Connect with us

ಬೆಂಗಳೂರು

ಬೆಂಗಳೂರಿಗೆ ಹೊಸ ಸ್ವರೂಪ ಕೊಡಲು ಈ ಶಿಫಾರಸ್ಸುಗಳನ್ನು ಮಾಡಲಾಗಿದೆ ಶಾಸಕ ಎಸ್ ಟಿ ಎಸ್

Published

on

ಬೆಂಗಳೂರು: ಬೆಂಗಳೂರಿನ ಈಗಿನ ಮಹಾನಗರ ಪಾಲಿಕೆಯನ್ನು ವಿಭಜಿಸಿ 7 ಮಹಾನಗರ ಪಾಲಿಕೆಗಳನ್ನು ರಚನೆ ಮಾಡಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಸಂಬಂಧ ವಿಧಾನ ಮಂಡಲದ ಸಮಿತಿ ವರದಿ ಸಲ್ಲಿಸಿದೆ. ಗ್ರೇಟರ್ ಬೆಂಗಳೂರು ವಿಧೇಯಕ ಪರಿಶೀಲನೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ ವಿಧಾನ ಮಂಡಲದ ಜಂಟಿ ಪರಿಶೀಲನಾ sಸಮಿತಿಯ ಅಧ್ಯಕ್ಷ ರಿಜ್ವಾನ್ ಹರ್ಷದ್ ಅವರು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ವರದಿ ಸಲ್ಲಿಸಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಅಭಿವೃದ್ಧಿ ಮತ್ತು ಆಡಳಿತ ದೃಷ್ಠಿಯಿಂದ ವಿಭಜನೆ ಮಾಡಿ 7 ಸಣ್ಣ ಸಣ್ಣ ಪಾಲಿಕೆಗಳನ್ನಾಗಿ ಮಾಡಲು ಈ ಸಮಿತಿ ಶಿಫಾರಸ್ಸು ಮಾಡಿದೆ. 7 ನಗರ ಪಾಲಿಕೆಗಳಲ್ಲಿ 100 ರಿಂದ 125 ವಾರ್ಡ್ಗಳಿರಬೇಕು. ಮೇಯರ್ ಅವಧಿಯಲ್ಲಿ 30 ತಿಂಗಳ ಅವಧಿ ಇರಬೇಕು ಎಂಬ ಶಿಫಾರಸ್ಸನ್ನು ಮಾಡಲಾಗಿದೆ.
ಬಿಬಿಎಂಪಿ ವಿಭಜನೆಯಾದರೂ ರಚನೆಯಾಗುವ ಪಾಲಿಕೆಗಳಿಗೆ ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಉತ್ತರ ಪಾಲಿಕೆ ಎಂದೇ ಹೆಸರಿಡಬೇಕು ಎಂದು ಶಿಫಾರಸ್ಸಿನಲ್ಲಿ ಹೇಳಲಾಗಿದೆ. ಈ ವರದಿಯಲ್ಲಿ ಬೆಂಗಳೂರಿಲ್ಲಿ 7 ಮಹಾನಗರ ಪಾಲಿಕೆಗಳನ್ನು ರಚಿಸುವ ಪ್ರಸ್ತಾವನೆ ಮಾಡಿದ್ದು, 7 ಮಹಾನಗರ ಪಾಲಿಕೆ ರಚಿಸುವ ಅಂತಿಮ ತೀರ್ಮಾನವನ್ನು ಸರ್ಕಾರಕ್ಕೆ ಬಿಟ್ಟಿದೆ ಎಂದರು. ಬೆಂಗಳೂರಿನಲ್ಲಿ 7 ಮಹಾನಗರ ಪಾಲಿಕೆಗಳನ್ನು ರಚಿಸುವ ಮೂಲಕ ಅಭಿವೃದ್ಧಿ ಸಾಧ್ಯವಾಗುತ್ತದೆ. ಬೆಂಗಳೂರಿನ ಸಮಗ್ರ ಅಭಿವೃದ್ಧಿ ದೃಷ್ಠಿಯಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಬೇಕು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಶಾಸಕ ಎಸ್ ಟಿ ಸೋಮಶೇಖರ್ ಅವರು ಮಾತನಾಡುತ್ತಬಿಬಿಎಂಪಿ ಚುನಾವಣೆಗಳು ಆಗಸ್ಟ್ ಒಳಗೆ ಆಗಬೇಕು. ಜೂನ್ 30ರ ಒಳಗೆ ವಾರ್ಡ್ಗಳ ಗಡಿಗಳನ್ನು ನಿರ್ಧಾರ ಮಾಡಬೇಕು ಎಂದು ವರದಿಯಲ್ಲಿ ಹೇಳಲಾಗಿದೆ. ಬಿಬಿಎಂಪಿಯನ್ನು 7 ಸಣ್ಣ ಸಣ್ಣ ಪಾಲಿಕೆಯನ್ನಾಗಿ ವಿಭಜನೆ ಮಾಡಲು ಅವಕಾಶ ಕಲ್ಪಿಸಿ ಶಿಫಾರಸ್ಸು ಮಾಡಲಾಗಿದೆ. ಎಷ್ಟು ಪಾಲಿಕೆ ರಚನೆ ಮಾಡಬೇಕು ಎಂಬುದನ್ನು ಸರ್ಕಾರದ ನಿರ್ಧಾರಕ್ಕೆ ಬಿಡಲಾಗಿದೆ ಎಂದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಿಂದ ಬೆಂಗಳೂರಿನ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ಇದರಿಂದ ಬೆಂಗಳೂರನ್ನು ವಿಭಜನೆ ಮಾಡುತ್ತಾರೆ ಎಂಬುದು ಸರಿಯಲ್ಲ ಎಂದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿರುತ್ತಾರೆ. ಬೆಂಗಳೂರು ಉಸ್ತುವಾರಿ ಸಚಿವರು ಉಪಾಧ್ಯಕ್ಷರಾಗಿ ಇರುತ್ತಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾದರೆ ಬಿಡಿಎ, ಬೆಸ್ಕಾಂ, ಜಲಮಂಡಳಿ ನಡುವೆ ಸಮನ್ವಯತೆ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರ 3 ತಿಂಗಳಿಗೊಮ್ಮೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಲು ಸಲಹೆ ಮಾಡಲಾಗಿದೆ. ಬಿಬಿಎಂಪಿಗೆ ಹೊಸ ರೂಪ ನೀಡಲಾಗಿದ್ದು, ಬೇರೆ ಜಿಲ್ಲೆಯ ಪ್ರದೇಶಗಳನ್ನು ನೂತನ ಪಾಲಿಕೆಗಳಿಗೆ ಸೇರಿಸುವುದಿಲ್ಲ. ಕೆಎಂಸಿ ಕಾಯ್ದೆ ಪ್ರಕಾರ ಹೊಸ ಪಾಲಿಕೆ ರಚನೆಯಾಗುತ್ತದೆ. ಪಾಲಿಕೆ ಹತ್ತಿರದಲ್ಲಿರುವ ಗ್ರಾಮಗಳನ್ನು ಸೇರಿಸಲು ಶಿಫಾರಸ್ಸಿನಲ್ಲಿ ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದರು. ಸಮಿತಿ 5 ತಿಂಗಳಿನಿಂದ ಸಭೆ ಮಾಡಿ ಬ್ರ‍್ಯಾಂಡ್ ಬೆಂಗಳೂರು ಕಮಿಟಿ, ಕಾನೂನು ತಜ್ಞರು, ಸಾರ್ವಜನಿಕರ ಅಭಿಪ್ರಾಯ ಪಡೆದು ವರದಿ ತಯಾರಿಸಲಾಗಿದೆ ಎಂದು ಅವರು ಹೇಳಿದರು.

ದೇಶ

ಮೈಸೂರು ದಸರಾ ದಿನಾಂಕ ಘೋಷಣೆ: ಸಿಎಂ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರ

Published

on

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) 2026 ಉತ್ಸವದ ದಿನಾಂಕವನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ದಸರಾ ಉತ್ಸವದ ಸಿದ್ಧತೆಗಳು ಹಾಗೂ ಕಾರ್ಯಕ್ರಮಗಳ ವೇಳಾಪಟ್ಟಿಗೆ ಅನುಮೋದನೆ ನೀಡಲಾಗಿದೆ.

ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ, ಅಕ್ಟೋಬರ್ 11ರಂದು ಮೈಸೂರು ದಸರಾ ಉತ್ಸವಕ್ಕೆ ಅಧಿಕೃತ ಚಾಲನೆ ದೊರೆಯಲಿದ್ದು, ಇದೇ ದಿನದಿಂದ ನವರಾತ್ರಿ (Navaratri) ಆಚರಣೆ ಆರಂಭವಾಗಲಿದೆ. ಹತ್ತು ದಿನಗಳ ಕಾಲ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಕಲಾ ಕಾರ್ಯಕ್ರಮಗಳು ನಡೆಯಲಿವೆ.

ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾಗಿರುವ **ಜಂಬೂಸವಾರಿ (Jumboo Savari)**ಯನ್ನು ಅಕ್ಟೋಬರ್ 21ರಂದು ವಿಜಯದಶಮಿ ದಿನ ಅದ್ದೂರಿಯಾಗಿ ಆಯೋಜಿಸಲು ಸರ್ಕಾರ ತೀರ್ಮಾನಿಸಿದೆ. ಸಂಪ್ರದಾಯದಂತೆ ಅಲಂಕೃತ ಅಂಬಾರಿಯಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಮೆರವಣಿಗೆಯಲ್ಲಿ ಸಾಗಲಿದ್ದು, ಸಾವಿರಾರು ಭಕ್ತರು ಹಾಗೂ ದೇಶ-ವಿದೇಶಗಳಿಂದ ಆಗಮಿಸುವ ಪ್ರವಾಸಿಗರು ಈ ಐತಿಹಾಸಿಕ ಉತ್ಸವಕ್ಕೆ ಸಾಕ್ಷಿಯಾಗಲಿದ್ದಾರೆ.

ಸಭೆಯಲ್ಲಿ ಭದ್ರತೆ, ಸಂಚಾರ ವ್ಯವಸ್ಥೆ, ಪ್ರವಾಸೋದ್ಯಮ, ಸ್ವಚ್ಛತೆ, ವಿದ್ಯುತ್, ಕುಡಿಯುವ ನೀರು ಹಾಗೂ ಸಾರ್ವಜನಿಕ ಸೌಲಭ್ಯಗಳ ಕುರಿತು ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ. ಪ್ರವಾಸಿಗರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

ಮೈಸೂರು ದಸರಾ ಕರ್ನಾಟಕದ ಅತ್ಯಂತ ದೊಡ್ಡ ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾಗಿದ್ದು, ರಾಜ್ಯದ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಮಹತ್ವದ ವೇದಿಕೆಯಾಗಿದೆ. ಈ ಬಾರಿ ಉತ್ಸವವನ್ನು ಇನ್ನಷ್ಟು ವೈಭವದಿಂದ ಆಯೋಜಿಸಲು ಸರ್ಕಾರ ಸಿದ್ಧತೆ ಆರಂಭಿಸಿದೆ.

Continue Reading

ದೇಶ

GBA ಚುನಾವಣೆ, ಒತ್ತುವರಿ ತೆರವು, ಮೋಡ ಬಿತ್ತನೆ: CM ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ

Published

on

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಹೊಸ ಮಹಾನಗರ ಪಾಲಿಕೆಗಳ ಚುನಾವಣೆಯನ್ನು ಆಗಸ್ಟ್ ತಿಂಗಳೊಳಗೆ ನಡೆಸುವ ವಿಚಾರದಲ್ಲಿ ಕೆಲವು ತಾಂತ್ರಿಕ ಸವಾಲುಗಳಿದ್ದು, ಸರ್ಕಾರವು ಸುಪ್ರೀಂ ಕೋರ್ಟ್ (Supreme Court) ನೀಡುವ ನಿರ್ದೇಶನಗಳಿಗೆ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಬಿಎ ವ್ಯಾಪ್ತಿಯ ಪಾಲಿಕೆ ಚುನಾವಣೆಗಳಿಗೆ ಸರ್ಕಾರ ಅಗತ್ಯ ಸಿದ್ಧತೆ ನಡೆಸಿದೆ. ಆದರೆ ಚುನಾವಣಾ ಆಯೋಗ (Election Commission) ರಾಜ್ಯಾದ್ಯಂತ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯದಿಂದಾಗಿ ಚುನಾವಣಾ ಪ್ರಕ್ರಿಯೆಯಲ್ಲಿ ಸ್ವಲ್ಪ ವಿಳಂಬ ಉಂಟಾಗಿದೆ ಎಂದು ವಿವರಿಸಿದರು.

ಸುಪ್ರೀಂ ಕೋರ್ಟ್ ಈ ಹಿಂದೆ ಆಗಸ್ಟ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ಸೂಚನೆ ನೀಡಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಗಡುವನ್ನು ಡಿಸೆಂಬರ್‌ವರೆಗೆ ವಿಸ್ತರಿಸುವಂತೆ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಸಿಎಂ, “ನಾನು ಈ ವಿಚಾರದಲ್ಲಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ. ಅಧಿಕಾರಿಗಳು ಮತ್ತು ನ್ಯಾಯಾಲಯದ ಪ್ರಕ್ರಿಯೆಯಂತೆ ಮುಂದಿನ ಕ್ರಮ ನಡೆಯಲಿದೆ” ಎಂದು ಹೇಳಿದರು.

ಇದೇ ವೇಳೆ, ಬೆಂಗಳೂರಿನಲ್ಲಿ ಸಂಚಾರಕ್ಕೆ ಅಡ್ಡಿಯಾಗಿರುವ ಒತ್ತುವರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ತಿಳಿಸಿದರು. ನಗರದಲ್ಲಿ ಸುಮಾರು 60,000 ಬೀದಿಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದ್ದು, ಅವರಲ್ಲಿ 30,000 ಮಂದಿಗೆ ತಳ್ಳುಗಾಡಿ ಹಾಗೂ ವ್ಯಾಪಾರಕ್ಕೆ ಅಗತ್ಯ ವಾಹನಗಳನ್ನು ವಿತರಿಸಲು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು.

ಮುಖ್ಯ ರಸ್ತೆಗಳಲ್ಲಿ ಶಾಶ್ವತ ಶೆಡ್ ಅಥವಾ ಟೆಂಟ್‌ಗಳನ್ನು ನಿರ್ಮಿಸಲು ಸುಪ್ರೀಂ ಕೋರ್ಟ್ ನಿರ್ಬಂಧವಿದ್ದು, ಸರ್ಕಾರ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ವ್ಯಾಪಾರ ನಡೆಸಬೇಕು ಎಂದು ಸಿಎಂ ಸ್ಪಷ್ಟಪಡಿಸಿದರು. ಜೊತೆಗೆ, ಮೋಡ ಬಿತ್ತನೆ, ಬೆಳಗಾವಿಗೆ ವಿಶೇಷ ಪ್ಯಾಕೇಜ್ ಹಾಗೂ ಮುಜರಾಯಿ ದೇವಸ್ಥಾನಗಳ ಹುಂಡಿ ಹಣದ ಭದ್ರತೆ ಕುರಿತು ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದರು.

Continue Reading

ದೇಶ

7 ದಿನದಲ್ಲಿ ವಾಹನ ತೆರವುಗೊಳಿಸಿ, ಇಲ್ಲದಿದ್ದರೆ ಹರಾಜು! ಬೆಂಗಳೂರು ಪೊಲೀಸರ ಖಡಕ್ ಎಚ್ಚರಿಕೆ

Published

on

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಕಡಿವಾಣ ಹಾಕಲು ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಹಾಗೂ ಜಿಬಿಎ (GBA) ಜಂಟಿಯಾಗಿ ಬೃಹತ್ ಕಾರ್ಯಾಚರಣೆ ಆರಂಭಿಸಿದ್ದಾರೆ. ರಸ್ತೆ ಬದಿ ಹಾಗೂ ನೋ ಪಾರ್ಕಿಂಗ್ (No Parking) ವಲಯಗಳಲ್ಲಿ ವಾರಗಟ್ಟಲೆ, ತಿಂಗಳುಗಟ್ಟಲೆ ಅನಾಥವಾಗಿ ನಿಂತಿರುವ ವಾಹನಗಳನ್ನು ತೆರವುಗೊಳಿಸುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

ಬೆಂಗಳೂರು ಸಂಚಾರ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ ಅವರ ಮಾಹಿತಿ ಪ್ರಕಾರ, ಮೊದಲ ಹಂತದಲ್ಲಿ ನಗರದ ವಿವಿಧ ಭಾಗಗಳಲ್ಲಿ 1,580 ಅನಾಥ ವಾಹನಗಳನ್ನು ಗುರುತಿಸಲಾಗಿದೆ. ಈ ವಾಹನಗಳಿಗೆ ನೋಟಿಸ್ ಅಂಟಿಸಲಾಗುತ್ತಿದ್ದು, ವಾಹನ ಮಾಲೀಕರಿಗೆ ಕೊನೆಯ ಅವಕಾಶ ನೀಡಲಾಗಿದೆ.

ಪೊಲೀಸರು ನೀಡುವ ನೋಟಿಸ್ ನಂತರ ವಾಹನ ಮಾಲೀಕರು 7 ದಿನಗಳೊಳಗೆ ₹500 ಪಾರ್ಕಿಂಗ್ ದಂಡ ಪಾವತಿಸಿ ತಮ್ಮ ವಾಹನಗಳನ್ನು ತೆರವುಗೊಳಿಸಬೇಕು. ನಿಗದಿತ ಅವಧಿಯೊಳಗೆ ವಾಹನಗಳನ್ನು ಸ್ಥಳಾಂತರಿಸದಿದ್ದರೆ, ಸಂಚಾರ ಪೊಲೀಸರು ಟೋ ವಾಹನಗಳ ಮೂಲಕ ಅವುಗಳನ್ನು ವಶಕ್ಕೆ ಪಡೆಯಲಿದ್ದಾರೆ.

ವಾಹನಗಳನ್ನು ವಶಕ್ಕೆ ಪಡೆದ ನಂತರವೂ ಸಾರ್ವಜನಿಕ ಪ್ರಕಟಣೆ ಹೊರಡಿಸಿ 15 ದಿನಗಳ ಕಾಲ ಮಾಲೀಕರಿಗಾಗಿ ಕಾಯಲಾಗುತ್ತದೆ. ಈ ಅವಧಿಯಲ್ಲಿಯೂ ಯಾರೂ ವಾಹನದ ಮಾಲೀಕತ್ವವನ್ನು ಸಾಬೀತುಪಡಿಸದಿದ್ದರೆ, ಜಿಬಿಎ ನಿಯಮಾವಳಿಗಳ ಪ್ರಕಾರ ವಾಹನಗಳನ್ನು ಬಹಿರಂಗ ಹರಾಜು ಮಾಡಲಾಗುತ್ತದೆ.

ರಸ್ತೆಗಳು ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಮೀಸಲಾಗಿದ್ದು, ನೋ ಪಾರ್ಕಿಂಗ್ ಪ್ರದೇಶಗಳಲ್ಲಿ ವಾಹನಗಳನ್ನು ಅನಾಥವಾಗಿ ಬಿಟ್ಟು ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಬಾರದು ಎಂದು ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ. ಈ ಅಭಿಯಾನದ ಮೂಲಕ ಟ್ರಾಫಿಕ್ ದಟ್ಟಣೆ ಕಡಿಮೆ ಮಾಡುವುದು, ರಸ್ತೆ ಸುರಕ್ಷತೆ ಹೆಚ್ಚಿಸುವುದು ಹಾಗೂ ಸಾರ್ವಜನಿಕ ಸಂಚಾರ ಸುಗಮಗೊಳಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ.

Continue Reading

Trending