ಬೆಂಗಳೂರು
10 ವಿ.ವಿಗಳ ಪೈಕಿ 9 ವಿಶ್ವವಿದ್ಯಾನಿಲಯಗಳು ಬಂದ್? ಡಿಸಿಎಂ ಡಿಕೆಶಿ ಹೇಳಿದ್ದೇನು?

ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ 10 ವಿವಿಗಳ ಪೈಕಿ 9 ವಿ.ವಿಗಳನ್ನು ಮುಚ್ಚಲು ಸರ್ಕಾರ ನಿರ್ಧರಿಸಿದೆ ಎಂದು ವಿವಾದದ ಕುರಿತು ಡಿಕೆಶಿ ಅವರು ಮಹತ್ವದ ಮಾಹಿತಿ ನೀಡಿದರು,
ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು ರಾಜ್ಯದ ವಿಶ್ವವಿದ್ಯಾನಿಲಯಗಳ ಕಾರ್ಯವೈಖರಿ ಹಾಗೂ ಆರ್ಥಿಕ ಪರಿಸ್ಧಿತಿಗಳ ಅಧ್ಯಯನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯ ವಿಶ್ವವಿದ್ಯಾಲಯ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ಮಾಡಲಿದೆ ಎಂದು ತಿಳಿಸಿದರು,
ರಾಜ್ಯದ ವಿವಿಗಳ ಆರ್ಥಿಕ ಪರಿಸ್ಧಿತಿ ಬಗ್ಗೆ ಸಚಿವ ಸಂಪುಟ ಉಪಸಮಿತಿ ಸಭೆಯ ತೀರ್ಮಾನಗಳ ಬಗ್ಗೆ ಪ್ರಶ್ನಿಸಿದಾಗ, ಈ ಹಿಂದೆ ನೂತನ ವಿಶ್ವವಿದ್ಯಾಲಯದ ಬಗ್ಗೆ ಮಾಡಿದ ಕಾನೂನಿನಲ್ಲಿ ಪ್ರತಿ ವಿವಿಗೆ 2 ಕೋಟಿ ಹಣ ಮೀಸಲಿಟ್ಟಿದ್ದರು, ಯಾವುದೇ ಜಮೀನು ನೀಡಿರಲಿಲ್ಲ,
ಮಂಡ್ಯ ಚಾಮರಾಜನಗರ ಭಾಗದಲ್ಲಿ ಎಲ್ಲರೂ ಮೈಸೂರು ವಿವಿಗೆ ಮೊದಲ ಆದ್ಯತೆ ನೀಡಿದ ಪರಿಣಾಮ ಇತರೇ ವಿವಿಗಳಲ್ಲಿ ಪ್ರವೇಶಾತಿ ಕುಸಿತವಾಗಿತ್ತು, ಈ ಬಗ್ಗೆ ಆಂತರಿಕ ವರದಿ ತಯಾರಿಸಿ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿತ್ತು, ಮುಖ್ಯಮಂತ್ರಿಗಳು ನನ್ನ ಅಧ್ಯಕ್ಷತೆಯಲ್ಲಿ ಸಂಪುಟ ಸಮಿತಿ ರಚಿಸಿದ್ದರು, ಈ ಬಗ್ಗೆ ನಾವು ಚರ್ಚೆ ಮಾಡಿ ಬಂದಿರುವ ಸಲಹೆಗಳನ್ನು ಪರಾಮರ್ಶಿಸಿದ್ದೇವೆ, ಈ ಬಗ್ಗೆ ನಾವು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಬೇಕು, ಮಾಹಿತಿ ನೀಡಲು ಆಗಿಲ್ಲ, ಮಾಹಿತಿ ನೀಡಿದ ನಂತರ ಸಚಿವ ಸಂಪುಟ ಸಭೆಯಲ್ಲಿ ಇಡುತ್ತೇವೆ, ನಂತರ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ.
ಅಗತ್ಯ ಬಿದ್ದರೆ ಈ ವಿವಿಗಳನ್ನು ಮುಚ್ಚಿಸುತ್ತೀರಾ ಎಂದು ಕೇಳಿದಾಗ ನಿಮ್ಮ ಮಾತಿಗೆ ನಾನು ಕುಣಿಯಲು ಆಗುವುದಿಲ್ಲಮ ನಿಮ್ಮ ಪ್ರಯತ್ನದಿಂದ ನನ್ನ ಬಾಯಲಿ ಕೆಲವು ವಿಚಾರ ಬರುವುದಿಲ್ಲ, ಬೇರೆಯವರನ್ನು ನಿಭಾಯಿಸುವಂತೆ ನನ್ನನ್ನು ನಿಭಾಯಿಸಲು ಪ್ರಯತ್ನಿಸಬೇಡಿ, ರಾಜ್ಯ ವಿವಿಗಳು ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ನಾವು ತೀರ್ಮಾನ ಮಾಡುತ್ತೇವೆ, ಈ ವಿಚಾರದಲ್ಲಿ ಯಾವುದೇ ವೈಯುಕ್ತಿಕ ಉದ್ದೇಶವಿಲ್ಲ ಎಂದರು,