Connect with us

ಕ್ರೀಡೆ

IPL 2025: ಕಾಲು ಫ್ರಾಕ್ಟರ್; ಬ್ಯಾಂಡೇಜ್ ಕಟ್ಟಿಕೊಂಡೇ ಕೋಚಿಂಗ್ ಗೆ ಬಂದ Rahul Dravid

Published

on

ಜೈಪುರ: ಕ್ರಿಕೆಟ್ ಆಡುವಾಗ ಕಾಲಿಗೆ ಗಂಭೀರ ಗಾಯ ಮಾಡಿಕೊಂಡಿದ್ದ ಮಾಜಿ ಕ್ರಿಕೆಟಿಗ ಹಾಗೂ ಟೀಂ ಇಂಡಿಯಾ ಮಾಜಿ ಕೋಚ್ ಕಾಲಿಗೆ ಬ್ಯಾಂಡೇಜ್ ಕಟ್ಟಿಕೊಂಡೇ ರಾಜಸ್ತಾನ ರಾಯಲ್ಸ್ ತಂಡದ ಆಟಗಾರರಿಗೆ ಕೋಚಿಂಗ್ ನೀಡುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ.

ಹೌದು.. ಬೆಂಗಳೂರಿನಲ್ಲಿ ನಡೆದ ಸ್ಥಳೀಯ ಕ್ರಿಕೆಟ್ ಪಂದ್ಯದ ಸಮಯದಲ್ಲಿ ರಾಹುಲ್ ದ್ರಾವಿಡ್ ಗಾಯಗೊಂಡಿದ್ದರು. ಬೆಂಗಳೂರಿನ ಎಸ್‌ಎಲ್‌ಎಸ್ ಕ್ರೀಡಾಂಗನ ಕ್ರಿಕೆಟ್ ಮೈದಾನದಲ್ಲಿ ಯಂಗ್ ಲಯನ್ಸ್ ಕ್ಲಬ್ ವಿರುದ್ಧದ 50 ಓವರ್‌ಗಳ ಪಂದ್ಯದಲ್ಲಿ ದ್ರಾವಿಡ್ ಮತ್ತು ಅವರ ಮಗ ಅನ್ವಯ್ ವಿಜಯ ಕ್ರಿಕೆಟ್ ಕ್ಲಬ್ (ಮಾಲೂರು) ಅನ್ನು ಪ್ರತಿನಿಧಿಸಿದ್ದರು. ಅಲ್ಲಿ ದ್ರಾವಿಡ್ 6ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಿ ಎಂಟು ಎಸೆತಗಳಲ್ಲಿ 10 ರನ್ ಗಳಿಸಿದರು. ತಂದೆ-ಮಗ ಜೋಡಿ ಐದನೇ ವಿಕೆಟ್‌ಗೆ 17 ರನ್‌ಗಳ ಸಂಕ್ಷಿಪ್ತ ಜೊತೆಯಾಟವಾಡಿತು.

ಆದರೆ ಅದೇ ಪಂದ್ಯದಲ್ಲಿ ರಾಹುಲ್ ದ್ರಾವಿಡ್ ಗಾಯಗೊಂಡರು. ಅವರ ಕಾಲಿಗೆ ಗಂಭೀರ ಪೆಟ್ಟಾಗಿದ್ದು, ಕಾಲಿಗೆ ದೊಡ್ಡ ಮಟ್ಟದಲ್ಲೇ ಬ್ಯಾಂಡೇಜ್ ಕಟ್ಟಲಾಗಿತ್ತು. ಇದು ಅವರು ಮತ್ತೆ ಮೈದಾನಕ್ಕೆ ಇಳಿಯುವುದಿಲ್ಲ ಎಂದು ಹೇಳಲಾಗಿತ್ತು. ಇದೇ ವಿಚಾರ ಅವರು ಕೋಚಿಂಗ್ ಮಾಡುತ್ತಿರುವ ರಾಜಸ್ತಾನ ರಾಯಲ್ಸ್ ತಂಡದ ಆತಂಕಕ್ಕೂ ಕಾರಣವಾಗಿತ್ತು.

ಕೋಚಿಂಗ್ ಗೆ ಬಂದು ಅಚ್ಚರಿ ಮೂಡಿಸಿದ ಜಾಮಿ

ಇನ್ನು ದ್ರಾವಿಡ್ ಗುಣಮುಖರಾಗುವುದಿಲ್ಲ. ಹೀಗಾಗಿ ಹಾಲಿ ವರ್ಷದ ಐಪಿಎಲ್ ಟೂರ್ನಿಯಲ್ಲಿ ಅವರ ಸಲಹೆ ತರಬೇತಿ ಸಿಗುವುದಿಲ್ಲ ಎಂದು ರಾಜಸ್ತಾನ ರಾಯಲ್ಸ್ ತಂಡ ಭಾವಿಸಿತ್ತು. ಆದರೆ ಅಚ್ಚರಿ ಎಂಬಂತೆ ಇದೀಗ ರಾಹುಲ್ ದ್ರಾವಿಡ್ ಮೈದಾನಕ್ಕೆ ಆಗಮಿಸಿದ್ದಾರೆ. ಅಂದು ಎದ್ದು ನಿಲ್ಲಲೂ ಸಾಧ್ಯವಾಗದೇ ಅವರು ಕ್ರಚಸ್ ಅವಲಂಬಿಸಿದ್ದ ದ್ರಾವಿಡ್ ಇಂದು ಅದೇ ಕ್ರಚಸ್ ನೆರವಿನಿಂದ ಮೈದಾನಕ್ಕೆ ಬಂದಿದ್ದಾರೆ.

ಮಾತ್ರವಲ್ಲದೇ ಕಾಲಿನ ಗಾಯದ ಹೊರತಾಗಿಯೂ ತಂಡದ ತರಬೇತಿ ಅವಧಿಯಲ್ಲಿ ಅಚ್ಚರಿಯ ರೀತಿಯಲ್ಲಿ ಕಾಣಿಸಿಕೊಂಡು ಆಟಗಾರರಿಗೆ ತರಬೇತಿ ಕೂಡ ನೀಡಿದ್ದಾರೆ. ಪ್ರಸ್ತುತ ಸರಿಯಾಗಿ ನಡೆಯಲು ಸಾಧ್ಯವಾಗದ ದ್ರಾವಿಡ್, ಗಾಲ್ಫ್ ಕಾರ್ಟ್‌ನಲ್ಲಿ ಮೈದಾನಕ್ಕೆ ಆಗಮಿಸಿದ್ದು, ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್‌ಗೆ ಮಾರ್ಗದರ್ಶನ ನೀಡುತ್ತಾ ಕ್ರಚಸ್ ಸಹಾಯದಿಂದ ನಿಂತಿದ್ದರು.

ಈ ವಿಡಿಯೋವನ್ನು ರಾಜಸ್ತಾನ ರಾಯಲ್ಸ್ ತಂಡ ಟ್ವೀಟ್ ಮಾಡಿದ್ದು, ಟ್ವೀಟ್ ನಲ್ಲಿ, ‘ದಂತಕಥೆ ಭಾರತದ ಮಾಜಿ ಕೋಚ್ 10 ವರ್ಷಗಳ ನಂತರ ಆರ್‌ಆರ್‌ಗೆ ಮರಳುತ್ತಿದ್ದಾರೆ. ಈ ಹಿಂದೆ ನಾಯಕ ಮತ್ತು ಮಾರ್ಗದರ್ಶಕರಾಗಿ ನಿರ್ಣಾಯಕ ಪಾತ್ರ ವಹಿಸಿದ್ದರು. ಇದೀಗ ಕೋಚ್ ಆಗಿ ಮತ್ತೆ ತಂಡ ಸೇರ್ಪಡೆಯಾಗಿದ್ದಾರೆ ಎಂದು ಟ್ವೀಟ್ ಮಾಡಿದೆ.

ಶೇನ್ ವಾರ್ನ್ ನೇತೃತ್ವದಲ್ಲಿ ಐಪಿಎಲ್‌ನ ಉದ್ಘಾಟನಾ ಆವೃತ್ತಿಯನ್ನು ಗೆದ್ದ ನಂತರ, ರಾಜಸ್ಥಾನ್ ರಾಯಲ್ಸ್ ತಂಡವು ಎರಡನೇ ಬಾರಿಗೆ ಯಶಸ್ಸಿನ ಉತ್ತುಂಗದಲ್ಲಿದೆ. ಆದಾಗ್ಯೂ, ಸಂಜು ಸ್ಯಾಮ್ಸನ್ ನಾಯಕತ್ವದಲ್ಲಿ ತಂಡವು 2025 ರಲ್ಲಿ ತಮ್ಮ ಎರಡನೇ ಐಪಿಎಲ್ ಪ್ರಶಸ್ತಿಯನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಕಳೆದ ವರ್ಷ ರಾಯಲ್ಸ್ ತಂಡವು ಅಗ್ರ ನಾಲ್ಕರಲ್ಲಿ ಸ್ಥಾನ ಪಡೆದಿತ್ತು ಮತ್ತು ಪ್ಲೇ-ಆಫ್ ಪಂದ್ಯದಲ್ಲಿ ಸನ್‌ರೈಸರ್ಸ್ ತಂಡವು ಅವರನ್ನು 37 ರನ್‌ಗಳಿಂದ ಸೋಲಿಸಿ ಆರ್ ಆರ್ ತಂಡದ ಅಭಿಯಾನವನ್ನು ಕೊನೆಗೊಳಿಸಿತ್ತು.

ಅಂದಹಾಗೆ ಹಾಲಿ ಆವೃತ್ತಿಯ ಆರ್ ಆರ್ ತಂಡದಲ್ಲಿ ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೈರ್, ಸಂದೀಪ್ ಶರ್ಮಾ, ಜೋಫ್ರಾ ಆರ್ಚರ್, ಮಹೀಶ್ ತೀಕ್ಷಣ, ವನಿಂದು ಹಸರಂಗ, ಆಕಾಶ್ ಮಧ್ವಲ್, ಕುಮಾರ್ ಕಾರ್ತಿಕೇಯ, ನಿತೀಶ್ ರಾಣಾ, ತುಷಾರ್ ದೇಶಪಾಂಡೆ, ಶುಭಂ ದುಬೆ, ಯುಧ್ವೀರ್ ಸಿಂಗ್, ಫಜಲ್ಹಕ್ ಫಾರೂಕಿ, ಕ್ವೇನಾ ಮಾಫಕ, ಕುನಾಲ್ ರಾಥೋಡ್, ಅಶೋಕ್ ಶರ್ಮಾಇದ್ದು, ಇವರಲ್ಲದೇ 13 ವರ್ಷದ ವೈಭವ್ ಸೂರ್ಯವಂಶಿ ಕೂಡ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ದೇಶ

MS Dhoni ಹೊಸ ಅವತಾರ! ಮದ್ರಾಸ್ ಇಂಟರ್‌ನ್ಯಾಷನಲ್ ಸರ್ಕ್ಯೂಟ್‌ನಲ್ಲಿ ಬೈಕ್ ರೈಡ್ ವೈರಲ್

Published

on

ಚೆನ್ನೈ: ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ (MS Dhoni) ಕ್ರಿಕೆಟ್‌ನಿಂದ ದೂರವಿದ್ದರೂ, ತಮ್ಮ ಬೈಕ್ ಪ್ರೀತಿಯನ್ನು ಮತ್ತೊಮ್ಮೆ ಅಭಿಮಾನಿಗಳ ಮುಂದೆ ಪ್ರದರ್ಶಿಸಿದ್ದಾರೆ. ಚೆನ್ನೈ ಸಮೀಪದ ಇರುಂಗಟ್ಟುಕೊಟ್ಟೈಯಲ್ಲಿರುವ ಮದ್ರಾಸ್ ಇಂಟರ್‌ನ್ಯಾಷನಲ್ ಸರ್ಕ್ಯೂಟ್ನಲ್ಲಿ ನಡೆದ TVS Eurogrip ಪ್ರಚಾರ ಕಾರ್ಯಕ್ರಮದಲ್ಲಿ ಧೋನಿ KTM 390 Duke ಬೈಕ್ ಸವಾರಿ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ಕಾರ್ಯಕ್ರಮದ ವೇಳೆ ಧೋನಿ ರೇಸ್ ಟ್ರ್ಯಾಕ್‌ನಲ್ಲಿ ಹಲವು ಹೈ-ಸ್ಪೀಡ್ ಲ್ಯಾಪ್‌ಗಳನ್ನು ಪೂರ್ಣಗೊಳಿಸಿದರು. ಅವರ ರೈಡಿಂಗ್ ಕೌಶಲ್ಯವನ್ನು ನೋಡಿದ ಅಭಿಮಾನಿಗಳು ಸಂಭ್ರಮಿಸಿದ್ದು, ಕಾರ್ಯಕ್ರಮದ ವಿಡಿಯೋಗಳು ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಧೋನಿಗೆ ಕ್ರಿಕೆಟ್‌ನಷ್ಟೇ ಬೈಕ್‌ಗಳ ಮೇಲೂ ಅಪಾರ ಆಸಕ್ತಿ ಇದೆ. ಅವರ ರಾಂಚಿಯ ನಿವಾಸದಲ್ಲೇ ಹಲವು ದುಬಾರಿ ಮತ್ತು ಅಪರೂಪದ ಬೈಕ್‌ಗಳ ಸಂಗ್ರಹವಿದ್ದು, ಸಮಯ ಸಿಕ್ಕಾಗಲೆಲ್ಲ ಬೈಕ್ ಸವಾರಿ ಮಾಡುವುದು ಅವರ ನೆಚ್ಚಿನ ಹವ್ಯಾಸವಾಗಿದೆ.

ಈ ಬಾರಿ KTM 390 Duke ಬೈಕ್‌ನಲ್ಲಿ ರೇಸ್ ಟ್ರ್ಯಾಕ್‌ಗೆ ಇಳಿದ ಧೋನಿ, ವೇಗ ಮತ್ತು ನಿಯಂತ್ರಣ ಎರಡರಲ್ಲೂ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಅಭಿಮಾನಿಗಳು “ಥಲಾ” ಎಂದು ಕೂಗಿ ಅವರನ್ನು ಸ್ವಾಗತಿಸಿದ ಕ್ಷಣಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಕ್ರಿಕೆಟ್ ಮೈದಾನದಿಂದ ದೂರವಿದ್ದರೂ, ಧೋನಿ ಎಲ್ಲೆಡೆ ತಮ್ಮ ಸರಳತೆ ಮತ್ತು ವಿಭಿನ್ನ ಹವ್ಯಾಸಗಳಿಂದ ಅಭಿಮಾನಿಗಳ ಮನಗೆಲ್ಲುತ್ತಲೇ ಇದ್ದಾರೆ. ಈ ಕಾರ್ಯಕ್ರಮವೂ ಅವರ ಬೈಕ್ ಮೇಲಿನ ಅಪಾರ ಪ್ರೀತಿಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

Continue Reading

ಕ್ರೀಡೆ

Vinesh Phogat ‘ಇಡೀ ವ್ಯವಸ್ಥೆಯೇ ಅವರನ್ನು ರಕ್ಷಿಸಿತು’! Brij Bhushan Sharan Singh ತೀರ್ಪಿಗೆ ವಿನೇಶ್ ಫೋಗಟ್ ಪ್ರತಿಕ್ರಿಯೆ

Published

on

ನವದೆಹಲಿ: ಮಾಜಿ ಭಾರತೀಯ ಕುಸ್ತಿ ಫೆಡರೇಶನ್ (WFI) ಅಧ್ಯಕ್ಷ Brij Bhushan Sharan Singh ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯ ಖುಲಾಸೆ ನೀಡಿದ ಬೆನ್ನಲ್ಲೇ ಒಲಿಂಪಿಯನ್ Vinesh Phogat ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಹಿಳಾ ಕುಸ್ತಿಪಟುಗಳು ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲಿದ್ದು, ತಮ್ಮ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಅವರು ಘೋಷಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ ವಿನೇಶ್ ಫೋಗಟ್, “ಪ್ರಭಾವಿ ರಾಜಕಾರಣಿಯ ವಿರುದ್ಧ ಎಫ್‌ಐಆರ್ ದಾಖಲಿಸಲು ನಾವು ಅಪಾರ ಧೈರ್ಯ ತೋರಿದ್ದೇವೆ. ಆದರೆ ಆರಂಭದಿಂದಲೇ ಸಂಪೂರ್ಣ ವ್ಯವಸ್ಥೆಯೇ ಬೃಜ್ ಭೂಷಣ್ ಅವರನ್ನು ರಕ್ಷಿಸಲು ಕೆಲಸ ಮಾಡಿತು” ಎಂದು ಆರೋಪಿಸಿದ್ದಾರೆ.

ಅವರು ಮುಂದುವರಿದು, ರಾಜಕೀಯ ಪ್ರಭಾವ ಮತ್ತು ಅಧಿಕಾರವನ್ನು ಬಳಸಿಕೊಂಡು ಹಲವಾರು ಮಹಿಳೆಯರ ಮೇಲೆ ಒತ್ತಡ ಹೇರಲಾಗಿದ್ದು, ಕೆಲವರು ತಮ್ಮ ದೂರುಗಳನ್ನು ಹಿಂಪಡೆಯುವಂತಾಯಿತು. ಆದರೂ ಕೆಲವು ಮಹಿಳಾ ಕುಸ್ತಿಪಟುಗಳು ನ್ಯಾಯಕ್ಕಾಗಿ ಹೋರಾಟ ಮುಂದುವರಿಸಿದವು ಎಂದು ಹೇಳಿದ್ದಾರೆ.

“ನ್ಯಾಯಾಲಯದ ತೀರ್ಪಿನಿಂದ ನಾವು ನಿರಾಶರಾಗಿದ್ದೇವೆ. ಆದರೆ ನಮ್ಮ ವಿಶ್ವಾಸ ಕುಸಿದಿಲ್ಲ. ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ವಕೀಲರಿಗೆ ಈಗಾಗಲೇ ಸೂಚನೆ ನೀಡಿದ್ದೇವೆ. ಶೀಘ್ರದಲ್ಲೇ ಉನ್ನತ ನ್ಯಾಯಾಲಯದ ಮೊರೆ ಹೋಗುತ್ತೇವೆ” ಎಂದು ವಿನೇಶ್ ಸ್ಪಷ್ಟಪಡಿಸಿದ್ದಾರೆ.

2023ರಲ್ಲಿ ಆರಂಭವಾದ ಈ ಪ್ರಕರಣ ದೇಶದ ಕ್ರೀಡಾ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಹಾಗೂ ಬಜರಂಗ್ ಪೂನಿಯಾ ಸೇರಿದಂತೆ ಹಲವು ಪ್ರಮುಖ ಕುಸ್ತಿಪಟುಗಳು ಬೃಜ್ ಭೂಷಣ್ ಬಂಧನ ಮತ್ತು ಡಬ್ಲ್ಯುಎಫ್‌ಐ ಅಧ್ಯಕ್ಷ ಸ್ಥಾನದಿಂದ ಅವರನ್ನು ತೆರವುಗೊಳಿಸುವಂತೆ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಿದ್ದರು.

ಇತ್ತೀಚೆಗೆ ವಿನೇಶ್ ಫೋಗಟ್ ತಾವು ಈ ಪ್ರಕರಣದ ಆರು ದೂರುದಾರರಲ್ಲಿ ಒಬ್ಬರು ಎಂಬುದನ್ನು ಬಹಿರಂಗಪಡಿಸಿದ್ದರು. ವಿಚಾರಣೆ ನಡೆಯುತ್ತಿದ್ದ ಕಾರಣ ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ತಮ್ಮ ಗುರುತನ್ನು ಬಹಿರಂಗಪಡಿಸಿರಲಿಲ್ಲ ಎಂದು ಅವರು ತಿಳಿಸಿದ್ದರು.

ಇನ್ನೊಂದೆಡೆ, ನ್ಯಾಯಾಲಯದ ತೀರ್ಪಿನ ಬಳಿಕ ಪ್ರತಿಕ್ರಿಯಿಸಿದ ಬೃಜ್ ಭೂಷಣ್ ಶರಣ್ ಸಿಂಗ್, “ಮೊದಲ ದಿನದಿಂದಲೇ ನಾನು ನಿರ್ದೋಷಿ ಎಂದು ಹೇಳುತ್ತಿದ್ದೆ. ಆರೋಪಗಳು ಸತ್ಯವಾಗಿದ್ದರೆ ನೇಣು ಹಾಕಿಕೊಳ್ಳುತ್ತೇನೆ ಎಂದಿದ್ದೆ. ಇಂದು ನ್ಯಾಯಾಲಯ ನನ್ನನ್ನು ಖುಲಾಸೆ ಮಾಡಿರುವುದು ನನಗೂ ನನ್ನ ಬೆಂಬಲಿಗರಿಗೂ ಸಂತಸದ ಸುದ್ದಿ” ಎಂದು ಹೇಳಿದ್ದಾರೆ.

ಈ ನಡುವೆ, ವಿನೇಶ್ ಫೋಗಟ್ ಅವರ ಹೇಳಿಕೆಯನ್ನು ಕುಸ್ತಿಪಟು ಬಜರಂಗ್ ಪೂನಿಯಾ ಕೂಡ ಸಾಮಾಜಿಕ ಜಾಲತಾಣದಲ್ಲಿ ಮರುಹಂಚಿಕೊಂಡಿದ್ದು, ತೀರ್ಪಿನ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಈ ಪ್ರಕರಣ ಈಗ ಉನ್ನತ ನ್ಯಾಯಾಲಯದ ಮೆಟ್ಟಿಲೇರಲಿದ್ದು, ಭಾರತೀಯ ಕ್ರೀಡಾ ಕ್ಷೇತ್ರದ ಬಹುಚರ್ಚಿತ ಕಾನೂನು ಹೋರಾಟ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

Continue Reading

ಕ್ರೀಡೆ

Team India ಗೆ ದೊಡ್ಡ ಹಿನ್ನಡೆ! ಬುಮ್ರಾ ಆಡಲ್ಲ, ಮೊದಲ ಬಾರಿಗೆ ರಾಷ್ಟ್ರೀಯ ತಂಡಕ್ಕೆ ಕಾಶ್ಮೀರದ ವೇಗಿ

Published

on

ನವದೆಹಲಿ: Team India ತಂಡಕ್ಕೆ ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಮುನ್ನ ದೊಡ್ಡ ಹಿನ್ನಡೆಯಾಗಿದೆ. ತಂಡದ ಪ್ರಮುಖ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ (Jasprit Bumrah) ಗಾಯದ ಸಮಸ್ಯೆಯಿಂದ ಸಂಪೂರ್ಣ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಸೋಮವಾರ ಅಧಿಕೃತವಾಗಿ ಪ್ರಕಟಿಸಿದೆ.

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ವೇಳೆ ಎಡ ಮೊಣಕಾಲಿಗೆ ಗಾಯಗೊಂಡಿದ್ದ ಬುಮ್ರಾ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ವೈದ್ಯಕೀಯ ಪರೀಕ್ಷೆಯಲ್ಲಿ ಮೊಣಕಾಲಿನ ಊತ ನಿರೀಕ್ಷೆಗಿಂತ ಗಂಭೀರವಾಗಿದೆ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ, ಮುಂಬರುವ ಅಂತರರಾಷ್ಟ್ರೀಯ ಸರಣಿಗಳನ್ನು ಗಮನದಲ್ಲಿಟ್ಟುಕೊಂಡು ಅವರನ್ನು ವಿಶ್ರಾಂತಿಗೆ ಕಳುಹಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ಬುಮ್ರಾ ಸ್ಥಾನಕ್ಕೆ ಜಮ್ಮು-ಕಾಶ್ಮೀರದ ಪ್ರತಿಭಾವಂತ ವೇಗದ ಬೌಲರ್ ಔಕಿಬ್ ನಬಿ (Auqib Nabi) ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಇದು 29 ವರ್ಷದ ನಬಿ ಅವರ ಚೊಚ್ಚಲ ಹಿರಿಯ ರಾಷ್ಟ್ರೀಯ ತಂಡದ ಕರೆಯಾಗಿದೆ. ಈ ಬಗ್ಗೆ ಪ್ರಕಟಣೆ ನೀಡಿರುವ ಬಿಸಿಸಿಐ, ಪುರುಷರ ಆಯ್ಕೆ ಸಮಿತಿಯು ಬುಮ್ರಾ ಬದಲಿಗೆ ನಬಿಯನ್ನು ತಂಡಕ್ಕೆ ಸೇರಿಸಿದೆ ಎಂದು ತಿಳಿಸಿದೆ.

ಬಾರಾಮುಲ್ಲಾ ಜಿಲ್ಲೆಯ ಗ್ರಾಮೀಣ ಪ್ರದೇಶದ ನಿವಾಸಿಯಾಗಿರುವ ಔಕಿಬ್ ನಬಿ, ಭಾರತ ಹಿರಿಯ ತಂಡಕ್ಕೆ ಆಯ್ಕೆಯಾದ ಜಮ್ಮು-ಕಾಶ್ಮೀರದ ಮೂರನೇ ಆಟಗಾರರಾಗಿದ್ದಾರೆ. ಇದಕ್ಕೂ ಮೊದಲು ಪರ್ವೇಜ್ ರಸೂಲ್ ಹಾಗೂ ಉಮ್ರಾನ್ ಮಲಿಕ್ ಭಾರತವನ್ನು ಪ್ರತಿನಿಧಿಸಿದ್ದರು.

ದೇಶೀಯ ಕ್ರಿಕೆಟ್‌ನಲ್ಲಿ ನಬಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಕಳೆದ ಎರಡು ರಣಜಿ ಟ್ರೋಫಿ ಋತುಗಳಲ್ಲಿ ಒಟ್ಟು 104 ವಿಕೆಟ್‌ಗಳನ್ನು ಕಬಳಿಸಿದ್ದು, 2025-26ರ ಋತುವಿನಲ್ಲಿ ಮಾತ್ರ 60 ವಿಕೆಟ್ ಪಡೆದು ಜಮ್ಮು-ಕಾಶ್ಮೀರ ತಂಡ ತನ್ನ ಚೊಚ್ಚಲ ರಣಜಿ ಟ್ರೋಫಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ವೇಗದ ಬೌಲಿಂಗ್ ಜೊತೆಗೆ ಉಪಯುಕ್ತ ಬ್ಯಾಟಿಂಗ್ ಕೂಡ ಮಾಡುವ ಸಾಮರ್ಥ್ಯ ಹೊಂದಿರುವ ಅವರು, ಆಯ್ಕೆದಾರರ ಗಮನ ಸೆಳೆದಿದ್ದರು.

ಇತ್ತೀಚೆಗೆ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಭಾರತ ‘ಎ’ ತಂಡದಲ್ಲೂ ನಬಿ ಸ್ಥಾನ ಪಡೆದಿದ್ದರು. ಅಲ್ಲಿ ನಡೆದ ಎರಡು ಪ್ರಥಮ ದರ್ಜೆ ಪಂದ್ಯಗಳಲ್ಲಿ ಆರು ವಿಕೆಟ್‌ಗಳನ್ನು ಕಬಳಿಸಿ ಉತ್ತಮ ಪ್ರದರ್ಶನ ನೀಡಿದ್ದರು. ಇದೇ ಪ್ರದರ್ಶನ ಅವರಿಗೆ ರಾಷ್ಟ್ರೀಯ ತಂಡದ ಬಾಗಿಲು ತೆರೆದಿದೆ.

ಇನ್ನು ಬ್ಯಾಟರ್ ಬಿ. ಸಾಯಿ ಸುದರ್ಶನ್ ಅವರ ಫಿಟ್ನೆಸ್‌ ಕೂಡ ಇನ್ನೂ ಸಂಪೂರ್ಣವಾಗಿ ದೃಢಪಟ್ಟಿಲ್ಲ. ಕಾಲಿನ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಅವರು ವೈದ್ಯಕೀಯ ಅನುಮತಿ ಪಡೆದ ನಂತರವೇ ಸರಣಿಯಲ್ಲಿ ಆಡಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಆಗಸ್ಟ್ 15ರಿಂದ ಗಾಲೆನಲ್ಲಿ ಆರಂಭವಾಗಲಿದೆ. ನಾಯಕ ಶುಭಮನ್ ಗಿಲ್ ನೇತೃತ್ವದ ಭಾರತ ತಂಡದಲ್ಲಿ ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್ ಸೇರಿದಂತೆ ಪ್ರಮುಖ ಆಟಗಾರರು ಸ್ಥಾನ ಪಡೆದಿದ್ದಾರೆ. ಬುಮ್ರಾ ಅನುಪಸ್ಥಿತಿಯಲ್ಲಿ ಭಾರತದ ವೇಗದ ದಾಳಿಯ ಹೊಣೆಗಾರಿಕೆ ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ಅವರ ಮೇಲಿದೆ.

Continue Reading

Trending