ದೇಶ
FASTag ಬ್ಯಾಲೆನ್ಸ್ ಇಲ್ಲದೇ ಇದ್ರೆ ದುಪ್ಪಟ್ಟು ದಂಡ: ಇಂದಿನಿಂದ ಏನೇನು ಬದಲಾವಣೆ? ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ನವದೆಹಲಿ: ಟೋಲ್ (Toll) ಇರುವ ಹೆದ್ದಾರಿಯಲ್ಲಿ ನೀವು ವಾಹನ ಚಾಲನೆ ಮಾಡುತ್ತೀರಾ? ಹಾಗಾದ್ರೆ ಇನ್ನು ಮುಂದೆ ಪ್ರಯಾಣ ನಡೆಸುವ ಒಂದು ಗಂಟೆಯ ಮೊದಲು ಫಾಸ್ಟ್ಟ್ಯಾಗ್ (FASTag) ಸಕ್ರಿಯವಾಗಿದೆಯೋ ಇಲ್ವೋ ಎಂಬುದನ್ನು ಪರೀಕ್ಷೆ ಮಾಡಿಕೊಳ್ಳಿ.
ಹೌದು. ಕಡಿಮೆ ಬ್ಯಾಲೆನ್ಸ್, ವಿಳಂಬ ಪಾವತಿ, ಕೆವೈಸಿ ನಿಯಮಗಳನ್ನು ಪಾಲಿಸದೇ ಇದ್ದಲ್ಲಿ ಅಥವಾ ಕಪ್ಟುಪಟ್ಟಿಗೆ (Black List) ಸೇರ್ಪಡೆಯಾದ ಫಾಸ್ಟ್ಟ್ಯಾಗ್ಗಳಿಗೆ ದಂಡ ವಿಧಿಸುವ ಈ ಹೊಸ ನಿಯಮ ಇಂದಿನಿಂದ(ಫೆ.17) ಜಾರಿಗೆ ಬಂದಿದೆ.
ರಾಷ್ಟ್ರೀಯ ಪಾವತಿ ನಿಗಮ (NPCI) ಟೋಲ್ ಸಂಗ್ರಹಕ್ಕಾಗಿ ಹೊಸ ನಿಯಮಗಳನ್ನು ಪ್ರಕಟಿಸಿದೆ. ಈ ನಿಯಮಗಳನ್ನು ಪಾಲಿಸಲು ವಿಫಲವಾದರೆ ಬಳಕೆದಾರರು ದುಪ್ಪಟ್ಟು ಟೋಲ್ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ನಿಯಮ ಏನು ಬದಲಾವಣೆ?
1. ವಾಹನ ಟೋಲ್ ದಾಟುವ 60 ನಿಮಿಷ ಮೊದಲು ಮತ್ತು ಟೋಲ್ ದಾಟಿದ ಕನಿಷ್ಠ 10 ನಿಮಿಷ ಫಾಸ್ಟ್ಟ್ಯಾಗ್ ಸಕ್ರಿಯ ಆಗಿರುವಂತೆ ನೋಡಿಕೊಳ್ಳಬೇಕು.
2. ಕಡಿಮೆ ಬ್ಯಾಲೆನ್ಸ್ ಅಥವಾ ತಾಂತ್ರಿಕ ಸಮಸ್ಯೆಗಳಿಂದಾಗಿ ಕಪ್ಪುಪಟ್ಟಿಗೆ ಸೇರಿಸಿದ್ದರೆ ಬಳಕೆದಾರರು ತಮ್ಮ ಖಾತೆಯನ್ನು ರೀಚಾರ್ಜ್ ಮಾಡಲು 70 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ.
3. ಟೋಲ್ನಲ್ಲೇ ಹಣ ಕಡಿತ ವಿಳಂಬವಾದರೆ ಅದಕ್ಕೆ ಟೋಲ್ ಆಪರೇಟರ್ ಅವರನ್ನೇ ಹೊಣೆ ಮಾಡಲಾಗುತ್ತದೆ.
ಪಾವತಿಗಳನ್ನು ಯಾವಾಗ ತಿರಸ್ಕರಿಸಲಾಗುತ್ತದೆ?
ವಾಹನ ಟೋಲ್ ದಾಟುವ 60 ನಿಮಿಷ ಮೊದಲು ಮತ್ತು ಟೋಲ್ ದಾಟಿದ ಕನಿಷ್ಠ 10 ನಿಮಿಷ ಫಾಸ್ಟ್ಟ್ಯಾಗ್ ಸಕ್ರಿಯ ಆಗಿರುವಂತೆ ನೋಡಿಕೊಳ್ಳಬೇಕು. ಇಲ್ಲದೇ ಹೋದಲ್ಲಿ ಆ ಫಾಸ್ಟ್ಟ್ಯಾಗ್ ವಹಿವಾಟು ನಿರಾಕರಿಸಲಾಗುತ್ತದೆ. ಸಕ್ರಿಯ ಆಗಿರದೇ ಇದ್ದರೆ ಟೋಲ್ ಸಿಸ್ಟಮ್ನಲ್ಲಿ ‘ಎರರ್ ಕೋಡ್ 176’ ಎಂದು ತೋರಿಸಲಾಗುತ್ತದೆ ಮತ್ತು ಕಪ್ಪುಪಟ್ಟಿಗೆ ಸೇರಿಸಲಾಗುತ್ತದೆ. ಕಪ್ಪುಪಟ್ಟಿಗೆ ಸೇರಿಸಿದ ಫಾಸ್ಟ್ಯಾಗ್ನೊಂದಿಗೆ ಟೋಲ್ ಪ್ರವೇಶಿಸಿದರೆ ವಾಹನ ಮಾಲೀಕರಿಗೆ ದುಪ್ಪಟ್ಟು ಶುಲ್ಕ ವಿಧಿಸಲಾಗುತ್ತದೆ.
FASTag ಕಪ್ಪುಪಟ್ಟಿಗೆ ಹೇಗೆ ಹೋಗುತ್ತೆ?
– ಸಾಕಷ್ಟು ಬ್ಯಾಲೆನ್ಸ್ ಇಲ್ಲದಿರುವುದು.
– ಟೋಲ್ ತೆರಿಗೆ ಪಾವತಿಸದಿರುವುದು.
– ಪಾವತಿ ವೈಫಲ್ಯಗಳು.
– ನಿಮ್ಮ ಗ್ರಾಹಕರನ್ನು ತಿಳಿದುಕೊಳ್ಳಿ (KYC) ವಿವರಗಳನ್ನು ಸರಿಯಾಗಿ ನವೀಕರಣ ಮಾಡದೇ ಇರುವುದು.
– ವಾಹನದ ಚಾಸಿಸ್ ಸಂಖ್ಯೆ ಅಥವಾ ನೋಂದಣಿ ಸಂಖ್ಯೆಯಲ್ಲಿನ ವ್ಯತ್ಯಾಸ.
ಹಣ ಇಲ್ಲದೇ ಇದ್ದರೂ ಪ್ರವೇಶ:
ಒಂದು ವೇಳೆ ಫಾಸ್ಟ್ಟ್ಯಾಗ್ ಖಾತೆಯಲ್ಲಿ ಅಗತ್ಯ ಹಣ ಇಲ್ಲದೇ ಇದ್ದರೂ ಟೋಲ್ಗೇಟ್ನಲ್ಲಿ ಪ್ರವೇಶ ನೀಡಲಾಗುತ್ತದೆ. ಟೋಲ್ ಪ್ರವೇಶವಾದ ಕೂಡಲೇ ‘ನಿಮ್ಮ ಖಾತೆಯಲ್ಲಿ ಅಗತ್ಯ ಹಣ ಇಲ್ಲ, ಅದನ್ನು ಕೂಡಲೇ ಭರ್ತಿ ಮಾಡಿ’ ಎಂಬ ಮೆಸೇಜ್ ಮೊಬೈಲ್ಗೆ ಬರುತ್ತದೆ. ಮಸೇಜ್ ಬಂದ ಬಂದ 10 ನಿಮಿಷದ ಒಳಗಡೆ ಅಗತ್ಯ ಹಣ ಹಾಕಿಕೊಂಡರೆ ಯಾವುದೇ ದಂಡ ಇರುವುದಿಲ್ಲ. ಇಲ್ಲದೇ ಇದ್ದಲ್ಲಿ ಟೋಲ್ ಶುಲ್ಕದ ಎರಡು ಪಟ್ಟು ಹಣ ಕಟ್ಟಬೇಕಾಗುತ್ತದೆ. ನೆಗೆಟಿವ್ ಬ್ಯಾಲೆನ್ಸ್ ಇದ್ದಲ್ಲಿ ಟೋಲ್ ಶುಲ್ಕವನ್ನು ಭದ್ರತಾ ಠೇವಣಿಯಿಂದ ಕಡಿತಗೊಳಿಸಲಾಗುತ್ತದೆ.
15 ದಿನದ ಬಳಿಕ ದೂರು:
ಹೆಚ್ಚುವರಿ ಹಣ ಕಡಿತ ಅಥವಾ ತಪ್ಪು ಶುಲ್ಕಕ್ಕೆ ಸಂಬಂಧಿಸಿ ಸವಾರರು 15 ದಿನಗಳ ಕೂಲಿಂಗ್ ಅವಧಿಯ ನಂತರ ಬ್ಯಾಂಕ್ಗಳಲ್ಲಿ ದೂರು ಸಲ್ಲಿಸಬಹುದಾಗಿದೆ.
FASTag ಬಳಕೆದಾರರಿಗೆ ಪ್ರಮುಖ ಸಲಹೆಗಳು
– FASTag ವ್ಯಾಲೆಟ್ನಲ್ಲಿ ಸಾಕಷ್ಟು ಹಣ ಬ್ಯಾಲೆನ್ಸ್ ಇರುವಂತೆ ನೋಡಿಕೊಳ್ಳಿ, ಕನಿಷ್ಠ 100 ರೂ. ಬ್ಯಾಲೆನ್ಸ್ ಅನ್ನು ಖಚಿತಪಡಿಸಿಕೊಳ್ಳಿ.
– ಬ್ಯಾಂಕಿನಿಂದ ಬರುವ SMS ಎಚ್ಚರಿಕೆಗಳು ಮತ್ತು ಮೆಸೇಜ್ಗಳನ್ನು ಗಮನಿಸಿ.
– MyFASTag ಅಪ್ಲಿಕೇಶನ್ ಮೂಲಕ FASTag ಬ್ಯಾಲೆನ್ಸ್ ಮತ್ತು ಸ್ಥಿತಿಯನ್ನು ಪರಿಶೀಲಿಸಿ.
– ವಾಹನದ ವಿಂಡ್ಶೀಲ್ಡ್ನಲ್ಲಿ FASTag ಸ್ಟಿಕ್ಕರ್ ಅನ್ನು ಸರಿಯಾಗಿ ಅಂಟಿಸಿ.
– ಸಮಸ್ಯೆಗಳನ್ನು ತಡೆಗಟ್ಟಲು ಪ್ರತಿ ವಾಹನಕ್ಕೆ ಒಂದೇ FASTag ಮಾತ್ರ ಬಳಸಿ.
ದೇಶ
ನವರಾತ್ರಿ ಸಮಯದಲ್ಲಿ ವಿಮಾನ ನಿಲ್ದಾಣಗಳಲ್ಲಿ ಭಯೋತ್ಪಾದಕ ದಾಳಿ ಎಚ್ಚರಿಕೆ – ಭದ್ರತೆ ಬಿಗಿ ಕ್ರಮ
ಭಾರತದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ನವರಾತ್ರಿಯ ವೇಳೆ ಭಯೋತ್ಪಾದಕ ದಾಳಿಯ ಅಪಾಯವಿರುವ ಬಗ್ಗೆ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಜಾರಿಯಲ್ಲಿದೆ.
ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ಆಗಸ್ಟ್ 4ರಂದು ಎಚ್ಚರಿಕೆ ಪ್ರಕಟಿಸಿ, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಭಯೋತ್ಪಾದನೆ ಅಥವಾ ಸಮಾಜ ವಿರೋಧಿ ಶಕ್ತಿಗಳಿಂದ ದಾಳಿ ಸಂಭವಿಸಬಹುದೆಂದು ಸೂಚಿಸಿದೆ.
🕵️ ಗುಪ್ತಚರ ಮೂಲದ ಮಹತ್ವದ ಎಚ್ಚರಿಕೆ:
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ದಾಳಿಗೆ ಸಿದ್ಧತೆ ನಡೆಸುತ್ತಿವೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳು, ಏರ್ಸ್ಟ್ರಿಪ್ಗಳು, ಹೆಲಿಪ್ಯಾಡ್ಗಳು ಮತ್ತು ತರಬೇತಿ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳಾಗಿ ಈ ಕೆಳಗಿನ ಕ್ರಮಗಳು ಜಾರಿಗೆ ಬಂದಿವೆ:
- ಸಿಬ್ಬಂದಿ ಮತ್ತು ಸಂದರ್ಶಕರ ಗುರುತಿನ ಪರಿಶೀಲನೆ
- ಸಿಸಿಟಿವಿ ಕಣ್ಗಾವಲು ಬಿಗಿತ
- ಸರಕು, ಪಾರ್ಸೆಲ್ ಮತ್ತು ಮೇಲ್ಗಳ ತಪಾಸಣೆ
- ಸ್ಥಳೀಯ ಪೊಲೀಸ್ ಮತ್ತು ಭದ್ರತಾ ಸಂಸ್ಥೆಗಳೊಂದಿಗೆ ಸಹಕಾರ
🇮🇳 ರಾಷ್ಟ್ರೀಯ ಭದ್ರತೆಗೆ ಒತ್ತು:
ದೆಹಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳು ಈ ಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಪ್ರಯಾಣಿಕರು ತಮ್ಮ ಗುರುತಿನ ದಾಖಲೆಗಳನ್ನು ಸಿದ್ಧವಾಗಿಡಬೇಕು. ತಪಾಸಣೆ ವಿಳಂಬದ ಸಾಧ್ಯತೆಯಿರುವುದರಿಂದ ಸಹಕಾರ ನೀಡುವಂತೆ BCAS ಮನವಿ ಮಾಡಿದೆ.
ದೇಶ
ಅಮೆರಿಕ-ರಷ್ಯಾ ವ್ಯವಹಾರ: ಭಾರತದ ಟೀಕೆಗೆ ಟ್ರಂಪ್ ನುಣುಚು ಪ್ರತಿಕ್ರಿಯೆ
ವಾಷಿಂಗ್ಟನ್: ರಷ್ಯಾದಿಂದ ಈಗಲೂ ವ್ಯವಹಾರ ನಡೆಸುತ್ತಿರುವ ಅಮೆರಿಕದ ಕುರಿತಾಗಿ ಭಾರತ ಮಾಡಿರುವ ಗಂಭೀರ ಆರೋಪಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನುಣುಚು ಪ್ರತಿಕ್ರಿಯೆ ನೀಡಿದ್ದಾರೆ.
ಭಾರತ ಆರೋಪಿಸಿದಂತೆ, ಅಮೆರಿಕ 2024ರಲ್ಲಿ 1.1 ಶತಕೋಟಿ ಡಾಲರ್ ಮೌಲ್ಯದ ರಸಗೊಬ್ಬರ, 878 ಮಿಲಿಯನ್ ಡಾಲರ್ ಮೌಲ್ಯದ ಪಲ್ಲಾಡಿಯಮ್ ಸೇರಿದಂತೆ ಹಲವು ಅಮೂಲ್ಯ ಲೋಹಗಳನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಯುರೇನಿಯಂ ಹೆಕ್ಸಾಫ್ಲೋರೈಡ್ನಂತಹ ಪರಮಾಣು ಉತ್ಪನ್ನಗಳ ಆಮದು ಕೂಡ ಮುಂದುವರಿದಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಟ್ರಂಪ್, “ನನಗೆ ಈ ವ್ಯಾಪಾರದ ವಿವರಗಳು ತಿಳಿದಿಲ್ಲ, ನಾನು ಪರಿಶೀಲನೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.
ಭಾರತದ ಖಡಕ್ ಪ್ರತಿಕ್ರಿಯೆ:
ಭಾರತ, ತನ್ನ ರಷ್ಯಾ ತೈಲ ಆಮದು ಬಗ್ಗೆ ಅಮೆರಿಕದ ಟೀಕೆಗೆ ಅಂಕಿ-ಅಂಶಗಳೊಂದಿಗೆ ತಿರುಗೇಟು ನೀಡಿದೆ. ಯುರೋಪ್ ದೇಶಗಳೇ ರಷ್ಯಾದಿಂದ ಭಾರಿ ಪ್ರಮಾಣದಲ್ಲಿ ಎಲ್ಎನ್ಜಿ, ರಸಗೊಬ್ಬರ, ಲೋಹಗಳನ್ನು ಆಮದು ಮಾಡಿಕೊಳ್ಳುತ್ತಿವೆ. 2024ರಲ್ಲಿ ಯುರೋಪಿಯನ್ ಒಕ್ಕೂಟವು 67.5 ಬಿಲಿಯನ್ ಯುರೋಗಳಷ್ಟು ಸರಕು ವ್ಯಾಪಾರ ಹಾಗೂ 17.2 ಬಿಲಿಯನ್ ಯುರೋಗಳಷ್ಟು ಸೇವಾ ವ್ಯಾಪಾರವನ್ನು ರಷ್ಯಾ ಜೊತೆ ನಡೆಸಿದೆ.
ಟ್ರಂಪ್ ಅವರ ಆರೋಪ:
ಟ್ರಂಪ್ ಹೇಳುವಂತೆ, ಭಾರತ ರಷ್ಯಾದ ತೈಲವನ್ನು ಖರೀದಿ ಮಾಡುತ್ತಿದ್ದು, ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಲಾಭಕ್ಕಾಗಿ ಮಾರಾಟ ಮಾಡುತ್ತಿದೆ. ಅವರು ಈ ಕಾರಣಕ್ಕಾಗಿ ಭಾರತದಿಂದ ಸಂಗ್ರಹಿಸಬೇಕಾದ ಸುಂಕವನ್ನು ಹೆಚ್ಚಿಸುವುದಾಗಿ ಹೇಳಿದ್ದಾರೆ.
ಭಾರತದ ನಿಲುವು:
ಭಾರತ, ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಕಚ್ಚಾ ತೈಲವನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಇಂಧನದ ದರಗಳನ್ನು ಜನತೆಗೆ ಕೈಗೆಟುಕುವಂತೆ ಇರಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಕ್ರೀಡೆ
ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!
ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.
ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.
ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.
ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ಕ್ರೀಡೆ2 months ago
ಇಂದು ಐಪಿಎಲ್ ಫೈನಲ್- ಆರ್ಸಿಬಿಗೆ ಶುಭಕೋರಿದ ಎಸ್ಟಿಎಸ್!