ಬೆಂಗಳೂರು
Valentine’s Day – ನಾವೇಕೆ ಪ್ರೀತಿಯಲ್ಲಿ ಬೀಳುತ್ತೇವೆ?

ಪ್ರೀತಿ (Love) ಎಂಬುದು ಮಾಯೆ.. ಅದು ಹುಟ್ಟಿದಾಗ ಗಾಳಿಯಲ್ಲಿ ತೇಲಾಡುವ ಅನುಭವ… ಎದೆಯಲ್ಲಿ ಪುಳಕ, ಅಸಹನೀಯ ಭಾರ. ಇದರ ಕೊನೆಯ ಹಂತವೇ ಮದುವೆ. ಆದ್ರೆ ಅದೆಷ್ಟು ಪ್ರೀತಿಗಳು ಮದುವೆಯವರೆಗೆ ತಲುಪುತ್ತವೆ ಹೇಳಿ? ನೀವು ನಿಜವಾಗಿಯೂ ಪ್ರೀತಿಸುತ್ತಿದ್ದರೆ, ಹಿರಿಯರ ಅನುಮತಿಯೊಂದಿಗೆ ಆ ಪ್ರೀತಿಯನ್ನು ಮದುವೆಯ ಪೀಠದ ವರೆಗೆ ತೆಗುದುಕೊಂಡು ಹೋಗಬೇಕು. ಇಲ್ಲದಿದ್ದರೆ ನಿಮ್ಮ ಕೇವಲ ಆಕರ್ಷಣೆಯಿಂದ ಹುಟ್ಟಿದ ಭಾವನೆಯಾಗುತ್ತದೆ ಅಷ್ಟೇ.
ಪ್ರೀತಿ ಯಾರಿಗೆ ಯಾವಾಗ ಬೇಕಾದರೂ ಹುಟ್ಟಬಹುದು. ಕೆಲವರಿಗೆ ದೇಹ ಸೌಂದರ್ಯ (Beauty) ಇಷ್ಟ. ಇನ್ನು ಕೆಲವರು ಅವರ ಗುಣಕ್ಕೆ ಫಿದಾ ಆಗುತ್ತಾರೆ, ಅದು ಹುಡುಗ ಆಗಿರಬಹುದು… ಹುಡುಗಿಯೂ ಆಗಿರಬಹುದು. ಒಂದಷ್ಟು ಮಂದಿ ತಮ್ಮ ಸೊಬಗಿನಿಂದಲೇ ಆಕರ್ಷಿತರಾಗುತ್ತಾರೆ. ನೀವು ಪ್ರೀತಿಯಲ್ಲಿ ಬಿದ್ದಾಗ ಮೆದುಳಿನಲ್ಲಿ ಸಾಕಷ್ಟು ಪ್ರಕ್ಷುಬ್ಧತೆ ಇರುತ್ತದೆ. ಅದೊಂದು ಮಾನಸಿಕ ಕಾಯಿಲೆಯಂತೆ. ಹೃದಯ ಬಡಿದ ಜೋರಾಗುತ್ತದೆ. ಕೈಕಾಲು ಕೆಲ ಕ್ಷಣಗಳು ಬೆವರುವುದು ಪ್ರೀತಿಯಲ್ಲಿ ಬೀಳುವ ಎಲ್ಲಾ ಲಕ್ಷಣಗಳಾಗಿವೆ. ಹಾಗಾದ್ರೆ ನಾವೇಕೆ ಪ್ರೀತಿಯಲ್ಲಿ ಬೀಳುತ್ತೇವೆ ಅನ್ನೋದನ್ನ ತಿಳಿಯಬೇಕಾದ್ರೆ ಮುಂದೆ ಓದಿ…
ಪ್ರೀತಿಯಲ್ಲಿ ಬೀಳುವುದಕ್ಕೆ ಹಾರ್ಮೋನ್ಗಳೇ ಕಾರಣ
ಪ್ರೀತಿಯಲ್ಲಿ ಬೀಳಲು ವಿಶೇಷವಾಗಿ ಕಾರಣವಾದ ನಾಲ್ಕು ಹಾರ್ಮೋನ್ಗಳು ಇವೆ. ಆ ಮೂರು ಹಾರ್ಮೋನ್ಗಳನ್ನು ನೋಡುವುದಾದರೆ ನೊರ್ಪೈನ್ಫ್ರಿನ್, ಡೋಪಮೈನ್, ಸೆರೊಟೋನಿನ್ ಮತ್ತು ಫೀನೈಲೆಥೈಲಮೈನ್. ಈ ನಾಲ್ಕು ಸೇರಿ ವ್ಯಕ್ತಿಯನ್ನು ಪ್ರೀತಿಯಲ್ಲಿ ಬೀಳುವಂತೆ ಮಾಡುತ್ತವೆ.
ನೊರ್ಪೈನ್ಫ್ರಿನ್ ಎಂಬ ಹಾರ್ಮೋನ್ ನೀವು ಇಷ್ಟಪಡುವ ಅಥವಾ ಪ್ರೀತಿಸುವವರನ್ನು ನೋಡಿದಾಗ ಹೃದಯ ಬಡಿತ ಜೋರಾಗುತ್ತದೆ. ಉದಾಹರಣೆಗೆ ತಮಿಳಿನ ʻ96ʼ ಸಿನಿಮಾದಲ್ಲಿ ಬರುವ ಒಂದು ದೃಶ್ಯದಂತೆ. ಹಾಗೆಯೇ ಡೊಪಮೈನ್ ತುಂಬಾ ಸಂತೋಷ ಉಂಟು ಮಾಡುತ್ತದೆ. ಆದ್ರೆ ಇವುಗಳಲ್ಲಿ ಮುಖ್ಯವಾದದ್ದು ಸೆರೊಟೋನಿನ್. ಇದು ಪ್ರೀತಿಯಲ್ಲಿ ಬಿದ್ದ ನಂತರ ನೀವು ಅವರ ಬಗ್ಗೆ ಹುಚ್ಚರಾಗುವಂತೆ ಮಾಡುತ್ತದೆ. ಅವರಿಗಾಗಿ ಏನು ಬೇಕಾದರೂ ಮಾಡಲು ತಯಾರಿರುತ್ತೀರಿ. ಅಲ್ಲದೇ ಅವರೊಂದಿಗೆ ದೈಹಿಕ ಸಂಪರ್ಕ ಬೆಳೆಸುವ ಭಾವನೆಯನ್ನೂ ಕೆರಳಿಸುತ್ತದೆ. ಇನ್ನೂ ಕೊನೆಯದ್ದಾಗಿ ಫಿನೈಲೆಥೈಲಮೈನ್ ಇದು ನೀವು ಇಷ್ಟಪಡುವ ವ್ಯಕ್ತಿಯ ಮೇಲೆ ವ್ಯಾಮೋಹ ಉಂಟುಮಾಡುತ್ತದೆ. ಅವರು ಹುಟ್ಟಿರೋದೇ ನನಗಾಗಿ ಎನಿಸುತ್ತದೆ. ಒಂದು ವೇಳೆ ಬೇರೆಯವರನ್ನ ಇಷ್ಟಪಟ್ಟರೆ ಅದು ನಿಮ್ಮಿಂದಿ ಸಹಿಸಲಾಗುವುದಿಲ್ಲ. ಈ ಹಾರ್ಮೋನ್ಗಳು ಒಟ್ಟಾಗಿ ನಿಮ್ಮನ್ನು ಪ್ರೀತಿಯಲ್ಲಿ ಬೀಳುವಂತೆ ಮಾಡುತ್ತವೆ. ಉದಾಹರಣೆಗೆ ಉಪೇಂದ್ರ ಸಿನಿಮಾದಲ್ಲಿ ʻನೀನು ಅವನನ್ನೇ ಮದುವೆಯಾಗು, ನನ್ನನ್ನ ಲವ್ ಮಾಡು ಎಂದು ಹೇಳಿದಂತೆʼ.
ಪ್ರೀತಿ ವಿಫಲವಾದರೆ ಈ ಹಾರ್ಮೋನ್ಗಳ ಮೇಲೆ ತೀವ್ರ ಪರಿಣಾಮವೂ ಬೀರುತ್ತದೆ. ಅವುಗಳ ಉತ್ಪಾದನೆ ಕಡಿಮೆಯಾಗುತ್ತದೆ. ಇದರಿಂದ ಮಾನಸಿಕ ಖಿನ್ನತೆ ಉಂಟಾಗುತ್ತದೆ. ಅದಕ್ಕಾಗಿ ಪ್ರೀತಿಸಿದಷ್ಟೇ ಸಾಕಾಗುವುದಿಲ್ಲ. ಪ್ರೀತಿಯನ್ನು ಗೆಲ್ಲುವ ಶಕ್ತಿಯೂ ನಿಮ್ಮಲ್ಲಿರಬೇಕು.
ಪ್ರೀತಿಯ ಮೂರು ಹಂತಗಳ ಬಗ್ಗೆ ನಿಮ್ಗೆ ಗೊತ್ತಾ?
ಪ್ರೀತಿ ಹೇಗೆ ಹುಟ್ಟುತ್ತೆ ಅನ್ನೋದು ಗೊತ್ತಾದ ಮೇಲೆ ಪ್ರೀತಿಯ ಮೂರು ಹಂತಗಳನ್ನೂ ನೀವು ತಿಳಿಯಲೇಬೇಕು. ಪ್ರೇಮಿಗಳಿಗೆ ಈ ಅನುಭವ ನೈಜವಾಗಿಯೇ ಇದ್ದರೂ ವಿಜ್ಞಾನಿಗಳು ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಪ್ರಕಾರ, ಪ್ರೀತಿಯ ಅನುಭವವನ್ನು ಮೂರು ಹಂತಗಳಾಗಿ ವಿಂಗಡಿಸಿದ್ದಾರೆ. ಮೊದಲನೆಯದ್ದು ಕಾಮ, 2ನೇಯದ್ದು ಆಕರ್ಷಣೆ, 3ನೇಯದ್ದು ವ್ಯಸನಿಗಳಾಗುವುದು. ಕಾಮ ಎಂಬುದು ಪುರುಷರಲ್ಲಿ ಟೆಸ್ಟೋಸ್ಟೆರಾನ್, ಮಹಿಳೆಯರಲ್ಲಿ ಈಸ್ಟ್ರೋಜೆನ್ನಿಂದ ನಿಯಂತ್ರಿಸಲ್ಪಡುತ್ತದೆ. ಆಕರ್ಷಣೆಯಿಂದ ಪ್ರೀತಿಸುವ ವ್ಯಕ್ತಿಯ ಪ್ರೀತಿಗಾಗಿ ಹಂಬಲಿಸುತ್ತಾರೆ. ಇನ್ನೂ 3ನೇ ಯದ್ದು ವ್ಯಸನಿಗಳಾಗುವುದು. ಇದು ಕೆಲವೊಮ್ಮೆ ದೀರ್ಘಕಾಲದ ಯೋಜನೆಗೆ ತಲುಪಿ ಮದುವೆಯಲ್ಲಿ ಮುಕ್ತಾಯವಾಗುತ್ತದೆ. ಇಲ್ಲವೇ ಪ್ರೇಮಕ್ಕೆ ದಾಸನಾಗಿ ದೈಹಿಕ ಸಂಪರ್ಕದಲ್ಲಿ ಮುಕ್ತಾಯವಾಗುತ್ತದೆ ಎನ್ನುತ್ತಾರೆ ಪ್ರಸಿದ್ಧ ಮಾನವಶಾಸ್ತ್ರಜ್ಞರು.
ಪ್ರೇಮಿಗಳ ದಿನಾಚರಣೆ ಏಕೆ ಬೇಕು?
ಪ್ರೀತಿಗೆ ಯಾರಿಗೆ ಯಾವ ರೀತಿಯಲ್ಲಾದರೂ ಇರಬಹುದು. ಪ್ರೇಮಿಗಳಿಗೆ ಪ್ರೀತಿ ಹುಟ್ಟಿದ ಮೇಲೆ ಆ ಮೊದಲ ಕ್ಷಣವನ್ನ ಸಂಭ್ರಮಿಸಲು ಅದಕ್ಕೂ ಒಂದು ದಿನಬೇಕಲ್ಲವೇ ಅದಕ್ಕಾಗಿಯೇ ಪ್ರತಿ ವರ್ಷ ಫೆ.7ರಿಂದ 14ರ ವರೆಗೆ ಪ್ರೇಮಿಗಳು ಒಂದೊಂದು ದಿನವನ್ನು ವಿಶಿಷ್ಟವಾಗಿ ಆಚರಿಸುತ್ತಾರೆ. 1. ಗುಲಾಬಿ ದಿನ, 2. ಪ್ರಪೋಸ್ ಡೇ, 3. ಚಾಕೊಲೇಟ್ ಡೇ, 4. ಟೆಡ್ಡಿ ಡೇ, 5. ಪ್ರಾಮಿಸ್ ಡೇ, 6. ಹಗ್ ಡೇ, 7. ಕಿಸ್ ಡೇ, 8. ಲವ್ ಡೇ. ಈ ಒಂದು ವಾರಗಳಲ್ಲಿ ಪ್ರತಿಯೊಂದು ದಿನ ಒಂದೊಂದು ವಿಶೇಷ ಉಡುಗೊರೆ ನೀಡಿ ಪ್ರೇಮಿಗಳ ತಮ್ಮ ದಿನವನ್ನ ಆಚರಿಸುತ್ತಾರೆ.
ಬೆಂಗಳೂರು
ಪತ್ನಿ ಬಳಿಯೂ ರಾಜಕೀಯ ಮಾತಾಡಲ್ಲ, ಪರಂ ಗರಂ!

ಬೆಂಗಳೂರು: ಮಂಗಳೂರಲ್ಲಿ ನಡೆದ ಸರಣಿ ಕೊಲೆ ಪ್ರಕರಣಗಳ ಬಳಿಕ ಇತ್ತೀಚಿಗೆ ಆರ್ಸಿಬಿ ತಂಡ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಘಟನೆಯಲ್ಲಿ 11 ಜನ ಉಸಿರು ಚೆಲ್ಲಿದ್ದಾರೆ,
ನಿರಂತರವಾಗಿ ಕಾನೂನು ವ್ಯವಸ್ಧೆ ಹದಗೆಡುತ್ತಿದೆ, ಗೃಹ ಸಚಿವ ಜಿ.ಪರಮೇಶ್ವರ್ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳ ಆಗ್ರಹ ಬೆನ್ನಲ್ಲೇ ತಮಗಿರುವ ಗೃಹ ಇಲಾಖೆ ಖಾತೆ ಬದಲಾಯಿಸಿ ಎಂದು ಪರಮೇಶ್ವರ್ ಅವರು ಕೇಳಿಕೊಂಡಿದ್ದಾರೆ ಎಂಬ ವದಂತಿಗೆ ಅವರು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ,
ಏನೇ ಇದ್ದರೂ ನನ್ನ ಬಳಿಯೇ ಸ್ಪಷ್ಟನೇ ಕೇಳಿ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ನಾನು ನನ್ನ ಪತ್ನಿ ಬಳಿಯೂ ಯಾವತ್ತೂ ರಾಜಕೀಯ ಮಾತನಾಡಲ್ಲ, ಹೀಗಿರವಾಗ ಈ ವದಂತಿ ಏಕೆ? ಖಾತೆ ಬದಲಾವಣೆ ಅಂತಾ ನಿಮಗೆ ಯಾರು ಹೇಳಿದ್ದಾರೆ? ಏನೇ ಇದ್ದರೂ ನನ್ನ ಬಳಿ ಮಾಹಿತಿ ಪಡೆಯಿರಿ ಎಂದಿದ್ದಾರೆ,
ನಾನು ಸಾಫ್ಟ್ ಆಗಿಯೇ ನಡೆದುಕೊಂಡಿದ್ದೇನೆ, ಏನೇ ಕೇಳಿ ನಾನೇ ಉತ್ತರ ಕೊಡುತ್ತೇನೆ, ಸುಮ್ಮನೇ ಒಬ್ಬರ ವ್ಯಕ್ತಿತ್ವದ ಕೊಲೆ ಮಾಡಬಾರದು, ಅದು ಯಾರಿಗೂ ಶೋಭೆ ತರಲ್ಲ, ಖಾತೆ ಬದಲಾಯಿಸಿ ಎಂದು ಸಿಎಂ ಹೇಳಿದ್ದಾರೆ ಎಂಬ ಸುದ್ದಿ ಸುಳ್ಳು, ಈ ರೀತಿ ಹೇಳಬೇಡಿ, ಇಂತಹ ವದಂತಿಯಿಂದ ನಮ್ಮ ಮತದಾರರು ಅಭಿಮಾನಿಗಳಿಗೆ ತಪ್ಪಾಗಿ ಸಂದೇಶ ಹೋಗುತ್ತದೆ, ಇದೇ ಖಾತೆಯನ್ನೇ ನೀಡಿ ಎಂದು ನಾನು ಯಾರಿಗೂ ಕೇಳಿಲ್ಲ, ಕಾಲ್ತುಳಿತ ದುರಂತದಿಂದ ಎಲ್ಲರಿಗೂ ನೋವಾಗಿದೆ, ಇದರ ಮಧ್ಯೆ ಖಾತೆ ಬದಲಾವಣೆ ಎಂಬ ಸಂಗತಿ ಸತ್ಯಕ್ಕೆ ದೂರವಾದದ್ದು ಎಂದು ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು
ಚಿನ್ನಸ್ವಾಮಿ ಸ್ಟೇಡಿಯಂ ಸೇನೆ ಜಾಗ, ವಶಕ್ಕೆ ಪಡೆಯಿರಿ! ಪ್ರಧಾನಿಗೆ ಪತ್ರ ಬರೆಯಲು ಮುಂದಾದ ಸಂಘಟನೆ!

ಬೆಂಗಳೂರು: ಆರ್ಸಿಬಿ ತಂಡದ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದ ಘಟನೆಯಲ್ಲಿ 11 ಜನರ ಸಾವಿನ ದುರಂತ ಇಡೀ ಸರ್ಕಾರಕ್ಕೆ ಮುಜುಗರವುಂಟು ಮಾಡಿದೆ, ಇನ್ನೊಂದೆಡೆ ಪ್ರತಿಪ್ಕಷಗಳು ಮಾತ್ರವಲ್ಲ ಹೈಕೋರ್ಟ್ ಸಹ ಘಟನೆ ಟೀಕಿಸಿ ರಾಜ್ಯ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದೆ,
ರಾಜ್ಯಕ್ಕೆ ಈ ಘಟನೆ ಕಪ್ಪು ಚುಕ್ಕೆಯಾಗಿರುವ ಬೆನ್ನಲ್ಲೇ ಇದೀಗ ಚಿನ್ನಸ್ವಾಮಿ ಸ್ಟೇಡಿಯಂ ಸ್ಧಳಾಂತರದ ಬಗ್ಗೆ ಚರ್ಚೆಗಳೂ ಆರಂಭವಾಗಿದೆ, ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಅವರು ಕಡಿಮೆ ಸಾರ್ಮಥ್ಯವಿರುವ ಕ್ರಿಕೆಟ್ ಕ್ರೀಡಾಂಗಣವನ್ನು ಬೇರೆಡೆಗೆ ಸ್ಧಳಾಂತರಿಸುವ ಬಗ್ಗೆ ಸರ್ಕಾರ ಗಮನಹರಿಸಿದೆಯೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ ಈ ವಿಷಯ ಸರ್ಕಾರ ಪರಿಶೀಲಿಸಲಿದೆ, ಯಾವ ಸರ್ಕಾರದ ಅವಧಿಯಲ್ಲಿಯೂ ಇಂತಹ ಅಹಿತಕರ ಘಟನೆ ನಡೆಯಬಾರದು, ವೈಯಕ್ತಿಕವಾಗಿ ಈ ಘಟನೆ ಸರ್ಕಾರಕ್ಕೆ ನೋವು ತಂದಿದೆ ಎನ್ನುತಲೇ ಸ್ಧಳಾಂತರದ ಸುಳಿವು ನೀಡಿದ್ದರು,
ಇದೀಗ ಮಹತ್ವದ ಬೆಳವಣಿಗೆ ಎಂಬಂತೆ ಚಿನ್ನಸ್ವಾಮಿ ಸ್ಟೇಡಿಯಂ ಸ್ಧಳಾಂತರಿಸುವಂತೆ ಕೋರಿ ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲು ನಿರ್ಧರಿಸಿದೆ, ಕ್ರೀಡಾಂಗಣವಿರುವ ಜಾಗ ಭಾರತೀಯ ಸೇನೆಗೆ ಸೇರಿದ್ದು, ಈ ಸ್ಧಳ ವಶಕ್ಕೆ ಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಿಸಿದ್ದೇವೆ ಎಂದು ಸಂಘಟನೆ ತಿಳಿಸಿದೆ, ಈ ಕುರಿತು ಮಾತನಾಡಿರುವ ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ಅಧ್ಯಕ್ಷ ಉಮೇಶ್ ಶೆಟ್ಟಿ ಚಿನ್ನಸ್ವಾಮಿ ಸ್ಟೇಡಿಯಂ ಸೇನೆಗೆ ಸೇರಿದ ಜಾಗ, 18.50 ಎಕರೆ ಈ ಜಾಗವಾಗಿದೆ, ಇದು ಆರ್ಮಿಗೆ ಸೇರಿದ್ದು, ನಗರದಿಂದ ಇದನ್ನು ಸ್ಧಳಾಂತರಿಸಲಿ, ಸ್ಟೇಡಿಯಂ ನಿಂದಲೇ ಟ್ರಾಫಿಕ್ ಸಮಸ್ಯೆಯೂ ಆಗುತ್ತಿದೆ, ಹೀಗಾಗಿ ಪ್ರಧಾನಿ ಮೋದಿ ಹಾಗೂ ರಕ್ಷಣಾ ಸಚಿವರಿಗೆ ಪತ್ರ ಬರೆದು ಈ ಕುರಿತು ಮನವಿ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ,
ಬೆಂಗಳೂರು
ಆರೋಗ್ಯ ಇಲಾಖೆಯಿಂದ ಗಂಭೀರ ರೋಗಿಗಳಿಗೆ ಉಚಿತ ಒಪಿಡಿ ಸೇವೆ: ಇನ್ಮುಂದೆ ಮನೆ ಬಾಗಿಲಿಗೆ ಚಿಕಿತ್ಸೆ!

ಕರ್ನಾಟಕ ಆರೋಗ್ಯ ಇಲಾಖೆಯು ಬಡವರಿಗೆ, ಕ್ಯಾನ್ಸರ್ ಪೀಡಿತರಿಗೆ, ವಯೋವೃದ್ಧರಿಗೆ ಮತ್ತು ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಮನೆ ಬಾಗಿಲಿಗೆ ಉಚಿತ ಒಪಿಡಿ (OPD) ಸೇವೆ ಒದಗಿಸಲು ಹೊಸ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿ, ಸಿವಿ ರಾಮನ್ ನಗರದ ಸಾರ್ವಜನಿಕ ಆಸ್ಪತ್ರೆಯಿಂದ ಮೊಬೈಲ್ ಆಸ್ಪತ್ರೆ ಮಾದರಿಯಲ್ಲಿ ಚಿಕಿತ್ಸೆ ಆರಂಭವಾಗಿದೆ. ಈ ಕಾರ್ಯಕ್ರಮವು ಆರೋಗ್ಯ ಕ್ಷೇತ್ರದಲ್ಲಿ ಸಮಾಜದ ದುರ್ಬಲ ವರ್ಗಕ್ಕೆ ಗುಣಮಟ್ಟದ ಚಿಕಿತ್ಸೆಯನ್ನು ತಲುಪಿಸುವ ಗುರಿಯನ್ನು ಹೊಂದಿದೆ.
ಯೋಜನೆಯ ವಿಶೇಷತೆಗಳೇನು?
ರಾಜ್ಯದಲ್ಲಿ ಮೊದಲ ಬಾರಿಗೆ, ಕ್ಯಾನ್ಸರ್, ಹೃದಯ ಸಮಸ್ಯೆ, ಬ್ರೇನ್ ಹೆಮರೇಜ್ ಮತ್ತು ಇತರ ಗಂಭೀರ ರೋಗಗಳಿಂದ ಬಳಲುತ್ತಿರುವ ರೋಗಿಗಳಿಗೆ ಆರೋಗ್ಯ ಇಲಾಖೆಯು ಮನೆಗೆ ತೆರಳಿ ಉಚಿತ ಒಪಿಡಿ ಸೇವೆ ಒದಗಿಸಲಿದೆ. ಸಿವಿ ರಾಮನ್ ನಗರದ ಸಾರ್ವಜನಿಕ ಆಸ್ಪತ್ರೆಯಿಂದ ಈ ಯೋಜನೆಯನ್ನು ಪೈಲಟ್ ಯೋಜನೆಯಾಗಿ ಆರಂಭಿಸಲಾಗಿದೆ. ಈ ಸೇವೆಯಿಂದ ರೋಗಿಗಳು ಆಸ್ಪತ್ರೆಗೆ ಭೇಟಿ ನೀಡದೆಯೇ ತಮ್ಮ ಮನೆಯ ಬಳಿಯೇ ಚಿಕಿತ್ಸೆ ಪಡೆಯಬಹುದು.
ಗಂಭೀರ ರೋಗಿಗಳಿಗೆ ಆಸ್ಪತ್ರೆಗೆ ತೆರಳುವುದು ಕಷ್ಟಕರವಾಗಿರುತ್ತದೆ. ಆಸ್ಪತ್ರೆಯಲ್ಲಿ ಕಾಯುವ ಸಾಲುಗಳು, ದೀರ್ಘ ಕಾಯುವಿಕೆ, ಮತ್ತು ಆರ್ಥಿಕ ಒತ್ತಡದಿಂದ ಬಳಲುವವರಿಗೆ ಈ ಯೋಜನೆಯು ತುರ್ತು ಚಿಕಿತ್ಸೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯಡಿ, ಮೊಬೈಲ್ ಆಸ್ಪತ್ರೆಗಳ ಮೂಲಕ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ನೇರವಾಗಿ ರೋಗಿಗಳ ಮನೆಗೆ ತೆರಳಿ ಚಿಕಿತ್ಸೆ ನೀಡಲಿದ್ದಾರೆ.
ಪ್ರಸ್ತುತ, ಸಿವಿ ರಾಮನ್ ನಗರದಿಂದ ಐದಕ್ಕೂ ಹೆಚ್ಚು ಪ್ರದೇಶಗಳಲ್ಲಿ ಈ ಸೇವೆಯನ್ನು ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ಬೆಂಗಳೂರಿನ ಇತರ ಪ್ರದೇಶಗಳಿಗೆ ಮತ್ತು ರಾಜ್ಯದ ಇತರ ಜಿಲ್ಲೆಗಳಿಗೆ ವಿಸ್ತರಿಸುವ ಯೋಜನೆಯಿದೆ ಎಂದು ಸಿವಿ ರಾಮನ್ ನಗರ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ್ ತಿಳಿಸಿದ್ದಾರೆ.
ಈ ಯೋಜನೆಯಿಂದ ಬಡವರಿಗೆ, ವಯೋವೃದ್ಧರಿಗೆ, ಮತ್ತು ಗಂಭೀರ ರೋಗಿಗಳಿಗೆ ಆರ್ಥಿಕ ಹೊರೆಯಿಲ್ಲದೆ ಗುಣಮಟ್ಟದ ಚಿಕಿತ್ಸೆ ಲಭ್ಯವಾಗಲಿದೆ. ಒಬ್ಬ ರೋಗಿಯ ತಾಯಿ ಆಶಾದೇವಿ, “ಈ ಸೇವೆಯಿಂದ ಬಡವರಿಗೆ ತುಂಬಾ ಉಪಯೋಗವಾಗಲಿದೆ. ಸರ್ಕಾರ ಈ ಯೋಜನೆಯನ್ನು ಎಲ್ಲೆಡೆ ವಿಸ್ತರಿಸಬೇಕು,” ಎಂದು ಒತ್ತಾಯಿಸಿದ್ದಾರೆ.
ಯೋಜನೆಯ ಪ್ರಯೋಜನಗಳು:
- ಉಚಿತ ಚಿಕಿತ್ಸೆ: ಕ್ಯಾನ್ಸರ್, ಹೃದಯ ಸಮಸ್ಯೆ, ಬ್ರೇನ್ ಹೆಮರೇಜ್ ಇತ್ಯಾದಿ ಗಂಭೀರ ರೋಗಿಗಳಿಗೆ ಉಚಿತ ಒಪಿಡಿ ಸೇವೆ.
- ಮನೆ ಬಾಗಿಲಿಗೆ ಸೇವೆ: ಆಸ್ಪತ್ರೆಗೆ ತೆರಳುವ ತೊಂದರೆ ತಪ್ಪಿಸಲು ಮೊಬೈಲ್ ಆಸ್ಪತ್ರೆ ಮಾದರಿ.
- ದುರ್ಬಲ ವರ್ಗಕ್ಕೆ ಒತ್ತು: ಬಡವರು, ವಯೋವೃದ್ಧರು, ಮತ್ತು ಗಂಭೀರ ರೋಗಿಗಳಿಗೆ ಆದ್ಯತೆ.
- ತುರ್ತು ಚಿಕಿತ್ಸೆ: ಆಸ್ಪತ್ರೆಯ ಕಾಯುವಿಕೆಯಿಂದ ರೋಗಿಗಳಿಗೆ ಮುಕ್ತಿ.
-
ಬಿಬಿಎಂಪಿ4 weeks ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು7 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ