Connect with us

ದೇಶ

G20 ಶೃಂಗಸಭೆ: ಎರಡು ದಿನಗಳ ಕಾರ್ಯಕ್ರಮಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

G20 ಶೃಂಗಸಭೆ: ಎರಡು ದಿನಗಳ ಕಾರ್ಯಕ್ರಮಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಸೆಪ್ಟೆಂಬರ್ 9ರ ಶನಿವಾರ ಪ್ರಾರಂಭವಾಗುವ ಎರಡು ದಿನಗಳ ಜಿ20 ಶೃಂಗಸಭೆಯನ್ನು ಆಯೋಜಿಸಲು ಭಾರತ ಸಜ್ಜಾಗಿದೆ. ಈವೆಂಟ್‌ನಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ವಿಶ್ವ ನಾಯಕರೊಂದಿಗೆ ಉತ್ಪಾದಕ ಚರ್ಚೆಗಳನ್ನು ನಡೆಸಲು ಪ್ರಧಾನಿ ನರೇಂದ್ರ ಮೋದಿ ಎದುರು ನೋಡುತ್ತಿದ್ದಾರೆ. G20 ಶೃಂಗಸಭೆ 2023-ಮೊದಲ ಬಾರಿಗೆ ಭಾರತವು ಅಂತಹ ಪ್ರಬಲ ವಿಶ್ವ ನಾಯಕರ ಗುಂಪಿಗೆ ಆತಿಥ್ಯ ವಹಿಸುತ್ತಿದೆ. ಅಮೆರಿಕಾ ಅಧ್ಯಕ್ಷ ಜೋ ಬೈಡೆನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಸೇರಿದಂತೆ ಅನೇಕ ವಿಶ್ವ ನಾಯಕರ ದೆಹಲಿಗೆ ಆಗಮಿಸಿದ್ದಾರೆ.

ಜಿ 20 ಚರ್ಚೆಗಳ ಜೊತೆಗೆ, ಸ್ನೇಹ ಮತ್ತು ಸಹಕಾರದ ಬಾಂಧವ್ಯವನ್ನು ಇನ್ನಷ್ಟು ಗಾಢಗೊಳಿಸಲು ಪ್ರಧಾನಿ ಮೋದಿ ಹಲವಾರು ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. 2023ರ G20 ಶೃಂಗಸಭೆಯ ವಿಷಯವು ಸಂಸ್ಕೃತ ನುಡಿಗಟ್ಟು ‘ವಸುಧೈವ ಕುಟುಂಬಕಮ್’ ನಿಂದ ಬಂದಿದೆ.

G20 ಶೃಂಗಸಭೆ ದಿನ 1: ಸೆಪ್ಟೆಂಬರ್ 9
ಸಮಯದ ಚಟುವಟಿಕೆ
* 09.30ರಿಂದ 10.30ರವರೆಗೆ ಭಾರತ ಮಂಟಪದ ಶೃಂಗಸಭೆಯ ಸ್ಥಳದಲ್ಲಿ ನಾಯಕರು ಮತ್ತು ನಿಯೋಗಗಳ ಮುಖ್ಯಸ್ಥರ ಆಗಮನ.  ಭಾರತ್ ಮಂಟಪದಲ್ಲಿ ಪ್ರಧಾನ ಮಂತ್ರಿ ಜೊತೆ ಸ್ವಾಗತ ಫೋಟೋಶೂಟ್.

* 10.30-1.30ರವರೆಗೆ ಸೆಷನ್ 1: ಶೃಂಗಸಭೆ ಸಭಾಂಗಣದಲ್ಲಿ ಒಂದು ಭೂಮಿ ಕುರಿತು ಸಮಾವೇಶ.

* 1.30-3.00ರವರೆಗೆ ಭಾರತ ಮಂಟಪದಲ್ಲಿ ದ್ವಿಪಕ್ಷೀಯ ಸಭೆಗಳು.

* 3.00-4.45ರವರೆಗೆ ಸೆಷನ್ II: ಶೃಂಗಸಭೆ ಸಭಾಂಗಣದಲ್ಲಿ ಭಾರತ ಮಂಟಪದ ಹಂತ 1ರಲ್ಲಿ ಒಂದು ಕುಟುಂಬ ಕುರಿತು ಸಮಾವೇಶ. ನಂತರ ಹೋಟೆಲ್‌ಗಳಿಗೆ ಅಥಿತಿಗಳ ನಿರ್ಗಮನ.

* 7.00-8.00ರವರೆಗೆ ಭೋಜನಕ್ಕೆ ವಿಶ್ವ ನಾಯಕರು ಮತ್ತು ನಿಯೋಗದ ಮುಖ್ಯಸ್ಥರ ಆಗಮನ. ಆಗಮನದ ಫೋಟೋ ಶೂಟ್

* 8.00-9.15 ಊಟದ ನಡುವೆ ಸಂಭಾಷಣೆ.

* 9.10-9.45ರವರೆಗೆ ನಾಯಕರು ಮತ್ತು ನಿಯೋಗದ ಮುಖ್ಯಸ್ಥರು ಲೀಡರ್ಸ್ ಲಾಂಜ್, ಭಾರತ ಮಂಟಪದ ಲೆವೆಲ್ 2 ನಲ್ಲಿ ಸೇರುತ್ತಾರೆ. ನಂತರ ದಕ್ಷಿಣ ಅಥವಾ ಪಶ್ಚಿಮ ಪ್ಲಾಜಾದಿಂದ ಹೋಟೆಲ್‌ಗಳಿಗೆ ನಿರ್ಗಮನ.

G20 ಶೃಂಗಸಭೆ ದಿನ 2: ಸೆಪ್ಟೆಂಬರ್ 10
ಸಮಯದ ಚಟುವಟಿಕೆ
* 8.15ರಿಂದ 9.00ರವರೆಗೆ ರಾಜ್‌ಘಾಟ್‌ಕ್ಕೆ ನಾಯಕರು ಮತ್ತು ನಿಯೋಗಗಳ ಮುಖ್ಯಸ್ಥರ ಆಗಮನ.
  ರಾಜ್‌ಘಾಟ್‌ನಲ್ಲಿರುವ ನಾಯಕರ ಲಾಂಜ್‌ನಲ್ಲಿ ಶಾಂತಿ ಗೋಡೆ ಮೇಲೆ ಸಹಿ ಹಾಕುತ್ತಾರೆ.

* 9.00-9.20ರ ನಡುವೆ ಮಹಾತ್ಮ ಗಾಂಧಿಯವರ ಸಮಾಧಿಗೆ ಪುಷ್ಪಾರ್ಚನೆ. ಮಹಾತ್ಮ ಗಾಂಧಿಯವರ ನೆಚ್ಚಿನ ಭಕ್ತಿಗೀತೆಗಳ  ಪ್ರದರ್ಶನ

*9.20ಕ್ಕೆ ನಾಯಕರು ಮತ್ತು ನಿಯೋಗಗಳ ಮುಖ್ಯಸ್ಥರು ನಾಯಕರ ಲೌಂಜ್‌ಗೆ ತೆರಳುತ್ತಾರೆ. ಅಲ್ಲಿಂದ ಪ್ರತ್ಯೇಕ ಮೋಟರ್‌ಕೇಡ್‌ಗಳಲ್ಲಿ ಭಾರತ ಮಂಟಪಕ್ಕೆ ನಿರ್ಗಮನ.

* 9.40-10.15ಕ್ಕೆ ಭಾರತ ಮಂಟಪಕ್ಕೆ ನಾಯಕರು ಮತ್ತು ನಿಯೋಗದ ಮುಖ್ಯಸ್ಥರ ಆಗಮನ.

* 10.15-10.28ರವರೆಗೆ ಸೌತ್ ಪ್ಲಾಜಾ, ಲೆವೆಲ್ 2, ಭಾರತ್ ಮಂಟಪದಲ್ಲಿ ಮರ ನೆಡುವ ಕಾರ್ಯಕ್ರಮ. 

* 10.30-12.30ರವರೆಗೆ ಸೆಷನ್ III: ಶೃಂಗಸಭೆ ಸಭಾಂಗಣದಲ್ಲಿ ಭಾರತ ಮಂಟಪ ಹಂತ 2ರಲ್ಲಿ ಒಂದು ಭವಿಷ್ಯ ಕುರಿತು ಸಮಾವೇಶ.

ದೇಶ

ಪಿಎಂ ಮೋದಿ ಆಗಸ್ಟ್ 10ರಂದು ಬೆಂಗಳೂರಿಗೆ: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಳದಿ ಮಾರ್ಗದ (Yellow Line) ಉದ್ಘಾಟನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Modi) ಆಗಸ್ಟ್ 10ರಂದು ಬೆಂಗಳೂರಿಗೆ ಬರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿಯವರು ಆಗಸ್ಟ್ 10ರಂದು ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಮಾಡುವ ಉದ್ದೇಶದಿಂದ ಬರುತ್ತಿದ್ದಾರೆ. ಅವರ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ. ಟೈಮ್ ಟು ಟೈಮ್ ಕಾರ್ಯಕ್ರಮಗಳ ಬಗ್ಗೆ ಇನ್ನೂ ವಿವರ ಬಾಕಿಯಿದೆ,” ಎಂದು ಹೇಳಿದರು.

ವೈಭವದಿಂದ ಕಾರ್ಯಕ್ರಮ?
ಆದರೆ, ಮೂಲ ಯೋಜನೆಗೆ ಬದಲಾವಣೆ ಆಗಿದೆ. ಈಗ ಪ್ರಧಾನಿಯವರು ಕೇವಲ ಹಳದಿ ಮಾರ್ಗದ ಮೆಟ್ರೋ ಮತ್ತು ವಂದೇ ಭಾರತ್ ರೈಲು ಉದ್ಘಾಟನೆಗೆ ಮಾತ್ರ ಭಾಗಿಯಾಗಲಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ರೋಡ್ ಶೋ ಕಾರ್ಯಾಚರಣೆಗಳು ರದ್ದುಪಡಿಸಲಾಗಿದೆ.

ಇದರ ಪರಿಣಾಮವಾಗಿ, ಒಂದು ವರ್ಷದಿಂದ ಮೋದಿಯವರ ಆಗಮನದ ನಿರೀಕ್ಷೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ನಿರಾಸೆಗೊಳಗಾಗಿದ್ದಾರೆ ಎಂದು ವರದಿಯಾಗಿದೆ.

Continue Reading

ದೇಶ

ಭಾರತ vs ಅಮೆರಿಕ: ರಷ್ಯಾದ ತೈಲದ ಬಗ್ಗೆ ಉದ್ವಿಗ್ನತೆ, ಸೇನೆಯಿಂದ ತಿರುಗೇಟು

ಬೆಂಗಳೂರು: ರಷ್ಯಾದಿಂದ ಕಚ್ಚಾ ತೈಲ ಖರೀದಿಯ ಕುರಿತು ಭಾರತ-ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತಾಗಿದೆ. ಭಾರತ ರಷ್ಯಾದಿಂದ ತೈಲ ಆಮದು ಮಾಡುತ್ತಿರುವುದಕ್ಕೆ ಅಮೆರಿಕ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಭಾರತೀಯ ಸೇನೆ ಅಮೆರಿಕದ ದ್ವೇಧಾಚರಣೆ ವಿರುದ್ಧ ತಿರುಗೇಟು ನೀಡಿದೆ.

ಸೋಷಿಯಲ್ ಮೀಡಿಯಾದಲ್ಲಿ “ಈ ದಿನ ಆ ವರ್ಷ – ಯುದ್ಧದ ನಿರ್ಮಾಣ – 05 ಆಗಸ್ಟ್ 1971” ಎಂಬ ಶೀರ್ಷಿಕೆಯಡಿ ಸೇನೆಯು 1971ರ ಯುದ್ಧದ ಕಾಲದ ಪತ್ರಿಕಾ ಕಟಿಂಗ್‌ ಹಂಚಿಕೊಂಡಿದೆ. 1954ರಿಂದ 1971ರವರೆಗೆ ಅಮೆರಿಕ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಪೂರೈಸಿದ ಬಗ್ಗೆ ಪೇಪರ್ ಕಟಿಂಗ್‌ ಉಲ್ಲೇಖಿಸುತ್ತಾ, “ಅಮೆರಿಕ ಪಾಕ್ ಪರ ಕೆಲಸ ಮಾಡಿತ್ತಲ್ಲವೆ?” ಎಂದು ಪ್ರಶ್ನಿಸಿದೆ.

ಇದು ಉಕ್ರೇನ್ ವಿರುದ್ಧದ ಯುದ್ಧಕ್ಕೆ ಭಾರತ ಹಣ ಒದಗಿಸುತ್ತಿದೆ ಎಂಬ ಅಮೆರಿಕದ ಆರೋಪಕ್ಕೆ ಪ್ರತಿಕ್ರಿಯೆಯಾಗಿದೆ. ಭಾರತವು ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದ ಟೀಕೆಗಳನ್ನು ‘ಅಸಮರ್ಥನೀಯ ಹಾಗೂ ಅಸಮಂಜಸ’ವೆಂದು ತಿರಸ್ಕರಿಸಿದೆ. ಭಾರತ ತನ್ನ ತೈಲ ನೀತಿಯನ್ನು ಆರ್ಥಿಕ ಶಕ್ತಿಯ ದೃಷ್ಟಿಯಿಂದ ಮುಂದುವರಿಸುತ್ತಿದೆ.

Continue Reading

ದೇಶ

ಸೇನೆ ಕುರಿತ ಹೇಳಿಕೆ: ಸುಪ್ರೀಂ ಕೋರ್ಟ್ ಟೀಕೆಗೆ ಪ್ರಿಯಾಂಕಾ ಗಾಂಧಿಯಿಂದ ಕಠಿಣ ಪ್ರತಿಕ್ರಿಯೆ

ನವದೆಹಲಿ: ಭಾರತೀಯ ಸೇನೆ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಇದೀಗ ಅವರ ಸಹೋದರಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

ರಾಹುಲ್ ಗಾಂಧಿಯ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ಟೀಕೆಗೆ ಪ್ರತಿಕ್ರಿಯಿಸಿ ಪ್ರಿಯಾಂಕಾ ಗಾಂಧಿ,

“ಯಾರು ನಿಜವಾದ ಭಾರತೀಯರು ಎಂಬುದನ್ನು ನಿರ್ಧರಿಸಲು ನ್ಯಾಯಾಧೀಶರು ಯೋಗ್ಯರಲ್ಲ. ರಾಹುಲ್ ಗಾಂಧಿಗೆ ಭಾರತೀಯ ಸೇನೆಯ ಬಗ್ಗೆ ಅಪಾರ ಗೌರವವಿದೆ. ಅವರು ಎಂದಿಗೂ ಸೇನೆಯ ವಿರುದ್ಧ ಕೆಟ್ಟ ಮಾತುಗಳನ್ನು ಮಾತನಾಡಲ್ಲ,” ಎಂದು ತಿಳಿಸಿದ್ದಾರೆ.

ಗಲ್ವಾನ್ ಕಣಿವೆ ಸಂಘರ್ಷ ಕುರಿತು ಮಾತನಾಡಿದ ವೇಳೆ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ‘ಅನುಚಿತ’ ಎಂದು ಖಂಡಿಸಿದ್ದು, “ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ” ಎಂದು ಹೇಳಿದ್ದಾರೆ. ಇದನ್ನು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದು, “ವಿರೋಧ ಪಕ್ಷದ ನಾಯಕರಾಗಿ ಸರ್ಕಾರವನ್ನು ಪ್ರಶ್ನಿಸುವುದು ರಾಹುಲ್ ಅವರ ಕರ್ತವ್ಯ. ನ್ಯಾಯಮೂರ್ತಿಗಳು ಇಂತಹ ಹೇಳಿಕೆ ನೀಡುವುದು ಸರಿಯಲ್ಲ,” ಎಂದಿದ್ದಾರೆ.

ಅದೇ ರೀತಿ, ಪ್ರಿಯಾಂಕಾ ಗಾಂಧಿ ಸರ್ಕಾರದ ನಡೆಗೆ ಶಂಕೆ ವ್ಯಕ್ತಪಡಿಸಿ,

“ರಾಹುಲ್ ಗಾಂಧಿಯ ಪ್ರಶ್ನೆಗಳಿಗೆ ಸರ್ಕಾರದ ಬಳಿ ಉತ್ತರಗಳಿಲ್ಲ. ಅವರು ಚರ್ಚೆಗೆ ತಯಾರಿಲ್ಲ. ಸಂಸತ್ತನ್ನು ಸರಿಯಾಗಿ ನಡೆಸಲಾಗುತ್ತಿಲ್ಲ. ಇದನ್ನೆಲ್ಲಾ ಮರೆಮಾಚಲು ಈ ರೀತಿಯ ತಂತ್ರಗಳನ್ನು ಬಳಸುತ್ತಿದ್ದಾರೆ,” ಎಂದು ವಾಗ್ದಾಳಿ ನಡೆಸಿದ್ದಾರೆ.

Continue Reading

Trending