ಬೆಂಗಳೂರು

ಸ್ವಪಕ್ಷದವರಿಂದಲೇ ದೂರು-ಕೆಪಿಸಿಸಿ ಒಬಿಸಿ ಘಟಕದ ಅಧ್ಯಕ್ಷರ ನೇಮಕಕ್ಕೆ ತಡೆ!

ಬೆಂಗಳೂರು: ಕಾಂಗ್ರೆಸ್ ಶಾಸಕರ ಹಾಗೂ ಮುಖಂಡರ ದೂರು ಹಿನ್ನೆಲೆಯಲ್ಲಿ ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರ ನೇಮಕವನ್ನು ಎಐಸಿಸಿ ತಡೆಹಿಡಿದಿದೆ,
ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್ ಅವರನ್ನು ಹಿಂದುಳಿದ ವರ್ಗಗಳ ಘಟಕದ ಪ್ರಭಾರಿ ಅಧ್ಯಕ್ಷರಾಗಿ ನೇಮಿಸಲಾಗಿತ್ತು, ವಲಸಿಗರಾದ ಶ್ರೀನಿವಾಸ್ ಅವರಿಗೆ ಮಣೆ ಹಾಕಿರುವುದಕ್ಕೆ ಪಕ್ಷದೊಳಗೆ ನೇಮಕಕ್ಕೆ ಆಕ್ಷೇಪ ವ್ಯಕ್ತವಾಗಿದೆ,
ಈ ಬಗ್ಗೆ ಹೈ ಕಮಾಂಡ್ ಗೆ ದೂರು ನೀಡಲಾಗಿತ್ತು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಹೈ ಕಮಾಂಡ್ ಪತ್ರ ರವಾನೆ ಮಾಡಿದ್ದು, ಎಐಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಕ್ಯಾಪ್ಟನ್ ಅಜಯ್ ಸಿಂಗ್ ಯಾದವ್ ನೇಮಕವನ್ನು ತಡೆಹಿಡಿಯುವಂತೆ ಸೂಚಿಸಿದ್ದಾರೆ,

Leave a Reply

Your email address will not be published. Required fields are marked *

Trending

Exit mobile version