ಕ್ರೀಡೆ
₹27 ಕೋಟಿ ಬೆಲೆಯ ಸ್ಟಾರ್ ಪ್ಲೇಯರ್ ಫ್ಲಾಪ್: ₹3 ಕೋಟಿಯ ಆಟಗಾರ ಸೂಪರ್ ಹಿಟ್ – IPL 2025
IPL 2025, LSG vs DC: 18ನೇ ಆವೃತ್ತಿಯ ಐಪಿಎಲ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದು ಬೀಗಿದೆ. ಸೋಮವಾರ ನಡೆದ ರೋಚಕ ಪಂದ್ಯದಲ್ಲಿ ಡೆಲ್ಲಿ ಪರ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದ ಅಶುತೋಷ್ ಶರ್ಮಾ, ತಮ್ಮ ಸ್ಪೋಟಕ ಇನ್ನಿಂಗ್ಸ್ ಮೂಲಕ ಲಕ್ನೋ ಕೈಯಿಂದ ಗೆಲುವು ಕಸಿದರು. ಇದರೊಂದಿಗೆ ಡೆಲ್ಲಿ 1 ವಿಕೆಟ್ನಿಂದ ಪಂದ್ಯ ಗೆದ್ದು ಕಪ್ ಬೇಟೆ ಪ್ರಾರಂಭಿಸಿದೆ.
“ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ನಾಯಕ ರಿಷಭ್ ಪಂತ್ ಮಾಡಿದ ಎಡವಟ್ಟುಗಳಿಂದಾಗಿ ಡೆಲ್ಲಿ ಗೆಲುವು ಸಾಧಿಸಿತು. ಒಂದು ರೀತಿಯಲ್ಲಿ ಡೆಲ್ಲಿ ಗೆಲುವಿಗೆ ಪ್ರಮುಖ ಕಾರಣವೇ ಪಂತ್ ಎಂದರೆ ತಪ್ಪಾಗಲ್ಲ” ಎಂದು ಅಭಿಮಾನಿಗಳು ಆನ್ಲೈನ್ ವೇದಿಕೆಗಳ ಮೂಲಕ ಟೀಕಿಸುತ್ತಿದ್ದಾರೆ.
ಐಪಿಎಲ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡ ರಿಷಭ್ ಪಂತ್ ಮೊದಲ ಪಂದ್ಯದಲ್ಲೇ ಭಾರಿ ನಿರಾಶೆ ಮೂಡಿಸಿದ್ದಾರೆ. ಬ್ಯಾಟಿಂಗ್ ಮತ್ತು ಕೀಪಿಂಗ್ ಎರಡರಲ್ಲೂ ಅವರು ವಿಫಲರಾದರು. ಲಕ್ನೋ ಪರ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗಿಳಿದ ಪಂತ್ ಆರು ಎಸೆತಗಳನ್ನೆದುರಿಸಿ ಕುಲದೀಪ್ ಯಾದವ್ ಬೌಲಿಂಗ್ನಲ್ಲಿ ಡು ಪ್ಲೆಸಿಸ್ಗೆ ಕ್ಯಾಚಿತ್ತು ಶೂನ್ಯಕ್ಕೆ ಪೆವಿಲಿಯನ್ ಸೇರಿದರು.
ಕೀಪಿಂಗ್ನಲ್ಲೂ ಫ್ಲಾಪ್: ಡೆಲ್ಲಿ ಗೆಲುವಿಗೆ ಅಂತಿಮ ಓವರ್ನಲ್ಲಿ 6 ರನ್ ಬೇಕಿತ್ತು. ಮತ್ತೊಂದೆಡೆ ಲಕ್ನೋ ಗೆಲುವಿಗೆ 1 ವಿಕೆಟ್ ಬೇಕಿತ್ತು. ಈ ವೇಳೆ ಬೌಲರ್ ಮೋಹಿತ್ ಶರ್ಮಾ ಬ್ಯಾಟಿಂಗ್ಗೆ ಆಗಮಿಸಿದ್ದರು. ಶಹಬಾಜ್ ಅಹ್ಮದ್ ಎಸೆದ ಮೊದಲ ಎಸೆತದಲ್ಲಿ ರನ್ ಕಸಿಯಲು ಮುಂದಾದ ಮೋಹಿತ್ ಕ್ರೀಸ್ ಬಿಟ್ಟು ಹೊರಬಂದಿದ್ದರು. ಚೆಂಡು ಮಿಸ್ ಆಗಿ ಕೀಪರ್ ಕಡೆ ಸಾಗಿತ್ತು. ಆದರೆ ಚೆಂಡನ್ನು ಹಿಡಿಯುವಲ್ಲಿ ವಿಫಲರಾದ ಪಂತ್ ಔಟ್ ಮಾಡುವ ಸುವರ್ಣಾವಕಾಶವನ್ನು ಕೈಚೆಲ್ಲಿದರು. ಇದು ಡೆಲ್ಲಿ ಗೆಲುವಿಗೆ ಕಾರಣವಾಯಿತು.
ಇದರ ಬೆನ್ನಲ್ಲೇ ನೆಟ್ಟಿಗರು ಪಂತ್ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ. ಈ ಆಟಕ್ಕಾಗಿ ಪಂತ್ 27 ಕೋಟಿ ಪಡೆದರೇ ಎಂದು ಕಾಲೆಳೆದಿದ್ದಾರೆ. ಕಳೆದ ವರ್ಷ ನಡೆದ ಮೆಗಾ ಹರಾಜಿನಲ್ಲಿ ಲಕ್ನೋ ತಂಡ ಪಂತ್ರನ್ನು 27 ಕೋಟಿ ರೂಪಾಯಿಗೆ ಖರೀದಿಸಿದೆ. ಆದರೆ ಮೊದಲ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿರುವ ಪಂತ್, ಮುಂದಿನ ಪಂದ್ಯದಲ್ಲಿ ಅಬ್ಬರಿಸುತ್ತಾರಾ? ಎಂಬುದನ್ನು ಕಾದು ನೋಡಬೇಕಿದೆ.
ಅಶುತೋಷ್ ಶರ್ಮಾ ಸೂಪರ್ ಹಿಟ್: ಈ ಪಂದ್ಯದಲ್ಲಿ ₹3 ಕೋಟಿ ಬೆಲೆಯ ಅಶುತೋಷ್ ಶರ್ಮಾ ಡೆಲ್ಲಿ ಪರ ಅದ್ಭುತ ಪ್ರದರ್ಶನ ನೀಡಿದರು. 31 ಎಸೆತಗಳಲ್ಲಿ 5 ಬೌಂಡರಿ ಮತ್ತು 5 ಸಿಕ್ಸರ್ ಸಹಾಯದಿಂದ ಅಜೇಯ 66 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಕ್ರೀಡೆ
ಕೃಣಾಲ್ ಪಾಂಡ್ಯ ಬೌಲಿಂಗ್ಗೆ ಕಾವ್ಯ ಮಾರನ್ ಆಕ್ಷೇಪ? ವೈರಲ್ ಆಯ್ತು SRH ಮಾಲಕಿಯ ರಿಯಾಕ್ಷನ್
ಹೈದರಾಬಾದ್: Indian Premier League 2026ನಲ್ಲಿ ಶುಕ್ರವಾರ ನಡೆದ Sunrisers Hyderabad ಹಾಗೂ Royal Challengers Bengaluru ನಡುವಿನ ಹೈವೋಲ್ಟೇಜ್ ಪಂದ್ಯ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ಆರ್ಸಿಬಿ ಸ್ಪಿನ್ನರ್ Krunal Pandya ಎಸೆದ ಬೌನ್ಸರ್ಗಳಿಗೆ ಸನ್ರೈಸರ್ಸ್ ತಂಡದ ಸಿಇಒ ಹಾಗೂ ಮಾಲಕಿ Kavya Maran ಆಕ್ಷೇಪ ವ್ಯಕ್ತಪಡಿಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕೃಣಾಲ್ ಪಾಂಡ್ಯ ಸತತವಾಗಿ ವೇಗದ ಬೌನ್ಸರ್ಗಳನ್ನು ಎಸೆದರು. ಸ್ಪಿನ್ನರ್ ಆಗಿದ್ದರೂ ಗಂಟೆಗೆ 120-130 ಕಿ.ಮೀ ವೇಗದಲ್ಲಿ ಚೆಂಡು ಎಸೆಯುತ್ತಿರುವುದರ ಬಗ್ಗೆ ಈಗಾಗಲೇ ಹಲವು ಮಾಜಿ ಕ್ರಿಕೆಟಿಗರು ಪ್ರಶ್ನೆ ಎತ್ತಿದ್ದರು. Ravichandran Ashwin ಸೇರಿ ಕೆಲ ದಿಗ್ಗಜರು ಅವರ ಬೌಲಿಂಗ್ ಶೈಲಿಯನ್ನು ಪರಿಶೀಲಿಸಬೇಕೆಂದು ಅಭಿಪ್ರಾಯಪಟ್ಟಿದ್ದರು.
ಪಂದ್ಯದ ವೇಳೆ ಕೃಣಾಲ್ ಎಸೆದ ಬೌನ್ಸರ್ ಕಂಡು ಗ್ಯಾಲರಿಯಲ್ಲಿ ಕುಳಿತಿದ್ದ ಕಾವ್ಯ ಮಾರನ್ ಅಸಮಾಧಾನ ವ್ಯಕ್ತಪಡಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. “ಅವರು ಸರಿಯಾಗಿ ಬೌಲಿಂಗ್ ಮಾಡುತ್ತಿಲ್ಲ, ಚೆಂಡನ್ನು ಎಸೆಯುತ್ತಿದ್ದಾರೆ” ಎಂಬ ಅರ್ಥ ಬರುವ ರೀತಿಯಲ್ಲಿ ಸಹ ಸಿಬ್ಬಂದಿಗಳೊಂದಿಗೆ ಮಾತನಾಡುತ್ತಿರುವ ವಿಡಿಯೊ ಈಗ ಭಾರೀ ವೈರಲ್ ಆಗಿದೆ. ಕೆಲ ಅಭಿಮಾನಿಗಳು ಕಾವ್ಯ ಅವರಿಗೆ ಬೆಂಬಲ ಸೂಚಿಸಿದರೆ, ಇನ್ನೂ ಕೆಲವರು ಇದು ಕ್ರಿಕೆಟ್ನ ಭಾಗವೇ ಎಂದು ಪ್ರತಿಕ್ರಿಯಿಸಿದ್ದಾರೆ.
ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ 55 ರನ್ಗಳ ಭರ್ಜರಿ ಗೆಲುವು ಸಾಧಿಸಿತು. Abhishek Sharma (56), Ishan Kishan (79) ಮತ್ತು Heinrich Klaasen (51) ಅರ್ಧಶತಕದ ನೆರವಿನಿಂದ ಎಸ್ಆರ್ಎಚ್ 255 ರನ್ಗಳ ಬೃಹತ್ ಮೊತ್ತ ಪೇರಿಸಿತು.
ಗುರಿ ಬೆನ್ನಟ್ಟಿದ ಆರ್ಸಿಬಿಗೆ Venkatesh Iyer ವೇಗದ ಆರಂಭ ನೀಡಿದರೂ, Virat Kohli ಮತ್ತು Devdutt Padikkal ಬೇಗ ಔಟಾದರು. ನಾಯಕ Rajat Patidar ಹಾಗೂ ಕೃಣಾಲ್ ಪಾಂಡ್ಯ ಹೋರಾಟ ನಡೆಸಿದರೂ ತಂಡ 200 ರನ್ಗಳಿಗೆ ಸೀಮಿತವಾಯಿತು.
ಕ್ರೀಡೆ
ಮೈದಾನದಲ್ಲಿ ಕೋಪ ಸಿಡಿಸಿದ ವಿರಾಟ್ ಕೊಹ್ಲಿ: ವಿಡಿಯೊಗೆ ಭಾರೀ ಚರ್ಚೆ
ಹೈದರಾಬಾದ್: Virat Kohli ಅವರ ಕ್ರೀಡಾಸ್ಫೂರ್ತಿಗೆ ಸಂಬಂಧಿಸಿದ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. Indian Premier League 2026ನಲ್ಲಿ ಶುಕ್ರವಾರ ನಡೆದ Sunrisers Hyderabad ಮತ್ತು Royal Challengers Bengaluru ನಡುವಿನ ಪಂದ್ಯದಲ್ಲಿ ಕೊಹ್ಲಿ, ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ Travis Head ಅವರಿಗೆ ಹ್ಯಾಂಡ್ಶೇಕ್ ನಿರಾಕರಿಸಿದ ಘಟನೆ ವೈರಲ್ ಆಗಿದೆ.
ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟ್ರಾವಿಸ್ ಹೆಡ್ 26 ರನ್ ಗಳಿಸಿ ರಾಸಿಖ್ ಸಲಾಮ್ ದಾರ್ ಎಸೆತಕ್ಕೆ ಕ್ಲೀನ್ ಬೌಲ್ಡ್ ಆದರು. ಈ ವೇಳೆ ಮೈದಾನದಲ್ಲಿದ್ದ ಕೊಹ್ಲಿ ಅತ್ಯಂತ ಆಕ್ರಮಣಕಾರಿ ರೀತಿಯಲ್ಲಿ ಸಂಭ್ರಮಾಚರಣೆ ನಡೆಸಿದ್ದರು. ವರದಿಗಳ ಪ್ರಕಾರ, ವಿಕೆಟ್ ಪತನದ ಬಳಿಕ ಹೆಡ್ ಕೂಡ ಕೊಹ್ಲಿಯನ್ನು ಕೆಣಕಿದರೆಂದು ಹೇಳಲಾಗಿದ್ದು, ಇದರಿಂದ ಕೊಹ್ಲಿ ಅಸಮಾಧಾನಗೊಂಡಿದ್ದರು.
ಪಂದ್ಯ ಮುಗಿದ ಬಳಿಕ ಆಟಗಾರರು ಪರಸ್ಪರ ಹಸ್ತಲಾಘವ ಮಾಡುತ್ತಿದ್ದ ವೇಳೆ ಕೊಹ್ಲಿ, Pat Cummins, Abhishek Sharma ಹಾಗೂ Ishan Kishan ಜೊತೆ ಹೃತ್ಪೂರ್ವಕವಾಗಿ ಮಾತನಾಡಿದರೂ, ಟ್ರಾವಿಸ್ ಹೆಡ್ ಅವರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಿದಾಡುತ್ತಿದೆ. ಇದಕ್ಕೆ ಕೆಲ ಅಭಿಮಾನಿಗಳು ಕೊಹ್ಲಿ ವಿರುದ್ಧ ಟೀಕೆ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಇದು ಪಂದ್ಯದಲ್ಲಿನ ತೀವ್ರ ಸ್ಪರ್ಧಾತ್ಮಕ ಮನೋಭಾವದ ಪರಿಣಾಮ ಎಂದು ಸಮರ್ಥಿಸಿಕೊಂಡಿದ್ದಾರೆ.
ಇನ್ನೊಂದೆಡೆ ಪಂದ್ಯದಲ್ಲಿ 55 ರನ್ಗಳಿಂದ ಸೋತಿದ್ದರೂ ಆರ್ಸಿಬಿ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡು ಕ್ವಾಲಿಫೈಯರ್-1ಕ್ಕೆ ಪ್ರವೇಶಿಸಿದೆ. ಮೇ 26ರಂದು ಧರ್ಮಶಾಲಾದಲ್ಲಿ Gujarat Titans ವಿರುದ್ಧ ಆರ್ಸಿಬಿ ಸೆಣಸಾಡಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್ ಪ್ರವೇಶಿಸಲಿದೆ.
ಕ್ರೀಡೆ
ಹಾಂಗ್ ಕಾಂಗ್ನಲ್ಲಿ ನಡೆಯುವ ಏಷ್ಯನ್ ಚಾಂಪಿಯನ್ಶಿಪ್ಗೆ ಕರ್ನಾಟಕದ ಇಬ್ಬರು ಆಯ್ಕೆ
ಬೆಂಗಳೂರು: ಕರ್ನಾಟಕ ಜಿಮ್ನಾಸ್ಟಿಕ್ಸ್ ಅಸೋಸಿಯೇಷನ್ಗೆ ಹೆಮ್ಮೆಯ ಕ್ಷಣ ಒದಗಿದ್ದು, ರಾಜ್ಯದ ಇಬ್ಬರು ಜಿಮ್ನಾಸ್ಟ್ಗಳು ಮತ್ತು ಇಬ್ಬರು ಕೋಚ್ಗಳು ಭಾರತ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ. ಹಾಂಗ್ ಕಾಂಗ್ನಲ್ಲಿ ಮೇ 23 ಮತ್ತು 24ರಂದು ನಡೆಯಲಿರುವ 2ನೇ ಏಷ್ಯನ್ ಏಜ್ ಗ್ರೂಪ್ ಸ್ಪರ್ಧೆ ಹಾಗೂ 7ನೇ ಸೀನಿಯರ್ ಏಷ್ಯನ್ ಟ್ರಾಂಪೋಲಿನ್ ಜಿಮ್ನಾಸ್ಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಅವರು ಭಾರತ ಪರ ಕಣಕ್ಕಿಳಿಯಲಿದ್ದಾರೆ.
Aavni Amit ಮಹಿಳಾ AG1 ವಿಭಾಗದಲ್ಲಿ ಮತ್ತು Satvik Gupta ಪುರುಷರ AG3 ವಿಭಾಗದಲ್ಲಿ ಭಾರತ ತಂಡದ ಪರವಾಗಿ ಸ್ಪರ್ಧಿಸಲಿದ್ದಾರೆ. ಜೊತೆಗೆ ಕರ್ನಾಟಕದ ಕೋಚ್ಗಳಾದ Jitesh Chandran ಹಾಗೂ Basavaraj S. Tambur ಕೂಡ ಭಾರತೀಯ ತಂಡದೊಂದಿಗೆ ಹಾಂಗ್ ಕಾಂಗ್ಗೆ ತೆರಳಲಿದ್ದಾರೆ.
ಭಾರತೀಯ ತಂಡ ಮೇ 21ರಂದು ಹಾಂಗ್ ಕಾಂಗ್ಗೆ ಪ್ರಯಾಣ ಬೆಳೆಸಲಿದ್ದು, ಚಾಂಪಿಯನ್ಶಿಪ್ ಮುಗಿದ ಬಳಿಕ ಭಾರತಕ್ಕೆ ಮರಳಲಿದೆ. ಕರ್ನಾಟಕದ ಆಟಗಾರರು ಮತ್ತು ಕೋಚ್ಗಳ ಆಯ್ಕೆಗೆ ರಾಜ್ಯದ ಕ್ರೀಡಾ ವಲಯದಲ್ಲಿ ಸಂತಸ ವ್ಯಕ್ತವಾಗಿದೆ.
ಕರ್ನಾಟಕ ಜಿಮ್ನಾಸ್ಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷರು ಹಾಗೂ ಜಿಮ್ನಾಸ್ಟಿಕ್ಸ್ ಫೆಡರೇಷನ್ ಆಫ್ ಇಂಡಿಯಾದ ಉಪಾಧ್ಯಕ್ಷರಾದ Dr. C. Prabhakar ಆಯ್ಕೆಯಾದ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. “ಕರ್ನಾಟಕದ ಪ್ರತಿಭೆಗಳು ಏಷ್ಯನ್ ಮಟ್ಟದಲ್ಲಿ ದೇಶಕ್ಕೆ ಕೀರ್ತಿ ತಂದುಕೊಡಲಿದ್ದಾರೆ ಎಂಬ ವಿಶ್ವಾಸವಿದೆ” ಎಂದು ಅವರು ಶುಭ ಹಾರೈಸಿದರು.
ಈ ಆಯ್ಕೆ ಕರ್ನಾಟಕದ ಜಿಮ್ನಾಸ್ಟಿಕ್ಸ್ ಕ್ಷೇತ್ರಕ್ಕೆ ಹೊಸ ಉತ್ತೇಜನ ನೀಡಿದ್ದು, ರಾಜ್ಯದ ಯುವ ಕ್ರೀಡಾಪಟುಗಳಿಗೆ ಪ್ರೇರಣೆಯಾಗಿದೆ.
-
ದೇಶ22 hours agoCockroach Janata Party ಗೆ ಬೆಂಗಳೂರು ಪೊಲೀಸರ ಶಾಕ್! ಟೌನ್ ಹಾಲ್ ಕಾರ್ಯಕ್ರಮಕ್ಕೆ ಅನುಮತಿ ಇಲ್ಲ
-
ದೇಶ22 hours agoಮೋದಿ ಸರ್ಕಾರದ 2025 ರಿಪೋರ್ಟ್ ಕಾರ್ಡ್ ಬಿಡುಗಡೆ! ಯಾವ ಸಚಿವಾಲಯ ಟಾಪ್, ಯಾವುದು ಹಿಂದುಳಿತು?
-
ಕ್ರೀಡೆ22 hours agoಕೃಣಾಲ್ ಪಾಂಡ್ಯ ಬೌಲಿಂಗ್ಗೆ ಕಾವ್ಯ ಮಾರನ್ ಆಕ್ಷೇಪ? ವೈರಲ್ ಆಯ್ತು SRH ಮಾಲಕಿಯ ರಿಯಾಕ್ಷನ್
-
ದೇಶ23 hours agoಲಡಾಖ್ನಲ್ಲಿ ಸೇನಾ ಹೆಲಿಕಾಪ್ಟರ್ ಪತನ! ಕೂದಲೆಳೆ ಅಂತರದಲ್ಲಿ ಪಾರಾದ ಅಧಿಕಾರಿಗಳ ಸೆಲ್ಫಿ ವೈರಲ್
