ದೇಶ

ರಾಜ್ಯದಲ್ಲಿ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ವೇ ಸಂಚಾರ ಮುಕ್ತ

ಬೆಂಗಳೂರು: ದಕ್ಷಿಣ ಭಾರತದ ಅತಿ ದೊಡ್ಡ ಎಕ್ಸ್‌ಪ್ರೆಸ್ ವೇನಲ್ಲಿ ಒಂದಾಗಿರುವ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ವೇ (Chennai-Bengaluru Expressway) ಕರ್ನಾಟಕ ಭಾಗದಲ್ಲಿ ಸಂಚಾರಕ್ಕೆ ಮುಕ್ತವಾಗಿದೆ.

ಕರ್ನಾಟಕ ಭಾಗದ ಮಾರ್ಗದ ಕೆಲಸಗಳು ಸಂಪೂರ್ಣ ಹಿನ್ನೆಲೆ, ಸಂಚಾರ ಮುಕ್ತಗೊಳಿಸಲಾಗಿದೆ. ತಾತ್ಕಾಲಿಕವಾಗಿ ಟೋಲ್ ಇಲ್ಲದೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಾರ್ಗಸೂಚಿ ಫಲಕಗಳು, ನಾಮಫಲಕಗಳು, ಡಿಜಿಟಲ್ ಫಲಕಗಳು ಸೇರಿದಂತೆ ರಾಜ್ಯ ಭಾಗದ 71 ಕಿ.ಮೀನ ಸಂಪೂರ್ಣ ಕಾರ್ಯ ಮುಕ್ತಾಯಗೊಂಡ ಹಿನ್ನೆಲೆ ಸಂಚಾರ ಮುಕ್ತಗೊಳಿಸಲಾಗಿದೆ.

ಹೊಸಕೋಟೆಯ ಇಂಟರ್ ಚೇಂಜ್‌ನಿಂದ ಚೆನ್ನೈವರೆಗೆ 280 ಕಿ.ಮೀ ಉದ್ದದ ಎಕ್ಸ್‌ಪ್ರೆಸ್ ವೇ ಇದಾಗಿದೆ. ಸದ್ಯ ಹೊಸಕೋಟೆ ಸ್ಯಾಟಲೈಟ್ ರಿಂಗ್ ರಸ್ತೆಯಿಂದ, ಆಂಧ್ರ ಗಡಿ ಸುಂದರಪಾಳ್ಯದವರೆಗಿನ ರಸ್ತೆ ಸಂಚಾರಕ್ಕೆ ರೆಡಿಯಾಗಿದೆ.

ಆಂಧ್ರ ಪ್ರದೇಶ, ತಮಿಳುನಾಡು ಭಾಗದಲ್ಲಿ ಕಾಮಗಾರಿ ಮುಂದುವರೆದಿದೆ. ಈ ವರ್ಷಾಂತ್ಯಕ್ಕೆ ಸಂಪೂರ್ಣ ಮಾರ್ಗ ಸಂಚಾರ ಮುಕ್ತಗೊಳ್ಳುವ ಸಾಧ್ಯತೆಯಿದೆ. ಸಂಪೂರ್ಣ ಕಾಮಗಾರಿ ಮುಕ್ತಾಯಗೊಂಡು ಅಧಿಕೃತ ಉದ್ಘಾಟನೆ ಬಳಿಕ ಟೋಲ್ ಸಂಗ್ರಹ ಆರಂಭಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರದೇಶಿಕ ಅಧಿಕಾರಿ ವಿಲಾಸ್ ಪಿ.ಬ್ರಹ್ಮಂಕರ್ ತಿಳಿಸಿದ್ದಾರೆ.

ಈ ಎಕ್ಸ್‌ಪ್ರೆಸ್ ವೇಗೆ ಮಾಲೂರು, ಬಂಗಾರಪೇಟೆ, ಮತ್ತು ಆಂಧ್ರ ಗಡಿ ಸುಂದರ ಪಾಳ್ಯದಲ್ಲಿ ಮೂರು ಇಂಟರ್ ಚೇಂಜ್‌ಗಳಿವೆ. ವೇಗದ ಮಿತಿ 100ಕ್ಕೆ ಸೀಮಿತಗೊಳಿಸಲಾಗಿದೆ.

Leave a Reply

Your email address will not be published. Required fields are marked *

Trending

Exit mobile version