ರಾಜಕೀಯ
ಜಾತಿಗಣತಿಗೆ 2ಎ ಮೀಸಲಾತಿ ಕೌಂಟರ್: ಸಿಎಂ ಸಿದ್ದು ವಿರುದ್ಧ ಮತ್ತೆ ಗುಡುಗಿದ ಹೆಚ್ಡಿಕೆ

- /home/u521927855/domains/hosasuddi.in/public_html/wp-content/plugins/mvp-social-buttons/mvp-social-buttons.php on line 27
https://hosasuddi.in/wp-content/uploads/2025/04/sidid-and-hdk.png&description=ಜಾತಿಗಣತಿಗೆ 2ಎ ಮೀಸಲಾತಿ ಕೌಂಟರ್: ಸಿಎಂ ಸಿದ್ದು ವಿರುದ್ಧ ಮತ್ತೆ ಗುಡುಗಿದ ಹೆಚ್ಡಿಕೆ', 'pinterestShare', 'width=750,height=350'); return false;" title="Pin This Post">
- Share
- Tweet /home/u521927855/domains/hosasuddi.in/public_html/wp-content/plugins/mvp-social-buttons/mvp-social-buttons.php on line 72
https://hosasuddi.in/wp-content/uploads/2025/04/sidid-and-hdk.png&description=ಜಾತಿಗಣತಿಗೆ 2ಎ ಮೀಸಲಾತಿ ಕೌಂಟರ್: ಸಿಎಂ ಸಿದ್ದು ವಿರುದ್ಧ ಮತ್ತೆ ಗುಡುಗಿದ ಹೆಚ್ಡಿಕೆ', 'pinterestShare', 'width=750,height=350'); return false;" title="Pin This Post">
ಬೆಂಗಳೂರು: ಜಾತಿ ಗಣತಿ ವರದಿಗೆ ರಾಜ್ಯದ ಉದ್ದಗಲಕ್ಕೂ ಆಕ್ರೋಶ ಭುಗಿಲೇಳುತ್ತಿರುವ ಬೆನ್ನಲ್ಲಿಯೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು 2A ಪ್ರವರ್ಗ ಸೌಲಭ್ಯ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಹಾಕಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅತೀ ಹಿಂದುಳಿದ 2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು? ಎಂದು ಪ್ರಶ್ನೆ ಮಾಡಿದ್ದಾರೆ.
ಜಾತಿ ಗಣತಿ ರಾಜಕೀಯ ಫಸಲಿಗೆ ಹೊಂಚು ಹಾಕಿರುವ ಸಿದ್ದರಾಮಯ್ಯನವರೇ.. ಸತ್ಯವನ್ನೇ ಹೇಳಿ ಎಂದು ಟಾಂಗ್ ಕೊಟ್ಟಿರುವ ಕೇಂದ್ರ ಸಚಿವರು; ಅತೀ ಹಿಂದುಳಿದ 2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು? ಕಿರುಬೆರಳ ತುದಿಯಲ್ಲೇ ದತ್ತಾಂಶವಿದೆ.
ನಿಮಗೂ ಗೊತ್ತು. 2A ಪ್ರವರ್ಗದಲ್ಲಿ 101 ಜಾತಿಗಳಿವೆ, 15% ಮೀಸಲು ಪಾಲು ಇದೆ. ಈ ಪಾಲಿನಲ್ಲಿ ಅತಿಹೆಚ್ಚು ಪಾಲು ನುಂಗಿದವರು ಯಾರು ದೇವ್ರು..? ಈ ನುಂಗುವಿಕೆಯಲ್ಲಿಯೂ ನಿಮ್ಮ ಪಾತ್ರವೇನು ಸ್ವಾಮೀ..? ಸತ್ಯ ಹೇಳಿ ಎಂದು ಕೇಂದ್ರ ಸಚಿವರು ಕೇಳಿದ್ದಾರೆ.
2A ಪ್ರವರ್ಗದ ನೂರೊಂದು ಸಮಾಜಗಳ ಪೈಕಿ ಎಲ್ಲಾ ನೂರು ಸಮಾಜಗಳಲ್ಲಿ ನನ್ನ ಮನವಿ ಇಷ್ಟೇ; ಒಕ್ಕಲಿಗರು, ವೀರಶೈವ ಲಿಂಗಾಯತರ ಕಡೆ ಬೆರಳು ತೋರಿಸಿ ನಿಮ್ಮ ಮೂಗಿಗೆ ಬೆಣ್ಣೆ ಕೊಸರು ಸವರುತ್ತಿದ್ದಾರೆ! ನಿಮ್ಮ ನ್ಯಾಯಯುತ ಪಾಲಿನಲ್ಲಿ ಸಿಂಹಪಾಲು ಕಬಳಿಸಿದ್ದು ಯಾರೆಂದು ನಿಮಗೂ ಚೆನ್ನಾಗಿ ಗೊತ್ತು? ಆದರೂ ಸುಮ್ಮನಿದ್ದೀರಿ! ಯಾಕೆ? ನಿಮ್ಮ ಎದುರು ನಿಂತು ಲಿಂಗಾಯಿತರು, ಒಕ್ಕಲಿಗರನ್ನು ಬೈದರೇ ನಿಮ್ಮ ಹೊಟ್ಟೆ ತುಂಬುವುದೇ? ನಿಮ್ಮ ಮಕ್ಕಳಿಗೆ ನ್ಯಾಯ ಸಿಗುವುದೇ? ಎಂದು ಅವರು ಖಾರವಾಗಿ ಪ್ರಶ್ನಿಸಿದ್ದಾರೆ.
ಅತೀ ಹಿಂದುಳಿದ 2A ಪ್ರವರ್ಗದಲ್ಲಿ ಅತೀ ಹೆಚ್ಚು ಪಾಲು ಬೆಣ್ಣೆ ತಿಂದವರು ಯಾರು? ಈಗಲಾದರೂ ಸತ್ಯ ಹೇಳಿ ಸಿದ್ದರಾಮಯ್ಯನವರೇ.. ನಿಮ್ಮಿಂದ ಉತ್ತರ ನಿರೀಕ್ಷಿಸುತ್ತೇನೆ. ಸತ್ಯಮೇವ ಜಯತೇ.. ಸತ್ಯಕ್ಕೆ ಜಯವಾಗಲಿ ಎಂದು ಅವರು ಹೇಳಿದ್ದಾರೆ.
ಬೆಂಗಳೂರು
ವೇತನ ವಿವಾದದಲ್ಲಿ ಸಿಎಂ ಸ್ಪಷ್ಟನೆ: 14 ತಿಂಗಳ ಹಿಂಬಾಕಿಗೆ ಮಾತ್ರ ಸರ್ಕಾರ ಸಿದ್ಧ

ಬೆಂಗಳೂರು: ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ಈ ಬೇಡಿಕೆ ಸಮಂಜಸವಲ್ಲ. ಸರ್ಕಾರ ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ” ಎಂದು ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ತಿಳಿಸಿದ್ದಾರೆ.
2020ರಿಂದ 2023ರ ಫೆಬ್ರವರಿವರೆಗಿನ ಬಾಕಿ ವೇತನ ಪಾವತಿಗೆ ನೌಕರ ಸಂಘಗಳು ಒತ್ತಾಯಿಸಿದ್ದರೊಂದಿಗೆ, 2024ರಿಂದ ನೂತನ ವೇತನವನ್ನೂ ಜಾರಿಗೆ ತರುವಂತೆ ಒತ್ತಾಯಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, “ನಿಗಮಗಳ ಆರ್ಥಿಕ ಪರಿಸ್ಥಿತಿ ಮತ್ತು ಹಿಂದಿನ ಸರ್ಕಾರದ ಆದೇಶಗಳ ದೋಷಗಳನ್ನು ಪರಿಗಣಿಸಿ 14 ತಿಂಗಳ ವೇತನ ಹಿಂಬಾಕಿಗೆ ಸಮ್ಮತಿಯಿದೆ,” ಎಂದು ಸ್ಪಷ್ಟಪಡಿಸಿದರು.
ವೇತನ ಪರಿಷ್ಕರಣೆ ಪಶ್ಚಾತ್ಪಟ
2016ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 12.5% ವೇತನ ಹೆಚ್ಚಳ ಜಾರಿಗೆ ಬಂದಿತ್ತು. ಆದರೆ 2020ರ ಕೋವಿಡ್ ಕಾರಣದಿಂದ ಆ ವೇಳೆಗೆ ಯಾವುದೇ ಪರಿಷ್ಕರಣೆ ಆಗಿರಲಿಲ್ಲ. ನಂತರದ ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀನಿವಾಸ ಮೂರ್ತಿ ಸಮಿತಿ ಶಿಫಾರಸ್ಸಿನಂತೆ 2022ರ ಜೂನ್ 01ರಿಂದ 2023ರ ಫೆಬ್ರವರಿವರೆಗೆ ಹಿಂಬಾಕಿ ಪಾವತಿ ಮಾಡಲು ತೀರ್ಮಾನಿಸಲಾಗಿತ್ತು.
ಸರ್ಕಾರದ ಆರ್ಥಿಕ ಹೊಣೆಗಾರಿಕೆ
ಸಿದ್ದರಾಮಯ್ಯ ಅವರು ಹೇಳಿದ್ದಾರೆ: “ನಾವು ಅಧಿಕಾರಕ್ಕೆ ಬಂದಾಗ ನಿಗಮಗಳಿಗೆ ಒಟ್ಟಾರೆ ₹4000 ಕೋಟಿ ಸಾಲ ಇತ್ತು. 2018 ರಲ್ಲಿ ಈ ಮೊತ್ತ ಕೇವಲ ₹14 ಕೋಟಿ ಮಾತ್ರ ಇತ್ತು. ಯಾವುದೇ ನಿಗಮ ಲಾಭದಲ್ಲಿ ಇಲ್ಲ.” ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
ಸಂಘದ ಚುನಾವಣೆ ಮತ್ತು ಮುಂದಿನ ಕ್ರಮ
ಸಾರಿಗೆ ನೌಕರರ ಸಂಘದ ಚುನಾವಣೆ ಹಾಗೂ ಬೇಡಿಕೆಗಳ ಕುರಿತಂತೆ ಸರ್ಕಾರ ಪರಿಶೀಲನೆ ನಡೆಸಲಿದ್ದು, ಮಾತುಕತೆ ಮೂಲಕ ಎಲ್ಲ ಅಹವಾಲುಗಳನ್ನು ಬಗೆಹರಿಸಲು ಸಿದ್ಧವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು
ಸಾರಿಗೆ ನೌಕರರ ಮುಷ್ಕರ ಆರಂಭ: ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ – “ಹಠವಿಲ್ಲದೆ ಸಹಕಾರ ನೀಡಿ”

ಬೆಂಗಳೂರು: ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ನೌಕರರು ಮುಷ್ಕರಕ್ಕೆ (Transport Employees Strike) ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಸಾರಿಗೆ ನೌಕರರು ಕೇಳಿರುವ ಬೇಡಿಕೆಯಲ್ಲಿ ತಪ್ಪಿಲ್ಲ. ಆದರೆ ಸರ್ಕಾರದ ಪರಿಸ್ಥಿತಿಯನ್ನೂ ಅವರು ಗಮನದಲ್ಲಿಟ್ಟುಕೊಳ್ಳಬೇಕು. ಹಠವಿಲ್ಲದೆ ಸಹಕಾರ ನೀಡಬೇಕು” ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಸಚಿವರು ನೌಕರರೊಂದಿಗೆ ಸಭೆ ನಡೆಸಿದ್ದಾರೆ ಎಂಬುದನ್ನು ಅವರು ನೆನಪಿಸಿದ್ದಾರೆ.
“ಸಾರ್ವಜನಿಕರ ಹಿತವೇ ಮೊದಲಾದ್ದು. ಕೆಲವು ನೌಕರರು ಈಗಾಗಲೇ ಕೆಲಸಕ್ಕೆ ಹಾಜರಾಗಿದ್ದಾರೆ. ಅವರಿಗೆ ಅಭಿನಂದನೆ” ಎಂದು ಡಿಸಿಎಂ ಹೇಳಿದ್ದಾರೆ.
ಇತ್ತ, ಹಳದಿ ಮೆಟ್ರೊ ಮಾರ್ಗದ (Yellow Metro Line) ಉದ್ಘಾಟನೆಯ ಕುರಿತು ಮಾತನಾಡಿದ ಡಿ.ಕೆ.ಶಿವಕುಮಾರ್, “ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್ 10ರಂದು ಬರುವ ಸಾಧ್ಯತೆ ಇದೆ. ನಾವು ಈಗಾಗಲೇ ತಯಾರಿ ಪರಿಶೀಲನೆ ಆರಂಭಿಸಿದ್ದೇವೆ. ಕಾರ್ಯಕ್ರಮದ ಅಧಿಕೃತ ಸಮಯ ಇನ್ನೂ ಘೋಷಣೆಯಾಗಿಲ್ಲ” ಎಂದು ತಿಳಿಸಿದ್ದಾರೆ.
ಇದೇ ದಿನ ಬಿಜೆಪಿ ವತಿಯಿಂದ ರೈಲ್ವೆ ಸಂಬಂಧಿತ ಕಾರ್ಯಕ್ರಮವೂ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರು
ಕೆಆರ್ಎಸ್ ಡ್ಯಾಂ ಕಟ್ಟಲು ಮೈಸೂರಿನ ರಾಜಮಾತೆಯ ತ್ಯಾಗ: ಟಿಪ್ಪು ವಿವಾದದ ನಡುವೆ ಪೀಠಾಧಿಪತಿಯ ಸ್ಪಷ್ಟನೆ!

ರಾಯಚೂರು: ಕಾವೇರಿ ನದೀಪ್ರಾಂತ್ಯದ ಜನರಿಗೆ ನೀರಿನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಮೈಸೂರಿನ ರಾಜಮಾತೆ ತಮ್ಮ ಆಭರಣಗಳನ್ನು ಮಾರಾಟ ಮಾಡಿ ಕೆಆರ್ಎಸ್ ಡ್ಯಾಂವನ್ನು ನಿರ್ಮಿಸಿದರು ಎಂದು ಗುರುರಾಘವೇಂದ್ರ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಮಂತ್ರಾಲಯದಲ್ಲಿ ಮಾತನಾಡಿದ ಅವರು, ಕೆಆರ್ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದಾರೆ ಎಂಬ ಸಚಿವ ಮಹಾದೇವಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, “ಇದು ರಾಜಮನೆತನದ ತ್ಯಾಗದ ಫಲ. ಇತಿಹಾಸವನ್ನು ನಿಖರವಾಗಿ ತಿಳಿದುಕೊಳ್ಳಬೇಕಾದದ್ದು ಇತಿಹಾಸ ತಜ್ಞರ ಕೆಲಸ” ಎಂದು ಹೇಳಿದರು.
ಇದೇ ವೇಳೆ ಧರ್ಮಸ್ಥಳದ ತಾತ್ಕಾಲಿಕ ವಿವಾದಗಳ ಕುರಿತು ಮಾತನಾಡಿದ ಶ್ರೀಗಳು, “ಧಾರ್ಮಿಕ ಕ್ಷೇತ್ರಗಳ ಪಾವಿತ್ರ್ಯತೆಗಿಂತ ವ್ಯವಸ್ಥೆ ಬಗ್ಗೆ ಚರ್ಚೆ ಮಾಡಬೇಕು. ಜನ ಭಕ್ತಿಯಿಂದ ನಂಬುವ ಕ್ಷೇತ್ರಗಳನ್ನು ರಾಜಕೀಯವಾಗಿಸಬಾರದು” ಎಂದು ಎಚ್ಚರಿಸಿದರು.
ಸಾರಿಗೆ ನೌಕರರ ಮುಷ್ಕರದ ವಿಚಾರಕ್ಕೂ ಪ್ರತಿಕ್ರಿಯೆ ನೀಡಿದ ಅವರು, “ಅವರ ಬೇಡಿಕೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಭಕ್ತರಿಗೆ ತೊಂದರೆಯಾಗದಂತೆ ಸೂಕ್ತ ಪರಿಹಾರ ಒದಗಿಸಲಿ” ಎಂದಿದ್ದಾರೆ.
ಇದಕ್ಕೂ ಮುನ್ನ ಸಚಿವ ಎಚ್.ಸಿ. ಮಹಾದೇವಪ್ಪ ಟಿಪ್ಪು ಸುಲ್ತಾನ್ ಕನ್ನಂಬಾಡಿ ಡ್ಯಾಂಗೆ ಅಡಿಗಲ್ಲು ಹಾಕಿದರೆಂದು ಹೇಳಿಕೆ ನೀಡಿದ್ದರು. ಆದರೆ, ಇತಿಹಾಸವನ್ನ ತಿರುವುಮಾಡುವುದು ಸರಿಯಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ