karnataka
ಬೆಂಗಳೂರಲ್ಲಿ ಏರೋ ಇಂಡಿಯಾ ಶೋ: ಈ ರಸ್ತೆಗಳಲ್ಲಿ ಸಂಚಾರ ನಿಷೇಧ – ಬದಲಿ ಮಾರ್ಗ, ಪಾರ್ಕಿಂಗ್ ಸ್ಥಳದ ವಿವರ ಹೀಗಿದೆ – AERO INDIA SHOW

ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ಫೆ.10 ರಿಂದ 14ರವರೆಗೆ ನಡೆಯಲಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ-2025 ಹಿನ್ನೆಲೆಯಲ್ಲಿ ಸಂಚಾರದಟ್ಟಣೆ ಆಗದಿರಲು ನಗರ ಸಂಚಾರ ಪೊಲೀಸರು ಮುಂಜಾಗ್ರತ ಕ್ರಮ ಕೈಗೊಂಡಿದ್ದಾರೆ. ಏಕಮುಖ ಸಂಚಾರ, ಮಾರ್ಗ ಬದಲಾವಣೆ ಸೇರಿದಂತೆ ತಾತ್ಕಾಲಿಕ ಬದಲಿ ವ್ಯವಸ್ಥೆ ಬಳಸುವಂತೆ ಸವಾರರಿಗೆ ಮನವಿ ಮಾಡಿದ್ದಾರೆ.
ಪೆ.10ರಂದು ಬೆಳಗ್ಗೆ ಏರೋ ಶೋ ಉದ್ಘಾಟನಾ ಸಮಾರಂಭ ನಡೆಯಲಿದೆ. ಕಾರ್ಯಕ್ರಮಕ್ಕೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಹಲವು ಗಣ್ಯರು ಹಾಗೂ ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲಿದ್ದಾರೆ. ಕಾರ್ಯಕ್ರಮ ನಡೆಯುವ ಸ್ಥಳವು ಯಲಹಂಕ ವಾಯುಸೇನಾ ನೆಲೆಯ ಅಂತಾರಾಷ್ಟ್ರೀಯ ಏರ್ಪೋರ್ಟ್ ರಸ್ತೆಗೆ ಹೊಂದಿಕೊಂಡಿದೆ. ಈ ರಸ್ತೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಚರಿಸುವ ವಾಹನಗಳು, ತುರ್ತು ಸೇವಾ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡಲಿವೆ. ಆದ್ದರಿಂದ ಸುಗಮ ಸಂಚಾರದ ದೃಷ್ಟಿಯಿಂದ ಫೆ.10ರ ಬೆಳಗ್ಗೆ 5ರಿಂದ ಫೆ. 14ರ ರಾತ್ರಿ 10ವರೆಗೆ ಈ ಕೆಳಕಂಡ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ.
ಏಕಮುಖ ಸಂಚಾರ ವ್ಯವಸ್ಥೆ:
- ನಿಟ್ಟೆ ಮೀನಾಕ್ಷಿ ಕಾಲೇಜ್ ರಸ್ತೆ (ಪೂರ್ವದಿಕ್ಕಿನಿಂದ ಪಶ್ಚಿಮ ದಿಕ್ಕಿನ ಕಡೆಗೆ)
- ಬಾಗಲೂರು ಮುಖ್ಯರಸ್ತೆ : (ಪಶ್ಚಿಮದಿಂದ ಪೂರ್ವದಿಕ್ಕಿನ ಕಡೆಗೆ)
ಏರೋ ಇಂಡಿಯಾ ಪಾರ್ಕಿಂಗ್: ಜಿ.ಕೆ.ವಿ.ಕೆ ಕ್ಯಾಂಪಸ್ನಲ್ಲಿ ಉಚಿತ ಪಾರ್ಕಿಂಗ್
ಜಿಕೆವಿಕೆ ಪಾರ್ಕಿಂಗ್ ಸ್ಥಳದಿಂದ ಅಡ್ವಾ ಪಾರ್ಕಿಂಗ್ (Air Display View Area) ಹಾಗೂ ಡೊಮೆಸ್ಟಿಕ್ ಪಾರ್ಕಿಂಗ್ ಸ್ಥಳಕ್ಕೆ ತೆರಳಲು ಹಾಗೂ ವಾಪಸ್ ಜಿಕೆವಿಕೆ ಪಾರ್ಕಿಂಗ್ ಸ್ಥಳಕ್ಕೆ ಬರಲು ಬಿಎಂಟಿಸಿ ವತಿಯಿಂದ ಉಚಿತ ಎಸಿ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಡ್ವಾ ಪಾರ್ಕಿಂಗ್ಗಾಗಿ (Air Display View Area) 08 & 09 ಹಾಗೂ ಡೊಮೆಸ್ಟಿಕ್ ಪಾರ್ಕಿಂಗ್ಗಾಗಿ ಗೇಟ್ ನಂ. 05ರ ಮೂಲಕ ಪ್ರವೇಶಿಸಿ ಹಣ ಪಾವತಿಸಿ ಪಾರ್ಕಿಂಗ್ ಮಾಡಬಹುದಾಗಿದೆ.
ಸೂಚಿಸಲಾದ ಮಾರ್ಗಗಳು : ಬೆಂಗಳೂರು ಪೂರ್ವ ದಿಕ್ಕಿನಿಂದ ಅಡ್ವಾ (Air Display View Area) ಪಾರ್ಕಿಂಗ್ ಕಡೆ ಬರುವವರಿಗೆ ಕೆ.ಆರ್.ಪುರ ನಾಗವಾರ ಜಂಕ್ಷನ್ ಎಡ ತಿರುವು – ಟೆಲಿಕಾಂ ಲೇಔಟ್ ಬೈಪಾಸ್ ಯಲಹಂಕ ಕಾಫಿ ಡೇ ಫೋರ್ಡ್ ಷೋ ರೂಂ ಎಡ ತಿರುವು, ನಿಟ್ಟೇ ಮಿನಾಕ್ಷಿ ಕಾಲೇಜು ರಸ್ತೆ- ಅಡ್ವಾ ಪಾರ್ಕಿಂಗ್.
- ಬೆಂಗಳೂರು ಪೂರ್ವ ದಿಕ್ಕಿನಿಂದ ಡೊಮೆಸ್ಟಿಕ್ ಪಾರ್ಕಿಂಗ್ ಕಡೆ ಬರುವವರಿಗೆ: ಕೆ.ಆರ್. ಪುರಂ ಬಾಗಲೂರು ಹೆಣ್ಣೂರು ಕ್ರಾಸ್ ಕೊತ್ತನೂರು – ಗುಬ್ಬಿ ಕ್ರಾಸ್ – ಕಣ್ಣೂರು ಬಾಗಲೂರು ಲೇಔಟ್ ರಜಾಕ್ ಪಾಳ್ಯ ವಿದ್ಯಾನಗರ ಕ್ರಾಸ್ – Domestic Parking.
- ಬೆಂಗಳೂರು ಪಶ್ಚಿಮ ದಿಕ್ಕಿನಿಂದ ಅಡ್ವಾ ಪಾರ್ಕಿಂಗ್ ಕಡೆಗೆ ಬರುವವರಿಗೆ: ಗೊರಗುಂಟೆಪಾಳ್ಯ ಉನ್ನಿಕೃಷ್ಣನ್ ರಸ್ತೆ ದೊಡ್ಡಬಳ್ಳಾಪುರ ರಸ್ತೆ ಬಿ.ಇ.ಎಲ್ ವೃತ್ತ – ಗಂಗಮ್ಮ ವೃತ್ತ ಎಂ.ಎಸ್ ಪಾಳ್ಯ ಸರ್ಕಲ್-ಮದರ್ ಡೈರಿ ಜಂಕ್ಷನ್ ಉನ್ನಿ ಕೃಷ್ಣನ್ ಜಂಕ್ಷನ್ ಎಡ ತಿರುವು ನಾಗೇನಹಳ್ಳಿ ಗೇಟ್ ಬಲ ತಿರುವು ಗಂಟಿಗಾನಹಳ್ಳಿ ಸರ್ಕಲ್ ಬಲ ತಿರುವು ಪಡೆದು – ADVA Parking ಹಾರೋಹಳ್ಳಿ.
- ಬೆಂಗಳೂರು ಪಶ್ಚಿಮ ದಿಕ್ಕಿನಿಂದ ಡೊಮೆಸ್ಟಿಕ್ ಪಾರ್ಕಿಂಗ್ ಕಡೆಗೆ ಬರುವವರಿಗೆ: ಗೊರಗುಂಟೆಪಾಳ್ಯ ಬಿ.ಇ.ಎಲ್ ವೃತ್ತ ಗಂಗಮ್ಮ ವೃತ್ತ ಉನ್ನಿಕೃಷ್ಣನ್ ರಸ್ತೆ ಮದರ್ ಡೈರಿ ಜಂಕ್ಷನ್ – ಉನ್ನಿಕೃಷ್ಣನ್ ಜಂಕ್ಷನ್ ಎಡ ತಿರುವು ದೊಡ್ಡಬಳ್ಳಾಪುರ ರಸ್ತೆ ರಾಜಾನುಕುಂಟೆ Domestic Parking. ಬಲ ತಿರುವು ಅದ್ದಿಗಾನಹಳ್ಳಿ ತಿಮ್ಮಸಂದ್ರ ವಿದ್ಯಾನಗರ ಕ್ರಾಸ್ ಯು ತಿರುವು – ಹುಣಸಮಾರನಹಳ್ಳಿ ಮೂಲಕ ಎಂ.ಎಸ್ ಪಾಳ್ಯ ಸರ್ಕಲ್.
- ಬೆಂಗಳೂರು ದಕ್ಷಿಣ ದಿಕ್ಕಿನಿಂದ ಆಡ್ವಾ ಪಾರ್ಕಿಂಗ್ ಕಡೆಗೆ ಬರುವವರಿಗೆ: ಮೈಸೂರು ರಸ್ತೆ-ನಾಯಂಡನಹಳ್ಳಿ-ಚಂದ್ರಾ ಲೇಔಟ್-ಗೊರಗುಂಟೆಪಾಳ್ಯ-ಬಿ.ಇ.ಎಲ್ ವೃತ್ತ-ಗಂಗಮ್ಮ ವೃತ್ತ-ಎಂ.ಎಸ್ ಪಾಳ್ಯ ಸರ್ಕಲ್-ಮದರ್ ಡೈರಿ ಜಂಕ್ಷನ್ ಉನ್ನಿ ಕೃಷ್ಣನ್ ಜಂಕ್ಷನ್ – ದೊಡ್ಡಬಳ್ಳಾಪುರ ಮುಖ್ಯ ರಸ್ತೆ ನಾಗೇನಹಳ್ಳಿ ಗೇಟ್ -ಬಲ ತಿರುವು -ಹಾರೋಹಳ್ಳಿ – ADVA Parking.
- ಬೆಂಗಳೂರು ದಕ್ಷಿಣ ದಿಕ್ಕಿನಿಂದ ಡೊಮೆಸ್ಟಿಕ್ ಪಾರ್ಕಿಂಗ್ ಕಡೆಗೆ ಬರುವವರಿಗೆ : ಮೈಸೂರು ರಸ್ತೆ-ನಾಯಂಡನಹಳ್ಳಿ -ಚಂದ್ರಾ ಲೇಔಟ್- ಗೊರಗುಂಟೆಪಾಳ್ಯ -ಬಿ.ಇ.ಎಲ್. ವೃತ್ತ-ಗಂಗಮ್ಮ ವೃತ್ತ ಎಂ.ಎಸ್ ಪಾಳ್ಯ ಸರ್ಕಲ್- ಮದರ್ ಡೈರಿ-ಉನ್ನಿ ಕೃಷ್ಣನ್ ಜಂಕ್ಷನ್ ತಿರುವು ದೊಡ್ಡಬಳ್ಳಾಪುರ ರಸ್ತೆ- ರಾಜಾನುಕುಂಟೆ ಬಲ ತಿರುವು ಅಡ್ಡಿಗಾನಹಳ್ಳಿ ಎಂ.ವಿ.ಐ.ಟಿ ಕ್ರಾಸ್- ವಿದ್ಯಾನಗರ ಕ್ರಾಸ್-ಯು ತಿರುವು ಪಡೆದು Domestic ಹುಣಸಮಾರನಹಳ್ಳಿ.
- ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIAL) ಕಡೆಗೆ ತಲುಪಲು ಪರ್ಯಾಯ ಮಾರ್ಗ :
ಬೆಂಗಳೂರು ಪೂರ್ವ ದಿಕ್ಕಿನಿಂದ : ಕೆ.ಆರ್.ಪುರಂ-ಹೆಣ್ಣೂರು ಕ್ರಾಸ್ -ಕೊತ್ತನೂರು- ಗುಬ್ಬಿ ಕ್ರಾಸ್ ಕಣ್ಣೂರು ಬಾಗಲೂರು ಮೈಲನಹಳ್ಳಿ – ಬೇಗೂರು -ನೈರುತ್ಯ ಪ್ರವೇಶದ್ವಾರದ ಮೂಲಕ- KIAL ತಲುಪಬಹುದು. - ಬೆಂಗಳೂರು ಪಶ್ಚಿಮ ದಿಕ್ಕಿನಿಂದ : ಗೊರಗುಂಟೆಪಾಳ್ಯ – ಬಿ.ಇ.ಎಲ್ ವೃತ್ತ ಗಂಗಮ್ಮ ವೃತ್ತ ಎಂ.ಎಸ್ ಪಾಳ್ಯ ಸರ್ಕಲ್ ಮದರ್ ಡೈರಿ ರಾಜಾನುಕುಂಟೆ ಮೂಲಕ ಉನ್ನಿ ಕೃಷ್ಣನ್ ಜಂಕ್ಷನ್ ಎಡ ತಿರುವು ದೊಡ್ಡಬಳ್ಳಾಪುರ ರಸ್ತೆ ಅದ್ದಿಗಾನಹಳ್ಳಿ – ತಿಮ್ಮಸಂದ್ರ ಎಂ.ವಿ.ಐ.ಟಿ ಕ್ರಾಸ್ ವಿದ್ಯಾನಗರ ಕ್ರಾಸ್ KIAL ತಲುಪುವುದು.
- ಬೆಂಗಳೂರು ದಕ್ಷಿಣ ದಿಕ್ಕಿನಿಂದ : ಮೈಸೂರು ರಸ್ತೆ – ನಾಯಂಡನಹಳ್ಳಿ ಚಂದ್ರಾ ಲೇಔಟ್ – ಗೊರಗುಂಟೆಪಾಳ್ಯ-ಬಿಇಎಲ್ ವೃತ್ತ – ಗಂಗಮ್ಮ ವೃತ್ತ ಎಂ.ಎಸ್ ಪಾಳ್ಯ ಸರ್ಕಲ್ – ಮದರ್ಡೈರಿ ಜಂಕ್ಷನ್ ಉನ್ನಿಕೃಷ್ಣನ್ ಜಂಕ್ಷನ್ ಎಡ ತಿರುವು – ದೊಡ್ಡಬಳ್ಳಾಪುರ ರಸ್ತೆ – ರಾಜಾನುಕುಂಟೆ ಅದ್ದಿಗಾನಹಳ್ಳಿ-ಎಂ.ವಿ.ಐ.ಟಿ ಕ್ರಾಸ್ ವಿದ್ಯಾನಗರ ಕ್ರಾಸ್ ಮೂಲಕ KIAL ತಲುಪಬಹುದು.
ಲಾರಿ, ಟ್ರಕ್, ಖಾಸಗಿ ಬಸ್ಗಳು ಹಾಗೂ ಇತರೇ ಭಾರೀ ಸರಕು ಸಾಗಾಣಿಕೆಯ ವಾಹನಗಳ ಸಂಚಾರ ನಿರ್ಬಂಧಿಸಿರುವ ರಸ್ತೆಗಳ ವಿವರ:
ಬೆಂಗಳೂರು-ಬಳ್ಳಾರಿ ರಸ್ತೆಯಲ್ಲಿ ಮೇಖಿ ವೃತ್ತದಿಂದ-ಎಂವಿಐಟಿ ಕ್ರಾಸ್ವರೆಗೆ ಮತ್ತು ಎಂ.ವಿ.ಐ.ಟಿ. ಕ್ರಾಸ್ನಿಂದ ಮೇದ್ರಿ ವೃತ್ತದ ವರೆಗೆ, ರಸ್ತೆಯ ಎರಡೂ ದಿಕ್ಕಿನಲ್ಲಿ ಸಂಚಾರ ನಿಷೇಧಿಸಲಾಗಿದೆ.
ಗೊರಗುಂಟೆ ಪಾಳ್ಯದಿಂದ ಹೆಬ್ಬಾಳ ಮಾರ್ಗವಾಗಿ ಹೆಣ್ಣೂರು ಕ್ರಾಸ್ವರೆಗೆ ರಸ್ತೆಯ ಎರಡು ದಿಕ್ಕಿನಲ್ಲಿ ಮತ್ತು ನಾಗವಾರ ಜಂಕ್ಷನ್ನಿಂದ – ಥಣಿಸಂದ್ರ ಮುಖ್ಯ ರಸ್ತೆಯ ಮಾರ್ಗವಾಗಿ ಬಾಗಲೂರು ಮುಖ್ಯ ರಸ್ತೆ, ರೇವಾ ಕಾಲೇಜ್ ಜಂಕ್ಷನ್ವರೆಗೆ ಹಾಗೂ ಹೆಸರಘಟ್ಟ ಮತ್ತು ಚಿಕ್ಕಬಾಣಾವರ ಕಡೆಯಿಂದ ಬೆಂಗಳೂರು ನಗರದ ಕಡೆಗೆ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
ಎಲ್ಲಿಲ್ಲಿ ವಾಹನ ನಿಲುಗಡೆ ನಿಷೇಧ (ಎಲ್ಲಾ ಮಾದರಿಯ ವಾಹನಗಳಿಗೆ ರಸ್ತೆಯ ಎರಡೂ ಬದಿಗಳಲ್ಲಿ):
ನಾಗೇನಹಳ್ಳಿ ಗೇಟ್ನಿಂದ ಗಂಟಿಗಾನಹಳ್ಳಿ ಮಾರ್ಗವಾಗಿ ಬೆಂಗಳೂರು -ಬಳ್ಳಾರಿ ರಸ್ತೆಯನ್ನು ಸೇರುವ ಫೋರ್ಡ್ ಷೋರೂಂ ಕ್ರಾಸ್ವರೆಗೆ (ಬಿಬಿ ರಸ್ತೆ).
ಬೆಂಗಳೂರು-ಬಳ್ಳಾರಿ ರಸ್ತೆಯ ಮೇಖಿ ಸರ್ಕಲ್ ನಿಂದ ದೇವನಹಳ್ಳಿವರೆಗೆ, ಬಾಗಲೂರು ಕ್ರಾಸ್ ಜಂಕ್ಷನ್ನಿಂದ ಬಾಗಲೂರು ಮುಖ್ಯ ರಸ್ತೆಯ ಮಾರ್ಗವಾಗಿ ಸಾತನೂರು, ನಾಗವಾರ ಜಂಕ್ಷನ್ನಿಂದ ಥಣಿಸಂದ್ರ ಮುಖ್ಯ ರಸ್ತೆಯ ಮಾರ್ಗವಾಗಿ ರೇವಾ ಕಾಲೇಜ್ ಜಂಕ್ಷನ್, ಎಫ್ಟಿಐ ಜಂಕ್ಷನ್ನಿಂದ ಹೆಣ್ಣೂರು ಕ್ರಾಸ್ ಜಂಕ್ಷನ್, ಹೆಣ್ಣೂರು ಕ್ರಾಸ್ನಿಂದ ಬೇಗೂರು ಬ್ಯಾಕ್ ಗೇಟ್, ನಾಗೇನಹಳ್ಳಿ ಗೇಟ್ ಜಂಕ್ಷನ್ನಿಂದ ಯಲಹಂಕ ಸರ್ಕಲ್, ಎಂವಿಐಟಿ ಕ್ರಾಸ್ನಿಂದ ನಾರಾಯಣಪುರ ರೈಲ್ವೆ ಕ್ರಾಸ್, ಕೋಗಿಲು ಕ್ರಾಸ್ ಜಂಕ್ಷನ್ನಿಂದ ಕಣ್ಣೂರು ಜಂಕ್ಷನ್, ಮತ್ತಿಕೆರೆ ಕ್ರಾಸ್ನಿಂದ ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಉನ್ನಿಕೃಷ್ಣನ್ ಜಂಕ್ಷನ್ ಮತ್ತು ಜಾಲಹಳ್ಳಿ ಕ್ರಾಸ್ ಜಂಕ್ಷನ್ನಿಂದ ಗಂಗಮ್ಮ ಸರ್ಕಲ್ ಜಂಕ್ಷನ್ ವರೆಗೆ ಪಾರ್ಕಿಂಗ್ಗೆ ನಿಷೇಧಿಸಲಾಗಿದೆ.
ಕ್ಯೂ ಆರ್ ಕೋಡ್ ಸ್ಕ್ಯಾನ್: ಏರ್ ಶೋ ವೀಕ್ಷಣೆಗೆ ಬರುವವರು ತಮಗೆ ನೀಡಲಾಗಿರುವ ಟಿಕೆಟ್ ಅಥವಾ ಪಾಸ್ನ ಕ್ಯೂ ಆರ್ ಕೋಡ್ ಅನ್ನು ಮೊದಲೇ ಸ್ಕ್ಯಾನ್ ಮಾಡಿ ಯಾವ ಗೇಟ್ನಿಂದ ಪ್ರವೇಶಿಸಬೇಕೆಂಬುದನ್ನು ಮೊದಲೇ ನಿರ್ಧರಿಸಿಕೊಂಡು ಪ್ರಯಾಣಿಸಿದ್ದಲ್ಲಿ ಅನವಶ್ಯಕ ವಿಳಂಬಕ್ಕೆ ಅವಕಾಶವಿರುವುದಿಲ್ಲ. ಅಲ್ಲದೆ ವೀಕ್ಷಣೆಗೆ ಬರುವವರು ಉಚಿತ ವಾಹನ ನಿಲುಗಡೆ ಲಭ್ಯವಿರುವ ಜಿಕೆವಿಕೆ ಆವರಣ ಮತ್ತು ಶಟಲ್ ಬಸ್ ಸೇವೆಯನ್ನು ಉಪಯೋಗಿಸಲು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.
karnataka
ಹಿಂದೂಗಳಿಗೆ ಮಾತ್ರವಲ್ಲ, ದಲಿತರಿಗೂ ವಿರೋಧಿಗಳು – ಕಾಂಗ್ರೆಸ್ ವಿರುದ್ಧ ಜೋಶಿ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ಸಿನವರು ಕೇವಲ ಹಿಂದೂ ವಿರೋಧಿಯಲ್ಲ, ದಲಿತ ವಿರೋಧಿ ಕೂಡ ಎಂದು ಜನರಿಗೆ ಭೀಮ ಹೆಜ್ಜೆ ಕಾರ್ಯಕ್ರಮದ ಮೂಲಕ ತಿಳಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದರು.
ಭೀಮ ಹೆಜ್ಜೆ 100ರ ಸಂಭ್ರಮ’ ಕಾರ್ಯಕ್ರಮದ ಉದ್ಘಾಟನೆಯ ಸಂದರ್ಭದ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರು ನಿಪ್ಪಾಣಿಗೆ ಬಂದು 100 ವರ್ಷಗಳಾದ ಹಿನ್ನೆಲೆಯಲ್ಲಿ, ಅಂಬೇಡ್ಕರರ ಜನ್ಮದಿನವೂ ಬರುತ್ತಿರುವ ಸಲುವಾಗಿ 100 ವರ್ಷದ ನೆನಪನ್ನು ಭೀಮ ಹೆಜ್ಜೆ ಹೆಸರಿನಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.
ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಯಾವ ಕಾರಣಕ್ಕಾಗಿ ತಮ್ಮ ಜೀವನವನ್ನು ಮೀಸಲಿಟ್ಟಿದ್ದರೋ ಅದನ್ನು ಜನರಿಗೆ ನೆನಪಿಸಲಾಗುವುದು. ಕಾಂಗ್ರೆಸ್ ಪಕ್ಷವು ಅವರಿಗೆ ಅನ್ಯಾಯ ಮಾಡಿದ್ದರು. ಅವರು ಸಂವಿಧಾನ ರಚನಾ ಸಭೆಯಲ್ಲಿ ಇರಬಾರದೆಂಬ ಕಾರಣಕ್ಕೆ ಹಿಂದೂ ಬಾಹುಳ್ಯದ ಕ್ಷೇತ್ರಗಳನ್ನು ಪಾಕಿಸ್ತಾನಕ್ಕೆ
ಬಿಟ್ಟು ಕೊಟ್ಟ ಸಂಗತಿಯನ್ನು, ಎರಡೆರಡು ಬಾರಿ ಅವರನ್ನು ಸೋಲಿಸಿದ್ದು, ಮಧ್ಯಂತರ ಸರ್ಕಾರ ಬಾರದಂತೆ ತಡೆದುದ್ದನ್ನು ತಿಳಿಸುತ್ತೇವೆ ಎಂದು ಹೇಳಿದರು.
ಅಧಿವೇಶನದಲ್ಲಿ ನಮ್ಮ ಶಾಸಕಿ ಶಶಿಕಲಾ ಜೊಲ್ಲೆ ಅವರು ನಿಪ್ಪಾಣಿಗೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಬಂದು 100 ವರ್ಷವಾಗುತ್ತಿದೆ ಎಂದು ಸರ್ಕಾರದ ಗಮನ ಸೆಳೆದಿದ್ದಾರೆ. ಬೆಳಗಾವಿಗೆ ಮಹಾತ್ಮ ಗಾಂಧಿಯವರು ಬಂದ ಕಾರ್ಯಕ್ರಮವನ್ನು ಅವರು ಮಾಡಿದ್ದಾರೆ. ಅದಕ್ಕೆ ನಮ್ಮ ಆಕ್ಷೇಪ ಇಲ್ಲ ಎಂದು ತಿಳಿಸಿದರು.
karnataka
ಫೀಲ್ಡ್ ನಲ್ಲಿ ಕೆಲಸ ಮಾಡೋರು ಬೇಕು- ಡಿಕೆಶಿ

ಬೆಂಗಳೂರು: ಡಿಸಿಎಂ ಡಿಕೆಶಿ ದೆಹಲಿ ದಂಡಯಾತ್ರೆ ಕೈಗೊಂಡಿದ್ದು, ಕಾಂಗ್ರೆಸ್ ನಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದೆ, ಈ ಮಧ್ಯೆ ದೆಹಲಿಗೆ ತೆರಳುವ ಮುನ್ನ ಫೀಲ್ಡ್ ನಲ್ಲಿ ಕೆಲಸ ಮಾಡುವ ಕಾರ್ಯಕರ್ತರಿಗೆ ಮಾತ್ರ ಮುಂದೆ ಸ್ಧಾನಮಾನ, ನಮ್ಮ ಸುತ್ತಮುತ್ತ ಗಿರಿಗಿಟ್ಲೆ ಹೊಡೆಯುವರಿಂದ ಪ್ರಯೋಜನ ಇಲ್ಲ ಎಂದು ಗರಂ ಆಗಿದ್ದಾರೆ,
ಬೆಂಗಳೂರಿನಲ್ಲಿ ಮಾತನಾಡಿದ ಅವರು ಪದಾಧಿಕಾರಿಗಳ ಲಿಸ್ಟ್ ಫೈನಲ್ ಆಗಿದೆ, ಯಾರು ಫೀಲ್ಡ್ ನಲ್ಲಿ ನಿಂತು ಪಕ್ಷ ಸಂಘಟನೆ ಮಾಡ್ತಾರೆ ಹಾಗೂ ಜನರ ಸಮಸ್ಯೆಗೆ ಸ್ಪಂದಿಸುತ್ತಾರೆ ಅಂಥವರಿಗೆ ಮೊದಲ ಆದ್ಯತೆ ನೀಡಲಾಗುವುದು, ಈ ಬಗ್ಗೆ ಎಐಸಿಸಿ ಅಧ್ಯಕ್ಷರು ಕೂಡ ಸ್ಪಷ್ಟ ಸಂದೇಶ ನೀಡಿದ್ದು, ಯಾರದ್ದೋ ಬೆಂಬಲಿಗರು ಅಥವಾ ಮಂತ್ರಿಗಳಿಂದ ಪ್ರಭಾವ ಬೀರುವವರನ್ನು ಪರಿಗಣಿಸಲಾಗುವುದಿಲ್ಲ ಎಂದು ಹೇಳಿದರು,
ರಾಜಸ್ಧಾನದಲ್ಲಿ ನಡೆದ ಜಲಶಕ್ತಿ ಸಮ್ಮೇಳನದಲ್ಲಿ ನಾನು ರಾಜ್ಯದ ನೀರಾವರಿ ಯೋಜನೆಗಳ ಪ್ರಸ್ತಾಪ ಮಾಡಿದ್ದೆ, ನೀರಾವರಿ ವಿಚಾರದಲ್ಲಿ ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ತಿಳಿಸಿದ್ದೆ, ಕೆಲವು ಯೋಜನೆಗೆ ಘೋಷಣೆ ಮಾಡಿದ ಹಣ ಬಿಡುಗಡೆ ಮಾಡಿಲ್ಲ, ಮತ್ತು ಕೆಲವು ಯೋಜನೆಗಳಿಗೆ ಅನುಮತಿ ನೀಡಿಲ್ಲ, ಈ ವಿಚಾರಗಳನ್ನು ಪ್ರಸ್ತಾಪಿಸಿದಾಗ ಸಚಿವರು ರಾಜ್ಯದ ನೀರಾವರಿ ವಿಚಾರವಾಗಿ ಪ್ರತ್ಯೇಕ ಸಭೆ ಮಾಡುವುದಾಗಿ ಭರವಸೆ ನೀಡಿ ಸಮಯ ನಿಗದಿ ಮಾಡಿದ್ದರು, ಇವತ್ತು ಬೆಳಗ್ಗೆ 11 ಗಂಟೆಗೆ ಕೇಂದ್ರ ಸಚಿವರು ಸಭೆ ನಿಗದಿ ಮಾಡಿದ್ದರು, ಒಂದು ದಿನ ಮುಂಚಿತವಾಗಿ ನಮ್ಮ ಇಲಾಖೆ ಅಧಿಕಾರಿಗಳನ್ನು ದೆಹಲಿಗೆ ಕಳುಹಿಸಿ ಪೂರ್ವಭಾವಿ ಸಭೆ ಮಾಡಲಾಗಿದೆ, ಈ ಸಭೆಯಲ್ಲಿ ನಮ್ಮ ನೀರಾವರಿ ಯೋಜನೆಗಳಿಗೆ ಅಗತ್ಯವಿರುವ ಅನುಮತಿ ನೀಡುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು,
karnataka
KPCC ಅಧ್ಯಕ್ಷ ಸ್ಥಾನ ಬದಲಾವಣೆಗೆ ಕಸರತ್ತು: ಎದುರಾಳಿಗಳಿಗೆ ‘ಡಿಕೆಶಿ’ ಚೆಕ್ ಮೆಟ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಗೆ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಡಿಕೆ ಶಿವಕುಮಾರ್ ಚೆಕ್ ಮೆಟ್ ಕೊಟ್ಟಿದ್ದಾರೆ. 2028ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ನಾನೇ ಪಕ್ಷವನ್ನು ಮುನ್ನಡೆಸುತ್ತೇನೆ. ಇನ್ನು 8-10 ವರ್ಷಗಳ ಕಾಲ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಹೇಳುವ ಮೂಲಕ ಪಕ್ಷದೊಳಗಿನ ಸ್ನೇಹಿತರು ಮತ್ತು ಶತ್ರುಗಳಿಗೆ ಸಂದೇಶ ರವಾನಿಸಿದ್ದಾರೆ.
ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಬದಲಾಯಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ಸಚಿವರು ಪ್ರಯತ್ನಿಸುತ್ತಿರುವ ಹೊತ್ತಿನಲ್ಲಿ ಡಿಕೆ ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ.
ಇತ್ತೀಚಿಗೆ ನಡೆದ ರಾಜ್ಯ ಸರ್ಕಾರಿ ನೌಕರರ ಸಮಾವೇಶದಲ್ಲಿ ಡಿಕೆಶಿ, ಡಿಕೆಶಿ ಎಂದು ಘೋಷಣೆ ಕೂಗುತ್ತಿದ್ದ ಜನರನ್ನುದ್ದೇಶಿಸಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ನಾನು ಗೆದ್ದು ನನ್ನ ನೇತೃತ್ವದಲ್ಲಿ ಪಕ್ಷ ಗೆದ್ದಾಗ ನೀವು ಇಂತಹ ಘೋಷಣೆಗಳನ್ನು ಕೂಗಬಹುದು. ನನ್ನ ಆರೋಗ್ಯ ಚೆನ್ನಾಗಿದ್ದು, ಇನ್ನು 8-10 ವರ್ಷ ರಾಜಕೀಯದಲ್ಲಿ ಇರುತ್ತೇನೆ. ನನ್ನ ಮೇಲೆ ನಂಬಿಕೆ ಇಡಿ ಎಂದರು ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇಲ್ಲ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಶಿವಕುಮಾರ್ ಅವರೇ ಪಕ್ಷದೊಳಗೆ ರಣಕಹಳೆ ಮೊಳಗಿಸಬಲ್ಲ ಭವಿಷ್ಯದ ನಾಯಕ ಎಂದು ಬಿಂಬಿಸಿಕೊಳ್ಳಲು ಆರಂಭಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ.
ಇದು ಖಂಡಿತವಾಗಿಯೂ ಅವರ ಬೆಂಬಲಿಗರಲ್ಲಿ ಸ್ಥೈರ್ಯವನ್ನು ಹೆಚ್ಚಿಸುತ್ತದೆ ಮತ್ತು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ನಲ್ಲಿ ಸ್ಪರ್ಧಿಸಲು ಬಯಸುವ ಎರಡನೇ ಸಾಲಿನ ನಾಯಕರಿಗೆ, ವಿಶೇಷವಾಗಿ ಮೊದಲ ಬಾರಿಯ ಶಾಸಕರಿಗೆ ಎಚ್ಚರಿಕೆಯ ಸಂದೇಶವನ್ನು ಕಳುಹಿಸುತ್ತದೆ. 62 ವರ್ಷದ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರಂತೆ ಕ್ರಿಯಾಶೀಲರಾಗುವ ನಿರೀಕ್ಷೆಯಲ್ಲಿದ್ದಾರೆ ಎಂದು ಶಿವಕುಮಾರ್ ಪರ ಒಲವು ಹೊಂದಿರುವ ನಾಯಕರೊಬ್ಬರು ಹೇಳಿದರು.
ಯುವ ಪೀಳಿಗೆಯು ಯುವ ಮತ್ತು ಪ್ರಬಲ ನಾಯಕತ್ವವನ್ನು ನೋಡುತ್ತದೆ. ಶಿವಕುಮಾರ್ ಅವರು ಫಿಟ್ ಮತ್ತು ಫೈನ್ ಎಂದು ಹೇಳುತ್ತಿದ್ದಾರೆ. ಇದು ಅವರ ಮಹತ್ವಕಾಂಕ್ಷೆಯನ್ನು ಎತ್ತಿತೋರಿಸುತ್ತದೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.
ಯುವ ಕಾಂಗ್ರೆಸ್ ಕರ್ನಾಟಕ ಘಟಕದ ನೂತನ ಅಧ್ಯಕ್ಷರಾಗಿ ತಮ್ಮ ನಿಷ್ಠಾವಂತ ಬೆಂಬಲಿಗ ಮಂಜುನಾಥ ಅವರನ್ನು ಗೆಲ್ಲಿಸುವುದರಲ್ಲಿ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರ ನಾಯಕತ್ವವಿಲ್ಲದೆ ನಾವು ಚುನಾವಣೆಗೆ ಹೋಗಲು ಸಾಧ್ಯವಿಲ್ಲ. ಅವರ ನಾಯಕತ್ವ ನಮಗೆ ಶಾಶ್ವತವಾಗಿ ಬೇಕು. ಆದರೆ, ಆರೋಗ್ಯ ವಿಚಾರದಲ್ಲಿ ಡಿಕೆ ಶಿವಕುಮಾರ್ 8-10 ವರ್ಷ ಅಲ್ಲ. ಇನ್ನೂ 20 ವರ್ಷ ರಾಜಕೀಯ ಮಾಡಬಹುದು ಎಂದು ಎರಡು ಬಾರಿ ರಾಜ್ಯಸಭಾ ಸದಸ್ಯರಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿಸಿ ಚಂದ್ರಶೇಖರ್ ಹೇಳಿದರು.
ಚುನಾವಣೆಗೆ ಇನ್ನೂ ಮೂರೂವರೆ ವರ್ಷ ಬಾಕಿ ಇದೆ. ಶಿವಕುಮಾರ್ ಸದ್ಯ ಕೆಪಿಸಿಸಿ ಅಧ್ಯಕ್ಷರಾಗಿದ್ದು, ಅವರು ಹೇಳುವುದರಲ್ಲಿ ತಪ್ಪೇನಿಲ್ಲ. ಕೆಪಿಸಿಸಿ ಅಧ್ಯಕ್ಷರೇ ರಾಜ್ಯದಲ್ಲಿ ಪಕ್ಷದ ಪರಮೋಚ್ಚ ನಾಯಕರಾಗಿದ್ದಾರೆ. ನನ್ನ ಅಭಿಪ್ರಾಯದಲ್ಲಿ ಅವರು ಹೇಳಿದ್ದು ಸ್ಥಳೀಯ ಸಂಸ್ಥೆಗಳು ಮತ್ತು ಬಿಬಿಎಂಪಿ ಚುನಾವಣೆಗಳ ಬಗ್ಗೆ ಇರಬೇಕು. ಅವರ ನಾಯಕತ್ವದಲ್ಲಿ ನಾವು ಈ ಚುನಾವಣೆಗಳನ್ನು ಎದುರಿಸುತ್ತೇವೆ ಎಂದು ಅವರು ಸಮರ್ಥಿಸಿಕೊಂಡರು. ಶಿವಕುಮಾರ್ ಅವರ ಹೇಳಿಕೆ ಸಮರ್ಥಿಸಿಕೊಂಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. “ಅದರಲ್ಲಿ ತಪ್ಪೇನು? ಏನಾದ್ರೂ ತಪ್ಪು ಕಂಡು ಹಿಡಿದಿದ್ದೀರಾ” ಎಂದು ಸುದ್ದಿಗಾರರನ್ನು ಕೇಳಿದರು.
-
ಬಿಬಿಎಂಪಿ4 weeks ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು7 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ