ಟಿಕ್ಕರ್ ಇದ್ರೆ ಮುಲಾಜಿಲ್ಲದೆ ಕಿತ್ತು ಹಾಕುತ್ತಾರೆ, ಯಾಕೆ ಕಿತ್ತು ಹಾಕ್ತೀರಾ ಅಂದ್ರೆ ನಮಗೆ ಗೊತ್ತಿಲ್ಲ ಎನ್ನುತ್ತಾರೆ,
ಕಳೆದ ಕೆಲ ತಿಂಗಳ ಹಿಂದೆಯಷ್ಟೇ ಡಾ.ಪುನೀತ್ ರಾಜಕುಮಾರ್ ಅವರ ಫೋಟೋವನ್ನು ಕಾರಿನ ಹಿಂದೆ ಹಾಕಿದ್ದಕ್ಕೆ ಅದನ್ನು ತೆಗೆದಿದ್ದರು, ಇದೀಗ ಕನ್ನಡ ಬಾವುಟದ ಬಣ್ಣದಲ್ಲಿ ದೇವರ ಹೆಸರು ಬರೆದಿದ್ದಕ್ಕೆ ಕಾರನ್ನು ಅಡ್ಡಗಟ್ಟಿ ಮುಂದಕ್ಕೆ ಹೋಗದಂತೆ ತಡೆದಿದ್ದಾರೆ,
ಸ್ಟಿಕಕ್ಕರ್ ಗಳನ್ನು ತೆಗೆಯಲು ನಿರಾಕರಿಸಿದರೆ ವಾಪಾಸ್ ಹೋಗುವಂತೆ ಗೂಂಡಾಗಿರಿ ತೋರಿಸುತ್ತಿದ್ದಾರೆ, ಸದ್ಯ ಈ ಘಟನೆಗೆ ಸಂಬಂಧಪಟ್ಟಂತೆ ಸೋಶಿಯಲ್ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಅದಷ್ಟು ಬೇಗ ರಾಜ್ಯ ಸರ್ಕಾರ ಈ ಕಡೆ ಗಮನ ಹರಿಸುವಂತೆ ಕನ್ನಡಿಗರು ಒತ್ತಾಯಿಸಿದ್ದಾರೆ,
ದೇಶ
ಪರಪ್ಪನ ಅಗ್ರಹಾರ ಜೈಲಿಗೆ ಸೇರಿದ ಕಾಂಗ್ರೆಸ್ ಶಾಸಕ ವಿನಯ್!

ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದಾಗಿದೆ, ಅದ್ದರಿಂದ ಕೋರ್ಟ್ ಆದೇಶದಂತೆ ಇಂದು ವಿನಯ್ ಕುಲಕರ್ಣಿಯವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕೋಟ್ ವಿಚಾರಣೆ ಮುಗಿದ ಬಳಿಕ ಶಾಸಕ ವಿನಯ್ ಕುಲಕರ್ಣಿಯವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುವುದು, ಇತ್ತೀಚಿಗೆ ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿಯ ಜಾಮೀನನ್ನು ರದ್ದುಪಡಿಸಿತು, ಒಂದು ವಾರದೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿತ್ತು,
ಇವರ ಬೆಂಬಲಿಗರು ಸಿಟಿ ಸಿವಿಲ್ ಕೋರ್ಟ್ ಮುಂಭಾಗ ಜಮಾಯಿಸಿದ್ರು, ಪರಪ್ಪನ ಅಗ್ರಹಾರ ಜೈಲಿಗೆ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ಕರೆದೊಯ್ದಿದ್ದಾರೆ, ಈ ವೇಳೆ ತಮ್ಮ ನಾಯಕ ಜೈಲು ಸೇರುತ್ತಿರೋದನ್ನು ಕಂಡು ಕೋರ್ಟ್ ಮುಂಭಾಗ ಬೆಂಬಲಿಗರು ಕಣ್ಣೀರು ಹಾಕಿದ್ದಾರೆ,
ಏನಿದು ಪ್ರಕರಣ?
9 ವರ್ಷಗಳ ಹಿಂದೆ ಅಂದರೆ 2016 ರ ಜೂನ್ 15 ರಂದು ಧಾರವಾಡ ತಾಲೂಕಿನ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡನನ್ನು ಅವರದ್ದೇ ಮಾಲೀಕತ್ವದ ಜಿಮ್ ನಲ್ಲಿ ಭೀಕರವಾಗಿ ಹತ್ಯೆಗೈಯ್ಯಲಾಗಿತ್ತು, ಇದರಲ್ಲಿ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಕೈವಾಡ ಇದೆ ಎಂಬ ಆರೋಪವಿದೆ, ಪ್ರಕರಣಕ್ಕೆ ಸಂಬಂಧಿಸಿದಂತೆ 2020 ನವೆಂಬರ್ 5 ರಂದು ವಿನಯ್ ಕುಲಕರ್ಣಿಯನ್ನು ಸಿಬಿಐ ಬಂಧಿಸಿತ್ತು, ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿಗೆ ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸಿ ಆದೇಶಿಸಿತ್ತು,
ಬೆಂಗಳೂರು
ನಗರದ ಕಸ ಸಮಸ್ಯೆ ದೂರಾಗಿಸಲು BBMP ಕ್ರಮ: ದೂರು ನೀಡಲು ಪ್ರತ್ಯೇಕ ಕೇಂದ್ರ ಸ್ಥಾಪನೆ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಪೌರಕಾರ್ಮಿಕರು ಸದಾ ಶ್ರಮವಹಿಸಿತ್ತಾರೆ. ಆದರೂ, ನಗರದಲ್ಲಿನ ಕಸದ ಸಮಸ್ಯೆ ಮಾತ್ರ ದೂರಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈ ಹಿನ್ನೆಲೆಯಲ್ಲಿ ಎಲ್ಲೆಂದರಲ್ಲಿ ಕಸ ಎಸೆದು ಹೋಗುವವರನ್ನು ಹಿಡಿದುಕೊಡಲು ಬಿಬಿಎಂಪಿ ಕ್ರಮ ಕೈಗೊಂಡಿದ್ದು, ವಾಟ್ಸಪ್ ಸಂಖ್ಯೆಯೊಂದನ್ನು ಜನತೆಗೆ ನೀಡಿದೆ.
ಕಸ ಎಸೆಯುವವರ ಫೋಟೋ ತೆಗೆದು 9448197197 ಈ ನಂಬರ್ಗೆ ಕಳಿಸಿದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪಾಲಿಕೆ ಹೇಳಿದೆ,
ಬಿಬಿಎಂಪಿ ವ್ಯಾಪ್ತಿಯಲ್ಲಿ ಆಟೋ ಟಿಪ್ಪರ್ ಗಳ ಮೂಲಕ ಪ್ರತಿನಿತ್ಯ ಮನೆ-ಮನೆ ಭೇಟಿ ನೀಡಿ ತ್ಯಾಜ್ಯ ಸಂಗ್ರಹಿಸಲಾಗುತ್ತಿದೆ. ಆದರೂ ಕೂಡಾ ನಾಗರಿಕರು ಆಟೋ ಟಿಪ್ಪರ್ ಗಳಿಗೆ ತ್ಯಾಜ್ಯವನ್ನು ನೀಡದೇ ರಾತ್ರಿ ವೇಳೆ ಅಥವಾ ಕೆಲಸಕ್ಕೆ ಹೋಗುವ ಸಮಯದಲ್ಲಿ ರಸ್ತೆ ಬದಿ, ಪಾದಚಾರಿ ಮಾರ್ಗ, ಖಾಲಿ ಸ್ಥಳ ಹಾಗೂ ರಾಜಕಾಲುವೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕಸ ಬಿಸಾಡಿ ಹೋಗುತ್ತಾರೆ. ಇದರಿಂದ ನಗರದ ಸೌಂದರ್ಯಕ್ಕೆ ಧಕ್ಕೆಯುಂಟಾಗುತ್ತದೆ.
ತ್ಯಾಜ್ಯ ಬಿಸಾಡುವುದರ ಜೊತೆಗೆ ಕಟ್ಟಡಗಳ ಭಗ್ನಾವಶೇಷಗಳನ್ನು ಕೂಡಾ ರಸ್ತೆ ಬದಿ, ಖಾಲಿ ಜಾಗದಲ್ಲಿ ಸುರಿದು ಹೋಗುತ್ತಾರೆ. ಅದಲ್ಲದೆ ಅನುಪಯುಕ್ತ ವಸ್ತುಗಳನ್ನು ಕೂಡ ಎಲ್ಲೆಂದರಲ್ಲಿ ಬಿಸಾಡಿ ಹೋಗುತ್ತಾರೆ. ಆದ್ದರಿಂದ ಪಾಲಿಕೆಯ 8 ವಲಯಗಳಲ್ಲಿ ಬರುವ ಎಲ್ಲಾ ವಾರ್ಡ್ಗಳಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡುವುದನ್ನು ಶಾಶ್ವತವಾಗಿ ತಪ್ಪಿಸಲು ಕ್ರಮ ಕೈಗೊಂಡಿದೆ.
ನಗರದಲ್ಲಿ ಕಸ ಸುರಿಯುವ ಸ್ಥಳ (ಬ್ಲಾಕ್ ಸ್ಪಾಟ್) ಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡುವ ಗುರಿ ಹೊಂದಿರುವ ಬಿಬಿಎಂಪಿ, ಇದಕ್ಕಾಗಿ ದೂರು ಕೇಂದ್ರ ಸ್ಥಾಪಿಸಿ ಪ್ರತ್ಯೇಕವಾಗಿ ವಾಟ್ಸಪ್ ಸಂಖ್ಯೆಯನ್ನು ನೀಡಿದೆ. ಜನರು ಸದರಿ ವಾಟ್ಸಪ್ ಸಂಖ್ಯೆಗೆ ಸಂದೇಶದ ಮೂಲಕ ದೂರು ದಾಖಲಿಸಬಹುದಾಗಿದೆ.
ಜನರಪು 9448197197 ಈ ಸಂಖ್ಯೆಗೆ ಛಾಯಾಚಿತ್ರದೊಂದಿಗೆ ಸಂದೇಶ ಕಳುಹಿಸುವ ಮೂಲಕ ದೂರು ದಾಖಲಿಸಬಹುದು. ಆ ಬಳಿಕ ಸಂಬಂಧಪಟ್ಟ ಅಧಿಕಾರಿಗಳು ನಿಗದಿತ ಅವಧಿಯಲ್ಲಿ ತ್ಯಾಜ್ಯ/ಕಸ ವಿಲೇವಾರಿ ಮಾಡಿ ಸಮಸ್ಯೆ ಬಗೆಹರಿಸಲಿದ್ದಾರೆ.
ರಾಜಕೀಯ
ನಾಯಕತ್ವದಿಂದ ಸಿದ್ದರಾಮಯ್ಯ ಕಲಿಯಬೇಕು: ಕೇಂದ್ರ ಸಚಿವ ವಿ.ಸೋಮಣ್ಣ

ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಬದಲು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 8 ದಿನಗಳ ಕಾಲ ನವದೆಹಲಿಗೆ ಭೇಟಿ ನೀಡಿ ಪ್ರಧಾನಿಮಂತ್ರಿಗಳ ಆಡಳಿತ ಶೈಲಿಯನ್ನು ವೀಕ್ಷಿಸಿ, ಕರ್ನಾಟಕದಲ್ಲಿ “ಜನಪರ ವಿಧಾನ” ಅಳವಡಿಸಿಕೊಳ್ಳಬೇಕು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಸೋಮವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ 11 ವರ್ಷಗಳ ಬಿಜೆಪಿ ನೇತೃತ್ವದ ಎನ್ಡಿಎ ಆಡಳಿತಕ್ಕೆ ಸಿದ್ದರಾಮಯ್ಯ ಶೂನ್ಯ ಅಂಕ ನೀಡಿದ್ದರ ಕುರಿತು ತಿರುಗೇಟು ನೀಡಿದರು.
ಸಿದ್ದರಾಮಯ್ಯ ಅವರ ಹೇಳಿಕೆಗಳು ಅಪ್ರಬುದ್ಧವಾಗಿವೆ. ರಾಜ್ಯದ ಜನರು ಸಿಎಂ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಸಿದ್ದರಾಮಯ್ಯ ಅಂತಹ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಿ ಪ್ರಧಾನಿ ಮೋದಿ ಅವರ ನಾಯಕತ್ವ ನೋಡಿ ಕಲಿಯಬೇಕಿದೆ ಎಂದು ಹೇಳಿದರು.
ನಾನು ಕೂಡ ಮೊದಲು ಕಾಂಗ್ರೆಸ್ ಜೊತೆಗಿದ್ದೆ. ಅಂದಿನ ಸಿದ್ದರಾಮಯ್ಯ ಮತ್ತು ಇಂದಿನ ಸಿದ್ದರಾಮಯ್ಯ ನಡುವೆ ಅಗಾಧ ವ್ಯತ್ಯಾಸವಿದೆ. ಕಾಂಗ್ರೆಸ್ ನಾಯಕರಿಗೆ ನೈತಿಕ ಸಮಗ್ರತೆಯ ಕೊರತೆಯಿದೆ. ಮೋದಿಯವರ ಜನಪರ ಆಡಳಿತವನ್ನು ನೋಡಿ, ಅವರು ತಮ್ಮದೇ ಆದ ನ್ಯೂನತೆಗಳ ಬಗ್ಗೆ ಅರಿತುಕೊಳ್ಳುತ್ತಿದ್ದಾರೆ.
ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರುನಾಮಕರಣ ಮಾಡುವ ಬಗ್ಗೆ ನಡೆಯುತ್ತಿರುವ ಚರ್ಚೆ ಕುರಿತು ಮಾತನಾಡಿ, ಇದು ನರಿ ಮತ್ತು ಕುರಿಮರಿಯ ಕಥೆಯಂತೆ ಎಂದು ವ್ಯಂಗ್ಯವಾಡಿದರು.
ಗೃಹ ಸಚಿವ ಡಾ. ಜಿ. ಪರಮೇಶ್ವರ ಈ ವಿಷಯದಲ್ಲಿ ಆತುರದಿಂದ ವರ್ತಿಸುವುದಿಲ್ಲ ಎಂದು ನಾನು ನಂಬುತ್ತೇನೆ. ನಾನು ಇನ್ನೂ ಯಾವುದೇ ನಿಲುವನ್ನು ತೆಗೆದುಕೊಂಡಿಲ್ಲ. ಅದು ಪ್ರಯೋಜನಕಾರಿ ಎಂದು ತೋರಿದರೆ, ನಾನು ಅದನ್ನು ಬೆಂಬಲಿಸುತ್ತೇನೆ
-
ಬಿಬಿಎಂಪಿ1 month ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು7 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ