ಬೆಂಗಳೂರು
Valentine’s Day – ನಾವೇಕೆ ಪ್ರೀತಿಯಲ್ಲಿ ಬೀಳುತ್ತೇವೆ?

ಪ್ರೀತಿ (Love) ಎಂಬುದು ಮಾಯೆ.. ಅದು ಹುಟ್ಟಿದಾಗ ಗಾಳಿಯಲ್ಲಿ ತೇಲಾಡುವ ಅನುಭವ… ಎದೆಯಲ್ಲಿ ಪುಳಕ, ಅಸಹನೀಯ ಭಾರ. ಇದರ ಕೊನೆಯ ಹಂತವೇ ಮದುವೆ. ಆದ್ರೆ ಅದೆಷ್ಟು ಪ್ರೀತಿಗಳು ಮದುವೆಯವರೆಗೆ ತಲುಪುತ್ತವೆ ಹೇಳಿ? ನೀವು ನಿಜವಾಗಿಯೂ ಪ್ರೀತಿಸುತ್ತಿದ್ದರೆ, ಹಿರಿಯರ ಅನುಮತಿಯೊಂದಿಗೆ ಆ ಪ್ರೀತಿಯನ್ನು ಮದುವೆಯ ಪೀಠದ ವರೆಗೆ ತೆಗುದುಕೊಂಡು ಹೋಗಬೇಕು. ಇಲ್ಲದಿದ್ದರೆ ನಿಮ್ಮ ಕೇವಲ ಆಕರ್ಷಣೆಯಿಂದ ಹುಟ್ಟಿದ ಭಾವನೆಯಾಗುತ್ತದೆ ಅಷ್ಟೇ.
ಪ್ರೀತಿ ಯಾರಿಗೆ ಯಾವಾಗ ಬೇಕಾದರೂ ಹುಟ್ಟಬಹುದು. ಕೆಲವರಿಗೆ ದೇಹ ಸೌಂದರ್ಯ (Beauty) ಇಷ್ಟ. ಇನ್ನು ಕೆಲವರು ಅವರ ಗುಣಕ್ಕೆ ಫಿದಾ ಆಗುತ್ತಾರೆ, ಅದು ಹುಡುಗ ಆಗಿರಬಹುದು… ಹುಡುಗಿಯೂ ಆಗಿರಬಹುದು. ಒಂದಷ್ಟು ಮಂದಿ ತಮ್ಮ ಸೊಬಗಿನಿಂದಲೇ ಆಕರ್ಷಿತರಾಗುತ್ತಾರೆ. ನೀವು ಪ್ರೀತಿಯಲ್ಲಿ ಬಿದ್ದಾಗ ಮೆದುಳಿನಲ್ಲಿ ಸಾಕಷ್ಟು ಪ್ರಕ್ಷುಬ್ಧತೆ ಇರುತ್ತದೆ. ಅದೊಂದು ಮಾನಸಿಕ ಕಾಯಿಲೆಯಂತೆ. ಹೃದಯ ಬಡಿದ ಜೋರಾಗುತ್ತದೆ. ಕೈಕಾಲು ಕೆಲ ಕ್ಷಣಗಳು ಬೆವರುವುದು ಪ್ರೀತಿಯಲ್ಲಿ ಬೀಳುವ ಎಲ್ಲಾ ಲಕ್ಷಣಗಳಾಗಿವೆ. ಹಾಗಾದ್ರೆ ನಾವೇಕೆ ಪ್ರೀತಿಯಲ್ಲಿ ಬೀಳುತ್ತೇವೆ ಅನ್ನೋದನ್ನ ತಿಳಿಯಬೇಕಾದ್ರೆ ಮುಂದೆ ಓದಿ…
ಪ್ರೀತಿಯಲ್ಲಿ ಬೀಳುವುದಕ್ಕೆ ಹಾರ್ಮೋನ್ಗಳೇ ಕಾರಣ
ಪ್ರೀತಿಯಲ್ಲಿ ಬೀಳಲು ವಿಶೇಷವಾಗಿ ಕಾರಣವಾದ ನಾಲ್ಕು ಹಾರ್ಮೋನ್ಗಳು ಇವೆ. ಆ ಮೂರು ಹಾರ್ಮೋನ್ಗಳನ್ನು ನೋಡುವುದಾದರೆ ನೊರ್ಪೈನ್ಫ್ರಿನ್, ಡೋಪಮೈನ್, ಸೆರೊಟೋನಿನ್ ಮತ್ತು ಫೀನೈಲೆಥೈಲಮೈನ್. ಈ ನಾಲ್ಕು ಸೇರಿ ವ್ಯಕ್ತಿಯನ್ನು ಪ್ರೀತಿಯಲ್ಲಿ ಬೀಳುವಂತೆ ಮಾಡುತ್ತವೆ.
ನೊರ್ಪೈನ್ಫ್ರಿನ್ ಎಂಬ ಹಾರ್ಮೋನ್ ನೀವು ಇಷ್ಟಪಡುವ ಅಥವಾ ಪ್ರೀತಿಸುವವರನ್ನು ನೋಡಿದಾಗ ಹೃದಯ ಬಡಿತ ಜೋರಾಗುತ್ತದೆ. ಉದಾಹರಣೆಗೆ ತಮಿಳಿನ ʻ96ʼ ಸಿನಿಮಾದಲ್ಲಿ ಬರುವ ಒಂದು ದೃಶ್ಯದಂತೆ. ಹಾಗೆಯೇ ಡೊಪಮೈನ್ ತುಂಬಾ ಸಂತೋಷ ಉಂಟು ಮಾಡುತ್ತದೆ. ಆದ್ರೆ ಇವುಗಳಲ್ಲಿ ಮುಖ್ಯವಾದದ್ದು ಸೆರೊಟೋನಿನ್. ಇದು ಪ್ರೀತಿಯಲ್ಲಿ ಬಿದ್ದ ನಂತರ ನೀವು ಅವರ ಬಗ್ಗೆ ಹುಚ್ಚರಾಗುವಂತೆ ಮಾಡುತ್ತದೆ. ಅವರಿಗಾಗಿ ಏನು ಬೇಕಾದರೂ ಮಾಡಲು ತಯಾರಿರುತ್ತೀರಿ. ಅಲ್ಲದೇ ಅವರೊಂದಿಗೆ ದೈಹಿಕ ಸಂಪರ್ಕ ಬೆಳೆಸುವ ಭಾವನೆಯನ್ನೂ ಕೆರಳಿಸುತ್ತದೆ. ಇನ್ನೂ ಕೊನೆಯದ್ದಾಗಿ ಫಿನೈಲೆಥೈಲಮೈನ್ ಇದು ನೀವು ಇಷ್ಟಪಡುವ ವ್ಯಕ್ತಿಯ ಮೇಲೆ ವ್ಯಾಮೋಹ ಉಂಟುಮಾಡುತ್ತದೆ. ಅವರು ಹುಟ್ಟಿರೋದೇ ನನಗಾಗಿ ಎನಿಸುತ್ತದೆ. ಒಂದು ವೇಳೆ ಬೇರೆಯವರನ್ನ ಇಷ್ಟಪಟ್ಟರೆ ಅದು ನಿಮ್ಮಿಂದಿ ಸಹಿಸಲಾಗುವುದಿಲ್ಲ. ಈ ಹಾರ್ಮೋನ್ಗಳು ಒಟ್ಟಾಗಿ ನಿಮ್ಮನ್ನು ಪ್ರೀತಿಯಲ್ಲಿ ಬೀಳುವಂತೆ ಮಾಡುತ್ತವೆ. ಉದಾಹರಣೆಗೆ ಉಪೇಂದ್ರ ಸಿನಿಮಾದಲ್ಲಿ ʻನೀನು ಅವನನ್ನೇ ಮದುವೆಯಾಗು, ನನ್ನನ್ನ ಲವ್ ಮಾಡು ಎಂದು ಹೇಳಿದಂತೆʼ.
ಪ್ರೀತಿ ವಿಫಲವಾದರೆ ಈ ಹಾರ್ಮೋನ್ಗಳ ಮೇಲೆ ತೀವ್ರ ಪರಿಣಾಮವೂ ಬೀರುತ್ತದೆ. ಅವುಗಳ ಉತ್ಪಾದನೆ ಕಡಿಮೆಯಾಗುತ್ತದೆ. ಇದರಿಂದ ಮಾನಸಿಕ ಖಿನ್ನತೆ ಉಂಟಾಗುತ್ತದೆ. ಅದಕ್ಕಾಗಿ ಪ್ರೀತಿಸಿದಷ್ಟೇ ಸಾಕಾಗುವುದಿಲ್ಲ. ಪ್ರೀತಿಯನ್ನು ಗೆಲ್ಲುವ ಶಕ್ತಿಯೂ ನಿಮ್ಮಲ್ಲಿರಬೇಕು.
ಪ್ರೀತಿಯ ಮೂರು ಹಂತಗಳ ಬಗ್ಗೆ ನಿಮ್ಗೆ ಗೊತ್ತಾ?
ಪ್ರೀತಿ ಹೇಗೆ ಹುಟ್ಟುತ್ತೆ ಅನ್ನೋದು ಗೊತ್ತಾದ ಮೇಲೆ ಪ್ರೀತಿಯ ಮೂರು ಹಂತಗಳನ್ನೂ ನೀವು ತಿಳಿಯಲೇಬೇಕು. ಪ್ರೇಮಿಗಳಿಗೆ ಈ ಅನುಭವ ನೈಜವಾಗಿಯೇ ಇದ್ದರೂ ವಿಜ್ಞಾನಿಗಳು ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಪ್ರಕಾರ, ಪ್ರೀತಿಯ ಅನುಭವವನ್ನು ಮೂರು ಹಂತಗಳಾಗಿ ವಿಂಗಡಿಸಿದ್ದಾರೆ. ಮೊದಲನೆಯದ್ದು ಕಾಮ, 2ನೇಯದ್ದು ಆಕರ್ಷಣೆ, 3ನೇಯದ್ದು ವ್ಯಸನಿಗಳಾಗುವುದು. ಕಾಮ ಎಂಬುದು ಪುರುಷರಲ್ಲಿ ಟೆಸ್ಟೋಸ್ಟೆರಾನ್, ಮಹಿಳೆಯರಲ್ಲಿ ಈಸ್ಟ್ರೋಜೆನ್ನಿಂದ ನಿಯಂತ್ರಿಸಲ್ಪಡುತ್ತದೆ. ಆಕರ್ಷಣೆಯಿಂದ ಪ್ರೀತಿಸುವ ವ್ಯಕ್ತಿಯ ಪ್ರೀತಿಗಾಗಿ ಹಂಬಲಿಸುತ್ತಾರೆ. ಇನ್ನೂ 3ನೇ ಯದ್ದು ವ್ಯಸನಿಗಳಾಗುವುದು. ಇದು ಕೆಲವೊಮ್ಮೆ ದೀರ್ಘಕಾಲದ ಯೋಜನೆಗೆ ತಲುಪಿ ಮದುವೆಯಲ್ಲಿ ಮುಕ್ತಾಯವಾಗುತ್ತದೆ. ಇಲ್ಲವೇ ಪ್ರೇಮಕ್ಕೆ ದಾಸನಾಗಿ ದೈಹಿಕ ಸಂಪರ್ಕದಲ್ಲಿ ಮುಕ್ತಾಯವಾಗುತ್ತದೆ ಎನ್ನುತ್ತಾರೆ ಪ್ರಸಿದ್ಧ ಮಾನವಶಾಸ್ತ್ರಜ್ಞರು.
ಪ್ರೇಮಿಗಳ ದಿನಾಚರಣೆ ಏಕೆ ಬೇಕು?
ಪ್ರೀತಿಗೆ ಯಾರಿಗೆ ಯಾವ ರೀತಿಯಲ್ಲಾದರೂ ಇರಬಹುದು. ಪ್ರೇಮಿಗಳಿಗೆ ಪ್ರೀತಿ ಹುಟ್ಟಿದ ಮೇಲೆ ಆ ಮೊದಲ ಕ್ಷಣವನ್ನ ಸಂಭ್ರಮಿಸಲು ಅದಕ್ಕೂ ಒಂದು ದಿನಬೇಕಲ್ಲವೇ ಅದಕ್ಕಾಗಿಯೇ ಪ್ರತಿ ವರ್ಷ ಫೆ.7ರಿಂದ 14ರ ವರೆಗೆ ಪ್ರೇಮಿಗಳು ಒಂದೊಂದು ದಿನವನ್ನು ವಿಶಿಷ್ಟವಾಗಿ ಆಚರಿಸುತ್ತಾರೆ. 1. ಗುಲಾಬಿ ದಿನ, 2. ಪ್ರಪೋಸ್ ಡೇ, 3. ಚಾಕೊಲೇಟ್ ಡೇ, 4. ಟೆಡ್ಡಿ ಡೇ, 5. ಪ್ರಾಮಿಸ್ ಡೇ, 6. ಹಗ್ ಡೇ, 7. ಕಿಸ್ ಡೇ, 8. ಲವ್ ಡೇ. ಈ ಒಂದು ವಾರಗಳಲ್ಲಿ ಪ್ರತಿಯೊಂದು ದಿನ ಒಂದೊಂದು ವಿಶೇಷ ಉಡುಗೊರೆ ನೀಡಿ ಪ್ರೇಮಿಗಳ ತಮ್ಮ ದಿನವನ್ನ ಆಚರಿಸುತ್ತಾರೆ.
ಬೆಂಗಳೂರು
ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ ₹50,000 ಸಹಾಯಧನ: ಜಮೀರ್ ಅಹ್ಮದ್ ಘೋಷಣೆ
ಬೆಂಗಳೂರು:
ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ಸಾಮೂಹಿಕ ವಿವಾಹಗಳಿಗೆ ಇನ್ಮುಂದೆ ಸರ್ಕಾರದಿಂದ ₹50,000 ಸಹಾಯಧನ ಸಿಗಲಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಘೋಷಿಸಿರುವ ಬಜೆಟ್ ಯೋಜನೆಗೆ ಈಗ ಅನುಮೋದನೆ ಲಭಿಸಿದ್ದು, ಈ ನಿಟ್ಟಿನಲ್ಲಿ ಬಡ ಅಲ್ಪಸಂಖ್ಯಾತರಿಗೆ ಸಹಾಯ ಮಾಡಲು ಸರ್ಕಾರ ಸಜ್ಜಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು:
ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್ ಸೇರಿದಂತೆ ಪ್ರತಿಭಾವಂತ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಧನ ಸಹಾಯ ನೀಡಲಾಗುತ್ತಿದೆ. ಈಗಾಗಲೇ 214 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಲ್ಯಾಪ್ಟಾಪ್ ವಿತರಣೆ ನಡೆಸಲಾಗಿದೆ.
ಮದರಸಾಗಳಲ್ಲಿ ಕನ್ನಡ ಕಲಿಕೆ:
ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭಿಸುವ ಯೋಜನೆಯೊಂದಿಗೆ, ಮೊದಲ ಹಂತದಲ್ಲಿ 200 ಮೌಲ್ವಿಗಳನ್ನು ಆಯ್ಕೆ ಮಾಡಲಾಗಿದೆ. ಮೂವರು ತಿಂಗಳಲ್ಲಿ ಅವರಿಗೆ ಕನ್ನಡ ಭಾಷಾ ತರಬೇತಿ ನೀಡಲಾಗುವುದು.
2,000 ಮದರಸಾಗಳಿಗೆ ಕನ್ನಡ ಪಾಠ್ಯಕ್ರಮ:
ರಾಜ್ಯದಲ್ಲಿ 2 ಸಾವಿರ ಮದರಸಾಗಳಿಗೆ ಕನ್ನಡ ಕಲಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ಅಲ್ಪಸಂಖ್ಯಾತ ಆಯೋಗ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದ್ದಾರೆ. very soon ಈ ಪಾಠ್ಯಕ್ರಮ ಮುದ್ರಣಕ್ಕೂ ಕ್ರಮ ಜರಗಲಿದೆ.
ಬೆಂಗಳೂರು
ಸು ಫ್ರಮ್ ಸೋ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಕಲೆಕ್ಷನ್ ಸೆನ್ಸೇಷನ್: ಶ್ರಾವಣದ ಹಬ್ಬಕ್ಕೂ ಮುನ್ನ ಧನಲಕ್ಷ್ಮೀ ವರ!
ಬೆಂಗಳೂರು: ಶ್ರಾವಣ ತಿಂಗಳು ಅಂದ್ರೆ ಬಂಗಾರದ ತಿಂಗಳು. ಮನೆಮಾಲೀಕರಿಗೆ ವರಮಹಾಲಕ್ಷ್ಮೀ ಹಬ್ಬ, ಕನ್ನಡ ಚಿತ್ರರಂಗಕ್ಕೆ “ಸು ಫ್ರಮ್ ಸೋ” ಚಿತ್ರದ ಯಶಸ್ಸು! ರಾಜ್ ಬಿ.ಶೆಟ್ಟಿ ಅಭಿನಯದ ಈ ಹಾರರ್-ಕಾಮಿಡಿ ಸಿನಿಮಾ ಇದೀಗ ಮೂರನೇ ವಾರದಲ್ಲೂ ಭರ್ಜರಿಯಾಗಿ ಓಡುತ್ತಿದ್ದು, ಬಾಕ್ಸ್ ಆಫೀಸ್ನಲ್ಲಿ ಹವಾ ಸೃಷ್ಟಿಸಿದೆ.
ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಉತ್ತಮ ಕಂಟೆಂಟ್ ಹೊಂದಿರುವ ಸಿನಿಮಾಗಳಿಗೆ ಅಭಿಮಾನಿಗಳ ಮೆಚ್ಚುಗೆ ಹೆಚ್ಚಾಗುತ್ತಿದೆ. ‘ಎಕ್ಕ’, ‘ಜೂನಿಯರ್’ ನಂತರ ‘ಸು ಫ್ರಮ್ ಸೋ’ ಕೂಡ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
75 ಲಕ್ಷ ಬಜೆಟ್ನಲ್ಲಿ ತಯಾರಾದ ಈ ಸಿನಿಮಾ ಈಗಾಗಲೇ ₹25 ಕೋಟಿ ಕಲೆಕ್ಷನ್ ಮಾಡಿದ್ದು, ಶೀಘ್ರದಲ್ಲೇ ₹50 ಕೋಟಿ ಕ್ಲಬ್ ಸೇರುವ ಲಕ್ಷಣವಿದೆ.
ಮುಂಬೈ, ದೆಹಲಿ, ಚೆನ್ನೈ, ಹೈದರಾಬಾದ್, ಕೇರಳ ಹಾಗೂ ವಿದೇಶಗಳಲ್ಲೂ ರಿಲೀಸ್ ಆದ ಈ ಸಿನಿಮಾ ಎಲ್ಲೆಡೆ ಹೌಸ್ಫುಲ್ ಪ್ರದರ್ಶನ ಪಡೆಯುತ್ತಿದೆ. ರಾಜ್ ಬಿ.ಶೆಟ್ಟಿ ಹಾಗೂ ನಿರ್ದೇಶಕ ಜೆ.ಪಿ. ತುಮಿನಾಡ್ ಅವರ ಶ್ರದ್ಧೆ ಫಲ ನೀಡಿದ್ದು, “ಬಂದರೋ ಬಂದರು.. ಬಾವ ಬಂದರು” ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ.
ಇನ್ನು ಮಲಯಾಳಂ ಡಬ್ಬಿಂಗ್ ಆಗಿ ಆಗಸ್ಟ್ 1ರಂದು ಬಿಡುಗಡೆಗೊಂಡ ‘ಸು ಫ್ರಮ್ ಸೋ’ ಚಿತ್ರ, ಕೊಚ್ಚಿಯಲ್ಲಿ ಒಂದೇ ದಿನ 8 ಸಾವಿರ ಟಿಕೆಟ್ ಮಾರಾಟ ಮಾಡಿದ ದಾಖಲೆ ಸ್ಥಾಪಿಸಿದೆ. ಆದುದರಿಂದ, ಚಿತ್ರದ ಬಯೋಪಿಕ್ ಮತ್ತಷ್ಟು ಭಾಷೆಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ.
ಬೆಂಗಳೂರು
ವೇತನ ವಿವಾದದಲ್ಲಿ ಸಿಎಂ ಸ್ಪಷ್ಟನೆ: 14 ತಿಂಗಳ ಹಿಂಬಾಕಿಗೆ ಮಾತ್ರ ಸರ್ಕಾರ ಸಿದ್ಧ
ಬೆಂಗಳೂರು: ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ಈ ಬೇಡಿಕೆ ಸಮಂಜಸವಲ್ಲ. ಸರ್ಕಾರ ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ” ಎಂದು ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ತಿಳಿಸಿದ್ದಾರೆ.
2020ರಿಂದ 2023ರ ಫೆಬ್ರವರಿವರೆಗಿನ ಬಾಕಿ ವೇತನ ಪಾವತಿಗೆ ನೌಕರ ಸಂಘಗಳು ಒತ್ತಾಯಿಸಿದ್ದರೊಂದಿಗೆ, 2024ರಿಂದ ನೂತನ ವೇತನವನ್ನೂ ಜಾರಿಗೆ ತರುವಂತೆ ಒತ್ತಾಯಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, “ನಿಗಮಗಳ ಆರ್ಥಿಕ ಪರಿಸ್ಥಿತಿ ಮತ್ತು ಹಿಂದಿನ ಸರ್ಕಾರದ ಆದೇಶಗಳ ದೋಷಗಳನ್ನು ಪರಿಗಣಿಸಿ 14 ತಿಂಗಳ ವೇತನ ಹಿಂಬಾಕಿಗೆ ಸಮ್ಮತಿಯಿದೆ,” ಎಂದು ಸ್ಪಷ್ಟಪಡಿಸಿದರು.
ವೇತನ ಪರಿಷ್ಕರಣೆ ಪಶ್ಚಾತ್ಪಟ
2016ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 12.5% ವೇತನ ಹೆಚ್ಚಳ ಜಾರಿಗೆ ಬಂದಿತ್ತು. ಆದರೆ 2020ರ ಕೋವಿಡ್ ಕಾರಣದಿಂದ ಆ ವೇಳೆಗೆ ಯಾವುದೇ ಪರಿಷ್ಕರಣೆ ಆಗಿರಲಿಲ್ಲ. ನಂತರದ ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀನಿವಾಸ ಮೂರ್ತಿ ಸಮಿತಿ ಶಿಫಾರಸ್ಸಿನಂತೆ 2022ರ ಜೂನ್ 01ರಿಂದ 2023ರ ಫೆಬ್ರವರಿವರೆಗೆ ಹಿಂಬಾಕಿ ಪಾವತಿ ಮಾಡಲು ತೀರ್ಮಾನಿಸಲಾಗಿತ್ತು.
ಸರ್ಕಾರದ ಆರ್ಥಿಕ ಹೊಣೆಗಾರಿಕೆ
ಸಿದ್ದರಾಮಯ್ಯ ಅವರು ಹೇಳಿದ್ದಾರೆ: “ನಾವು ಅಧಿಕಾರಕ್ಕೆ ಬಂದಾಗ ನಿಗಮಗಳಿಗೆ ಒಟ್ಟಾರೆ ₹4000 ಕೋಟಿ ಸಾಲ ಇತ್ತು. 2018 ರಲ್ಲಿ ಈ ಮೊತ್ತ ಕೇವಲ ₹14 ಕೋಟಿ ಮಾತ್ರ ಇತ್ತು. ಯಾವುದೇ ನಿಗಮ ಲಾಭದಲ್ಲಿ ಇಲ್ಲ.” ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
ಸಂಘದ ಚುನಾವಣೆ ಮತ್ತು ಮುಂದಿನ ಕ್ರಮ
ಸಾರಿಗೆ ನೌಕರರ ಸಂಘದ ಚುನಾವಣೆ ಹಾಗೂ ಬೇಡಿಕೆಗಳ ಕುರಿತಂತೆ ಸರ್ಕಾರ ಪರಿಶೀಲನೆ ನಡೆಸಲಿದ್ದು, ಮಾತುಕತೆ ಮೂಲಕ ಎಲ್ಲ ಅಹವಾಲುಗಳನ್ನು ಬಗೆಹರಿಸಲು ಸಿದ್ಧವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ಕ್ರೀಡೆ2 months ago
ಇಂದು ಐಪಿಎಲ್ ಫೈನಲ್- ಆರ್ಸಿಬಿಗೆ ಶುಭಕೋರಿದ ಎಸ್ಟಿಎಸ್!