ದೇಶ
99 ಸಹೋದರರ ಹತ್ಯೆ ಮಾಡಿ ಇಲ್ಲಿ ಹಾಕಿದ್ದನಂತೆ ಚಕ್ರವರ್ತಿ ಅಶೋಕ!? ಏನು ಹೇಳುತ್ತೆ ಇತಿಹಾಸ?

ಪಾಟ್ನಾ: ಬಿಹಾರದಲ್ಲಿದೆ ಒಂದು ನಿಗೂಢವಾದ ಬಾವಿ. ಸದಾ ಜೀವಂತಿಕೆಯಿಂದ ಇರುವ ಈ ಬಾವಿಯಲ್ಲಿ ಇದುವರೆಗೆ ನೀರು ಬತ್ತಿದ್ದೇ ಇಲ್ಲವಂತೆ. ಸ್ವತಃ ಚಕ್ರವರ್ತಿ ಅಶೋಕನೂ ಈ ಬಾವಿಯ ನೀರು ಖಾಲಿ ಮಾಡಲು ವಿಫಲನಾಗಿದ್ದ ಎನ್ನುತ್ತವೆ ಇಲ್ಲಿನ ಸ್ಥಳೀಯರ ದಂತಕಥೆಗಳು. ಹಾಗಾದರೆ ಈ ಬಾವಿ ಬಿಹಾರದಲ್ಲಿ ಎಲ್ಲಿದೆ? ಏನಿದರ ವಿಶೇಷತೆ? ಇತಿಹಾಸ ಏನು ಹೇಳುತ್ತದೆ? ಇಲ್ಲಿದೆ ಮಾಹಿತಿ..
ಚಕ್ರವರ್ತಿ ಸಾಮ್ರಾಟ್ ಅಶೋಕನನ್ನು ಭಾರತದ ಅತ್ಯಂತ ಪ್ರಭಾವಶಾಲಿ ಆಡಳಿತಗಾರರಲ್ಲಿ ಒಬ್ಬ ಎನ್ನುತ್ತದೆ ಇತಿಹಾಸ. ಮೌರ್ಯ ರಾಜವಂಶದ ಮೂರನೇ ದೊರೆ. ಮೌರ್ಯ ರಾಜವಂಶದ ಸ್ಥಾಪಕ ಚಂದ್ರಗುಪ್ತ ಮೌರ್ಯನ ಮಗ ಬಿಂದುಸಾರನ ಮಗ. ಅಶೋಕನ ಜನ್ಮ ದಿನವನ್ನು ಬಿಹಾರದಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಕ್ರಿಸ್ತಪೂರ್ವ 304ರಲ್ಲಿ ಜನಿಸಿ, ಕ್ರಿ.ಪೂ. 269 ರಿಂದ 232 ರವರೆಗೆ ಆಡಳಿತ ನಡೆಸಿದ ಅಶೋಕನ ಜನ್ಮದಿನವನ್ನು ಏಪ್ರಿಲ್ 14 ರಂದು ಆಚರಿಸಲು ಬಿಹಾರ ಸರ್ಕಾರ ನಿರ್ಧರಿಸಿತ್ತು. ಆದರೆ, ಅಶೋಕ ಚೈತ್ರಮಾಸದ ಅಷ್ಟಮಿಯ ದಿನ ಹುಟ್ಟಿದ ಕಾರಣ, ಬಿಹಾರದಲ್ಲಿ ಚೈತ್ರ ಅಷ್ಟಮಿಯನ್ನು ಅಶೋಕ ಅಷ್ಟಮಿ ಎಂದೂ ಕೊಂಡಾಡಲಾಗುತ್ತದೆ.
ಈ ಸಂದರ್ಭದಲ್ಲಿ ಚಕ್ರವರ್ತಿ ಅಶೋಕ ನಿರ್ಮಿಸಿದ ಎಂದು ಹೇಳುವ ಬಿಹಾರದ ಪಾಟ್ನಾದ ಕುಮ್ರಾರ್ ಪುರಾತತ್ವ ಸ್ಥಳದಲ್ಲಿರುವ ಈ ನಿಗೂಢ ಬಾವಿಯ ಬಗ್ಗೆ ತಿಳಿಯೋಣ ಬನ್ನಿ..
ಸಿಂಹಳೀಯ ಸಾಹಿತ್ಯದಲ್ಲಿರುವ ಇತಿಹಾಸ ಏನು ಹೇಳುತ್ತೆ?: ಈಟಿವಿ ಭಾರತ ಜೊತೆಗೆ ಮಾತನಾಡಿದ ಇತಿಹಾಸಕಾರ ಪ್ರೊ.ಆದಿತ್ಯ ನಾರಾಯಣ್ ಝಾ, “ಕ್ರಿಸ್ತಪೂರ್ವ 269ರಲ್ಲಿ ತಂದೆ ಬಿಂದುಸಾರನ ಮರಣಾನಂತರ ಉತ್ತರಾಧಿಕಾರಿಯಾಗಿ ಪಟ್ಟವೇರಿದ ಅಶೋಕ ನಂತರ ರಾಜನಾಗಿ ಆಳ್ವಿಕೆ ನಡೆಸುತ್ತಾನೆ. ಉತ್ತರಾಧಿಕಾರಿಯಾಗಿ ಸಿಂಹಾಸನವೇರಿದ 8 ವರ್ಷಗಳವರೆಗೆ ಅಶೋಕ ಅತ್ಯಂತ ಕ್ರೂರ ಆಡಳಿತಗಾರನಾಗಿದ್ದನು. ಅದಕ್ಕಾಗಿಯೇ ಕೆಲವು ಐತಿಹಾಸಿಕ ಮೂಲಗಳಲ್ಲಿ ಅವನನ್ನು ಚಂದಾಶೋಕ ಅಥವಾ ಕಾಮಶೋಕ ಎಂದೂ ಕರೆಯಲಾಗುತ್ತದೆ. ಈ ವಿವರಣೆಗಳು ಯಾವುದೇ ಭಾರತೀಯ ಸಾಹಿತ್ಯದಲ್ಲಿ ಕಂಡು ಬರುವುದಿಲ್ಲ. ಈ ಎಲ್ಲ ವಿಷಯಗಳು ಶ್ರೀಲಂಕಾದಲ್ಲಿ ಬರೆದ ಬೌಧ ಸಾಹಿತ್ಯದಲ್ಲಿವೆ. ಸಿಂಹಳೀಯ ಸಾಹಿತ್ಯದ ದೀಪವಂಶ ಮತ್ತು ಮಹಾವಂಶದಲ್ಲಿ ಅಶೋಕನ ಬಗ್ಗೆ ಈ ರೀತಿಯ ವಿವರಣೆಗಳನ್ನು ಬರೆಯಲಾಗಿದೆ” ಎನ್ನುತ್ತಾರೆ ಅವರು. ಬಿಹಾರದ ರಾಜಧಾನಿ ಪಾಟ್ನಾದಲ್ಲಿರುವ ಈ ನಿಗೂಢ ಬಾವಿಯನ್ನು ಚಕ್ರವರ್ತಿ ಅಶೋಕನ ಕಾಲದಲ್ಲಿ ನಿರ್ಮಿಸಲಾಗಿದೆ ಎಂದು ದಂತಕಥೆಗಳು ಉಲ್ಲೇಖಿಸುತ್ತವೆ. ನಂತರದಲ್ಲಿ ಈ ಬಾವಿಯನ್ನು ಪಾಟ್ನಾದ ಆಗಮ ಕುವಾನ್ (ಎಂದರೆ ಎಂದೂ ಬತ್ತದ ಬಾವಿ – ಆಳವರಿಯಲಾಗದ ಬಾವಿ) ಎಂದು ಗುರುತಿಸಲಾಯಿತು. ಈ ಆಗಮ ಕುವಾನ್ ಬಗ್ಗೆ ಅನೇಕ ರೀತಿಯ ಕಥೆಗಳು ಜನರಲ್ಲಿ ಪ್ರಚಲಿತದಲ್ಲಿವೆ. ಈ ಬಾವಿಯನ್ನು ಆಳವಾದ ಬಾವಿಗಳಲ್ಲಿ ಒಂದು ಎಂದು ಪರಿಗಣಿಸಲಾಗಿದ್ದು, ಇದರ ಆಳ 105 ಅಡಿ ಎಂದು ಹೇಳಲಾಗುತ್ತದೆ.
ಎಂದೂ ಬತ್ತದ ಬಾವಿ: ಅಶೋಕ ತನ್ನ ಆಳ್ವಿಕೆ ಅವಧಿಯಲ್ಲಿ ಈ ಬಾವಿಯನ್ನು ಕೊರೆಯಿಸಿದ್ದನು ಎಂದು ಪ್ರತೀತಿ ಇದೆ. ಇದರ ನೀರು ಎಂದೂ ಬತ್ತುವುದಿಲ್ಲ. ದೇಶದಲ್ಲಿ ಅನೇಕ ಕ್ಷಾಮಗಳು ಬಂದು ಹೋಗಿವೆ. ಆದರೆ ಆ ಕಾಲದಲ್ಲೂ ಈ ಬಾವಿಯ ನೀರುವ ಬತ್ತಿರಲಿಲ್ಲ. ಸ್ವತಃ ಅಶೋಕನೂ ಈ ಬಾವಿಯ ನೀರು ಖಾಲಿ ಮಾಡುವಲ್ಲಿ ವಿಫಲನಾಗಿದ್ದನು ಎಂದು ಹೇಳಲಾಗುತ್ತದೆ. ಈ ಬಾವಿಯನ್ನು ಬ್ರಿಟಿಷ್ ಪರಿಶೋಧಕ ಲಾರೆನ್ಸ್ ವಾಡೆಲ್ ಕಂಡು ಹಿಡಿದನು.
ಅಶೋಕನ ಕಾಲದ ಬಾವಿಯ ಇತಿಹಾಸ: ಚಕ್ರವರ್ತಿ ಅಶೋಕನ ಆರಂಭದ ಆಳ್ವಿಕೆ ಹಾಗೂ ಆತನ ಪಟ್ಟಾಭಿಷೇಕಕ್ಕೂ ಮೊದಲು ಕ್ರೂರ ಆಡಳಿತ ನಡೆಸಿದ್ದ ಎಂಬ ಇತಿಹಾಸ ಇದೆ. ಈ ಅವಧಿಯಲ್ಲಿ ತನ್ನ 99 ಸಹೋದರರು ಮತ್ತು ಸಂಬಂಧಿಕರನ್ನು ಕೊಂದು ಅವರ ದೇಹಗಳನ್ನು ಈ ಬಾವಿಗೆ ಎಸೆದಿದ್ದನು ಎನ್ನುವ ಜಾನಪದ ಇತಿಹಾಸ ಇಲ್ಲಿ ಜನಪ್ರಿಯವಾಗಿದೆ. ಈ ಬಗ್ಗೆ ಯಾವುದೇ ಅಧಿಕೃತ ಐತಿಹಾಸಿಕ ಪುರಾವೆಗಳು ಇನ್ನೂ ಕಂಡು ಬಂದಿಲ್ಲ. ಆದರೆ ಸಿಂಹಳೀಯ ಸಾಹಿತ್ಯದಲ್ಲಿರುವ ಇತಿಹಾಸದಲ್ಲಿ ಇದನ್ನು ಉಲ್ಲೇಖಿಸಲಾಗಿದೆ. ಚಕ್ರವರ್ತಿ ಅಶೋಕನ ಮರಣದ ಸುಮಾರು 400 ವರ್ಷಗಳ ನಂತರ ಇತಿಹಾಸದಲ್ಲಿ ಆಗಮ ಕುವಾನ್ ಬಗ್ಗೆ ಬರೆದ ಸಾಹಿತ್ಯದಲ್ಲಿ ಕಂಡು ಬರುತ್ತವೆ. ಅಶೋಕನ ಅವಧಿಯಲ್ಲಿ ಬರೆದ ಐತಿಹಾಸಿಕ ಪುಸ್ತಕಗಳಲ್ಲಿ ಅಥವಾ ಅವನ ಮರಣದ ಕೆಲವು ದಿನಗಳ ನಂತರದಲ್ಲಿ ಬರೆದಂತಹ ಸಾಹಿತ್ಯಗಳಲ್ಲಿ ಈ ಬಗ್ಗೆ ಯಾವುದೇ ಉಲ್ಲೇಖವಿಲ್ಲ ಎನ್ನುತ್ತಾರೆ ಪ್ರೊ.ಆದಿತ್ಯ ನಾರಾಯಣ್ ಝಾ.
ಕಳಿಂಗ ಯುದ್ಧದ ನಂತರ ಮನ ಪರಿವರ್ತನೆ: ಕ್ರಿ.ಪೂ 261ರಲ್ಲಿ ಕಳಿಂಗ ಯುದ್ಧ ನಡೆದಿತ್ತು. ಆ ಬಹುದೊಡ್ಡ ಯುದ್ಧದಲ್ಲಿ ಲಕ್ಷಾಂತರ ಸಾಮಾನ್ಯ ಜನರು ಪ್ರಾಣ ಕಳೆದುಕೊಂಡಿದ್ದರು. ಕಳಿಂಗ ಯುದ್ಧ ಕೇವಲ ಎರಡು ರಾಜ್ಯಗಳ ನಡುವಿನ ಯುದ್ಧವಾಗಿರದೇ, ಮೊದಲ ನರಮೇಧವಾಗಿತ್ತು. ಈ ಯುದ್ಧದ ಬಳಿಕ ಅಶೋಕನ ಮನಸ್ಸು ಪರಿವರ್ತನೆಯಾಯಿತು. ನಂತರ ಈತ ಅನುಸರಿಸಿದ ಧಮ್ಮನೀತಿ ಭಾರತದಲ್ಲಿ ಮಾತ್ರವಲ್ಲದೇ, ಭಾರತದ ಹೊರಗೂ ಶಾಂತಿಯ ಸಂದೇಶವನ್ನು ಸಾರಿತ್ತು. ಆದ್ದರಿಂದಲೇ ಈತನನ್ನು ಇತಿಹಾಸದ ಪುಟಗಳಲ್ಲಿ ಸನ್ಯಾಸಿ ರಾಜ ಎಂದು ಕರೆಯಲಾಗುತ್ತದೆ.
ಕಳಿಂಗ ಯುದ್ಧಕ್ಕೂ ಮುನ್ನ ಶೈವ ಸಿದ್ಧಾಂತವನ್ನು ಪಾಲಿಸುತ್ತಿದ್ದ. ಆದರೆ ಕಳಿಂಗ ಯುದ್ಧಾ ನಂತರ ಶಾಂತಿಯ ಸಂಕೇತವಾದ ಬೌದ್ಧ ಧರ್ಮವನ್ನು ಅಳವಡಿಸಿಕೊಂಡನು. ಇದಾದ ಬಳಿಕ ಅಹಿಂಸಾ ಮಾರ್ಗದಲ್ಲಿ ಸಾಗಿ ಇಡೀ ಜಗತ್ತಿಗೆ ಅಹಿಂಸೆಯ ಸಂದೇಶವನ್ನು ಸಾರಿದ್ದನು. ನಂತರ ಯುದ್ಧಗಳನ್ನು ತ್ಯಜಿಸುವುದಾಗಿ ಘೋಷಿಸಿದ್ದನು. ಮಾತ್ರವಲ್ಲದೇ ಆತನ ನಂತರದ ಮೌರ್ಯ ಪೀಳಿಗೆ ಕೂಡ ಎಂದಿಗೂ ಯುದ್ಧ ಮಾಡುವುದಿಲ್ಲ. ಧಮ್ಮನೀತಿಯನ್ನು ಪಾಲಿಸುತ್ತಾರೆ ಎನ್ನುವ ವಾಗ್ಧಾನವನ್ನು ಮಾಡಿದ್ದನು. ಕಳಿಂಗ ಯುದ್ಧದ ನಂತರವೂ ಚಕ್ರವರ್ತಿ ಅಶೋಕ ರಾಜ್ಯಾಡಳಿತ ನಡೆಸಿದ್ದನು. ರಾಜನಾಗಿದ್ದರೂ, ಸಕಲ ವೈಯಕ್ತಿಕ ಭೋಗಗಳನ್ನು ತ್ಯಜಿಸಿ, ಸನ್ಯಾಸಿ ರಾಜನಾಗಿ ಅಂದರೆ ಏನೂ ಇಲ್ಲದ ರಾಜನಾಗಿ, ಹಳದಿ ಬಟ್ಟೆ ಧರಿಸಿ ಬೌದ್ಧ ಯೋಗಿಯಾಗಿದ್ದ. ಉಳಿದ ಅಧಿಕಾರಾವಧಿಯಲ್ಲಿ ದೇಶದ ಇತರ ಭಾಗಗಳಲ್ಲಿ ಧಾರ್ಮಿಕ ಸಾಮರಸ್ಯವನ್ನು ಸ್ಥಾಪಿಸುವ ಕೆಲಸ ಮಾಡಿದ್ದ ಎನ್ನುತ್ತಾರೆ ಆದಿತ್ಯ ನಾರಾಯಣ್.
ಈ ನಿಗೂಢ ಬಾವಿ ಬಗೆಗಿದೆ ಧಾರ್ಮಿಕ ನಂಬಿಕೆ: ಈ ಬಾವಿ ಮಾತಾ ಶೀತಲ ದೇವಾಲಯದ ಅಂಗಳದಲ್ಲಿದೆ. ಇದು ಪಾಟ್ನಾದ ಅತ್ಯಂತ ಹಳೆಯ ದೇವಾಲಯ. ಇಲ್ಲಿಗೆ ಭಕ್ತಿಯಿಂದ ಬರುವ ಭಕ್ತರು ಯಾವುದೇ ಇಷ್ಟಾರ್ಥ ಇದ್ದರೂ ಈಡೇರುತ್ತವೆ ಎಂದು ಹೇಳಲಾಗುತ್ತದೆ. ಈ ಬಾವಿಯ ನೀರನ್ನು ಶೀತಲ ಮಾತೆಯ ಪೂಜೆಗೆ ಬಳಸಲಾಗುತ್ತದೆ. ಈ ಬಾವಿಗೆ ನೈವೇದ್ಯ ಸಲ್ಲಿಸಿದರೆ ಇಷ್ಟಾರ್ಥಗಳು ನೆರವೇರುತ್ತವೆ. ಜೊತೆಗೆ ಬಾವಿಯ ನೀರು ದೇಹದ ಪ್ರತಿಯೊಂದು ಕಾಯಿಲೆಯನ್ನು ಗುಣಪಡಿಸುತ್ತದೆ ಎಂಬ ನಂಬಿಕೆ ಇಲ್ಲಿನ ಜನರಲ್ಲಿದೆ.
ದೇಶ
ನವರಾತ್ರಿ ಸಮಯದಲ್ಲಿ ವಿಮಾನ ನಿಲ್ದಾಣಗಳಲ್ಲಿ ಭಯೋತ್ಪಾದಕ ದಾಳಿ ಎಚ್ಚರಿಕೆ – ಭದ್ರತೆ ಬಿಗಿ ಕ್ರಮ
ಭಾರತದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ನವರಾತ್ರಿಯ ವೇಳೆ ಭಯೋತ್ಪಾದಕ ದಾಳಿಯ ಅಪಾಯವಿರುವ ಬಗ್ಗೆ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಜಾರಿಯಲ್ಲಿದೆ.
ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ಆಗಸ್ಟ್ 4ರಂದು ಎಚ್ಚರಿಕೆ ಪ್ರಕಟಿಸಿ, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಭಯೋತ್ಪಾದನೆ ಅಥವಾ ಸಮಾಜ ವಿರೋಧಿ ಶಕ್ತಿಗಳಿಂದ ದಾಳಿ ಸಂಭವಿಸಬಹುದೆಂದು ಸೂಚಿಸಿದೆ.
🕵️ ಗುಪ್ತಚರ ಮೂಲದ ಮಹತ್ವದ ಎಚ್ಚರಿಕೆ:
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ದಾಳಿಗೆ ಸಿದ್ಧತೆ ನಡೆಸುತ್ತಿವೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳು, ಏರ್ಸ್ಟ್ರಿಪ್ಗಳು, ಹೆಲಿಪ್ಯಾಡ್ಗಳು ಮತ್ತು ತರಬೇತಿ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳಾಗಿ ಈ ಕೆಳಗಿನ ಕ್ರಮಗಳು ಜಾರಿಗೆ ಬಂದಿವೆ:
- ಸಿಬ್ಬಂದಿ ಮತ್ತು ಸಂದರ್ಶಕರ ಗುರುತಿನ ಪರಿಶೀಲನೆ
- ಸಿಸಿಟಿವಿ ಕಣ್ಗಾವಲು ಬಿಗಿತ
- ಸರಕು, ಪಾರ್ಸೆಲ್ ಮತ್ತು ಮೇಲ್ಗಳ ತಪಾಸಣೆ
- ಸ್ಥಳೀಯ ಪೊಲೀಸ್ ಮತ್ತು ಭದ್ರತಾ ಸಂಸ್ಥೆಗಳೊಂದಿಗೆ ಸಹಕಾರ
🇮🇳 ರಾಷ್ಟ್ರೀಯ ಭದ್ರತೆಗೆ ಒತ್ತು:
ದೆಹಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳು ಈ ಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಪ್ರಯಾಣಿಕರು ತಮ್ಮ ಗುರುತಿನ ದಾಖಲೆಗಳನ್ನು ಸಿದ್ಧವಾಗಿಡಬೇಕು. ತಪಾಸಣೆ ವಿಳಂಬದ ಸಾಧ್ಯತೆಯಿರುವುದರಿಂದ ಸಹಕಾರ ನೀಡುವಂತೆ BCAS ಮನವಿ ಮಾಡಿದೆ.
ದೇಶ
ಅಮೆರಿಕ-ರಷ್ಯಾ ವ್ಯವಹಾರ: ಭಾರತದ ಟೀಕೆಗೆ ಟ್ರಂಪ್ ನುಣುಚು ಪ್ರತಿಕ್ರಿಯೆ
ವಾಷಿಂಗ್ಟನ್: ರಷ್ಯಾದಿಂದ ಈಗಲೂ ವ್ಯವಹಾರ ನಡೆಸುತ್ತಿರುವ ಅಮೆರಿಕದ ಕುರಿತಾಗಿ ಭಾರತ ಮಾಡಿರುವ ಗಂಭೀರ ಆರೋಪಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನುಣುಚು ಪ್ರತಿಕ್ರಿಯೆ ನೀಡಿದ್ದಾರೆ.
ಭಾರತ ಆರೋಪಿಸಿದಂತೆ, ಅಮೆರಿಕ 2024ರಲ್ಲಿ 1.1 ಶತಕೋಟಿ ಡಾಲರ್ ಮೌಲ್ಯದ ರಸಗೊಬ್ಬರ, 878 ಮಿಲಿಯನ್ ಡಾಲರ್ ಮೌಲ್ಯದ ಪಲ್ಲಾಡಿಯಮ್ ಸೇರಿದಂತೆ ಹಲವು ಅಮೂಲ್ಯ ಲೋಹಗಳನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಯುರೇನಿಯಂ ಹೆಕ್ಸಾಫ್ಲೋರೈಡ್ನಂತಹ ಪರಮಾಣು ಉತ್ಪನ್ನಗಳ ಆಮದು ಕೂಡ ಮುಂದುವರಿದಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಟ್ರಂಪ್, “ನನಗೆ ಈ ವ್ಯಾಪಾರದ ವಿವರಗಳು ತಿಳಿದಿಲ್ಲ, ನಾನು ಪರಿಶೀಲನೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.
ಭಾರತದ ಖಡಕ್ ಪ್ರತಿಕ್ರಿಯೆ:
ಭಾರತ, ತನ್ನ ರಷ್ಯಾ ತೈಲ ಆಮದು ಬಗ್ಗೆ ಅಮೆರಿಕದ ಟೀಕೆಗೆ ಅಂಕಿ-ಅಂಶಗಳೊಂದಿಗೆ ತಿರುಗೇಟು ನೀಡಿದೆ. ಯುರೋಪ್ ದೇಶಗಳೇ ರಷ್ಯಾದಿಂದ ಭಾರಿ ಪ್ರಮಾಣದಲ್ಲಿ ಎಲ್ಎನ್ಜಿ, ರಸಗೊಬ್ಬರ, ಲೋಹಗಳನ್ನು ಆಮದು ಮಾಡಿಕೊಳ್ಳುತ್ತಿವೆ. 2024ರಲ್ಲಿ ಯುರೋಪಿಯನ್ ಒಕ್ಕೂಟವು 67.5 ಬಿಲಿಯನ್ ಯುರೋಗಳಷ್ಟು ಸರಕು ವ್ಯಾಪಾರ ಹಾಗೂ 17.2 ಬಿಲಿಯನ್ ಯುರೋಗಳಷ್ಟು ಸೇವಾ ವ್ಯಾಪಾರವನ್ನು ರಷ್ಯಾ ಜೊತೆ ನಡೆಸಿದೆ.
ಟ್ರಂಪ್ ಅವರ ಆರೋಪ:
ಟ್ರಂಪ್ ಹೇಳುವಂತೆ, ಭಾರತ ರಷ್ಯಾದ ತೈಲವನ್ನು ಖರೀದಿ ಮಾಡುತ್ತಿದ್ದು, ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಲಾಭಕ್ಕಾಗಿ ಮಾರಾಟ ಮಾಡುತ್ತಿದೆ. ಅವರು ಈ ಕಾರಣಕ್ಕಾಗಿ ಭಾರತದಿಂದ ಸಂಗ್ರಹಿಸಬೇಕಾದ ಸುಂಕವನ್ನು ಹೆಚ್ಚಿಸುವುದಾಗಿ ಹೇಳಿದ್ದಾರೆ.
ಭಾರತದ ನಿಲುವು:
ಭಾರತ, ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಕಚ್ಚಾ ತೈಲವನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಇಂಧನದ ದರಗಳನ್ನು ಜನತೆಗೆ ಕೈಗೆಟುಕುವಂತೆ ಇರಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಕ್ರೀಡೆ
ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!
ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.
ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.
ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.
ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ಕ್ರೀಡೆ2 months ago
ಇಂದು ಐಪಿಎಲ್ ಫೈನಲ್- ಆರ್ಸಿಬಿಗೆ ಶುಭಕೋರಿದ ಎಸ್ಟಿಎಸ್!